ಲೇಖಕ: admin

ಮಡಿಕೇರಿ ಮಾ.19 : ನಗರದ ಜನರಲ್ ತಿಮ್ಮಯ್ಯ  ಸ್ಮಾರಕ ಭವನಕ್ಕೆ ಭಾರತೀಯ ಸೇನಾ ದಕ್ಷಿಣ ವಲಯದ (ಸದರನ್ ಆರ್ಮಿ ಕಮಾಂಡ್) ಮುಖ್ಯಸ್ಥರಾದ ಲೆಫ್ಟಿನೆಂಟ್  ಜನರಲ್ ಎ.ಕೆ. ಸಿಂಗ್ ಅವರು ಭಾನುವಾರ ಭೇಟಿ ನೀಡಿ, ವೀಕ್ಷಿಸಿದರು.  ಜನರಲ್ ತಿಮ್ಮಯ್ಯ ಅವರ ಬಾಲ್ಯದ ಜೀವನ, ಶಿಕ್ಷಣ, ರಾಷ್ಟ್ರ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸೇನಾ ಕ್ಷೇತ್ರದಲ್ಲಿನ ಸಾಧನೆ ಮತ್ತಿತರ ಬಗ್ಗೆ ಮಾಹಿತಿ ಪಡೆದರು.  ಜನರಲ್ ತಿಮ್ಮಯ್ಯ ಅವರು ಭಾರತೀಯ ಸೇನಾ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದ್ದು, ಜನರಲ್ ತಿಮ್ಮಯ್ಯ ಅವರನ್ನು ಸದಾ ಸ್ಮರಿಸಬೇಕಿದೆ ಎಂದರು.  ಮೇಜರ್ ಜನರಲ್ ಪ್ರೀತ್ ಪಾಲ್ ಸಿಂಗ್ ಇತರರು ಇದ್ದರು. ಮೇಜರ್ (ನಿವೃತ್ತ) ಬಿದ್ದಂಡ ನಂಜಪ್ಪ ಅವರು ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಬಾಲ್ಯ ಜೀವನ, ರಾಷ್ಟ್ರ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಜನರಲ್ ತಿಮ್ಮಯ್ಯ ಅವರ ಸೇನಾ ಕ್ಷೇತ್ರದಲ್ಲಿನ ಸಾಧನೆ ಮತ್ತಿತರ ಮಾಹಿತಿಯನ್ನು ಸವಿವರವಾಗಿ ವಿವರಿಸಿದರು. ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮೇಜರ್ (ನಿವೃತ್ತ) ಡಾ.ಬಾಲಸುಬ್ರಮಣ್ಯಂ, ಕನ್ನಡ ಮತ್ತು…

Read More

ಮಡಿಕೇರಿ ಮಾ.19 : ಭಾರತೀಯ ಜನತಾ ಪಾರ್ಟಿಯ ಸಿದ್ದಾಪುರ ಶಕ್ತಿ ಕೇಂದ್ರದ ವತಿಯಿಂದ ಇಂದು ಸಿದ್ದಾಪುರದಲ್ಲಿ “ಮಹಾಶಕ್ತಿ ಸಂಗಮ” ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಪಕ್ಷಕ್ಕಾಗಿ ದುಡಿದ ಹಿರಿಯರನ್ನು ಸನ್ಮಾನಿಸಲಾಯಿತು.ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್  ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಮಾ.19 : ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶನಿವಾರಸಂತೆಯ ಕೊಡ್ಲಿಪೇಟೆ ಸಮೀಪದ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. ಖಾಸಗಿ ಬಸ್ ಚಾಲಕ ಜಿತೇಂದ್ರ ಹಾಗೂ ಅಕ್ಷತಾ ದಂಪತಿಯ ಪುತ್ರಿ ವೈಷ್ಣವಿ (12) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಸೋಮವಾರಪೇಟೆಯ ಖಾಸಗಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣಿಗೆ ಶರಣಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Read More

ಮಡಿಕೇರಿ ಮಾ.19 : ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡಿನ ನಿವಾಸಿಗಳು ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಶೀಘ್ರ ರಸ್ತೆಯನ್ನು ಅಭಿವೃದ್ಧಿ ಪಡಿಸದಿದ್ದಲ್ಲಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಾರ್ಡ್ನಲ್ಲಿ 25 ಕ್ಕೂ ಅಧಿಕ ಮನೆಗಳಿದ್ದು, 150 ಮತದಾರರು ಇದ್ದಾರೆ. ಹೊಂಡ, ಗುಂಡಿಗಳ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಸಂಚರಿಸಲು ಕಷ್ಟ ಪಡಬೇಕಾಗಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ವೃದ್ಧರು ಮೂರು ಕಿ.ಮೀ ದೂರ ಕಷ್ಟಪಟ್ಟು ನಡೆದುಕೊಂಡೇ ಹೋಗಬೇಕಾಗಿದೆ. ವಿನಾಕಾರಣ ರಸ್ತೆ ದುರಸ್ತಿ ಪಡಿಸದೆ ನಿರ್ಲಕ್ಷಿಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದರು. ಪ್ರತಿಭಟನೆ ಮೂಲಕ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದೇವೆ ಎಂದು ಗ್ರಾಮಸ್ಥರಾದ ಸೌಮ್ಯ ಹಾಗೂ ಅವಿನಾಶ್ ಅಸಮಾಧಾನ ವ್ಯಕ್ತಪಡಿಸಿದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಸಿ.ಜಗನ್ನಾಥ್ ಮಾತನಾಡಿ ಈಗಾಗಲೇ ರೂ.5 ಲಕ್ಷ ಅನುದಾನ ಬಿಡುಗಡೆಯಾಗಿದೆ. ಪಂಚಾಯಿತಿ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ 2ಲಕ್ಷ ರೂ. ನೀಡಲಾಗುತ್ತದೆ. ಸೋಮವಾರ ಗ್ರಾಮಸ್ಥರ ನಿಯೋಗದೊಂದಿಗೆ ಕುಶಾಲನಗರದಲ್ಲಿರುವ…

Read More

ಮಡಿಕೇರಿ ಮಾ.19 : ತೊಟ್ಟಿಲ್ಲ ತೂಗುವ ಕೈಗಳು ದೇಶವನ್ನು ಆಳಬಲ್ಲವು ಎಂಬುವುದನ್ನು ಮಹಿಳೆಯರು ಈಗಾಗಲೇ ಸಾಬೀತುಪಡಿಸಿದ್ದು, ಉತ್ತಮ ನಾಗರಿಕ ಸಮಾಜದ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದ್ದಾರೆ. ಸೋಮವಾರಪೇಟೆ ತಾಲ್ಲೂಕು ಪ್ರಾಥಮಿಕ ಹಾಗೂ ಪೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ಮಾನಸ ಹಾಲ್ ನಲ್ಲಿ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಿತ್ತೂರುರಾಣಿ ಚನ್ನಮ್ಮ, ಝಾನ್ಸಿರಾಣಿ ಲಕ್ಷ್ಮೀಬಾಯಿ, ಬೆಳವಡಿ ಮಲ್ಲಮ್ಮ, ಒನಕೆ ಒಬವ್ವ ಇಂತಹ ವೀರವನಿತೆಯರ ಹೋರಾಟದ ಬಗ್ಗೆ ನಾವೆಲ್ಲ ಓದಿದ್ದೇವೆ. ದಿ.ಇಂದಿರಾಗಾಂಧಿಯವರು ಪ್ರಧಾನಿ ಸ್ಥಾನವನ್ನು ನಿಭಾಯಿಸಿದ್ದಾರೆ. ಬಾಹ್ಯಕಾಶದಲ್ಲೂ ಅನೇಕ ಮಹಿಳೆಯರು ಸಾಧನೆ ಮಾಡಿದ್ದಾರೆ. ಈಗ ಐಎಎಸ್, ಐಪಿಎಸ್, ಐಎಫ್‌ಎಸ್, ಐಆರ್‌ಎಸ್ ಪರೀಕ್ಷೆಯನ್ನು ಅತೀ ಹೆಚ್ಚು ಮಹಿಳೆಯರು ಉತ್ತೀರ್ಣರಾಗಿ ಉನ್ನತಹುದ್ದೆ ಅಲಂಕರಿಸಿದ್ದಾರೆ. ನಮ್ಮ ದೇಶದಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಸಮಾನವಾದ ಹಕ್ಕುಗಳಿದ್ದು, ಪ್ರತಿಯೊಬ್ಬರು ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಳ್ಳಬೇಕು ಎಂದು ಹೇಳಿದರು. ಮಹಿಳೆಯರು ತಮಗೆ ಸಿಗುತ್ತಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದು ಶ್ಲಾಘನೀಯ…

Read More

ಸೋಮವಾರಪೇಟೆ ಮಾ.19 : ಜೀವನ ಜಂಜಾಟ, ನಿತ್ಯದ ಸಂಕಷ್ಟದ ನಡುವೆಯೂ ಮಲೆನಾಡಿಗರು ತಮ್ಮ ಮೂಲ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುತ್ತಿರುವುದಕ್ಕೆ ಮಹಿಳೆಯರೇ ಮುಖ್ಯ ಕಾರಣ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಸೋಮವಾರಪೇಟೆ ತಾಲೂಕಿನ ಈಚಲಬೀಡು ಗ್ರಾಮದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಮತ್ತು ಮಲೆನಾಡು ಜಾನಪದ ಉತ್ಸವ ಸಮಿತಿ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಮಲೆನಾಡು ಜಾನಪದ ಉತ್ಸವವನ್ನು ಮೊರದಲ್ಲಿ ಭತ್ತ ಸುರಿದು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಇನ್ನೊಬ್ಬರನ್ನು ತಿದ್ದುವ ಬದಲು ನಾವು ತಿದ್ದಿಕೊಳ್ಳೋಣ ಎಂಬ ಸತ್ಯವನ್ನು ಅರಿತು ಜನಪದ ಕಲೆಗಳನ್ನು ಉಳಿಸುವ ಕೆಲಸ ಮಾಡಬೇಕಿದೆ. ತನ್ನದೇ ಶ್ರೇಷ್ಠತೆ, ಪಾವಿತ್ರ್ಯತೆ ಹೊಂದಿರುವ ಜನಪದ ಕಲೆಗಳಿಗೆ ಸರಿಸಾಟಿ ಇಲ್ಲ. ಅದೇ ನಮ್ಮ ನಾಡಿನ ಮಣ್ಣಿನ ಗುಣ. ನುಡಿ, ನಡೆ ಮಾತ್ರವಲ್ಲದೇ ಕಲಾ ಪ್ರಾವಿಣ್ಯತೆಯಲ್ಲಿ ಜಾನಪದ ಸದಾ ಕಾಲ ಹಸಿರಾಗಿರುತ್ತದೆ. ಆದರೆ ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಪ್ರಯತ್ನಗಳು ಹೆಚ್ಚಾಗಬೇಕು ಎಂದರು. ಕರ್ನಾಟಕ ಜಾನಪದ ಪರಿಷತ್ತು ರಾಜ್ಯಾಧ್ಯಕ್ಷ ಹಿ.ಶಿ.ರಾಮಚಂದೇಗೌಡ ಮಾತನಾಡಿ, ಭದ್ರತೆ ನೀಡದ ನಾಗರಿಕತೆಗಿಂತ…

Read More

ವಿರಾಜಪೇಟೆ ಮಾ.18 : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2022-23 ನೇ ಸಾಲಿನಲ್ಲಿ ನಡೆಸಿದ ಕಿರಿಯ ದರ್ಜೆಯ ಭರತನಾಟ್ಯ ಪರೀಕ್ಷೆಯಲ್ಲಿ ಸಮೃದ್ಧಿ ಎ.ವಿ ಶೇಕಡ 84.75 ಅಂಕ ಪಡೆದು ಕೊಡಗು ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಇವರು ನೆಲ್ಯಹುದಿಕೇರಿ ನಿವಾಸಿ, ಸಿದ್ದಾಪುರದ ಪತ್ರಕರ್ತ ವಾಸು ಎ.ಎನ್ ಹಾಗೂ ವಿಶಾಲಾಕ್ಷಿ ಎ.ಎ ದಂಪತಿ ಪುತ್ರಿಯಾಗಿದ್ದಾಳೆ. ಸಿದ್ದಾಪುರದ ಭಾರತೀಯ ನೃತ್ಯ ಕಲಾ ಶಾಲೆಯ ವಿದೂಷಿ ಜಲಜಾ ನಾಗರಾಜ ಅವರ ಶಿಷ್ಯೆಯಾಗಿದ್ದು, ನೆಲ್ಯಹುದಿಕೇರಿಯ ಆಂಗ್ಲೋ ವರ್ನಾಕ್ಯುಲರ್ ಪ್ರೌಢ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಳೆ.

Read More

ಮಡಿಕೇರಿ ಮಾ.18 : ಕೊಡವ ಜನಾಂಗ  ಶ್ರೇಯೋಭಿವೃದ್ಧಿಗೆ 2022ನೇ ಸಾಲಿನ ಬಜೆಟ್‌ನಲ್ಲಿ 10 ಕೋಟಿ ರೂ. ಅನುದಾನವನ್ನು ಸರ್ಕಾರ ಮೀಸಲಿಟ್ಟಿದೆ. ಇದರ ಜತೆಗೆ ಜನಾಂಗದ ಅಭಿವೃದ್ಧಿ ನಿಟ್ಟಿನಲ್ಲಿ ನಿಗಮದ ಅವಶ್ಯಕತೆಯಿದ್ದು, ಆದಷ್ಟು ಶೀಘ್ರದಲ್ಲಿ ನಿಗಮ ಘೋಷಣೆ ಮಾಡಿ ಇಲ್ಲಿನ ಜನರ ಬೇಡಿಕೆಗೆ ಸ್ಪಂದಿಸುವಂತೆ ಕೊಡಗು ಜಿಲ್ಲಾ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದೆ. ನಾಪೋಕ್ಲುವಿನಲ್ಲಿ ಮನವಿ ಪತ್ರ ಸಲ್ಲಿಸದ ಬಿಜೆಪಿ ಪ್ರಮುಖರು, ಕೊಡಗು ಜಿಲ್ಲೆಯ ಕೊಡವ ಜನಾಂಗದ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ 10 ಕೋಟಿ ರೂ. ಮೀಸಲಿಟ್ಟಿರುವುದು ಸ್ವಾಗತಾರ್ಹ ಎಂದು  ಮುಖ್ಯಮಂತ್ರಿಗಳಿಗೆ  ಅಭಿನಂದನೆ ಸಲ್ಲಿಸಿದೆ. ಕೊಡಗು ಜಿಲ್ಲೆಯಲ್ಲಿರುವ ಹಲವು ಜನಾಂಗಗಲ್ಲಿ ಕೊಡವ ಜನಾಂಗ ಕೂಡಾ ಪ್ರಮುಖವಾದುದು. ಭಾರತೀಯ ಜನತಾ ಪಕ್ಷದೊಂದಿಗೆ ಈ ಜನಾಂಗದ ಅನೇಕರು ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದಾರೆ. ಗುಡ್ಡಗಾಡು ಪ್ರದೇಶವಾಗಿರುವ ಜಿಲ್ಲೆಯಲ್ಲಿ ತನ್ನದೇ ಆದ ವಿಶಿಷ್ಟ ಸಂಸ್ಕೃತಿ, ಪರಂಪರೆಯನ್ನು ಹೊಂದಿರುವ ಜನಾಂಗ ಕೊಡವ ಜನಾಂಗ, ಭಾರತೀಯ ಸೇನೆಯಲ್ಲೂ ದೊಡ್ಡ ಪ್ರಮಾಣದ ಸೇವೆಯನ್ನು ಈ ಜನಾಂಗದವರು ಸಲ್ಲಿಸಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಈ…

Read More

ಮಡಿಕೇರಿ ಮಾ.18 : ಕೊಡವ ಕುಟುಂಬಗಳ ನಡುವಿನ 23ನೇ ‘ಅಪ್ಪಚೆಟ್ಟೋಳಂಡ ಕಪ್ ಹಾಕಿ ಉತ್ಸವ-2023’ಕ್ಕೆ ವರ್ಣರಂಜಿತ ಕಾರ್ಯಕ್ರಮದಲ್ಲಿ ನಾಪೋಕ್ಲುವಿನ ಚೆರಿಯಪರಂಬು ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯುಕ್ತ ಚಾಲನೆ ನೀಡಿದರು. ಕೊಡವ ಸಾಂಪ್ರದಾಯಿಕ ಉಡುಗೆ ತೊಟ್ಟು ಕೊಡವ ಭಾಷೆಯಲ್ಲಿ ಮಾತು ಪ್ರಾರಂಭಿಸಿದ ಮುಖ್ಯಮಂತ್ರಿ ನಶಿಸಿ ಹೋಗುತ್ತಿರುವ ಕುಟುಂಬಗಳ ನಡುವಿನ ಸಂಬoಧ ಮತ್ತೆ ಬೆಸೆಯಲು ಕುಟುಂಬಗಳ ನಡುವಿನ ಹಾಕಿ ಸಹಕಾರಿಯಾಗಿದೆ ಎಂದರು. ಕುಟುಂಬದಲ್ಲಿ ಸದಸ್ಯರ ಸಂಬoಧ ಉತ್ತಮವಾಗಿದ್ದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಇದು ಭಾರತೀಯ ನಾಗರಿಕತೆಯಾಗಿದ್ದು, ಕೊಡವ ಕೌಟುಂಬಿಕ ಹಾಕಿ ಉತ್ಸವ ಇದಕ್ಕೆ ಸೂಕ್ತ ನಿದರ್ಶನವಾಗಿದೆ. ಹಾಕಿ ಕ್ರೀಡೆಯ ಮೂಲಕ ಕೊಡವರು ತಮ್ಮಲ್ಲಿನ ಉತ್ತಮ ಕೌಟುಂಬಿಕ ಸಂಬoಧಗಳಿಗೆ ಮಾದರಿಯಾಗಿದ್ದಾರೆ. ಕೆ.ಜಿ.ಬೋಪಯ್ಯ ಅವರು ಹಾಕಿ ಕ್ರೀಡೆಗೆ ಸೂಕ್ತ ಅನುದಾನ ತರುವಲ್ಲಿ ಶ್ರಮಿಸಿದ್ದಾರೆ. ನನ್ನಲ್ಲಿ ಬೋಪಯ್ಯ ಅವರ ನಿಯೋಗ ಬಂದಾಗ 1 ಕೋಟಿ ಕೇಳಿದ್ದರು. ತಕ್ಷಣವೇ ನಾನು 1 ಕೋಟಿ ಮಂಜೂರು ಮಾಡಿದ್ದೇನೆ ಎಂದರು. ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಗೆ ತಕ್ಷಣ ಆದೇಶ ಹೊರಡಿಸುತ್ತೇನೆ…

Read More

ಮಡಿಕೇರಿ ಮಾ.18 : ಆಧುನಿಕ ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನವನ್ನು ಬಳಸಿ ಕೀಟನಾಶಕಗಳು ಮತ್ತು ಬೆಳೆ ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಹಾಗೂ ನಿಖರವಾಗಿ ಸಿಂಪಡಿಸುವಿಕೆಯ ಮೂಲಕ ಉತ್ಪಾದನೆಯನ್ನು ಹೆಚ್ಚಿಸಬಹುದು. ಡ್ರೋನ್ ಬಳಸಿ ಸಿಂಪಡಿಸುವ ಮೂಲಕ ಕೃಷಿ ಇನ್ಪುಟ್ಗಳ ಅತ್ಯುತ್ತಮ ಬಳಕೆ, ಶ್ರಮ, ಸಮಯವನ್ನು ಉಳಿಸಲು ಮತ್ತು ಕಾರ್ಮಿಕರ ಅವಲಂಬನೆಯನ್ನು ಕಡಿಮೆ ಮಾಡುವ ಮೂಲಕ ರೈತರಿಗೆ ಪ್ರಯೋಜನಕಾರಿಯಾಗಿದೆ. ಈ ನಿಟ್ಟಿನಲ್ಲಿ ರೈತರ ಅನುಕೂಲಕ್ಕಾಗಿ ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ, ಅಪ್ಪಂಗಳ ಪ್ರಾದೇಶಿಕ ಕೇಂದ್ರದಿಂದ ಕೃಷಿಯಲ್ಲಿ ಡ್ರೋನ್ ಬಳಕೆಯ ಕುರಿತು ಸರಣಿ ಪ್ರಾತ್ಯಕ್ಷಿಕೆಗಳನ್ನು ನಡೆಸಲಾಯಿತು. ಮಾರ್ಚ್, 15 ರಂದು ಮೊದಲು ಪ್ರಾತ್ಯಕ್ಷಿಕೆಯನ್ನು ಅಪ್ಪಂಗಳದ ಪ್ರಾದೇಶಿಕ ಕೇಂದ್ರದಲ್ಲಿ ಮಾಡಲಾಯಿತು. ಅಲ್ಲಿ ರೈತರು ಏಲಕ್ಕಿಯಲ್ಲಿ ಸೂಕ್ಷ್ಮ ಪೋಷಕಾಂಶಗಳನ್ನು ಸಿಂಪಡಿಸುವುದನ್ನು ವೀಕ್ಷಿಸಿದರು. ನಂತರ ಬಿಟಿಗುಂಡಿ ಎಸ್ಟೇಟ್ನಲ್ಲಿ ಕಾಫಿ ಬೆಳೆಯಲ್ಲಿ ಪ್ರಾತ್ಯಕ್ಷಿಕೆ ನಡೆಸಲಾಯಿತು. ನಂತರ ಹಾಕತ್ತೂರು ಕುಮಾರ್ ಮತ್ತು ಮರಗೋಡು ಪ್ರೇಮಾ ಗಣೇಶ್ ಎಂಬುವರಿಗೆ ಸೇರಿದ ಕಾಫಿ ಎಸ್ಟೇಟ್‍ಗಳಲ್ಲಿ ಡ್ರೋನ್ ಪ್ರಾತ್ಯಕ್ಷಿಕೆ ನಡೆಸಲಾಯಿತು. ಮಧ್ಯಾಹ್ನ ಚೆಟ್ಟಳ್ಳಿಯ ಸಿಎಚ್‍ಇಎಸ್‍ನಲ್ಲಿ ತರಕಾರಿ ಬೆಳೆಗಳು ಆವಕಾಡೊ,…

Read More