ಮಡಿಕೇರಿ ಮಾ.18 : ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 539.86 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆರವೇರಿಸಿದರು. ರಾಜ್ಯ ಸರ್ಕಾರವು ಕಳೆದ ಮೂರುವರೆ ವರ್ಷಗಳಿಂದ ಕೊಡಗು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣದಲ್ಲಿ ಮಹಿಳಾ ಮತ್ತು ಮಕ್ಕಳ ವಿಭಾಗದ ಕಟ್ಟಡವನ್ನು ಇಂದು ಉದ್ಘಾಟಿಸಲಾಗುತ್ತಿದೆ. ಕೊಡಗು ಜಿಲ್ಲೆ ಕೃಷಿ ಪ್ರಧಾನವಾಗಿದ್ದು, ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಪ್ರಸ್ತುತ ಬಜೆಟ್ನಲ್ಲಿ ಸರ್ಕಾರ ರಸ್ತೆ ಅಭಿವೃದ್ಧಿಗೆ 100 ಕೋಟಿ ರೂ. ವಿಶೇಷ ಪ್ಯಾಕೇಜ್ನ್ನು ಪ್ರಕಟಿಸಲಾಗಿದೆ. ಹಾಗೆಯೇ ಮೈಸೂರು-ಕುಶಾಲನಗರ ಚತುಷ್ಪಥ ಮಾರ್ಗ 92 ಕಿ.ಮೀ. ಉದ್ದದ ಹೆದ್ದಾರಿ ಅಭಿವೃದ್ಧಿಗೆ 4,128 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ರಾಜ್ಯವು…
ಲೇಖಕ: admin
ಮಡಿಕೇರಿ ಮಾ.18 : ರೈತರ ಸಮಸ್ಯೆಗಳು ಬೆಟ್ಟದಷ್ಟಿದೆ, ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿವಿಧ ಮಾದರಿಯ ಸಮಸ್ಯೆಗಳಿವೆ. ಸರ್ಕಾರ ಮತ್ತು ಅಧಿಕಾರಿಗಳ ವರ್ಗವು ರೈತ ಪರ ಕಾಳಜಿಯಿಲ್ಲದೆ ಭರವಸೆಗಳೊಂದಿಗೆ ದಿನದೂಡುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಹೇಳಿದರು. ಕರ್ನಾಟಕ ರಾಜ್ಯ ರೈತ ಸಂಘ ಗ್ರಾಮ ಘಟಕ ಪೆರಾಜೆ ಮಡಿಕೇರಿ ತಾಲೂಕು ವತಿಯಿಂದ ಪೆರಾಜೆಯ ಶ್ರೀ ಅನ್ನಪೂರ್ಣೇಶ್ವರಿ ಕಲಾ ಮಂದಿರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಾರ್ಷಿಕ ಮಾಹಾಸಭೆ ಮತ್ತು ಘಟಕಕ್ಕೆ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ನೂತನ ಸದಸ್ಯರನ್ನು ಶಾಲು ಹೊದಿಸಿ ಬರಮಾಡಿಕೊಂಡರು. ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿವೆ. ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಘಟನೆ ಪಾತ್ರ ಬಹಳಷ್ಟಿದೆ. ಸಂಘಟನೆಯೊಂದಿಗೆ ಇಲಾಖಾ ಮಟ್ಟದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಸ್ವತಂತ್ರ ಬಂದು ಹಲವು ದಶಕಗಳು ಸಂದರು ರೈತನ ಬವಣೆಯನ್ನು ನೀಗಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿದೆ ಎಂದು ಆರೋಪಿಸಿದರು.…
ಮಡಿಕೇರಿ ಮಾ.18 : ಕೊಡಗಿನ ಕಾಫಿ ಬೆಳೆಗಾರರಿಗೆ 10 ಹೆಚ್.ಪಿ ಪಂಪ್ ಸೆಟ್ ಗೆ ವಿದ್ಯುತ್ ಅನ್ನು ಉಚಿತವಾಗಿ ನೀಡಬೇಕೆನ್ನುವ ಬೇಡಿಕೆ ಇತ್ತು. ಕೊಡಗಿನ ಬೆಳೆಗಾರರ ಸಂಕಷ್ಟವನ್ನು ಅರಿತಿರುವ ನಾನು 10 ಹೆಚ್.ಪಿ.ವಿದ್ಯುತನ್ನು ಉಚಿತವಾಗಿ ನೀಡಲು ಆದೇಶಿಸಿದ್ದೇನೆ. ಬೆಳೆಗಾರರ ಹಳೆಯ ಬಾಕಿಯನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ 10 ಹೆಚ್.ಪಿ.ವಿದ್ಯುತ್ ಅನ್ನು ಉಚಿತವಾಗಿ ನೀಡಬೇಕೆಂದು ಈ ವೇದಿಕೆ ಮೂಲಕ ಅಧಿಕಾರಿಗಳಿಗೆ ಆದೇಶಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಡಿಕೇರಿ ಮಾ.18 : ಮಹಿಳೆಯರಿಗೆ ಶಿಕ್ಷಣ ಮತ್ತು ಉದ್ಯೋಗ ನೀಡುವ ಮೂಲಕ ಸ್ತ್ರೀ ಸಾಮಾಥ್ರ್ಯವನ್ನು ಹೆಚ್ಚಿಸಲಾಗುತ್ತಿದೆ. ಇಂದು “ದುಡ್ಡೇ ದೊಡ್ಡಪ್ಪ” ಎನ್ನುವ ಕಾಲ ಹೋಗಿ “ದುಡಿಮೆಯೇ ದೊಡ್ಡಪ್ಪ” ಎನ್ನುವ ಕಾಲ ಬಂದಿದೆ. ಎಲ್ಲರಿಗೂ ದುಡಿಮೆ ನೀಡುವ ಯೋಜನೆಯನ್ನು ನಮ್ಮ ಸರ್ಕಾರ ರೂಪಿಸಿದೆ. ದುಡಿಮೆಗೆ ಮಹತ್ವ ನೀಡುವ ನಾಡಿನಲ್ಲಿ ಸ್ವಾವಲಂಬಿ ಬದುಕು ಸಾಗಿಸಲು ಜನರು ಸಮರ್ಥರಾಗಿರುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಅಧಿಕಾರದಲ್ಲಿದ್ದಾಗ ಜನರಿಗೆ ಏನನ್ನೂ ನೀಡಲಾಗದವರು ಈಗ ಗ್ಯಾರಂಟಿ ಕಾರ್ಡ್ ನೀಡುತ್ತಿದ್ದಾರೆ. ಇದು ಗ್ಯಾರಂಟಿ ಕಾರ್ಡ್ ಅಲ್ಲ. ಬೋಗಸ್ ಕಾರ್ಡ್, ವಿಸಿಟಿಂಗ್ ಕಾರ್ಡ್. ಇದನ್ನು ಜನ ಕಸದ ಬುಟ್ಟಿಗೆ ಹಾಕುತ್ತಾರೆ. ಎಲ್ಲರನ್ನು ಎಲ್ಲಾ ಸಂದರ್ಭದಲ್ಲಿ ಮೋಸ ಮಾಡಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳಿಗೆ ಯಾರೂ ಮೋಸ ಮಾಡಬಾರದು. ಸ್ವಾಭಿಮಾನಿಗಳಾಗಿ ಬದುಕುವುದನ್ನು ತೋರಿಸಿಕೊಡಬೇಕೆಂದು ಹೇಳಿದರು.
ಮಡಿಕೇರಿ ಮಾ.18 : ಸಮಾವೇಶಕ್ಕೆ ಎರಡು ಗಂಟೆ ತಡವಾಗಿ ಬಂದದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭಿಕರ ಕ್ಷಮೆ ಕೋರಿದರು. ಪಕ್ಕದಲ್ಲೇ ಪಿಯುಸಿ ಪರೀಕ್ಷೆ ನಡೆಯುತ್ತಿದ್ದ ಕಾರಣ ತಡವಾಗಿ ಬಂದೆ ಎಂದು ಹೇಳುವ ಮೂಲಕ ಸಿಎಂ ಆಶ್ಚರ್ಯ ಮೂಡಿಸಿದರು. ಯಾಕೆಂದರೆ ಸಿಎಂ ಬರುವವರೆಗೂ ಧ್ವನಿವರ್ಧಕಗಳು ಪರೀಕ್ಷೆಯ ನಿಷೇಧಾಜ್ಞೆಯನ್ನು ಮೀರಿ ಘರ್ಜಿಸುತ್ತಿದ್ದವು. ಫಲಾನುಭವಿಗಳ ಸಮಾವೇಶದ ಆಹ್ವಾನ ಪತ್ರಿಕೆಯಲ್ಲಿ ಬೆಳಗ್ಗೆ 11.30 ಕ್ಕೆ ಕಾರ್ಯಕ್ರಮವೆಂದು ಇತ್ತು. ಮುಖ್ಯಮಂತ್ರಿಗಳ ಪ್ರವಾಸದ ವೇಳಾಪಟ್ಟಿಯ ಪ್ರಕಾರ ಮಧ್ಯಾಹ್ನ 12ರಿಂದ 12.15 ರೊಳಗೆ ಮಡಿಕೇರಿ ತಲುಪಬೇಕಾಗಿತ್ತು. ಆದರೆ ಸಿಎಂ ಎರಡು ಗಂಟೆ ತಡವಾಗಿ ಬಂದರು, ಸಭಿಕರು ಬಿಸಿಲಿನಿಂದ ಸಹನೆ ಕಳೆದುಕೊಂಡು ಮರಳಲು ನೋಡುತ್ತಿದ್ದಾಗ ಆಯೋಜಕರು ಜ್ಯೂಸ್ ಮತ್ತು ಬಿಸ್ಕೇಟ್ ನೀಡಿ ಸಮಾಧಾನ ಪಡಿಸುತ್ತಿದ್ದರು. ಗಾಂಧಿ ಮೈದಾನದ ಪಕ್ಕದಲ್ಲೇ ಇದ್ದ ಸಂತ ಮೈಕಲರ ಶಾಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿತ್ತು.
ಮಡಿಕೇರಿ ಮಾ.18 : ಕೊಡಗಿನ ಇಬ್ಬರು ಶಾಸಕರನ್ನು ಹಾಡಿ ಹೊಗಳಿದ ಬಸವರಾಜ ಬೊಮ್ಮಾಯಿ ಇವರು ಜನಪ್ರಿಯ ಶಾಸಕರು ಎನ್ನುವುದಕ್ಕಿಂತ ಜನಪಯೋಗಿ ಶಾಸಕರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ಲಾಘಿಸಿದರು. ಬೆಂಗಳೂರಿಗೆ ಬಂದಾಗ ಜಿಲ್ಲೆಯ ಕಡತಗಳನ್ನು ನನ್ನ ಬಳಿಗೆ ತಂದು ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿಯೇ ಮರಳುತ್ತಿದ್ದರು. ಇವರುಗಳಿಗೆ ಅಭಿವೃದ್ಧಿಯ ಬಗ್ಗೆ ಕಾಳಜಿ ಇದೆ, ಇನ್ನು ಮುಂದೆಯೂ ಇವರಿಬ್ಬರ ಮೇಲೆ ನಿಮ್ಮ ಆಶೀರ್ವಾದವಿದ್ದರೆ ಕೈಗೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸಬಹುದು ಮತ್ತು ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಹುದು ಎಂದರು.
ಮಡಿಕೇರಿ ಮಾ.18 : ಕೊಡಗು ಜಿಲ್ಲೆಗೆ ಕರ್ನಾಟಕ ರಾಜ್ಯದಲ್ಲಿಯೇ ವಿಶೇಷ ಸ್ಥಾನಮಾನವಿದೆ, ಇಲ್ಲಿ ಸ್ವರ್ಗದಂತಹ ನಿಸರ್ಗವಿದೆ, ವಿಶಿಷ್ಟವಾದ ಸಂಸ್ಕೃತಿ ಇದೆ. ಇಲ್ಲಿನ ಜನರು ಸ್ವಾಭಿಮಾನಿಗಳು ಎಂದು ಕೊಂಡಾಡಿದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಮೈಸೂರಿನೊಂದಿಗೆ ಕೊಡಗಿನ ಪ್ರವಾಸೋದ್ಯಮಕ್ಕೂ ಅಂತರಾಷ್ಟ್ರೀಯ ಮಟ್ಟದ ಮನ್ನಣೆ ನೀಡಲು ಯೋಜನೆ ರೂಪಿಸಲಾಗಿದೆ ಎಂದರು. ಮಡಿಕೇರಿಯಲ್ಲಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸ್ವಿಝರ್ ಲ್ಯಾಂಡ್ ನಂತಿರುವ ಕೊಡಗಿನ ಪ್ರವಾಸೋದ್ಯಮದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ::: ಉಚಿತ ವಿದ್ಯುತ್ ::: ಕೊಡಗಿನ ಕಾಫಿ ಬೆಳೆಗಾರರಿಗೆ 10 ಹೆಚ್.ಪಿ.ವಿದ್ಯುತ್ ಅನ್ನು ಉಚಿತವಾಗಿ ನೀಡಬೇಕೆನ್ನುವ ಬೇಡಿಕೆ ಇತ್ತು. ಕೊಡಗಿನ ಬೆಳೆಗಾರರ ಸಂಕಷ್ಟವನ್ನು ಅರಿತಿರುವ ನಾನು 10 ಹೆಚ್.ಪಿ.ವಿದ್ಯುತನ್ನು ಉಚಿತವಾಗಿ ನೀಡಲು ಆದೇಶಿಸಿದ್ದೇನೆ. ಬೆಳೆಗಾರರ ಹಳೆಯ ಬಾಕಿಯನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ 10 ಹೆಚ್.ಪಿ.ವಿದ್ಯುತ್ ಅನ್ನು ಉಚಿತವಾಗಿ ನೀಡಬೇಕೆಂದು ಈ ವೇದಿಕೆ ಮೂಲಕ ಅಧಿಕಾರಿಗಳಿಗೆ ಆದೇಶಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದರು. ಕೊಡಗು ಜಿಲ್ಲೆಯಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ 50,623 ರೈತರಿಗೆ 12 ಕೋಟಿ…
ಮಡಿಕೇರಿ ಮಾ.18 : ಕರ್ನಾಟಕ ಹಿಂದಿನಂತಿಲ್ಲ, ಪ್ರಗತಿಥದತ್ತ ಸಾಗುತ್ತಿದೆ. ಜಾತಿ, ಮತ, ಭೇದವಿಲ್ಲದೆ ಪ್ರತಿಯೊಬ್ಬರಿಗೆ ಬದುಕುವ ಶಕ್ತಿಯನ್ನು ಸರ್ಕಾರ ತುಂಬುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ. ಮಡಿಕೇರಿಯ ಗಾಂಧಿ ಮೈದಾನದಲ್ಲಿ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸರ್ಕಾರ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಿ ದುಡಿಯುವ ವರ್ಗದ ಆದಾಯವನ್ನು ಹೆಚ್ಚಿಸುತ್ತಿದೆ. ವಿವಿಧ ಇಲಾಖೆಗಳಲ್ಲಿ ರೂಪಿಸಲಾಗಿರುವ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಮೂಲಕ ಸಮೃದ್ಧಿಯ ಕರ್ನಾಟಕವನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು. ಫಲಾನುಭವಿಗಳ ಸಮ್ಮೇಳನದಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿ 30 ರಿಂದ 50 ಸಾವಿರ ಕುಟುಂಬಗಳಿಗೆ ಸರ್ಕಾರದ ಕಾರ್ಯಕ್ರಮಗಳ ಸೌಲಭ್ಯವನ್ನು ತಲುಪಿಸಲಾಗುತ್ತಿದೆ. ಆ ಮೂಲಕ ಜನಸಾಮಾನ್ಯರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಮಾಡಲಾಗುತ್ತಿದೆ. ಸರ್ಕಾರ ಮತ್ತು ಜನರ ನಡುವಿನ ಸಂಬಂಧವನ್ನು ಗಟ್ಟಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ದೂರ ದೃಷ್ಟಿಯ ರಾಜಕರಣಿ ಮುಂದಿನ ಜನಾಂಗದ ಬಗ್ಗೆ ಯೋಚಿಸುತ್ತಾನೆ. ಸಾಮಾನ್ಯ ರಾಜಕರಣಿ ಮುಂದಿನ ಚುನಾವಣೆ ಬಗ್ಗೆ ಚಿಂತಿಸುತ್ತಾನೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದ ಸುರಕ್ಷತೆ,…
ಮಡಿಕೇರಿ ಮಾ.18 : ವಿಶ್ವ ಹಿಂದೂ ಪರಿಷದ್, ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಅಮ್ಮತ್ತಿ ಘಟಕದ 25ನೇ ವರ್ಷದ ಸತ್ಯನಾರಾಯಣ ಪೂಜೆಯ ಪ್ರಯುಕ್ತ ಮಾ.21 ರಂದು ಹಿಂದೂ ಸಮಾವೇಶ ನಡೆಯಲಿದೆ. ಸಂಜೆ 5.30 ಗಂಟೆಗೆ ಪಾಲಿಬೆಟ್ಟ ಮಾರುಕಟ್ಟೆಯಿಂದ ಶೋಭಾ ಯಾತ್ರೆ ಹೊರಡಲಿದ್ದು, 6.30 ಗಂಟೆಗೆ ಅಮ್ಮತ್ತಿ ಕೊಡವ ಸಮಾಜದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವ ಹಿಂದೂ ಪರಿಷತ್ ಅಮ್ಮತ್ತಿ ಘಟಕದ ಅಧ್ಯಕ್ಷ ಬಿ.ಜಿ.ಪ್ರಥಮ್ ಕರುಂಬಯ್ಯ ವಹಿಸಲಿದ್ದು, ಪರಿಷದ್ನ ವಿರಾಜಪೇಟೆ ಪ್ರಖಂಡ ಬಿ.ಎಂ.ಕುಮಾರ್ ಉಪಸ್ಥಿತರಿರಲಿದ್ದಾರೆ. ವಿಶ್ವ ಹಿಂದೂ ಪರಿಷದ್ನ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಘು, ಸಕಲೇಶಪುರ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಮಡಿಕೇರಿ ಮಾ.18 : ಕ್ಯಾಂಟರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಹೆದ್ದಾರಿಯ ಯಶೋಧರ ಪುರದ ಬಳಿ ನಡೆದಿದೆ. ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ಡಿ.ಗ್ರೂಪ್ ನೌಕರ, ಹುಣಸೂರು ತಾಲ್ಲೂಕಿನ ಕೊತ್ತೆಗಾಲ ಗ್ರಾಮದ ನಿವಾಸಿ ಮಾದೇಶ್ ಗೌಡ(57) ಮೃತ ದುರ್ದೈವಿ. ಪಿರಿಯಾಪಟ್ಟಣ ಕಡೆಗೆ ಬರುತ್ತಿದ್ದ ಕ್ಯಾಂಟರ್ ಗೂಡ್ಸ್ ವಾಹನ ಮತ್ತು ಹುಣಸೂರು ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.






