ಲೇಖಕ: admin

ಸೋಮವಾರಪೇಟೆ ಮಾ.13 : ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಯುವಶಕ್ತಿ ಸಂಗಮ ಕಾರ್ಯಕ್ರಮದ ಅಂಗವಾಗಿ ಯುವಮೋರ್ಚಾ ಕಾರ್ಯಕರ್ತರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಬೈಕ್ ಜಾಥ ನಡೆಸಿದರು. ನಂತರ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಸಮಾವೇಶದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಕೊಡಗಿನ ಜನ ರಾಷ್ಟ್ರ ಪ್ರೇಮಕ್ಕೆ ಹೆಸರಾದವರು. ಇಂದು ಜಿಲ್ಲೆಯಲ್ಲಿ ಯುವಶಕ್ತಿಯೂ ಬಿಜೆಪಿ ಬೆಂಬಲಕ್ಕೆ ನಿಂತಿದೆ. ನಾವೀಗ ಭಾರತವನ್ನು ಕಾಂಗ್ರೆಸ್ ಮುಕ್ತ ದೇಶವನ್ನಾಗಿಸುವ ಸಂಕಲ್ಪ ತೊಡಬೇಕಾಗಿದೆ. ದೇಶದಲ್ಲಿ ಮತ್ತೆ ಭ್ರಷ್ಟಾಚಾರ ತಲೆ ಎತ್ತದಂತೆ ನೋಡಿಕೊಳ್ಳಬೇಕಿದೆ ಎಂದರು. ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠವಾಗಿದೆ, ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಿದ್ದೇವೆ. ಶಾಸಕ ಅಪ್ಪಚ್ಚು ರಂಜನ್ ಅವರು ಅನೇಕ ರಸ್ತೆಗಳ ಅಭಿವೃದ್ಧಿ ಯೋಜನೆಗೆ ಸರ್ಕಾರದಿಂದ ಅಗತ್ಯ ಅನುದಾನ ತರುವಲ್ಲಿ ಸಫಲರಾಗಿದ್ದಾರೆ. ಮಡಿಕೇರಿ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಕಾರಣರಾಗಿದ್ದಾರೆ ಎಂದರು. ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಇಲ್ಲಿಯವರೆಗೆ ಜಿಲ್ಲೆಗೆ ಯಾವುದೇ ಸರ್ಕಾರಗಳು ನೀಡದಂತ ಅನೇಕ ಕೊಡುಗೆಗಳನ್ನು ಬಿಜೆಪಿ ನೀಡಿದೆ. ಕಾಂಗ್ರೆಸ್ ಸರ್ಕಾರ ಕೇವಲ ವೋಟ್…

Read More

ಮಡಿಕೇರಿ ಮಾ.13 :  ನೆಹರು ಯುವ ಕೇಂದ್ರ ಮಡಿಕೇರಿ,  ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ನೇತಾಜಿ ಯುವಕ ಮಂಡಲ ಸಂಯೋಗದಲ್ಲಿ ತಾಳತ್ತಮನೆ  ನೇತಾಜಿ ಯುವ ಮಂಡಳಿ  ಆಶ್ರಯದಲ್ಲಿ ವಿಶ್ವ ಮಹಿಳಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಳತ್ತಮನೆಯ ನೇತಾಜಿ ಯುವಕ ಮಂಡಳದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿ ಮಹಿಳಾ ದಿನದ ಮಹತ್ವ ತಿಳಿಸಿದರು. ಸಭಾ ಕಾರ್ಯಕ್ರಮದ ನಂತರದ ದಿನಗ ಅಂಗವಾಗಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳು ನಡೆಯಿತು. ಹಾಗಲಕಾಯಿ ತಿನ್ನುವ ಸ್ಪರ್ಧೆಯಲ್ಲಿ  ರೀಟಾ ಪ್ರಥಮ,  ನೇತ್ರಾವತಿ ದ್ವಿತೀಯ,  ನವೀನ  ತೃತೀಯ ಸ್ಥಾನ ಪಡೆದುಕೊಂಡರು. ಕಣ್ಮುಚ್ಚಿ ಆನೆ ಬಾಲ ಬಿಡಿಸುವ ಸ್ಪರ್ಧೆಯಲ್ಲಿ  ನೇತ್ರಾವತಿ ಪ್ರಥಮ,  ವೀಣಾ ದ್ವಿತೀಯ, ಮೋಹಿನಿ ತೃತೀಯ, ಲೇಖನ ಬರೆಯುವ ಸ್ಪರ್ಧೆಯಲ್ಲಿ ಸರೋಜಾ ಪ್ರಥಮ, ಮೋಹಿನಿ ದ್ವಿತೀಯ, ವೀಣಾ ತೃತೀಯ ಬಹುಮಾನ ಪಡೆದುಕೊಂಡರು. ವಿಜೇತರಿಗೆ ಪ್ರಮುಖರಾದ ಪಾರ್ಲಕೋಟಿ ಜೀವನ್ ಹಾಗೂ ನವೀನ ಬಹುಮಾನ ವಿತರಿಸಿದರು.  ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರು ಇತರ ಸದಸ್ಯರುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.  

Read More

ಚೆಯ್ಯಂಡಾಣೆ ಮಾ.13 :   ಸ್ಥಳೀಯ ಸರಕಾರಿ ಪ್ರಾಥಮಿಕ ಆರೋಗ್ಯ ಉಪಕೇಂದ್ರ ‘ಎ’ ವತಿಯಿಂದ ನರಿಯಂದಡ ಕೇಂದ್ರ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ -19, ಸಾಂಕ್ರಾಮಿಕ ರೋಗಗಳು, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ (ಪಿಎಂಜೆಎವೈ ) ವಿಷಯದ ಕುರಿತು ವಿದ್ಯಾರ್ಥಿಗಳಿಗೆ  ಪ್ರಬಂಧ  ಸ್ಪರ್ಧೆ  ನಡೆಯಿತು. ಪ್ರಥಮ ಬಹುಮಾನವನ್ನು 9 ನೇ ತರಗತಿ ವಿದ್ಯಾರ್ಥಿ ಎಂ.ಎಂ.ತಂಜನ್,  ದ್ವಿತೀಯ ಬಹುಮಾನವನ್ನು 8ನೇ ತರಗತಿಯ ಸಿ.ಎಸ್. ದೀಪಿಕಾ, ತೃತೀಯ ಬಹುಮಾನವನ್ನು 9ನೇ ತರಗತಿಯ ಅಂಕಿತ ಪಡೆದು ಕೊಂಡರು. ಕಾರ್ಯಕ್ರಮದಲ್ಲಿ ನರಿಯಂದಡ ಕೇಂದ್ರ ಪ್ರೌಢ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುನೀತಾ,  ಸ್ಥಳೀಯ ಆಯೋಗ್ಯ ಕೇಂದ್ರದ ಆರೋಗ್ಯಧಿಕಾರಿ ಕನಕಾವತಿ,  ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕ ವೃಂದದವರು  ಹಾಜರಿದ್ದರು. ವರದಿ :  ಅಶ್ರಫ್   

Read More

ಮಡಿಕೇರಿ ಮಾ.13 : ವಿಕೆ3 ಪಿಕ್ಚರ್ಸ್ ಬ್ಯಾನರ್ ನಲ್ಲಿ ಈರಮಂಡ ಹರಿಣಿ ವಿಜಯ್ ಮತ್ತು ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಅವರ ನಿರ್ಮಾಣದಲ್ಲಿ ತಯಾರಾದ ಕೊಡವ ಕಾದಂಬರಿ ಆಧಾರಿತ, ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಲನಚಿತ್ರ ಇಲ್ಲಿಯವರೆಗೆ ಬರೋಬ್ಬರಿ 62 ಅಂತರ ರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಚಿತ್ರದ ಯಶಸ್ಸಿನ ಕುರಿತು ಹರ್ಷ ವ್ಯಕ್ತಪಡಿಸಿತು. ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಮಾತನಾಡಿ ಕೊಡಗಿನ ಸಂಸ್ಕೃತಿ, ಆಚಾರ, ವಿಚಾರ, ಪರಿಸರದ ಮೇಲೆ ಬೆಳಕು ಚೆಲ್ಲಿರುವ ಮತ್ತು ಸ್ವಾವಲಂಬಿ ಮಹಿಳೆಯೊಬ್ಬಳು ಸಮಾಜಮುಖಿಯಾಗಿ ಸೇವೆ ಸಲ್ಲಿಸುವ ಕಥಾಹಂದರದ “ನಾಡ ಪೆದ ಆಶಾ” ಕೊಡವ ಭಾಷೆಯ ಚಲನಚಿತ್ರವಾದರೂ ಎಲ್ಲಾ ಜಾತಿ, ಮತ, ಬೇರೆ ಭಾಷೆಯವರು ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಪ್ರೋತ್ಸಾಹ ನೀಡಿದ್ದಾರೆ ಎಂದರು. ಸಿನಿಮಾ ವಿಮರ್ಶಕರ ಅನಿಸಿಕೆಗಳು ಈ ಚಿತ್ರವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಮತ್ತು ಇದುವರೆಗೆ ಪಾಲ್ಗೊಂಡ ವಿವಿಧ ಅಂತರರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಪ್ರಶಸ್ತಿಗಳನ್ನು ಪಡೆಯಲು ಸಾಧ್ಯವಾಗಿದೆ.…

Read More

ಮಡಿಕೇರಿ ಮಾ.13 :  ಕೊಡವ ಕೂಟಾಳಿಯಡ ಕೂಟದಿಂದ ಮಹಿಳಾ ದಿನಾಚರಣೆ ಅಂಗವಾಗಿ ವಿಶೇಷ ಚೇತನರಾದ ಗೋಣಿಕೊಪ್ಪದ ಕಂಜಿತಂಡ ಯಶೋಧಾ ವತ್ಸಲಾ ಅವರನ್ನು  ಸನ್ಮಾನಿಸಲಾಯಿತು. ಯಶೋಧಾ ಅವರ ಮನೆ ಗೆ ಭೇಟಿ ನೀಡಿದ ಕೂಟದ ಪ್ರಮುಖರು ಹಾಗೂ ಪದಾಧಿಕಾರಿಗಳು  ವಿಶೇಷ ಚೇತನರಾದರೂ  ಸ್ವಾವಲಂಬಿ ಬದುಕು ನಡೆಸುತ್ತ, ನಡೆಯಲು ಆಗದವರಿಗೆ  ಗಾಲಿ ಕುರ್ಚಿಗಳು ಒದಗಿಸುವ ಮೂಲಕ ಸಾಮಾಜಿಕ ಜವಾಬ್ದಾರಿ ನಿಭಾಯಿಸುತ್ತಿರುವ ಯಶೋಧಾ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ  ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷೆ ಚಿಮ್ಮಚ್ಚಿರ ಪವಿತ ರಜನ್, ಕಾರ್ಯದರ್ಶಿ ಚೆಟ್ಟೋಳಿರ ಶರತ್‌ ಸೋಮಣ್ಣ, ಸಲಹೆಗಾರ ಚಂಗುಲಂಡ ಸೂರಜ್, ಸಾಂಸ್ಕೃತಿಕ ನಿರ್ದೇಶಕಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಸದಸ್ಯ ಕಾಳಮಂಡ ರಾಬಿನ್ ಅಚ್ಚಮ್ಮ ಇದ್ದರು.  

Read More

ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಲಭ್ಯವಾಗಿದೆ. ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಪ್ರಶಸ್ತಿ ಪ್ರದಾನ  ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಭಾಗಿಯಾಗಿದೆ.

Read More

ಮಡಿಕೇರಿ ಮಾ.13 :  ಬ್ಲ್ಯಾಕ್ ಪಾಂಥರ್ಸ್ ಮಹಿಳಾ ಕ್ಲಬ್ ವತಿಯಿಂದ ಪ್ರಥಮ ವರ್ಷದ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಮತ್ತು ಮಹಿಳೆಯರ ಥ್ರೋಬಾಲ್ ಪಂದ್ಯಾವಳಿ ಏ.9 ರಂದು ಮರಗೋಡು ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಲಬ್ ಅಧ್ಯಕ್ಷರಾದ ಮಿಲನ ಕಟ್ಟೆಮನೆ, ಅಂದು ಬೆಳಗ್ಗೆ 9 ಗಂಟೆಗೆ ಪಂದ್ಯಾವಳಿ ನಡೆಯಲಿದ್ದು, ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಆಸಕ್ತ ತಂಡಗಳು 2 ಸಾವಿರ ಪ್ರವೇಶ ಶುಲ್ಕದೊಂದಿಗೆ ಹಾಗೂ ಥ್ರೋಬಾಲ್‍ನಲ್ಲಿ ಪಾಲ್ಗೊಳ್ಳುವ ತಂಡಗಳು 1 ಸಾವಿರ ರೂ. ಪ್ರವೇಶ ಶುಲ್ಕದೊಂದಿಗೆ ತಂಡದ ಹೆಸರನ್ನು ಏ.6ರ ಸಂಜೆ 5 ಗಂಟೆಯ ಒಳಗಾಗಿ ನೋಂದಾಯಿಸಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9483426474, 9482022100, 9110689940ವನ್ನು ಸಂಪರ್ಕಿಸಬಹುದೆಂದು ತಿಳಿಸಿದರು. ವಾಲಿಬಾಲ್‍ನಲ್ಲಿ ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ 25 ಸಾವಿರ ರೂ. ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನಕ್ಕೆ 15 ಸಾವಿರ ರೂ. ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ಇದರೊಂದಿಗೆ ಬೆಸ್ಟ್ ಅಟ್ಯಾಕರ್,…

Read More

ಮಡಿಕೇರಿ ಮಾ.13 :  ಭಾವೈಕ್ಯತೆಯ ಕೇಂದ್ರವಾಗಿ ಪ್ರಸಿದ್ಧವಾಗಿರುವ ಕೊಡಗು-ದಕ್ಷಿಣ ಕನ್ನಡ ಗಡಿ ಭಾಗದ ಪೇರಡ್ಕದ ದರ್ಗಾ ಶರೀಫ್ ಆವರಣದಲ್ಲಿ ಎಸ್‍ಕೆಎಸ್‍ಎಸ್‍ಎಫ್ ಗೂನಡ್ಕ ಶಾಖೆಯ ವತಿಯಿಂದ ಮಾ.19 ರಂದು ದ್ವಿತೀಯ ವರ್ಷದ ‘ನೂರೇ ಅಜ್ಮೀರ್ ಆಧ್ಯಾತ್ಮಿಕ ಮಜ್ಲಿಸ್’ ಹಾಗೂ ಮಜ್ಲಿಸ್‍ನ್ನೂರು ವಾರ್ಷಿಕ ಕಾರ್ಯಕ್ರಮ ನಡೆಯಲಿದೆ. ಸುದ್ದಿ ಗೋಷ್ಠಿಯಲ್ಲಿ ಈ ಕುರಿತ ಮಾಹಿತಿ ನೀಡಿದ ಪೇರಡ್ಕ ಜಮಾಅತ್‍ನ ಗೌರವಾಧ್ಯಕ್ಷರಾದ ಶಾಹೀದ್ ತೆಕ್ಕಿಲ್, ಪೇರಡ್ಕ ದರ್ಗಾ ಶರೀಫ್ ವಠಾರದ ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆಯಲಿರುವ ನೂರೇ ಅಜ್ಮೀರ್ ಮಜ್ಲಿಸ್ ಕಾರ್ಯಕ್ರಮದ ನೇತೃತ್ವವನ್ನು ಕೇರಳದ ಕಲ್ಲಿಕೋಟೆಯ ಮಲಪುರಂನ ಖ್ಯಾತ ಧಾರ್ಮಿಕ ಉಪನ್ಯಾಸಕರಾದ ಉಸ್ತಾದ್ ವಲಿಯುದ್ದೀನ್ ಫೈಝಿ ವಾಝಕ್ಕಾಡ್ ವಹಿಸಿ ನಡೆಸಿಕೊಡಲಿದ್ದಾರೆ. ಮೊಹಮದ್ ಪೈಗಂಬರರ ತತ್ತ್ವಾದರ್ಶಗಳನ್ನು ಜನರಿಗೆ ತಲುಪಿಸುವುದು ಮತ್ತು ಅವರ ಸಂಕೀರ್ತನೆಗಳನ್ನು ಹೇಳುವುದು ನೂರೇ ಅಜ್ಮೀರ್‍ನ ಮುಖ್ಯ ಉದ್ದೇಶವಾಗಿದೆಯೆಂದು ಹೇಳಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಮಿಯತ್ ಉಲೆಮಾ ಸಂಘಟನೆಯ ಅಧ್ಯಕ್ಷರಾದ ಸೈಯ್ಯದ್ ಝೈನುಲ್ ಆಬಿದೀನ್ ತಂಙಳ್ ಕುನ್ನುಂಗೈ, ಖ್ಯಾತ ವಾಗ್ಮಿಗಳಾದ ಉಸೈನ್ ದಾರಿಮಿ ರೆಂಜಿಲಾಡಿ, ಎಮ್ಮೆಮಾಡು…

Read More

ಮಡಿಕೇರಿ ಮಾ.13 : ತೋಟದಲ್ಲಿದ್ದ ನೀರು ಸಂಗ್ರಹದ ತೊಟ್ಟಿಗೆ ಆಯತಪ್ಪಿ ಬಿದ್ದ ಕಾಡೆಮ್ಮೆಯನ್ನು ಅರಣ್ಯ ಇಲಾಖೆ ಹಾಗೂ ಸ್ಥಳೀಯರು ರಕ್ಷಿಸಿರುವ ಘಟನೆ ಶನಿವಾರಸಂತೆಯ ಎಳನೀರುಗುಂಡಿ ಎಂಬಲ್ಲಿ ನಡೆದಿದೆ. ತಾಪಾಮಾನ ಹೆಚ್ಚಾಗುತ್ತಿರುವಂತೆ ನೀರು ಮತ್ತು ಆಹಾರದ ಕೊರತೆಯನ್ನು ಎದುರಿಸುತ್ತಿರುವ ವನ್ಯಜೀವಿಗಳು ತೋಟದ ಫಸಲು ಮತ್ತು ಕೆರೆಗಳೆಡೆಗೆ ಮುಖ ಮಾಡುತ್ತಿವೆ. ಇಂದು ನೀರು ಕುಡಿಯಲೆಂದು ಎಳನೀರುಗುಂಡಿ ಗ್ರಾಮದ ಎಸ್ಟೇಟ್ ಗೆ ನುಗ್ಗಿದ ಕಾಡೆಮ್ಮೆ ನೀರು ಸಂಗ್ರಹದ ತೊಟ್ಟಿ ಬಳಿ ಸಾಗಿದೆ. ನೀರು ಕುಡಿಯುವ ಪ್ರತ್ನದಲ್ಲಿದ್ದಾಗ ಆಯತಪ್ಪಿ ತೊಟ್ಟಿಗೆ ಬಿದ್ದಿದೆ. ನೀರಿನಲ್ಲಿ ಕಾಡೆಮ್ಮೆ ಪರದಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಶನಿವಾರಸಂತೆ ವಲಯ ಅರಣ್ಯಾಧಿಕಾರಿ ಪ್ರಪುಲ್ ಶೆಟ್ಟಿ ನೇತೃತ್ವದ ತಂಡ ತೋಟದ ಮಾಲೀಕರು ಹಾಗೂ ಕಾರ್ಮಿಕರ ಸಹಕಾರದಿಂದ ಕಾರ್ಯಾಚರಣೆ ನಡೆಸಿದರು. ಜೆಸಿಬಿ ಯಂತ್ರದ ಮೂಲಕ ನೀರಿನ ತೊಟ್ಟಿಯ ಒಂದು ಭಾಗದಲ್ಲಿ ಕಾಡೆಮ್ಮೆ ಮೇಲೆ ಬರಲು ದಾರಿ ಮಾಡಿಕೊಡಲಾಯಿತು. ನಂತರ ಮೇಲೆ ಬಂದ ಕಾಡೆಮ್ಮೆಯನ್ನು ಅರಣ್ಯ ಸಿಬ್ಬಂದಿಗಳು ಕಾಡಿಗಟ್ಟುವಲ್ಲಿ ಯಶಸ್ವಿಯಾದರು. ವರದಿ…

Read More

ಮಡಿಕೇರಿ ಮಾ.13 : ಕೊಡಗಿನಲ್ಲಿ ಕಳೆದ 25 ವರ್ಷಗಳಿಂದ ಬಿಜೆಪಿಯನ್ನು ಸಹಿಸಿದ್ದು ಸಾಕು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚಂದ್ರಮೌಳಿ ಕರೆ ನೀಡಿದ್ದಾರೆ. ಮಡಿಕೇರಿ ನಗರದ ವಿವಿಧೆಡೆ ವಿವಿಧ ಭರವಸೆಗಳ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆಯ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವಿನೂತನ ಯೋಜನೆಗಳ ಮೂಲಕ ಬಡವರ ಹಾಗೂ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಕಾಂಗ್ರೆಸ್ ಮಾಡಲಿದೆ ಎಂದರು. ಕಾAಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ “ಗೃಹಜ್ಯೋತಿ” ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆ, ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು “ಗೃಹಲಕ್ಷಿ÷್ಮ” ಯೋಜನೆ ಜಾರಿ ಮತ್ತು ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ದಾರರಿಗೆ 10 ಕೆ.ಜಿ.ಅಕ್ಕಿ ಉಚಿತವಾಗಿ ನೀಡುವ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ. ಈ ಯೋಜನೆ ದೇಶದಲ್ಲೇ ಮೊದಲು ಎಂದು ತಿಳಿಸಿದರು. ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ 600 ಭರವಸೆಗಳಲ್ಲಿ 589…

Read More