ಮಡಿಕೇರಿ ಮಾ.17 : ಕೊಡಗು ಜಿಲ್ಲೆಯಾದ್ಯಂತ ಕ.ವಿ.ಪ್ರ.ನಿ.ನಿ.ರವರ ಕೋರಿಕೆಯ ಮೇರೆಗೆ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಮಾರ್ಚ್, 19 ರಂದು ಬೆಳಗ್ಗೆ 11 ರಿಂದ ಸಂಜೆ 3 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕೊಡಗು ಜಿಲ್ಲಾ ವ್ಯಾಪ್ತಿಯ ಗ್ರಾಹಕರು/ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಮಾ.17 : ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ಅರಣ್ಯ ಇಲಾಖೆ ವತಿಯಿಂದ ಕೊಡಗು ಜಿಲ್ಲೆಯ ಹಾರಂಗಿಯಲ್ಲಿ ಉದ್ದೇಶಿತ ‘ಜೀವ ವೈವಿಧ್ಯ ಔಷಧ ಉದ್ಯಾನ’ ನಿರ್ಮಾಣ ಕಾರ್ಯಕ್ಕೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಭೂಮಿ ಪೂಜೆ ನೆರವೇರಿಸಿದರು. ಹಾರಂಗಿ ವೃಕ್ಷೋದ್ಯಾನವನ ಆವರಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಶಿಲಾನ್ಯಾಸ ಫಲಕ ಅನಾವರಣಗೊಳಿಸಿ, ಸಾಂಕೇತಿಕವಾಗಿ ಔಷಧಿಯ ಗಿಡಗಳನ್ನು ನೆಡುವ ಮೂಲಕ ಉದ್ದೇಶಿತ ಯೋಜನೆಗೆ ಚಾಲನೆ ನೀಡಿದರು. ಔಷಧೀಯ ಸಸ್ಯಗಳನ್ನು ಬೆಳೆಸಿ, ಅವುಗಳ ಮಹತ್ವವನ್ನು ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ತಿಳಿಸುವ ನಿಟ್ಟಿನಲ್ಲಿ 2.5 ಹೆಕ್ಟೇರ್ ಪ್ರದೇಶದಲ್ಲಿ ‘ಜೀವ ವೈವಿಧ್ಯ ಔಷಧ ಉದ್ಯಾನ’ ನಿರ್ಮಿಸಲು ಮಂಡಳಿ ಮುಂದಾಗಿದೆ. ಚಾಲನೆ ನೀಡಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅಪ್ಪಚ್ಚು ರಂಜನ್ ಅವರು ಔಷಧ ಉದ್ಯಾನ ನಿರ್ಮಾಣಕ್ಕೆ ಹಾರಂಗಿ ಉತ್ತಮ ಜಾಗ. ಔಷಧಿ ಸಸ್ಯಗಳನ್ನು ಉಳಿಸುವ ಕಾರ್ಯ ನಿರಂತರವಾಗಿ ಆಗಬೇಕು. ನಮ್ಮ ಪರಿಸರ ಉಳಿದರೆ ಮಾತ್ರ ಜೀವರಾಶಿಗಳು ಬದುಕಲು ಸಾಧ್ಯ ಎಂದರು. ಭಾರತೀಯರು ಪ್ರಕೃತಿ ಆರಾಧಕರು.…
ಮಡಿಕೇರಿ ಮಾ.17 : ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ ವತಿಯಿಂದ ಕೊಡಗಿನ ಏಲಕ್ಕಿ ಬೆಳೆಗಾರರಿಂದಲೇ ಖರೀದಿಸಿದ ಅಪ್ಪಟ ಏಲಕ್ಕಿಯಿಂದ ಘಮಘಮಿಸುವ ಆಕರ್ಷಕ ಏಲಕ್ಕಿ ಹಾರ ತಯಾರಿಸಿ ಶೀಘ್ರ ಮಾರುಕಟ್ಟೆಗೆ ಬಿಡಲಾಗುವುದು ಎಂದು ಸಂಘದ ಅಧ್ಯಕ್ಷ ಸೂದನ ಎಸ್.ಈರಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗಿನ ಏಲಕ್ಕಿ ವಿಶ್ವ ಪ್ರಸಿದ್ಧವಾಗಿದ್ದು, ಸಭೆ-ಸಮಾರಂಭ ಮತ್ತಿತರ ಕಾರ್ಯಕ್ರಮಗಳಲ್ಲಿ ಏಲಕ್ಕಿ ಹಾರವನ್ನು ಬಳಸುವುದರಿಂದ ಬೆಳೆಗಾರರಿಗೂ ಸಹಕಾರಿಯಾಗಲಿದೆ. ಏಲಕ್ಕಿ ಹಾರವನ್ನು ಹೂವಿನ ಹಾರದಂತೆ ಎಸೆಯುವ ಅಗತ್ಯವಿಲ್ಲ, ಇದು ಸಂಗ್ರಹ ಯೋಗ್ಯವಾಗಿದೆ. ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೂ ಏಲಕ್ಕಿ ಹಾರವನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಕೊಡಗಿನ ಬೆಳೆಗಾರರರು ಬೆಳೆದ ಗುಣಮಟ್ಟದ ಏಲಕ್ಕಿಯಿಂದ ಉತ್ತಮ ಮತ್ತು ಆಕರ್ಷಕ ಏಲಕ್ಕಿ ಹಾರವನ್ನು ತಯಾರಿಸಲಾಗುವುದು. ಸ್ಥಳೀಯ ಹಾರ ತಯಾರಕರನ್ನು ಗುರುತಿಸಿ ಅಗತ್ಯವಿದ್ದರೆ ಸಂಘದಿಂದಲೇ ತರಬೇತಿ ನೀಡಲಾಗುವುದು. ವಿವಿಧ ಗಾತ್ರದ ಹಾರ ತಯಾರಿಸಿ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಏಲಕ್ಕಿ ಮಾರಾಟ ಸಹಕಾರ…
ಮಡಿಕೇರಿ ಮಾ.17 : ಪರಿಶಿಷ್ಟ ಜಾತಿ ಮತ್ತು ಪಂಗಡದ ಹೆಸರಿನಲ್ಲಿ ನಕಲಿ ಪ್ರಮಾಣ ಪತ್ರ ಪಡೆದು ಸರಕಾರಿ ಸೌಲಭ್ಯ ಪಡೆಯುತ್ತಿರುವ ವಂಚಕರನ್ನು ಪತ್ತೆಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಜೆ.ಆರ್.ಪಾಲಾಕ್ಷ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಜಿಲ್ಲೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರದ ಹಾವಳಿ ಹೆಚ್ಚಾಗುತ್ತಿದ್ದು, ಪರಿಶಿಷ್ಟರ ಮೀಸಲಾತಿ ಸೌಲಭ್ಯವನ್ನು ವಂಚಕರು ಪಡೆದುಕೊಳ್ಳುತ್ತಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯ ಲಕ್ನಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಪರಿಶಿಷ್ಟ ಜಾತಿಗೆ ಸೇರಿದವರೆಂದು ಸುಳ್ಳು ಜಾತಿ ದೃಢೀಕರಣ ಪತ್ರ ಪಡೆದು ಸರ್ಕಾರಿ ಯೋಜನೆಯಡಿ ಮನೆಯ ಪಕ್ಕದಲ್ಲೇ ರಸ್ತೆ ಮಾಡಿಸಿಕೊಂಡಿದ್ದಾರೆ. ಸಣ್ಣ ಕೈಗಾರಿಕಾ ಇಲಾಖೆಯಿಂದ ಹಾಗೂ ಅಂಬೇಡ್ಕರ್ ನಿಗಮದಿಂದ ಸಾಲ ಸೌಲಭ್ಯ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ. ಅಲ್ಲದೆ ಕೊಡ್ಲಿಪೇಟೆಯ ವ್ಯಕ್ತಿಯೊಬ್ಬರು ಸುಳ್ಳು ದೃಢೀಕರಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಅಲ್ಲಿನ ಗ್ರಾಮಸ್ಥರು ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರೂ ಯಾವುದೇ…
ಮಡಿಕೇರಿ ಮಾ.17 : ಹೊದ್ದೂರು ಗ್ರಾ.ಪಂ ವ್ಯಾಪ್ತಿಯ ಪಾಲೇಮಾಡು ಕಾನ್ಶಿರಾಂ ನಗರದ ಬಡಜನತೆಗೆ ಅಕ್ರಮ ಸಕ್ರಮದಡಿ ಜಾಗ ಮಂಜೂರು ಮಾಡದಿದ್ದಲ್ಲಿ ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಲೇಮಾಡು ನಿವಾಸಿ ಪಿ.ಎ.ಧನಂಜಯ ಭೂಮಾಲೀಕರು ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಾಗವನ್ನು 30 ವರ್ಷಗಳಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ತಯಾರಿರುವ ಸರ್ಕಾರ ಬಡವರ ಸ್ವಾಧೀನದಲ್ಲಿರುವ 5- 10 ಸೆಂಟ್ ಜಾಗಕ್ಕೆ ಯಾಕೆ ಹಕ್ಕುಪತ್ರ ನೀಡುತ್ತಿಲ್ಲವೆಂದು ಪ್ರಶ್ನಿಸಿದರು. ಒಂದು ಸಣ್ಣ ಸೂರಿಗಾಗಿ 94ಸಿ, 94ಸಿಸಿ ಯಡಿ ಅರ್ಜಿ ಸಲ್ಲಿಸಿ ವರ್ಷಗಟ್ಟಲೆ ಅಲೆದಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಅಕ್ರಮ ಸಕ್ರಮದಡಿ ನೀಡಲಾಗಿರುವ ಬಡವರ ಅರ್ಜಿ ತಿರಸ್ಕೃತವಾಗುತ್ತಿದ್ದು, ಸರ್ಕಾರ ಬಡವರ ಬಗ್ಗೆ ಮಲತಾಯಿ ಧೋರಣೆ ಪ್ರದರ್ಶಿಸುತ್ತಿದೆ. ಕಳೆದ 15 ವರ್ಷಗಳಿಂದ ಪಾಲೇಮಾಡಿನ ಕಾನ್ಶಿರಾಂ ನಗರದಲ್ಲಿ 260 ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಹಕ್ಕುಪತ್ರ ಮತ್ತು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿವೆ. ಈ ಬಗ್ಗೆ ಅನೇಕ ವರ್ಷಗಳಿಂದ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುತ್ತಾ…
ಮಡಿಕೇರಿ ಮಾ.17 : ಶತಶತಮಾನಗಳ ಇತಿಹಾಸವಿರುವ ಹಾಗೂ ಉದ್ಭವ ಶಿವಲಿಂಗವೆಂಬ ಖ್ಯಾತಿ ಹೊಂದಿರುವ ಪೊನ್ನಂಪೇಟೆ ತಾಲ್ಲೂಕಿನ ಕುಂದಾ ಮುಗುಟಿಗೇರಿ ಗ್ರಾಮದಲ್ಲಿರುವ “ಬೊಟ್ಟಿಯತ್ ನಾಡ್” ಈಶ್ವರ ದೇವಾಲಯದ (ನಾಡ್ ದೇವಸ್ಥಾನ) ವಾರ್ಷಿಕೋತ್ಸವವು ಅವಭೃತ ಸ್ನಾನದೊಂದಿಗೆ (ದೇವ ಕುಳಿಪೋ) ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ಕುಂದಾ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಈಶ್ವರ ದೇವಾಲಯಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಈ ಭಾಗದ ಆರು ಗ್ರಾಮಗಳಾದ ಮುಗುಟಿಗೇರಿ, ಕುಂದಾ, ಈಚೂರ್, ಹುದೂರ್, ಹಳ್ಳಿಗಟ್ಟ್ ಹಾಗೂ ಅರ್ವತೋಕ್ಲು ಗ್ರಾಮಗಳಿಗೆ ಸೇರಿರುವ ನಾಡ್ ದೇವಸ್ಥಾನ ಇದಾಗಿದೆ. ಬೊಟ್ಟಿಯತ್ ನಾಡ್ ಈಶ್ವರ ದೇವಸ್ಥಾನವೆಂದು ಖ್ಯಾತಿ ಪಡೆದಿರುವ ಈ ದೇವಾಲಯದಲ್ಲಿ ನಿತ್ಯ ಪೂಜೆಯ ಜೊತೆಗೆ, ವಿವಿಧ ಪೂಜಾ ಕೈಂಕರ್ಯಗಳು ಪ್ರತಿನಿತ್ಯ ನಡೆಯುತ್ತದೆ. ಪ್ರತಿವರ್ಷ ಮಾರ್ಚ್ ತಿಂಗಳಲ್ಲಿ ವಾರ್ಷಿಕ ಹಬ್ಬ ನಡೆಯಲಿದ್ದು, ಈ ಬಾರಿ ಕೊಡಿಮರೆ ನಿಲ್ಲಿಸುವುದರ ಮೂಲಕ ಹಬ್ಬಕ್ಕೆ ಚಾಲನೆ ನೀಡಲಾಗಿತ್ತು. ಉತ್ಸವದ ಪ್ರತಿನಿತ್ಯ ಮಧ್ಯಾಹ್ನ ಹಾಗೂ ರಾತ್ರಿ ನಿರಂತರ ಅನ್ನಸಂತರ್ಪಣೆ ಕಾರ್ಯಕ್ರಮದೊಂದಿಗೆ ಹರಕೆ ಬೊಳಕ್, ಅಲಂಕಾರ ಪೂಜೆ ಸೇರಿದಂತೆ 9ದಿನಗಳ ಕಾಲ ವಿವಿಧ ಪೂಜಾ…
ಮಡಿಕೇರಿ ಮಾ.17 : ಜಿಲ್ಲಾಡಳಿತ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯ ಫಲಾನುಭವಿಗಳ ಸಮ್ಮೇಳನದ ಜೊತೆಗೆ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ಹಿನ್ನೆಲೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ಮಾ.18 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ಸಂಚಾರ ಮತ್ತು ವಾಹನ ನಿಲುಗಡೆ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸ್ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಅವರು ತಿಳಿಸಿದ್ದಾರೆ. ಬದಲಾವಣೆ ಮಾಡಲಾಗಿರುವ ಸ್ಥಳಗಳ ಮಾಹಿತಿ ಇಂತಿದೆ: ಮಡಿಕೇರಿ ನಗರದ ಮೇಜರ್ ಮಂಗೇರಿರ ಮುತ್ತಣ್ಣ ವೃತ್ತದಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ರಸ್ತೆಯ ಎರಡು ಬದಿಗಳಲ್ಲಿ ವಾಹನ ನಿಲುಗಡೆ ನಿಷೇದಿಸಲಾಗಿದೆ. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗಳೂರು ರಸ್ತೆಯ ದೊಡ್ಡ ತಿರುವು ವರೆಗೆ (ಎಂಆರ್ಎಫ್ ಟೈರ್ ಶಾಪ್) ವರೆಗೆ ವಾಹನ ನಿಲುಗಡೆ ನಿಷೇದಿಸಲಾಗಿದೆ, ನಗರದ ಮೇಜರ್ ಮಂಗೇರಿರ ಮುತ್ತಣ್ಣ ವೃತ್ತದಿಂದ ರಾಜಸೀಟ್…
ನಾಪೋಕ್ಲು ಮಾ.16 : ಸಮೀಪದ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ಸೇವಾ ಕಾರ್ಯಪಡೆ ಸಂಘದ ಸದಸ್ಯರು ನಾಪೋಕ್ಲು ಮಡಿಕೇರಿ ಮುಖ್ಯ ರಸ್ತೆಯ ಬದಿಗಳಲ್ಲಿ ತುಂಬಿಕೊಂಡಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು. ನಾಪೋಕ್ಲು ಬಳಿಯ ಚೆರಿಯಪರಂಬು ಜನರಲ್ ಕೆ. ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅಪ್ಪಚ್ಚೆಟ್ಟೋಳಂಡ ಕುಟುಂಬಸ್ಥರು ನಡೆಸಲಿರುವ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ನಾಯಕರು ಹಾಗೂ ಗಣ್ಯವ್ಯಕ್ತಿಗಳು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸೇವಾ ಕಾರ್ಯಪಡೆಯ ಸದಸ್ಯರು ನಾಪೋಕ್ಲು -ಮಡಿಕೇರಿ ಮುಖ್ಯ ರಸ್ತೆಯ ಕೊಟ್ಟಮುಡಿ ಕಾವೇರಿನದಿ ಸೇತುವೆ ಬಳಿಯಿಂದ ಚೆರಿಯಪರಂಬು ಜನರಲ್ ಕೆ. ಎಸ್.ತಿಮ್ಮಯ್ಯ ಕ್ರೀಡಾಂಗಣದವರೆಗಿನ ರಸ್ತೆಯ ಎರಡು ಬದಿಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸುಚಿಗೊಳಿಸಿದರು. ಕಾರ್ಯದಲ್ಲಿ ಶ್ರೀ ಮಕ್ಕಿ ಶಾಸ್ತಾವು ಸೇವಾ ಕಾರ್ಯ ಪಡೆಯ ಅಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ, ಉಪಾಧ್ಯಕ್ಷ ಮಿಟ್ಟು ಸೋಮಯ್ಯ, ಸದಸ್ಯರಾದ ದೀಕ್ಷಿತ್ ದೇವಯ್ಯ, ಸುಧಿ ಅಪ್ಪಯ್ಯ, ಗಿರೀಶ್, ವಿಪನ್, ವಿಜು, ಲಕ್ಷ್ಮಿಕಾಂತ್, ರಾಜೇಶ್, ಅನಿಲ್ ತಮ್ಮಯ್ಯ,…
ಮಡಿಕೇರಿ ಮಾ.17 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಅಂಗವಾಗಿ ಎರಡುದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಿದವು. ಮಾ.16 ರಂದು ಸಂಜೆ ಪ್ರಸಾದ ಸಿದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಿಷ್ಣು ಪೂಜೆ, ದಿಶಾ ಬಲಿ (ದಿಕ್ಷಾಲಕ ಬಲಿ), ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು. ಇಂದು ಮುಂಜಾನೆಯಿಂದಲೇ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ನಾಗಪೂಜೆ, ದೇವಿಗೆ ಅಲಂಕಾರ ಪೂಜೆ ಜರುಗಿದವು. ಮಧ್ಯಾಹ್ನ ಮಹಾ ಪೂಜೆ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ನಗರದ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.
ಮಡಿಕೇರಿ ಮಾ.17 : ಕಳೆದ 12 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಗುರುತಿಸಿಕೊಂಡಿದ್ದ ವಿರಾಜಪೇಟೆಯ ಜೋಕಿಂ ರಾಡ್ರಿಕ್ಸ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕೆ.ಪಿ.ಸಿ.ಸಿ.ಕಾನೂನು ಘಟಕದ ರಾಜ್ಯ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.






