ಲೇಖಕ: admin

ಮಡಿಕೇರಿ ಮಾ.17 :  ಕರ್ನಾಟಕ ರಾಜ್ಯ ಕಾಂಗ್ರೆಸ್ ಸಾಮಾಜಿಕ ನ್ಯಾಯ ವಿಭಾಗಕ್ಕೆ ಉಪಾಧ್ಯಕ್ಷರಾಗಿ ಕಿರುಗೂರು ಗ್ರಾಮದ ಕೊರಕುಟ್ಟೀರ ಸರ ಚಂಗಪ್ಪ  ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ  ಡಿ.ಕೆ.ಶಿವಕುಮಾರ್ ಆದೇಶದ ಮೇರೆಗೆ ನೇಮಿಸಲಾಗಿದೆ ಎಂದು  ಕರ್ನಾಟಕ ರಾಜ್ಯ ಕಾಂಗ್ರೆಸ್ ಸಾಮಾಜಿಕ ನ್ಯಾಯ ವಿಭಾಗದ ಅಧ್ಯಕ್ಷ  ದ್ವಾರಕನಾಥ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊರಕುಟ್ಟೀರ ಸರ ಚಂಗಪ್ಪ  ಕಿರುಗೂರು ಗ್ರಾಮ ಪಂಚಾಯಿತಿ ಸದಸ್ಯರಾಗಿ 1999 ರಿಂದ  2015ರವರಗೆ ಸತತ ಮೂರುಬಾರಿ ಆಯ್ಕೆಯಾಗಿ,  ಗ್ರಾ.ಪಂ  ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಕೊಡಗು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ, ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ, ಕೃಷಿ ಪತ್ತಿನ ಸಹಕಾರ ಸಂಘ ಪೊನ್ನಂಪೇಟೆ ಶಾಖೆಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.  ಪ್ರಸ್ತುತ  ಇವರು ಕೊಡಗು ಹೆಗ್ಗಡೆ ಸಮಾಜದ ಉಪಾಧ್ಯಕ್ಷರಾಗಿದ್ದಾರೆ. ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷರಾದ ಪಡಿಞರಂಡ ಅಯ್ಯಪ್ಪನವರು ಕೊಡಗು ಹೆಗ್ಗಡೆ ಸಮಾಜದ ಆಡಳಿತ ಮಂಡಳಿ ಪರವಾಗಿ ಅಭಿನಂದನೆ ಸಲ್ಲಿಸಿದರು.

Read More

ಕುಶಾಲನಗರ ಮಾ.17 : ಕೂಡೂಮಂಗಳೂರು ಗ್ರಾ.ಪಂ ನ‌ ನವಗ್ರಾಮದ ಅಂಗನವಾಡಿಯನ್ನು 1.6 ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಕಾಮಗಾರಿಯನ್ನು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್  ಪರಿಶೀಲನೆ ನಡೆಸಿದರು. ಅಂಗನವಾಡಿ ಕೇಂದ್ರಕ್ಕೆ ಮಳೆಗಾಲದಲ್ಲಿ ತೊಂದರೆಯಾಗುತ್ತಿದ್ದು, ಆಹಾರ ಸಂಗ್ರಹಣಾ ಕೊಠಡಿಯಲ್ಲಿ ನೀರು ಸೋರುವಿಕೆಯಿಂದ ಬಹಳ ಸಮಸ್ಯೆಯಾಗುತ್ತಿತ್ತು. ಈ ಹಿನ್ನಲೆ ನವಗ್ರಾಮದ ಅಂಗನವಾಡಿ ಕೇಂದ್ರವನ್ನು 1.6 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.‌  ಜಿ‌.ಪಂ 1.2 ಲಕ್ಷ ರೂ ಹಾಗೂ ತಾ.ಪಂ ನ 60 ಸಾವಿರ ರೂ ಗಳನ್ನು ಅಂಗನವಾಡಿ ಕೇಂದ್ರದ ಅಭಿವೃದ್ಧಿಗೆ ವ್ಯಯಿಸಲಾಗುತ್ತಿದೆ. ಆಹಾರ ಸಾಮಗ್ರಿಗಳ ಸಂಗ್ರಹಣಾ ಕೊಠಡಿಗೆ ಮೇಲ್ಬಾವಣಿ ಅಳವಡಿಕೆ, ಅಂಗನಾಡಿ ಕೇಂದ್ರದ ಕಾಂಪೌಂಡ್ ಗೆ ಮೆಷ್ ಅಳವಡಿಕೆ‌, ಇನ್ನಿತರ ದುರಸ್ತಿ ಕಾರ್ಯ ಹಾಗೂ ಬಣ್ಣ ಬಳಿಯುವ ಕೆಲಸವನ್ನು ನಡೆಸಲಾಗುತ್ತಿದೆ.  ಈ ಸಂದರ್ಭ ಅಂಗನವಾಡಿ ಶಿಕ್ಷಕಿ ಕಲಾವತಿರವರು,‌ ಅಂಗನವಾಡಿಯ ಸಣ್ಣ ಪುಟ್ಟ ಸಮಸ್ಯೆಗಳ ಬಗ್ಗೆ ಸದಸ್ಯ‌ ಕೆ.ಬಿ.ಶಂಶುದ್ಧೀನ್ ಅವರ ಗಮನಕ್ಕೆ ತಂದರು.  ಮಕ್ಕಳ ಸಂಖ್ಯೆ ಕಡಿಮೆ ಇರುವಾಗ ಅಡುಗೆ ಮಾಡಲು ಸಣ್ಣ ಕುಕ್ಕರ್ ನ‌ ಅವಶ್ಯಕತೆ…

Read More

ನಾಪೋಕ್ಲು ಮಾ.17 : ಕಾಫಿ ತೋಟಕ್ಕೆ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದ ಘಟನೆ ಕಕ್ಕಬೆ ಗ್ರಾ.ಪಂ ವ್ಯಾಪ್ತಿಯ ಮರಂದೋಡ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಾಜಿ ಸೈನಿಕ ಬಿಲ್ಲವರ ಪೂವಪ್ಪ ಅವರ ಕಾಫಿ ತೋಟ ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಆಕಸ್ಮಿಕವಾಗಿ ಬಿದ್ದ ಬೆಂಕಿ ಇವರ ತೋಟಕೆ ವ್ಯಾಪಿಸಿದ್ದು, ಸುಮಾರು ಮೂರು ಎಕರೆಯಷ್ಟು ತೋಟ ಸುಟ್ಟು ಭಸ್ಮವಾಗಿದೆ. ಕಿಡಿಗೇಡಿಗಳು ಈ ಕೃತ್ಯವನ್ನು ನಡೆಸಿರಬಹುದು ಶಂಕಿಸಲಾಗಿದೆ. ವರದಿ : ದುಗ್ಗಳ ಸದಾನಂದ.  

Read More

ನಾಪೋಕ್ಲು ಮಾ.17 : ಮಡಿಕೇರಿಯ ನೆರಳಿನ ಮನೆ ತನಲ್ ನಲ್ಲಿರುವ ಆಶ್ರಿತರೊಂದಿಗೆ ಮರಗೋಡು ಶೌರ್ಯ ಘಟಕ ಸದಸ್ಯರು ಒಂದು ದಿನ ಕಳೆದರು. ಸ್ನಾನಕ್ಕೆ ಸ್ವಲ್ಪ ಪ್ರಮಾಣದ ಕಟ್ಟಿಗೆಯ ವ್ಯವಸ್ಥೆಮಾಡಿ ಹಣ್ಣು ತಿಂಡಿಗಳನ್ನು ನೀಡಿ ಸ್ವಲ್ಪ ಸಮಯವನ್ನು ನೆರಳಿನ ಮನೆಯಲ್ಲಿ ವೃದ್ದರಿಗಾಗಿ ಮೀಸಲಿಟ್ಟರು. ಈ ಸೇವಾಕಾರ್ಯದಲ್ಲಿ ಸಂಯೋಜಕಿ ಮಮತಾ ಸೇವಾಪ್ರತಿನಿಧಿ ಲತಾ ಸ್ವಯಂ ಸೇವಕರಾದ ಧನಂಜಯ, ಐತಪ್ಪ , ವಿಶ್ವನಾಥ, ಪ್ರಸನ್ನ, ಸುನೀತಾ , ಸುಂದರಿ, ರಮ್ಯಾ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.  

Read More

ನಾಪೋಕ್ಲು ಮಾ.17 : 23ನೇ ಕೊಡವ ಕುಟುಂಬಗಳ ನಡುವಿನ ಅಪ್ಪಚೆಟ್ಟೋಳಂಡ ಹಾಕಿ ಉತ್ಸವಕ್ಕೆ ನಾಲ್ಕುನಾಡು ಸಜ್ಜಾಗುತ್ತಿದೆ. ಮಾ.18 ರಂದು ಉದ್ಘಾಟನೆಗೊಳ್ಳಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ವಿವಿಧ ಮಂತ್ರಿಗಳು, ಚುನಾಯಿತ ಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ. ಈ ನಿಟ್ಟಿನಲ್ಲಿ ಕ್ರೀಡಾಕೂಟ ಜರುಗಲಿರುವ ಇಲ್ಲಿಗೆ ಸಮೀಪದ ಚೆರಿಯಪರಂಬುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಸ್ಥಳ ಪರಿಶೀಲಿಸಿ ಸಾಧಕ ಬಾಧಕಗಳ ಬಗ್ಗೆ ಆಯೋಜಕರಲ್ಲಿ ಚರ್ಚಿಸಿ ಕೆಲವೊಂದು ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಈ ಸಂದರ್ಭ ಡಿ ವೈಎಸ್ ಪಿ ಜಗದೀಶ್, ವೃತ ನಿರಿಕ್ಷಕ ಶೇಖರ್, ನಾಪೋಕ್ಲು ಠಾಣಾಧಿಕಾರಿ ಇ. ಮಂಜುನಾಥ್, ಹಾಕಿ ಉತ್ಸವದ ಆಯೊಜಕರಾದ ಅಪ್ಪಚೆಟ್ಟೋಳಂಡ ಮನುಮುತ್ತಪ್ಪ, ಅಪ್ಪಚೆಟ್ಟೋಳಂಡ ನವೀನ್ ಅಪ್ಪಯ್ಯ, ನಾಯಕಂಡ ದೀಪಕ್ ಚಂಗಪ್ಪ, ಕೇಲೇಟಿರ ದೀಪು ದೇವಯ್ಯ, ಕೆಲೇಟೀರ ಸುಬ್ರಮಣಿ, ಕೊಂಡಿರ ಚಂಗಪ್ಪ ಹಾಕಿ ಉತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಮಾ.17 : ಬಹುಭಾಷಾ ಚಿತ್ರನಟಿ ಕೊಡಗಿನ ಹರ್ಷಿಕಾ ಪೂಣಚ್ಚ ಅವರಿಗೆ ಭೋಜ್‍ಪುರಿ ಭಾಷೆಯಲ್ಲಿನ ಚಿತ್ರದ ಅಭಿನಯಕ್ಕಾಗಿ ಪ್ರಶಸ್ತಿ ದೊರೆತಿದೆ. ಭೋಜ್‍ಪುರಿ ಭಾಷಾ ಸಿನಿಮಾ ‘ಹಮ್ ಹೆ ರಾಜಿ ಪ್ಯಾರ್ ಕೆ’ ಚಿತ್ರದಲ್ಲಿ ಇವರು 2012ರಲ್ಲಿ ಮೊದಲ ಬಾರಿಗೆ ನಟಿಸಿದ್ದರು. ಮೊದಲ ಚಿತ್ರದಲ್ಲೇ ನೀಡಿರುವ ಉತ್ತಮ ಅಭಿನಯಕ್ಕಾಗಿ ‘ಬೆಸ್ಟ್ ಡೆಬ್ಯೂ ಆಕ್ಟ್ರೆಸ್’ ಪ್ರಶಸ್ತಿ ನೀಡಲಾಗಿದೆ. ದುಬಾಯಿಯಲ್ಲಿ ಇಂಟರ್ ನ್ಯಾಷನಲ್ ಭೋಜ್‍ಪುರಿ ಫಿಲಂ ಅವಾರ್ಡ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹರ್ಷಿಕಾ ಐ.ಬಿ.ಎಫ್.ಎ.ಪ್ರಶಸ್ತಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಭೋಜ್‍ಪುರಿ ಭಾಷಾ ಚಿತ್ರ ತಂಡದ ಬಹುತೇಕ ಪ್ರಮುಖ ನಟ-ನಟಿಯರು, ಬಾಲಿವುಡ್ ನಟ ಗೋವಿಂದ್ ಸೇರಿದಂತೆ ಬಾಲಿವುಡ್‍ನ ತಾರೆಯರು ಪಾಲ್ಗೊಂಡಿದ್ದರು.

Read More

ಪುನೀತ್ ರಾಜ್​ಕುಮಾರ್ ಅವರ ಜನ್ಮದಿನದ  ಪ್ರಯುಕ್ತ  ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿರುವ ಪುನೀತ್ ಸಮಾಧಿಗೆ  ಪುನೀತ್ ಸೋದರ ನಟ ರಾಘವೇಂದ್ರ ರಾಜ್ ಕುಮಾರ್ ಕುಟುಂಬಸ್ಥರು, ಪುನೀತ್ ಪುತ್ರಿ ವಂದಿತಾ ತೆರಳಿ ಅವರ ಇಷ್ಟದ ತಿನಿಸುಗಳು, ಕೇಕ್ ಇಟ್ಟು ಕತ್ತರಿಸಿ, ಪೂಜೆ ಸಲ್ಲಿಸಿ  ಗೌರವ ಸಲ್ಲಿಸಿದ್ದಾರೆ. ಈ ವೇಳೆ ಪುನೀತ್ ಅಭಿಮಾನಿಗಳು ಸಹ ಹಾಜರಿದ್ದರು. ಸಮಾಧಿಗೆ ಪೂಜೆ: ಅಶ್ವಿನಿ ಪುನೀತ್ ರಾಜ್ ಕುಮಾರ್, ನಟ ಶಿವರಾಜ್ ಕುಮಾರ್ ಕುಟುಂಬ ಸೇರಿದಂತೆ ಇತರರು ಸಮಾಧಿ ಬಳಿ ಬಂದು ಪೂಜೆ ಸಲ್ಲಿಕೆ ಮಾಡಲಿದ್ದಾರೆ.

Read More

ಮಡಿಕೇರಿ ಮಾ.16 : ನಗರದ ರಸ್ತೆಗಳ ದುರಸ್ತಿ ಕಾರ್ಯ ಆಮೆಗತಿಯಲ್ಲಿ ಸಾಗುತ್ತಿದ್ದು, ಜನಪ್ರತಿನಿಧಿಗಳಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಆಸಕ್ತಿ ಇಲ್ಲವೆಂದು ನಗರಸಭಾ ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಸ್ತೆಗಳ ದುರಸ್ತಿಗೆಂದು ಭೂಮಿಪೂಜೆ ನಡೆದು ಗುದ್ದಲಿ ಸವಿಯಿತೇ ಹೊರತು ನಿರೀಕ್ಷಿತ ಮಟ್ಟದಲ್ಲಿ ಡಾಂಬರೀಕರಣ ಕಾರ್ಯ ನಡೆಯುತ್ತಿಲ್ಲ. ನಗರಸಭೆಯ 23 ವಾರ್ಡ್ ಗಳ ಸದಸ್ಯರ ಬೇಡಿಕೆಗೆ ಅನುಗುಣವಾಗಿ ಅನುದಾನ ಲಭಿಸುತ್ತಿಲ್ಲ. ನಗರದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಗುಂಡಿ ಬಿದ್ದ ರಸ್ತೆಗಳಿಂದ ಅಪಾಯ ಎದುರಾಗುತ್ತಿದೆ, ಕೆಲವು ಬಡಾವಣೆಗಳಲ್ಲಿ ಮಾತ್ರ ಡಾಂಬರೀಕರಣ ಮಾಡಲಾಗಿದೆ. ಕಾಂಕ್ರೀಟ್ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿದೆ. ನಿರಂತರ ಭೂಮಿಪೂಜೆ ಮಾಡುವ ಮೂಲಕ ಜನರ ಕಣ್ಣೊರೆಸುವ ತಂತ್ರ ಅನುಸರಿಸಲಾಗುತ್ತಿದೆ. ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರದ ರಸ್ತೆಗಳು ಹೀನಾಯ ಸ್ಥಿತಿಯಲ್ಲಿರುವುದರಿಂದ ಪ್ರವಾಸಿಗರು ಕೂಡ ಬೇಸರ ಪಟ್ಟುಕೊಳ್ಳುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಜನಪ್ರತನಿಧಿಗಳು ರಸ್ತೆ ಅಭಿವೃದ್ಧಿ ಬಗ್ಗೆ ಹೆಚ್ಚಿನ ಆಸಕ್ತಿ ತೋರುತ್ತಿಲ್ಲ, ಕಾಮಗಾರಿ ಯಾವ ಗುಣಮಟ್ಟದಲ್ಲಿದೆ ಎಂದು ಪರಿಶೀಲಿಸುತ್ತಿಲ್ಲ. ಜನಹಿತ…

Read More

ಮಡಿಕೇರಿ ಮಾ.16 : ರಸ್ತೆ ದುರಸ್ತಿಗೆಂದು ಸಾಲು ಸಾಲು ಭೂಮಿಪೂಜೆ ನೆರವೇರಿಸುವ ಮೂಲಕ ಜನರ ಕಣ್ಣಿಗೆ ಮಣ್ಣೆರೆಚುವ ಕಾರ್ಯವನ್ನು ನಗರಸಭೆ ಮಾಡುತ್ತಿದೆ ಎಂದು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಬೆಳ್ಯಪ್ಪ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರದ ಎಲ್ಲಾ ವಾರ್ಡ್ಗಳ ರಸ್ತೆಗಳನ್ನು ತಕ್ಷಣ ದುರಸ್ತಿ ಪಡಿಸದಿದ್ದಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ರಸ್ತೆಗಳೆಲ್ಲವೂ ಸಂಪೂರ್ಣವಾಗಿ ಹೊಂಡಗುoಡಿಗಳಾಗಿವೆ, ವಾಹನಗಳು ಮಾತ್ರವಲ್ಲದೆ ಪಾದಾಚಾರಿಗಳ ಸಂಚಾರಕ್ಕೂ ಅಡಚಣೆಯಾಗಿದೆ. ದ್ವಿಚಕ್ರ ವಾಹನ ಸವಾರರು ರಸ್ತೆ ಗುಂಡಿ ತಪ್ಪಿಸುವ ಸಂದರ್ಭ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿದೆ. ಚುನಾವಣೆ ಸಮೀಪಿಸಿತು ಎನ್ನುವ ಕಾರಣಕ್ಕೆ ಕೇವಲ ಭೂಮಿಪೂಜೆಗೆ ಅಭಿವೃದ್ಧಿಯನ್ನು ಸೀಮಿತಗೊಳಿಸುತ್ತಿರುವ ಜನಪ್ರತಿನಿಧಿಗಳು ಗುದ್ದಲಿಗೆ ಬೆಲೆ ಇಲ್ಲದಂತೆ ಮಾಡಿದ್ದಾರೆ. ರಸ್ತೆಗಳ ಮರು ಡಾಂಬರೀಕರಣಕ್ಕೆ ಕೋಟಿ ಕೋಟಿ ಹಣ ಬಂದಿದೆ ಎಂದು ಹೇಳಿಕೆಗಳನಷ್ಟೇ ನೀಡುತ್ತಿದ್ದಾರೆ. ಆದರೆ ಮರು ಡಾಂಬರೀಕರಣ ಕಾರ್ಯ ಮಾಡದೆ ತೇಪೆ ಹಾಕಲಾಗುತ್ತಿದೆ. ಕಾಂಕ್ರೀಟ್ ರಸ್ತೆಗಳಿಗೂ ಡಾಂಬರಿನ ತೇಪೆ ಹಾಕುವ…

Read More

ಕುಶಾಲನಗರ ಮಾ.16 : ದಲಿತ ಯುವತಿಯ ಅನುಮಾನಾಸ್ಪದ ಸಾವಿಗೆ ಸಂಬoದಿಸಿದoತೆ ಯುವತಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ಯುವತಿಯ ಕುಟುಂಬಸ್ಥರು ಹಾಗೂ ದಲಿತ ಸಂಘಟನೆಗಳ ಪ್ರಮುಖರು ಯುವಕನ ಮನೆ ಮುಂಭಾಗ ಯುವತಿಯ ಶವವನ್ನಿಟ್ಟು ಪ್ರತಿಭಟನೆ ನಡೆಸಿದರು. ಅಂತರ್ಜಾತಿ ವಿವಾಹವಾಗಿದ್ದ ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಗ್ರಾಮದ ಅಕ್ಷಿತಾ ಎಂಬಾಕೆ ಪತಿಯ ಮನೆ ಸೇರಿದ ನಾಲ್ಕೇ ದಿನದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಳು. ಕೊಲೆ ಎಂದು ಆರೋಪಿಸಿ, ಯುವತಿಯ ಕುಟುಂಬಸ್ಥರು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆ ವಿವಾಹವಾದ ಯುವಕ ಹೇಮಂತ್ ಹಾಗೂ ಆತನ ತಂದೆ, ತಾಯಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೇಮಂತ್ ಕ್ರಿಮಿನಾಶಕ ಸೇವಿಸಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಈ ನಡುವೆ ಇಂದು ಈತನ ತಾಯಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತಂದೆಯನ್ನು ಇಲ್ಲಿಯವರೆಗೆ ಬಂಧಿಸಿಲ್ಲವೆoದು ಅಸಮಾಧಾನ ವ್ಯಕ್ತಪಡಿಸಿದ ಅಕ್ಷಿತಾ ಕುಟುಂಬಸ್ಥರು, ಯುವಕನ ಮನೆ ಮುಂದೆ ಮೃತ ಶರೀರವನ್ನು ಇಟ್ಟು ಪ್ರತಿಭಟನೆ ನಡೆಸಿದರು. ದಲಿತ ಸಂಘಟನೆಗಳ ಪ್ರಮುಖರು ಇವರ ಬೆಂಬಲಕ್ಕೆ ನಿಂತರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ…

Read More