ಲೇಖಕ: admin

ಕಡಂಗ ಮಾ.15 :  ಕರಡ ಗ್ರಾಮದ ಶ್ರೀ ಮಲೆತಿರಿಕೆ ದೇವಾಲಯದ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಿದವು. ಪೂಜಾ ಕಾರ್ಯಕ್ರದಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪೆಡದರು. ವರದಿ :  ನೌಫಲ್ ಕಡಂಗ  

Read More

ಮಡಿಕೇರಿ ಮಾ.15 : ಬಿಜೆಪಿ ಸರ್ಕಾರ ಕೆಳಗಿಳಿದರೆ ಮಾತ್ರ ಗಗನಕ್ಕೇರಿರುವ ಅಗತ್ಯ ವಸ್ತುಗಳ ಬೆಲೆ ಇಳಿಕೆಯಾಗಲು ಸಾಧ್ಯವೆಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿಯಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ಬಿಜೆಪಿ ಸರ್ಕಾರ ಬಂದ ನಂತರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆಯಾಗುತ್ತಲೇ ಇದೆ. 410 ರೂ. ಇದ್ದ ಗ್ಯಾಸ್ ಬೆಲೆ ಇಂದು 1200 ರೂ.ಗೆ ತಲುಪಿದೆ. ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳುವ ಬಿಜೆಪಿಗರು ಮೊದಲು ಅಗತ್ಯ ವಸ್ತುಗಳ ಬೆಲೆಯನ್ನು ಇಳಿಕೆ ಮಾಡಿ ಜನಸಾಮಾನ್ಯರ ಪರ ಇದ್ದೇವೆ ಎನ್ನುವುದನ್ನು ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು. ಶೋಭಕ್ಕ, ಮಾಳವಿಕಾ, ಜೊಲ್ಲೆ ಅಕ್ಕ, ತಾರಕ್ಕ ಬಿಜೆಪಿ ಮಹಿಳಾ ಮೋರ್ಚಾದ ಎಲ್ಲಾ ಪದಾಧಿಕಾರಿಗಳೇ ನಿಮ್ಮ ಮನೆಯಲ್ಲಿ ಅಡುಗೆ ಮಾಡಲ್ವಾ, ದರ ಏರಿಕೆ ಬಗ್ಗೆ ನೀವ್ಯಾಕೆ ಮಾತಾನಾಡುತ್ತಿಲ್ಲ…

Read More

ಮಡಿಕೇರಿ ಮಾ.15 : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಮಾ.22 ರಂದು ಯುಗಾದಿ ಹಬ್ಬಾಚರಣೆ ಹಾಗೂ ಏ.10 ರಂದು ದೇವಾಲಯದ ವಾರ್ಷಿಕ ಉತ್ಸವ ನಡೆಯಲಿದೆ. ಮಾ.22 ರಂದು ಯುಗಾದಿ ಹಬ್ಬಾಚರಣೆ ಪ್ರಯುಕ್ತ ಬೆಳಿಗ್ಗೆ 7 ಗಂಟೆಯಿಂದ ವಿಶೇಷ ಪೂಜೆ, ಪಂಚಾಂಗ ಶ್ರವಣ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಂತರ ಅನ್ನಸಂತರ್ಪಣೆ ನೆರವೇರಲಿದೆ. ವಾರ್ಷಿಕ ಉತ್ಸವದ ಪ್ರಯುಕ್ತ ಏ.10 ರಂದು ಬೆಳಿಗ್ಗೆ 7 ಗಂಟೆಗೆ ಮಹಾಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆ ಹಾಗೂ ತೀರ್ಥ ಪ್ರಸಾದ ವಿತರಣೆ ನಡೆಯಲಿದ್ದು, 1 ಗಂಟೆಗೆ ತಕ್ಕಾರ ಮನೆಯಿಂದ ಬಂಡಾತ ತರುವುದು, 1.30 ಗಂಟೆಗೆ ಹಬ್ಬಾಚರಣೆ ನಂತರ ಅನ್ನಸಂತರ್ಪಣೆ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯ ಟ್ರಸ್ಟ್ ನ ಅಧ್ಯಕ್ಷರು, ಸದಸ್ಯರು ಮನವಿ ಮಾಡಿದ್ದಾರೆ.

Read More

ಮಡಿಕೇರಿ ಮಾ.15 : ಧಾರ್ಮಿಕ ನಂಬಿಕೆಯನ್ನು ಅವಹೇಳನ ಮಾಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತದಲ್ಲಿ ಬಿಜೆಪಿ ಹಾಗೂ ಈಶ್ವರಪ್ಪ ಅವರ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯವ್ಯಾಪಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಮಡಿಕೇರಿ ಕ್ಷೇತ್ರದ ಎಸ್‍ಡಿಪಿಐ ಅಭ್ಯರ್ಥಿ ಹಾಗೂ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್ ಮಾತನಾಡಿ ಅಭಿವೃದ್ಧಿ ಪರ ಚಿಂತನೆ ಹರಿಸದ ಬಿಜೆಪಿ ಮಂದಿ ಧಾರ್ಮಿಕ ಭಾವನೆಗಳನ್ನು ಕೆಣಕಿ ರಾಜಕಾರಣ ಮಾಡುತ್ತಿದ್ದಾರೆ. ಪ್ರಸ್ತುತ ಉದ್ಭವಿಸುತ್ತಿರುವ ಹಣದುಬ್ಬರ, ನಿರುದ್ಯೋಗದ ಸಮಸ್ಯೆಗಳ ಬಗ್ಗೆ ಮಾತನಾಡದ ಬಿಜೆಪಿ, ಸಮುದಾಯಗಳ ಭಾವನೆಗೆ ಧಕ್ಕೆಯುಂಟುಮಾಡುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು. ಸಮಾಜದಲ್ಲಿ ಒಡಕು ಮೂಡಿಸಿ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಬಿಜೆಪಿ ಇದೆ. ಆದರೆ ಯಾವುದೇ ಕಾರಣಕ್ಕು ಆ ಪಕ್ಷ…

Read More

ಸುಂಟಿಕೊಪ್ಪ ಮಾ.15: ಅಖಿಲ ಭಾರತ ನಾಗರಿಕ ಸೇವಾ ಫುಟ್ಬಾಲ್ ಪಂದ್ಯಾವಳಿಗೆ ಸುಂಟಿಕೊಪ್ಪ ಪಿಡಿಒ ವೇಣುಗೋಪಾಲ್ ನಾಯಕರಾಗಿ ಆಯ್ಕೆಗೊಂಡಿರುವ ಹಿನ್ನಲೆಯಲ್ಲಿ ಸುಂಟಿಕೊಪ್ಪ ಬ್ಲೂಬಾಯ್ಸ್ ಯೂತ್ ಕ್ಲಬ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಶುಭಹಾರೈಸಲಾಯಿತು. ಸುಂಟಿಕೊಪ್ಪ ಗ್ರಾ.ಪಂ ಆವರಣದಲ್ಲಿ ನಡೆದ ಜೌಪಚಾರಿಕ ಕಾರ್ಯಕ್ರಮದಲ್ಲಿ ವೇಣುಗೋಪಾಲ್ ಅವರನ್ನು ಬ್ಲೂಬಾಯ್ಸ್ ಯೂತ್ ಮಾಜಿ ಅಧ್ಯಕ್ಷ ಹಿರಿಯ ಆಟಗಾರ ಬಿ.ಸಿ.ಸತ್ಯಕುಮಾರ್ ಸನ್ಮಾನಿಸಿದರು. ಇದೇ ಸಂದರ್ಭ ಗ್ರಾ.ಪಂ ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ಹಿರಿಯ ಪತ್ರಕರ್ತ ವಹೀದ್ ಜಾನ್, ಪಿಡಿಓ ಕ್ರೀಡಾಭಿಮಾನ ಮತ್ತು ಸಾಧನೆಯ ಕುರಿತು ಮಾತನಾಡಿ ಶುಭಕೋರಿದರು. ಬ್ಲೂಬಾಯ್ಸ್ ಯೂತ್ ಕ್ಲಬ್ ಅಧ್ಯಕ್ಷ ಆಲಿಕುಟ್ಟಿ, ಗ್ರಾ.ಪಂ ಸದಸ್ಯರಾದ ರಫೀಕ್ ಖಾನ್, ಶಬ್ಬೀರ್, ಹಿರಿಯ ಪತ್ರಕರ್ತ ಮತ್ತು ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮಾಜಿ ಕಾರ್ಯದರ್ಶಿ ಬಿ.ಸಿ.ದಿನೇಶ್, ಪವಿ, ಜೇಮ್ಸ್, ಸಂತೋಷ್, ವಸಂತ, ಮಾಜಿ ಸದಸ್ಯ ಸೋಮಯ್ಯ ಹಾಜರಿದ್ದರು. ಒರಿಸ್ಸಾ ರಾಜ್ಯದ ಭುವನೇಶ್ವರದಲ್ಲಿ ನಡೆಯಲಿರುವ 2022-23ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯ ತಂಡದ ಕ್ಯಾಪ್ಟನ್ ಆಗಿ…

Read More

ಮಡಿಕೇರಿ ಮಾ.15 : ಕಾವೇರಿ ನದಿಯ ಉದ್ಭವ ಕ್ಷೇತ್ರ ತಲಕಾವೇರಿಯ ಕಾವೇರಿ ತೀರ್ಥ ಮತ್ತು ಪ್ರಸಾದವನ್ನು ಇ-ಪ್ರಸಾದ ಪರಿಕಲ್ಪನೆಯಡಿ ಅಂಚೆ ಮೂಲಕ ಭಕ್ತರಿಗೆ ವಿತರಿಸುವ ಆಡಳಿತ ವ್ಯವಸ್ಥೆಯ ಕ್ರಮವನ್ನು ತಲಕಾವೇರಿ ಮೂಲಸ್ವರೂಪ ರಕ್ಷಣಾ ವೇದಿಕೆ ತೀವ್ರವಾಗಿ ವಿರೋಧಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಸಂಚಾಲಕ ಉಳ್ಳಿಯಡ ಎಂ.ಪೂವಯ್ಯ ಅಂಚೆ ಮೂಲಕ ಕಾವೇರಿ ತೀರ್ಥ ವಿತರಣೆ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು. ಮಡಿಕೇರಿಯ ಅಂಚೆ ಕಚೇರಿಯ ಮುಂಭಾಗ ಅಳವಡಿಸಿರುವ ಕಾವೇರಿ ತೀರ್ಥ ಮಾರಾಟದ ಬ್ಯಾನರ್ ನ್ನು ತೆರವುಗೊಳಿಸಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಪ್ರತಿಭಟನೆಯನ್ನು ನಡೆಸುವುದಾಗಿ ಎಚ್ಚರಿಕೆ ನೀಡಿದರು. ತಲಕಾವೇರಿ ಕ್ಷೇತ್ರ ಎನ್ನುವುದು ಇತರ ದೇವ ನೆಲೆಗಳಂತೆ ಅಲ್ಲ. ಕ್ಷೇತ್ರದಲ್ಲಿನ ಬ್ರಹ್ಮಕುಂಡಿಕೆಯಿಂದ ಚಿಲುಮೆಯಾಗಿ ಹರಿದು ಬರುವ ನೀರು ಕಾವೇರಿಯಾಗಿದ್ದು, ಆಕೆಗೆ ಯಾವುದೇ ಸ್ವರೂಪವೂ ಇಲ್ಲ. ಜಲ ರೂಪಿಣಿಯಾದ ಕಾವೇರಿ ಕುಲದೇವತೆಯಾಗಿ ಪೂಜಿಸಲ್ಪಡುತ್ತಾಳೆ. ಇಂತಹ ಕಾವೇರಿಯನ್ನು ತೀರ್ಥ ಪ್ರಸಾದವೆಂದು 300 ರೂ.ಗಳಿಗೆ ಮಾರಾಟ ಮಾಡುವ ಕ್ರಮ ಸರಿಯಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಕೃತಿಯ ನಡುವೆ ಇರುವ…

Read More

ಮಡಿಕೇರಿ ಮಾ.15 : ಜನರಲ್ ಕೆ.ಎಸ್.ತಿಮ್ಮಯ್ಯ ಅವರ 117ನೇ ಜನ್ಮದಿನಾಚರಣೆಯ ಪ್ರಯುಕ್ತ ಮಾ.31 ರಂದು ಜ. ಕೆ.ಎಸ್.ತಿಮ್ಮಯ್ಯ ಅವರ ಪುತ್ಥಳಿ ಹಾಗೂ ನೂತನ ತರಗತಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಏರ್ ಮಾರ್ಷಲ್ ನಂದಾ ಕಾರ್ಯಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ವಹಿಸಲಿದ್ದಾರೆ. ಇದೇ ಸಂದರ್ಭ ಪದ್ಮಶ್ರೀ ಪ್ರಶಸ್ತಿ ವಿಜೇತೆ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ಶಾಲೆಯ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಮಡಿಕೇರಿ ಮಾ.15 : ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಗು ಗೌಡ ಅರೆಭಾಷೆ ಜನಾಂಗ ಬಾಂಧವರಿಗಾಗಿ ವಧು-ವರರ ಸಮಾವೇಶ ಇತ್ತೀಚೆಗೆ ನಡೆಯಿತು. ನಗರದ ಕೊಡಗು ಗೌಡ ವಿದ್ಯಾ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಡಯಟ್ ಕೂಡಿಗೆಯ ನಿವೃತ್ತ ಹಿರಿಯ ಉಪನ್ಯಾಸಕರಾದ ನಾಟೋಲನ ಸಾವಿತ್ರಿ ವಧು ವರರ ಸಮಾವೇಶ ಅರೆಭಾಷೆ ಜನಾಂಗ ಬಾಂಧವರಿಗೆ ಉತ್ತಮ ಸಂಬಂಧಗಳನ್ನು ಬೆಳೆಸಲು ಹೆಚ್ಚು ಸಹಕಾರಿಯಾಗಿದೆ. ಈ ಕಾರ್ಯಕ್ರಮವನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಹೊರದೇಶದಲ್ಲಿ ನೆಲೆಸಿರುವ ಕೊಡಗಿನ ಅರೆಭಾಷೆ ಮಂದಿಗೆ ಇಲ್ಲಿನ ಆಚಾರ ವಿಚಾರಗಳ ಬಗ್ಗೆ ಅರಿವಿರುವುದಿಲ್ಲ. ನಮ್ಮ ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಪ್ರತಿಯೊಬ್ಬರು ಕಟ್ಟುನಿಟ್ಟಾಗಿ ಆಚರಿಸಬೇಕೆಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೋರನ ಸಿ.ವಿಶ್ವನಾಥ ಈ ಬಾರಿ 75 ಕ್ಕೂ ಹೆಚ್ಚಿನ ಆಕಾಂಕ್ಷಿಗಳು ವಧು-ವರರ ಸಮಾವೇಶದಲ್ಲಿ ಪಾಲ್ಗೊಂಡಿರುವುದು ಸಂತಸದ ವಿಚಾರವೆಂದರು. ಪ್ರಮುಖರಾದ ಉಳುವಾರನ ರೋಶನ್ ವಧು-ವರರನ್ನು ವೇದಿಕೆಗೆ ಬರಮಾಡಿಕೊಂಡು ವಿವರಗಳನ್ನು…

Read More

ಶ್ರೀಮಂಗಲ ಮಾ.15 :   ಟಿ.ಶೆಟ್ಟಿಗೇರಿಯ  ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದ ವಾರ್ಷಿಕ ಮಹಾಸಭೆಯು  ಮಾ.20 ರಂದು ಕೊಡವ ಸಮಾಜದ ಅಧ್ಯಕ್ಷ ಚೊಟ್ಟೆಯಾಂಡಮಾಡ ಬೋಸು ವಿಶ್ವನಾಥ್’ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅಂದು ಪೂರ್ವಾಹ್ನ 11 ಗಂಟೆಗೆ ಸರಿಯಾಗಿ ಕೊಡವ ಸಮಾಜದ ಸಭಾಂಗಣದಲ್ಲಿ  ನಡೆಯಲಿರುವ ಸಭೆಯಲ್ಲಿ  2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದ ಸದಸ್ಯರ ಮಕ್ಕಳಿಗೆ, ದಾನಿ ಕೈಬಿಲೀರ ಪಾರ್ವತಿ ಬೋಪಯ್ಯ  ಸ್ಥಾಪಿಸಿದ ದತ್ತಿನಿಧಿ ಬಹುಮಾನ ನೀಡಲಾಗುವುದು. ದತ್ತಿನಿಧಿ ಬಹುಮಾನಕ್ಕೆ ಹಾಗೂ ಠರಾವು ಅರ್ಜಿ ಸಲ್ಲಿಸಲು ಮಾ.18 ಕೊನೆಯ ದಿನವಾಗಿದೆ. ಸಭೆಯಲ್ಲಿ  ದಾನಿಗಳಿಗೆ  ಶಿಕ್ಷಣ ಕ್ಷೇತ್ರ ಹಾಗೂ  ಕ್ರೀಡಾ ಕ್ಷೇತ್ರದಲ್ಲಿ ಚಿನ್ನದ ಪದಕ ಪಡೆದ ಸದಸ್ಯರ ಮಕ್ಕಳಿಗೆ ಸನ್ಮಾನ ಮಾಡಲಾಗುವುದು. ಸರ್ವ ಸದಸ್ಯರು ಸಭೆಗೆ ಹಾಜರಾಗಬೇಕೆಂದು ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದ ಕಾರ್ಯದರ್ಶಿ ಮನ್ನೇರ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಮಾ.15 : ಅಂತರ್ಜಾತಿ ವಿವಾಹವಾಗಿದ್ದ ಯುವತಿಯೊಬ್ಬಳು ಪತಿಯ ಮನೆ ಸೇರಿದ ನಾಲ್ಕೇ ದಿನದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಘಟನೆ ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಗ್ರಾಮದಲ್ಲಿ ನಡೆದಿದೆ. ಹೆಬ್ಬಾಲೆ 6ನೇ ಹೊಸಕೋಟೆ ಗ್ರಾಮದ ನಿವಾಸಿ ರಾಜು ಹಾಗೂ ವನಜಾಕ್ಷಿ ದಂಪತಿ ಪುತ್ರಿ, ಕುಶಾಲನಗರ ಕಾಲೇಜೊಂದರ ವಿದ್ಯಾರ್ಥಿನಿ ಅಕ್ಷಿತ(18) ಎಂಬಾಕೆಯೇ ಮೃತಪಟ್ಟ ದುರ್ದೈವಿಯಾಗಿದ್ದಾಳೆ. ಈ ಘಟನೆ ಕುರಿತು ಸಂಶಯ ವ್ಯಕ್ತಪಡಿಸಿರುವ ಮೃತ ಯುವತಿಯ ಪೋಷಕರು ಕೊಲೆ ಆರೋಪದ ದೂರು ನೀಡಿದ್ದಾರೆ. ಮಾ.10 ರಂದು ಬ್ಯಾಂಕ್ ಗೆ ಹೋಗಿ ಬರುವುದಾಗಿ ಮನೆಯಿಂದ ತೆರಳಿದ್ದ ಅಕ್ಷಿತ ಮಧ್ಯಾಹ್ನದ ವೇಳೆಗೆ ಅಂತರ್ಜಾತಿ ವಿವಾಹವಾಗಿ ಅದೇ ಗ್ರಾಮದ ಹೇಮಂತ್ ನ ಮನೆ ಸೇರಿದ್ದಳು ಎಂದು ಹೇಳಲಾಗಿದೆ. ಮಾ.14 ರಂದು ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರು ಜೀವ ಉಳಿಯಲಿಲ್ಲ. ಈ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Read More