ಲೇಖಕ: admin

ಮಡಿಕೇರಿ ಏ.27 : ಟಿಪ್ಪು ಮೂರ್ತಿ ಸ್ಥಾಪನೆ ಬಗ್ಗೆ ಮುಸಲ್ಮಾನರಲ್ಲಿ ಭರವಸೆ ಮೂಡಿಸಿ ಕೊಡಗಿನ ಕಾಂಗ್ರೆಸ್ ಅಭ್ಯರ್ಥಿಗಳು ಮತ ಗಳಿಕೆಗೆ ಪ್ರಯತ್ನಿಸುತ್ತಿದ್ದಾರೆ ಎನ್ನುವ ಬಿಜೆಪಿ ಆರೋಪ ಸತ್ಯಕ್ಕೆ ದೂರವಾಗಿದೆ, ಇಸ್ಲಾಮಿನಲ್ಲಿ ಮೂರ್ತಿ ಪೂಜೆಗೆ ಅವಕಾಶವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಎಂ.ಎ.ಕಲೀಲ್ ಬಾಷ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯ ಸಂದರ್ಭ ಸಾಧನೆಯ ಆಧಾರದಲ್ಲಿ ಮತಯಾಚನೆ ಮಾಡಬೇಕೆ ಹೊರತು ಭಾವನೆಗಳನ್ನು ಕೆಣಕಬಾರದು ಎಂದು ಒತ್ತಾಯಿಸಿದ್ದಾರೆ. ಮಡಿಕೇರಿ ಹಾಗೂ ವಿರಾಜಪೇಟೆ ಕ್ಷೇತ್ರದ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳು ವಿದ್ಯಾವಂತರು ಮತ್ತು ಪ್ರಜ್ಞಾವಂತರಾಗಿದ್ದು, ಪ್ರತಿಸ್ಪರ್ಧಿಗಳನ್ನು ಇಲ್ಲಿಯವರೆಗೆ ತೇಜೋವಧೆ ಮಾಡುವ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿಲ್ಲ. ಬದಲಾವಣೆಗಾಗಿ ಮತಯಾಚಿಸುತ್ತಿದ್ದು, ಮತದಾರರು ಕೂಡ ಸೂಕ್ತ ಸ್ಪಂದನೆ ನೀಡುತ್ತಿದ್ದಾರೆ. ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರು ಗೆಲ್ಲುವುದು ಖಚಿತ ಎನ್ನುವ ಮುನ್ಸೂಚನೆ ದೊರೆತ ಬೆನ್ನಲ್ಲೇ ಅಪ್ರಸ್ತುತ ವಿಚಾರಗಳನ್ನು ಚರ್ಚೆಗೆ…

Read More

ಮಡಿಕೇರಿ ಏ.27 : ಕಾಲುಜಾರಿ ಬಿದ್ದು ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುತ್ತ (70) ಎಂಬವರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಬೆಳ್ಳೂರು ಗ್ರಾಮದವರೆಂದು ಅಂದಾಜಿಸಲಾಗಿದ್ದು, ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲದಿರುವುದರಿಂದ ಮೃತ ದೇಹವನ್ನು ಮಡಿಕೇರಿ ಆಸ್ಪತ್ರೆಯಲ್ಲಿ ಶೀಥಿಲೀಕರಣದಲ್ಲಿ ಇಡಲಾಗಿದ್ದು, ವಾರಸುದಾರರು ಇದ್ದಲ್ಲಿ ಶ್ರೀಮಂಗಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ಮನವಿ ಮಾಡಿದೆ.

Read More

ಮಡಿಕೇರಿ ಏ.27 :  ಕುಂಜಿಲ ಕಕ್ಕಬ್ಬೆ ಸಮೀಪದ ವಯಕೋಲ್ಲಿ ನಲ್ಲಿ (ಪುಳಿಙೋಂ ಔಲಿಯಾಕಳ ಹೆಸರಿನಲ್ಲಿ) ವರ್ಷಂಪ್ರತಿ ನಡೆಸಿಕೊಂಡು ಬರುವ ಉರೂಸ್ 2023ನೇ ಸಾಲಿನ ಮೇ 27 ಮತ್ತು 28 ರಂದು  ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ವಯಕೋಲ್ ಆಡಳಿತ ಮಂಡಳಿ ತಿಳಿಸಿದೆ.

Read More

ಮಡಿಕೇರಿ ಏ.27 :  ಪುತ್ತೂರಿನ  ಕುಂಬ್ರ ಸರಕಾರಿ ಪದವಿ ಪೂರ್ವ ಕಾಲೇಜು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಯಿಷತ್ ಮಝಿನಾ 562 ( 93.66%)ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈಕೆ ಈಶ್ವರ ಮಂಗಲ  ಗ್ರಾಮದ ಇಸ್ಮಾಯಿಲ್ ಮೂನಡ್ಕ ಹಾಗೂ ಮಿಸ್ರಿಯಾ ಅಡ್ಕಾರ್ ದಂಪತಿಯ ಪುತ್ರಿ .ಶಾಲೆಗೆ ಪ್ರಥಮ ಸ್ಥಾನ ಪಡೆದಕ್ಕೆ ಶಾಲಾ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಮಡಿಕೇರಿ ಏ.26 : ಕರ್ನಾಟಕ ರಾಜ್ಯ ಕಾನೂನು ಹಾಗೂ ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಪಶ್ಚಿಮವಲಯ ವ್ಯಾಪ್ತಿಯ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಉಡುಪಿ ಜಿಲ್ಲಾ ಪೊಲೀಸ್ ಘಟಕಗಳ ಚುನಾವಣಾ ಪೂರ್ವ ಸಿದ್ದತೆಯ ಪ್ರಗತಿಯ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾದ ಡಾ|| ಚಂದ್ರಗುಪ್ತ ಐ.ಪಿ.ಎಸ್, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹಾಕೆ ಅಕ್ಷಯ್‌ ಮಚ್ಚಿಂದ್ರ  ಐ.ಪಿ.ಎಸ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ವಿಕ್ರಮ್ ಅಮಟೆ ಐ.ಪಿ.ಎಸ್ ಹಾಗೂ ಜಿಲ್ಲೆಯ ಇತರ ಅಧಿಕಾರಿಗಳು ಹಾಜರಿದ್ದರು.

Read More

ಚೆಟ್ಟಳ್ಳಿ ಏ.26 : ಚೆಟ್ಟಳ್ಳಿಯ ಬೇಟೆಗಾರ ಅಯ್ಯಪ್ಪ ನೆಲೆಯಲ್ಲಿ ವಾರ್ಷಿಕ ಪೂಜಾಕೈಂಕರ್ಯ ಶ್ರದ್ಧಾಭಕ್ತಿಯಿಂದ ನೆರವೇರಿತು. ಶ್ರೀಮಂಗಲ ಶ್ರೀಭಗವತಿ ದೇವಾಲಯದಲ್ಲಿ ವಾರ್ಷಿಕ ಉತ್ಸವ ನೆರವೇರಿದ ನಂತರ ಊರಿನ ಪುರಾತನ ನೆಲೆಯಾದ ಬೇಟೆಗಾರ ಅಯ್ಯಪ್ಪನಿಗೆ ಪೂಜೆ ಅರ್ಪಿಸಲಾಯಿತು. ಊರಿಗೆ ಒಳಿತನ್ನು ಮಾಡೆಂದು ಪುತ್ತರಿರ ಮುತ್ತಣ್ಣ ಊರಿನವರ ಪರವಾಗಿ ಬೇಡಿಕೊಂಡರು. ಬೇಟೆಗಾರ ಅಯ್ಯಪ್ಪನಿಗೆ ಅಂಬ್(ಬಿಲ್ಲು), ಕಜ್ಜಾಯ ಹಾಗೂ ಹಾಲಿನ ಅಭಿಶೇಷ ಅರ್ಪಿಸಲಾಯಿತು. ಮಹಾಪೂಜೆಯ ನಂತರ ಪ್ರಸಾದ ವಿತರಣೆ ನೆರವೇರಿತು. ನಂತರ ಬೇಟೆಗಾರ ಅಯ್ಯಪ್ಪನ ಸೇವಕರಿಗೆ ಪೂಜೆ ನೆರವೇರಿತು.

Read More

ಮಡಿಕೇರಿ ಏ.26 : ವಿಧಾನಸಭಾ ಚುನಾವಣೆ ಸಂಬಂಧ ಚುನಾವಣಾ ಆಯೋಗದ ನಿರ್ದೇಶನಂತೆ ಮೈಕ್ರೋ ವೀಕ್ಷಕರು ಕರ್ತವ್ಯ ನಿರ್ವಹಿಸಬೇಕು ಎಂದು ಚುನಾವಣಾ ಸಾಮಾನ್ಯ ವೀಕ್ಷಕರಾದ ವಿಕ್ರಮ್ ಸಿಂಗ್ ಮಲ್ಲಿಕ್ ಅವರು ಸೂಚಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಮೈಕ್ರೋ ವೀಕ್ಷಕರಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸುಗಮವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಮೈಕ್ರೋ ವೀಕ್ಷಕರ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸಬೇಕು. ಮತದಾನದ ಪಾವಿತ್ರ್ಯತೆ ಕಾಪಾಡಬೇಕು. ಚುನಾವಣೆ ಸಂಬಂಧ ಮಾಹಿತಿಯನ್ನು ನಿಖರವಾಗಿ ದಾಖಲು ಮಾಡಬೇಕು ಎಂದರು. ಕಾಲ ಕಾಲಕ್ಕೆ ಚುನಾವಣಾ ಸಾಮಾನ್ಯ ವೀಕ್ಷಕರಿಗೆ ಮಾಹಿತಿಯನ್ನು ನೀಡಬೇಕು. ಅಂಚೆ ಮತಪತ್ರ, ಮತದಾನದಂದು ಹಾಗೂ ಮತ ಎಣಿಕೆ ಸಂದರ್ಭದಲ್ಲಿ ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿ, ವರದಿ ನೀಡಬೇಕು ಎಂದು ಚುನಾವಣಾ ಸಾಮಾನ್ಯ ವೀಕ್ಷಕರು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ಚುನಾವಣಾ ಮೈಕ್ರೋ ವೀಕ್ಷಕರು ವರದಿಯನ್ನು ಚುನಾವಣಾ ಸಾಮಾನ್ಯ ವೀಕ್ಷಕರಿಗೆ ನೀಡಬೇಕು. ಚುನಾವಣಾ ಆಯೋಗದ ನಿರ್ದೇಶನವನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ತರಬೇತಿಯಲ್ಲಿ…

Read More

ಮಡಿಕೇರಿ ಏ.26 : ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸ ಶಿಕ್ಷಣ ನೀತಿ ಆಧಾರಿತ ಮೂರು ವರ್ಷದ ಪದವಿ ತರಗತಿಗೆ ಪ್ರವೇಶಾತಿ ಆರಂಭವಾಗಿದೆ. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನೀಯರಿಗೆ ಯಾವುದೇ ಬೋಧನ ಶುಲ್ಕ ಇರುವುದಿಲ್ಲ. ಬಿ.ಎ.ಪದವಿಯಲ್ಲಿ ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಐಚ್ಛಿಕ ಕನ್ನಡ, ಬಿ.ಕಾಂ ಪದವಿ ಹಾಗೂ ಬಿಬಿಎ ಪದವಿ ವ್ಯಾಸಂಗಕ್ಕೆ ಅವಕಾಶವಿದ್ದು, ಆಸಕ್ತ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಏ.26 : ವಿಧಾನಸಭಾ ಚುನಾವಣೆ ಸಂಬಂಧ ಈಗಾಗಲೇ 80 ವರ್ಷ ಮೇಲ್ಪಟ್ಟವರು ಅಂಚೆ ಮತಪತ್ರ ಮೂಲಕ ಮತದಾನ ಮಾಡುವಂತಾಗಲು ಗುರುತಿಸಲಾಗಿದ್ದು, ಈ ಸಂಬಂಧ ಏಪ್ರಿಲ್, 29 ರಿಂದ ಮೇ, 6 ರವರೆಗೆ ಮನೆ ಮನೆಗೆ ತೆರಳಿ ಅಂಚೆ ಮತಪತ್ರ ಮೂಲಕ ಮತದಾನ ಮಾಡಿಸುವಂತಾಗಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಸೂಚಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಸೆಕ್ಟರ್ ಅಧಿಕಾರಿಗಳಿಗೆ ಮತ್ತು ಪೊಲಿಂಗ್ ಅಧಿಕಾರಿಗಳಿಗೆ  ನಡೆದ ತರಬೇತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕೊಡಗು ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟವರು 1992 ಮಂದಿ ಅಂಚೆ ಮತಪತ್ರ ಮೂಲಕ ಮತ ಚಲಾಯಿಸಲು ಮುಂದಾಗಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 1,010 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 982 ಮಂದಿ, ಹಾಗೆಯೇ ವಿಕಲಚೇತನರು(ಪಿಡಬ್ಲ್ಯುಡಿ) 482 ಮಂದಿ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 268 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 214 ಮಂದಿ ವಿಕಲಚೇತನರು ಅಂಚೆ…

Read More

ಮಡಿಕೇರಿ ಏ.26 : ಕಾಟಕೇರಿ ಕೂರನಬಾಣೆಯ ಕೊರಗಜ್ಜ ದೈವಸ್ಥಾನದಲ್ಲಿ ಮೇ 3 ಮತ್ತು 4 ರಂದು ಶ್ರೀ ದೈವಗಳ ನೇಮೋತ್ಸವ ನಡೆಯಲಿದೆ. ಮೇ 3 ರಂದು ಸಂಜೆ 4 ಗಂಟೆಗೆ ದೈವಗಳ ಭಂಡಾರ ತೆಗೆಯುವುದು, ಸಂಜೆ 7 ಗಂಟೆಗೆ ಮಂತ್ರವಾದಿ ಗುಳಿಗ ದೈವದ ನೇಮ, ರಾತ್ರಿ 9 ಗಂಟೆಗೆ ಪ್ರಸಾದ ವಿತರಣೆ ಹಾಗೂ 10 ಗಂಟೆಗೆ ಪಾಷಾಣ ಮೂರ್ತಿ ಹಾಗೂ ಕೊರತಿ ದೈವದ ನೇಮ ನೆರವೇರಲಿದೆ. ಮೇ 4 ರಂದು ಮುಂಜಾನೆ 2 ಗಂಟೆಗೆ ಕೊರಗಜ್ಜ ದೈವದ ನೇಮ, ಬೆಳಿಗ್ಗೆ 8 ಗಂಟೆಗೆ ಧರ್ಮದೈವದ ನೇಮೋತ್ಸವ ಜರುಗಲಿದ್ದು, ಮಧ್ಯಾಹ್ನ 1 ಗಂಟೆಗೆ ಪ್ರಸಾದ ವಿತರಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ತರವಾಡು ಮನೆಯ ಪ್ರಮುಖರಾದ ಬಿ.ಸಿ.ಗಿರಿಜ ಹಾಗೂ ಕುಟುಂಬಸ್ಥರು ಮನವಿ ಮಾಡಿದ್ದಾರೆ.

Read More