ಲೇಖಕ: admin

ಮಡಿಕೇರಿ ಮಾ.16 : ದೇಶ ಮತ್ತು ಸಮಾಜದ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಪಕ್ಷದ ವಕ್ತಾರರು ಹಾಗೂ ವಿಧಾನಪರಿಷತ್ ಸದಸ್ಯರಾದ ತೇಜಸ್ವಿನಿ ರಮೇಶ್ ಅಭಿಪ್ರಾಯಪಟ್ಟಿದ್ದಾರೆ. ಕುಶಾಲನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಎಸ್ ಸಿ ಮೋರ್ಚಾ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಸ್ ಸಿ ಸಮುದಾಯವನ್ನು ಮುಖ್ಯ ವಾಹಿನಿಗೆ ತರಲು ಹಲವು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತಂದಿದೆ ಎಂದರು. ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನೇ ತರುವ ನಿಟ್ಟಿನಲ್ಲಿ ಎಲ್ಲರ ಬೆಂಬಲ ಅಗತ್ಯ ಎಂದರು. ಈ ಸಂದರ್ಭ ಮಾತನಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಜಿ.ಬೋಪಯ್ಯ ಕಾಂಗ್ರೆಸ್ ಸರ್ಕಾರದ ಸಂದರ್ಭ ಎಸ್‌ಸಿ ಸಮುದಾಯವನ್ನು ಭಯದ ವಾತಾವರಣದಲ್ಲಿ ಇರಿಸುವ ಮೂಲಕ ಕೇವಲ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದರು ಎಂದು ಹೇಳಿದರು. ಬಿಜೆಪಿ ಸರಕಾರ ಬಂದ ನಂತರ ಡಾ. ಅಂಬೇಡ್ಕರ್ ಅವರಿಗೆ ಹೆಚ್ಚಿನ ಗೌರವ ಸಂದಿದೆ ಎಂದರು. ಬಿಜೆಪಿ ಯಾವುದೇ ವರ್ಗಕ್ಕೆ ಸೀಮಿತ ಪಕ್ಷ ಅಲ್ಲ ಎಂದ ಕೆ.ಜಿ ಬೋಪಯ್ಯ,…

Read More

ಮಡಿಕೇರಿ ಮಾ.16 :   ಯುವ ಪತ್ರಕರ್ತ ಹಾಗೂ ಬರಹಗಾರ ಕೆ.ಎಂ ಇಸ್ಮಾಯಿಲ್ ಕಂಡಕರೆ ಅವರ, ಮಾವನ ಮಗಳ ಪತಿ ಕಬಡಕ್ಕೇರಿ ಮುಸ್ಲಿಂ ಜಮಾಹತ್ ಕಮಿಟಿ ಕಾರ್ಯದರ್ಶಿ ಹಾಶಿಮ್ ಕಬಡಕ್ಕೇರಿ  ಅನಾರೋಗ್ಯದಿಂದ ನಿಧಾನರಾಗಿದ್ದಾರೆ. ಇವರ ಹೆಸರಿನಲ್ಲಿ ಶುಕ್ರವಾರ ಮಯ್ಯತ್ ನಮಾಜ್ ಹಾಗೂ ಕುರುಆನ್ ಪಠಿಸಿ, ವಿಶೇಷ ದುಆ ಮಾಡಬೇಕಾಗಿ ಪತ್ರಕರ್ತ ಇಸ್ಮಾಯಿಲ್ ಕಂಡಕರೆ ಮನವಿ ಮಾಡಿದ್ದಾರೆ.

Read More

ಶನಿವಾರಸಂತೆ ಮಾ.16 : ಅಂಗಡಿಗಳಿಗೆ ಹೊರಗಡೆಯಿಂದ ಸರಕು ಸಾಮಾನುಗಳನ್ನು ತರುವ ವಾಹನಗಳಿಗೆ ಸುಂಕ ವಸೂಲಾತಿ ಮಾಡದಂತೆ  ಕೊಡ್ಲಿಪೇಟೆ ವರ್ತಕರ ಸಂಘ ಮನವಿ ಮಾಡಿದೆ. ವರ್ತಕರ ಸಂಘದ ಅಧ್ಯಕ್ಷ ಎಚ್.ಸಿ.ಯತೀಶ್‌ಕುಮಾರ್ ನೇತೃತ್ವದಲ್ಲಿ  ಕೊಡ್ಲಿಪೇಟೆ ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಹೂವಯ್ಯ ಅವರಿಗೆ  ಮನವಿ ಪತ್ರ  ಸಲ್ಲಿಸಿದ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು,   ಕೊಡ್ಲಿಪೇಟೆ ಪಟ್ಟಣದಲ್ಲಿ ಅಂಗಡಿಗಳಿಗೆ ಸರಕು ಸಾಮಾಗ್ರಿಗಳನ್ನು ತರುತ್ತಿರುವ ವಾಹನಗಳಿಗೆ ದುಬಾರಿ ಶುಲ್ಕ ವಸೂಲಾತಿ ಮಾಡುತ್ತಿದ್ದು, ಇದರಿಂದ ಅಂಗಡಿಗಳಿಗೆ ಸಾಮಾಗ್ರಿ ಸರಬರಾಜು ಮಾಡುವ ವಾಹನಗಳು ಬರುತ್ತಿಲ್ಲ ಹಾಗೂ ಹೊಟೇಲ್ , ಇತರೆ ಅಂಗಡಿಗಳಿಗೆ ಭೇಟಿ ನೀಡುವ ಟೂರಿಸ್ಟ್ ವಾಹನಗಳಿಗೂ ಸಹ ಸುಂಕ ವಿಧಿಸುತ್ತಿರುವುದರಿಂದ ವಾಹನಗಳು ಬರುತ್ತಿಲ್ಲ. ಈ ಕಾರಣದಿಂದ ವರ್ತಕರಿಗೆ ವ್ಯಾಪಾರ ವ್ಯವಹಾರ ಮಾಡಲು ಕಷ್ಟವಾಗುತ್ತಿದೆ ಎಂದು ವರ್ತಕರು ಬೇಸರ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ಗ್ರಾ.ಪಂ.ಯವರು ಅಂಗಡಿಗಳಿಗೆ ಸರಕು ಸಾಮಾಗ್ರಿ ಸರಬರಾಜು ಮಾಡುವ ವಾಹನಗಳಿಗೆ ಮತ್ತು ಟೂರಿಸ್ಟ್ ವಾಹನಗಳಿಗೆ ಸುಂಕವನ್ನು ವಿಧಿಸದೆ ವರ್ತಕರಿಗೆ ಅನುಕೂಲ ಮಾಡಿಕೊಡುವಂತೆ  ಆಗ್ರಹಿಸಿದ್ದಾರೆ. ಈ ಸಂದರ್ಭ  ವರ್ತಕರ ಸಂಘದ ಪ್ರಮುಖರಾದ ಎಚ್.ಎಂ.ದಿವಾಕರ್,…

Read More

ಮಡಿಕೇರಿ ಮಾ.16 :  ಶನಿವಾರಸಂತೆ- ಕೊಡಗು ಹಾಸನ ಜಿಲ್ಲಾ ಗಡಿಭಾಗದಲ್ಲಿರುವ ಕೊಡಗು ಜಿಲ್ಲೆಗೆ ದಿನನಿತ್ಯದ ಒಡನಾಟ ಹೊಂದಿರುವ ಸಕಲೇಶಪುರ ತಾಲೂಕಿಗೆ ಸೇರಿದ ಈಚಲಬೀಡು ಗ್ರಾಮದಲ್ಲಿ ಮಾ.19ರಂದು ಸಕಲೇಶಪುರ ತಾಲೂಕು ಮಟ್ಟದ ಮಲೆನಾಡು ಜಾನಪದ ಉತ್ಸವ ನಡೆಯಲಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಸಕಲೇಶಪುರ ತಾಲೂಕು ಘಟಕದ ಅಧ್ಯಕ್ಷ ದೊಡ್ಡ ಮನೆ ಆನಂದ್ ಹೇಳಿದರು. ಶನಿವಾರಸಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಗ್ರಾಮೀಣ ಪ್ರದೇಶದ ಜಾನಪದ ಸೊಗಡು ದೇಶಿಯ ಸಂಸ್ಕೃತಿಯಾಗಿದ್ದು, ಈ ನಿಟ್ಟಿನಲ್ಲಿ ಕರ್ನಾಟಕ ಜಾನಪದ ಪರಿಷತ್ ವತಿಯಿಂದ ತಾಲೂಕು ಜಿಲ್ಲಾ ರಾಜ್ಯ ಮಟ್ಟದ ಜಾನಪದ ಉತ್ಸವಗಳನ್ನು ನಡೆಸಲಾಗುತ್ತಿದೆ. ಈ ದಿಶೆಯಲ್ಲಿ ಸಕಲೇಶಪುರ ತಾಲೂಕು ಘಟಕದ ವತಿಯಿಂದ ಮಾ.19ರಂದು ಕೊಡಗು ಹಾಸನ ಗಡಿ ಭಾಗದಲ್ಲಿರುವ ಈಚಲಬೀಡು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಮಟ್ಟದ ಮಲೆನಾಡು ಜಾನಪದ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಮಲೆನಾಡು ಜಾನಪದ ಉತ್ಸವ ದೊಡ್ಡ ಮಟ್ಟದಲ್ಲಿ ನಡೆಯುತ್ತದೆ ಜಿಲ್ಲೆ ಅಕ್ಕಪಕ್ಕದ ಜಿಲ್ಲೆಯ ಕಡೆಗಳಿಂದಲೂ ಜಾನಪದ ಉತ್ಸವದಲ್ಲಿ ಜನರು ಪಾಲ್ಗೊಳ್ಳಲಿದ್ದು ಉತ್ಸವದಲ್ಲಿ…

Read More

ಮಡಿಕೇರಿ ಮಾ.16 : ಮಡಿಕೇರಿಯಲ್ಲಿ ನಡೆಯುವ ಫಲಾನುಭವಿಗಳ ಸಮ್ಮೇಳನಕ್ಕೆ ಒಪ್ಪಂದದ ಮೇರೆಗೆ ಬಸ್ಸುಗಳನ್ನು ನಿಯೋಜಿಸಲಾಗುತ್ತಿದ್ದು, ಈ ಹಿನ್ನೆಲೆ ಮಾರ್ಚ್, 18 ರಂದು ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಸೋಮವಾರಪೇಟೆ, ಪುತ್ತೂರು, ಸುಳ್ಯ, ಕಡಬ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ಕೆಎಸ್‌ಆರ್‌ಟಿಸಿ ನಿಗಮದ ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು/ ಪ್ರಯಾಣಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ ಅವರು ಕೋರಿದ್ದಾರೆ.

Read More

ಮಡಿಕೇರಿ ಮಾ.16 : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್, 20 ರಂದು ಕೈಗಾರಿಕಾ ಸ್ಪಂದನಾ ಸಭೆ ನಡೆಯಲಿದೆ. ಈ ಸಭೆಯಲ್ಲಿ ಉದ್ದಿಮೆದಾರರ ಸಮಸ್ಯೆ ಚರ್ಚಿಸಲಾಗುವುದು. ಆದ್ದರಿಂದ ಕೈಗಾರಿಕೆಗಳ ಬಗ್ಗೆ ಸಮಸ್ಯೆಗಳಿದ್ದಲ್ಲಿ, ಲಿಖಿತ ರೂಪದಲ್ಲಿ ಈ ಕಾರ್ಯಾಲಯಕ್ಕೆ ಮಾರ್ಚ್, 18 ರೊಳಗೆ ಇ-ಮೇಲ್ dicjdkodagu@gmail.com   ಮುಖಾಂತರ ಅಥವಾ ಖುದ್ದಾಗಿ ಲಿಖಿತವಾಗಿ ಸಲ್ಲಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಮಾ.16 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್, 18 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಮುಖ್ಯಮಂತ್ರಿ ಅವರು ಮಾರ್ಚ್, 18 ರಂದು ಮಧ್ಯಾಹ್ನ 12 ಗಂಟೆಗೆ ಕೆ.ಬಾಡಗ ಗ್ರಾಮದ ಗಾಲ್ಫ್ ಮೈದಾನ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ನಂತರ ಮಧ್ಯಾಹ್ನ 12.15 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ನಡೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 3.10 ಗಂಟೆಗೆ ನಾಪೋಕ್ಲು ಬೇತು ಗ್ರಾಮದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ (ಚೆರಿಯಪರಂಬು) 23 ನೇ ವರ್ಷದ ಅಪ್ಪಚೆಟ್ಟೋಳಂಡ ಪ್ರಾಯೋಜಕತ್ವದಲ್ಲಿ ನಡೆಯುವ 2022-23 ನೇ ಸಾಲಿನ ‘ಕೊಡವ ಹಾಕಿ ಉತ್ಸವ’ಕ್ಕೆ ಚಾಲನೆ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮಗಳು: ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ನಿರ್ಮಾಣವಾಗಿರುವ ಗಾಂಧಿ ಭವನ ಉದ್ಘಾಟನೆ(287.80 ಲಕ್ಷ ರೂ), ಗ್ರೇಟರ್ ರಾಜಸೀಟು ಉದ್ಯಾನವನ…

Read More

ಮಡಿಕೇರಿ ಮಾ.16 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ. 17 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಮಿನಿ ಉದ್ಯೋಗ ಮೇಳ’ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಲಿಥಿಯಂ ಅರ್ಬನ್ ಟೆಕ್ನಾಲಾಜಿಸ್(ಡ್ರೈವರ್ ಜಾಬ್), ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಎಸ್‍ಎಲ್‍ಎನ್ ಕಾಫಿ ಪ್ರೈ.ಲಿ., ಕುಶಾಲನಗರ, ಮಡಿಕೇರಿ ಸ್ಮಾರ್ಟ್ ಬಜಾರ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಮಾ.16 : ನಗರದ ಸಾಯಿ ಸಂಸ್ಥೆ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನ ಪ್ರಯುಕ್ತ ಮಾರ್ಚ್, 22 ರಂದು ಬೆಳಗ್ಗೆ 10 ಗಂಟೆಗೆ ಹಾಕಿ ಟರ್ಪ್ ಮೈದಾನದಲ್ಲಿ ಮಹಿಳಾ ಹಾಕಿ ಪಂದ್ಯಾವಳಿ ನಡೆಯಲಿದೆ. ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಚಾಲನೆ ನೀಡಲಿದ್ದಾರೆ. ಮಡಿಕೇರಿ, ಪೊನ್ನಂಪೇಟೆ ಮತ್ತು ಕೂಡಿಗೆ ಕ್ರೀಡಾ ಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಡಿಕೇರಿ ಸಾಯಿ ಕೇಂದ್ರದ ಮಿನಿ ಉನ್ನಿರಾಜ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಮಾ.16 : ವಿಜಯ ಸಂಕಲ್ಪ ಯಾತ್ರೆಯ ಪ್ರಚಾರದ ಸಂದರ್ಭ ಗೋಣಿಕೊಪ್ಪಲಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರ್ರವನ್ನು ‘ಡಾ.ಅಂಬೇಡ್ಕರ್’ ಅವರ ಭಾವಚಿತ್ರದ ಮೇಲೆ ಅಂಟಿಸಿ ಅವಮಾನ ಮಾಡಲಾಗಿದೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ, ಈ ಬಗ್ಗೆ ಬಿಜೆಪಿ ಪ್ರಮುಖರು ಬಹಿರಂಗ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ದಸಂಸ ಮಡಿಕೇರಿ ತಾಲ್ಲೂಕು ಸಂಚಾಲಕ ದೀಪಕ್ ಮಾತನಾಡಿ, ರಾಷ್ಟ್ರಕ್ಕೆ ಸಂವಿಧಾನವನ್ನು ಕೊಟ್ಟ ಮಹಾಪುರುಷ ಅಂಬೇಡ್ಕರ್ ಅವರ ಭಾವಚಿತ್ರದ ಮೇಲೆ ಬೊಮ್ಮಾಯಿ ಅವರ ಭಾವಚಿತ್ರವನ್ನು ದುರುದ್ದೇಶಪೂರ್ವಕವಾಗಿಯೇ ಅಳವಡಿಸಲಾಗಿದೆ ಎಂದು ಆರೋಪಿಸಿದರು. ನಡೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಇಲ್ಲವೆ ಜಿಲ್ಲೆಯ ಜನಪ್ರತಿನಿಧಿಗಳು ಬಹಿರಂಗ ಕ್ಷಮೆಯಾಚನೆ ಮಾಡಬೇಕು. ಇಲ್ಲವಾದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರಚಾರ ನಡೆಸುವ ಮೂಲಕ, ಆ ಪಕ್ಷವನ್ನು ಸೋಲಿಸುವ ಕೆಲಸ ಮಾಡುತ್ತದೆ ಎಂದು ಹೇಳಿದರು. ಕರ್ನಾಟಕ ದಸಂಸ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ ಮಾತನಾಡಿ, ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುವ ಕಾರ್ಯಕ್ರಮದಲ್ಲಿ ವಿರಾಜಪೇಟೆ ಅಂಬೇಡ್ಕರ್…

Read More