ಮಡಿಕೇರಿ ಮಾ.10 : ಕೊಡಗು ಜಿಲ್ಲೆಯಲ್ಲಿ ಮಾ.12 ರಂದು ನಡೆಯುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಗಳ 6 ನೇ ತರಗತಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸೋಮವಾರಪೇಟೆ ಸಂತ ಜೋಸೆಫರ ಸಂಯುಕ್ತ ಪಿಯು ಕಾಲೇಜು ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು…
ಲೇಖಕ: admin
ಮಡಿಕೇರಿ ಮಾ.10 : ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಬೆಂಗಳೂರು ಮತ್ತು ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ದೊಡ್ಡೇಗೌಡ ಜಗದ್ವಿಖ್ಯಾತ ವಿಜ್ಞಾನಿ ಸರ್. ಸಿ.ವಿ.ರಾಮನ್ ಅವರು ವಿಜ್ಞಾನಕ್ಕೆ ನೀಡಿರುವ ಕೊಡುಗೆಯನ್ನು ವಿದ್ಯಾರ್ಥಿಗಳು ದೈನಂದಿನ ಬದುಕಿನಲ್ಲಿ ವೈಜ್ಞಾನಿಕ ಪ್ರಜ್ಞೆ ಮೂಡಿಸಿಕೊಳ್ಳುವುದು ತುಂಬಾ ಅವಶ್ಯಕ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಇಂತಹ ವ್ಯಕ್ತಿತ್ವ ಹಾಗೂ ಆದರ್ಶವನ್ನಾಗಿಸಿ ಅವರ ಹೆಜ್ಜೆಯಲ್ಲಿ ಸಾಗಬೇಕು ಎಂದರು. ಶಾಲೆಯ ಉಪ ಪ್ರಾಂಶುಪಾಲರಾದ ನಳಿನಿ ಮಾತನಾಡಿ ಸರ್.ಸಿ.ವಿ.ರಾಮನ್ ಅವರ ಜೀವನ ಮತ್ತು ಸಾಧನೆಯನ್ನು ವಿದ್ಯಾರ್ಥಿಗಳಿಗೆ ವಿವರಿಸುತ್ತಾ ವೈಜ್ಞಾನಿಕ ಮನೋಭಾವದ ಜೊತೆಗೆ ಸಾಮಾಜಿಕ ಕಳಕಳಿಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದರು. ಕೊಡಗು ಜಿಲ್ಲಾ ಪಂಚಾಯತ್ ಎನ್.ಆರ್.ಡಿ.ಎಂ.ಎಸ್. ಅಧಿಕಾರಿ ಸೂರಜ್, ‘ರಾಷ್ಟ್ರೀಯ ವಿಜ್ಞಾನ ದಿನʼದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಇತರೆ…
ಮಡಿಕೇರಿ ಮಾ.10 : ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಭೂಮಿ ಪೂಜೆ ನೆರವೇರಿಸಿದರು. ಸುಮಾರು 4.90 ಲಕ್ಷ ರೂ ವೆಚ್ಚದಲ್ಲಿ ನಗರಸಭಾ ನಿಧಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಮಡಿಕೇರಿ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು 40 ಕೋಟಿ ರೂ ಬಿಡುಗಡೆಯಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳು ತ್ವರಿತವಾಗಿ ನಡೆಯುತ್ತಿವೆ ಎಂದು ತಿಳಿಸಿದರು. ನಗರಸಭಾ ನಿಧಿಯಿಂದ 4.90 ಲಕ್ಷ ರೂ ವೆಚ್ಚದಲ್ಲಿ ಮಡಿಕೇರಿ ನಗರದ ಎಲ್ಲಾ ವಾರ್ಡ್ಗಳಲ್ಲಿ ‘ನಾಮಫಲಕ’ ಅಳವಡಿಸಲಾಗುತ್ತಿದೆ ಎಂದು ಅಪ್ಪಚ್ಚು ರಂಜನ್ ಅವರು ಮಾಹಿತಿ ನೀಡಿದರು. 2022-23 ನೇ ಸಾಲಿನ 15 ನೇ ಹಣಕಾಸು ಆಯೋಗದ ಅನುದಾನದಡಿ ನಗರಸಭೆಯ ಎಲ್ಲಾ ವಾರ್ಡ್ಗಳಲ್ಲಿ ಸುಮಾರು 11.84 ಲಕ್ಷ ರೂ ವೆಚ್ಚದಲ್ಲಿ ಎಲ್ಇಡಿ ಬೀದಿ ದೀಪ ಅಳವಡಿಸಲಾಗುತ್ತಿದೆ ಎಂದು ಶಾಸಕರು ತಿಳಿಸಿದರು. ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ವಿಕೇಂದ್ರಿಕೃತ ತ್ಯಾಜ್ಯ ಗೊಬ್ಬರ ಸಂಸ್ಕರಣ ಘಟಕ ನಿರ್ಮಾಣ ಕಾಮಗಾರಿಗೆ…
ಮಡಿಕೇರಿ ಮಾ.10 : ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಎ.ವಿ ಶಾಲೆಯಿಂದ ಮೆರವಣಿಗೆ ಮೂಲಕ ಘೋಷಣೆಗಳೊಂದಿಗೆ ಸಾಗಿದ ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಸಿಲಿಂಡರ್ಗಳ ಅಣುಕು ಶವಯಾತ್ರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, ನಗರ ಪ್ರದೇಶ ಮಾತ್ರವಲ್ಲದೇ ಹಳ್ಳಿಗಳಲ್ಲೂ ದಿನನಿತ್ಯ ಅಡುಗೆ ಅನಿಲಕ್ಕೆ ಜನರು ಅವಲಂಬಿತರಾಗಿದ್ದಾರೆ. ರೂ.450 ಇದ್ದ ಅಡುಗೆ ಇದೀಗ ರೂ.1140 ಕ್ಕೆ ಏರಿಕೆ ಮಾಡಲಾಗಿದೆ. ಹೀಗಾದರೆ ಜನಸಾಮಾನ್ಯರು ಬದುಕು ಕಟ್ಟಿಕೊಳ್ಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಗಣೇಶ್, ಮದ್ಯಮ ವರ್ಗದ ಜನ, ಬಡವರು, ಆಟೋ ಚಾಲಕರು, ಕಾರು ಚಾಲಕರು, ಕೂಲಿ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ತೊಂದರೆಯಾಗಲಿದ್ದು, ಸರ್ಕಾರ ಬಡವರ ಮೇಲಿನ ಬೆಲೆ ಏರಿಕೆಯನ್ನು ಕಡಿಮೆಗೊಳಿಸಬೇಕು ಎಂದು ಒತ್ತಾಯಿಸಿದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಆಲಿ, ಜಿಲ್ಲಾ ಪ್ರಧಾನ…
ನಾಪೋಕ್ಲು ಮಾ.10 : ನಾಪೋಕ್ಲು ಸಮೀಪದ ಕೊಟ್ಟಮುಡಿಯ ಕೂರ್ಗ್ ಯೂತ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲಾದ ಮೊದಲನೇ ವರ್ಷದ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ಪೋಸ್ಟಲ್ ತಂಡ ಪ್ರಶಸ್ತಿಯನ್ನು ಮುಡುಗೇರಿಸಿಕೊಂಡಿದೆ. ಸಮೀಪದ ಕೊಟ್ಟಮುಡಿ ಜಂಕ್ಷನ್ ಬಳಿಯ ಎಚ್ ಆಂಡ್ ಎಸ್ ಮೈದಾನದಲ್ಲಿ ನಡೆದ ಆಕರ್ಷಕ ಫೈನಲ್ ಪಂದ್ಯಾಟದಲ್ಲಿ ರಜಾಕ್ ಮಾಲಿಕತ್ವದ ಬೆಂಗಳೂರು ರೈಲ್ವೇಸ್ ತಂಡವನ್ನು ಮಣಿಸಿ ಪರವಂಡ ಸಿರಾಜ್ ಮಾಲಿಕತ್ವದ ಕರ್ನಾಟಕ ಪೋಸ್ಟಲ್ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಬೆಂಗಳೂರು ರೈಲ್ವೇಸ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಗೊಂಡಿತು. ಇದಕ್ಕೂ ಮೊದಲು ನಡೆದ ಉದ್ಘಾಟನಾ ಸಮಾರಂಭದಲ್ಲಿ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಹಾಗೂ ಕಾಂಗ್ರೆಸ್ಸಿನ ಯುವನಾಯಕ ಮಂತರ್ ಗೌಡ ಚೆಂಡಿನ ಪ್ರಯೋಗದೊಂದಿಗೆ ಪಂದ್ಯಾವಳಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ ಕೊಡಗು ಕ್ರೀಡೆಗೆ ಪ್ರಸಿದ್ಧವಾದ ಜಿಲ್ಲೆಯಾಗಿದೆ. ಆದರೂ ಗ್ರಾಮ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳಿಗೆ ಸಮರ್ಪಕ ಕ್ರೀಡಾ ಸೌಲಭ್ಯಗಳ ಕೊರತೆ ಇದೆ. ಇದರಿಂದ ಕ್ರೀಡಾ ಕ್ಷೇತ್ರದಲ್ಲಿ ಮುಂದುವರೆಯಲು…
ಮಡಿಕೇರಿ ಮಾ.10 : ಕರಿಕೆ ಗ್ರಾಮದ ಕುಂಡತ್ತಿಕಾನ ಅರಣ್ಯದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ವ್ಯಾಪಕವಾಗಿ ಹಬ್ಬಿದೆ. ಇಂದು ಮಧ್ಯಾಹ್ನ ಗ್ರಾಮದ ಪಟ್ಟಿ ದೇವಯ್ಯ ಎಂಬವರ ಮನೆ ಸಮೀಪ ಬಿದಿರಿಗೆ ಬೆಂಕಿ ಹತ್ತಿಕೊಂಡಿದ್ದು, ಕಾಡಿಚ್ಚು ವ್ಯಾಪಕವಾಗಿ ಉರಿಯುತ್ತಿದೆ. ಅಗ್ನಿಶಾಮಕ ದಳ ಹಾಗೂ ಸಾರ್ವಜನಿಕರ ನೆರವಿನೊಂದಿಗೆ ವ್ಯಾಪಕವಾಗಿ ಹಬ್ಬಿದ ಬೆಂಕಿಯನ್ನು ನಂದಿಸುವ ಪ್ರಯತ್ನ ನಡೆಯುತ್ತಿದೆ.
ಮಡಿಕೇರಿ ಮಾ.10 : ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣದ ಸುಂಕದಳ್ಳಿ ಗ್ರಾಮ ನಿವಾಸಿ ನಿಶಾಂತ್.ಎಸ್.ಜಿ.(20) ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿ ಇದ್ದ 170 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ತನಿಖಾ ತಂಡ ರಚಿಸಲಾಗಿತ್ತು. ಮಾ.9ರಂದು ಕುಶಾಲನಗರ ಗೌಡ ಸಮಾಜದ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಈ ತಂಡಕ್ಕೆ ಖಚಿತ ಮಾಹಿತಿ ಲಭಿಸಿತ್ತು. ದಾಳಿ ನಡೆಸಿದ ಆರೋಪಿಗಳು ಆರೋಪಿಯನ್ನು ವಶಕ್ಕೆ ಪಡೆದರು. ಸೋಮವಾರಪೇಟೆ ಡಿವೈಎಸ್ಪಿ ಗಂಗಾಧರಪ್ಪ. ಆರ್.ವಿ, ಕುಶಾಲನಗರ ನಗರ ಪೊಲೀಸ್ ಠಾಣೆ ವೃತ್ತನಿರೀಕ್ಷಕ ಶ್ರೀಕಾಂತ್, ಉಪ ನಿರೀಕ್ಷಕ ಲೋಹಿತ್, ಹಾಗೂ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ::: ಮಾಹಿತಿ ನೀಡಿ :::…
ಸುಂಟಿಕೊಪ್ಪ,ಮಾ.10 : ಗ್ರಾ.ಪಂ ಗಳು ಜನರ ಆಶೋತ್ತರಗಳನ್ನು ಈಡೇರಿಸುವ ದೇವಾಲಯವಿದ್ದಂತೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಸುಂಟಿಕೊಪ್ಪ ಗ್ರಾ.ಪಂ ವತಿಯಿಂದ ನಿರ್ಮಿಸಲಾದ ನೂತನ ಗ್ರಾ.ಪಂ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಗ್ರಾ.ಪಂ ನಿಧಿಯಿಂದ 5 ಲಕ್ಷ 12 ಸಾವಿರ ರೂ, 4ನೇ ಹಣಕಾಸು ನಿಧಿಯಿಂದ 7 ಲಕ್ಷ ರೂ.15ನೇ ಹಣಕಾಸು ನಿಧಿಯಿಂದ 8 ಲಕ್ಷ ರೂ ಶಾಸಕರ ನಿಧಿಯಿಂದ ರೂ. 5 ಲಕ್ಷ, ಎಂಜಿಎಸ್ ಶಾಸಕರ ನಿಧಿಯಿಂದ ರೂ.16 ಲಕ್ಷ, ಜಿ.ಪಂ.ನಿಂದ ರೂ.10 ಲಕ್ಷ ವೆಚ್ಚದಲ್ಲಿ ಉತ್ತಮವಾದ ಗ್ರಾ.ಪಂ.ಕಟ್ಟಡ ನಿರ್ಮಾಣವಾಗಿದೆ. ತಾ.ಪಂ.ಅನುದಾನ 5 ಲಕ್ಷ ರೂ.ನಿಂದ ಡಿಜಿಟಲ್ ಗ್ರಂಥಾಲಯ, ಪ್ರತ್ಯೇಕ ನಿಧಿಯಿಂದ 5 ಲಕ್ಷ ರೂ.ವೆಚ್ಚದ ಶೌಚಾಲಯ ನಿರ್ಮಾವಾಗಿದೆ. ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ (275) ಗ್ರೇಡ್ 1 ಸುಂಟಿಕೊಪ್ಪ ಗ್ರಾ.ಪಂ ಗೆ ಹೈಟೆಕ್ ಮಾರುಕಟ್ಟೆ ನಿರ್ಮಾಣಕ್ಕೆ ನಬಾರ್ಡ್ ಯೋಜನೆಯಡಿ 3 ಕೋಟಿ ರೂ. ಮಂಜೂರಾತಿಯಾಗಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದರು. ಬಿಜೆಪಿ ಸರಕಾರ ಎಲ್ಲಾ ಧರ್ಮ ಜಾತಿ, ಪಂಗಡ…
ಮಡಿಕೇರಿ ಮಾ.10 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಇತರೆ ಹಿಂದುಳಿದ ವರ್ಗಗಳ ಘಟಕದ ಕಾರ್ಯಕಾರಿಣಿ ಸಭೆ ಘಟಕದ ಜಿಲ್ಲಾಧ್ಯಕ್ಷ ಬಾನಂಡ ಪ್ರಥ್ಯು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಸಂಘಟಿಸುವಂತೆ ತಿಳಿಸಿದರು. ಕಾಂಗ್ರೆಸ್ ಪಕ್ಷದ ಸಾಧನೆಗಳಾದ ಉಳುವವನಿಗೆ ಭೂಮಿ, ಸೂರು ಇಲ್ಲದವನಿಗೆ ಸೂರು ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮನೆ ಮನೆಗೆ ತಲುಪಿಸಬೇಕು. ಎಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ದುಡಿದ ಕಾಂಗ್ರೆಸ್ ಪಕ್ಷವನ್ನು ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಗೆಲ್ಲಿಸಲು ಶ್ರಮವಹಿಸುವಂತೆ ಕರೆ ನೀಡಿದರು. ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಕೊಡಗಿನಲ್ಲಿರುವ 34 ಹಿಂದುಳಿದ ವರ್ಗ, 18 ಉಪ ಜಾತಿಗಳನ್ನು ಮುಖ್ಯವಾಹಿನಿಗೆ ತರಬೇಕು. ಪಕ್ಷದ ಸಾಧನೆ ಮತ್ತು ಕಾಂಗ್ರೆಸ್ ಆಡಳಿತ ನೀಡಿದ ಜನೋಪಯೋಗಿ ಕೊಡುಗೆಗಳನ್ನು ಈ ವರ್ಗಕ್ಕೆ ತಿಳಿಸುವಂತೆ ಹೇಳಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ…
ಕುಶಾಲನಗರ, ಮಾ.10: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ಜನಜಾಗೃತಿ ವೇದಿಕೆಗಳ ಮೂಲಕ ಸಮಾಜದಲ್ಲಿ ಬೃಹತ್ ಬದಲಾವಣೆ ಕಂಡು ಬಂದಿದೆ ಎಂದು ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾಯಸ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ನಡೆದ ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಸಭೆಯಲ್ಲಿ 2022-23 ನೇ ವರ್ಷದ ಕ್ರಿಯಾಯೋಜನೆಯ ಮತ್ತು ಅನುದಾನದ ಕುರಿತು ಮಾಹಿತಿ ನೀಡಿ ಮಾತನಾಡಿದರು. ಮಧ್ಯವರ್ಜನ ಶಿಬಿರಗಳ ಮೂಲಕ ಲಕ್ಷಾಂತರ ಸಂಖ್ಯೆಯ ಮದ್ಯ ವ್ಯಸನಿಗಳನ್ನು ಪಾನಮುಕ್ತರಾಗಿಸುವುದರೊಂದಿಗೆ ಶಾಶ್ವತ ಪರಿಹಾರ ಶಿಬಿರಗಳ ಮೂಲಕ ಲಭಿಸಿದೆ. ವಲಯಕ್ಕೊಂದು ನವ ಜೀವನ ಸಮಿತಿ ನಿರ್ಮಾಣ ಮಾಡುವುದರೊಂದಿಗೆ ಸ್ವಾಸ್ಥ್ಯ ಸಮಾಜ ನಿರ್ಮಾಣದ ಕಲ್ಪನೆ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ಮೂಲಕ ಆಗಲಿದೆ ಎಂದರು. ಎಲ್ಲಾ ವಲಯ ಹಂತಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಜನರ ಮತ್ತು ಗ್ರಾಮಗಳ ಅಭಿವೃದ್ಧಿಗೆ ಕ್ರಿಯಾಯೋಜನೆ, ಶಿಬಿರಗಳು ನಡೆಯಲಿವೆ ಎಂದು ತಿಳಿಸಿದರು. ಜನಜಾಗೃತಿ ವೇದಿಕೆಯ ಕೊಡಗು ಜಿಲ್ಲಾ ವ್ಯಾಪ್ತಿಯ ಸಮಗ್ರ ವರದಿಯನ್ನು ಅರಕಲಗೂಡು ಪಿರಿಯಾಪಟ್ಟಣ, ಸೋಮವಾರಪೇಟೆ, ಮತ್ತಿತರ ವ್ಯಾಪ್ತಿಯ ಯೋಜನೆ ಅಧಿಕಾರಿಗಳು ನೀಡಿದರು.…






