ಲೇಖಕ: admin

ಮಡಿಕೇರಿ ಮಾ.11 : ವಿಧಾನಸಭಾ ಚುನವಾಣೆಗೆ ವಿರಾಜಪೇಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಕಕ್ಕಬ್ಬೆ ಗ್ರಾ.ಪಂ ಮಾಜಿ ಸದಸ್ಯ ಹಾಗೂ ಅಲ್ಪಸಂಖ್ಯಾತರ ಹಿರಿಯ ಮುಖಂಡ ಎಂ.ಎ.ನಾಸಿರ್ ಮಕ್ಕಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನ ಸಾಮಾಜಿಕ ಪರಿಸ್ಥಿತಿ ಹದಗೆಡಲು ರಾಜಕೀಯ ಪಕ್ಷಗಳ ಕೊಡುಗೆ ಬಹಳಷ್ಟಿದೆ. ಯಾವುದೇ ರಾಜಕೀಯ ಪಕ್ಷಗಳು ಜನಪರ ತತ್ವ ಸಿದ್ಧಾಂತಗಳಡಿ ಕಾರ್ಯ ನಿರ್ವಹಿಸುತ್ತಿಲ್ಲ. ಕೇವಲ ಮತಬ್ಯಾಂಕ್ ಸೃಷ್ಟಿಯಷ್ಟೇ ಅವುಗಳ ಮೂಲ ಉದ್ದೇಶವಾಗಿರುವುದರಿಂದ ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತಿವೆ. ಈ ಕಾರಣದಿಂದ ಜನರಿಗೆ ನ್ಯಾಯ ದೊರಕಿಸಿಕೊಡಬೇಕೆನ್ನುವ ಗುರಿಯೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿರಾಜಪೇಟೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದರು. ನನ್ನ ಸ್ಪರ್ಧೆ ಖಚಿತವಾಗಿದ್ದು, ಕ್ಷೇತ್ರದಾದ್ಯಂತ ಜನರ ಒತ್ತಡ ಮತ್ತು ಬೆಂಬಲವಿದೆ. ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಜನರೇ ಒತ್ತಾಯಿಸುತ್ತಿದ್ದಾರೆ. ಇದರಿಂದಾಗಿ ಸ್ಪರ್ಧಿಸಲು ಮನಸ್ಸು ಮಾಡಿದ್ದು, ಅಗತ್ಯ ಸಿದ್ಧತೆಗಳನ್ನು ಆರಂಭಿಸಿದ್ದೇನೆ. ರಾಜಕೀಯ ಪಕ್ಷಗಳ ನಡೆಯಿಂದ ಬೇಸತ್ತಿರುವ ಕ್ಷೇತ್ರದ ಜನತೆಗೆ ನನ್ನ ಸ್ಪರ್ಧೆ ಉತ್ತಮ…

Read More

ಮಡಿಕೇರಿ ಮಾ.11 : ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಹಾಗೂ ಪಕ್ಷದ ಕೊಡಗು ಜಿಲ್ಲಾ ಉಸ್ತುವಾರಿ ಆರ್.ಧ್ರುವ ನಾರಾಯಣ್ ಅವರ ನಿಧನಕ್ಕೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಕಲೀಲ್ ಬಾಷ ಸಂತಾಪ ಸೂಚಿಸಿದ್ದಾರೆ. ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಧ್ರುವ ನಾರಾಯಣ್ ಅವರು ಯುವ ರಾಜಕಾರಣಿಗಳಿಗೆ ಉತ್ತಮ ಮಾರ್ಗದರ್ಶಕರಾಗಿದ್ದರು. ಪ್ರತಿಯೊಬ್ಬರನ್ನು ಪ್ರೀತಿಯಿಂದ ಕಾಣುತ್ತಿದ್ದ ಅವರು ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಭಿವೃದ್ಧಿ ಪರ ಚಿಂತನೆ ಮತ್ತು ಸೌಹಾರ್ದತೆಯ ಪರಿಕಲ್ಪನೆಗೆ ಮಾದರಿಯಾಗಿದ್ದ ಧ್ರುವ ನಾರಾಯಣ್ ಅವರ ಅಗಲಿಕೆ ಅತೀವ ದು:ಖವನ್ನು ತಂದಿದೆ. ವೈಯುಕ್ತಿವಾಗಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಕಲೀಲ್ ಬಾಷ ಬೇಸರ ವ್ಯಕ್ತಪಡಿಸಿದ್ದಾರೆ.

Read More

ಕುಶಾಲನಗರ, ಮಾ.11: ಉತ್ತರ ಕೊಡಗಿನ ಗಡಿಭಾಗದ ಶಿರಂಗಾಲ ಗ್ರಾಮದಲ್ಲಿ ದ್ವೈವಾರ್ಷಿಕ ಮಂಟಿಗಮ್ಮ ದೇವಿಯ ಗ್ರಾಮ ದೇವತೆ ಹಬ್ಬದ ಉತ್ಸವ ಮತ್ತು ಜಾತ್ರೋತ್ಸವವು ಸಂಭ್ರಮ-ಸಡಗರದಿಂದ ನಡೆಯಿತು. ಪ್ರತಿ ಎರಡು ವರ್ಷಕ್ಕೊಮ್ಮೆ ಜರುಗುವ ಮಂಟಿಗಮ್ಮ ದೇವಿಯ ಉತ್ಸವದಲ್ಲಿ ಭಕ್ತಾದಿಗಳು ಶ್ರದ್ದಾಭಕ್ತಿಯಿಂದ ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಹಬ್ಬದ ಪವಿತ್ರ ಬನದಲ್ಲಿ ಶುಕ್ರವಾರ ರಾತ್ರಿಯಿಂದ ಆರಂಭವಾದ ದೇವಿಯ ವಿವಿಧ ಧಾರ್ಮಿಕ ಕೈಂಕರ್ಯಗಳು ಹಾಗೂ ಪೂಜಾ ಕಾರ್ಯಗಳು ಶನಿವಾರ ಹಗಲಿಡೀ ಜರುಗಿದವು.  ಭಕ್ತಾದಿಗಳು ಬನಕ್ಕೆ ತೆರಳಿ ದೇವಿಯ ದರ್ಶನ ಪಡೆದರು. ಗ್ರಾಮೀಣ ಭಾಗದ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದಾದ ನೂರಾರು ವರ್ಷಗಳ ಇತಿಹಾಸವಿರುವ ಮಂಟಿಗಮ್ಮ ದೇವಿಯ ಉತ್ಸವದಲ್ಲಿ ಕೊಡಗು ಜಿಲ್ಲೆಯ ಗಡಿ ಗ್ರಾಮಗಳ ಜನತೆ ಸೇರಿದಂತೆ ನೆರೆಯ ಮೈಸೂರು ಹಾಗೂ ಹಾಸನ ಜಿಲ್ಲೆಗಳ ಗಡಿಭಾಗದ ಗ್ರಾಮಸ್ಥರು ಸೇರಿದಂತೆ ಸಾವಿರಾರು ಮಂದಿ ಭಕ್ತರು ವಿವಿಧೆಡೆಗಳಿಂದ ಆಗಮಿಸಿದ್ದರು. ಶಿರಂಗಾಲ ಗ್ರಾಮದ ಕೋಟೆಯ ಗದ್ದಿಗೆಯಲ್ಲಿ ಶುಕ್ರವಾರ ರಾತ್ರಿ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು.  ನಂತರ ದೇವಿಯ ಉತ್ಸವಕ್ಕೆ ಚಾಲನೆ ನೀಡಲಾಯಿತು.…

Read More

ನಾಪೋಕ್ಲು ಮಾ.11 :  ಸರಳ ಸಜ್ಜನಿಕೆಯ ರಾಜಕಾರಣಿ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಆರ್. ದ್ರುವನಾರಾಯಣ  ನಿಧನಕ್ಕೆ ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಆರ್.ದ್ರುವನಾರಾಯಣ್  ಅವರು ಕೊಡಗು ಜಿಲ್ಲೆಯೊಂದಿಗೆ ನಿಕಟ ಸಂಬಂಧ ಹೊಂದಿರುವ ಧೀಮಂತ ನಾಯಕ ಜಿಲ್ಲೆಯಲ್ಲಿ ನಡೆಯುವ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಾ ಕಾರ್ಯಕರ್ತರಿಗೆ ಧೈರ್ಯ ತುಂಬುವಂತಹ ಕೆಲಸ ಮಾಡುತ್ತಿದ್ದರು. ಒಬ್ಬ ಜಾತ್ಯತೀತ ನಾಯಕನನ್ನು ಇಂದು ಕಳೆದು ಕೊಂಡಿದ್ದು ಕೊಡಗು ಜಿಲ್ಲೆಗೆ ಮಾತ್ರವಲ್ಲ ದೇಶದ ಕಾಂಗ್ರೆಸ್ ಪಕ್ಷಕ್ಕೂ ದೊಡ್ಡ ನಷ್ಟ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ವಿವಿಧ  ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ, ಚಾಮರಾಜ ನಗರದ ಜಿಲ್ಲೆಯಿಂದ ಎರಡು ಬಾರಿ ಶಾಸಕರಾಗಿ, ಲೋಕಸಭಾ ಸದಸ್ಯರಾಗಿ ಮತ್ತು ಕೆ.ಪಿ.ಸಿ.ಸಿಯ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಆರ್.ಧ್ರುವನಾರಾಯಣ್  ಅವರ ಅಕಾಲಿಕ ನಿಧನವು ಕಾಂಗ್ರೇಸ್ ಪಕ್ಷಕ್ಕೆ ಅಘಾತವನ್ನುಂಟುಮಾಡಿದ್ದು, ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಮತ್ತು ಕುಟುಂಬ…

Read More

ವಿರಾಜಪೇಟೆ ಮಾ.11 : ವಿರಾಜಪೇಟೆ ತಾಲೂಕಿನ ವಿ.ಬಾಡಗ ಗ್ರಾಮದ  ಪೊವ್ವದಿ  ಮಹಿಳಾ ಸಮಾಜದ ವತಿಯಿಂದ ಮಹಿಳಾ ದಿನಾಚರಣೆ ಆಚರಿಸಲಾಯಿತು. ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಜನಿತಾ ಮಹಿಳಾ ದಿನಾಚರಣೆಯ ವಿಶೇಷತೆ ಬಗ್ಗೆ ಮಾತನಾಡಿದರು. ಪೊವ್ವದಿ ಮಹಿಳಾ ಸಮಾಜದ ಅಧ್ಯಕ್ಷೆ ಪರ್ಲ್ ಮುತಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಅಂತರಾಷ್ಟ್ರೀಯ ಅಥ್ಲೆಟ್ ಚೇಮಿರ ಪ್ರೇಮಾ ಸೀತಮ್ಮ, ಊರಿನ ಹಿರಿಯರಾದ ಅಪ್ಪಂಡೆರಂಡ ಚೋಂದವ್ವ ಪೂವಯ್ಯ ವಿ.ಬಾಡಗ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಕೋಲತಂಡ ಭಾರತಿ ಮಂದಣ್ಣ ಅವರನ್ನು ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಚೇಮೀರ ಪ್ರೇಮ ಸೀತಮ್ಮ, ತಮ್ಮ ಸಾಧನೆಯ ಬಗ್ಗೆ ಮಾತನಾಡಿ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹದ ನುಡಿಗಳನ್ನಾಡಿದರು. ಸಮಾಜದ ಆಡಳಿತ ಮಂಡಳಿ ಸದಸ್ಯರು ಮತ್ತು ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಸಭಾ ಕಾರ್ಯಕ್ರಮದ ನಂತರ ಮಹಿಳೆಯರಿಗೆ ಆಟೋಟ ಸ್ಪರ್ಧೆ, ಮನರಂಜನಾ ಕಾರ್ಯಕ್ರಮ ನಡೆಸಲಾಯಿತು.

Read More

ಮಡಿಕೇರಿ ಮಾ.11 :  ಕೊಡಗು ಜಿಲ್ಲಾ ಛಾಯಾಗ್ರಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸಂಘದ ಸಂಸ್ಥಾಪಕ ಅಧ್ಯಕ್ಷ ಮೂಕಳೇರ ಲಕ್ಷ್ಮಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕುಶಾಲನಗರದ ರೈತಭವನದಲ್ಲಿ ಆಯೋಜಿಸಿರುವ ಛಾಯಾ ಸಮ್ಮಿಲನ- 2023 ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಛಾಯಗ್ರಾಹಕರ ಕ್ಷೇಮಾಭಿವೃದ್ಧಿ ಸಂಘವನ್ನು 2009 ರಲ್ಲಿ ಸ್ಥಾಪಿಸಿ ಸ್ಥಾಪಕ ಅಧ್ಯಕ್ಷರಾದ ಪೊನ್ನಂಪೇಟೆಯ ಸುಮನ ಸ್ಟುಡಿಯೋದ ಮಾಲೀಕ ಮೂಕಳೇರ ಲಕ್ಷ್ಮಣ್ ದಂಪತಿಯವರನ್ನು ಹಿರಿಯ ವಕೀಲ ಹಾಗೂ  ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್ ಪೊನ್ನಣ್ಣ  ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಛಾಯಾಗ್ರಾಹಕ ಸಂಘದ ಅಧ್ಯಕ್ಷ ಪರಮೇಶ್, ಉಪಾಧ್ಯಕ್ಷ ಹೆಚ್.ಎಸ್ ನಾಗೇಶ್, ಜಿಲ್ಲಾ ಸಂಘದ ಅಧ್ಯಕ್ಷ ಎ.ಆರ್. ವಸಂತ್ , ತಾಲೂಕು ಸಂಘದ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಮಾ.11 :  ಸಿದ್ದಾಪುರದ  ಕೂರ್ಗ್ ಸ್ಟಾರ್ ವತಿಯಿಂದ ಏ.2 ಮತ್ತು 3 ರಂದು ಜಿಲ್ಲಾ ಮಟ್ಟದ ಮುಕ್ತ ಕ್ಯಾರಂ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಕೂರ್ಗ್ ಸ್ಟಾರ್ಸ್ ಯೂಟ್ಯೂಬ್ ಚಾನೆಲ್ ಪ್ರಮುಖ ಅಜಿತ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,  ನೆಲ್ಯಹುದಿಕೇರಿಯ ವಿ ಎಸ್ ಎಸ್ ಎನ್ ಸಭಾಂಗಣದಲ್ಲಿ  ಪಂದ್ಯಾವಳಿ ನಡೆಯಲಿದ್ದು, ಸಿಂಗಲ್ಸ್ ಪ್ರಥಮ ಬಹುಮಾನ 4999 ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ 2499 ನಗದು ಮತ್ತು ಟ್ರೋಫಿ, ಡಬಲ್ಸ್ ಪ್ರಥಮ ಬಹುಮಾನ 9999 ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ 4999 ನಗದು  ಮತ್ತು ಟ್ರೋಫಿ ನೀಡಲಾಗುವುದು. ಆಸಕ್ತ ತಂಡಗಳು ಮಾ.26 ರೊಳಗೆ  ಹೆಸರನ್ನು  7204577605 ಗೆ ನೋಂದಾಯಿಸಿಕೊಳ್ಳ ಬಹುದಾಗಿದೆ ಎಂದು ತಿಳಿಸಿದರು.

Read More

ವಿರಾಜಪೇಟೆ ಮಾ.11 : ವಿರಾಜಪೇಟೆ ಸಮೀಪದ ಮಲೆತಿರಿಕೆ ಬೆಟ್ಟದ ಶ್ರೀ ಮಲೆ ಮಹಾದೇಶ್ವರ ದೇವರ ವಾರ್ಷಿಕ ಹಬ್ಬವು ಮಾ.15 ರಿಂದ 20 ರವರಗೆ ನಡೆಯಲಿದ್ದು, ಮಾ.18 ರಂದು ದೊಡ್ಡ ಹಬ್ಬ ನಡೆಯಲಿ ಎಂದು ದೇವಾಲಯ ಟ್ರಸ್ಟ್ ಅಧ್ಯಕ್ಷ ವಾಟೆರೀರ ಪೂವಯ್ಯ ತಿಳಿಸಿದ್ದಾರೆ. ಮಾ.15 ರಂದು ಸಂಜೆ ನಾಲ್ಕು ಗಂಟೆಗೆ ಕುಂದಿರ ಐನ್ ಮನೆಯಿಂದ ಭಂಡಾರ ಬರುವುದು, ಸಂಜೆ 7 ಗಂಟೆಗೆ ಕೊಡಿಮರ ನಿಲ್ಲಿಸುವುದು, ರಾತ್ರಿ 8 ಗಂಟೆಗೆ ಮಹಾಪೂಜೆ ನಂತರ ಅನ್ನದಾನ ನಡೆಯಲಿದೆ. ಮಾ.16 ರಂದು ಬೆಳಿಗ್ಗೆ 11 ಗಂಟೆಗೆ ನಾಗದೇವಾಲಯದಲ್ಲಿ ವಿಶೇಷ ಪೂಜೆ, ಅಪರಾಹ್ನ ಅನ್ನದಾನ ನಡೆಯಲಿದೆ. ರಾತ್ರಿ 8 ಗಂಟೆಗೆ ಕಾಪು, ನಂತರ ಮಹಾಪೂಜೆ ಬಳಿಕ ಅನ್ನದಾನ ನಡೆಯಲಿದೆ. ಮಾ.17 ರಂದು 11 ಗಂಟೆಗೆ ಮಕ್ಕಾಟ್ ಸ್ಥಾನದಲ್ಲಿ ವಿಶೇಷ ಪೂಜೆ ಬಳಿಕ ಅನ್ನದಾನ ನಡೆಯಲಿದೆ. ರಾತ್ರಿ 8 ಗಂಟೆಗೆ ಇರ್ ಬೊಳಕ್ ಮಹಾಪೂಜೆ, ಬಳಿಕ ಅನ್ನದಾನ ನಡೆಯಲಿದೆ. ಮಾ.18 ರಂದು ದೊಡ್ಡ ಹಬ್ಬ ನಡೆಯಲಿದ್ದು, ಅಪರಾಹ್ನ 12ಕ್ಕೆ ನೆರಪು,…

Read More

ಮಡಿಕೇರಿ ಮಾ.11 : ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬಿಜೆಪಿ ‘ವಿಜಯ ಸಂಕಲ್ಪ ಯಾತ್ರೆ’ ನಡೆಯಿತು. ಪಕ್ಷದ ಮುಖಂಡರಾದ ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಶಾಸಕರುಗಳಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ ಅವರನ್ನು ಒಳಗೊಂಡ ವಿಜಯಸಂಕಲ್ಪ ರಥದ ಮೆರವಣಿಗೆ, ನಗರದ ಮಾರುಕಟ್ಟೆ ಬಳಿಯ ಚೌಡೇಶ್ವರಿ ದೇವಸ್ಥಾನದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದವರೆಗೆ ನಡೆಯಿತು. ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ, ಮಾತನಾಡಿದ ಪಕ್ಷದ ಮುಖಂಡ ಕೆ.ಎಸ್.ಈಶ್ವರಪ್ಪ, ಇಲ್ಲಿಯವರೆಗೆ ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತದ ಸರ್ಕಾರ ರಚಿಸಲು ಸಾಧ್ಯವಾಗಿಲ್ಲ. ಈ ಬಾರಿ 150 ಸ್ಥಾನಗಳನ್ನು ಪಡೆದು ಪುರ್ಣಬಹುಮತದೊಂದಿಗೆ ಸರ್ಕಾರ ರಚನೆಗೆ ಜನತೆ ಬಿಜೆಪಿಯನ್ನು ಆಶೀರ್ವದಿಸುವಂತೆ ಮನವಿ ಮಾಡಿದರು. ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಮಾಡಿದ್ದಾರೆ. ಅವರು ಈ ಹಿಂದೆ ಎಲ್ಲೆಲ್ಲಿ ಇಂತಹ ಯಾತ್ರೆ ಮಾಡಿದ್ದಾರೋ ಅಲ್ಲೆಲ್ಲ ಕಾಂಗ್ರೆಸ್ ಪರಾಭವಗೊಂಡಿದೆ. ಉತ್ತರಪ್ರದೇಶದಲ್ಲಿ ಸೋತ ಕಾಂಗ್ರೆಸ್, ಈಶಾನ್ಯ ರಾಜ್ಯಗಳ ಚುನಾವಣೆಯಲ್ಲೂ ಪರಾಭವಗೊಂಡಿದೆ. ಹೀಗಿರುವಾಗ ಕಾಂಗ್ರೆಸ್ ಪಕ್ಷ ಎಲ್ಲಿದೆಯೆಂದು…

Read More