ಲೇಖಕ: admin

ಮಡಿಕೇರಿ ಮಾ.16 :  ಅಮ್ಮತ್ತಿ – ಹೊಸೂರು – ಗೋಣಿಕೊಪ್ಪ ಲೋಕೋಪಯೋಗಿ ರಸ್ತೆಯ ಗದ್ದೆಮನೆ ಭಾಗದಲ್ಲಿ ಹಾನಿಗೀಡಾದ ರಸ್ತೆ ಮತ್ತು ಚರಂಡಿ ದುರಸ್ಥಿಗೆ ರೂ.45 ಲಕ್ಷ ಮಂಜೂರಾಗಿದ್ದು, ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ  ಗ್ರಾ.ಪಂ  ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.   

Read More

ಮಡಿಕೇರಿ ಮಾ.15 : ಎಂ.ಡಿ.ಎಂ.ಎ ಎಂಬ ಹೆಸರಿನ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಮಾಲು ಸಹಿತ ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಮಡಿಕೇರಿ ನಿವಾಸಿ ಎಂ.ಹೆಚ್.ಸಯ್ಯದ್ ಹುಸೇನ್(27) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಆತನ ಬಳಿಯಿದ್ದ 3.06 ಗ್ರಾಂ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಗಳ ಕುರಿತು ಪೊಲೀಸ್ ಇಲಾಖೆಗೆ ಸಾರ್ವಜನಿಕರ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಸೈಬರ್ ಕ್ರೈಂ (ಸೆನ್) ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಜೆ.ಕೆ.ರಾಘವೇಂದ್ರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು. ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಎಂ.ಡಿ.ಎಂ.ಎ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಈ ತಂಡಕ್ಕೆ ಲಭಿಸಿತ್ತು. ಅದರಂತೆ ದಾಳಿ ನಡೆಸಿ ಪರಿಶೀಲಿಸಿದಾಗ ಆರೋಪಿ ಬಳಿ ಮಾದಕ ವಸ್ತು ಪತ್ತೆಯಾಗಿದೆ. ಸ್ಥಳದಲ್ಲೇ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ ಮಾ.15 : ಕುಶಾಲನಗರ, ಜಿಲ್ಲೆಯ ಉದಯೋನ್ಮುಖ  ಚಲನಚಿತ್ರ  ನಟಿ ಹಾಗೂ ನಿರ್ದೇಶಕಿ ಸಿಂಚನ ಪೊನ್ನವ್ವ ನಿರ್ದೇಶನದ ಕೊಡವ ಭಾಷೆಯ ಚಲನಚಿತ್ರ *ಕೌಡಿಕಳಿ*ಚಿತ್ರ ಕರ್ನಾಟಕ ರಾಜ್ಯದ ಪ್ರತಿಷ್ಠಿತ  14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ-2023 ಕ್ಕೆ ಆಯ್ಕೆಯಾಗಿದೆ. ಇಂಡಿಯನ್ ವಿಭಾಗದಲ್ಲಿ ದೇಶದ ಹಲವು ಭಾಷೆಗಳ ನಡುವೆ ಇದೇ ಪ್ರಥಮ ಬಾರಿಗೆ ಕೊಡವ ಭಾಷೆಯ ಚಲನಚಿತ್ರವೊಂದು ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಇಂಡಿಯನ್ ವಿಭಾಗದಲ್ಲಿ ಒಟ್ಟು 14 ಚಿತ್ರಗಳು ಆಯ್ಕೆಯಾಗಿದ್ದು ಐದು ಕನ್ನಡ ಚಲನಚಿತ್ರಗಳು  ಆಯ್ಕೆಗೊಂಡಿವೆ. ಓಂ ಸ್ಟುಡಿಯೋ ಮತ್ತು ಪಿಂಗಾರ ಕ್ರಿಯೇಷನ್ಸ್ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಆರ್ ಪ್ರೀತಮ್ ಶೆಟ್ಟಿ ಅವರ ಕಥೆ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಅವಿನಾಶ್ ಶೆಟ್ಟಿ ಹಾಗೂ ಪತ್ರಕರ್ತೆ ವನಿತಾ ಚಂದ್ರಮೋಹನ್ ನಿರ್ಮಿಸಿರುವ ಕೊಡವ ಭಾಷೆಯ ಚಲನಚಿತ್ರ “ಕೌಡಿ ಕಳಿ” ಕೊಡಗು ಮೈಸೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಚಿತ್ರಿಕರಣಗೊಂಡಿತ್ತು.

Read More

ಮಡಿಕೇರಿ ಮಾ.15 :  ಇತಿಹಾಸ ಪ್ರಸಿದ್ಧದ ಬೊಟ್ಟಿಯತ್ ನಾಡ್ ಈಶ್ವರ ದೇವರ ವಾರ್ಷಿಕೋತ್ಸವದ ಪ್ರಯುಕ್ತ  ನೆರ್ಪು ಪ್ರಯುಕ್ತ ಇಂದು  ಎತ್ತ್ ಪೋರ್ ಮತ್ತು ವಿವಿಧ ಪೂಜಾ ಕಾರ್ಯಕ್ರಮ ನಡೆಯಿತು. ಪೊನ್ನಂಪೇಟೆ ತಾಲೂಕು ಕುಂದಾ ಮುಗುಟಿಗೇರಿ ಗ್ರಾಮದಲ್ಲಿರುವ ಆರು ಗ್ರಾಮಗಳಿಗೆ ಸೇರಿದ ನಾಡ್ ದೇವಸ್ಥಾನ ಅಥವಾ ಈಶ್ವರ ದೇವಸ್ಥಾನಕ್ಕೆ ಶತಶತಮಾನಗಳ ಇತಿಹಾಸವಿದ್ದು, ಇದರ ವಾರ್ಷಿಕ ಉತ್ಸವ ಈಗಾಗಲೇ ಮಾ. 8 ರಂದು ಸಂಜೆ ಕೊಡಿಮರ ನಿಲ್ಲಿಸುವುದರ ಮೂಲಕ ಆರಂಭಗೊಂಡಿತ್ತು. ಸಾವಿರಾರು ವರ್ಷಗಳ ಇತಿಹಾಸವಿರುವ ಬೊಟ್ಟಿಯತ್ ನಾಡ್ ಈಶ್ವರ ದೇವಸ್ಥಾನದಲ್ಲಿರುವ ಶಿವಲಿಂಗವು ಉದ್ಭವ ಲಿಂಗವಾಗಿದ್ದು ಆರು ಗ್ರಾಮಗಳು ಈ ದೇವಸ್ಥಾನಕ್ಕೆ ಸೇರುತ್ತದೆ. ಕುಂದಾ, ಮುಗುಟಿಗೇರಿ, ಈಚೂರು, ಹುದೂರು, ಹಳ್ಳಿಗಟ್ಟು, ಅರ್ವತೋಕ್ಲು ಈ ಆರು ಗ್ರಾಮಗಳಿಗೆ ಸೇರಿರುವ ನಾಡ್ ದೇವಸ್ಥಾನದಲ್ಲಿ ಮಾ. 8 ರಿಂದ ಪ್ರತಿನಿತ್ಯ ಮುಂಜಾನೆ ಮತ್ತು ಸಂಜೆ ಉತ್ಸವ ಮೂರ್ತಿ ಹೊರಗೆ ಬರುವ ಮೂಲಕ ವಿಶೇಷ ಪೂಜೆ ಸೇರಿದಂತೆ ಮಧ್ಯಾಹ್ನ ಮತ್ತು ಸಂಜೆ ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಾ. 13 ಹಾಗೂ…

Read More

ವಿರಾಜಪೇಟೆ ಮಾ.15 : ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಪ್ರಭಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಎರಡು ರಾಷ್ಟ್ರೀಯ ಪಕ್ಷಗಳಿಗೆ ಪೈಪೋಟಿ ನೀಡಲಿದ್ದೇವೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ.ಮನ್ಸೂರ್ ಆಲಿ ಹೇಳಿದರು. ಜೆಡಿಎಸ್ ಪಕ್ಷದ ವತಿಯಿಂದ ವಿರಾಜಪೇಟೆ ಪುರಭವನದಲ್ಲಿ ಹಮ್ಮಿಕೊಂಡಿದ್ದ “ಮುಂದಿನ ಚುನಾವಣಾ ಪೂರ್ವಭಾವಿ ಸಭೆ’ಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮತದಾರರು ಜೆಡಿಎಸ್ ಪ್ರಾದೇಶಿಕ ಪಕ್ಷದ ಕಡೆ ಒಲವು ತೋರಿದ್ದಾರೆ. ಕಾರ್ಯಕರ್ತರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಚುನಾವಣಾ ಸಂದರ್ಭ ಪಕ್ಷದ ಏಳಿಗೆಗೆ ಕೆಲಸಮಾಡುವ ಮೂಲಕ 2023ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಶ್ರಮ ವಹಿಸಬೇಕು ಎಂದರು. ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, ಮಡಿಕೇರಿ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವು ಖಚಿತ, ವಿರಾಜಪೇಟೆ ಕ್ಷೇತದಲ್ಲ್ರಿ ತ್ರಿಕೋನ ಸ್ಪರ್ದೇ ನಡೆಯಲಿದೆ. ಈ ಹಿಂದೆ ಕುಮಾರ ಸ್ವಾಮಿ ಮುಖ್ಯ ಮಂತ್ರಿಯಾಗಿದ್ದ ಸಂದರ್ಭ ಕೊಡಗಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದರು. ಹಾಗೂ ಅವರ ಜನಪರ…

Read More

ಮಡಿಕೇರಿ ಮಾ.15 : ಮಾ.18 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡಗಿಗೆ ಆಗಮಿಸಿ ಸುಮಾರು 4 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 30 ಕ್ಕೂ ಹೆಚ್ಚು ಉದ್ಘಾಟನಾ ಕಾರ್ಯಕ್ರಮ ಮತ್ತು 15 ಕ್ಕೂ ಹೆಚ್ಚು ಶಂಕುಸ್ಥಾಪನಾ ಕಾರ್ಯಕ್ರಮವನ್ನು ಇದೇ 18 ರಂದು ಮುಖ್ಯಮಂತ್ರಿ ಅವರು ನೆರವೇರಿಸಲಿದ್ದಾರೆ. ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ 73 ಕೋಟಿ ರೂ. ವೆಚ್ಚದ ಕುಡಿಯುವ ನೀರು ಕಾಮಗಾರಿ ಯೋಜನೆಗೆ ಚಾಲನೆ ದೊರೆಯಲಿದೆ ಎಂದರು. ಫಲಾನುಭವಿಗಳ ಸಮ್ಮೇಳನ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಫಲಾನುಭವಿಗಳ ಜೊತೆ ಸಂವಾದ ನಡೆಸುವುದರ ಜೊತೆಗೆ ಸವಲತ್ತು-ಸೌಲಭ್ಯಗಳನ್ನು ವಿತರಿಸಲಿದ್ದಾರೆ ಎಂದರು. ಸರ್ಕಾರದ ಒಂದಲ್ಲ ಒಂದು ಕಾರ್ಯಕ್ರಮಗಳು ಬಡ ಜನರಿಗೆ ತಲುಪಿಸುವಲ್ಲಿ ಶ್ರಮಿಸಲಾಗಿದೆ. ಆ ನಿಟ್ಟಿನಲ್ಲಿ ಫಲಾನುಭವಿಗಳ ಪ್ರತಿಕ್ರಿಯೆಯನ್ನು ಪಡೆಯಲಾಗುತ್ತದೆ ಎಂದರು.

Read More

ಮಡಿಕೇರಿ ಮಾ.15 : ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾ ಗಾಂಧಿ ವೃತ್ತದ ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ರಚಿಸಿ, ಅಡುಗೆ ಅನಿಲದ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಮಹಿಳಾ ಕಾಂಗ್ರೆಸ್ ನ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ್ ಮಾತನಾಡಿ, ಬಡವರ, ಮಹಿಳೆಯರ ಪರ ಕೆಲಸ ಮಾಡಲು ಬಿಜೆಪಿ ಸರ್ಕಾರಕ್ಕೆ ತಾಕತ್ತಿಲ್ಲ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುವ ಇಚ್ಛಾಶಕ್ತಿ ಇಲ್ಲ. ಡಬ್ಬಲ್ ಇಂಜಿನ್ ಸರ್ಕಾರಕ್ಕೆ ಮಾನವೀಯತೆ ಎಂಬುವುದಿದ್ದರೆ ತಕ್ಷಣ ಅಡುಗೆ ಅನಿಲದ ಬೆಲೆ ಮತ್ತು ತೆರಿಗೆ ಹೊರೆಯನ್ನು ಇಳಿಕೆ ಮಾಡಿ ಬಡವರ ಕಷ್ಟಗಳಿಗೆ ಸ್ಪಂದಿಸಲಿ ಎಂದರು. ನಿತ್ಯ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಈ ಬಾರಿಯ ಚುನಾವಣೆಯಲ್ಲಿ ಮತದಾರರು…

Read More

ಮಡಿಕೇರಿ ಮಾ.15 : ಸರ್ಕಾರದ ವಿವಿಧ ಯೋಜನೆಯ ಫಲಾನುಭವಿಗಳ ಸಮ್ಮೇಳನವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಾ.18 ರಂದು ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದ್ದು, ಸಮ್ಮೇಳನದ ಯಶಸ್ಸಿಗೆ ಶ್ರಮಿಸುವಂತೆ ಎಲ್ಲಾ ಹಂತದ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ  ಬಿ.ಸಿ.ನಾಗೇಶ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಸಿದ್ಧತೆ ಸಂಬಂಧಿಸಿದಂತೆ ಮಾಹಿತಿ ಪಡೆದು ಸಚಿವರು ಮಾತನಾಡಿದರು. ಫಲಾನುಭವಿಗಳ ಸಮ್ಮೇಳನವು ಸರ್ಕಾರದ ಕಾರ್ಯಕ್ರಮವಾಗಿದ್ದು, ಮುಖ್ಯಮಂತ್ರಿ ಅವರು ಫಲಾನುಭವಿಗಳ ಜೊತೆ ಸಂವಾದ ನಡೆಸಲಿದ್ದಾರೆ ಎಂದು ಸಚಿವರು ತಿಳಿಸಿದರು. ಫಲಾನುಭವಿಗಳ ಸಮ್ಮೇಳನ ಜೊತೆಗೆ ನಗರದಲ್ಲಿ ನಿರ್ಮಾಣವಾಗಿರುವ ಗಾಂಧಿ ಭವನ, ಗ್ರೇಟರ್ ರಾಜಸೀಟು ಉದ್ಯಾನವನ ಸೇರಿದಂತೆ ಹಲವು ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಬಿ.ಸಿ.ನಾಗೇಶ್ ಅವರು ಹೇಳಿದರು. ಕಾರ್ಯಕ್ರಮ ಸಂಬಂಧ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲಾಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಕಾರ್ಯಕ್ರಮ ಯಶಸ್ಸಿಗೆ ಎಲ್ಲಾ ಹಂತದ ಅಧಿಕಾರಿಗಳು ತೊಡಗಿಸಿಕೊಳ್ಳುವಂತೆ ಸಚಿವರು ನಿರ್ದೇಶನ ನೀಡಿದರು.…

Read More

ಮಡಿಕೇರಿ ಮಾ.15 : ಸಾರ್ವಜನಿಕರಿಗೆ ಸರ್ಕಾರದ ಸೇವೆಗಳನ್ನು ಒಂದೇ ಸೂರಿನಡಿಯಲ್ಲಿ ಎಲ್ಲಾ ಇಲಾಖೆಗಳ ಆಯ್ಕೆ ಸೇವೆಗಳನ್ನು ನಗರ ಸ್ಥಳಿಯ ಸಂಸ್ಥೆಯ ಭಾಗದ ನಾಗರೀಕರಿಗೆ ನೀಡುವ ಸದುದ್ದೇಶದಿಂದ “ಕರ್ನಾಟಕ ಒನ್” ಸೇವಾ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಈ ಕೆಳಕಂಡ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಸೇವಾ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಮಡಿಕೇರಿ ನಗರ ಸಭೆ (1 ಕೇಂದ್ರ), ಕುಶಾಲನಗರ ಪಟ್ಟಣ ಪಂಚಾಯತ್ (2 ಕೇಂದ್ರ), ಸೋಮವಾರಪೇಟೆ ಪಟ್ಟಣ ಪಂಚಾಯತ್ (1 ಕೇಂದ್ರ), ವಿರಾಜಪೇಟೆ ಪಟ್ಟಣ ಪಂಚಾಯತ್ (2 ಕೇಂದ್ರ). ಜಿಲ್ಲೆಯಲ್ಲಿ ಒಟ್ಟು 6 ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ಪ್ರಾಂಚೈಸಿಗಳು https://www.karnatakaone.gov.in/Public/FranchiseeTerms ಲಿಂಕ್‍ನ ಮೂಲಕ ಮಾತ್ರವೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮಾರ್ಚ್, 20 ರ ರಾತ್ರಿ 8 ಗಂಟೆಯವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪ್ರಾಜೆಕ್ಟ್ ಮ್ಯಾನೇಜರ್, ಜಿಲ್ಲಾಧಿಕಾರಿಯವರ ಕಚೇರಿ (ದೂ.ಸಂ.9900385301)…

Read More

ಮಡಿಕೇರಿ ಮಾ.15 : ಲೆಪ್ಟಿನೆಂಟ್ ಜನರಲ್ ಬುಟ್ಟಿಯಂಡ.ಕೆ.ಬೋಪಣ್ಣ ನೇತೃತ್ವದಲ್ಲಿ ನಿವೃತ್ತ 9 ಹಿರಿಯ ಸೇನಾಧಿಕಾರಿಗಳ ತಂಡ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿ, ವೀಕ್ಷಿಸಿದರು. 34 ನ್ಯಾಷನಲ್ ಡಿಫೆನ್ಸ್ ಕಾಲೇಜಿಗೆ ಸೇರಿದ ತಂಡವು ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿ.ಕೆ.ಬೋಪಣ್ಣ, ಪಿವಿಎಸ್ ಎಂ, ಎವಿಎಸ್‍ಎಂ, ವಿಎಸ್‍ಎಂ ನೇತೃತ್ವದಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿ ಅಮರ್ ಜವಾನ್ ಸ್ಮಾರಕಕ್ಕೆ ಪುಪ್ಪ ನಮನ ಸಲ್ಲಿಸಿದರು. ಈ ತಂಡದಲ್ಲಿ ನಿವೃತ್ತರಾದ ಮೇಜರ್ ಜನರಲ್ ಸಿ.ಎಸ್.ಮೇಜರ್ ಜನರಲ್ ಮೋಹನ್ ದಾಸ್, ಮೇಜರ್ ಜನರಲ್ ಎಂ.ಎಂ.ಸಿಂಗ್, ಮೇಜರ್ ಜನರಲ್ ಅಹಲುವಾಲಿಯ, ಮೇಜರ್ ಜನರಲ್ ಕರ್ಲಾ, ಏರ್ ಕಮೋಡರ್ ಪ್ರವೀಣ್ ಭದ್ವಾರ್, ಬ್ರಿಗೇಡಿಯರ್ ಸುರೀಂದರ್ ಸಿಂಗ್, ಬ್ರಿಗೇಡಿಯರ್ ಡಿ.ಕೆ.ಖನ್ನಾ, ಏರ್ ಮಾರ್ಷಲ್ ದಿ.ಬಿಂದ್ರಾ ಅವರ ಪತ್ನಿ ಪಮ್ಮಿ ಬಿಂದ್ರಾ, ಗುಲ್ ಕರ್ಲಾ ಇದ್ದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂ ನ ಅಧ್ಯಕ್ಷರಾದ ಕರ್ನಲ್ ಕಂಡ್ರತಂಡ ಸಿ.ಸುಬ್ಬಯ್ಯ ಅವರು ನಿಯೋಗಕ್ಕೆ ತಿಮ್ಮಯ್ಯ ಸ್ಮಾರಕ…

Read More