ಮಡಿಕೇರಿ NEWS DESK ಜು.7 : ಮುಂಗಾರು ಅವಧಿಯಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿರುತ್ತದೆ. ಆದ್ದರಿಂದ ವಿಪತ್ತು ನಿರ್ವಹಣಾ ಕಾಯ್ದೆ, 2005 ಕಲಂ 34(ಸಿ)ರಲ್ಲಿ ಉಲ್ಲೇಖಿಸಿರುವಂತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 152 ಮತ್ತು 163 ರಲ್ಲಿ ದತ್ತವಾದ ಅಧಿಕಾರದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ಜಲಪಾತಗಳು, ಝರಿ, ನದಿ, ತೊರೆ, ಸಾರ್ವಜನಿಕ ಕೆರೆಗಳು, ಅಣೆಕಟ್ಟು, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ಅನಧಿಕೃತವಾಗಿ ನೀರಿನಲ್ಲಿ ಇಳಿಯುವುದು, ಮುಳುಗು ಹೊಡೆಯುವುದು, ಸಾಹಸ ಚಟುವಟಿಕೆ ನಡೆಸುವುದು, ಈಜುವುದನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ. ಈ ಆದೇಶದ ಉಲ್ಲಂಘನೆಯು ವಿಪತ್ತು ನಿರ್ವಹಣಾ ಕಾಯ್ದೆ, 2005 ಸೆಕ್ಷನ್ 51(ಬಿ) ಮತ್ತು ಸಂಬಂಧಿತ ನಿಯಮ/ಕಾಯ್ದೆಗಳ ವಿವಿಧ ಕಲಂ ಗಳಡಿಯಲ್ಲಿ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್…
ಲೇಖಕ: admin
ಮಡಿಕೇರಿ NEWS DESK ಜು.7 : ಮೈಸೂರು ಜಿಲ್ಲಾ ಕಿಕ್ ಬಾಕ್ಸಿಂಗ್ ಸಂಸ್ಥೆಯ ವತಿಯಿಂದ ಮೈಸೂರಿನ ಯುವರಾಜ ಕಾಲೇಜು ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 19ನೇ ಕರ್ನಾಟಕ ರಾಜ್ಯ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಸೋಮವಾರಪೇಟೆಯ ಪಿಎಂಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಮಿಥೇಶ್ ಜೆ. ಹಾಗೂ ರಿತನ್ ಡಿ.ಎಸ್ ಬೆಳ್ಳಿಯ ಪದಕವನ್ನು ಗೆದ್ದಿದ್ದಾರೆ. ಕಿಕ್ ಬಾಕ್ಸಿಂಗ್ ತರಬೇತುದಾರ ಸುದರ್ಶನ್ ಎನ್.ಸಿ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಮೈಸೂರಿನ ಜಿ.ಕೆ ವಿನ್ಯಾಸ ಯೋಗ ಕೇಂದ್ರ ಮತ್ತು ಶ್ರೀ ಕೃಷ್ಣ ಯೋಗಾಸ್ ಸಂಸ್ಥೆ ವತಿಯಿಂದ ನಡೆದ ಯೋಗ ಸ್ಪರ್ಧೆಯಲ್ಲೂ ಮಿಥೇಶ್ ಜೆ. ಹಾಗೂ ರಿತನ್ ಡಿ.ಎಸ್ ಪಾಲ್ಗೊಂಡು ಪದಕ ಮತ್ತು ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದಾರೆ.
ಮಡಿಕೇರಿ NEWS DESK ಜು.7 : ಮೈಸೂರು ಜಿಲ್ಲಾ ಕಿಕ್ ಬಾಕ್ಸಿಂಗ್ ಸಂಸ್ಥೆಯ ವತಿಯಿಂದ ಮೈಸೂರಿನ ಯುವರಾಜ ಕಾಲೇಜು ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 19ನೇ ಕರ್ನಾಟಕ ರಾಜ್ಯ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಸೋಮವಾರಪೇಟೆಯ ಪಿಎಂಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಮಿಥೇಶ್ ಜೆ. ಹಾಗೂ ರಿತನ್ ಡಿ.ಎಸ್ ಬೆಳ್ಳಿಯ ಪದಕವನ್ನು ಗೆದ್ದಿದ್ದಾರೆ. ಕಿಕ್ ಬಾಕ್ಸಿಂಗ್ ತರಬೇತುದಾರ ಸುದರ್ಶನ್ ಎನ್.ಸಿ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಮೈಸೂರಿನ ಜಿ.ಕೆ ವಿನ್ಯಾಸ ಯೋಗ ಕೇಂದ್ರ ಮತ್ತು ಶ್ರೀ ಕೃಷ್ಣ ಯೋಗಾಸ್ ಸಂಸ್ಥೆ ವತಿಯಿಂದ ನಡೆದ ಯೋಗ ಸ್ಪರ್ಧೆಯಲ್ಲೂ ಮಿಥೇಶ್ ಜೆ. ಹಾಗೂ ರಿತನ್ ಡಿ.ಎಸ್ ಪಾಲ್ಗೊಂಡು ಪದಕ ಮತ್ತು ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದಾರೆ.
ಮಡಿಕೇರಿ NEWS DESK ಜು.7 : ಕೊಡಗು ಜಿಲ್ಲೆಯ ದಶಕಗಳ ಜ್ವಲಂತ ಸಮಸ್ಯೆಯಾದ ‘ಸಿ ಮತ್ತು ಡಿ’ ವರ್ಗದ ಜಮೀನುಗಳು, ಸಿಸಿ ಪೈಸಾರಿ, ಜಮ್ಮಾ ಭೂಮಿಗಳ ಹಕ್ಕು ಹಸ್ತಾಂತರ ಹಾಗೂ ಸಕ್ರಮ ಪ್ರಕ್ರಿಯೆ ಕುರಿತು ರಾಜ್ಯ ಸರಕಾರ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೊಡಗು- ಮೈಸೂರು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಒತ್ತಾಯಿಸಿದ್ದಾರೆ. ಈ ವಿಚಾರ ಪ್ರಸ್ತುತ ರಾಜ್ಯ ಸರಕಾರದ ವ್ಯಾಪ್ತಿಯಲ್ಲಿದ್ದು, ಸರಕಾರ ದಿಟ್ಟ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಸಂಸದರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. ಕೇಂದ್ರ ಸರಕಾರದ ಯಾವುದೇ ರೀತಿಯ ಸಹಕಾರ, ಅರಣ್ಯ ಕಾಯ್ದೆಗಳ ತಿದ್ದುಪಡಿ ಅಥವಾ ವಿಶೇಷ ಅನುಮೋದನೆಗಳ ಅಗತ್ಯವಿದ್ದಲ್ಲಿ, ತಾವು ವೈಯಕ್ತಿಕವಾಗಿ ಮುತುವರ್ಜಿ ವಹಿಸಿ ಕೇಂದ್ರದಿAದ ಸಂಪೂರ್ಣ ಸಹಕಾರ ಕೊಡಿಸಲು ಸಿದ್ಧವಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಸುಂಟಿಕೊಪ್ಪ ಜು.6 NEWS DESK : ಗಾಳಿ ಮಳೆಗೆ ಮನೆಯ ಗೋಡೆ ಕುಸಿದು ಲಕ್ಷಾಂತರ ರೂ ನಷ್ಟ ಉಂಟಾಗಿರುವರುವ ಘಟನೆ ಸುಟ್ಟಿಕೊಪ್ಪದ ಜನತಾ ಕಾಲೋನಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿ ಎಲಿಜಬೆತ್ ಎಂಬವರ ಮನೆಯ ಗೋಡೆ ಹಾಗೂ ಮೇಲ್ಛಾವಣಿ ಕುಸಿತಗೊಂಡಿದ್ದು, ಗೃಹ ಉಪಯೋಗಿ ವಸ್ತುಗಳು ಹಾನಿಗೀಡಾಗಿದೆ. ಇದರಿಂದ ಲಕ್ಷಾಂತರ ರೂ ನಷ್ಟ ಉಂಟಾಗಿದೆ. ಘಟನೆಯ ಸಂದರ್ಭ ಮನೆಯ ಮಂದಿ ಸೇರಿದಂತೆ ಸಣ್ಣ ಮಗುವಿದ್ದು, ಅದೃಷ್ಟವಶತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ದೀಪಿಕಾ, ಗ್ರಾಮ ಆಡಳಿತಾಧಿಕಾರಿ ಉಷಾ, ಗ್ರಾಮ ಪಂಚಾಯಿತಿ ಅಧಿಕಾರಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿರಾಜಪೇಟೆ ಜು.6 NEWS DESK : ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ಸಾಮಾಜಿಕ ಸಬಲೀಕರಣದ ಉದ್ದೇಶದೊಂದಿಗೆ ವೀರಾಜಪೇಟೆಯ ಮಹಿಳೆಯರು ಒಗ್ಗೂಡಿ”ಶ್ರೀ ಈಶ್ವರ ಇಗ್ಗುತ್ತಪ್ಪ” ಹೆಸರಿನ ಪೊಮ್ಮಕ್ಕಡ ಕೂಟವನ್ನು ಉಳಿತಾಯ ಯೋಜನೆಯಡಿಯಲ್ಲಿ ಪ್ರಾರಂಭಿಸಿದ್ದಾರೆ. ಈ ಕೂಟಕ್ಕೆ ಇಲ್ಲಿಯವರೆಗೆ 87 ಮಂದಿ ಮಹಿಳೆಯರು ಸದಸ್ಯತ್ವ ಪಡೆದುಕೊಂಡು, ಮಹಿಳಾ ಶಕ್ತಿಯ ಮಾದರಿಯಾಗಿದ್ದಾರೆ. :: ಉದ್ಘಾಟನೆ :: ವಿರಾಜಪೇಟೆ ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಿತು. ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಕೊಡಂದೆರ ಬಾಂಡ್ ಗಣಪತಿ ಹಾಗೂ ಬ್ಯಾಂಕ್ ವ್ಯವಸ್ಥಾಪಕರಾದ ಕೇಳಪಂಡ ಲತಾ ಅವರು ಉದ್ಘಾಟಿಸಿ ಮಾತನಾಡಿ, ಬ್ಯಾಂಕ್ ಅಧ್ಯಕ್ಷ ಗಣಪತಿ ಅವರು, “ಮಹಿಳೆಯರು ಒಗ್ಗೂಡಿ ಉಳಿತಾಯ ಮಾಡಿದರೆ ಕುಟುಂಬದ ಆರ್ಥಿಕ ಭದ್ರತೆಯ ಜೊತೆಗೆ ಸಮಾಜದ ಪ್ರಗತಿಯೂ ಸಾಧ್ಯ. ಜಿಲ್ಲಾ ಸಹಕಾರ ಬ್ಯಾಂಕ್ ಯಾವಾಗಲೂ ಮಹಿಳಾ ಸಬಲೀಕರಣಕ್ಕೆ ಸಾಥ್ ನೀಡುತ್ತದೆ” ಎಂದು ಹೇಳಿದರು. ಬ್ಯಾಂಕ್ ವ್ಯವಸ್ಥಾಪಕಿ ಕೇಳಪಂಡ ಲತಾ ಅವರು, ಮಾತನಾಡಿ, ಮಹಿಳೆಯರಿಗಾಗಿಯೇ ಇರುವ ವಿವಿಧ ಸಾಲ ಸೌಲಭ್ಯಗಳು, ಸ್ವಸಹಾಯ ಗುಂಪುಗಳ…
ಕುಶಾಲನಗರ, ಜು.6 NEWS DESK : ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್ ಸಂಸ್ಥೆ) ಯಲ್ಲಿ ಆರಂಭಗೊಂಡ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ (ಇಂಟಿಗ್ರೇಟೆಡ್ ಕರಿಕುಲಂ) ಕುರಿತು ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಕೂಡಿಗೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕೊಡಗು ಜಿಲ್ಲೆ ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಉಪನ್ಯಾಸಕರ ಸಂಘ ದ ಸಂಯುಕ್ತ ಆಶಯದಲ್ಲಿ ನಡೆಯಿತು. ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ, ಮಾತನಾಡಿದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎ. ಗಣಪತಿ, ಸರ್ಕಾರವು ಸರ್ಕಾರಿ ಪಿಯೂ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳು ಸಿಇಟಿ ಮತ್ತು ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತಿರುವುದನ್ನು ಮನಗಂಡು ವಿಜ್ಞಾನ ಉಪನ್ಯಾಸಕರಿಗೆ ಇಂತಹ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳನ್ನು ಕಾಲೇಜು ಹಂತದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಲು ತರಬೇತಿಯನ್ನು ಹಮ್ಮಿಕೊಂಡಿದೆ. ಈ ತರಬೇತಿಯಲ್ಲಿ ಸಂಪನ್ಮೂಲ ಉಪನ್ಯಾಸಕರು ಹೇಳಿಕೊಡುವ ವಿಚಾರಗಳನ್ನು ತಿಳಿದು…
ಮಂಗಳೂರು NEWS DESK ಜು.05: ಮಂಗಳೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ. ಎ. ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ 2026-27 ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದೆ. ಬಿ. ಎ, ಬಿ. ಕಂ, ಬಿಬಿಎ , ಬಿ. ಎಸ್ಸಿ ಪದವಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಅಥವಾ ಗಣಿತಶಾಸ್ತ್ರ, ಸಂಖ್ಯಾಶಾಸ್ತ್ರ ವನ್ನು ಪದವಿ ತರಗತಿಯಲ್ಲಿ ಒಂದು ಕೋರ್ಸ್ ಆಗಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಎಂ. ಎ. ಬಿಸಿನೆಸ್ ಎಕನಾಮಿಕ್ಸ್ ಕೋರ್ಸ್ ಗೆ ಪ್ರವೇಶಾತಿ ಪಡೆಯಲು ಅರ್ಹತೆಯನ್ನು ಹೊಂದಿರುತ್ತಾರೆ. ಶಿಕ್ಷಣದ ಜೊತೆಯಲ್ಲಿ ವಿಭಾಗವು ವೃತ್ತಿಪರ ಉದ್ಯೋಗ ತರಬೇತಿ, ಹೂಡಿಕೆ , ಬಂಡವಾಳ, ಹಾಗೂ ಹಣಕಾಸಿನ ವಿಶ್ಲೇಷಣೆ, ಅಂತರಾಷ್ಟ್ರೀಯ ಮಟ್ಟದ ವ್ಯವಹಾರ ವಿಶ್ಲೇಷಣೆಯ ಮಾರ್ಗದರ್ಶನ, ಹಣಕಾಸು ವಲಯದಲ್ಲಿರುವ ಅವಕಾಶಗಳು ಮತ್ತು ಸಂಶೋಧನಾ ಕ್ಷೇತ್ರಗಳಿಗೆ ಸಂಬಂಧಿಸಿದ ಶಿಕ್ಷಣಕ್ಕೆ ಮಹತ್ವವನ್ನು ನೀಡಿರುತ್ತದೆ. ಅಂತರಾಷ್ಟ್ರೀಯ ಮಟ್ಟದ ವ್ಯವಹಾರ ವಿಶ್ಲೇಷಣೆಯ ಬಗ್ಗೆ ನಿರಂತರವಾಗಿ ವಿಶ್ಲೇಷಣೆಯನ್ನು ನೀಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡುತ್ತ ಬಂದಿರುತ್ತದೆ. ನುರಿತ…
ಮಡಿಕೇರಿ, ಜು.6 NEWS DESK : ಕೊಡಗು ಜಿಲ್ಲಾ ಲೇಖಕರ ಹಾಗೂ ಕಲಾವಿದರ ಬಳಗದ ವತಿಯಿಂದ ಮಡಿಕೇರಿ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ 2024-25 ನೇ ಸಾಲಿನಲ್ಲಿ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ನಿಡ್ತ ಪ್ರೌಢಶಾಲೆಯ ಕು.ಜೆ.ಎಸ್. ಪೂರ್ವಿಕಾ ಎಂಬ ವಿದ್ಯಾರ್ಥಿನಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಸ್ಥಾಪಿಸಿರುವ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲೆಯ ಹಿರಿಯ ವಕೀಲರೂ ಆದ ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎ.ಲೋಕೇಶ್ ಕುಮಾರ್, ಮಕ್ಕಳ ಪ್ರತಿಭೆ ಪ್ರೋತ್ಸಾಹಕ್ಕೆ ಇಂತಹ ಪುರಸ್ಕಾರಗಳು ಪೂರಕವಾಗಿವೆ. ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಲು ಪ್ರತಿಭಾ ಪುರಸ್ಕಾರ ಸಹಕಾರಿಯಾಗಿದ್ದು, ಇದರಿಂದ ಮತ್ತಷ್ಟು ಮಕ್ಕಳು ಪ್ರೇರೇಪಿತರಾಗಿ ಅವರೂ ಉತ್ತಮ ಸಾಧನೆ ಮಾಡಿ ಪುರಸ್ಕಾರಕ್ಕೆ ಭಾಜನರಾಗುತ್ತಾರೆ. ಈ ಮೂಲಕ ನವ ಸಮಾಜ ನಿಮಾರ್ಣದ ಶಿಲ್ಪಿಗಳಾಗಿ ಹೊರಹೊಮ್ಮುತ್ತಾರೆ ಎಂದರು. ವಿದ್ಯಾರ್ಥಿಗಳ ಶಿಕ್ಷಣ ಹಾಗೂ…
ವಿರಾಜಪೇಟೆ ಜು.6 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವಿರಾಜಪೇಟೆ ತಾಲೂಕಿನ ವಿರಾಜಪೇಟೆ ಮತ್ತು ಅಮ್ಮತಿ ವಲಯದ ಕಾರ್ಯಕ್ಷೇತ್ರದಲ್ಲಿ ನೂತನ ‘ಡಿಜಿ ಪೇ’ ಸೇವೆಗೆ ವಿರಾಜಪೇಟೆಯ ಕಚೇರಿಯಲ್ಲಿ ಚಾಲನೆ ದೊರೆಯಿತು. ಡಾ. ಡಿ.ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರ ನೇತೃತ್ವದಲ್ಲಿ ತಾಲೂಕಿನಲ್ಲಿ ಈ ವಿನೂತನ ಸೇವೆ ಪ್ರಥಮ ಬಾರಿಗೆ ಆರಂಭಗೊಂಡಿದ್ದು, ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ಹರೀಶ್ ಪಿ. ಅವರು ಉದ್ಘಾಟಿಸಿ ಮಾತನಾಡಿ, “ಡಿಜಿ ಪೇ ಸೇವೆಯು ಗ್ರಾಮೀಣ ಭಾಗದ ಜನರಿಗೆ ಅತ್ಯಂತ ಸಹಕಾರಿಯಾಗಲಿದೆ. ವಾರದ ನಗದು ಸಂಗ್ರಹಣೆ ದಿನದಂದು ಸದಸ್ಯರು ತಮ್ಮ ಎಟಿಎಂ ಕಾರ್ಡ್ ಅಥವಾ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ ಬಳಸಿ, ತಮ್ಮ ಬ್ಯಾಂಕ್ ಖಾತೆಯಿಂದ ಸುಲಭವಾಗಿ ರೂ.500 ರಿಂದ ರೂ 10,000 ವರೆಗೆ ನಗದು ಹಣವನ್ನು ಪಡೆಯಬಹುದು. ಸಿಎಸ್ಸಿ ಕಾರ್ಯಕ್ರಮದ ಈ ಡಿಜಿಟಲ್ ಸೇವೆಯು ಪ್ರತಿಯೊಬ್ಬ ಗ್ರಾಮೀಣ ಜನರಿಗೂ ತಲುಪಬೇಕು. ಈ ಬಗ್ಗೆ ಒಕ್ಕೂಟದ…






