ಲೇಖಕ: admin

ಮಡಿಕೇರಿ ಡಿ.5 NEWS DESK : ಕೊಡಗಿನ ಸುಗ್ಗಿ ಹಬ್ಬವಾದ ಪುತ್ತರಿಯನ್ನು ಕೊಡಗಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಪುತ್ತರಿ ಹಬ್ಬದ ಮೊದಲ ಪೂಜೆ ನಡೆಯಿತು. ಬಳಿಕ ಜಿಲ್ಲೆಯಾದ್ಯಂತ ವಿವಿಧ ದೇವಾಲಯಗಳಲ್ಲಿ ಭತ್ತದ ಕದಿರಿಗೆ ಸಾಂಪ್ರದಾಯಿಕ ಪೂಜೆ ನೆರವೇರಿತು. ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಪುತ್ತರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ನಿಗದಿತ ಸಮಯದಲ್ಲಿ ಕದಿರು ಕೊಯ್ದು ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಪೊಲಿಪೊಲಿ ದೇವಾ ಉದ್ಘೋಷಣೆಯೊಂದಿಗೆ ಧಾನ್ಯಲಕ್ಷ್ಮಿಯನ್ನು ಬರಮಾಡಿಕೊಂಡರು. ನಂತರ ನೆರೆದಿದ್ದವರಿಗೆ ಕದಿರು ವಿತರಿಸಲಾಯಿತು.

Read More

ಮಡಿಕೇರಿ ಡಿ.5 NEWS DESK : ಇತಿಹಾಸ ಪ್ರಸಿದ್ಧದ ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಡಿ.7 ರಂದು  ಕುಂದಾ ಸಮೀಪದ ಕೈಮುಡಿಕೆ ಕೋಲ್ ಮಂದ್’ನಲ್ಲಿ ನಡೆಯಲಿದೆ ಎಂದು ತಕ್ಕ ಮುಖ್ಯಸ್ಥರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬೊಟ್ಟಿಯತ್ ಮೂರು ನಾಡಿನ ತಕ್ಕ ಮುಖ್ಯಸ್ಥರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ, ಕೈಮುಡಿಕೆ ಪುತ್ತರಿ ಕೋಲ್ ಮಂದ್’ಗೆ ಶತ ಶತಮಾನಗಳ ಇತಿಹಾಸವಿದ್ದು, ಬೊಟ್ಟಿಯತ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡಿಗೆ ಸೇರಿದ ಎಲ್ಲಾ ಗ್ರಾಮಗಳು ಒಂದೆಡೆ ಸೇರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪೊನ್ನಂಪೇಟೆ-ಅರ್ವತೋಕ್ಲುವಿನಿಂದ ಹಿಡಿದು ಹಾತೂರುವಿನವರೆಗೂ, ಹಾತೂರು-ಬಿಟ್ಟಂಗಾಲದಿಂದ ಹಿಡಿದು ವಿ ಬಾಡಿಗ, ಬಿ.ಶೆಟ್ಟಿಗೇರಿಯವರೆಗಿನ ಎಲ್ಲಾ ಗ್ರಾಮಗಳು ಕೈಮುಡಿಕೆ ವ್ಯಾಪ್ತಿಗೆ ಒಳಪಡುತ್ತದೆ. ಪ್ರತಿವರ್ಷ ಪುತ್ತರಿ ಕಳೆದು ಎರಡು ದಿವಸದಲ್ಲಿ ಇಲ್ಲಿ ಕೋಲ್ ಮಂದ್ ನಡೆಯುತ್ತಿದ್ದು, ಈ ಬಾರಿ ಡಿ.7 ರಂದು ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎಂದು ಹೇಳಿದ್ದಾರೆ.…

Read More

ಚೆಟ್ಟಳ್ಳಿ ಡಿ.5 NEWS DESK : ಕೊಡಗಿನಾದ್ಯಂತ ಪುತ್ತರಿ ನಮ್ಮೆಯ ಆಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಪುತ್ತರಿರ ಕುಟುಂಬದ ಐನ್ ಮನೆಯಲ್ಲಿ ರಾತ್ರಿ ನೆರೆಕಟ್ಡಿ ಫಲಹಾರ ಮುಗಿಸಿ, ಗದ್ದೆಗಳಿಗೆ ತೆರಳಿ 9.40ಕ್ಕೆ ಕದುರು ತೆಗೆದು ಮನೆಗೆ ತರಲಾಯಿತು. ಕುಟುಂಬದ ಹಿರಿಯರಾದ ಗಣೇಶ್ ಭೀಮಯ್ಯ ಪುತ್ತರಿ ನಮ್ಮೆಯ ಆಚರಣೆಯೊಂದಿಗೆ ಎಲ್ಲರಿಗೂ ಒಳಿತನ್ನು ಮಾಡಲೆಂದು ಬೇಡಿಕೊಂಡರು. ದೇವನೆಲೆಯಲ್ಲಿ ಮೀದಿ ನೀರಿಟ್ಟು ಊಟೋಪಚಾರ ಮಾಡಲಾಯಿತು.

Read More

ಮಡಿಕೇರಿ ಡಿ.5 NEWS DESK : ನಗರದ ಸುದರ್ಶನ ವೃತ್ತದ ಸರಕಾರಿ ಜಾಗದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಮಾತನಾಡಿದ ಶಾಸಕರು ಮಡಿಕೇರಿ ನಗರ ಸಭೆಯ ಅಧ್ಯಕ್ಷರು ಮತ್ತು ಸದಸ್ಯರ ಒಮ್ಮತದ ಸಹಕಾರದಿಂದ ನಗರದಲ್ಲಿ ಹಲವಾರು ವರ್ಷಗಳ ಬೇಡಿಕೆ ಇದ್ದ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಯ ಕಾಲ ಈಗ ಕೂಡಿ ಬಂದಿದೆ. ಸುಮಾರು 40 ಲಕ್ಷ ಅನುದಾನ, ಬಳಸಿಕೊಂಡು ಉತ್ತಮ ಗುಣಮಟ್ಟದ ಕಾಮಗಾರಿಯ ಅಂಬೇಡ್ಕರ್ ನೆನಪಿನ ಕಂಚಿನ ಪ್ರತಿಮೆ ಸ್ಥಾಪನೆಯಾಗಲಿದೆ. ಈ ಕಾಮಗಾರಿಯನ್ನು 4-5 ತಿಂಗಳಲ್ಲಿ ಸಮಿತಿ ಸದಸ್ಯರು ಗಮನಹರಿಸಿ ಮುಗಿಸಬೇಕು, ಶಾಸಕರ ನಿಧಿಯಿಂದ ಇನ್ನು ಹೆಚ್ಚಿನ ಅನುದಾನ ಕೊಡಲು ನಾನು ಪ್ರಯತ್ನಿಸುವುದಾಗಿ ತಿಳಿಸಿದರು. ಕಾಮಗಾರಿ ಮುಗಿದ ನಂತರ ಜಿಲ್ಲೆಯ ಎಲ್ಲಾ ಸಂಘಟನೆಗಳನ್ನು ಸೇರಿಸಿಕೊಂಡು ದೊಡ್ಡಮಟ್ಟದಲ್ಲಿ ಉದ್ಘಾಟನೆ ಕಾರ್ಯಕ್ರಮ ಇಟ್ಟುಕೊಳ್ಳುವ ಬಗ್ಗೆ ಕ್ರಮ ವಹಿಸುತ್ತೇನೆ. ಎಲ್ಲರು ಸಹಕಾರ ನೀಡುವಂತೆ ಕೋರಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ…

Read More

ಮಡಿಕೇರಿ ಡಿ.4 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ 32ನೇ ವರ್ಷದ ಸಾರ್ವತ್ರಿಕ ‘ಪುತ್ತರಿ ನಮ್ಮೆ’ಯನ್ನು ಆದಿಮಸಂಜಾತ ಆನಿಮಿಸ್ಟಿಕ್ ನಂಬಿಗೆಯ ಏಕ ಜನಾಂಗೀಯ ಕೊಡವರ ಸಕಲ ಜನಪದ ಪರಂಪರೆಯಂತೆ ಇಂದು ಬೆಳಿಗ್ಗೆ ಹೋಬಳಿಯ “ಪತ್ತ್ ಕಟ್” ನಾಡ್ ನ ಬಿಳೂರು ಗ್ರಾಮದಲ್ಲಿ ಆಚರಿಸಲಾಯಿತು. ಬಿಳೂರು ಗ್ರಾಮದ ಕಾಂಡೇರ ಸುರೇಶ್ ಅವರ ಭತ್ತದ ಗದ್ದೆಯಲ್ಲಿ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಕದಿರು ತೆಗೆಯುವ ಮೂಲಕ ‘ಪುತ್ತರಿ ನಮ್ಮೆ’ಯನ್ನು ಸಂಭ್ರಮದಿಂದ ಆಚರಿಸಿ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು. ದುಡಿಕೊಟ್ಟ್-ಪಾಟ್ ಮೂಲಕ ಗದ್ದೆಗೆ ಮೆರವಣಿಗೆಯಲ್ಲಿ ತೆರಳಿ ಗಾಳಿಯಲ್ಲಿ ಗುಂಡುಹಾರಿಸುವ ಮೂಲಕ ಕದಿರು ತೆಗೆಯಲಾಯಿತು. ಕೊಡವ ಆಟ್-ಪಾಟ್ ನಡೆಯಿತು. ಅಂತಿಮವಾಗಿ ಮಾನವ ಸರಪಳಿ ಮೂಲಕ ಕೊಡವ ಲ್ಯಾಂಡ್, ವಿಶ್ವ ರಾಷ್ಟ್ರ ಸಂಸ್ಥೆಯ ಘೋಷಣೆಯ ಪ್ರಕಾರ ಅತ್ಯಂತ ಸಣ್ಣ ಪ್ರಾಚೀನ ಬುಡಕಟ್ಟಾದ ಕೊಡವರಿಗೆ ಅಂತರರಾಷ್ಟ್ರೀಯ ಕಾನೂನಡಿಯಲ್ಲಿ ಭದ್ರತೆ ಮತ್ತು ರಾಜ್ಯಾಂಗ ಖಾತ್ರಿಗಾಗಿ ಸೂರ್ಯ-ಚಂದ್ರ, ಜಲದೇವಿ ಕಾವೇರಿ, ಸಂವಿಧಾನ ಮತ್ತು ಗುರು-ಕಾರೋಣರ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.…

Read More

ಮಡಿಕೇರಿ ಡಿ.4 NEWS DESK :  ಮದೆ ಗ್ರಾಮದ ಅವಂದುೂರಿನ ಪುರಾತನ ಹಾಗೂ ಪ್ರಸಿದ್ಧ ಶ್ರೀ ಕೃಷ್ಣ ದೇವಾಲಯ ಪುನರ್ ನಿರ್ಮಾಣಗೊಳ್ಳುತ್ತಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ  ಕಾಮಗಾರಿ ಪರಿಶೀಲಿಸಿದರು. ಬಳಿಕ ದೇವಸ್ಥಾನ ಸಮಿತಿಯವರ ಸನ್ಮಾನ ಸ್ವೀಕರಿಸಿದ ಶಾಸಕರು, ತಮ್ಮ ವೈಯುಕ್ತಿಕ ಧನಸಹಾಯವಾಗಿ 1 ಲಕ್ಷದ ಕೊಡುಗೆಯನ್ನು ನೀಡಿದರು. ದೇವಸ್ಥಾನದವರ ಮನವಿಗೆ ಸ್ಪಂದಿಸಿದ ಶಾಸಕರು, ಸರಕಾರದ ಕಡೆಯಿಂದ ದೇವಸ್ಥಾನ ಅಭಿವೃದ್ಧಿಗೆ ಸಾಧ್ಯವಾದಷ್ಟು ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಪ್ರಮುಖರಾದ ಕೊಲ್ಯದ ಗಿರಿಶ್, ಬಗರ್ ಹುಕುಂ ಸದಸ್ಯರಾದ ಕೇಟೋಳಿ ಮೋಹನ್ ರಾಜ್, ಪಟ್ಟಡ ದೀಪಕ್, ಕಾವೇರಮ್ಮನ ಕುಮಾರ್, ಸೂರಜ್ ಹೊಸೂರು ಮೊದಲಾದವರು ಉಪಸ್ಥಿತರಿದ್ದರು.

Read More

ಮಡಿಕೇರಿ ಡಿ.4 NEWS DESK : ವಿರಾಜಪೇಟೆ ಐಪಿಎಲ್ ಪ್ರಿಮಿಯರ್ ಲೀಗ್  ಟಿ10 ಕ್ರೀಡಾಕೂಟದ ಲೋಗೋ ವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಬಿಡುಗಡೆಗೊಳಿಸಿ, ಆಯೋಜಕರಿಗೆ ಶುಭ ಹಾರೈಸಿದರು. ಈ ಸಂದರ್ಭ ಕ್ರೀಡಾ ಆಯೋಜಕರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Read More

ಮಡಿಕೇರಿ ಡಿ.4 NEWS DESK : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿ ಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 22 ರಿಂದ ನಿರುದ್ಯೋಗಿ ಪುರುಷರಿಗೆ ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರ ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 35 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಡಿಸೆಂಬರ್, 15 ರಂದು ಬೆಳಗ್ಗೆ 10 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ),…

Read More

ಸೋಮವಾರಪೇಟೆ ಡಿ.4 NEWS DESK : ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಅತ್ಯುತ್ತಮ ವೇದಿಕೆಯಾಗಿದ್ದು, ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ವಿದ್ಯಾರ್ಥಿಗಳಿಗೆ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬಳಗುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಭಾ ಕಾರಂಜಿ ಕೇವಲ ಸ್ಫರ್ಧೆಯಲ್ಲ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗಿದೆ. ಇಲ್ಲಿ ಸಿಗುವ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡರೆ ಇನ್ನಷ್ಟು ಕಲಿಕೆಯ ಬಗ್ಗೆ ಆಸಕ್ತಿ ಮೂಡುತ್ತದೆ ಎಂದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಸವರಾಜು, ಸರ್ಕಾರಿ ನೌಕರರ ಸಂಘದ ನಿರ್ದೆಶಕ ಎಂ.ಎಂ.ಯಶ್‍ವಂತ್ ಕುಮಾರ್, ಬೇಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೋಹನ್, ಸಿಆರ್‍ಪಿ ಗಿರೀಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಮಿತ್ರ, ಉಪಾಧ್ಯಕ್ಷ ಯಶವಂತ್, ಗ್ರಾಮದ ಪ್ರಮುಖರಾದ ಪಾಪಮ್ಮ, ಸುಮಾ, ಪುಟ್ಟರಾಜು, ಸುರೇಂದ್ರ ಸುರೇಶ ಮತ್ತಿತರರು ಇದ್ದರು. ಶಿಕ್ಷಕರಾದ ಭಾಗ್ಯ, ಧರ್ಮಾವತಿ, ಗೀತಾ…

Read More

ಮಡಿಕೇರಿ ಡಿ.4 NEWS DESK : ಮಡಿಕೇರಿ ಡಿ.4 : ಪ್ರವಾಸಿ ವಾಹನಗಳು ಸೇರಿದಂತೆ ಎಲ್ಲಾ ರೀತಿಯ ವಾಹನಗಳನ್ನು ತಪಾಸಣೆ ನಡೆಸಿ, ಒಟ್ಟು 1,140 ವಾಹನಗಳಿಂದ, ಪಾರ್ಟ್ ಬಿ ತೆರಿಗೆ ರೂ.1,57,21,024, ಪಾರ್ಟ್ ಎ ತೆರಿಗೆ ರೂ. 29,357 ಮತ್ತು ದಂಡ ಮೊತ್ತ ರೂ.2,27,800 ಸಂಗ್ರಹಿಸಲಾಗಿದೆ. ಒಟ್ಟು ರೂ.1,59,78,181 ರಾಜಸ್ವವನ್ನು ನವೆಂಬರ್ ತಿಂಗಳಿನಲ್ಲಿ ಸಂಗ್ರಹಿಸಲಾಗಿದ್ದು, ಗುರಿ ಮೀರಿದ ಸಾಧನೆ ಮಾಡಲಾಗಿದೆ ಎಂದು ಕೊಡಗು ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಟಿ.ಸತೀಶ್ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲೆಯಾದ್ಯಂತ ನಿರಂತರ ವಾಹನಗಳ ತಪಾಸಣಾ ಕಾರ್ಯ ನಡೆಸಲಾಗುತ್ತಿದೆ. ನ.1 ರಿಂದ 30 ರವರೆಗೆ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಕಾರ್ಯಕ್ರಮ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಸಹಯೋಗದೊಂದಿಗೆ ಕೊಡಗು ಜಿಲ್ಲೆಯಾದ್ಯಂತ ನಡೆಯಿತು. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಇನ್ನಿತರ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಪ್ರಬಂಧ ಮತ್ತು ಚರ್ಚಾಸ್ಪರ್ಧೆಯನ್ನು ನಡೆಸಲಾಗಿತ್ತು. ಅಲ್ಲದೆ ಸರ್ಕಾರಿ ಜೂನಿಯರ್ ಕಾಲೇಜು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ…

Read More