ಲೇಖಕ: admin

ನಾಪೋಕ್ಲು ಏ.18 : ಮೂಟೇರಿ ಉಮಾಮಹೇಶ್ವರಿ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಎರಡು ದಿನಗಳ ಕಾಲ ನಡೆದ ಹಬ್ಬದಲ್ಲಿ ದೀಪಾರಾಧನೆ, ದೇವರ ನೃತ್ಯಬಲಿ ನಡೆಯಿತು. ಮುಖ್ಯ ಹಬ್ಬದಂದು ಮಧ್ಯಾಹ್ನ ಎತ್ತುಪೋರಾಟ, ಬೊಳಕಾಟ್, ದುಡಿಕೊಟ್ ಪಾಟ್, ಮಹಾಪೂಜೆ ತೀರ್ಥ ಪ್ರಸಾದ ವಿತರಣೆ ನೆರವೇರಿತು. ರಾತ್ರಿ ದೇವರ ಅವಭೃತ ಸ್ನಾನ ಹಾಗೂ ನೃತ್ಯಬಲಿ ನಡೆಯಿತು. ವಾರ್ಷಿಕ ಉತ್ಸವದಲ್ಲಿ ಅಧಿಕ ಸಂಖ್ಯೆಯ ಭಕ್ತರು ಪಾಲ್ಗೊಂಡು ತಮ್ಮ ಇಷ್ಟಾರ್ಥ ಸಿದ್ದಿಗೆ ವಿವಿಧ ಹರಕೆ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭ ದೇವಾಲಯದ ತಕ್ಕರಾದ ವಾಂಜಂಡ ಬೋಪಯ್ಯ, ಆಡಳಿತ ಮಂಡಳಿ ಅಧ್ಯಕ್ಷ ಅಪ್ಪಚ್ಚಿರ ರೆಮ್ಮಿ ನಾಣಯ್ಯ, ಉಪಾಧ್ಯಕ್ಷ ಕಾಟುಮಣಿಯಂಡ ಉಮೇಶ್, ಕಾರ್ಯದರ್ಶಿ ಪುಲ್ಲೇರ ವಿಠಲ ಪಳಂಗಪ್ಪ, ಆಡಳಿತ ಮಂಡಳಿ ಸದಸ್ಯರು, ಊರ ಮತ್ತು ಪರಾವೂರಿನ ಭಕ್ತಾದಿಗಳು ಪಾಲ್ಗೊಂಡಿದ್ದರು. ದೇವಾಲಯದ ಮುಖ್ಯ ಅರ್ಚಕ ಕೀರ್ತೀಶ್ ಪೂಜಾ ಕೈ ಕಾರ್ಯಗಳನ್ನು ನೆರವೇರಿಸಿದರು. ವರದಿ : ದುಗ್ಗಳ ಸದಾನಂದ.  

Read More

ನಾಪೋಕ್ಲು ಏ.18 : ಕ್ರೀಡೆ ಮನುಷ್ಯನ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ, ಎಳೆ ಮನಸ್ಸುಗಳು ಕ್ರೀಡೆ ಎಂದಾಕ್ಷಣ ಉಲ್ಲಾಸಿತಗೊಳ್ಳುತ್ತವೆ ಅರಳುವ ಪ್ರತಿಭೆಗಳಿಗೆ ಇಂತಹ ಶಿಬಿರಗಳು ವೇದಿಕೆಯಾಗಿವೆ ಎಂದು ಕೆಂಬಡತಂಡ ಸಿಮ್ಸ್ ಮಂದಣ್ಣ ಅಭಿಪ್ರಾಯಪಟ್ಟರು. ಮೂರ್ನಾಡು ವಿದ್ಯಾ ಸಂಸ್ಥೆಯ ಜನರಲ್ ಕೆ.ಎಸ್.ತಿಮ್ಮಯ್ಯ ಅಕಾಡೆಮಿ ಫಾರ್ ಸ್ಪೋರ್ಟ್ಸ್ ಅಂಡ್ ಗೇಮ್ಸ್ ವತಿಯಿಂದ 12ನೇ ವರ್ಷದ ಹಾಕಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಶಿಬಿರಾರ್ಥಿಗಳು ಶಿಬಿರ ಮುಗಿದ ನಂತರವೂ ಕೂಡ ದೈಹಿಕ ಚಟುವಟಿಕೆಯ ವ್ಯಾಯಾಮಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಏಪ್ರಿಲ್ 1 ರಿಂದ ಆರಂಭಗೊಂಡು ಸುಮಾರು 16 ದಿನಗಳ ಕಾಲ ನಡೆದ ಶಿಬಿರ ಮುಕ್ತಾಯಗೊಂಡಿತು. 74 ಶಿಬಿರಾರ್ಥಿಗಳನ್ನ ಒಳಗೊಂಡಿದ್ದ ಈ ಶಿಬಿರದಲ್ಲಿ ಆರು ಮಂದಿ ತರಬೇತಿದಾರರಿದ್ದರು. ಎಲ್ಲಾ ದೈಹಿಕ ತರಬೇತುದಾರರು ಶಿಬಿರಾರ್ಥಿಗಳು ಪೋಷಕ ವರ್ಗದವರು ಹಾಜರಿದ್ದರು. ಈ ಸಂದರ್ಭ ವೇದಿಕೆಯಲ್ಲಿದ್ದ ಗಣ್ಯರು ಶಿಬಿರಾರ್ಥಿಗಳಿಗೆ ಅರ್ಹತಾ ಪತ್ರ ವಿತರಿಸಿ ಶುಭ ಹಾರೈಸಿದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಏ.17 : ರಾಜ್ಯದಲ್ಲಿ ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆೆ ಮತದಾನದ ಪವಿತ್ರ ದಿನ ಮಾತ್ರವಲ್ಲ ಶೇ.40ರ ಕಮಿಷನ್ ದಂಧೆ, ಮೇರೆ ಮೀರಿರುವ ಭ್ರಷ್ಟಾಚಾರವನ್ನು ಓಡಿಸುವ ಮತ್ತು ಡಬಲ್ ಇಂಜಿನ್ ಸರ್ಕಾರಕ್ಕೆ ಉತ್ತರ ನೀಡುವ ಮಹತ್ವದ ದಿನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಗಾಂಧಿ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡು ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಅಜ್ಜಿಕುಟ್ಟೀರ ಪೊನ್ನಣ್ಣ ಅವರ ಗೆಲುವಿಗಾಗಿ ಮತಯಾಚನೆ ಮಾಡಿ ಅವರು ಮಾತನಾಡಿದರು. ರಾಜ್ಯದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿತ್ಯೋಪಯೋಗಿ ವಸ್ತಗಳ ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಮತ್ತು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಕೊಡುವುದಾಗಿ ಡಬಲ್ ಇಂಜಿನ್ ಸರ್ಕಾರ ನೀಡಿದ್ದ ಭರವಸೆಗಳು ಹುಸಿಯಾಗಿದೆ. ಇದಕ್ಕೆ ಮೇ 10 ರಂದು ಜನರೇ ಉತ್ತರ ನೀಡಬೇಕು ಮತ್ತು ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು…

Read More

ಸೋಮವಾರಪೇಟೆ ಏ.17 : ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಬಿ.ಗಣೇಶ್ ಆಶಯ ವ್ಯಕ್ತಪಡಿಸಿದರು. ಈ ಹಿಂದೆ 20 ತಿಂಗಳ ಅವದಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿಯವರು ರೈತರ ಸಾಲಮನ್ನಾ ಮಾಡಿದ್ದಾರೆ. 2018ರಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ ಹಿನ್ನೆಲೆಯಲ್ಲಿ ಮನೆ ಆಸ್ತಿ ಕಳೆದುಕೊಂಡ ಸಂತ್ರಸ್ತರಿಗೆ 1000 ಮನೆಗಳನ್ನು ನಿರ್ಮಿಸಿಕೊಟ್ಟು, ಕೊಡಗಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ, ಸ್ವಸಹಾಯ ಸಂಘದ ಸದಸ್ಯರ ಸಾಲಮನ್ನಾ, ಆಟೋಚಾಲಕರಿಗೆ 2ಸಾವಿರ ರೂ.ಗಳ ಮಾಶಾಸನ, ವೃದ್ಧಾಪ್ಯ ಹಾಗು ಅಂಗವಿಕಲರಿಗೆ 5 ಸಾವಿರ ರೂ.ಗಳ ಮಾಶಾಸನ, ಬಡ ಕುಟುಂಬಕ್ಕೆ ವಾರ್ಷಿಕ ಉಚಿತ 5 ಗ್ಯಾಸ್ ಸಿಲಿಂಡರ್‌ಗಳನ್ನು ವಿತರಿಸುವ ಭರವಸೆಯನ್ನು ಜೆಡಿಎಸ್ ನೀಡಿದೆ. ನುಡಿದಂತೆ ನಡೆಯುವ ಏಕೈಕ ಪಕ್ಷ ಜೆಡಿಎಸ್ ಎಂದು ಹೇಳಿದರು. ವಿರಾಜಪೇಟೆ ಕ್ಷೇತ್ರಕ್ಕೆ ಅಲ್ಪಸಂಖ್ಯಾಯತರಿಗೆ ಟಿಕೇಟ್ ನೀಡಿದ ಕೀರ್ತಿ ಜೆಡಿಎಸ್‌ಗೆ ಸಲ್ಲುತ್ತದೆ ಎಂದರು. ಪ್ರಾದೇಶಿಕ ಪಕ್ಷದ ಆಡಳಿತದಿಂದ ಮಾತ್ರ…

Read More

ಸೋಮವಾರಪೇಟೆ ಏ.17 : ಹರಗ ಗ್ರಾಮದಲ್ಲಿ ಯಾವ ವ್ಯಕ್ತಿಗೂ ಬಹಿಷ್ಕಾರ ಹಾಕಿಲ್ಲ. ಇಂತಹ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಹರಗ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಎ.ಧರ್ಮಪ್ಪ ಹೇಳಿದರು. ಗ್ರಾಮ ನಿವಾಸಿಯಾಗಿರುವ ಪಿ.ಡಿ.ಗಿರೀಶ್ ಎಂಬವರು, ಗ್ರಾಮಾಭಿವೃದ್ಧಿ ಮಂಡಳಿ ವಿರುದ್ಧ ಬಹಿಷ್ಕಾರದ ದೂರು ನೀಡಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಉಪತಹಸೀಲ್ದಾರ್, ಬಿಸಿಎಂ ಅಧಿಕಾರಿ ಹಾಗು ಇನ್ನಿತರ ಅಧಿಕಾರಿಗಳು ಗ್ರಾಮಕ್ಕೆ ಬಂದು ಹೇಳಿಕೆ ಪಡೆದುಕೊಂಡು ಸಲಹೆ ನೀಡಿ ಹೋಗಿದ್ದಾರೆ ಎಂದು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಗ್ರಾಮದ ಪಿ.ಡಿ.ಗಿರೀಶ್ ಎಂಬವರು ಅರಣ್ಯ ಒತ್ತುವರಿ 6 ಎಕರೆ ಜಾಗದಲ್ಲಿ ಕಾಫಿ ತೋಟ ಮಾಡಿದ್ದರು. ಬೆಟ್ಟದಲ್ಲಿ ಯಂತ್ರದ ಮೂಲಕ ರಸ್ತೆ ಮಾಡಿದ್ದರು. ಇದನ್ನು ಗಮನಿಸಿದ ಅರಣ್ಯ ಇಲಾಖೆಯವರು ನೋಟಿಸ್ ನೀಡಿ, ಕಾಫಿ ಗಿಡಗಳನ್ನು ಕಿತ್ತು ತೆರವುಗೊಳಿಸಿದ್ದಾರೆ. ಅರಣ್ಯ ಇಲಾಖೆಯವರಿಗೆ ಹರಗ ಗ್ರಾಮದವರು ಹೇಳಿ ತೆರವು ಮಾಡಿಸಿದ್ದಾರೆ ಎಂದು ಗಿರೀಶ್ ಸುಳ್ಳು ಆರೋಪ ಮಾಡಿ ಕಾಗಿನೆಲೆ ಚಾಮುಂಡೇಶ್ವರಿ ದೇವಾಲಯದಿಂದ 40 ಮಂದಿಗೆ ನೋಟೀಸು ಮಾಡಿಸಿದ್ದಾರೆ. ನೋಟೀಸು ಪಡೆದ 40…

Read More

ನಾಪೋಕ್ಲು ಏ.17 : ನಾಪೋಕ್ಲು ಸಮೀಪದ ನೆಲಜಿ ಶ್ರೀ ಭಗವತಿ(ಪೋವದಿಯಮ್ಮೆ) ದೇವಾಲಯದ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಎತ್ತು ಪೋರಾಟ, ಆಂಗೋಲ ಪೊಂಗೋಲ ಸೇವೆ, ವಿವಿಧ ಪೂಜಾ ಕೈಂಕರ್ಯ ಮತ್ತು ದೇವರ ನೃತ್ಯ ಬಲಿ ನಡೆಯಿತು. ಶ್ರೀ ದೇವಿಯ ಸನ್ನಿಧಿಯಲ್ಲಿ ಪೀಲಿ ಆಟ್, ದೇವಿಯ ನೃತ್ಯ ಬಲಿ ಹಾಗೂ ವಿವಿಧ ಸೇವೆಗಳು ನಡೆದವು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.  ನೆಲಜಿ ಶ್ರೀ ಭಗವತಿ ದೇವಾಲಯದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿಯ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. (ವರದಿ : ದುಗ್ಗಳ ಸದಾನಂದ)

Read More

ನಾಪೋಕ್ಲು ಏ.17 : ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯ ಅಜ್ಜಿಮುಟ್ಟ ಪಳ್ಳಿರಾಣೆ ಪ್ರದೇಶವನ್ನು ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಪಂಚಾಯ್ತಿ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಅಸಮಾಧಾನಗೊಂಡ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದರು. ಈ ಬಾರಿಯ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಕಳೆದ ಎರಡು ಮೂರು ವರ್ಷಗಳಿಂದ ಇಲ್ಲಿನ ಜನರು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ನೀರಿನ ಟ್ಯಾಂಕ್  ಇದ್ದರೂ ನೀರು ಸರಬರಾಜಾಗುತ್ತಿಲ್ಲ. ಪ್ರಧಾನಮಂತ್ರಿಗಳ ಜಲಜೀವನ್ ಯೋಜನೆ ಇಲ್ಲಿ ಅನುಷ್ಠಾನಗೊಂಡಿಲ್ಲ. ಕುಡಿಯುವ ನೀರಿಗಾಗಿ ಸಮೀಪದ ಮಸೀದಿಯ ಬಳಿಯ ಕೊಳವೆಬಾವಿಯನ್ನು  ಅವಲಂಬಿಸಬೇಕಾಗಿದೆ. ಹೆಚ್ಚಿನ ನೀರಿಗಾಗಿ ದೂರದ ಹೊಳೆಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು  ಅಸಮಾಧಾನ ವ್ಯಕ್ತಪಡಿಸಿರುವ ಗ್ರಾಮಸ್ಥರಾದ ಮoದಪಂಡ ಮೊಣ್ಣಪ್ಪ, ಇಬ್ರಾಹಿಂ ಪಿ.ಬಿ,ನಬೀಸಾ, ಫೇಮೀನಾ ಮತ್ತಿತರರು ಚುನಾವಣೆ ಬಹಿಷ್ಕರಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.  ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯ ನೀಡದ ಪಂಚಾಯಿತಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸುವುದಾಗಿ ಹೇಳಿದರು. ಪಳ್ಳಿರಾಣೆಗೆ ತುರ್ತಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಕೊಡಬೇಕು ಮತ್ತು…

Read More

ಕುಶಾಲನಗರ ಏ.17 :  ಆರೋಗ್ಯಕರ ಬದುಕನ್ನು ಸಾಗಿಸಲು ಉತ್ತಮ ಜೀವನ ಶೈಲಿಯೊಂದಿಗೆ ಸ್ವಚ್ಚ ಹಾಗೂ ಉತ್ತಮ ಪರಿಸರ ಅತ್ಯಗತ್ಯವಾಗಿದೆ, ಸಾರ್ವಜನಿಕ ಪ್ರದೇಶಗಳಲ್ಲಿ ಮರ ಗಿಡಗಳನ್ನು ಹೆಚ್ಚು ಹೆಚ್ಚಾಗಿ ಬೆಳೆಸುವ ಮೂಲಕ ಪ್ರಕೃತಿಯ ಆರಾಧನೆಯೊಂದಿಗೆ ಉತ್ತಮ ಪರಿಸರ ನಿರ್ಮಾಣ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕಾವೇರಿ ನದಿ ಸ್ವಚ್ಚತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರದ ಟೀಂ ಆಟಿಟ್ಯೂಡ್ ಕಲ್ಚರಲ್ ಅಕಾಡೆಮಿಯ ವತಿಯಿಂದ ಸೀಜನ್-7 ರ ಬೇಸಿಗೆ ಶಿಬಿರದ ಅಂಗವಾಗಿ ಸ್ಥಳೀಯ ಕಾವೇರಿ ಉದ್ಯಾನವನದಲ್ಲಿ ನಡೆದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಿನೇ ದಿನೇ ಹೆಚ್ಚುತ್ತಿರುವ ಭೂಮಿಯ ತಾಪಮಾನವನ್ನು ಕಡಿಮೆ ಮಾಡಲು ಹಾಗೂ ಹಸಿರನ್ನು ಹೆಚ್ಚಿಸಿ ಶುದ್ಧ ಗಾಳಿಯನ್ನು ಪಡೆಯಲು ಪ್ರತಿಯೊಬ್ಬ ನಾಗರಿಕರು ಮರಗಿಡಗಳನ್ನು ನೆಟ್ಟು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಹೇಳಿದರು. ಮಕ್ಕಳುತಮ್ಮ ಹುಟ್ಟು ಹಬ್ಬದ ಸಂದರ್ಭ ಒಂದು ಗಿಡವನ್ನು ಕಡ್ಡಾಯವಾಗಿ ನೆಟ್ಟು ಬೆಳೆಸುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದರು. ಟೀಂ ಆಟಿಟ್ಯೂಡ್ ಕಲ್ಚರಲ್ ಅಕಾಡೆಮಿಯ…

Read More

ಮಡಿಕೇರಿ ಏ.17 : ಭಾರತದ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 132ನೇ  ಜಯಂತಿಯನ್ನು ಪೊನ್ನಂಪೇಟೆಯ  ಬೆಳ್ಳೂರು ಗ್ರಾಮದಲ್ಲಿ  ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಬೆಳ್ಳೂರು ಗ್ರಾಮದ ಹಿರಿಯರಾದ ಮುತ್ತಣ್ಣ  ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ಸಮಿತಿಯ ಪ್ರಮುಖರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲರ್ಪಣೆ ಮಾಡಿ ಗೌರವಿಸಿದರು. ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ  ಕೃಷ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಸಂಘಟನಾ ಸಂಚಾಲಕಾರದ ಕರ್ಕು, ಧನು, ಚಂದ್ರ, ಜೌರ, ನಿತೇಶ್ , ಗ್ರಾಮ ಸಂಚಾಲಕ  ಸುರೇಶ್ ಹಾಗೂ ಮತ್ತಿತರು ಹಾಜರಿದ್ದರು.

Read More

ಮಡಿಕೇರಿ ಏ.17 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಲ್ಕುನಾಡು ಮುಸ್ಲಿಂ ಒಕ್ಕೂಟದ ಪ್ರಮುಖ, ಅಲ್ಪಸಂಖ್ಯಾತ ಮುಖಂಡ ಕುಂಜಿಲದ ನಾಸರ್ ಮಕ್ಕಿ ಸೋಮವಾರ ಚುನಾವಣಾಧಿಕಾರಿ ಶಬಾನಾ ಎಂ. ಷೇಕ್ ಅವರಿಗೆ ನಾಮಪತ್ರ ಸಲ್ಲಿಸಿದರು. ವಿರಾಜಪೇಟೆ ಗಡಿಯಾರ ಕಂಬದ ಬಳಿಯಿಂದ ಬೆಂಬಲಿಗರೊoದಿಗೆ ಮೆರವಣಿಗೆಯಲ್ಲಿ ಬಂದ ನಾಸರ್ ಮಕ್ಕಿ ನಾಮಪತ್ರ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೊಡಗಿನಲ್ಲಿ ಹಿಂದಿನಿoದಲೂ ರಾಜಕೀಯ ಪಕ್ಷಗಳು ಜಿಲ್ಲೆಯ ಅಲ್ಪಸಂಖ್ಯಾತರನ್ನು ಸೂಕ್ತ ರೀತಿಯಲ್ಲಿ ಪರಿಗಣಿಸಿಲ್ಲ ಎಂದು ಟೀಕಿಸಿದರು. ಇದೀಗ ಪರಿಸ್ಥಿತಿ ಬದಲಾಗಿದ್ದು, ಅಲ್ಪಸಂಖ್ಯಾತರು ಆಮಿಷಗಳಿಗೆ ಬಲಿಯಾಗಿ ಮತ ನೀಡುವವರಲ್ಲ ಎಂಬುವುದನ್ನು ತೋರಿಸಿಕೊಡಬೇಕಿದೆ ಎಂದರು.

Read More