ಲೇಖಕ: admin

ಮಡಿಕೇರಿ ಮಾ.18 : ಜಿಲ್ಲಾಡಳಿತ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡಗಿಗೆ ಆಗಮಿಸಿದ್ದು, ಕೆ.ಬಾಡಗ ಗ್ರಾಮದ ಗಾಲ್ಫ್ ಮೈದಾನದ ಹೆಲಿಪ್ಯಾಡ್ ನಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ಕೆ.ಜಿ.ಬೋಪಯ್ಯ ಆತ್ಮೀಯವಾಗಿ ಬರಮಾಡಿಕೊಂಡರು.

Read More

ಮಡಿಕೇರಿ ಮಾ.18 :  ಪೊನ್ನಂಪೇಟೆ ಗ್ರಾ.ಪಂ ಸ್ವಚ್ಛತಾಗಾರರಾದ ಹೆಚ್.‌ ಆರ್.‌ಪರಮೇಶ್‌  ಅವರ ಪುತ್ರಿ ಹೆಚ್.‌ ಪಿ.ಸ್ವಾತಿ   ದ್ವಿತೀಯ ಪಿಯುಸಿ ಯಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದು, ಇವರ ಉನ್ನತ ವ್ಯಾಸಂಗಕ್ಕಾಗಿ ಗ್ರಾ. ಪಂ  ವತಿಯಿಂದ ಲ್ಯಾಪ್‌ಟಾಪ್‌ ನೀಡಿ ಪ್ರೋತ್ಸಾಯಿಸಲಾಯಿತು.

Read More

ಮಡಿಕೇರಿ ಮಾ.18 : ಮಡಿಕೇರಿ ನಗರ ಕಾಂಗ್ರೆಸ್ ವತಿಯಿಂದ ಮನೆಮನೆಗೆ ಗ್ಯಾರಂಟಿ ಕಾರ್ಡ್ ವಿತರಿಸಲಾಯಿತು. ಬೂತ್ ನಂಬರ್ 212ರ ಅಧ್ಯಕ್ಷ ಹಫೀಜ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ನ ಮೊದಲ ಗ್ಯಾರಂಟಿ ಕಾರ್ಡ್ “ಗೃಹಜ್ಯೋತಿ” ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆ, 2ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು “ಗೃಹಲಕ್ಷ್ಮಿ” ಯೋಜನೆ ಜಾರಿ ಮತ್ತು 3ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್‍ದಾರರಿಗೆ 10 ಕೆ.ಜಿ.ಅಕ್ಕಿ ಉಚಿತವಾಗಿ ನೀಡುವುದಾಗಿ ಪ್ರಮುಖರು ಮತದಾರರಿಗೆ ಭರವಸೆ ನೀಡಿದರು. ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಮಡಿಕೇರಿ ಬ್ಲಾಕ್ ಸಂಘಟನಾ ಕಾರ್ಯದರ್ಶಿ ಎಂ.ಎನ್.ರವುಫ್, ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯದರ್ಶಿ ಕೌಸರ್, ಮಡಿಕೇರಿ ನಗರ ಅಲ್ಪಸಂಖ್ಯಾತರ ಖಜಾಂಜಿ ಅಜೀಜ್, ಬೂತ್ ಪ್ರಮುಖ ಹಮೀದ್, ಸೇವಾದಳದ ಹಬೀಬ್, ಹಿರಿಯ ಕಾಂಗ್ರೆಸ್ ಮುಖಂಡ ನಿಸಾರ್ ಅಹ್ಮದ್ ಹಾಗೂ ನಿರಂಜನ್ ಕ್ಸೇವಿಯರ್…

Read More

ಮಡಿಕೇರಿ ಮಾ.18 : ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಾ.19 ರಂದು 34ನೇ ವರ್ಷದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ನಡೆಯಲಿದೆ. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ಡಾ.ಮಂಥರ್ ಗೌಡ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ವಹಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಹೆಚ್.ಪಿ.ನಿರ್ಮಲಾ ಭಾಗವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸ್ಮಿತಾ ಐ ಕೇರ್ ನೇತ್ರ ತಜ್ಞ ಡಾ.ಸಿ.ಆರ್.ಪ್ರಶಾಂತ್, ಸ್ತ್ರೀ ರೋಗ ತಜ್ಞೆ ಮತ್ತು ಪ್ರಸೂತಿ ವೈದ್ಯೆ ಡಾ.ಸೌಮ್ಯ ಪ್ರಕಾಶ್, ವ್ಯಾಂಡಂ ಎಂಟರ್ ಪ್ರೈಸಸ್ ಮಾಲೀಕ ಕೆ.ಕೆ.ದಾಮೋದರ್, ಮಡಿಕೇರಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಎಂ.ಶ್ರೀನಿವಾಸ್, ರಾಜರಾಜೇಶ್ವರಿ ದೇವಾಲಯದ ಧರ್ಮಾಧಿಕಾರಿ ಹೆಚ್.ಎಸ್.ಗೋವಿಂದ ಸ್ವಾಮಿ, ಕೆ.ನಿಡುಗಣೆ ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ ಹಾಗೂ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.  

Read More

ಮಡಿಕೇರಿ ಮಾ.18 : ಈ ಬಾರಿಯ ಕೊಡವ ಕೌಟುಂಬಿಕ ಹಾಕಿ ಉತ್ಸವ ಆಯೋಜಿಸುತ್ತಿರುವ ಹಿನ್ನೆಲೆಯಲ್ಲಿ ಅಪ್ಪಚೆಟ್ಟೋಳಂಡ ಕುಟುಂಬಸ್ಥರು ಕುಟುಂಬದ ಹಿರಿಯರನ್ನು ಸ್ಮರಿಸಿ ದೇವಾಟ್ ಪರಂಬುವಿನಲ್ಲಿ ಮೀದಿ ಸಮರ್ಪಿಸಿದರು. ಈ ಹಿಂದಿನ ಇತಿಹಾಸದಂತೆ ಅಪ್ಪಚೆಟ್ಟೋಳಂಡ ಕುಟುಂಬಸ್ಥರು ಅಯ್ಯಂಗೇರಿ ಮೂಲದವರಾಗಿದ್ದಾರೆ. ಈ ಸಂದರ್ಭ ಕುಟುಂಬದ ಹಿರಿಯರು ನರಮೇದಕ್ಕೆ ಬಲಿಯಾಗಿರುವ ಐತಿಹತ್ಯವಿದೆ. ನಂತರದಲ್ಲಿ ಬಲ್ಲಮಾವಟಿಯಲ್ಲಿ ನೆಲೆಕಂಡು ಸಂತತಿ ವೃದ್ಧಿಯಾದ ಈ ಕುಟುಂಬ ಪ್ರಸ್ತುತ ಬಲ್ಲಮಾವಟಿ ಸೇರಿದಂತೆ ವಿವಿಧೆಡೆ ನೆಲೆಸಿದ್ದು, ಇದೀಗ 23ನೇ ವರ್ಷದ ಕೌಟುಂಬಿಕ ಹಾಕಿಯನ್ನು ಆಯೋಜಿಸುತ್ತಿದ್ದಾರೆ. ಕುಟುಂಬದ ಪ್ರಮುಖರಾದ ಮನು ಮುತ್ತಪ್ಪ ಸೇರಿದಂತೆ ಹಲವರು ಮೀದಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Read More

ನಾಪೋಕ್ಲು ಮಾ.18 :  ನಾಪೋಕ್ಲು ಪಟ್ಟಣದಿಂದ ಕೊಡವ ಸಮಾಜ ಹೋಗುವ ರಸ್ತೆಯ ಬದಿಯಲ್ಲಿರುವ ವಿದ್ಯುತ್ ಕಂಬ ಹಾನಿಯಾಗಿ ಮುರಿದು ಬೀಳುವ ಹಂತಕ್ಕೆ ತಲುಪಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಪಟ್ಟಣದ ಹೃದಯ ಭಾಗದಲ್ಲಿರುವ ಈ ರಸ್ತೆಯಲ್ಲಿ ಹಲವಾರು ವಾಹನಗಳು, ಸಾರ್ವಜನಿಕರು,ಶಾಲಾ ಮಕ್ಕಳು, ಇದರ ಬದಿಯಲ್ಲೇ ನಡೆದುಕೊಂಡು ಹೋಗುತ್ತಿದ್ದು,  ವಿದ್ಯುತ್ ಕಂಬ ತುಂಡಾಗಿ ಬಿದ್ದರೆ ಭಾರಿ ಅನಾಹುತ ಸಂಭವಿಸುವ ಪರಿಸ್ಥಿತಿ ಎದುರಾಗಲಿದೆ. ಇದೇ ರಸ್ತೆಯಲ್ಲಿ ಸೆಸ್ಕ್ ಲೈನ್ ಮ್ಯಾನ್ ಗಳು ಪ್ರತಿನಿತ್ಯ ಓಡಾಡುತ್ತಿದ್ದರು ಇಲ್ಲಿರುವ ವಿದ್ಯುತ್ ಕಂಬ ಹಾನಿಯಾಗಿ ಬೀಳುವ ಹಂತದಲ್ಲಿದ್ದರು ದುರಸ್ಥಿಪಡಿಸದೇ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿರುವುದು ದುರದೃಷ್ಟಕರ ಎಂದು ಸಾರ್ವಜನಿಕರು ದೂರಿದ್ದಾರೆ. ಇದೇ ರೀತಿ ನಾಪೋಕ್ಲು ಸುತ್ತಮುತ್ತಲಿನಲ್ಲಿ ಹಲವಾರು ಹಳೆಯ ವಿದ್ಯುತ್ ಕಂಬಗಳು ಹಾನಿಯಾಗಿದ್ದು, ಹೆಚ್ಚಿನ ಅಪಾಯ ಎದುರಾಗುವ ಮುನ್ನ ಎಚ್ಚೆತ್ತುಕೊಂಡು ಸೆಸ್ಕ್ ಇಲಾಖೆ ಅಧಿಕಾರಿಗಳು ಕೂಡಲೇ ಇದನ್ನು ದುರಸ್ತಿಪಡಿಸಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಕ್ಕೆ ಇಲಾಖೆಯೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ. ವರದಿ :ಝಕರಿಯ ನಾಪೋಕ್ಲು   

Read More

ಕುಶಾಲನಗರ, ಮಾ.18 :  ಕುಶಾಲನಗರ ಪುರಸಭೆ ವ್ಯಾಪ್ತಿಯ ಮುಳ್ಳುಸೋಗೆ ಗ್ರಾಮ ದೇವತೆ ದೊಡ್ಡಮ್ಮತಾಯಿ ದೇವಾಲಯದಲ್ಲಿ 10ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ  ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವ ಅಂಗವಾಗಿ ದೇವಾಲಯದಲ್ಲಿ ಗಣಪತಿ ಹೋಮ, ನವಗ್ರಹ ಶಾಂತಿ ಹೋಮ ನಂತರ ತೀರ್ಥ ಪ್ರಸಾದ ವಿನಿಯೋಗ ನಡೆಯಿತು.  ಅರ್ಚಕರಾದ ರಾಘವೇಂದ್ರ ಆಚಾರ್, ಪದ್ಮನಾಭ ಭಟ್ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲದೊಂದಿಗೆ ಆಗಮಿಸಿ ಸಾಮೂಹಿಕ ಪೂಜೆ ಸಲ್ಲಿಸಿದರು. ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷ  ಕುಮಾರಸ್ವಾಮಿ, ಉಪಾಧ್ಯಕ್ಷ  ಧನರಾಜ್, ಕಾರ್ಯದರ್ಶಿ ಅಣ್ಣೇಗೌಡ, ಸಹ ಕಾರ್ಯದರ್ಶಿ ಎಂ. ಮಂಜುನಾಥ್, ಖಜಾಂಚಿ ಎಂ.ಕೆ.ಗಣೇಶ್ , ಪ್ರಮುಖರಾದ ಎಂ.ಸಿ.ಮಂಜುನಾಥ್, ಎಂ.ಆರ್. ಸೋಮಶೇಖರ್, ಡಿ.ಅಪ್ಪಣ್ಣ ಮತ್ತಿತರರು ಇದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು. ದೇವಾಲಯ ಆಡಳಿತ ಸಮಿತಿ ವತಿಯಿಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು.

Read More

ಮಡಿಕೇರಿ ಮಾ.18 :  ನಿಟ್ಟೂರು ಕಾರ್ಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ವಿಜಯ ಗ್ರಾಮೀಣ ಯುವಕ ಸಂಘದ ವತಿಯಿಂದ ನಡೆಯುತ್ತಿರುವ 4ನೇ ವರ್ಷದ ಫುಟ್ಬಾಲ್ ಪಂದ್ಯಾವಳಿಗೆ ರಾಷ್ಟ್ರೀಯ ರಗ್ಬಿ ಆಟಗಾರ  ಕಾಂಡೇರ ತರುಣ್ ತಿಮ್ಮಯ್ಯ ಚಾಲನೆ ನೀಡಿದರು.   ನಂತರ ಮಾತನಾಡಿದ ಅವರು,  ಕ್ರೀಡಾ ಸಂಸ್ಥೆಗಳು ಅಥವಾ ವಿವಿಧ ಸಂಘ ಸಂಸ್ಥೆಗಳು ಗ್ರಾಮೀಣ ಭಾಗದಲ್ಲಿ ಹೆಚ್ಚು ಹೆಚ್ಚು ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಕ್ರೀಡೆ ಬಗ್ಗೆ ಆಸಕ್ತಿ ಮೂಡಿಸುವುದು ಶ್ಲಾಘನೀಯ ಎಂದರು. ನಿಟ್ಟೂರು ಗ್ರಾ.ಪಂ ಅಧ್ಯಕ್ಷ  ಕಾಟಿಮಾಡ ಶರೀನ್ ಮುತ್ತಣ್ಣ ಮಾತನಾಡಿ,  ಸಣ್ಣ ಗ್ರಾಮದಲ್ಲಿ ದೊಡ್ಡ ಮಟ್ಟದ ಕ್ರೀಡೋತ್ಸವವನ್ನು ಆಯೋಜಿಸಿ ನಿರಂತರವಾಗಿ ನಡೆಸಿಕೊಂಡು ಬರುವುದು ಅಭಿನಂದನಾರ್ಹ ಎಂದು ತಿಳಿಸಿದರು. ಫುಟ್ಬಾಲ್  ಪಂದ್ಯಾವಳಿಗೆ  31 ತಂಡಗಳು ನೊಂದಾಯಿಸಿಗೊಂಡಿದ್ದು, ವಿಜೇತರಿಗೆ 50 ಸಾವಿರ ನಗದು, ರನ್ನರ್-ಅಪ್ ತಂಡಕ್ಕೆ 30 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುತ್ತಿದ್ದು,  ಮಾ.20 ರಂದು ಸೋಮವಾರ ಸಂಜೆ ಫೈನಲ್ ಪಂದ್ಯ ನಡೆಯಲಿದೆ. ವಿಜಯ ಗ್ರಾಮೀಣ ಯುವಕ ಸಂಘದ…

Read More

ನಾಪೋಕ್ಲು ಮಾ.18 : ತೋಟಗಾರಿಕಾ ಇಲಾಖೆಯಿಂದ 4.50 ಲಕ್ಷ ರೂ.ವೆಚ್ಚದ ಬೇತು ಸಂಪರ್ಕ ರಸ್ತೆ ಕಾಮಗಾರಿಗೆ ನಾಪೋಕ್ಲು ಬಿಜೆಪಿ ಶಕ್ತಿಕೇಂದ್ರದಿಂದ ಭೂಮಿಪೂಜೆ ನೆರವೇರಿಸಲಾಯಿತು. ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಮಡಿಕೇರಿ ಬಿಜೆಪಿ ತಾಲೂಕು ಕಾರ್ಯದರ್ಶಿ ಪಾಡಿಯಮ್ಮಂಡ ಎ.ಮನುಮಹೇಶ್, ಮಡಿಕೇರಿ ಬಿಜೆಪಿ ತಾಲೂಕು ರೈತಮೋರ್ಚಾ ಅದ್ಯಕ್ಷ ಶಿವಚಾಳಿಯಂಡ ಜಗದೀಶ್, ಬೇತು ಗ್ರಾಮದ ಬೂತ್ ಅದ್ಯಕ್ಷ ಚೋಕಿರ ಸಜಿತ್, ಚೋಕಿರ ಪ್ರಭು, ಅಜ್ಜೇಟಿರ ಬೋಪಣ್ಣ, ಕೇಲೇಟಿರ ರವಿ, ಕಂಗಾಂಡ ಜಾಲಿ ಹಾಗೂ ಗುತ್ತಿಗೆದಾರ ವಿನಾಯಕ ಇದ್ದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಮಾ.18 : ಜಿಲ್ಲೆಯಲ್ಲಿ ಮತ್ತೆ ಹಾಕಿ ಹಬ್ಬದ ಸಂಭ್ರಮ ಮರುಕಳಿಸುತ್ತಿದ್ದು, ಇಂದಿನಿಂದ ಆರಂಭಗೊಳ್ಳುವ 23ನೇ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇಲ್ಲಿನ ಚೆರಿಯಪರಂಬು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅಂತಿಮ ಹಂತದ ಸಿದ್ದತೆಗಳು ಪೂರ್ಣಗೊಂಡಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾಕಿ ಪಂದ್ಯಾವಳಿಗೆ ಉದ್ಘಾಟನೆಗೆ ಆಗಮಿಸಲಿದ್ದು, ಉತ್ಸವದ ಮೆರುಗು ಮತ್ತಷ್ಟು ಹೆಚ್ಚಲಿದೆ. ಅಪ್ಪಚೆಟ್ಟೋಳಂಡ ಕುಟುಂಬ ಕೌಟುಂಬಿಕ ಹಾಕಿ ಉತ್ಸವದ ಆತಿಥ್ಯ ವಹಿಸಿದ್ದು ಶುಕ್ರವಾರ ಅಂತಿಮ ಹಂತದ ಸಿದ್ಧತೆ ನಡೆಸಿತು. ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗಾಗಿ ಕ್ರೀಡಾಂಗಣದಲ್ಲಿ ತಯಾರಿ ನಡೆದಿದ್ದು, ಕೊಡಗಿನ ಹಾಕಿ ಪ್ರಿಯರು ವೀಕ್ಷಿಸಲು ಎಲ್ಲ ಸೌಲಭ್ಯಗಳನ್ನು ಒಳಗೊಂಡ 32 ಲಕ್ಷ ರೂ.ವೆಚ್ಚದ ಬೃಹತ್ ಗ್ಯಾಲರಿ ನಿರ್ಮಾಣ ಮಾಡಲಾಗಿದೆ. 25000 ಜನರು ಒಟ್ಟಾಗಿ ಪಂದ್ಯ ವೀಕ್ಷಿಸಬಹುದಾಗಿದೆ. ಅಲ್ಲದೇ 600 ಮಂದಿ ಕುಳಿತುಕೊಳ್ಳಲು ವಿಐಪಿ ಗ್ಯಾಲರಿಯನ್ನು ನಿರ್ಮಾಣ ಮಾಡಲಾಗಿದ್ದು ಮೈದಾನ ಹಾಗೂ ಗ್ಯಾಲರಿ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದೆ. ಒಂದೇ ಮೈದಾನದಲ್ಲಿ ಒಟ್ಟು ಮೂರು ಸುಸಜ್ಜಿತ ಹಾಕಿ ಮೈದಾನ ತಯಾರಾಗಿದ್ದು ಒಂದು…

Read More