ಕುಶಾಲನಗರ ಡಿ.5 NEWS DESK : ಕುಶಾಲನಗರ ಗೌಡ ಸಮಾಜದ ಆಶ್ರಯದಲ್ಲಿ ಹುತ್ತರಿ ಹಬ್ಬ ಆಚರಣೆ ಸಾಂಪ್ರದಾಯಿಕವಾಗಿ ಅದ್ದೂರಿಯಾಗಿ ನಡೆಯಿತು. ಕುಶಾಲನಗರ ಗೌಡ ಸಮಾಜ ಮತ್ತು ಸಹ ಸಂಘಟನೆಗಳಾದ ಗೌಡ ಯುವಕ ಸಂಘ, ಗೌಡ ಮಹಿಳಾ ಸ್ವಸಹಾಯ ಸಂಘ, ಪದ್ಮಾವತಿ ಗೌಡ ಮಹಿಳಾ ಒಕ್ಕೂಟ, ಗೌಡ ನಿವೃತ್ತ ಸೈನಿಕರ ಕೂಟ ಹಾಗೂ ಗೌಡ ಸಾಂಸ್ಕೃತಿಕ ವೇದಿಕೆ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಗೌಡ ಸಮಾಜದಲ್ಲಿ ಸೇರಿ ಸಾಂಪ್ರದಾಯಿಕ ಕಾರ್ಯಗಳ ನಂತರ ಕುಶಾಲನಗರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಮೀಪದ ಹಾರಂಗಿ ರಸ್ತೆಯ ಗೌಡ ಯುವಕ ಸಂಘದ ಗದ್ದೆಯಲ್ಲಿ ಕದಿರು ತೆಗೆಯಲಾಯಿತು. ಸಮಾಜದ ಉಪಾಧ್ಯಕ್ಷರಾದ ಕುಲಚೆಟ್ಟಿ ಕಾಶಿ ಪೂವಯ್ಯ ಅವರು ಗದ್ದೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು. ಸಮಾಜ ಬಾಂಧವರಿಗೆ ಹಾಗೂ ಸಾರ್ವಜನಿಕರಿಗೆ ಕದಿರು ವಿತರಣೆ ಮಾಡಲಾಯಿತು. ಗೌಡ ಸಮಾಜದ ಅಧ್ಯಕ್ಷರಾದ ಚಿಲ್ಲನ ಗಣಿ ಪ್ರಸಾದ್, ಉಪಾಧ್ಯಕ್ಷರಾದ ಸೆಟ್ಟೆಜನ ದೊರೆ ಗಣಪತಿ, ಕಾರ್ಯದರ್ಶಿ ಕುಲಚನ ಹೇಮಂತ್, ಗೌಡ ಯುವಕ ಸಂಘದ ಅಧ್ಯಕ್ಷರಾದ ಕೊಡಗನ ಹರ್ಷ, ಗೌಡ…
ಲೇಖಕ: admin
ಕುಶಾಲನಗರ ಡಿ.5 NEWS DESK : ಕುಶಾಲನಗರ ಕೊಡವ ಸಮಾಜದ ಆಶ್ರಯದಲ್ಲಿ ಸಾಂಪ್ರದಾಯಿಕ ಪುತ್ತರಿ ನಮ್ಮೆ ಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕುಶಾಲನಗರ ಕೊಡವ ಸಮಾಜದ ಆವರಣದಲ್ಲಿ ಕೊಡವ ಸಮಾಜದ ಅಧ್ಯಕ್ಷರಾದ ವಾಂಚೀರ ಮನು ನಂಜುಂಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇರಿದ ಸಮುದಾಯ ಬಾಂಧವರು ಮತ್ತು ಸಾರ್ವಜನಿಕರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಅಂಜಪರವಂಡ ಸನ್ನಿ ತಮ್ಮಯ್ಯ ಅವರು ಕುತ್ತಿ ಪೂಜೆ ನೆರವೇರಿಸಿ, ಆವರಣದ ಗದ್ದೆಗೆ ತೆರಳಿ ಸಾಂಪ್ರದಾಯಿಕವಾಗಿ ಕದಿರು ತೆಗೆದರು. ನಂತರ ಸಮಾಜಕ್ಕೆ ಬಂದು ಕದಿರು ವಿತರಣೆ ನಡೆಯಿತು. ಈ ಸಂದರ್ಭ ಸಮಾಜದ ಉಪಾಧ್ಯಕ್ಷರಾದ ಪುಲಿಯಂಡ ಚಂಗಪ್ಪ, ಕಾರ್ಯದರ್ಶಿ ಐಲಪಂಡ ಸಂಜು ಬೆಳ್ಳಿಯಪ್ಪ, ಸಹ ಕಾರ್ಯದರ್ಶಿ ಮೈಂದಪಂಡ ಜಗದೀಶ್, ಖಜಾಂಚಿ ಬೊಳ್ಳಚಂಡ ಮುತ್ತಣ್ಣ , ಆಡಳಿತ ಮಂಡಳಿ ನಿರ್ದೇಶಕರು ಸದಸ್ಯರು ಸಾರ್ವಜನಿಕರು ಇದ್ದರು.
ಮಡಿಕೇರಿ ಡಿ.5 NEWS DESK : ಕೊಡಗಿನ ಸಾಂಪ್ರದಾಯಿಕ ಹಬ್ಬಗಳಲ್ಲೊಂದಾದ ಪುತ್ತರಿ ಹಬ್ಬವನ್ನು ಮನೆಗೆ ಧಾನ್ಯಲಕ್ಷ್ಮಿಯನ್ನು ಬರಮಾಡಿಕೊಳ್ಳುವ ಮೂಲಕ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಜಿಲ್ಲೆಯಾದ್ಯಂತ ವಿವಿಧ ದೇವಾಲಯಗಳಲ್ಲಿ ಹಾಗೂ ಮನೆಗಳಲ್ಲಿ ನಿಗದಿತ ಸಮಯದಲ್ಲಿ ನೆರೆಕಟ್ಟಿ, ಕದಿರು ತೆಗೆದು ಪುತ್ತರಿ ಹಬ್ಬವನ್ನು ಸಂಭ್ರಮಿಸಿದರು. ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಕದಿರು (ಪೈರು) ಕೊಯ್ಯುವ ಮೂಲಕ ಪುತ್ತರಿ ಹಬ್ಬಕ್ಕೆ ಚಾಲನೆ ನೀಡಲಾಯಿತು. ನೆರೆ ಕಟ್ಟುವ ಸಂಪ್ರದಾಯವನ್ನು ಅರ್ಚಕರು ಹಾಗೂ ತಕ್ಕ ಮುಖ್ಯಸ್ಥರು ನೆರವೇರಿಸಿದರು. ದೇವಾಲಯ ಆವರಣದ ಗದ್ದೆಯಲ್ಲಿ ಕದಿರು ಕೊಯ್ದು ಹಬ್ಬದ ವಿಧಿ ವಿಧಾನ ನಡೆಸಲಾಯಿತು. ನಗರದ ಐತಿಹಾಸಿಕ ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಕೊಡವ ಸಮಾಜದ ವತಿಯಿಂದ ದೇವಾಲಯದ ಗದ್ದೆಯಲ್ಲಿ ಭತ್ತದ ಕದಿರಿಗೆ ಪೂಜೆ ಸಲ್ಲಿಸಿ ಕದಿರು ಕೊಯ್ದು ವಿಶೇಷ ಪೂಜೆ ಸಲ್ಲಿಸಿ ನೆರದಿದ್ದವರಿಗೆ ಕದಿರು (ಪೈರು) ವಿತರಿಸಲಾಯಿತು.
ಮಡಿಕೇರಿ ಡಿ.5 NEWS DESK : ಹಲವು ಕಾರಣಗಳಿಂದ ನಮ್ಮ ಆಚಾರ ವಿಚಾರಗಳಿಂದ ದೂರ ಉಳಿದಿರುವ ಇಂದಿನ ಯುವ ಪೀಳಿಗೆ ಕೊಡವ ಸಂಸ್ಕೃತಿಯನ್ನು ರಕ್ಷಿಸುವಲ್ಲಿ ಮುಂದೆ ಬರಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದರು. ನಾಪೋಕ್ಲು ಕೊಡವ ಸಮಾಜದಲ್ಲಿ ನಡೆದ ಕೊಡವ ಒಕ್ಕಡೊಕ್ಕಡ 5ನೇ ವರ್ಷದ ಚೀಯಕ್ಪೂವಂಡ ಕೇರ್ಬಲಿ ನಮ್ಮೆ – 2025ರ ಲೋಗೋವನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. ಇಂತಹ ಕಾರ್ಯಕ್ರಮಗಳು ಜನಾಂಗದ ಸಂಸ್ಕೃತಿ ಹಾಗೂ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಹಾಗೂ ಅದರ ಏಳಿಗೆಗೆ ತುಂಬಾ ಸಹಕಾರಿಯಾಗಿದೆ. ಹಲವು ಕಾರಣಗಳಿಂದ ನಮ್ಮ ಆಚಾರ ವಿಚಾರಗಳಿಂದ ದೂರ ಉಳಿದಿರುವ ಇಂದಿನ ಯುವಜನತೆ ಇಂತಹ ಕಾರ್ಯಕ್ರಮಗಳಿಂದ ಪ್ರೇರಣೆ ಪಡೆಯಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರು ಸುಜಾ ಕುಶಾಲಪ್ಪ, ಕೊಡಗು ಜಿಲ್ಲಾ ವರಿಷ್ಠಧಿಕಾರಿ ರಾಮರಾಜನ್, ಚೀಯಕ್ಪೂವಂಡ ಕುಟುಂಬದ ಅಧ್ಯಕ್ಷರು ಎಂ.ಅಪ್ಪಚ್ಚು, ಮುಂಡಂಡ ಸಿ.ನಾಣಯ್ಯ ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರು ಮುದಂಡ ಪಿ…
ಬೆಂಗಳೂರು ಡಿ.5 NEWS DESK : ಬೆಂಗಳೂರಿನ ಗಾಂಧಿನಗರದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಕೇಂದ್ರ ಕಚೇರಿಯ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶುಭ ಕೋರಿದರು. ಸಚಿವರಾದ ಎಂ.ಬಿ.ಪಾಟೀಲ್, ಚಲುವರಾಯಸ್ವಾಮಿ, ಶಾಸಕರಾದ ಆರ್.ವಿ.ದೇಶಪಾಂಡೆ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಡಿ.5 NEWS DESK : ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ದೇಶಾದ್ಯಾಂತ ನಡೆಸುತ್ತಿರುವ ನೆರೆಹೊರೆಯವರ ಹಕ್ಕುಗಳು ಎಂಬ ರಾಷ್ಟ್ರವ್ಯಾಪಿ ಅಭಿಯಾನದ ಅಂಗವಾಗಿ ಮಡಿಕೇರಿಯ ಸಿ.ಪಿ.ಸಿ ಲೇಔಟ್ ನಲ್ಲಿರುವ ಕಾರುಣ್ಯ ಸದನದ ಸಭಾಂಗಣದಲ್ಲಿ ಸೌಹಾರ್ದ ಚಹಕೂಟ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಜಮಾಅತೆ ಇಸ್ಲಾಮೀ ಹಿಂದ್ ಮೈಸೂರು ವಲಯ ಸ0ಚಾಲಕ ಯು.ಅಬ್ದುಲ್ ಸಲಾಮ್ , ಇಂದು ಕುಟುಂಬ ಸಂಭಂದಗಳು ಶಿಥಿಲಗೊಳ್ಳುತ್ತಿದೆ. ತಂದೆ ತಾಯಿಯಂದಿರನ್ನು ಕಡಗಣಿಸಲಾಗುತ್ತಿದೆ, ವೃದ್ಧಾಶ್ರಮಗಳು, ನಿರಾಶ್ರಿತ ಕೇಂದ್ರಗಳು ಅಲ್ಲಲ್ಲಿ ಅಣಬೆಗಳಂತೆ ತಲೆ ಎತ್ತುತ್ತಿದೆ. ಅನಾಥಾಶ್ರಮಗಳಲ್ಲಿ ಬರೀ ನಿರ್ಗತಿಕರು ಮಾತ್ರವಲ್ಲ , ಸ್ವಂತ ಕುಟುಂಬ, ಮಕ್ಕಳು ಇರುವ ಮನೆಗಳಿಂದ ಹೊರಹಾಕಲ್ಪಟ್ಟ ತಂದೆ-ತಾಯಿ, ತಾತ-ಅಜ್ಜಿಯಂದಿರು ತಮ್ಮ ಕೊನೆಯಗಳಿಗೆಯನ್ನು ಆಶ್ರಮಗಳಲ್ಲಿ ಕಳೆಯುತ್ತಿರವುದು ಸಮಾಜದ ಬಹು ದೊಡ್ಡ ದುರಂತ ಎಂದು ಬೇಸರ ವ್ಯಕ್ತಪಡಿಸಿದರು. ಯಾರು ನೆರೆಹೊರೆಯವರು ತನ್ನ ಉಪಟಳದಿಂದ ಸುರಕ್ಷಿತರಲ್ಲವೋ ಆತ ಎಂದಿಗೂ ಓರ್ವ ನೈಜ ವಿಶ್ವಾಸಿಯಾಗಲು ಖಂಡಿತಾ ಸಾಧ್ಯವಿಲ್ಲ ಎಂದು ಪ್ರವಾದಿ ಮೊಹಮ್ಮದ್ ಸ ಅವರ ವಚನವೊಂದನ್ನು ಉಚ್ಚರಿಸಿದ ಅವರು, ಪ್ರತಿಯೊಬ್ಬರು…
ಮಡಿಕೇರಿ ಡಿ.5 NEWS DESK : ವಿನಾಶಕಾರಿ ಡ್ರಗ್ಸ್ ನಿಂದ ನಮ್ಮ ಯುವ ಜನರನ್ನು ರಕ್ಷಿಸುವ ಸಲುವಾಗಿ ಡ್ರಗ್ಸ್ ಮುಕ್ತ ಕರ್ನಾಟಕ ಸಂಕಲ್ಪ ಸಾರುವ ಸಂದೇಶ ಹೊತ್ತ ಸ್ತಬ್ಧಚಿತ್ರವು ಡಿ.9 ರಂದು ಮೈಸೂರಿನಿಂದ ಹೊರಟು 45 ದಿನಗಳ ಕಾಲ ರಾಜ್ಯಾದ್ಯಂತ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಲಿದೆ. ಡಿ.17 ರಂದು ಬೆಳಿಗ್ಗೆ 9 ಗಂಟೆಗೆ ಕೊಡಗಿಗೆ ಆಗಮಿಸಲಿದೆ. ಡಿ.18 ರಂದು ಬೆಳಿಗ್ಗೆ 10 ಗಂಟೆಗೆ ಕುಶಾಲನಗರ ಹಾಗೂ ಮಧ್ಯಾಹ್ನ 2 ಗಂಟೆಗೆ ಸೋಮವಾರಪೇಟೆಯಲ್ಲಿ ಬೃಹತ್ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿದೆ. ಡಿ.19 ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿ ಹಾಗೂ ಮಧ್ಯಾಹ್ನ 2 ಗಂಟೆಗೆ ಸಂಪಾಜೆಯಲ್ಲಿ ಬೃಹತ್ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿದೆ. ಆದ್ದರಿಂದ ಜನಜಾಗೃತಿ ಸ್ತಬ್ದಚಿತ್ರ ಹೊತ್ತ ರಥಯಾತ್ರೆ ಜಿಲ್ಲೆಯ ತಾಲ್ಲೂಕುಗಳಿಗೆ ಆಗಮಿಸುವ ಸಂದರ್ಭ ಸ್ಥಳೀಯ ಎಲ್ಲಾ ಸರಕಾರಿ, ಸರಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಒಟ್ಟು ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ 7022095863 (ಶರತ್ ಗೋಣಿಕೊಪ್ಪ), 9449762686…
ಮಡಿಕೇರಿ ಡಿ.5 NEWS DESK : ಕರ್ನಾಟಕ ಸರ್ಕಾರ, ಕೊಡಗು ಜಿಲ್ಲಾ ಗೃಹರಕ್ಷಕದಳ ವತಿಯಿಂದ ಗೃಹರಕ್ಷಕದಳ ದಿನಾಚಣೆಯು ಡಿಸೆಂಬರ್, 06 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಗೃಹರಕ್ಷಕದಳ ಕಚೇರಿ ಆವರಣದಲ್ಲಿ ನಡೆಯಲಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ.ದಿನೇಶ್ ಕುಮಾರ್, ಜಿಲ್ಲಾ ಗುಪ್ತದಳ ವಿಭಾಗದ ಪೊಲೀಸ್ ನಿರೀಕ್ಷಕರಾದ ಐ.ಪಿ.ಮೇದಪ್ಪ, ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಡಿ.5 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಏಕಲವ್ಯ ಪ್ರಶಸ್ತಿ-2024, ಜೀವಮಾನ ಸಾಧನೆ ಪ್ರಶಸ್ತಿ-2024, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ-2024, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ-2024, ಗುರಿ: ಒಲಿಂಪಿಕ್ ಪದಕ, 2023 ಮತ್ತು 2024 ರ ಕ್ರೀಡಾ ಸಾಧನೆಗೆ ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆ, ಕ್ರೀಡಾ ವಿದ್ಯಾರ್ಥಿ ವೇತನ ಈ ಸೇವೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಸಹಕಾರಿಯಾಗುವಂತೆ ಈ ಸೇವೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್, 10ರವರೆಗೆ ಅವಧಿ ವಿಸ್ತ್ತರಿಸಲಾಗಿದೆ. ಅರ್ಹ ಕ್ರೀಡಾಪಟುಗಳು https://sevasindhuservices.karnataka.gov.in ಸಲ್ಲಿಸಲು ಪ್ರಕಟಣೆ ಕೋರಿದೆ.
ಮಡಿಕೇರಿ ಡಿ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಿ.6 ರಂದು ಬೆಳಗ್ಗೆ 9 ಗಂಟೆಗೆ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ‘ಪರಿನಿರ್ವಾಣ ದಿನ’ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.






