ಲೇಖಕ: admin

ಮಡಿಕೇರಿ ಮಾ.13 :  ಮಂಗಳೂರು ವಿಶ್ವವಿದ್ಯಾನಿಲಯವು  ನಡೆಸಿದ ಅಂತಿಮ ವರ್ಷದ ಕನ್ನಡ ಎಂ.ಎ. ಪದವಿ ಪರೀಕ್ಷೆಯಲ್ಲಿ ಸುಂಟಿಕೊಪ್ಪ ಸಮೀಪದ ಕಲ್ಲೂರು ಗ್ರಾಮದ ಹೆಚ್. ಪಿ. ವಂದನಾ  ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಕಲ್ಲೂರು ಗ್ರಾಮದ ಪ್ರಕಾಶ್ ಮತ್ತು ಅನುರಾಧ ದಂಪತಿಯ ಪುತ್ರಿಯಾಗಿರುವ ವಂದನಾ  ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿಯಾಗಿದ್ದಾರೆ.

Read More

ಸೋಮವಾರಪೇಟೆ ಮಾ.13 : ವಿಧಾನಸಭಾ ಚುನಾವಣೆ ಹಿನ್ನೆಲೆ ವಿವಿಧ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಪ್ರಚಾರದಲ್ಲಿ ಕೊಡಗು ಬಿಜೆಪಿ ಮುಂದಿದ್ದು, ಇಂದು ಸೋಮವಾರಪೇಟೆ ಪಟ್ಟಣದಲ್ಲಿ ಯುವ ಮೋರ್ಚಾದ ಯುವಶಕ್ತಿ ಸಂಗಮದ ಮೂಲಕ ಶಕ್ತಿ ಪ್ರದರ್ಶನವಾಗಿದೆ. ಒಂದು ಸಾವಿರಕ್ಕೂ ಅಧಿಕ ಬೈಕ್ ಗಳಲ್ಲಿ ಜಾಥಾ ನಡೆಸಿದ ಬಿಜೆಪಿ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರಮೋದಿ ಹಾಗೂ ಜಾಥಾದ ನೇತೃತ್ವ ವಹಸಿದ್ದ ಶಾಸಕ ಅಪ್ಪಚ್ಚುರಂಜನ್ ಪರ ಘೋಷಣೆಗಳನ್ನು ಕೂಗಿದರು.

Read More

ನಾಪೋಕ್ಲು ಮಾ.13 : ಕಬಡಕೇರಿ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಸಾಧಕರನ್ನು ಸನ್ಮಾನಿಸಲಾಯಿತು. ಹೊದ್ದೂರು ಗ್ರಾ.ಪಂ ಅಧ್ಯಕ್ಷರಾದ ಕುಸುಮಾವತಿ ಕಾರ್ಯಕ್ರಮವನ್ನು ಉದ್ಘಾಟಿಸಿ ದಿನದ ಮಹತ್ವದ ಕುರಿತು ಮಾತನಾಡಿದರು. ನಂತರ ಕಬಡಕೇರಿಯ ಹಿಂದೂ ರುಧ್ರ ಭೂಮಿ ಸೇವಾ ಸಮಿತಿ ವತಿಯಿಂದ ಸಮಾಜದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆ ಮುಮ್ತಾಜ್, ಅಂಗನವಾಡಿ ಕಾರ್ಯಕರ್ತೆ ಎಂ.ಈ.ತಂಸೀನ ಬಾನು ಹಾಗೂ ಅಂಗನವಾಡಿ ಸಹಾಯಕಿ ಪ್ರೇಮ ಧರ್ಮಸ್ಥಳ ಸಂಘದ ವತಿಯಿಂದ ಸೇವಾಪ್ರತಿನಿಧಿಯಾಗಿ 11 ವರ್ಷಗಳ ಕಾಲ ಕಾರ್ಯ ಉತ್ತಮವಾಗಿ ನಿರ್ವಹಿಸುತ್ತಿರುವ ಮುಮ್ತಾಜ್, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಹಂಸಾವತಿ ಹಾಗೂ ಪೂಜಾಶ್ರೀ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಹೊದ್ದೂರು ಗ್ರಾ.ಪಂ ಉಪಾಧ್ಯಕ್ಷರಾದ ಸರಸು, ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಹಂಸಾವತಿ, ಹಿಂದೂ ರುದ್ರ ಭೂಮಿಯ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ಕುಮಾರ ಪ್ರಸಾದ್, ಚೌರಿರಾ ಸಲೀನ ಜಗತ್, ಜ್ಞಾನ ಜ್ಯೋತಿ ವಿದ್ಯಾ ಸಂಸ್ಥೆಯ ಶಿಕ್ಷಕಿ ಸ್ಮಿತಾ, ಮಹಿಳಾ ಸಮಾಜದ ಉಪಾಧ್ಯಕ್ಷೆ ರುಕ್ಮುಣಿ, ಆಶಾ ಕಾರ್ಯಕರ್ತೆ ಎಂ.ಈ.ಮುಮ್ತಾಜ್, ಕಾವೇರಿ,…

Read More

ಮಡಿಕೇರಿ ಮಾ.13 : ವೃದ್ದರೊಬ್ಬರು ಗುಂಡೇಟಿನಿಂದ ಸಾವಿಗೀಡಾಗಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕಿಕ್ಕರಳ್ಳಿ ಗ್ರಾಮದಲ್ಲಿ ನಡೆದಿದೆ. ಕೆ.ಎ.ಮಂದಣ್ಣ(73) ಎಂಬುವವರೇ ಮೃತ ವ್ಯಕ್ತಿಯಾಗಿದ್ದು, ಸೊಸೆಯಿಂದಲೇ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಆರೋಪಿ ನೀಲಮ್ಮ (ಜ್ಯೋತಿ) (28) ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಕೆಗೆ ಒಂದು ಗಂಡು ಮಗುವಿದೆ. ಪತಿ ನಾಣಯ್ಯ ಅವರೇ ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರು ಎಂದು ತಿಳಿದು ಬಂದಿದೆ. ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಹೇಳಲಾಗಿದೆ. ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಮಾ.13 : ಬಿ.ಜೆ.ಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹಲವು ಕಾರ್ಯಕರ್ತರು ಸೇರ್ಪಡೆಗೊಂಡರು. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಕೆಪಿಸಿಸಿ ಕಾನೂನು ಘಟಕ ಅಧ್ಯಕ್ಷ ಅಜ್ಜಿಕುಟ್ಟಿರ.ಎಸ್. ಪೊನ್ನಣ್ಣ  ಅವರ ನೇತೃತ್ವದಲ್ಲಿ ಉಪ್ಪಂಗಡ ಹರೀಶ್,ಉಪ್ಪಂಗಡ ಅಶ್ವಿನ್,ಉಪ್ಪಂಗಡ ಕವನ್,ಮಚ್ಚಿಮಾಡ ರಾಜೇಶ್,ರನ್ನು ಅಯ್ಯಪ್ಪ,ಅಕ್ಷಿತ್,ಬಿಪಿನ್, ಯತೀಶ್,ದಿನೇಶ್,ಪ್ರತ್ಯು, ಚೊಟ್ಟೆಯಾಂಡಮಾಡ ಲಿಕಿತ್,ನಾಚಪ್ಪ.ಬಲ್ಯಾಂಡಮಾಡ ಬಿಪಿನ್ ಅವರನ್ನು ಹುದಿಕೇರಿ ಸಮೀಪದ ಬೆಳ್ಳೂರು ಗ್ರಾಮದ ನಿವಾಸದಲ್ಲಿ  ನಡೆದ ಸರಳ ಕಾರ್ಯಕ್ರಮದಲ್ಲಿ  ಪಕ್ಷದ ಶಾಲು ಹೊದಿಸಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. ಈ  ಸಂದರ್ಭ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಮುಖಂಡರಾದ ಮೀದೇರಿರ ನವೀನ್, ಪಲ್ವಿನ್ ಪೂಣಚ್ಚ,ಅಪ್ಪಚ್ಛಂಗಡ ಮೋಟಯ್ಯ, ಚಂಗುಲಂಡ ಸೂರಜ್, ಚೊಟ್ಟೆಯಾಂಡಮಾಡ ಉದಯ, ಪೆಮ್ಮಂಡ ರಾಜ ಕುಶಾಲಪ್ಪ,ಇಟ್ಟಿರ ಭವಿನ್,ನರೇನ್ ಕಾರ್ಯಪ್ಪ ಹಾಜರಿದ್ದರು.

Read More

ಮಡಿಕೇರಿ ಮಾ.13 : ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್, ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಯ ರಕ್ತ ನಿಧಿ ಕೇಂದ್ರದ ವತಿಯಿಂದ ಮಾ.14 ರಂದು ರಕ್ತದಾನ ಶಿಬಿರ ನಡೆಯಲಿದೆ. ನಗರದ ಕೊಹಿನೂರು ರಸ್ತೆಯಲ್ಲಿರುವ ಚೇಂಬರ್ ಬ್ಯಾಂಕ್ ಕಟ್ಟಡದ ಸಭಾಂಗಣದಲ್ಲಿ ಅಂದು ಬೆಳಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ಶಿಬಿರ ನಡೆಯಲಿದೆ ಎಂದು ಚೇಂಬರ್ ಆಫ್ ಕಾಮರ್ಸ್ ನಗರಾಧ್ಯಕ್ಷ ಎಂ.ಧನಂಜಯ ತಿಳಿಸಿದ್ದಾರೆ. ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿರುವ ಅವರು, ಮಾಹಿತಿಗೆ 98444 61777 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದ್ದಾರೆ.

Read More

ಕಡಂಗ ಮಾ.13 :   ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಮತ್ತು ಓಯಸಿಸ್ ಸ್ಪೋರ್ಟ್ಸ್ ಕ್ಲಬ್ ಹೋದವಾಡ  ಆಶ್ರಯದಲ್ಲಿ  ನಡೆದ 19ನೇ ವರ್ಷದ ಕೊಡಗು ಮುಸ್ಲಿಂ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿರಾಜಪೇಟೆ ಬ್ಲಾಕ್ ಕೋಬ್ರಾ ತಂಡ ಚಾಂಪಿಯನ್ ಪಟ್ಟ ಪಡೆದುಕೊಂಡಿತು. ಚರಿಯಪರಂಬು ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ  19ನೇ ವರ್ಷದ ಕೊಡಗು ಮುಸ್ಲಿ0 ಕಪ್ ಕ್ರೀಡಾಕೋಟದ  ಕ್ವಾಟರ್ ಫೈನಲ್ನ ಮೊದಲ ಪಂದ್ಯದಲ್ಲಿ  ಬ್ಯಾರಿ ಮಡಿಕೇರಿ ತಂಡವನ್ನು ಆಶಿಶ್ ಗೋಣಿಕೊಪ್ಪ ಮಣಿಸಿ ಸೆಮಿಫೈನಲ್ ಪ್ರವೇಸಿದರು. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಇನ್ನಿಂಗ್ಸ್ ನಲ್ಲಿ ಆಶಿಶ್ ತಂಡ 5 ಓವರ್ ನಲ್ಲಿ 54 ರನ್ ಗಳಿಸಿದರು. ಈ ಮೊತ್ತ ವನ್ನು ಬೆನ್ನೆಟಿದ ಬ್ಲಾಕ್ ಕೋಬ್ರಾ ತಂಡ 4 ಓವರಗಳಲ್ಲಿ ಪಂದ್ಯ ವಿಜಯ ಶಾಲಿ ಯಾಗಿ ಫೈನಲ್ ಪ್ರವೇಶಿಸಿದರು. 2ನೇ ಸೆಮಿಫೈನಲ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಕೆ ವೈ ಸಿ ಸಿ ಕಡಂಗ ತಂಡ 5 ಓವರ್ ನಲ್ಲಿ 2 ವಿಕೆಟ್ 93ರನ್ ಕಲೆ ಹಾಕಿದರು ಈ ಮೊತ್ತ…

Read More

ಮಡಿಕೇರಿ ಮಾ.13 :  ಇತಿಹಾಸ ಪ್ರಸಿದ್ಧದ ಬೊಟ್ಟಿಯತ್ ನಾಡ್ ಈಶ್ವರ ದೇವರ ವಾರ್ಷಿಕೋತ್ಸವವು ಮಾ.15 ಹಾಗೂ 16 ರಂದು ನಡೆಯಲಿದೆ ಎಂದು ನಾಡ್ ತಕ್ಕರಾದ ಅಡ್ಡಂಡ ಪ್ರಕಾಶ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ಪೊನ್ನಂಪೇಟೆ ತಾಲೂಕು ಕುಂದಾ ಮುಗುಟಿಗೇರಿ ಗ್ರಾಮದಲ್ಲಿರುವ ಆರು ಗ್ರಾಮಗಳಿಗೆ ಸೇರಿದ ನಾಡ್ ದೇವಸ್ಥಾನ ಅಥವಾ ಈಶ್ವರ ದೇವಸ್ಥಾನಕ್ಕೆ ಶತಶತಮಾನಗಳ ಇತಿಹಾಸವಿದ್ದು, ಇದರ ವಾರ್ಷಿಕ ಉತ್ಸವವು ಈಗಾಗಲೇ ಮಾ.8ರಂದು ಸಂಜೆ ಕೊಡಿಮರ ನಿಲ್ಲಿಸುವುದರ ಮೂಲಕ ಆರಂಭಗೊಂಡಿದೆ.  ಮಾ.15 ರಂದು ನೆರ್ಪು ಹಾಗೂ ಮಾ.16 ರಂದು ದೇವರ ಅವಭೃತ ಸ್ಥಾನ (ದೇವ ಕುಳಿಪೊ) ನಡೆಯಲಿದೆ ಎಂದು  ಮಾಹಿತಿ ನೀಡಿದರು. ಕುಂದಾ, ಮುಗುಟಗೇರಿ, ಈಚೂರು, ಹುದೂರು, ಹಳ್ಳಿಗಟ್ಟು, ಅರ್ವತೋಕ್ಲು ಈ ಆರು ಗ್ರಾಮಗಳಿಗೆ ಸೇರಿರುವ ನಾಡ್ ದೇವಸ್ಥಾನದಲ್ಲಿ (ಕುಂದಾ ಬೆಟ್ಟದ ಕೆಳಗಿರುವ ಈಶ್ವರ ದೇವಸ್ಥಾನ) ಮಾ.8 ರಿಂದ ಪ್ರತಿನಿತ್ಯ ಮುಂಜಾನೆ ಮತ್ತು ಸಂಜೆ ಉತ್ಸವ ಮೂರ್ತಿ ಹೊರಗೆ ಬರುವ ಮೂಲಕ ವಿಶೇಷ ಪೂಜೆ ಸೇರಿದಂತೆ ಮಧ್ಯಾಹ್ನ ಮತ್ತು ಸಂಜೆ…

Read More

ನಾಪೋಕ್ಲು ಮಾ.13 : ಬಲಮುರಿಯ ಅಗಸ್ತ್ಯೇಶ್ವರ ದೇವಾಲಯದಲ್ಲಿ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಉತ್ಸವ ಒಂದು ವಾರಗಳ ಕಾಲ ನಡೆಯಿತು. ಸುತ್ತಮುತ್ತಲಿನ ಊರುಗಳ ಭಕ್ತರು ಪಾಲ್ಗೊಂಡಿದ್ದರು. ಉತ್ಸವಕ್ಕೆ ಸಂಬಂಧಿಸಿದಂತೆ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಜೆ ಕಾವೇರಿ ಹೊಳೆಯಲ್ಲಿ ದೇವರ ಅವಭೃತ ಸ್ನಾನ ನೆರವೇರಿ ದೇವಾಲಯದ ಪ್ರಾಂಗಣದಲ್ಲಿ ದೇವರ ನೃತ್ಯಬಲಿ ನಡೆಯಿತು. ಅರ್ಚಕ ಮಹಾಬಲೇಶ್ವರ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. ನಂತರ ಅಜ್ಜಪ್ಪ ಕೋಲ ಹಾಗೂ ಚಾಮುಂಡಿ ಕೋಲಗಳು ಜರುಗಿ ಶುದ್ಧ ಕಲಶದೊಂದಿಗೆ ಉತ್ಸವ ಸಂಪನ್ನಗೊಂಡಿತು. ಈ ಸಂದರ್ಭ ದೇವಾಲಯದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಊರ ಪರ ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವರದಿ : ದುಗ್ಗಳ ಸದಾನಂದ.  

Read More

ಮಡಿಕೇರಿ ಮಾ.11 : ಯಾರದೋ ಮಗು ನಮ್ಮದು ಎಂದು ಪ್ರತಿಪಾದಿಸುವುದಕ್ಕೆ ಬದಲಾಗಿ, ಸಾಧನೆಯ ನಿಮ್ಮ ಕೂಸನ್ನು ಹುಡುಕಿಕೊಳ್ಳಿ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಪ್ರತಿ ಪಕ್ಷದ ಪ್ರಮುಖರನ್ನು ಕುಟುಕಿದ್ದಾರೆ. ಮೈಸೂರು -ಬೆಂಗಳೂರು ದಶಪಥ ರಸ್ತೆಯ ಸಾಧನೆಯನ್ನು ಕಾಂಗ್ರೆಸ್‌ನ ಸಿದ್ದರಾಮಯ್ಯ ಸೇರಿದಂತೆ ಇತರರು ತಮ್ಮದೆಂದು ಹೇಳಿಕೊಳ್ಳುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಮಡಿಕೇರಿಯಲ್ಲಿ ಅವರು ಪ್ರತಿಕ್ರಿಯಿಸಿದ್ದು ಹೀಗೆ. ದಶಪಥ ಯೋಜನೆಗೆ ಕಾಂಗ್ರೆಸ್ ಚಿಕ್ಕಾಸನ್ನು ಒದಗಿಸಿಲ್ಲ. ಪ್ರಸ್ತುತ ಕೇಂದ್ರದ ಬಿಜೆಪಿ ಸರ್ಕಾರ ಈ ಬೃಹತ್ ಯೋಜನೆಯನ್ನು ಕಾರ್ಯಗತಗೊಳಿಸಿದೆ. ಈ ಸಾಧನೆ ತಮ್ಮದೆನ್ನುವ ಕಾಂಗ್ರೆಸ್ ಮುಖಂಡರು ತಮ್ಮ ಸಾಧನೆಗಳ ಕೂಸನ್ನು ಹುಡುಕಿಕೊಳ್ಳಲಿ ಎಂದು ತಿರುಗೇಟು ನೀಡಿದರು.

Read More