ಮಡಿಕೇರಿ ಮಾ.16 : ಕೊಡವ ಕುಟುಂಬಗಳ ನಡುವಿನ 23ನೇ ವರ್ಷದ ‘ಅಪ್ಪಚೆಟ್ಟೋಳಂಡ ಕಪ್ ಹಾಕಿ ಉತ್ಸವ-2023’ ಕ್ಕೆ ಮಾ.18 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ಯಶಸ್ವಿ ಪಂದ್ಯಾವಳಿಗಾಗಿ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಹಾಕಿ ಉತ್ಸವ ಸಮಿತಿಯ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಕಿ ಉತ್ಸವದ ಉದ್ಘಾಟನಾ ಸಮಾರಂಭ ಮಧ್ಯಾಹ್ನ 2.20 ಗಂಟೆಗೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್, ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣ ಗೌಡ, ಸಂಸದ ಪ್ರತಾಪಸಿಂಹ, ಜಿಲ್ಲೆಯ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್ ಸೇರಿದಂತೆ ಹಲ ಗಣ್ಯರು ಪಾಲ್ಗೊಳ್ಳ್ಳಲಿದ್ದಾರೆ. ಅಪ್ಪಚೆಟ್ಟೋಳಂಡ ಕುಟುಂಬದ ಪಟ್ಟೆದಾರರಾದ ಅಪ್ಪಚೆಟ್ಟೋಳಂಡ ಈರಪ್ಪ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದರು. ಉದ್ಘಾಟನಾ ದಿನದಂದು ಬೆಳಗ್ಗೆ ನಾಪೋಕ್ಲುವಿನಲ್ಲಿ ಆಕರ್ಷಕ ಬೃಹತ್ ಮೆರವಣಿಗೆ ನಡೆಯಲಿದೆ. ಹಾಕಿ ಉತ್ಸವವನ್ನು ಮೊಟ್ಟ ಮೊದಲು ಆಯೋಜಿಸಿದ ಪಾಂಡಂಡ ಕುಟುಂಬ ಸೇರಿದಂತೆ ಇಲ್ಲಿಯವರೆಗೆ ಪಂದ್ಯಾವಳಿ ಆಯೋಜಿಸಿದ ಕೊಡವ ಕುಟುಂಬಗಳ 23 ಮಂದಿ ಪ್ರತಿನಿಧಿಗಳು ಆಕಾಶಕ್ಕೆ…
ಲೇಖಕ: admin
ಮುಂಬಯಿ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂಟರ್ನ್ಯಾಷನಲ್ ಎಕನಾಮಿಕ್ ರಿಸರ್ಚ್ ಜರ್ನಲ್ ಸೆಂಟ್ರಲ್ ಬ್ಯಾಂಕಿಂಗ್ 2023 ರ ‘ವರ್ಷದ ಗವರ್ನರ್’ ಪ್ರಶಸ್ತಿ ನೀಡಿದೆ. ಕಷ್ಟದ ಸಮಯದಲ್ಲಿ ಅವರ ಸ್ಥಿರ ನಾಯಕತ್ವಕ್ಕಾಗಿ ದಾಸ್ ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಕೋವಿಡ್ 19 ಮತ್ತು ಉಕ್ರೇನ್- ರಷ್ಯಾ ನಡುವಿನ ಯುದ್ಧದಿಂದಾಗಿ ಸೃಷ್ಟಿಯಾದ ಬಿಕ್ಕಟ್ಟನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಕ್ಕೆ ಅಂತರರಾಷ್ಟ್ರೀಯ ಆರ್ಥಿಕ ಸಂಶೋಧನಾ ಜರ್ನಲ್ ಆಗಿರುವ ಸೆಂಟ್ರಲ್ ಬ್ಯಾಂಕಿಂಗ್ 2023ರ ವರ್ಷದ ಗವರ್ನರ್ ಪ್ರಶಸ್ತಿ ನೀಡಿದೆ.
ಮಂಗಳೂರು ಮಾ.16 : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದರು. ಈ ಸಂದರ್ಭ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರದ ಕೋಟ ಶ್ರೀನಿವಾಸ್ ಪೂಜಾರಿ, ಸಹಕಾರ ಸಚಿವರಾದ ಸೋಮಶೇಖರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಉಮನಾಥ್ ಕೋಟ್ಯಾನ್,ರಾಜೇಶ್ ನಾಯಕ್, ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮೇಯರ್ ಜಯಾನಂದ ಅಂಚನ್ ಸೇರಿದಂತೆ ಜನಪ್ರತಿನಿಧಿಗಳು ವೇದಿಕೆಯಲ್ಲಿದ್ದರು.
ಸೋಮವಾರಪೇಟೆ ಮಾ.16 : ಗೋಣಿಕೊಪ್ಪದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವಿರುವ ಪೋಸ್ಟರ್ ಮೇಲೆ ಚಪ್ಪಲಿ ಚಿತ್ರವನ್ನಿಟ್ಟು ಅವಮಾನ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಠ ಜಾತಿ ಜಿಲ್ಲಾ ಘಟಕ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಘಟಕದ ಜಿಲ್ಲಾಧ್ಯಕ್ಷ ಬಿ.ಇ.ಜಯೇಂದ್ರ, ಬಿಜೆಪಿ ವತಿಯಿಂದ ಗೋಣಿಕೊಪ್ಪದಲ್ಲಿ ಆಯೋಜಿಸಿದ್ದ ವಿಜಯಸಂಕಲ್ಪ ದಿನದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ಪೋಸ್ಟರ್ ಮೇಲೆ ಮುಖ್ಯಮಂತ್ರಿಯವರ ಭಾವಚಿತ್ರದ ಪೋಸ್ಟರ್ ಅಳವಡಿಸಿ, ಅವರ ಕಾಲಿನ ಚಪ್ಪಲಿ, ಅಂಬೇಡ್ಕರ್ ಚಿತ್ರದ ತಲೆಯ ಮೇಲೆ ಇರುವಂತೆ ವ್ಯವಸ್ಥಿತವಾಗಿ ಕಟ್ಟಿದ್ದಾರೆ. ಬಿಜೆಪಿ, ಸಂಘಪರಿವಾರದ ಕಿಡಿಕೇಡಿಗಳ ಮನಸ್ಥಿತಿ ಇಂತಹ ಕೃತ್ಯಗಳಿಂದ ತಿಳಿದು ಬರುತ್ತದೆ ಎಂದು ದೂರಿದರು. ವಿಜಯಸಂಕಲ್ಪ ದಿನದ ಕಾರ್ಯಕ್ರಮದ ಆಯೋಜಕರು, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕೃತ್ಯವೆಸಗಿದ ಆರೋಪಿಗಳನ್ನು ಬಂಧಿಸಿ, ಗಡಿಪಾರು ಮಾಡಬೇಕು. ತಪ್ಪಿದಲ್ಲಿ ಮಾ.20 ರಂದು ದಲಿತಪರ ಸಂಘಟನೆಗಳು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರ ಸಹಕಾರದಿಂದ ಪಟ್ಟಣದಲ್ಲಿ…
ಸೋಮವಾರಪೇಟೆ ಮಾ.16 : ಕಾಂಗ್ರೆಸ್ ಸೋಮವಾರಪೇಟೆ ನಗರ ಘಟಕದ ವತಿಯಿಂದ ಪಕ್ಷದ ಗೃಹಲಕ್ಷ್ಮೀ ಯೋಜನೆಯ ಗ್ಯಾರಂಟಿ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಪಟ್ಟಣದ ವಿವಿಧ ವಾರ್ಡ್ಗಳ ಮನೆ ಮನೆಗಳಿಗೆ ತೆರಳಿದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳ ಬಗ್ಗೆ ತಿಳಿಸಿದರು. ಬಿಜೆಪಿ ದುರಾಳಿತದಿಂದ ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಸಾಮಾನ್ಯ ಜನರು ಜೀವನ ಸಾಗಿಸುವುದ್ಕಕೆ ಪರದಾಡುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ತೆರಿಗೆ ಕಟ್ಟಿ ಸುಸ್ತಾಗಿದ್ದಾರೆ. ಕಾಂಗ್ರೆಸ್ನಿಂದ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ. ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಜನರರಲ್ಲಿ ಮನವಿ ಮಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದರೆ, ಗೃಹಲಕ್ಷ್ಮೀ ಯೋಜನೆಯ ಮೂಲಕ ಕುಟುಂಬದ ಮಹಿಳೆಗೆ ತಿಂಗಳಿಗೆ ಎರಡು ಸಾವಿರ ಹಣವನ್ನು ನೀಡಲಾಗುವುದು ಎಂದರು. ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ನಾಗರಾಜು, ಪರಿಶಿಷ್ಟ ಜಾತಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಈ.ಜಯೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಮಹಿಳಾ ಘಟಕದ ಅಧ್ಯಕ್ಷೆ ಶೀಲಾ ಡಿಸೋಜ,…
ಮಡಿಕೇರಿ ಮಾ.16 : ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಕೊಡಗು, ಜಿಲ್ಲಾ ಯುವ ಒಕ್ಕೂಟ ಕೊಡಗು, ತಾಲೂಕು ಯುವ ಒಕ್ಕೂಟ ಮತ್ತು ಹುಲಿತಾಳ ಭಗತ್ ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ಹುಲಿತಾಳದಲ್ಲಿ ಮೂರು ದಿನಗಳ ವಿಶೇಷ ಶ್ರಮದಾನ ಶಿಬಿರ ನಡೆಯಿತು. ಹುಲಿತಾಳ ಸಮುದಾಯ ಭವನದಲ್ಲಿ ನಡೆಯುವ ಶಿಬಿರವನ್ನು ಮರಗೋಡು ಭಾರತಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಪಿ.ಎಸ್.ರವಿಕೃಷ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸ್ಥಳೀಯ ಅಗತ್ಯತೆಗಳನ್ನು ಯುವಕರೇ ಒಗ್ಗೂಡಿ ಶ್ರಮದಾನದ ಮೂಲಕ ಪೂರೈಸಿಕೊಳ್ಳುವುದು ಆದರ್ಶ ಪ್ರಾಯವಾಗಿದೆ. ಸ್ವಚ್ಛ ಪರಿಸರ – ಸ್ವಸ್ಥ ಆರೋಗ್ಯಕ್ಕೆ ಶ್ರಮದಾನವು ಪೂರಕವಾಗಿದೆ ಎಂದು ಅಭಿಪ್ರಾಯಪಟ್ಟರು. ಹಾಕತ್ತೂರು ಗ್ರಾ.ಪಂ ಸದಸ್ಯ ಬಿ.ವಿ.ಯೋಗೇಶ್ ಅಧ್ಯಕ್ಷತೆ ವಹಿಸಿದ್ದರು. ಮಡಿಕೇರಿ ಕಾವೇರಿ ಗ್ರೂಪ್ ಮ್ಯಾನೇಜರ್ ಡಿ.ಎಚ್.ಗಣೇಶ್ ಹಾಜರಿದ್ದರು. ಮೂರು ದಿನಗಳ ವಿಶೇಷ ಶ್ರಮದಾನ ಶಿಬಿರದ ಸಂದರ್ಭದಲ್ಲಿ ಹಲವು ವರ್ಷಗಳ ಹಿಂದೆ ನಿರ್ಮಾಣಗೊಂಡು ನಿರ್ವಹಣೆ ಕುಂಠಿತವಾಗಿದ್ದ ಹುಲಿತಾಳದ ಸಮುದಾಯ ಭವನವನ್ನು ಸ್ವಚ್ಛಗೊಳಿಸಿ, ಬಣ್ಣ ಬಳಿದು ಸ್ವಚ್ಛ ಭಾರತದ ಕುರಿತಾದ…
ಮಡಿಕೇರಿ ಮಾ.16 : ಹೊದ್ದೂರು ಗ್ರಾಮ ಪಂಚಾಯ್ತಿ ವ್ಯಾಪ್ತ್ತಿಗೆ ಒಳಪಡುವ ಹೊದವಾಡ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ, ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಹೈದ್ರೂಸ್ ಜುಮಾ ಮಸೀದಿಯ ಅಧ್ಯಕ್ಷ ಬಿ.ಎಸ್.ಅಬೂಬಕ್ಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಅದನ್ನು ದುರಸ್ತಿ ಪಡಿಸುವ ಯಾವುದೇ ಅಭ್ಯರ್ಥಿಯನ್ನು ಗ್ರಾಮಸ್ಥರು ಬೆಂಬಲಿಸಲಿದ್ದಾರೆ. ಕೇವಲ ಚುನಾವಣೆ ಸಂದರ್ಭ ಗ್ರಾಮದ ಜನರನ್ನು ಓಲೈಸಲು ಯಾವುದೇ ರಾಜಕಾರಣಿಗಳು ಗ್ರಾಮಕ್ಕೆ ಬರುವುದು ಬೇಡವೆಂದು ಹೇಳಿದರು. ಮೂರ್ನಾಡಿನಿಂದ ಕುಂಬಳದಾಳು ಮಾರ್ಗವಾಗಿ ಹೊದವಾಡ ಗ್ರಾಮವನ್ನು ಸಂಪರ್ಕಿಸುವ ಸುಮಾರು 9.50 ಕಿ.ಮೀ ರಸ್ತೆಯಲ್ಲಿ ಮೂರ್ನಾಡು ಕಡೆಯಿಂದ 8 ಕಿ.ಮೀ. ರಸ್ತೆಯನ್ನು ವ್ಯವಸ್ಥಿತವಾಗಿ ನಿರ್ಮಿಸಲಾಗಿದೆ. ಅಲ್ಪಸಂಖ್ಯಾತರು ನೆಲೆಸಿರುವ ಸ್ಥಳದಿಂದ ಸುಮಾರು 1.50 ಕಿ.ಮೀ. ರಸ್ತೆಯ ದುರಸ್ತಿ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆಯೆಂದು ಬೇಸರ ವ್ಯಕ್ತಪಡಿಸಿ. ಆಡಳಿತ ನಡೆಸುವವರು ಅಲ್ಪಸಂಖ್ಯಾತರನ್ನು ದ್ವಿತೀಯ ದರ್ಜೆಯ ಪ್ರಜೆಗಳನ್ನಾಗಿ ಪರಿಗಣಿಸುತ್ತಿದ್ದಾರೆ ಎಂದು ಆರೋಪಿಸಿದರು. ಹೊದವಾಡ ಗ್ರಾಮ ವ್ಯಾಪ್ತಿಯಲ್ಲಿ ವಿವಿಧ ಸಮೂಹಗಳಿಗೆ ಸೇರಿದ ಸುಮಾರು 3 ಸಾವಿರ…
ನಾಪೋಕ್ಲು ಮಾ.16 : ವಿಶ್ವಕ್ಕೆ ವಿಶಿಷ್ಟ ಸಂಸ್ಕೃತಿಯನ್ನು ಪರಿಚಯಿಸಿದ ಕೊಡಗಿನಲ್ಲಿ ಮತ್ತೆ ಹಾಕಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಾ.18ರಿಂದ ಆರಂಭಗೊಳ್ಳುವ 23ನೇ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯಲ್ಲಿ ದಾಖಲೆಯ 336 ಕೊಡವ ಕುಟುಂಬಗಳು ಪಾಲ್ಗೊಳ್ಳಲಿದ್ದು, ಕೌಟುಂಬಿಕ ಹಾಕಿ ಪಂದ್ಯಾವಳಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾಕಿ ಪಂದ್ಯಾವಳಿಯ ಉದ್ಘಾಟನೆಗೆ ಆಗಮಿಸಲಿದ್ದು ಮತ್ತಷ್ಟು ಮೆರುಗು ಹೆಚ್ಚಲಿದೆ. ಸಮೀಪದ ಬಲ್ಲಮಾವಟಿಯ ಅಪ್ಪಚೆಟ್ಟೋಳಂಡ ಕುಟುಂಬ ಕೌಟುಂಬಿಕ ಹಾಕಿ ಆತಿಥ್ಯ ವಹಿಸಿದ್ದು, ಯಶಸ್ಸಿಗೆ ಹಗಲಿರುಳು ಶ್ರಮಿಸುತ್ತಿದೆ. ಕೌಟುಂಬಿಕ ಕೊಡವ ಹಾಕಿ ಪಂದ್ಯಾವಳಿಯ ಯಶಸ್ಸಿಗೆ ಕುಟುಂಬಸ್ಥರು ಶ್ರಮಿಸುತ್ತಿದ್ದು, ಒಂದು ತಿಂಗಳಿನಿಂದ ಸಮೀಪದ ಚೆರಿಯಪರಂಬುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಸಿದ್ಧತೆ ನಡೆಯುತ್ತಿದೆ. ಕೊಡಗಿನ ಹಾಕಿ ಪ್ರಿಯರು ವೀಕ್ಷಿಸಲು ಎಲ್ಲ ಸೌಲಭ್ಯಗಳನ್ನು ಒಳಗೊಂಡ 32 ಲಕ್ಷ ರೂ.ವೆಚ್ಚದ ಬೃಹತ್ ಗ್ಯಾಲರಿ ನಿರ್ಮಾಣ ಮಾಡಲಾಗುತ್ತಿದೆ. 25000 ಜನರು ಒಟ್ಟಾಗಿ ಪಂದ್ಯ ವೀಕ್ಷಿಸಬಹುದಾಗಿದೆ. ಅಲ್ಲದೆ 600 ಮಂದಿ ಕುಳಿತುಕೊಳ್ಳಲು ವಿಐಪಿ ಗ್ಯಾಲರಿಯನ್ನು ನಿರ್ಮಾಣ ಮಾಡಲಾಗಿದ್ದು, ಮೈದಾನ ಹಾಗೂ ಗ್ಯಾಲರಿ ನಿರ್ಮಾಣ…
ಬೆಂಗಳೂರು ಮಾ.16 : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಮಾ.17 ರಿಂದ ಮುಷ್ಕರ ನಡೆಸಲು ನಿರ್ಧರಿಸಿದೆ. ಕ್ಯೂಆರ್ ಕೋಡ್ ಆಧಾರಿತ ರಿಫ್ಲೆಕ್ಟರ್ ಟೇಪುಗಳನ್ನು ಅಳವಡಿಸಿಕೊಳ್ಳಬೇಕೆನ್ನುವ ನಿಯಮ ರದ್ದುಪಡಿಸಬೇಕು. ಬೆಂಗಳೂರು- ಮೈಸೂರು ರಸ್ತೆಯಲ್ಲಿ ದ್ವಿಚಕ್ರ ಮತ್ತು ಮಂದಗತಿಯಲ್ಲಿ ಚಲಿಸುವ ಟ್ರಾಕ್ಟರ್ ಆಟೋರಿಕ್ಷಾಗಳ ಓಡಾಟ ನಿಷೇಧಿಸಬೇಕು, ನೈಸ್ ರಸ್ತೆಯಲ್ಲಿ ಟೋಲ್ ಶುಲ್ಕವನ್ನು ತೆಗೆದುಹಾಕಬೇಕು, ನಗರದ ಒಳಗೆ ಅವೈಜ್ಞಾನಿಕ ರೂಪದ ವಾಹನಗಳ ಸಂಚಾರವನ್ನು ನಿಷೇಧಿಸಿರುವ ನಿಯಮವನ್ನ ವಾಪಸ್ಸು ಪಡೆಯಬೇಕು ಎಂದು ಸಂಘಟನೆ ಒತ್ತಾಯಿಸಿದೆ. ವಾಣಿಜ್ಯ ವಾಹನಗಳ ಎಫ್.ಸಿ ನವೀಕರಣಕ್ಕೆ ಕ್ಯೂಆರ್ ಕೋಡ್ ಇರುವ ರೆಟ್ರೋ ರಿಫ್ಲೆಕ್ಟರ್ ಟೇಪ್ ಅಳವಡಿಸಿಕೊಂಡು ಬರುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಬೆಂಗಳೂರು ನಗರದಲ್ಲಿ ಸರಕು ಸಾಗಣೆ ವಾಹನಗಳ ಪ್ರವೇಶ ರದ್ದು ಪಡಿಸಿರುವುದನ್ನು ಅಗತ್ಯ ವಸ್ತುಗಳ ಪೂರೈಕೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಹೂವು, ಹಣ್ಣು,…
ಮಡಿಕೇರಿ ಮಾ.16 : ಭವಿಷ್ಯದ ಪೀಳಿಗೆಗಾಗಿ ಯಾಗಗಳು ಮತ್ತು ಹೋಮಗಳ ಕುರಿತು ಸಿದ್ದಾಪುರದಲ್ಲಿ ಮಾ.26 ರಂದು ದೈವಿಕ ಪ್ರವಚನ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕಿ ನಡಿಕೇರಿಯಂಡ ಸ್ವಾತಿ ಮಂದಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದಾಪುರದ ಸ್ವರ್ಣಮಾಲಾ ಸಭಾಂಗಣದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ಕಣ್ಣೂರಿನ ರಿಷಿದೇವ್ ಫೌಂಡೇಶನ್ನ ಸ್ಥಾಪಕ ಹಾಗೂ ಮುಖ್ಯ ಪೋಷಕ ಸದ್ಗುರು ಋಷಿದೇವ್ ಶ್ರೀ ನರೇಂದ್ರನ್ ಜೀ ಅವರು ದೈವಿಕ ಪ್ರವಚ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು. ಬೆಂಗಳೂರಿನ ವಾಟರ್ ಟೆಕ್ನಾಲಜೀಸ್ ಪ್ರೈ.ಲಿ ನ ನಿರ್ದೇಶಕ ಡಾ.ಕೃಷ್ಣ ಮಾದಪ್ಪ ನೈಸರ್ಗಿಕ ಬುದ್ಧಿವಂತಿಕೆ ಮತ್ತು ಪವಿತ್ರ ವಿಜ್ಞಾನಗಳ ಛೇದಕ : ಮಾನವೀಯತೆ ಮತ್ತು ಪರಿಸರದ ಮೇಲೆ ಯಾಗಗಳು ಮತ್ತು ಹೋಮಗಳ ಪ್ರಭಾವ ಎಂಬ ವಿಷಯದ ಕುರಿತು ಮಾತನಾಡಲಿದ್ದು, ಆಧ್ಯಾತ್ಮಿಕ ಚಿಂತಕರಾದ ಶಾರದಾ ಶ್ರೀಧರ್ ಗುರುತ್ವಂ ಎಂಬ ವಿಷಯದ ಕುರಿತು ಮಾಹಿತಿ ನೀಡಲಿದ್ದಾರೆ ಎಂದರು. ಕಣ್ಣೂರಿನ ರಿಷಿದೇವ್ ಫೌಂಡೇಶನ್ನ ಪ್ರಧಾನ ಕಾರ್ಯದರ್ಶಿ ಬಾಬು…






