ವಿರಾಜಪೇಟೆ ಏ.26 : ವಿರಾಜಪೇಟೆಯ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಚಿಣ್ಣರ ಬೇಸಿಗೆ ‘ಸಂಭ್ರಮ’ ಶಿಬಿರವನ್ನು ಏ.28 ರಿಂದ 30 ರವರೆಗೆ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೂರು ದಿನಗಳ ಕಾಲ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶಿಬಿರ ನಡೆಯಲಿದ್ದು, 10 ರಿಂದ 16 ವರ್ಷದೊಳಗಿನ ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ಶಿಬಿರದಲ್ಲಿ ವ್ಯಕ್ತಿತ್ವ ವಿಕಸನ, ಆಲೋಚನೆಯ ನೆಲೆ, ಏಕಾಗ್ರತೆಯ ಕಲೆ, ಪರೀಕ್ಷಾ ಭಯದ ನಿವಾರಣೆ, ಧ್ಯಾನದ ಮಹತ್ವಿಕೆ, ಕ್ರಿಯೆಯಲ್ಲಿ ಆಲೋಚನೆಗಳು, ಮೌಲ್ಯಗಳುಗುಂಪು ಚಟುವಟಿಕೆಗಳು, ಒಳಾಂಗಣ ಹೊರಾಂಗಣ ಆಟೋಟಗಳು ಸೇರಿದಂತೆ ಇತರ ಚಟುವಟಿಕೆಗಳು ನಡೆಯಲಿದೆ. ಶಿಬಿರವು ಉಚಿತವಾಗಿ ನಡೆಯಲಿದ್ದು, ಹೆಚ್ಚಿನ ಮಕ್ಕಳು ಶಿಬಿರದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದ್ದಾರೆ, ಹೆಚ್ಚಿನ ವಿವರ ಹಾಗೂ ನೋಂದಾವಣೆಗಾಗಿ ಮೊ. 8105419822 ಹಾಗೂ 08274-256834 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ಲೇಖಕ: admin
ಮಡಿಕೇರಿ ಏ.26 : ಮಿಕ್ಸ್ಡ್ ಮಾರ್ಷಲ್ ಆರ್ಟ್ಸ್ ಕ್ರೀಡೆಯಲ್ಲಿ ಕುಶಾಲನಗರದ ಕೂರ್ಗ್ ಕಾಂಬ್ಯಾಟ್ ಕ್ಲಬ್ನ ಕ್ರೀಡಾಪಟುಗಳು ಸಾಧನೆ ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ನಲ್ಲಿ ಚಿನ್ನ ಪದಕ ಗೆದ್ದುಕೊಂಡಿದ್ದ ಕೂರ್ಗ್ ಕಾಂಬ್ಯಾಟ್ ಕ್ಲಬ್ ವಿಜಯಪುರದಲ್ಲಿ ನಡೆದ ಮಿಕ್ಸ್ಡ್ ಮಾರ್ಷಲ್ ಆರ್ಟ್ಸ್ ಕ್ರೀಡೆಯಲ್ಲಿ ನವೀನ್ ಹಾಗೂ ಪ್ರಜ್ವಲ್ ಇಬ್ಬರು ಭಾಗವಹಿಸಿ ಗೆಲುವು ಸಾಧಿಸಿ ಕೊಡಗಿಗೆ ಕೀರ್ತಿ ತಂದಿದ್ದಾರೆ. ಅಲ್ಲದೆ ಇತ್ತೀಚಿಗೆ ಗೋವಾದಲ್ಲಿ ನಡೆದ ರಾಷ್ಟ್ರಮಟ್ಟದ ಕೆ1 ಕಿಕ್ ಬಾಕ್ಸಿಂಗ್ ಹಾಗೂ ಮಿಕ್ಸಡ್ ಮಾರ್ಷಲ್ ಆರ್ಟ್ಸ್ ಕ್ರೀಡಾ ಕೂಟದಲ್ಲಿ ಡಿ.ವಿ.ವರುಣ್, ಮೊಹಮ್ಮದ್ ಶಾಫಿ ಹಾಗೂ ಎಸ್.ಜಿ.ನವೀನ್ ಜಯ ಸಾಧಿಸುವ ಮೂಲಕ ಉತ್ತಮ ತಂಡ ಎಂದು ಹೆಸರು ಪಡೆದಿದೆ. ಡಿ.ವಿ.ವರುಣ್ ಕೆ1 ಕಿಕ್ ಬಾಕ್ಸಿಂಗ್ನಲ್ಲಿ ಮೂರನೇ ರೌಂಡ್ನಲ್ಲಿ ಎದುರಾಳಿಯನ್ನು ನಾಕೌಟ್ ಮಾಡುವ ಮೂಲಕ ಜಯ ಸಾಧಿಸಿದ್ದು, ಮೊಹಮ್ಮದ್ ಶಾಫಿ ಉತ್ತಮವಾದ ರಸ್ಲಿಂಗ್ ಪ್ರದರ್ಶಿಸಿ ಎದುರಾಳಿಯನ್ನು ಮಣಿಸಿ ಏಕೀಕೃತ ನಿರ್ಧಾರದಿಂದ ಜಯ ಸಾಧಿಸಿದ್ದಾರೆ. ಎಸ್.ಜಿ.ನವೀನ್ ಉತ್ತಮವಾದ ಹಣಾಹಣಿ ನಡೆಸಿ ಎದುರಾಳಿಯನ್ನು ತಲ್ಲಣಗೊಳಿಸಿ ವಿಜಯ ಶಾಲಿಯಾಗಿ ಹೊರಹೊಮ್ಮಿದ್ದಾರೆ.…
ಮಡಿಕೇರಿ ಏ.26 : ಯುವ ಪೀಳಿಗೆಯನ್ನು ಮುಖ್ಯ ವಾಹಿನಿಗೆ ತರಲು ಕೊಡಗು ಗೌಡ ಯುವ ವೇದಿಕೆಯಿಂದ 10 ಕುಟುಂಬ 18 ಗೋತ್ರದ ಗೌಡ ಕುಟುಂಬಗಳಿಗೆ ಮೇ 16 ರಿಂದ ಲೆದರ್ ಬಾಲ್ ಟಿ-10 ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 16 ರಿಂದ ಪಂದ್ಯಾವಳಿ ನಡೆಯಲಿದ್ದು, 10 ಫ್ರಾಂಚೈಸಿಗಳಿಗೆ ಅವಕಾಶ ನೀಡಲಾಗಿದೆ. ಈಗಾಗಲೇ ಹಲವು ಮಾಲೀಕರು ಒಲವು ತೋರಿದ್ದು, ಆಸಕ್ತ ಮಾಲೀಕರು ಫ್ರಾಂಚೈಸಿಗಳನ್ನು ಖರೀದಿ ಮಾಡಬಹುದಾಗಿದೆ ಎಂದರು. ಫ್ರಾಂಚೈಸಿ ಖರೀದಿಯ ಮೊತ್ತವನ್ನು ರೂ.30,000 ನಿಗಧಿ ಮಾಡಲಾಗಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವ 10 ಕುಟುಂಬದ 18 ಗೋತ್ರದ ಗೌಡ ಜನಾಂಗದ 12 ವರ್ಷ ಮೇಲ್ಪಟ್ಟ ಆಸಕ್ತ ಆಟಗಾರರು ರೂ.300 ಪಾವತಿಸಿ ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಆಟಗಾರರ ಅರ್ಜಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಕ್ರೀಡಾ ಕೂಟದಲ್ಲಿ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದಾಗಿದೆ. ಮೇ…
ಮಡಿಕೇರಿ ಏ.26 : ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಹಿನ್ನೆಲೆ 208 ಮಡಿಕೇರಿ ವಿಧಾನಸಭಾಕ್ಷೇತ್ರ ಹಾಗೂ 209 ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಚುನಾವಣಾ ಉಸ್ತುವಾರಿ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಡಿಸಿಸಿಯ ಉಪಾಧ್ಯಕ್ಷ ಕೆ.ಎಂ.ಲೋಕೇಶ್ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಸದಸ್ಯರಾದ, ಡಿಸಿಸಿ ಮಾಜಿ ಅಧ್ಯಕ್ಷ ಮುಕ್ಕಾಟ್ಟೀರ ಬಿ.ಶಿವು ಮಾದಪ್ಪ ಅವರನ್ನು ಕೆಪಿಸಿಸಿಯ ಸೂಚನೆ ಮೇರೆಗೆ ನೇಮಿಸಿ ಆದೇಶಿಸಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಏ.26 : ಯುವ ಪೀಳಿಗೆಯನ್ನು ಮುಖ್ಯ ವಾಹಿನಿಗೆ ತರಲು ಕೊಡಗು ಗೌಡ ಯುವ ವೇದಿಕೆಯಿಂದ 10 ಕುಟುಂಬ 18 ಗೋತ್ರದ ಗೌಡ ಕುಟುಂಬಗಳಿಗೆ ಮೇ 16 ರಿಂದ ಲೆದರ್ ಬಾಲ್ ಟಿ-10 ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 16 ರಿಂದ ಪಂದ್ಯಾವಳಿ ನಡೆಯಲಿದ್ದು, 10 ಫ್ರಾಂಚೈಸಿಗಳಿಗೆ ಅವಕಾಶ ನೀಡಲಾಗಿದೆ. ಈಗಾಗಲೇ ಹಲವು ಮಾಲೀಕರು ಒಲವು ತೋರಿದ್ದು, ಆಸಕ್ತ ಮಾಲೀಕರು ಫ್ರಾಂಚೈಸಿಗಳನ್ನು ಖರೀದಿ ಮಾಡಬಹುದಾಗಿದೆ ಎಂದರು. ಫ್ರಾಂಚೈಸಿ ಖರೀದಿಯ ಮೊತ್ತವನ್ನು ರೂ.30,000 ನಿಗಧಿ ಮಾಡಲಾಗಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವ 10 ಕುಟುಂಬದ 18 ಗೋತ್ರದ ಗೌಡ ಜನಾಂಗದ 12 ವರ್ಷ ಮೇಲ್ಪಟ್ಟ ಆಸಕ್ತ ಆಟಗಾರರು ರೂ.300 ಪಾವತಿಸಿ ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಆಟಗಾರರ ಅರ್ಜಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಕ್ರೀಡಾ ಕೂಟದಲ್ಲಿ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದಾಗಿದೆ. ಮೇ…
ಮಡಿಕೇರಿ ಏ.26 : ಸಂವಿಧಾನ ಬದಲಾಯಿಸಲು ಬಿಜೆಪಿ ಮುಂದಾಗಿದೆ ಎನ್ನುವ ವೃಥಾರೋಪಗಳನ್ನು ಮಾಡಲಾಗುತ್ತಿದೆ. ದೇಶದಲ್ಲಿ ‘ಎಮರ್ಜೆನ್ಸಿ’ ಘೋಷಿಸುವ ಮೂಲಕ ಜನರ ಮೂಲಭೂತ ಹಕ್ಕುಗಳನ್ನು ಕಸಿದು ಸಂವಿಧಾನಕ್ಕೆ ಅವಮಾನ ಮಾಡಿದ ಪಕ್ಷ ಕಾಂಗ್ರೆಸ್ ಎಂದು ಗುಜರಾತ್ ಶಾಸಕ ಡಾ.ಪ್ರದ್ಯುಮಾನ್ ವಾಜ್ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿಗಳನ್ನು ತರಲಾಗುತ್ತದೆಯೇ ಹೊರತು, ಅದನ್ನು ಬದಲಾಯಿಸಲು ಎಂದಿಗೂ ಸಾಧ್ಯವಿಲ್ಲ. ಹೀಗಿದ್ದೂ, ಬಿಜೆಪಿ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಲಾಗುತ್ತಿದೆ. ಕಾಂಗ್ರೆಸ್ನ ಸುದೀರ್ಘ ಆಡಳಿತದ ಅವಧಿಯಲ್ಲಿ ಸಂವಿಧಾನಕ್ಕೆ 100 ಕ್ಕೂ ಹೆಚ್ಚಿನ ತಿದ್ದುಪಡಿಗಳನ್ನು ತರಲಾಗಿದೆಯೆಂದು ತಿಳಿಸಿದರು. ಸಂವಿಧಾನ ಬದ್ಧವಾಗಿ ರಚನೆಯಾದ ಸರ್ಕಾರಗಳನ್ನು ಕಾಂಗ್ರೆಸ್ ಸರ್ಕಾರ ತನ್ನ ಆಡಳಿತದ ಅವಧಿಯಲ್ಲಿ 30 ಬಾರಿ ವಜಾ ಗೊಳಿಸಿ ಸಂವಿಧಾನದ ಮೂಲ ಚಿಂತನೆಗಳಿಗೆ ವಿರುದ್ಧವಾಗಿ ನಡೆದುಕೊಂಡಿದೆಯೆಂದು ಹೇಳಿದ ಅವರು, ಟೀಕಿಸುವ ಭರದಲ್ಲಿ ತೋರು ಬೆರಳು ಮಾತ್ರ ಮುಂದಿರುತ್ತದೆ, ಮೂರು ಬೆರಳುಗಳು ನಿಮ್ಮತ್ತಲೆ ತಿರುಗಿರುತ್ತದೆ ಎನ್ನುವುದನ್ನು ಕಾಂಗ್ರೆಸ್ ಅರಿತುಕೊಳ್ಳಬೇಕೆಂದು ಹೇಳಿದರು. ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಸಂವಿಧಾನದ…
ಮಡಿಕೇರಿ ಏ.26 : ಅಖಿಲ ಭಾರತ ಹಿಂದೂ ಮಹಾಸಭಾದ ಬೆಂಬಲಿತ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಕೆ.ಶ್ರೀನಿವಾಸ ರೈ ಅವರನ್ನು ಬೆಂಬಲಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಹೇಶ್ ಗೌಡ್ರು ಮತದಾರರಲ್ಲಿ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ ರಾಜ್ಯ ವಿವಿಧೆಡೆಗಳಲ್ಲಿ ಅಬ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಈ ಹಿಂದೆ ನಮ್ಮ ಪಕ್ಷದಿಂದ ರಾಣೆಬೆನ್ನೂರು ಕ್ಷೇತ್ರದಿಂದ ಆರ್.ಶಂಕರ್ ಅವರು ಸ್ಪರ್ಧಿಸಿ ಗೆಲುವನ್ನು ಸಾಧಿಸಿದ್ದರು ಎಂದರು. ಭ್ರಷ್ಟ ವ್ಯವಸ್ಥೆಯ ನಡುವೆ ಅತ್ಯಂತ ಪ್ರ್ರಾಮಾಣಿಕವಾದ, ಜನ ಸ್ಪಂದನೆಯ ಸ್ವಚ್ಛ ಆಡಳಿತವನ್ನು ನೀಡಬೇಕೆನ್ನುವ ಚಿಂತನೆ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ್ದಾಗಿದೆ. ಕ್ಷೇತ್ರದ ಪ್ರಜ್ಞಾವಂತ ಮತದಾರರು ಶ್ರೀನಿವಾಸ ರೈ ಅವರ ‘ಟಿವಿ’ ಚಿಹ್ನೆಗೆ ಮತ ಹಾಕುವ ಮೂಲಕ ಬೆಂಬಲ ನೀಡುವಂತೆ ಕೋರಿದರು. ಪಕ್ಷದ ಅಭ್ಯರ್ಥಿ ಶ್ರೀನಿವಾಸ ರೈ ಮಾತನಾಡಿ, ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಮತ್ತು ಕೋವಿಡ್ ಸಂದರ್ಭ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಿಕೊಂಡು ಬಂದಿದ್ದೇನೆ. ಪ್ರಸ್ತುತ ಆಡಳಿತ…
ಶನಿವಾರಸಂತೆ ಏ.26 : ವಿಶ್ವ ಮಲೇರಿಯಾ ದಿನದ ಅಂಗವಾಗಿ ಸಮಿಪದ ದೊಡ್ಡಮಳ್ತೆ ಗ್ರಾ.ಪಂ. ವ್ಯಾಪ್ತಿಯ ಗಿರಿಜನ ಹಾಡಿ ನಿವಾಸಿಗಳಿಗೆ ಮಲೇರಿಯ ರೋಗ ಹರಡುವಿಕೆ ಮತ್ತು ತಡೆಗಟ್ಟುವಿಕೆ ಕುರಿತು ಜಾಗೃತಿ ಮೂಡಿಸಲಾಯಿತು. ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಕಾರ್ಯಕರ್ತೆ ಕೆ.ಪಿ. ಪಾರ್ವತಿ ಮಲೇರಿಯ ರೋಗ ಹರಡುವ ಸೊಳ್ಳೆ, ಮನೆಯ ಸುತ್ತಮುತ್ತಲಿನ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು, ಚರಂಡಿಯಲ್ಲಿ ಕಲುಷಿತ ನೀರು ನಿಂತುಕೊಳ್ಳದಂತೆ ಜಾಗೃತಿ ವಹಿಸುವುದು, ಮಲೇರಿಯವನ್ನು ತಡೆಗಟ್ಟುವಿಕೆ ಕುರಿತು ಹಾಡಿ ನಿವಾಸಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಮಕ್ಕಳ ಸಹಾಯವಾಣಿ ಕೇಂದ್ರದ ತಾಲೂಕು ಕಾರ್ಯಕರ್ತೆ ಬಿ.ಆರ್.ಕುಮಾರಿ, ಯೋಗೇಶ್ ಮಕ್ಕಳ ಸಹಾಯವಾಣಿ ಕೇಂದ್ರದ ಉದ್ದೇಶ ಕುರಿತು ಮಾಹಿತಿ ನೀಡಿದರು. ವಳಗುಂದ ಅಂಗನವಾಡಿ ಕೇಂದ್ರದ ಶಿಕ್ಷಕಿ ಎ.ಡಿ.ಪಲಿತ ಹಾಡಿಯ ಪ್ರಮುಖರು ಹಾಜರಿದ್ದರು.
ಸೋಮವಾರಪೇಟೆ ಏ.26 : ಸೋಮವಾರಪೇಟೆ ಪಟ್ಟಣದಲ್ಲಿ ವರ್ಷದ ಮೊದಲ ಮಳೆ ತಂಪೆರೆದಿದೆ. ಬಿಸಿಲ ತಾಪದಿಂದ ಪರದಾಡುತ್ತಿದ್ದ ಜನರಿಗೆ ಸಾಧಾರಣ ಮಳೆ ನೆಮ್ಮದಿ ತಂದಿದೆ. ಗ್ರಾಮೀಣ ಭಾಗದಲ್ಲಿ ಬಹುತೇಕ ಕಡೆ ಹತ್ತಿಪ್ಪತ್ತು ಸೆಂಟ್ಸ್ನಷ್ಟು ಮಳೆಯಾಗಿದ್ದು, ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ವಿಳಂಬವಾಗಿದ್ದರೂ ಒಂದು ಇಂಚಿನಷ್ಟು ಮೊದಲ ಮಳೆಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದರು. ಅನೇಕರು ದೇವರಿಗೆ ಹರಕೆ ಹೊತ್ತಿದ್ದರು. ಶಾಂತಳ್ಳಿ ಹೋಬಳಿಯ ಕೂತಿ, ಹರಪಳ್ಳಿ, ಶನಿವಾರಸಂತೆ ಭಾಗದ ಕೆಲ ಭಾಗದಲ್ಲಿ ಒಂದು ಇಂಚಿನಷ್ಟು ಮಳೆ ಸುರಿದಿರುವುದು ಬಿಟ್ಟರೆ, ಉಳಿದ ಭಾಗದಲ್ಲಿ ಕಡಿಮೆ ಮಳೆ ಸುರಿದಿದೆ. ಹತ್ತಿಪ್ಪತ್ತು ಸೆಂಟ್ ನಷ್ಟು ಮಳೆಬಿದ್ದ ಕಡೆ ಅರ್ಧಂಬರ್ಧ ಹೂ ಅರಳಿ ಭಾರೀ ಪ್ರಮಾಣದಲ್ಲಿ ಫಸಲು ನಷ್ಟವಾಗುತ್ತದೆ ಎಂದು ಕಾಫಿ ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.
ಸೋಮವಾರಪೇಟೆ ಏ.25 : ಸೋಮವಾರಪೇಟೆ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಮಂಗಳವಾರ ಆಚರಿಸಲಾಯಿತು. ದೇವಾಲಯದಲ್ಲಿ ಅಭಿಷೇಕ ಅರ್ಚನೆಯೊಂದಿಗೆ, ಪ್ರಧಾನ ಅರ್ಚಕ ಚಿತ್ರ ಕುಮಾರ್ ಭಟ್ ನೇತೃತ್ವದಲ್ಲಿ ಗುರು ಪೂಜಾ ವಿಧಿ ವಿಧಾನಗಳು ನಡೆದವು. ದೇವಾಲಯದ ಅಧ್ಯಕ್ಷ ಎಸ್. ಆರ್. ಶ್ರೀನಿವಾಸ್, ಕಾರ್ಯದರ್ಶಿ ಎಸ್. ಡಿ. ವಿಜೇತ್, ಪದಾಧಿಕಾರಿಗಳಾದ ಸತೀಶ್, ಎಸ್. ಎನ್. ಸೋಮಶೇಖರ್, ಮೋಹನ್ ರಾಮ್, ದಿನೇಶ್ ಹಾಲೇರಿ, ರವಿಶಂಕರ್, ದೇವಿ ಬಳಗದ ಅಧ್ಯಕ್ಷೆ ವಿಮಲ ರಾಜ್ ಗೋಪಾಲ್ ಇದ್ದರು.






