ಕುಶಲನಗರ ಮಾ.17 : ಕುಶಾಲನಗರ ಲಯನ್ಸ್ ಕ್ಲಬ್ ಮತ್ತು ಗೌಡ ಸಮಾಜ ಆಶ್ರಯದಲ್ಲಿ ಡಾ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು. ಕುಶಾಲನಗರದ ಗೌಡ ಸಮಾಜ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಪುರಸಭೆ ಅಧ್ಯಕ್ಷ ಜಯ ವರ್ಧನ್ ಉದ್ಘಾಟಿಸಿದರು. ಮೈಸೂರಿನ ಸೈಂಟ್ ಜೋಸೆಫ್ ಆಸ್ಪತ್ರೆಯ ವೈದ್ಯರಾದ ಮಹಮ್ಮದ್ ಇಬ್ರಾಹಿಂ, ಮಡಿಕೇರಿ ರಕ್ತ ನಿಧಿ ಘಟಕದ ಡಾ. ಕರುಬಯ್ಯ, ಡಾ ಶಶಿಧರ್ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ಶಿಬಿರ ನಡೆಯಿತು. 75ಕ್ಕೂ ಅಧಿಕ ರಕ್ತದಾನಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಎಂ.ಎಸ್ ಚಿಣ್ಣಪ್ಪ, ಕಾರ್ಯದರ್ಶಿ ಸುಮನ್ ಬಾಲಚಂದ್ರ, ಹೇಮಂತ್, ನಿಕಟ ಪೂರ್ವ ಅಧ್ಯಕ್ಷರುಗಳಾದ ಪಿ ಎಂ ಮೋಹನ್, ರಾಜಶೇಖರ್, ಸತೀಶ್ ಕುಮಾರ್, ಗೌಡ ಸಮಾಜದ ಅಧ್ಯಕ್ಷರಾದ ಗಣಿ ಪ್ರಸಾದ್ ಕಾರ್ಯದರ್ಶಿ ಕೃಷ್ಣಮೂರ್ತಿ, ಯುವಕ ಸಂಘ ಅಧ್ಯಕ್ಷರಾದ ಕೊಡಗನ ಹರ್ಷ,ಕಾಶಿ ಪೂವಯ್ಯ ಮತ್ತಿತರರು ಇದ್ದರು.
ಲೇಖಕ: admin
ಮಡಿಕೇರಿ ಮಾ.17 : ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಮಡಿಕೇರಿ ನಗರಸಭಾ ವ್ಯಾಪ್ತಿಯ ಇಂದಿರಾನಗರ ಬಡಾವಣೆಯ ನಿವಾಸಿಗಳು ನಿರ್ಧರಿಸಿದ್ದಾರೆ. ನಗರಸಭೆಯ ನಿರ್ಲಕ್ಷ್ಯದಿಂದ ಬಡಾವಣೆಯ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿವೆ. ರಸ್ತೆಯ ಅಭಿವೃದ್ಧಿಗಾಗಿ ಮಂಜೂರಾಗಿದ್ದ ಅನುದಾನವನ್ನು ರದ್ದುಗೊಳಿಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಳೆಗಾಲ ಸಮೀಪಿಸುತ್ತಿದ್ದು, ರಸ್ತೆ ಕಾಮಗಾರಿಗೆ ಇನ್ನೂ ಕೂಡ ಚಾಲನೆ ನೀಡಿಲ್ಲ. ಕಾಮಗಾರಿ ನಡೆಯುವ ಬಗ್ಗೆ ಸಂಶಯವಿದ್ದು, ಈ ಬಾರಿ ನಾವು ಮತದಾನ ಮಾಡುವುದಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಡಾವಣೆಯಲ್ಲಿ ಚುನಾವಣೆ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದಾರೆ.
ಕುಶಾಲನಗರ ಮಾ.17 : ಸ್ವಚ್ಛತಾ ಅಭಿಯಾನದ ಅಡಿಯಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಕುಶಾಲನಗರ ಫೆಡರಲ್ ಬ್ಯಾಂಕ್ ಶಾಖೆ ವತಿಯಿಂದ ಕುಶಾಲನಗರ ಪುರಸಭೆಗೆ ಮಹೇಂದ್ರ ಪಿಕಪ್ ವಾಹನವನ್ನು ಕೊಡುಗೆ ನೀಡಲಾಯಿತು. ಬ್ಯಾಂಕ್ ಶಾಖೆಯ 11ನೇ ವಾರ್ಷಿಕೋತ್ಸವ ಅಂಗವಾಗಿ ಸಂಸ್ಥೆಯ ಸಿಎಸ್ಆರ್ ಯೋಜನೆ ಅಡಿ ಸುಮಾರು 8.75 ಲಕ್ಷ ರೂ ಮೌಲ್ಯದ ವಾಹನವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕರಾದ ಎಂ ಪಿ ಅಪ್ಪಚ್ಚುರಂಜನ್ ಸಮ್ಮುಖದಲ್ಲಿ ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ನಡೆದ ಸರಳ ಸಮಾರಂಭದಲ್ಲಿ ಬ್ಯಾಂಕಿನ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶಾಸಕ ರಂಜನ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಂಜನ್, ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿರುವ ಫೆಡರಲ್ ಬ್ಯಾಂಕ್ ಅಧಿಕಾರಿಗಳು ಸಿಬ್ಬಂದಿಗಳ ಕೊಡುಗೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬ್ಯಾಂಕಿನ ಲಾಭಾಂಶದಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಇಂತಹ ಸಂಸ್ಥೆಗಳಲ್ಲಿ ಗ್ರಾಹಕರು ಹೆಚ್ಚಿನ ವಹಿವಾಟು ಮಾಡುವುದರೊಂದಿಗೆ ಸಂಸ್ಥೆಯ ಅಭಿವೃದ್ಧಿಗೆ ಸಹಕರಿಸಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪುರಸಭೆ ಅಧ್ಯಕ್ಷರಾದ ಬಿ. ಜಯವರ್ಧನ್ ಮಾತನಾಡಿ, ಬ್ಯಾಂಕ್…
ಮಡಿಕೇರಿ ಮಾ.17 : ಮಹಿಳೆಯನ್ನು ಅತ್ಯಾಚಾರ ಮಾಡಿದ ಆರೋಪದಡಿ ನಾಪತ್ತೆಯಾಗಿದ್ದ ಆರೋಪಿಯನ್ನು ಕೊಡಗು ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊನ್ನಂಪೇಟೆಯಲ್ಲಿ ಆಟೋ ಚಾಲಕನಾಗಿರುವ ಮಣಿಕಂಠ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಪೊನ್ನಂಪೇಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರು ಮಾ.12ರಂದು ಸಂಜೆ 5.30 ರ ವೇಳೆಗೆ ಕೆಲಸ ಮುಗಿಸಿ ಮನೆಗೆ ತೆರಳಲು ವಾಹನಕ್ಕಾಗಿ ಕಾಯುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮಾರುತಿ ಓಮಿನಿ ಕಾರ್ನಲ್ಲಿ ಬಂದು ನಾನು ಕುಂದ ಕಡೆ ಹೋಗುತ್ತಿದ್ದು, ನೀವು ಬರುತ್ತೀರ ಎಂದು ಮಹಿಳೆಯನ್ನು ಕೇಳಿದ್ದಾನೆ. ಈ ವೇಳೆ ಬಿ.ಶೆಟ್ಟಿಗೇರಿ ಕಡೆ ಬರುತ್ತೇನೆ ಎಂದು ಮಹಿಳೆ ಕಾರಿನಲ್ಲಿ ಕುಳಿತಿದ್ದಾರೆ. ಸ್ವಲ್ಪ ದೂರ ತೆರಳಿದ ನಂತರ ಕಾರ್ ನಿಲ್ಲಿಸಿದ ಆರೋಪಿ ಅತ್ಯಾಚಾರ ಎಸಗಿದ್ದಲ್ಲದೆ, ಯಾರಿಗಾದರೂ ತಿಳಿಸಿದಲ್ಲಿ ಕೊಲೆ ಮಾಡುವುದಾಗಿ ಬೆದರಿಸಿ, ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದ ಎಂದು ಆರೋಪಿಸಿ ಸಂತ್ರಸ್ತ ಮಹಿಳೆ ಮಾ.16ರಂದು ಗೋಣಿಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಪೊನ್ನಂಪೇಟೆಯಲ್ಲಿ ಆಟೋ ಚಾಲಕನಾಗಿರುವ ಮಣಿಕಂಠ ಎಂಬ…
ಮಡಿಕೇರಿ ಮಾ.17 : ಕೊಡವರಿಗೆ ಎಸ್ಟಿ ಟ್ಯಾಗ್ ನೀಡಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಿರಂತರವಾಗಿ ಹೋರಾಟ ನಡೆಸುತ್ತಲೇ ಬರುತ್ತಿದೆ. ಆದರೆ ಇತ್ತೀಚೆಗೆ ಕೆಲವರು ಕೊಡವರ ಹೆಸರಿನಲ್ಲಿ ಕೊಡವ ಸಮುದಾಯದ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ರತಿಮ ದೇಶಪ್ರೇಮಿ ಕೊಡವರನ್ನು ಅನ್ಯಾಯವಾಗಿ ಧಮನಿಸುವ ಪ್ರಯತ್ನಗಳು ನಡೆಯುತ್ತಿದೆ. ಈ ದೇಶದ ಸರ್ವಜನರಿಗೂ ಸಂವಿಧಾನದ ಆಶಯದಂತೆ ಹಕ್ಕು ನೀಡಬೇಕು ಆ ಹಕ್ಕನ್ನು ರಾಜ್ಯದಲ್ಲಿರುವ ಮತ್ತು ಕೊಡಗಿನಲ್ಲಿರುವ ಹತ್ತಾರು ಇತರೆ ಸಮುದಾಯಗಳು ಅವರ ವಂಶವಾಹಿ ಮತ್ತು ಮೂಲ ಕುಲ ಕಸುಬಿನಂತೆ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ. ಆದರೆ ತಮ್ಮ ಅಸಲಿಯತ್ತನ್ನು ಮರೆಮಾಚಿ ಕೊಡವರ ಹೆಸರಿನಲ್ಲಿ ಕೊಡವರಿಗೆ ದೊರಕುವ ಹಕ್ಕನ್ನು ಅಪಹರಿಸಿ ಧಕ್ಕಿಸಿಕೊಳ್ಳಬಾರದಷ್ಟೆ ಎಂದರು. ಕೊಡವ ಸಮುದಾಯಗಳು ಎಂಬ ಯಾವುದೇ ಗುಂಪುಗಳಿಲ್ಲ, ಕೇವಲ ಕೊಡವ ಸಮುದಾಯ ಎನ್ನುವ ಏಕೈಕ ಗುಂಪಿದೆ. ರಾಜ್ಯದ ಮುಖ್ಯಮಂತ್ರಿಗಳು ಜನಸಂಖ್ಯಾ ಶಾಸ್ತ್ರದ ಬಗ್ಗೆ ಮಾಹಿತಿ ಪಡೆದು ಚಾರಿತ್ರಿಕ…
ಮಡಿಕೇರಿ ಮಾ.17 : ವಿವೇಕಾನಂದ ಯೂತ್ ಮೂಮೆಟ್, ವನವಾಸಿ ಕಲ್ಯಾಣ ಕೊಡಗು, ಬಾಳೆಲೆ ಗ್ರಾ. ಪಂ ವತಿಯಿಂದ ಬಾಳೆಲೆ ವ್ಯಾಪ್ತಿಯ ಗಿರಿಜನ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು. ಬಾಳೆಲೆ ಗ್ರಾ.ಪಂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 21 ಮಂದಿ ಗಿರಿಜನ ಗರ್ಭಿಣಿ ಮಹಿಳೆಯರಿಗೆ ಸೀಮಂತರ ಮಾಡಲಾಯಿತು. ಈ ಸಂದರ್ಭ ಬಾಳೆಲೆ ಗ್ರಾ.ಪಂ ಅಧ್ಯಕ್ಷ ಪೊಡಮಾಡ ಸುಖೇಶ್ ಭೀಮಯ್ಯ ಮಾತನಾಡಿ, ಮುಂದಿನ ಪೀಳಿಗೆಗೆ ಆಧಾರ ಸ್ತಂಭಗಳಾದ ಗರ್ಭಿಣಿ ಸ್ತ್ರೀಯರು ಉತ್ತಮ ಆರೋಗ್ಯಕರ ಪದ್ಧತಿಯನ್ನು ರೂಢಿಸಿಕೊಂಡು ಮಗುವಿನ ಆರೋಗ್ಯದ ಕಡೆ ಗಮನಹರಿಸಬೇಕೆಂದು ಕರೆ ನೀಡಿದರು. ವೇದಿಕೆಯಲ್ಲಿ ಗ್ರಾ.ಪಂ ಸದಸ್ಯರಾದ ಮುಕ್ಕಾಟಿರ ಜಾನಕಿ, ತಾಲೂಕು ಶಿಸು ಕಲ್ಯಣ ಅಭಿವೃದ್ಧಿ ಅಧಿಕಾರಿ ರಾಜೇಶ್, ಮಹಿಳಾ ಆರೋಗ್ಯ ಪರಿವೀಕ್ಷಕರಾದ ಕಾವೇರಮ್ಮ, ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಶೋಕ್ ಕುಮಾರ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸಂತೋಷ್, ಸ್ವಾಮಿ ವಿವೇಕಾನಂದ ಯೂತ್ ಮೂಮೆಟ್ ಕಾರ್ಯಕ್ರಮ ವ್ಯವಸ್ಥಾಪಕರಾದ ಕುಸುಮ, ಮೇಲ್ವಿಚಾರಕರಾದ ಶ್ರತೇಶ್, ಪ್ರಮುಖರಾದ ಪಡಿಞರಂಡ ಪ್ರಭುಕುಮಾರ್, ಅಂಗನವಾಡಿ ಕಾರ್ಯಕರ್ತೆಯರು ಆಶಾಕಾರ್ಯಕರ್ತೆಯರು ಹಾಗೂ ವಿವಿಧ…
ವಿರಾಜಪೇಟೆ ಮಾ.17 : ಕರ್ನಾಟಕ ಸರಕಾರದ ವತಿಯಿಂದ ನೀಡಲಾಗುವ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾದ ಪೂಮಾಲೆ ಪತ್ರಿಕೆ ಸಂಪಾದಕರು, ವಿರಾಜಪೇಟೆ ತಾಲೂಕು ಜಾನಪದ ಪರಿಷತ್ತಿನ ಗೌರವ ಅದ್ಯಕ್ಷರು ಆಗಿರುವ ಅಜ್ಜೀನಿಕಂಡ ಮಹೇಶ್ ನಾಚಯ್ಯ ಅವರನ್ನು ವಿರಾಜಪೇಟೆ ಜಾನಪದ ಪರಿಷತ್ತಿನ ವತಿಯಿಂದ ಅವರ ನಿವಾಸಕ್ಕೆ ತೆರಳಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇವರಿಗೆ ಮಾದ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು, 27 ವರ್ಷಗಳ ನನ್ನ ಪತ್ರಿಕೋದ್ಯಮದಲ್ಲಿ “ಕಾಯಕವೇ ಕೈಲಾಸ’ ಎಂಬಂತೆ ಬಂದ ನನ್ನ ಹಾದಿಯಲ್ಲಿ ಕಲ್ಲು ಮುಳ್ಳುಗಳನ್ನು ಹಲವು ಬಾರಿ ಮೆಟ್ಟಿದ್ದರೂ ಧೃತಿಗೆಡದೆ ಮುನ್ನುಗ್ಗಿದ್ದೇನೆ. ಇಂದಿಗೂ ನಾನಾಗಿ ಯಾವುದೇ ಪ್ರಶಸ್ತಿ, ಸನ್ಮಾನಗಳ ಹಿಂದೆ ಬಿದ್ದಿಲ್ಲ. ನನಗಾಗಿ ಒಲಿದು ಬಂದವು ಒಂದಿಷ್ಟು. ಇದರಲ್ಲಿ ಪ್ರತಿಷ್ಟಿತ ಮಾಧ್ಯಮ ಅಕಾಡೆಮಿಯ ರಾಜ್ಯ ಪ್ರಶಸ್ತಿಯು ದೊರಕಿರುವುದು ನನ್ನಲ್ಲಿ ಸಾರ್ಥಕತೆ ತಂದಿದೆ. ಕುಟುಂಬವೆಂಬಂತೆ ಆತ್ಮೀಯತೆಯ ನಂಟನ್ನು ಹೊತ್ತಿರುವ ನಮ್ಮ ಜಾನಪದ ಮನಸ್ಸುಗಳು, ಅದರಲ್ಲೂ ವೀರಾಜಪೇಟೆ ತಾಲೂಕು…
ಮಡಿಕೇರಿ ಮಾ.17 : ಗೋಸಂರಕ್ಷಣೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮ ವ್ಯಾಪ್ತಿಗಳಲ್ಲಿನ ಗೋಮಾಳಗಳಿಗೆ ಆಯಾ ವ್ಯಾಪ್ತಿಯಲ್ಲಿನ ಗೋಶಾಲೆಗಳಿಂದ ಬೇಲಿ ಹಾಕಿ, ಜಾನುವಾರುಗಳ ಸಂರಕ್ಷಣೆಗೆ ರಾಜ್ಯ ವ್ಯಾಪಿ ಕಾರ್ಯಕ್ರಮ ರೂಪಿಸಲಾಗುವುದೆಂದು ಕುಶಾಲನಗರ ಬಳಿಯ ಚಿಕ್ಕತ್ತೂರು ಗ್ರಾಮದ ಶ್ರೀಕೃಷ್ಣ ಗೋ ಶಾಲೆಯ ಅಧ್ಯಕ್ಷರು ಹಾಗೂ ಪ್ರಾಣಿ ದಯಾ ಸಂಘದ ಸದಸ್ಯ ಹರೀಶ್ ಜಿ.ಆಚಾರ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಮಾಳಗಳನ್ನು ಯಾವುದೇ ಸಂಘ-ಸಂಸ್ಥೆಗಳು, ಟ್ರಸ್ಟ್ಗಳಿಗೆ ಕಾನೂನೂ ಬದ್ಧವಾಗಿ ನೀಡಲು ಬರುವುದಿಲ್ಲವೆಂದು ಸರ್ಕಾರ ತಿಳಿಸುತ್ತದೆ. ಆದರೆ, ಇದೇ ಗೋಮಾಳಗಳನ್ನು ಅತಿಕ್ರಮಿಸಿಕೊಂಡು ಸಾಕಷ್ಟು ಮಂದಿ ಮನೆಗಳನ್ನು ನಿರ್ಮಿಸಿದ ಪ್ರಕರಣಗಳಿವೆ. ಅವರನ್ನು ತೆರವು ಮಾಡಬೇಕೆಂದು ನಾವು ಹೇಳುತ್ತಿಲ್ಲ. ಆದರೆ, ಆ ಸಂದರ್ಭ ಮೌನವಾಗಿದ್ದ ಸರ್ಕಾರ ಗೋವುಗಳಿಗೆ ಅನುಕೂಲ ಮಾಡಿಕೊಡುವ ಗೋಶಾಲೆಗಳಿಗೆ ಗೋಮಾಳವನ್ನು ಒದಗಿಸಲು ಯಾಕೆ ಮುಂದಾಗುತ್ತಿಲ್ಲವೆಂದು ಪ್ರಶ್ನಿಸಿದರು. ಗೋಮಾಳಗಳಲ್ಲಿ ರೆಸಾರ್ಟ್, ಕಟ್ಟಡ ನಿರ್ಮಾಣ, ಕೃಷಿ ನಡೆಸುವುದಿಲ್ಲ ಮೊದಲಾದ ನಿರ್ಬಂಧಗಳನ್ನು ವಿಧಿಸಿ ಗೋಶಾಲೆಗಳಿಗೆ ಅದನ್ನು ಒದಗಿಸಿದಲ್ಲಿ ಗೋವುಗಳ ಸಂರಕ್ಷಣೆ ಸಾಧ್ಯವಾಗುತ್ತದೆ. ಇಲ್ಲವಾದಲ್ಲಿ ಕಾಲ ಕ್ರಮೇಣ ಇರುವ ಗೋಮಾಳಗಳು ಅತಿಕ್ರಮಣಕ್ಕೆ ಒಳಗಾಗಿ ಗೋಮಾಳಗಳೇ…
ಮಡಿಕೇರಿ ಮಾ.17 : ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದರೂ ಕೊಡಗಿನ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಿಜೆಪಿ ಪ್ರತಿನಿಧಿಗಳು ವಿಫರಾಗಿರುವುದರಿಂದ ಭ್ರಮನಿರಸನಗೊಂಡಿರುವ ಜನ ಈ ಬಾರಿ ಬದಲಾವಣೆಯನ್ನು ಬಯಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಯಿಂದ ಹಿಡಿದು ಕೇಂದ್ರದವರೆಗೆ ಬಿಜೆಪಿ ಅಧಿಕಾರದಲ್ಲಿರುವುದಲ್ಲದೆ, ಜಿಲ್ಲೆಯ ಎರಡು ಕ್ಷೇತ್ರಗಳಲ್ಲು ಬಿಜೆಪಿ ಶಾಸಕರಿದ್ದಾರೆ. ಹೀಗಿದ್ದೂ ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಇವರುಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಟೀಕಿಸಿದರು. ಕೊಡಗಿನ ಪ್ರಮುಖ ಕೃಷಿಯಾಗಿರುವ ಕಾಫಿ ವಾಣಿಜ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುತ್ತದೆ. ಈ ಕೃಷಿಗೆ ಸಂಬಂಧ ಪಟ್ಟಂತೆ ಸೂಕ್ತ ಆಮದು ನೀತಿಯನ್ನು ರೂಪಿಸುವುದು ಸೇರಿದಂತೆ ಯಾವುದೇ ಗಂಭೀರ ವಿಚಾರಗಳ ಬಗ್ಗೆ ಬಿಜೆಪಿ ಸೂಕ್ತ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಸೋತಿದೆಯೆಂದು ಆರೋಪಿಸಿದ ಅವರು, ಜಿಲ್ಲೆಯಲ್ಲಿ ದಿನೇ ದಿನೇ ಮಾನವ ಮತ್ತು ವನ್ಯ ಜೀವಿಗಳ ಸಂಘರ್ಷ ಹೆಚ್ಚುತ್ತಿದೆಯಾದರು ಇದಕ್ಕೆ ವೈಜ್ಞಾನಿಕವಾದ ಶಾಶ್ವತ ಪರಿಹಾರ ರೂಪಿಸುವಲ್ಲಿ ಬಿಜೆಪಿ ವಿಫಲವಾಗಿದೆಯೆಂದು ಹೇಳಿದರು. ವನ್ಯಜೀವಿಗಳ ಹಾವಳಿ ಸೇರಿದಂತೆ…
ಮಡಿಕೇರಿ ಮಾ.17 : ನಗರಸಭೆಯ 2023-24ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 20 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭೆ ಕೌನ್ಸಿಲ್ ವಿಶೇಷ ಸಭೆಯು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.






