ಸುಂಟಿಕೊಪ್ಪ ಏ.25 : ಜಿಲ್ಲೆಯಲ್ಲಿ ಕಳೆದ ಕೆಲವು ದಿಗಳಿಂದ ಮೋಡ ಕವಿದ ವಾತಾವರಣವಿದ್ದು, ಜನ ಮಳೆಗಾಗಿ ಎದುರು ನೋಡುತ್ತಿದ್ದಾರೆ. ಇಂದು ಸುಂಟಿಕೊಪ್ಪ ಸೇರಿದಂತೆ ಸುತ್ತ ಮುತ್ತಲ ಗ್ರಾಮಗಳಲ್ಲಿ ಸುರಿದ ಮಳೆಯಿಂದಾಗಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ನಾಕೂರು ಶಿರಂಗಾಲ, ಕಲ್ಲೂರು, ಕೊಡಗರಹಳ್ಳಿ, ಹೊಸಕೋಟೆ,ಗರಗಂದೂರು, ಮಾದಾಪುರ, ಹರದೂರು ಭಾಗಗಳಲ್ಲಿ ಅಂದಾಜು 1.5 ರಿಂದ 2.5 ಇಂಚುಗಳವರೆಗೆ ಮಳೆಯಾಗಿದೆ. ಸುಂಟಿಕೊಪ್ಪ ಗ್ರಾ.ಪಂ ವ್ಯಾಪ್ತಿಯ ಬಾವಿಗಳು ಬತ್ತಿದ್ದು, ಕುಡಿಯುವ ನೀರು ಪೂರೈಸಲು ವ್ಯತ್ಯಯವಾಗಿತ್ತು. ಇದೀಗ ಮಳೆಯಿಂದಾಗಿ ಜನ ಸಂತಸಗೊಂಡಿದ್ದಾರೆ.
ಲೇಖಕ: admin
ಕುಶಾಲನಗರ ಏ.29 : ನಗರದ ವಿಪ್ರ ಅರ್ಚಕರ ವೇದಿಕೆ ಆಶ್ರಯದಲ್ಲಿ ಶ್ರೀ ಶಂಕರಾಚಾರ್ಯರ 1235ನೇ ಜಯಂತಿ ವಿಶೇಷ ಪೂಜಾ ಕಾರ್ಯಕ್ರಮ ಮೆರವಣಿಗೆಯೊಂದಿಗೆ ನಡೆಯಿತು. ನಗರದ ಅಯ್ಯಪ್ಪ ಸ್ವಾಮಿ ದೇವಾಲಯದ ಆವರಣದಲ್ಲಿ ಬೆಳಗ್ಗೆ ರುದ್ರ ಹೋಮ ನಡೆಯಿತು. ನಂತರ ವೇದಿಕೆ ಸಂಚಾಲಕರಾದ ರಾಘವೇಂದ್ರ ಭಟ್ ಅವರ ನೇತೃತ್ವದಲ್ಲಿ ಬೈಚನಹಳ್ಳಿ ಬಳಿಯಿಂದ ಆರಮಭಗೊಂಡ ಆದಿಶಂಕರರ ರಥದ ಮೆರವಣಿಗೆ ಮುಖ್ಯ ರಸ್ತೆಯಲ್ಲಿ ತೆರಳಿ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಸಮಾಪನಗೊಂಡಿತು. ಬಳಿಕ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಪಟ್ಟಣದ ವಿವಿಧ ದೇವಾಲಯಗಳ ಅರ್ಚಕರು ಭಕ್ತಾದಿಗಳು ಪಾಲ್ಗೊಂಡಿದ್ದರು.
ಕುಶಾಲನಗರ ಏ.25 : ನಾಗರಿಕರು ಪ್ರಬುದ್ಧ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಮೂಲಕ ಪ್ರಬುದ್ಧ ಸಮಾಜ ನಿರ್ಮಾಣದ ಕನಸು ನನಸಾಗಿಸಲು ಸಾಧ್ಯ ಎಂದು ಗುಜರಾತ್ ರಾಜ್ಯದ ಶಾಸಕ ಡಾ. ಪ್ರದ್ಯಮಾನ್ ವಾಜಾ ಅಭಿಪ್ರಾಯಪಟ್ಟಿದ್ದಾರೆ. ಕುಶಾಲನಗರ ಕಾರು ನಿಲ್ದಾಣದ ಆವರಣದಲ್ಲಿ ನಡೆದ ಬಿಜೆಪಿಯ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಾಡಿನ ಸಮಗ್ರ ಅಭಿವೃದ್ಧಿ ಆಗಬೇಕಾದಲ್ಲಿ ಯೋಜನೆಗಳನ್ನು ರೂಪಿಸುವ ಸರಕಾರದ ಅವಶ್ಯಕತೆ ಇದೆ. ಹೆಚ್ಚಿನ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾಗಿದೆ ಎಂದು ಹೇಳಿದರು. ಮಡಿಕೇರಿ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿ ಎಂ.ಪಿ. ಅಪ್ಪಚುರಂಜನ್ ಅವರನ್ನು ಮತ್ತೆ ಬೆಂಬಲಿಸಿ ಮತ ಚಲಾಯಿಸಿ ಗೆಲ್ಲಿಸುವಂತೆ ಮನವಿ ಮಾಡಿದರು. ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಪ್ಪಚ್ಚುರಂಜನ್ ಮಾತನಾಡಿ ಪಕ್ಷದ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದು, ವಿವಿಧ ಪಕ್ಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವುದಾಗಿ ತಿಳಿಸಿದರು. ಕ್ಷೇತ್ರಗಳ ಅಭಿವೃದ್ಧಿ ಹಾಗೂ ಜನಪರ ಯೋಜನೆಗಳನ್ನು ಸರ್ಕಾರ ಮೂಲಕ ರೂಪಿಸಲಾಗಿದೆ. ಮತದಾರರು ತಮ್ಮನ್ನು ಬೆಂಬಲಿಸುವುದರೊಂದಿಗೆ…
ಮಡಿಕೇರಿ ಏ.25 : ವಿರಾಜಪೇಟೆಯ ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ದೇವಾಲಯದ ವಾರ್ಷಿಕ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಅರ್ಚಕರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಮುಂಜಾನೆಯಿಂದಲೇ ಪವಿತ್ರ ಮಂತ್ರಗಳ ಪಠಣ ಮತ್ತು ದೀಪಗಳನ್ನು ಬೆಳಗಿಸುವುದರೊಂದಿಗೆ ಗಣಪತಿ ಹೋಮ, ಚಂಡಿಕಾ ಹವನ, ಶ್ರೀ ಲಕ್ಷ್ಮೀ ಸತ್ಯನಾರಾಯಣ ಪೂಜೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಮಧ್ಯಾಹ್ನ ಚಂಡಿಕಾ ಹವನ ಪೂರ್ಣಾಹುತಿ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನೆರವೇರಿತು. ಮಹೋತ್ಸವದ ಪ್ರಯುಕ್ತ ಮಂಗಳೂರಿನ ಅರ್ಚಕ ಚಂದ್ರಹಾಸ ಭಟ್ ಅವರ ಮುಂದಾಳತ್ವದಲ್ಲಿ ಲೋಕಕಲ್ಯಾಣಕ್ಕಾಗಿ ಚಂಡಿಕಾಯಾಗವನ್ನು ನೆರವೇರಿಸಲಾಯಿತು. ನೆರೆದಿದ್ದ ಭಕ್ತರು ಸ್ತೋತ್ರಗಳನ್ನು ಪಠಿಸುತ್ತಾ ಭಕ್ತಿಗೀತೆಗಳನ್ನು ಹಾಡಿದರು. ಸಮಾಜದ ಎಲ್ಲಾ ವರ್ಗದ ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು. ಪುರುಷರು, ಮಹಿಳೆಯರು ಮತ್ತು ಮಕ್ಕಳು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ತಮ್ಮ ಪ್ರಾರ್ಥನೆಗಳನ್ನು ಸಲ್ಲಿಸಿದರು. ಹಲವಾರು ಭಕ್ತರು ಮಣ್ಣಿನ ರೂಪದಲ್ಲಿ ಇರುವ ಮೂರ್ತಿಗಳನ್ನು ಹರಕೆಯಾಗಿ ದೇವರಿಗೆ ಅರ್ಪಿಸಿದರು. ಈ ಸಂದರ್ಭ ಕಾಸರಗೋಡಿನ ಮೊಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರು…
ಮಡಿಕೇರಿ ಏ.25 : ಹುಸಿ ಭರವಸೆ, ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ರಾಷ್ಟ್ರ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ‘ಡಬಲ್ ಎಂಜಿನ್’ ಸರ್ಕಾರವನ್ನು ಸೋಲಿಸಿ, ಜಾತ್ಯತೀತ ಮತ್ತು ಜನಪರವಾದ ಪ್ರಜಾಸತ್ತಾತ್ಮಕ ಪಕ್ಷಗಳನ್ನು ಅಧಿಕಾರಕ್ಕೆ ತರಬೇಕೆಂದು ಸಿಪಿಐ(ಎಂಎಲ್)ಆರ್ಐನ ಕೇಂದ್ರ ಸಮಿತಿ ಸದಸ್ಯ ಎಇ.ಎಸ್. ನಿರ್ವಾಣಪ್ಪ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ನಮ್ಮನ್ನಾಳುತ್ತಿರುವ ಸರ್ಕಾರಗಳಿಂದ ಸಂವಿಧಾನ ಅಪಾಯದಲ್ಲಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿದೆ ಎಂದು ಆರೋಪಿಸಿದರು. ಪ್ರಸ್ತುತ ಸ್ಥಿತಿಗತಿಯ ವಿರುದ್ಧ ಸಿಪಿಐ(ಎಂಎಲ್) ಮೂಲಕ ‘ಎದ್ದೇಳು ಕರ್ನಾಟಕ’ ಎನ್ನುವ ಅಭಿಯಾನವನ್ನು ನಡೆಸಲಾಗುತ್ತದೆ. ಆ ಮೂಲಕ ಜನರಿಗೆ ನಿಜ ಸ್ಥಿತಿಯ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದರು. ರಾಮ ರಾಜ್ಯದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದಿಂದ ದೇಶ ವ್ಯಾಪಿ ನಿತ್ಯೋಪಯೋಗಿ ವಸ್ತುಗಳ ಬೆಲೆ ಹೆಚ್ಚಳ, ಜನರ ಮೇಲೆ ತೆರಿಗೆಯ ಹೊರೆ, ರೈತರ ಸಾವು, ಕರಾಳ ಕಾಯ್ದೆಗಳ ಹೇರಿಕೆ, ಶೋಷಿತ ಸಮುದಾಯಗಳ ಮೇಲಿನ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಯಾವುದೇ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಆದಿವಾಸಿ,…
ಮಡಿಕೇರಿ ಏ.25 : ವಿಧಾನಸಭಾ ಚುನಾವಣೆ ಹಿನ್ನೆಲೆ ಆಮ್ ಆದ್ಮಿ ಪಾರ್ಟಿಯ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಸಿ.ಎಸ್.ರವಿಂದ್ರ ಪರ ಬಿರುಸಿನ ಪ್ರಚಾರ ನಡೆಯಿತು. ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಗೋಣಿಕೊಪ್ಪ, ಪೊನ್ನಂಪೇಟೆ, ಕುಟ್ಟ, ಟಿ.ಶೆಟ್ಟಿಗೇರಿ, ಹುದಿಕೇರಿ, ಶ್ರೀಮಂಗಲ ಭಾಗದಲ್ಲ್ಲಿ ಮತಯಾಚಿಸಿದರು. ಪಕ್ಷದ ಯೋಜನೆಗಳ ಕುರಿತು ಜನರಿಗೆ ತಿಳಿಸಿದರು. ಅಭ್ಯರ್ಥಿಯ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು. ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಕಾರ್ಯದರ್ಶಿ ಪೃಥ್ವಿ ಮತ್ತಿತರರು ಈ ಸಂದರ್ಭ ಹಾಜರಿದ್ದರು.
ಮಡಿಕೇರಿ ಏ.25 : ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಏ.29 ರಂದು ಮಡಿಕೇರಿಗೆ ಆಗಮಿಸಲಿದ್ದಾರೆ. ಎರಡು ದಿನಗಳ ವಿಶೇಷ ಪ್ರಚಾರ ಅಭಿಯಾನದ ಮೂಲಕ ರಾಜ್ಯವ್ಯಾಪಿ ರಾಷ್ಟ್ರ ಮತ್ತು ರಾಜ್ಯದ ನಾಯಕರುಗಳು ಮತಯಾಚಿಸಲಿದ್ದಾರೆ ಎಂದು ಬಿಜೆಪಿಯ ಕೊಡಗು ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಮತ್ತು ಕಾಂಗ್ರೆಸ್ ಪಕ್ಷದ ಬೇಜವಾಬ್ದಾರಿ ನಡೆಗಳು ಬಿಜೆಪಿಯ ಗೆಲುವಿಗೆ ಪೂರಕ ವಾತಾವರಣವನ್ನು ಸೃಷ್ಟಿಸಿದೆ ಎಂದರು. 1985 ರ ನಂತರದ ಚುನಾವಣಾ ಇತಿಹಾಸದಲ್ಲಿ ಅಧಿಕಾರದಲ್ಲಿದ್ದ ಪಕ್ಷ ಎರಡನೇ ಬಾರಿಗೆ ಗೆಲುವು ಸಾಧಿಸಿದ ಇತಿಹಾಸವಿಲ್ಲ. ಆದರೆ ಈ ಬಾರಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಇತಿಹಾಸವನ್ನು ಸೃಷ್ಟಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ಪ್ರತಿ ವಿಧಾನಸಭಾ ಕ್ಷೇತ್ರದÀಲ್ಲಿ 1500…
ವಿಶ್ವದಲ್ಲಿ ನಮ್ಮ ಭಾರತವೇ ಅತಿ ಹೆಚ್ಚು ಹಲಸಿನ ಹಣ್ಣು ಬೆಳೆಯುವ ದೇಶವಾಗಿದೆ. ಹಲಸಿನ ಹಣ್ಣಿನ ತೊಳೆಗಳಲ್ಲಿ ಹೇರಳವಾದ ಪ್ರೊಟೀನ್ ಅಂಶ ಇದೆ. ಹಲಸಿನ ಹಣ್ಣು ಕೇವಲ ಮೇಲೆ ನೋಡಲು ಮಾತ್ರ ಒರಟು, ಮುಳ್ಳು ಮುಳ್ಳು ಹಲಸಿನ ಹಣ್ಣಿನಲ್ಲಿ ಉಷ್ಣದ ಪ್ರಭಾವ ಹೆಚ್ಚಿರುತ್ತದೆ. ಹಾಗಾಗಿ ನಮ್ಮ ಆರೋಗ್ಯ ಸಮತೋಲನಗೊಳ್ಳಲು ಸಹಾಯವಾಗುತ್ತದೆ. ಆರೋಗ್ಯ ಪ್ರಯೋಜನಗಳು: ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ – ವಿಟಮಿನ್ ಸಿ ಯನ್ನು ಒಳಗೊಂಡಿರುವ ಹಲಸಿನ ಹಣ್ಣು, ವೈರಲ್ ಮತ್ತು ಬ್ಯಾಕ್ಟೀರಿಯಾ ಸೋಂಕಿನಿಂದ ನಮ್ಮನ್ನು ಸಂರಕ್ಷಿಸುತ್ತದೆ. ಬಿಳಿ ರಕ್ತ ಕೋಶಗಳ ರಚನೆಯನ್ನು ಬೆಂಬಲಿಸುತ್ತಾ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ವಿಟಮಿನ್ ಸಿ ಪ್ರಮುಖ ಪಾತ್ರ ವಹಿಸುತ್ತದೆ. ಒಂದು ಕಪ್ ಹಲಸಿನಹಣ್ಣು ಈ ಶಕ್ತಿಯುತ ಉತ್ಕರ್ಷಣ ನಿರೋಧಕವನ್ನು ದೇಹಕ್ಕೆ ಒದಗಿಸುತ್ತದೆ ವಿಟಮಿನ್ ಸಿ ಯನ್ನು ಒಳಗೊಂಡಂತೆ ಹಲಸಿನ ಹಣ್ಣು, ಲಿಗಾನ್ಸ್, ಐಸೋಫ್ಲೇವನ್ಸ್ ಮತ್ತು ಸಪೋನಿನ್ಸ್ನಂತಹ ಫೈಟೋನ್ಯೂಟ್ರಿಯಂಟ್ಸ್ ಅನ್ನು ದೇಹಕ್ಕೆ ಪೂರೈಸುತ್ತದೆ ಇದು ಕ್ಯಾನ್ಸರ್ ವಿರುದ್ದ ಮತ್ತು ಬೇಗನೇ ಮುಪ್ಪಿನ ಲಕ್ಷಣಗಳನ್ನು ವರ್ಧಿಸುವುದರ ವಿರುದ್ದ ಹೋರಾಡುತ್ತದೆ.…
ನವದೆಹಲಿ: ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಸುಮಾರು ಮೂರು ದಶಕಗಳಷ್ಟು ಹಿಂದಿನ ಶೇ 4ರ ಮೀಸಲಾತಿಯನ್ನು ರದ್ದುಗೊಳಿಸಿದ ಕರ್ನಾಟಕದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದ ವಿವಾದಾತ್ಮಕ ನಿರ್ಧಾರದ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿ ಸರ್ಕಾರದ ಆದೇಶಕ್ಕೆ ತಡೆ ನೀಡಿ, ವಿಚಾರಣೆಯನ್ನು ಮೇ 9 ಕ್ಕೆ ಮುಂದೂಡಿದೆ.
ವಿರಾಜಪೇಟೆ 25 : ನಗರದಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಣಗೊಳಿಸಲು ಪುರಸಭೆಯು ವಿಧಿಸಿರುವ ಶುಲ್ಕ ಅವೈಜ್ಞಾನಿಕವಾಗಿದೆ ಅಲ್ಲದೆ ಮೂಲಭೂತ ಸೌಕರ್ಯಗಳನ್ನು ನೀಡದೆ ತೆರಿಗೆ ಏರಿಕೆಗೊಳಿಸಿರುವುದು ಖಂಡನೀಯ ಎಂದು ನಾಗರಿಕ ಸಮಿತಿ ಸಂಚಾಲಕ ಇ.ಆರ್.ದುರ್ಗಾ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದರು. ಗೋಣಿಕೊಪ್ಪ ರಸ್ತೆಯಲ್ಲಿರುವ ಸಮಿತಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಗರದಲ್ಲಿ ವಾಹನ ನಿಲುಗಡೆಗೆ ಶುಲ್ಕ ವಿಧಿಸುವ ಕ್ರಮವನ್ನು ಪುರಸಭೆಯ ಆಡಳಿತರೂಢ ಸದಸ್ಯರು ಒಪ್ಪಿರುವುದು ಅವೈಜ್ಞಾನಿಕ. ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ಪ್ರತಿರೋಧ ವ್ಯಕ್ತಪಡಿಸಿದರು ಆದೇಶ ಜಾರಿಗೆ ಮಾಡಲಾಗಿದೆ ಎಂದು ಆರೋಪಿಸಿದರು. ವಾಹನ ಶುಲ್ಕ ವಿಧಿಸುವುದರಿಂದ ವಾಹನ ದಟ್ಟಣೆ ನಿಯಂತ್ರಣ ಮಾಡಬಹುದಾಗಿದೆ ಎಂದು ಸಭೆಯು ಒಪ್ಪಿಗೆ ಸೂಚಿಸಿ ಶುಲ್ಕ ವಿಧಿಸುವ ಕ್ರಮ ಜಾರಿಗೆಗೊಳಿಸಿದೆ. ನಗರದ ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆ ಅವ್ಯವಸ್ಥೆಯಿಂದ ಕೂಡಿದೆ. ಪಾದಚಾರಿಗಳಿಗೆ ಸಂಚಾರ ಮಾಡಲು ಯೋಗ್ಯವಾದ ಪಾದಚಾರಿ ರಸ್ತೆಗಳು ಇಲ್ಲಾ, ಒಳಚರಂಡಿ ವ್ಯವಸ್ಥೆಯು ಕ್ರಮಬದ್ಧವಾಗಿ ನಿರ್ವಹಣೆಯಿಲ್ಲಾ. ವಾಹನ ಮಾಲೀಕರು ಎಲ್ಲೆಂದರಲ್ಲಿ ವಾಹನ ನಿಲುಗಡೆಗೊಳಿಸಿ ಇತರ ಪ್ರದೇಶಗಳಿಗೆ ತೆರಳುವುದು ಸಾಮಾನ್ಯವಾಗಿದೆ. ನೂತನವಾಗಿ…






