ಲೇಖಕ: admin

ಮಡಿಕೇರಿ ಮಾ.14 : ಇತ್ತೀಚೆಗೆ ಗೋಣಿಕೊಪ್ಪಲಿನಲ್ಲಿ ನಡೆದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾವೇಶದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾ ಘಟಕ ದೂರು ನೀಡಿದೆ. ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈಶ್ವರಪ್ಪ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಒಂದು ಸಮುದಾಯದ ಧಾರ್ಮಿಕ ಆಚರಣೆ ಕುರಿತು ಅವಹೇಳನಕಾರಿ ಭಾಷಣ ಮಾಡುವ ಮೂಲಕ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಕೀಳು ಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದರು. ಮತ್ತೊಂದೆಡೆ ವಿಜಯ ಸಂಕಲ್ಪ ಯಾತ್ರೆಯ ಸಂದರ್ಭ ಬಿಜೆಪಿ ಕಟೌಟ್ ಗಳನ್ನು ಅಳವಡಿವಾಗ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಪ್ರಕರಣದ ಬಗ್ಗೆಯೂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Read More

ಮಡಿಕೇರಿ ಮಾ.14 : ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 35 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧ ಅಧಿಸೂಚನೆ ಹೊರಡಿಸಿ, ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿ, ಮೆರಿಟ್ ಹಾಗೂ ವರ್ಗವಾರು ಮೀಸಲಾತಿ ಆಧಾರದಲ್ಲಿ 1:5 ರ ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಿ, ತಾತ್ಕಾಲಿಕ ಪರಿಶೀಲನಾ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲಕ ದಾಖಲಾತಿಗಳನ್ನು ವಿವಿಧ ದಿನಾಂಕಗಳಂದು ಪರಿಶೀಲನೆ ನಡೆಸಿ, ದಾಖಲಾತಿ ಪರಿಶೀಲನೆಗೆ ಹಾಜರಾದ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ ಮತ್ತು ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. ಅಂತಿಮ ಆಯ್ಕೆ ಪಟ್ಟಿಯಂತೆ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಮತ್ತು ಅಂತಿಮ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾದ ಕೆಲವು ಅಭ್ಯರ್ಥಿಗಳು ಗೈರುಹಾಜರಾದ ಕಾರಣ ಹೆಚ್ಚುವರಿ ಆಯ್ಕೆಪಟ್ಟಿಯ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪಡೆದು ಸಂಬಂಧಪಟ್ಟ ಪ್ರಾಧಿಕಾರದಿಂದ ನೈಜತೆಯ ಬಗ್ಗೆ ದೃಢೀಕರಣ ಪಡೆಯಲಾಗಿದೆ. ಆದ್ದರಿಂದ ಅಂತಿಮ ಆಯ್ಕೆಪಟ್ಟಿ ಮತ್ತು ಹೆಚ್ಚುವರಿ ಆಯ್ಕೆಪಟ್ಟಿಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳ…

Read More

ಮಡಿಕೇರಿ ಮಾ.14 : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. ವನ್ನು ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಜಿಲ್ಲೆಯ ಸುಮಾರು 49,582 ರೈತರು ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿದೆ. ಈ ಯೋಜನೆಯ ನೆರವು ಆರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿದೆ. e-ಏಙಅ ಮಾಡಿಕೊಂಡ ರೈತರಿಗೆ ಮಾತ್ರ ಮುಂದಿನ ಕಂತು ಬಿಡುಗಡೆ ಮಾಡಲಾಗುವುದು. ರೈತರು http://pmkisan.gov.in ಪೋರ್ಟಲ್‌ ನ Farmers Corner ನ e-KYC ಅವಕಾಶದಡಿ ರೈತನ (ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್ ಗೆ OTP ಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ OTP ಯನ್ನು ಪೋರ್ಟಲ್‌ನಲ್ಲಿ ದಾಖಲಿಸಿ “SUBMIT FOR AUTH”ಎಂಬ ಬಟನ್…

Read More

ಮಡಿಕೇರಿ ಮಾ.14 : ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವೇದಿಕೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆಯು ‘ಶುದ್ಧ ಶಕ್ತಿ ಪರಿವರ್ತನೆ’ ಮಾ.15 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ರೇಣುಕಾಂಭ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣ್ಣಿ, ಕುಶಾಲನಗರ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಅಧ್ಯಕ್ಷರಾದ ಎ.ಎ.ಚಂಗಪ್ಪ, ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕಾಳೇಗೌಡ, ವಕೀಲರಾದ ನಿರಂಜನ್ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಮಾ.14 : ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಆನೆಹಳ್ಳದಿಂದ ದಬ್ಬಡ್ಕದ ವರೆಗಿನ ರಸ್ತೆ ಕಾಮಗಾರಿ ನಡೆಯುತ್ತಿದೆ. ಆದರೆ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ವಿನಾಕಾರಣ ಕಾಮಗಾರಿ ಬಗ್ಗೆ ಅಪಪ್ರಚಾರ ಮಾಡುತ್ತಿದೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು ರಸ್ತೆ ಕಾಮಗಾರಿ ನಡೆಸುವ ಸಂದರ್ಭ ಗ್ರಾಮಸ್ಥರು ಹಾಗೂ ಸ್ಥಳೀಯ ಯುವಕರು ಸ್ಥಳದಲ್ಲೇ ಹಾಜರಿದ್ದು, ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಂಡಿದ್ದಾರೆ. ಹೀಗಿದ್ದರೂ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಯ ಗುಣಮಟ್ಟದ ಕುರಿತಂತೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವುದು ಹಾಸ್ಯಸ್ಪದ ಎಂದರು. ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ನವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದೊಂದು ಚುನಾವಣಾ ಗಿಮಿಕ್ ಅಷ್ಟೆ, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಯಾರನ್ನೋ ಮೆಚ್ಚಿಸುವ ಸಲುವಾಗಿ ದುರುದ್ದೇಶಪೂರಿತವಾಗಿ ಕಾಮಗಾರಿ ಬಗ್ಗೆ ಆರೋಪ ಮಾಡಲಾಗುತ್ತಿದೆ. ತಪ್ಪುಗಳಾದಾಗ ಅವುಗಳನ್ನು ಸರಿಪಡಿಸಿಕೊಳ್ಳಬಹುದು, ಆದರೆ ಪ್ರಚಾರಕ್ಕಾಗಿ ಈ ರೀತಿ ಮಾಡುವುದು ಸಣ್ಣತನದ ಪ್ರವೃತ್ತಿ ಎಂದು…

Read More

ಮಡಿಕೇರಿ ಮಾ.14 : ಮಂಗಳೂರು ವಿಶ್ವ ವಿದ್ಯಾನಿಲಯವು ಪದವಿ ವಿಭಾಗದ ರ‍್ಯಾಂಕ್ ಪಟ್ಟಿ ಪ್ರಕಟಿಸಿದ್ದು, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಬಿ.ಎ (ಎಚ್‌ಆರ್‌ಡಿ) ವಿಭಾಗದ ವಿದ್ಯಾರ್ಥಿ ಬ್ರೈಟನ್ ಮ್ಯಾಥ್ಯೂ 2022 ನೇ ಸಾಲಿನ ಬಿ.ಎ (ಎಚ್‌ಆರ್‌ಡಿ) ಪರೀಕ್ಷೆಗಳಲ್ಲಿ ತೃತೀಯ ರ್ಯಾಂಕ್ ಪಡೆದಿದ್ದಾರೆ. ಇವರು 6 ಸೆಮಿಸ್ಟರ್‍ಗಳಲ್ಲಿ ಒಟ್ಟು 3500 ಅಂಕಗಳಲ್ಲಿ 2648 ಅಂಕಗಳನ್ನು ಗಳಿಸಿ 75.65 ಅಂಕಗಳೊಂದಿಗೆ ಈ ಸಾಧನೆ ಮಾಡಿದ್ದಾರೆ. ಇವರು ಮಡಿಕೇರಿ ಮಂಗಳಾದೇವಿ ನಗರದ ನಿವಾಸಿಯಾದ ನಿವೃತ್ತ ಯೋಧ ಹಾಗೂ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪೋಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಮ್ಯಾಥ್ಯೂ ಕೆ.ಪಿ. ಹಾಗೂ ಫಿಲೋಮಿನಾ ಇವರ ಪುತ್ರನಾಗಿದ್ದು, ಪ್ರಸ್ತುತ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂ.ಎ ಇಂಗ್ಲೀಷ್ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹಾಗೆಯೇ ಕಾಲೇಜಿನ ಎಂ.ಎ ಇಂಗ್ಲೀಷ್ ವಿಭಾಗದ ವಿದ್ಯಾರ್ಥಿಗಳಾದ ಸುಬ್ರಮಣಿ ಸಿ.ಎ ಹಾಗೂ ಕಾವೇರಮ್ಮ ಕೆ.ಜೆ ಇವರುಗಳು ಶೈಕ್ಷಣಿಕ ವರ್ಷ 2020-21 ಮತ್ತು 2021-22 ನೇ ಸಾಲಿನಲ್ಲಿ ನಡೆದ ಸ್ನಾತಕೋತ್ತರ ಇಂಗ್ಲೀಷ್ ಪರೀಕ್ಷೆಯಲ್ಲಿ ತೃತೀಯ ಸೆಮಿಸ್ಟರ್‍ನ ಸಾಹಿತ್ಯ ವಿಮರ್ಶೆ-1 ಹಾಗೂ…

Read More

ಮಡಿಕೇರಿ ಮಾ.14 ; ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಥಮ ಬಿಬಿಎ ವಿದ್ಯಾರ್ಥಿಯಾದ ಮಹಮ್ಮದ್ ಶಾಹಿಲ್ ಕೆ.ಯು. ಅವರು ಮಹಾರಾಷ್ಟ್ರದ ಜವಹಾರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ 2023 ರ ಮಾರ್ಚ್, 3 ರಿಂದ 5 ರವರೆಗೆ ನಡೆದ ಅಂತರ ರಾಷ್ಟ್ರೀಯ ಮಟ್ಟದ ಭಾರತ ಮತ್ತು ಬಾಂಗ್ಲಾದೇಶದ ಸೆಸ್ಟೋಬಾಲ್ ಟೂರ್ನಿಯಲ್ಲಿ ಭಾರತ ತಂಡದ ನಾಯಕತ್ವವನ್ನು ವಹಿಸಿದ್ದರು. ಭಾರತ ಮತ್ತು ಬಾಂಗ್ಲಾದೇಶಗಳ ನಡುವೆ ನಡೆದ ಮೂರು ಸರಣಿ ಪಂದ್ಯಾಟದಲ್ಲಿ 3-0 ಜಯಗಳಿಸುವ ಮೂಲಕ ಪಂದ್ಯದ ಉತ್ತಮ ಶೂಟರ್ ಪ್ರಶಸ್ತಿ ಪಡೆದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆಯುವ ಮೂಲಕ ಕಾಲೇಜಿಗೆ ಹಿರಿಮೆ ತಂದಿದ್ದಾರೆ ಎಂದು ಫಿ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

Read More

ಕಡಂಗ ಮಾ.14 : ಕರ್ನಾಟಕ ಮುಸ್ಲಿಂ ಜಮಾಅತ್ ಹಾಗೂ ಸುನ್ನೀ ಯುವಜನ ಸಂಘ (ಎಸ್ ವೈ ಎಸ್)ನ ವಾರ್ಷಿಕ ಮಹಾ ಸಭೆಯು  ಕಡಂಗ ಬದ್ರಿಯಾ ಮದರಸ ಸಭಾಂಗಣದಲ್ಲಿ ನಡೆಯಿತು. ಸಿ.ಎಂ.ಸುಲೈಮಾನ್  ಅಧ್ಯಕ್ಷತೆಯಲ್ಲಿ ಸಭೆಯನ್ನು ಸ್ಥಳೀಯ ಮಸೀದಿ ಖತೀಬ್ ಶಹಜಹಾನ್ ಶಾಖಾಫಿ  ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ವಿರಾಜಪೇಟೆ ಸೆಂಟರ್ ನ ಅಹ್ಮದ್ ಮದನಿ, ಸಂಘಟನೆ ನಡೆದು ಬಂದ ಹಾದಿ ಹಾಗೂ ಸಂಘಟನೆಯ ದ್ಯೇಯೋದ್ದೇಶ , ಸಂಘಟನೆ ನಡೆಸಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ  ವಿವರಿಸಿದರು. ಕಳೆದ ಸಾಲಿನ ವರದಿಯನ್ನು ಪ್ರಧಾನ ಕಾರ್ಯದರ್ಶಿ ಸಿ.ಎ.ಅಶ್ರಫ್ ಮಂಡಿಸಿದರು. ಅಬ್ದುಲ್ ಸಲಾಂ ಸಾರ್ವರನ್ನು ಸ್ವಾಗತಿಸಿದರು.  ಕರ್ನಾಟಕ ಮುಸ್ಲಿಂ ಜಮಾಅತ್ ನ ನೂತನ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಲಾಂ ವಂದಿಸಿದರು. :: ನೂತನ ಆಡಳಿತ ಮಂಡಳಿ :: ಕರ್ನಾಟಕ ಮುಸ್ಲಿಂ ಜಮಾಅತ್ ಹಾಗೂ ಎಸ್ ವೈ ಎಸ್ ಕಡಂಗ ಶಾಖೆಗೆ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು. ಕರ್ನಾಟಕ ಮುಸ್ಲಿಂ ಜಮಾಅತ್ ನೂತನ  ಅಧ್ಯಕ್ಷರಾಗಿ ಸಿ.ಎಂ.ಸುಲೈಮಾನ್,  ಪ್ರಧಾನ ಕಾರ್ಯದರ್ಶಿಯಾಗಿ ಯು.ಎ.ಅಬ್ದುಲ್…

Read More

ಮಡಿಕೇರಿ ಮಾ.14 : ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ವಿವಿಧ ಮನೆಗಳಿಗೆ ಗ್ಯಾರಂಟಿ ಕಾರ್ಡ್ ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಗ್ಯಾರಂಟಿ ಕಾರ್ಡ್‍ನಲ್ಲಿ ನೀಡಿರುವ ಭರವಸೆಗಳು ಈಡೇರಲಿವೆ ಎಂದರು. ಪಕ್ಷದ ನಾಯಕರು ಉತ್ತಮ ಯೋಜನೆಯನ್ನು ರೂಪಿಸಿದ್ದು, ಮತದಾರರು ಈ ಬಾರಿ ಕಾಂಗ್ರೆಸ್ ನ್ನು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಬೆಲೆ ಏರಿಕೆಯ ಬಿಜೆಪಿಯಿಂದ ಜನರು ಬೇಸತ್ತಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್ ನಗರಾಧ್ಯಕ್ಷ ಬಿ.ವೈ.ರಾಜೇಶ್ ಅವರ ನೇತೃತ್ವದಲ್ಲಿ ನಡೆದ ಗ್ಯಾರಂಟಿ ಕಾರ್ಡ್ ಅಭಿಯಾನದಲ್ಲಿ ಮಡಿಕೇರಿ ನಗರದ ಬೂತ್ ಸಂಖ್ಯೆ 201, 209 ಮತ್ತು 219ರಲ್ಲಿ ಕಾರ್ಡ್ ವಿತರಿಸಲಾಯಿತು. ಕಾಂಗ್ರೆಸ್ ನ ಮೊದಲ ಗ್ಯಾರಂಟಿ ಕಾರ್ಡ್ “ಗೃಹಜ್ಯೋತಿ” ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆ, 2ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ 2 ಸಾವಿರ ರೂ.…

Read More

ವಿರಾಜಪೇಟೆ ಮಾ.14 : ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ವಿರಾಜಪೇಟೆ ತಾಲೂಕಿನ ಬೆಳ್ಳುಮಾಡು ಕುಂಜಿಗೇರಿ ಗ್ರಾಮದ ದೇವರ ಕಾಡಿನಲ್ಲಿ ನೆಲೆ ನಿಂತಿರುವ ಆಡುಕೋಣಿ ಶ್ರೀ ಶಾಸ್ತಾವು (ಈಶ್ವರ) ಮತ್ತು ಶ್ರೀ ವಿಷ್ಣುಮೂರ್ತಿ ದೇವರು ಪುನರ್ ಪ್ರತಿಷ್ಠಾಪನೆಗೊಂಡು ಲೋಕಾರ್ಪಣೆ ಗೊಳಿಸಲಾಯಿತು. ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಪ್ರಜ್ವಲ್ ಕುದ್ದಣ್ಣಯ್ಯ ನೇತೃತ್ವದಲ್ಲಿ ಪ್ರಭಾಕರ ಕುದ್ದಣ್ಣಯ, ಪ್ರಾಣಮ್ ಕುದ್ದಣ್ಣಯ ಮತ್ತು ವೆಂಕಟರಮಣ ಭಟ್ ಹಾಗೂ ದೇವಾಲಯದ ವಾಸ್ತುಶಿಲ್ಪಿ ಜಗನ್ನಿವಾಸ್ ರಾವ್ ಸಾನಿಧ್ಯದಲ್ಲಿ ಮೂರು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ಮಾ.11 ರಂದು ಸಾಮೂಹಿಕ ಪಾರ್ಥನೆ, ಆಚಾರ್ಯವರ್ಣ, ಆಲಯ ಪರಿಗ್ರಹ, ಬಿಂಬ ಪರಿಗ್ರಹ, ಸ್ವಸ್ತಿ ಪುಣ್ಯಾಹ ವಾಚನ, ಖನನಾದಿ ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ಕಲಶ ಪೂಜೆ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಾಸ್ತು ಬಲಿ ನೂತನ ಬಿಂಬ ಜಲಾಧಿವಾಸ, ವಾಸ್ತು ಕಲಶಾಭಿಷೇಕ ನೆರವೇರಿತು. ಮಾ.12 ರಂದು ಮಾಹಾಗಣಪತಿ ಹೋಮ, ಪ್ರಾಯಶ್ಚಿತ ಹೋಮ, ಶಯ್ಯಾ ಮಂಟಪ ಪೂಜೆ, ಅನುಜ್ಞಾ ಕಲಶಾಭಿಷೇಕ, ಜೀವೋದ್ವಾಸನ…

Read More