ಲೇಖಕ: admin

ನಾಪೋಕ್ಲು ಮಾ.14 : ಹಳೇ ತಾಲೂಕಿನ ಮನೆಯೊಂದರ ಪಕ್ಕದಲ್ಲಿರುವ ಕಾಫಿಗಿಡದಲ್ಲಿದ್ದ  ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರುಗ ತಜ್ಞ ಮೂರ್ನಾಡಿನ ಪ್ರಜ್ವಲ್ ಕುಮಾರ್ ಸುರಕ್ಷಿತವಾಗಿ ಸೆರೆ ಹಿಡಿದು ರಕ್ಷಣೆ ಮಾಡಿದ್ದಾರೆ. ಹಳೇ ತಾಲೂಕು ನಿವಾಸಿ ಕುಂದೈರೀರ ಸತೀಶ್ ಎಂಬುವವರ ಮನೆಯ ಪಕ್ಕದಲ್ಲಿರುವ ತೋಟದ ಕಾಫಿಗಿಡದ ಮೇಲಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅಸ್ಸಾಂ ಕಾರ್ಮಿಕರು ಕಂಡು ಸತೀಶ್ ಅವರಿಗೆ ತಿಳಿಸಿದ್ದಾರೆ. ಹಾವನ್ನು ವೀಕ್ಷಿಸಿದ ಮನೆಯವರು ಭಯಭೀತರಾಗಿ ಉರಗ ತಜ್ಞ ಪ್ರಜ್ವಲ್ ಅವರಿಗೆ ಮಾಹಿತಿನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪ್ರಜ್ವಲ್ ಹಾಗೂ ಸ್ನೇಹಿತರು ಹರಸಾಹಸದಿಂದ ಕಾಫಿಗಿಡದ ಮೇಲಿದ್ದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾದರು. ಹಾವನ್ನು ಮಾಕುಟ್ಟ ಅರಣ್ಯಕ್ಕೆ ಬಿಡಲಾಗುವುದೆಂದು ಪ್ರಜ್ವಲ್ ತಿಳಿಸಿದರು. ಅಪಾರ ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿರುವ ಬಗ್ಗೆ ಮಾಹಿತಿ ತಿಳಿದ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದರು. ಈ ಸಂದರ್ಭ ಪ್ರಜ್ವಲ್ ಸ್ನೇಹಿತರಾದ ಪುನೀತ್, ಶ್ರೇಯಸ್, ಶಮಂತ್, ಭಾರದ್ವಾಜ್ ಹಾಗೂ ಗ್ರಾಮಸ್ಥರು ಹಾಜರಿದ್ದರು. ನಾಪೋಕ್ಲು…

Read More

ಸುಂಟಿಕೊಪ್ಪ ಮಾ.14 : ಸಾರಿಗೆ ಇಲಾಖೆ ವತಿಯಿಂದ ಸುಂಟಿಕೊಪ್ಪದ ಆಟೋ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯ ಬಗ್ಗೆ ಮಾಹಿತಿ ನೀಡಲಾಯಿತು. ಸುಂಟಿಕೊಪ್ಪದ ಆಟೋ ಚಾಲಕರ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಎಂ.ಮಧುರ ಮಾತನಾಡಿ, ಆಟೋರಿಕ್ಷಾ, ಕ್ಯಾಬ್ ಚಾಲಕರು ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಮೆಟ್ರಿಕ್ ನಂತರ ಉನ್ನತ ವಿದ್ಯಾಭ್ಯಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಸಿಗುವ ಉಚಿತ ವಿದ್ಯಾನಿಧಿ ಯೋಜನೆ ಮಾಹಿತಿ ನೀಡಿದರು. ಸರ್ಕಾರ ಚಾಲಕರ ಮಕ್ಕಳಿಗೆ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಚಾಲಕರು ತಮ್ಮ ಡ್ರೈವಿಂಗ್ ಲೈಸನ್ಸ್ ಜೊತೆ ಆಧರ್ ಸಂಖ್ಯೆಯೊಂದಿಗೆ ಆನ್ಲೈನ್ ಮುಖಾಂತರ ಸೇವಾಸಿಂಧು ವೆಬ್ ಪೋರ್ಟಲ್‍ನಲ್ಲಿ ಸುಂಟಿಕೊಪ್ಪ ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಿದರೆ ಆಧಾರ್ ಜೋಡಿತ ನಿಮ್ಮ ಬ್ಯಾಂಕ್ ಖಾತೆಗಳಿಗೆ ನೇರವಾಗಿ ನಗದು ವರ್ಗಾವಣೆ ಆಗುತ್ತದೆ ಎಂದು ತಿಳಿಸಿದರು. ಇದೇ ಸಂದರ್ಭ ವಾಹನ ಚಾಲಕರಿಗೆ ತಮ್ಮ ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳ ಬಗ್ಗೆ ಕಿವಿಮಾತು ಹೇಳಿದ ಅವರು, ವಾಹನ ಚಾಲಕರು ಚಾಲನಾ ಅನುಮತಿ ಪತ್ರ…

Read More

ಕುಶಾಲನಗರ ಮಾ.14 :  ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿ  ಶ್ರೀ ಉಮಾಮಹೇಶ್ವರ ಸ್ವಾಮಿಯ ಮಹಾ ರಥೋತ್ಸವ ವೈಭವಯುತವಾಗಿ ನಡೆಯಿತು. ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವದಲ್ಲಿ ನೂರಾರು ಭಕ್ತರು ಭಾಗಿಯಾಗಿ ತೇರನ್ನು ಎಳೆಯುವ ಮೂಲಕ ದೇವರ ಕೃಪೆಗೆ ಪಾತ್ರರಾದರು.  ಪುಷ್ಪ ಹಾಗೂ ವಿವಿಧ ಧ್ವಜಗಳಿಂದ ಅಲಂಕೃತ ಗೊಂಡಿದ್ದ ತೇರಿನಲ್ಲಿ ಉಮಾಮಹೇಶ್ವರ ದೇವರ ವಿಗ್ರಹ ಪ್ರತಿಷ್ಠಾಪಿಸಲಾಯಿತು. ದೇವಾಲಯದ ಅರ್ಚಕ ಸಚ್ಚಿನ್ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಮಹಾಮಂಗಳಾರತಿ ಬಳಿಕ ಮಧ್ಯಾಹ್ನ 1.00 ಗಂಟೆ ವೇಳೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಬಾಲಕನ ವೀರಗಾಸೆ ನೃತ್ಯ ಕಲಾ ಪ್ರದರ್ಶನ ರಥೋತ್ಸವಕ್ಕೆ ಮೆರುಗು ನೀಡಿತು. ಮೆರಣಿಗೆಯುದ್ದಕ್ಕೂ ರಥಕ್ಕೆ ಈಡುಗಾಯಿಯೊಂದಿಗೆ ಹೂ, ಬಾಳೆಹಣ್ಣನ್ನು ಎಸೆದು ಭಕ್ತಿ ಮೆರೆದರು. ರಥೋತ್ಸವದಲ್ಲಿ ಹಾಸನ, ಮೈಸೂರು ಜಿಲ್ಲೆಗಳ ಗಡಿಗ್ರಾಮದ ಜನರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ನೂರಾರು ಜನರು ಪಾಲ್ಗೊಂಡಿದ್ದರು. ರಥೋತ್ಸವವು ಮಂಗಳವಾದ್ಯ ದೊಂದಿಗೆ ಗ್ರಾಮದಲ್ಲಿ ಸಂಚರಿಸಿ ನಂತರ ತೇರು ಊರಿನ ಸಂತೆಮಾಳದ ಬಳಿ ಸಮಾಪನ ಗೊಂಡಿತು. ಹೊಳೆಗುಡಿ ಜಾತ್ರೆ ಎಂದೇ ಪ್ರಸಿದ್ಧಿಯಾಗಿರುವ…

Read More

ನಾಪೋಕ್ಲು ಮಾ.14 : ನಾಪೋಕ್ಲು ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ಅಣುಕು ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ನಾಪೋಕ್ಲು ಸಂತೆ ಮಾರುಕಟ್ಟೆಯಲ್ಲಿ ಚುನಾವಣಾ ಸೆಕ್ಟರ್ ಅಧಿಕಾರಿಗಳಾದ ಮುರುಗೇಶ್ ಮತ್ತು ಪ್ರಮೋದ್ ನೇತೃತ್ವದಲ್ಲಿ ಇವಿಯಂ ಮತಯಂತ್ರದ ಬಳಕೆ ಮತ್ತು ಮತದಾನ ಮಾಡುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಹಲವಾರು ಸಂಖ್ಯೆಯಲ್ಲಿ ಸಾರ್ವಜನಿಕರು  ಮತ ಚಲಾಯಿಸಿದರು. ಈ ಸಂದರ್ಭ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾ.ಪಂ  ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಕಂದಾಯ ಇಲಾಖೆಯ ಸಿಬ್ಬಂದಿಗಳಾದ ಪ್ರಸಾದ್, ಲಾಲು, ಸ್ಥಳೀಯರಾದ ಅಹಮದ್ ಸಿ.ಎಚ್.ಮಹಮ್ಮದ್, ಗಣೇಶ್, ಪ್ರಕಾಶ್ ಮತ್ತಿತರರು ಹಾಜರಿದ್ದರು. ವರದಿ :ಝಕರಿಯ ನಾಪೋಕ್ಲು 

Read More

ಸುಂಟಿಕೊಪ್ಪ ಮಾ.13 : ಒರಿಸ್ಸಾ ರಾಜ್ಯದ ಭುವನೇಶ್ವರದಲ್ಲಿ ನಡೆಯಲಿರುವ 2022-23ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಫುಟ್ ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡದ ಕ್ಯಾಪ್ಟನ್ ಆಗಿ ಸುಂಟಿಕೊಪ್ಪ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಿ. ಹೆಚ್. ವೇಣುಗೋಪಾಲ್ ಅವರು ಆಯ್ಕೆಯಾಗಿದ್ದಾರೆ.  ತಾ. 18 ರಿಂದ 23ರ ವರೆಗೆ ಒರಿಸ್ಸಾ ರಾಜ್ಯದ ಭುವನೇಶ್ವರದಲ್ಲಿರುವ ಕಳಿಂಗ ಸ್ಟೇಡಿಯಂ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ರಾಷ್ಟ್ರಮಟ್ಟದ ನಾಗರಿಕ ಸೇವಾ ಫುಟ್ ಬಾಲ್ ಪಂದ್ಯಾಟ ನಡೆಯಲಿದ್ದು  ವೇಣುಗೋಪಾಲ್ ಅವರು 20 ಮಂದಿ ಫುಟ್ ಬಾಲ್ ಆಟಗಾರರನ್ನು ಒಳಗೊಂಡ ಕರ್ನಾಟಕ ರಾಜ್ಯದ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ವರ್ಷ ನವದೆಹಲಿಯಲ್ಲಿ ನಡೆದ ಅಖಿಲ ಭಾರತ ನಾಗರಿಕ ಸೇವಾ ಫುಟ್ ಬಾಲ್ ಪಂದ್ಯಾಟದಲ್ಲಿಯೂ ಕೂಡ ಮೂಲತಃ ಸೋಮವಾರಪೇಟೆ ತಾಲೂಕಿನ ಬೀಟಿಕಟ್ಟೆಯವರಾಗಿರುವ ವೇಣುಗೋಪಾಲ್ ಅವರು ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿ ಮೆಚ್ಚುಗೆಗೆ ಪಾತ್ರರಾಗಿದ್ದರು.

Read More

ಮಡಿಕೇರಿ ಮಾ.13 : ರಾಜ್ಯಾದ್ಯಂತ ಬಿಜೆಪಿ ಯುವಮೋರ್ಚಾದ ವತಿಯಿಂದ ನಡೆಯುತ್ತಿರುವ ಪ್ರಗತಿ ರಥ ಯಾತ್ರೆಯ 2 ವಾಹನಗಳು  ಈಗಾಗಲೇ ಕೊಡಗಿನಲ್ಲಿ ಸಂಚರಿಸುತ್ತಿದ್ದು, ಮಾರ್ಚ್ 14 ರ ಮಂಗಳವಾರ ದಿಂದ ಮಡಿಕೇರಿ ಗ್ರಾಮಾಂತರ ಮಂಡಲದ ಎಲ್ಲಾ ಗ್ರಾಮಗಳಲ್ಲಿ ಸುಮಾರು 9 ರಿಂದ 10 ದಿನಗಳವರೆಗೆ ಸಂಚರಿಸಲಿದೆ ಎಂದು ಪ್ರಗತಿ ರಥ ಯಾತ್ರೆ   ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸಹಪ್ರಭಾರಿ ಮತ್ತು ಮಡಿಕೇರಿ ಗ್ರಾಮಾಂತರ ಮಂಡಲ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಚೇತನ್ ಬಂಗೇರ ಪತ್ರಿಕಾ ಪ್ರಕಣೆಯಲ್ಲಿ ತಿಳಿಸಿದ್ದಾರೆ.       ಫೆಬ್ರವರಿ 27ರಿಂದ ಕೊಡಗಿನಲ್ಲಿ ಆರಂಭವಾಗಿರುವ ಪ್ರಗತಿ ರಥಯಾತ್ರೆಯ 1 ವಾಹನ ಸೋಮವಾರಪೇಟೆ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದು, ಇನ್ನೊಂದು ವಾಹನ ಈಗಾಗಲೇ ವಿರಾಜಪೇಟೆ ಮತ್ತು ಗೋಣಿಕೊಪ್ಪ ತಾಲ್ಲೂಕಿನಾದ್ಯಂತ ಸಂಚರಿಸಿ ಮಡಿಕೇರಿ ಗ್ರಾಮಂತರ ಪ್ರದೇಶಗಳಿಗೆ ಹೊರಡಲು  ಸಿದ್ದವಾಗಿದೆ.  ಮಾರ್ಚ್ 14 ರಿಂದ ಆರಂಭವಾಗಿ ಮಾರ್ಚ್ 22ರ ವರೆಗೆ  ಮಡಿಕೇರಿ ಗ್ರಾಮಾಂತರ ಮಂಡಲಕ್ಕೆ ಒಳಪಡುವ ಒಟ್ಟು 25 ಗ್ರಾಮ ಪಂಚಾಯತ್ (ಶಕ್ತಿಕೇಂದ್ರ) ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಅಂದರೆ ಪೆರಾಜೆ ಯಿಂದ…

Read More

ಮಡಿಕೇರಿ ಮಾ.13 : ಎರಡು ರಾಷ್ಟ್ರೀಯ ಪಕ್ಷಗಳು ಮತದಾರರನ್ನು ಓಲೈಸುವ ಕೆಲಸ ಮಾಡುತ್ತಿದ್ದು, ಚುನಾವಣೆಯ ನೀತಿ ನಿಯಮಗಳನ್ನು ಗಾಳಿಗೆ ತೂರಿ ಮತದಾರರನ್ನು ಭ್ರಷ್ಟರನ್ನಾಗಿಸುವ ಕೆಲಸ ಮಾಡುತ್ತಿವೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳಿಗೆ ತಮ್ಮ ಸಾಧನೆಗಳನ್ನು ಹೇಳಿಕೊಂಡು ಜನರ ಮುಂದೆ ಹೋಗಲು ಅಜೆಂಡಾಗಳಿಲ್ಲ. ಓಟ್ ಬ್ಯಾಂಕ್‌ಗಾಗಿ ಚುನಾವಣೆಯ ನೀತಿಗಳನ್ನು ಗಾಳಿಗೆ ತೂರಿ ಮತದಾರರಿಗೆ ಆಮಿಷಗಳನ್ನೊಡ್ಡುತ್ತಿವೆ. ಚನಾವಣಾ ಆಯೋಗ ತಕ್ಷಣ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕೆAದು ಒತ್ತಾಯಿಸಿದರು. ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ತನ್ನ ತಪ್ಪುಗಳನ್ನು ಮರೆಮಾಚಲು ಭಾವನಾತ್ಮಕವಾಗಿ ಜನರನ್ನು ಕೆಣಕುತ್ತಿದೆ ಎಂದು ಆರೋಪಿಸಿದರು. ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ರಚನಾತ್ಮಕವಾಗಿ ಭ್ರಷ್ಟ ವ್ಯವಸ್ಥೆಯನ್ನು ವಿರೋಧಿಸುವಲ್ಲಿ ವಿಫಲವಾಗಿವೆ. ಕೊಡಗಿನ ಜ್ವಲಂತ ಸಮಸ್ಯೆಗಳನ್ನು ಸರಿಪಡಿಸುವಲ್ಲಿ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರದ ವಿರುದ್ಧ ಈ ಪಕ್ಷಗಳು ಯಾವ ರೀತಿಯ ಹೋರಾಟವನ್ನು ಮಾಡಿವೆ ಎಂದು ಪ್ರಶ್ನಿಸಿದರು.…

Read More

ಮಡಿಕೇರಿ ಮಾ.13 : ಚುನಾವಣಾ ಭಾಷಣದ ಸಂದರ್ಭ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಮುಸಲ್ಮಾನರ ಧಾರ್ಮಿಕ ಭಾವನೆಗೆ ದಕ್ಕೆ ತಂದಿದ್ದಾರೆ ಎಂದು ಆರೋಪಿಸಿರುವ ಜಾತ್ಯತೀತ ಜನತಾದಳದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಪೋಕ್ಲುವಿನ ಎಂ.ಎ.ಮನ್ಸೂರ್ ಆಲಿ, ತಕ್ಷಣ ಪೊಲೀಸ್ ಇಲಾಖೆ ಹಾಗೂ ಚುನಾವಣಾ ಆಯೋಗ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಚೋದನಾಕಾರಿ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಮೂಡಿಸಿ ತಮಾಷೆ ನೋಡುವ ಕೀಳು ಮಟ್ಟದ ರಾಜಕಾರಣವನ್ನು ಮಾಡುತ್ತಿರುವ ಈಶ್ವರಪ್ಪ ಅವರು ಮತ್ತೆ ಮತ್ತೆ ಮತೀಯ ಭಾವನೆಗಳನ್ನು ಕೆಣಕಿ ರಾಜಕೀಯ ಲಾಭ ಮಾಡಿಕೊಳ್ಳಬಹುದೆನ್ನುವ ಭ್ರಮೆಯಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಜಾಪ್ರಭುತ್ವ ರಾಷ್ಟç ಭಾರತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯದಂತೆ ಎಲ್ಲಾ ಧರ್ಮೀಯರು ಸೌಹಾರ್ದತೆಯಿಂದ ಬದುಕು ಸಾಗಿಸುತ್ತಿದ್ದಾರೆ. ಆದರೆ ಈಶ್ವರಪ್ಪ ಅವರಂತಹ ರಾಜಕಾರಣಿಗಳು ಮುಸಲ್ಮಾನರನ್ನು ಪರಕೀಯರಂತೆ ಪ್ರತಿಬಿಂಬಿಸುತ್ತಾ ನೋವುಂಟು ಮಾಡುತ್ತಿದ್ದಾರೆ. ನಮ್ಮ ಧಾರ್ಮಿಕ ಆಚರಣೆಗಳನ್ನು ಕೀಳಾಗಿ ಕಾಣುವುದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ಚುನಾವಣೆಗಳು ಬರುತ್ತವೆ, ಹೋಗುತ್ತವೆ, ಆದರೆ ಮಾನವ…

Read More

ಮಡಿಕೇರಿ ಮಾ.13 : ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೆ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಧಾರ್ಮಿಕ ಭಾವನೆಗಳನ್ನು ಕೆಣಕಿ ರಾಜಕೀಯ ಲಾಭ ಮಾಡಿಕೊಳ್ಳುವ ಹುನ್ನಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಹಾಗೂ ತಾ.ಪಂ ಮಾಜಿ ಸದಸ್ಯ ಕೆ.ಐ.ಮಹಮ್ಮದ್ ರಫೀಕ್, ಆಜಾನ್ ಕುರಿತು ನೀಡಿರುವ ಹೇಳಿಕೆ ಖಂಡನೀಯವೆoದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಾತಿ, ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಒಡಕು ಮೂಡಿಸಿ ರಾಜಕೀಯ ಲಾಭ ಮಾಡಿಕೊಳ್ಳುವ ತಂತ್ರಗಾರಿಕೆಯನ್ನು ಈಶ್ವರಪ್ಪ ಅವರು ಕರಗತ ಮಾಡಿಕೊಂಡಿದ್ದಾರೆ. ಚುನಾವಣಾ ಪ್ರಚಾರಕ್ಕೆ ಹೋದಲೆಲ್ಲ ಮುಸಲ್ಮಾನರ ಆಜಾನ್ ಕುರಿತು ಕೀಳಾಗಿ ಮಾತನಾಡಿದ್ದಾರೆ. ನಾವು ನಂಬಿರುವ ದೇವರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿ ಅಲ್ಪಸಂಖ್ಯಾತರ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಎಂದು ಟೀಕಿಸಿದ್ದಾರೆ. ಆಡಳಿತ ಪಕ್ಷ ತಾನು ಮಾಡಿದ ಅಭಿವೃದ್ಧಿ ಕಾರ್ಯಗಳ ಆಧಾರದಲ್ಲಿ ಚುನಾವಣೆಯನ್ನು ಎದುರಿಸಬೇಕಾಗುತ್ತದೆ. ಆದರೆ ಇದು ಸಾಧ್ಯವಾಗದೆ ಸೋಲಿನ ಹತಾಶ ಮನೋಭಾವದಲ್ಲಿರುವ ಈಶ್ವರಪ್ಪ ಅವರು ಆಜಾನ್ ನ್ನು ವ್ಯಂಗ್ಯ…

Read More

ಮಡಿಕೇರಿ ಮಾ.13 : ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೋಮವಾರ ಚಾಲನೆ ನೀಡಿದರು. ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬಾಕ್ಸಿಂಗ್ ಒಳಾಂಗಣ ಕ್ರೀಡಾಂಗಣದಲ್ಲಿ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಆಲ್‍ಬೆಂಡಜೋಲ್ 400 ಎಂ.ಜಿ. ಮಾತ್ರೆ ವಿತರಿಸಿ ಚಾಲನೆ ನೀಡಿದರು. ಮಕ್ಕಳು ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆಟವಾಡಿದ ನಂತರ ಸಾಬೂನಿನಿಂದ ಕೈಕಾಲು ತೊಳೆಯಬೇಕು. ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಯಬೇಕು. ಆರೋಗ್ಯದ ಕಡೆ ಗಮನಹರಿಸಬೇಕು ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿ ಮಾರ್ಚ್, 14 ರಿಂದ 25 ರವರೆಗೆ ಮೋಪ್ ಅಪ್ ಡೇ (ಒoಠಿ uಠಿ ಜಚಿಥಿ) ಕಾರ್ಯಕ್ರಮ ನಡೆಯಲಿದ್ದು, 1 ರಿಂದ 19 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್‍ಬೆಂಡಜೋಲ್-400 ಎಂ.ಜಿ ಮಾತ್ರೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು. ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ (ಎನ್‍ಡಿಡಿ) ಕೊಡಗು ಜಿಲ್ಲೆಯಲ್ಲಿ 1 ರಿಂದ 19 ವರ್ಷದೊಳಗಿನ…

Read More