ಮಡಿಕೇರಿ ಏ.24 : ತಳಭಾಗದಿಂದ ನೋಡಿದರೆ ಸುತ್ತಲೂ ಕಾಡು., ಕಾಫಿ ತೋಟಗಳ ಮಧ್ಯೆ ತಿರು ತಿರುಗಿ ಹೋಗಿರುವ ಅಂಕು ಡೊಂಕಾದ ದಾರಿ., ಸೇರಬೇಕಾದ ಜಾಗ ದೂರ.., ಅಬ್ಬಾ ಅಷ್ಟೊಂದು ದೂರ ಇದ್ಯಾ., ಹೇಗಪ್ಪ ಹತ್ತೊದು..? ಸುಡುತ್ತಿರುವ ಬಿಸಿಲು ಬೇರೆ.., ಹೆಗಲ ಮೇಲೊಂದು ಬ್ಯಾಗು…, ಯೋಚಿಸುತ್ತಿರುವಂತೆಯೇ ನೋಡ ನೋಡುತ್ತಲೇ ತಂಡೊಪತಂಡವಾಗಿ ಎಲ್ಲರೂ ಹತ್ತಿಯೇ ಬಿಟ್ಟರು., ಆರು ವರ್ಷದ ಪುಟಾಣಿಯಿಂದ ಹಿಡಿದು ಎಪ್ಪತ್ತುವರ್ಷದವರೆಗಿನವರು ಕೂಡ ಯಾವುದೇ ಆಯಾಸವಿಲ್ಲದೆ ಬೆಟ್ಟವನ್ನೇರಿ ತಂಪಾದ ಪ್ರದಶದಲ್ಲಿ ದಣಿವಾರಿಸಿಕೊಂಡರು. ಅಷ್ಟೇ ಸಲೀಸಾಗಿ ಬೆಟ್ಟವವನ್ನಿಳಿದು ಚಾರಣವನ್ನು ಪೂರ್ಣಗೊಳಿಸಿದರು..! ಮಡಿಕೇರಿಯ ವಾಂಡರ್ಸ್ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಸ್ಮರಣಾರ್ಥ ಏರ್ಪಡಿಸಲಾಗಿರುವ ಉಚಿತ ಬೇಸಿಗೆ ಕ್ರೀಡಾ ಶಿಬಿರದ ಅಂಗವಾಗಿ ಶಿಬಿರಾರ್ಥಿಗಳಿಗೆ ಚಾರಣ ಹಮ್ಮಿಕೊಳ್ಳಲಾಗಿತ್ತು. ಮಡಿಕೇರಿಯಿಂದ ಬಸ್ಸಿನಲ್ಲಿ ಹೊರಟು ಕರಡದಿಂದ ಕಾಲ್ನಡಿಗೆ ಮೂಲಕ ಮಲೆತಿರಿಕೆ ಬೆಟ್ಟಕ್ಕೆ ಚಾರಣವಿತ್ತು. ಸುಮಾರು 120 ಮಕ್ಕಳು ಹಾಗೂ ಪೋಷಕರು ಮತ್ತು ತರಬೇತುದಾರರಾದಿಯಾಗಿ 135 ಮಂದಿ ಪಾಲ್ಗೊಂಡಿದ್ದರು. ಸುಡುವ ಬಿಸಿಲನ್ನು ಲೆಕ್ಕಿಸದೆ ಮಕ್ಕಳು ಹಾಗೂ ಪೋಷಕರು ಬೆಟ್ಟವನ್ನೇರಿದರು. ಕೆಲವರಿಗೆ ಚಾರಣದ…
ಲೇಖಕ: admin
ಮಡಿಕೇರಿ ಏ.24 : ಕರ್ನಾಟಕ ವಿಧಾನಸಭಾ ಚುನಾವಣೆ-2023 ಹಿನ್ನೆಲೆಯಲ್ಲಿ ಮತದಾರರ ಶಿಕ್ಷಣ ಮತ್ತು ಜಾಗೃತಿ(ಸ್ವೀಪ್) ಕಾರ್ಯಕ್ರಮದಡಿ ಕೊಡಗು ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಸ್ತ್ರೀಶಕ್ತಿ ಒಕ್ಕೂಟಗಳ ವತಿಯಿಂದ ಏ. 29 ರಂದು ಪೊನ್ನಂಪೇಟೆ ಕೆಪಿಎಸ್ ಶಾಲೆಯಲ್ಲಿ, ಏ.30 ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಹಾಗೂ ಮೇ, 1 ರಂದು ಸೋಮವಾರಪೇಟೆಯ ಸ್ತ್ರೀಶಕ್ತಿ ಭವನದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆವರೆಗೆ ರಂಗೋಲಿ ಸ್ಪರ್ಧೆ ನಡೆಯಲಿದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ. ಸ್ಪರ್ಧೆಯ ವಿವರ ಇಂತಿದೆ: ಕೊಡಗು ಮತ್ತು ಮತದಾನ ವಿಷಯ ಕುರಿತಂತೆ ರಂಗೋಲಿ ರಚಿಸಬಹುದು. 18 ವರ್ಷ ಒಳಪಟ್ಟ ಹಾಗೂ 18 ವರ್ಷ ಮೇಲ್ಪಟ್ಟ ವಯೋಮಾನದವರಿಗೆ ಪ್ರತ್ಯೇಕವಾಗಿ 2 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವಿರುತ್ತದೆ. ಭಾಗವಹಿಸಿದ…
ಮಡಿಕೇರಿ ಏ.24 : ಮಡಿಕೇರಿ ನಗರದಲ್ಲಿರುವ ಶ್ರೀ ಓಂಕಾರೇಶ್ವರ ಮತ್ತು ಶ್ರೀ ಆಂಜನೇಯ ದೇವಾಲಯಗಳಲ್ಲಿ ರೂಢಿ ಸಂಪ್ರದಾಯದಂತೆ ಏಪ್ರಿಲ್, 26 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ‘ಪ್ರತಿಷ್ಠಾ ವಾರ್ಷಿಕೋತ್ಸವ’ ವನ್ನು ಹಮ್ಮಿಕೊಳ್ಳಲಾಗಿದೆ. ದೇವಾಲಯದಲ್ಲಿ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ಸಹಯೋಗದಿಂದ ಶ್ರೀ ಗಣಪತಿ ಹೋಮ ಹಾಗೂ ಕಲಶಾಭಿಷೇಕ ಪೂಜೆಗಳು ದೇವಾಲಯದ ವತಿಯಿಂದ ನಡೆಯಲಿದೆ. ಸಾರ್ವಜನಿಕ ಭಕ್ತಾಧಿಗಳು ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಿ ಪ್ರಸಾದ ಸ್ವೀಕರಿಸುವಂತೆ ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎಲ್.ದೇವರಾಜು ಅವರು ಕೋರಿದ್ದಾರೆ.
ಮಡಿಕೇರಿ ಏ.24 : ಕೊಡಗು ಜಿಲ್ಲೆಯ ಉಪ ನೋಂದಣಿ ಕಚೇರಿಗಳಲ್ಲಿ ಕಾವೇರಿ-2 ತಂತ್ರಾಂಶ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಚಾಲನೆ ನೀಡಿದರು. ನಗರದ ಉಪ ನೋಂದಾಣಾಧಿಕಾರಿ ಕಚೇರಿಯಲ್ಲಿ ಕಾವೇರಿ-2 ತಂತ್ರಾಂಶ ಅನುಷ್ಠಾನಕ್ಕೆ ಚಾಲನೆ ನೀಡಿ ಮಾಹಿತಿ ಪಡೆದರು. ಜಿಲ್ಲಾ ನೋಂದಣಾಧಿಕಾರಿ ಸಿದ್ದೇಶ ಅವರು ಮಾತನಾಡಿ ಕಾವೇರಿ-2.0 ತಂತ್ರಾಂಶದಲ್ಲಿ ದಸ್ತಾವೇಜಿನ ನೋಂದಣಿಯಲ್ಲಿ ಆನ್ಲೈನ್ ಮೂಲಕ ಸೇವೆಗಳನ್ನು ಪಡೆಯಲು https://kaveri.karnataka.gov.in ಪೋರ್ಟಲ್ನಲ್ಲಿ ಯೂಸರ್ ಐಡಿ ಸೃಜಿಸಿ ಲಾಗಿನ್ ಆಗಬೇಕು ಎಂದರು. ನಂತರ ‘ದಸ್ತಾವೇಜು ನೋಂದಣಿ’ ಸೇವೆಯನ್ನು ಪೋರ್ಟಲ್ನಲ್ಲಿ ಆಯ್ಕೆ ಮಾಡಿಕೊಂಡು ತಂತ್ರಾಂಶ ಕೇಳುವ ಮಾಹಿತಿಯನ್ನು ನಮೂದು ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ಉಪ ನೋಂದಣಾಧಿಕಾರಿಗಳಿಗೆ ಸಲ್ಲಿಸಬೇಕು. ನೋಂದಾಯಿಸಬೇಕಾದ ದಸ್ತಾವೇಜನ್ನು 5 ಎಂಬಿ ಮೀರದಂತೆ, ಪಿಡಿಎಫ್ ಮಾದರಿಯಲ್ಲಿ ಸ್ಕ್ಯಾನ್ ಮಾಡಿಕೊಳ್ಳಬೇಕು. ಅಪ್ಲೋಡ್ ಮಾಡಲಾದ ದಸ್ತಾವೇಜು ಮತ್ತು ಭೌತಿಕ ಪ್ರತಿಗಳಿಗೂ ಯಾವುದೇ ವ್ಯತ್ಯಾಸಗಳಿರಬಾರದು ಎಂದು ತಿಳಿಸಿದರು. ಸಲ್ಲಿಸಿರುವ ಮಾಹಿತಿಯನ್ನು ಉಪ ನೋಂದಣಾಧಿಕಾರಿಗಳು ಪರಿಶೀಲಿಸಿ ದಸ್ತಾವೇಜಿನ ನೋಂದಣಿಗೆ ಪಾವತಿಸಬೇಕಾಗಿರುವ ಶುಲ್ಕಗಳ ವಿವರವನ್ನು ಆನ್ಲೈನ್ ಮುಖಾಂತರ ನಿಮ್ಮ ಲಾಗಿನ್ಗೆ ತಿಳಿಸುತ್ತಾರೆ.…
ಮಡಿಕೇರಿ ಏ.24 : ಡಾ.ರಾಜ್ ಕುಮಾರ್ ಅವರು ಪೌರಾಣಿಕ, ಸಾಮಾಜಿಕ, ಹಾಡುಗಾರಿಕೆ ಹೀಗೆ ಚಿತ್ರರಂಗದ ವಿವಿಧ ಕೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು. 200 ಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ಅಭಿನಯಿಸಿ, ಪದ್ಮಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, ಕರ್ನಾಟಕ ರತ್ನ ಹೀಗೆ ಹತ್ತು ಹಲವು ಪ್ರಶಸ್ತಿಗಳು ಡಾ.ರಾಜ್ಕುಮಾರ್ ಅವರಿಗೆ ಹುಡುಕಿ ಬಂದವು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸರಳವಾಗಿ ನಡೆದ ಡಾ.ರಾಜ್ಕುಮಾರ್ ಅವರ 95ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾ.ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು. ಡಾ.ರಾಜ್ಕುಮಾರ್ ಅವರ ಸರಳತೆ, ಕಲಾಪ್ರತಿಭೆ ಮತ್ತು ಜೀವನ ಶೈಲಿಯಿಂದ ಚಿತ್ರರಂಗದಲ್ಲಿ ಅತ್ಯುನ್ನತ ಸ್ಥಾನಕ್ಕೆ ಬೆಳೆದರು ಎಂದು ವಿವರಿಸಿದರು. 1959 ರಲ್ಲಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಡಾ.ರಾಜ್ಕುಮಾರ್ ಕನ್ನಡ ಚಲನಚಿತ್ರ ರಂಗದಲ್ಲಿ ಸಾರ್ವಕಾಲಿಕ, ಚಲನಚಿತ್ರ ರಂಗದಲ್ಲಿ ಉತ್ತುಂಗಕ್ಕೆ ಏರಿದರೂ ಸಹ ಸರಳ ವ್ಯಕ್ತಿತ್ವವನ್ನು ಅಳವಡಿಸಿಕೊಂಡಿದ್ದರು. ಸಾಮಾಜಿಕ…
ಮಡಿಕೇರಿ ಏ.24 : ಜಾತ್ಯಾತೀತ ಜನತಾದಳದ ಜಿಲ್ಲಾ ವಕ್ತಾರ ಸೂದನ ಎಸ್.ಈರಪ್ಪ ಅವರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಳೆದ 25 ವರ್ಷಗಳಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಪಕ್ಷದಲ್ಲಿ ಸಂಘಟನೆಯ ದೌರ್ಬಲ್ಯ, ಗುಂಪುಗಾರಿಕೆ ಹಾಗೂ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾರ್ಯಕರ್ತರ ಕಡೆಗಣನೆಯಿಂದ ಬೇಸತ್ತು ಪಕ್ಷಕ್ಕೆ ಮತ್ತು ವಕ್ತಾರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಇನ್ನು ಮುಂದೆ ಪಕ್ಷಾತೀತವಾಗಿ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯನಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಹೇಳಿದ್ದಾರೆ.
ಮಡಿಕೇರಿ ಏ.24 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಐರಿ ಜನಾಂಗದ ಕ್ರೀಡಾಕೂಟದಲ್ಲಿ ಕೆದಮುಳ್ಳೂರು ಗ್ರಾಮದ ಮುಲ್ಲೈರಿರ ತಂಡ ಸಮಗ್ರ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಒಟ್ಟು ಏಳು ವಿಭಾಗಗಳಲ್ಲಿ ಪ್ರಶಸ್ತಿ ಜಯಿಸಿದ ಮುಲ್ಲೈರೀರ ತಂಡ ಒಟ್ಟು 120 ಅಂಕಗಳನ್ನು ಕಲೆ ಹಾಕಿ ಚೊಚ್ಚಲ ಚಾಂಪಿಯನ್ ಆಗಿ ಹೊರ ಹೊಮ್ಮಿತು. ಈ ಮೂಲಕ 30 ಸಾವಿರ ರೂ ಮೌಲ್ಯದ ಅತ್ಯಾಕರ್ಷಕ ಐನ್ಮನೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಪುರುಷರ ಕ್ರಿಕೆಟ್ನಲ್ಲಿ ಬಲ್ಲಮಾವಟಿ ಐರೀರ ತಂಡ ಎಂಟನೇ ಬಾರಿಗೆ ಚಾಂಪಿಯನ್ ಆಗಿ ಹೊರ ಹೊಮ್ಮಿತು. ಫೈನಲ್ ಪಂದ್ಯದಲ್ಲಿ ಬಲ್ಲಮಾವಟಿ ತಂಡ ಮತ್ತು ಕಳೆದ ಬಾರಿಯ ಚಾಂಪಿಯನ್ ತಟ್ಟಂಡ ಬೊಮ್ಮಂಜಿಕೆರೆ ತಂಡ ಮುಖಾಮುಖಿಯಾಯಿತು. ಮೊದಲು ಬ್ಯಾಟ್ ಮಾಡಿದ ಬಲ್ಲಮಾವಟಿ ತಂಡ 8 ಓವರ್ ಗಳಲ್ಲಿ 99 ಬೃಹತ್ ಗುರಿ ನೀಡಿತು. ಈ ಮೊತ್ತವನ್ನು ಬೆನ್ನಟ್ಟಿದ ತಟ್ಟಂಡ ತಂಡ ನಿಗಧಿತ ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 87 ರನ್ ಗಳಿಸಲಷ್ಟೇ…
ಮಡಿಕೇರಿ ಏ.24 : ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ವತಿಯಿಂದ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಏಕ ಕಾಲದಲ್ಲಿ ಏ.25 ಮತ್ತು 26 ರಂದು ವಿಶೇಷ ಮಹಾಪ್ರಚಾರ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಮಹೇಶ್ ಜೈನಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎರಡು ದಿನಗಳು ಕೊಡಗಿನಾದ್ಯಂತ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಅಭಿಯಾನ ನಡೆಯಲಿದ್ದು, ಪತ್ರಿಕಾಗೋಷ್ಠಿಗಳು, ಹೋಬಳಿ ಹಾಗೂ ತಾಲೂಕು ಕೇಂದ್ರಗಳಲ್ಲಿ ರೋಡ್ ಶೋ, ಸಾರ್ವಜನಿಕ ಸಭೆಗಳು, ಮನೆ ಮನೆ ಸಂಪರ್ಕ ಮೂಲಕ ಮತ ಯಾಚನೆ, ಪ್ರಮುಖ ಕಾರ್ಯಕರ್ತರು, ಸಮುದಾಯ ಮುಖಂಡರು, ಫಲಾನಭವಿಗಳು ಹಾಗೂ ಪ್ರಮುಖರೊಂದಿಗೆ ಸಭೆ, ಸ್ಥಳೀಯ ಪ್ರತಿಮೆಗಳಿಗೆ ಮಾಲಾರ್ಪಣೆ, ದೇವಾಲಯ, ಮಠ, ಮಂದಿರಗಳಿಗೆ ಭೇಟಿ, ಬೀದಿ, ಪ್ರಮುಖ ಸ್ಥಳಗಳು ಮತ್ತು ಆಯಾ ಕಟ್ಟಿನ ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಈ ವಿಶೇಷ ಮಹಾ ಅಭಿಯಾನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ…
ಮಡಿಕೇರಿ ಏ.24 : ವಿರಾಜಪೇಟೆಯಲ್ಲಿ ಏ.25 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ರಕ್ತದ ಗುಂಪು ಪರೀಕ್ಷೆ ನಡೆಯಲಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಕೊಡಗು ಜಿಲ್ಲಾಸ್ಪತ್ರೆ ಮತ್ತು ವಿರಾಜಪೇಟೆ ರೋಟರಿ ಕ್ಲಬ್ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ, ರೆಡ್ಕ್ರಾಸ್ ಮತ್ತು ರೆಡ್ ರಿಬ್ಬನ್ ಘಟಕದ ಸಂಯುಕ್ತಶ್ರಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಪೂರ್ವಹ್ನ 10.30 ಗಂಟೆಗೆ ನಡೆಯಲಿದೆ. ಕಾರ್ಯಕ್ರಮವನ್ನು ವಿರಾಜಪೇಟೆ ರೋಟರಿ ಕ್ಲಬ್ ಅಧ್ಯಕ್ಷ ಹರಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸ.ಪ್ರ.ದ.ಕಾಲೇಜು ಪ್ರಾಂಶುಪಾಲ ಡಾ.ಕೆ.ಸಿ.ದಯಾನಂದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಸಭಾಪತಿ ರವೀಂದ್ರ ರೈ, ಮಡಿಕೇರಿ ರಕ್ತನಿಧಿ ಕೇಂದ್ರದ ಅಧಿಕಾರಿ ಡಾ.ಕರುಂಬಯ್ಯ, ಕೊಡಗು ಯುವ ರೆಡ್ಕ್ರಾಸ್ ಘಟಕದ ಅಧ್ಯಕ್ಷ ಎಂ.ಧನಂಜಯ, ವಿರಾಜಪೇಟೆ ರೋಟರಿ ಕ್ಲಬ್ ಕಾರ್ಯದರ್ಶಿ ಡಾ.ನರಸಿಂಹ ಪಾಲ್ಗೊಳ್ಳಲಿದ್ದು, ವಿರಾಜಪೇಟೆ ಸ.ಪ್ರ,ದ.ಕಾಲೇಜು ಐ.ಕ್ಯೂ.ಎ.ಸಿ.ಸಂಚಾಲಕ ಪಿ.ಎನ್.ನಾಗರಾಜಮೂರ್ತಿ ಉಪಸ್ಥಿತರಿರಲಿದ್ದಾರೆ.
ಮಡಿಕೇರಿ ಏ.24 : ಮಡಿಕೇರಿ ನಗರದ ವಾರ್ಡ್ ನಂಬರ್ 20ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಪರ ಬಿರುಸಿನ ಪ್ರಚಾರ ನಡೆಯಿತು. ಬೂತ್ ಅಧ್ಯಕ್ಷ ರವಿಗೌಡ ಅವರ ನೇತೃತ್ವದಲ್ಲಿ ನಗರದ ವಾರ್ಡ್ ನಂಬರ್ 20ರ ಹೊಸ ಬಡಾವಣೆ ಹಾಗೂ ಚಾಮುಂಡೇಶ್ವರಿ ನಗರದ ಮನೆಮನೆಗಳಿಗೆ ತೆರಳಿ ಪಕ್ಷದ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಿ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಡಾ.ಮಂತರ್ ಗೌಡ ಅವರ ಗೆಲುವಿಗೆ ಸಹಕಾರ ನೀಡಿ ಈ ಬಾರಿ ಬದಲಾವಣೆ ಬಯಸುವಂತೆ ಮತದಾರರಲ್ಲಿ ಮನವಿ ಮಾಡಲಾಯಿತು. ಈ ಸಂದರ್ಭ ಬೂತ್ ನ ಬಿ.ಎಲ್.ಎ ಗಳಾದ ಹೆಚ್.ಯು.ಲಿಲ್ಲಿ, ಕಾಂಗ್ರೆಸ್ ಮಹಿಳಾ ಪ್ರಧಾನ ಕಾರ್ಯದರ್ಶಿ ಮೀನಾಜ್ ಪ್ರವೀಣ್, ಸದಸ್ಯರುಗಳಾದ ಸತೀಶ್ ಪೈ, ರಮ್ಯಾ, ದೇವಕಿ ಹಾಗೂ ಹಲವು ಬೂತ್ ಸದಸ್ಯರು ಹಾಜರಿದ್ದರು.






