ಮಡಿಕೇರಿ ಏ.15 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಮೂದಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್ ಮತ್ತು ಸಹ-ಪ್ರಾಧ್ಯಾಪಕರಾದ ಡಾ.ಶರವಣನ್ ಅವರು ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ ವತಿಯಿಂದ ನೀಡಲ್ಪಡುವ ಡಾ.ಬಿ.ಎನ್.ರಾಯ್ ಅತ್ಯುತ್ತಮ ಸಂಶೋಧನ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. ಉಡುಪಿ ಜಿಲ್ಲೆಯ ಪಡುಬಿದ್ರೆಯ ಉಷ್ಣ ವಿದ್ಯುತ್ ಸ್ಥಾವರದಿಂದ ಜನರ ಆರೋಗ್ಯ ಹಾಗೂ ಪರಿಸರದ ಮೇಲಿನ ಪರಿಣಾಮಗಳ ಕುರಿತ ಸಂಶೋಧನೆಗೆ ಈ ಪ್ರಶಸ್ತಿ ಲಭಿಸಿದೆ. ಕೋಲ್ಕತದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ.ಸಿ.ವಿ.ಆನಂದ್ ಭೋಸ್ ಅವರಿಂದ ಡಾ.ರಾಮಚಂದ್ರ ಕಾಮತ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ ಅಧ್ಯಕ್ಷ ಡಾ.ಸಂಘಮಿತ್ರ ಘೋಷ್ ಅವರು ಉಪಸ್ಥಿತರಿದ್ದರು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಏ.15 : ನಗರದ ಸಂಪಿಗೆಕಟ್ಟೆಯ ನಿವಾಸಿ, ಸಮಾಜ ಸೇವಕ ಎಂ.ಖಲೀಲ್ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಏ.18 ರಂದು ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿರುವ ಅವರು, ತಾನು ನಿರಂತರವಾಗಿ ಸಮಾನ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಜನರದ ನೋವಿಗೆ ಸ್ಪಂದಿಸುತ್ತಿದ್ದೇನೆ. ಈ ಹಿಂದೆಯೂ ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ. ರಾಜಕೀಯ ಪಕ್ಷಗಳಿಂದ ಬೇಸತ್ತಿರುವ ಮಡಿಕೇರಿ ಕ್ಷೇತ್ರದ ಜನ ಈ ಬಾರಿ ಬದಲಾವಣೆಯನ್ನು ಬಯಸುತ್ತಿದ್ದು, ನನ್ನ ಮೇಲೆ ನಂಬಿಕೆ ಇಟ್ಟು ಮತ ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು. ಭ್ರಷ್ಟಾಚಾರ ಮುಕ್ತ ಆಡಳಿತ, ಸರ್ವಋತು ರಸ್ತೆ ನಿರ್ಮಾಣ, ರೈತಾಪಿ ವರ್ಗದ ಸಮಸ್ಯೆಗಳಿಗೆ ಸ್ಪಂದನೆ, ಯುವ ಸಮೂಹಕ್ಕೆ ಉದ್ಯೋಗ ಸೃಷ್ಟಿ, ಉನ್ನತ ಶಿಕ್ಷಣಕ್ಕೆ ಆದ್ಯತೆ, ಕ್ರೀಡಾಂಗಣಗಳ ಅಭಿವೃದ್ಧಿಗೆ ಕ್ರಮ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ, ಪ್ರವಾಸಿತಾಣಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಹೈಟೆಕ್ ಗೊಳಿಸುವುದು, ನಿವೇಶನ ರಹಿತ ಬಡವರು ಹಾಗೂ ಕಾರ್ಮಿಕರಿಗೆ ವಸತಿ ಯೋಜನೆಯಡಿ ಸೂರು ಕಲ್ಪಿಸುವುದು, ಸರ್ಕಾರದ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದು…
ಸುಂಟಿಕೊಪ್ಪ ಏ.15: ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವಕ್ಕೆ ದೇವಾಲಯ ಸಮಿತಿ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಸ್ಥಳೀಯ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯದ 55ನೇ ವರ್ಷದ ತೆರೆ ಮಹೋತ್ಸವದ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ವಿದ್ಯುತ್ ದೀಪ ಹೂ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀಮುತ್ತಪ್ಪ ದೇವಸ್ಥಾನದ ಆರ್ಚಕ ಮಂಜುನಾಥ ಉಡುಪ ಹಾಗೂ ಮುತ್ತಪ್ಪ ದೇವಸ್ಥಾನ ಪೂಜಾರಿ ಶಿವರಾಂ ಗಣಪತಿ ಹವನ, ಶುದ್ಧಿ ಪುಣ್ಯಾಹ, ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಸಂಜೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ, ಶ್ರೀಮುತ್ತಪ್ಪ ವೆಳ್ಳಾಟಂ, ಚಂಡೆಮೇಳ ನಡೆಯಿತು. ಈ ಸಂದರ್ಭ ದೇವಸ್ಥಾನ ಸಮಿತಿ ಕಾರ್ಯದರ್ಶಿ ಶಶಿಕಾಂತರೈ, ಖಜಾಂಜಿ ಎಸ್.ಜಿ.ಶ್ರೀನಿವಾಸ್, ಕೆ.ಪಿ.ಜಗನ್ನಾಥ್, ಎ.ಶ್ರೀಧರ್ ಕುಮಾರ್, ಸುರೇಶ್ ಗೋಪಿ, ಎ.ಶ್ರೀಧರನ್, ಧನುಕಾವೇರಪ್ಪ, ಫೃಥ್ವಿರಾಜ್, ಸುರೇಶ್ ಚಂದು, ದಿನು ದೇವಯ್ಯ, ರಮೇಶ್ ಪಿಳ್ಳೆ, ವಿ.ಎ.ಸಂತೋಷ್ ಕುಮಾರ್, ವಿನೋದ್, ದೇವಸ್ಥಾನ ಅರ್ಚಕರಾದ…
ಮಡಿಕೇರಿ ಏ.15 : ವಿವಾಹವಾದ ಮೂರೇ ದಿನದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಹೆಬ್ಬಾಲೆ ಗ್ರಾಮದ 6ನೇ ಹೊಸಕೋಟೆಯ ದಲಿತ ಯುವತಿಯ ಕುಟುಂಬಕ್ಕೆ ಅಧಿಕಾರಿಗಳು ಸರ್ಕಾರದ ಪರಿಹಾರ ನೀಡದೆ ಸತಾಯಿಸುತ್ತಿದ್ದಾರೆ ಎಂದು ಕರ್ನಾಟಕ ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಎಸ್.ಆರ್.ಮಂಜುನಾಥ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಆದರೆ ಪರಿಶಿಷ್ಟ ಜಾತಿ ಮತ್ತು ವರ್ಗ ದೌರ್ಜನ್ಯ ಕಾಯ್ದೆಯಡಿ ಮೃತ ಯುವತಿಯ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಬೇಕಾಗಿದ್ದ ಪರಿಹಾರ ಇಲ್ಲಿಯವರೆಗೆ ನೀಡಿಲ್ಲವೆಂದು ಆರೋಪಿಸಿದರು. ಈಗಾಗಲೇ ಹಲವು ಬಾರಿ ಸಾಮಾಜ ಕಲ್ಯಾಣ ಇಲಾಖೆಗೆ ಈ ಬಗ್ಗೆ ಮನವಿ ಸಲ್ಲಿಸಲಾಗಿದೆ. ಆದರೆ ಅಧಿಕಾರಿಗಳು ಪರಿಹಾರ ನೀಡದೆ ಮೀನಾಮೇಷ ಎಣಿಸುತ್ತಿದ್ದಾರೆ. ಯಾರದ್ದೋ ಒತ್ತಡಕ್ಕೆ ಮಣಿದಿರುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದೆ, ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವ ಮೂಲಕ ಅಮಾಯಕ ಯುವತಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು. ::: ಮತ್ತೊಂದು ಪ್ರಕರಣ ::: ಸೋಮವಾರಪೇಟೆ ತಾಲ್ಲೂಕಿನ ಬಾಣವಾರ ಗ್ರಾಮದ ಆಟೋ ಚಾಲಕ…
ಮಡಿಕೇರಿ ಏ.15 : ಕಾಂಗ್ರೆಸ್ ಟಿಕೆಟ್ ವಂಚಿತರಾಗಿ ತೀವ್ರ ಅಸಮಾಧಾನಕ್ಕೆ ಒಳಗಾಗಿ ‘ಪಕ್ಷೇತರ’ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ನಿರ್ಧಾರ ತಳೆದಿದ್ದ ಹರಪ್ಪಳ್ಳಿ ರವೀಂದ್ರ, ಕಾಂಗ್ರೆಸ್ ವರಿಷ್ಠರ ಮನವೊಲಿಕೆಯ ಬಳಿಕ ತಮ್ಮ ನಿಲುವನ್ನು ಬದಲಿಸಿಕೊಂಡು ಸ್ಪರ್ಧೆಯಿಂದ ಹಿಂದಕ್ಕೆ ಸರಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರಪ್ಪಳ್ಳಿ ರವೀಂದ್ರ ಅವರು, ಮಡಿಕೇರಿ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಪಕ್ಷೇತರನಾಗಿ ಸ್ಪರ್ಧಿಸಲು ಮುಂದಾಗಿದ್ದೆ. ಆದರೆ ಇದೀಗ ಕೆಪಿಸಿಸಿ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತನ್ನೊಂದಿಗೆ ಮಾತುಕತೆ ನಡೆಸಿ ಮುಂದಿನ ದಿನಗಳಲ್ಲಿ ಅಗತ್ಯ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಟಿಕೆಟ್ ಕೈ ತಪ್ಪಿದ ನಿರಾಸೆ ಇದ್ದರೂ, ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರ ಗೆಲುವಿಗೆ ಶ್ರಮಿಸುತ್ತೇನೆ, ಅವರೊಂದಿಗೆ ಚುನಾವಣಾ ಪ್ರಚಾರಕ್ಕೂ ತೆರಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಚಿಂತನೆಗಳಡಿ ತಾನು ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ತನ್ನ ಚಿಂತನೆಯಂತೆ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ತಾಲ್ಲೂಕುವಾರು ಸುಸಜ್ಜಿತ ಆರೋಗ್ಯ ಕೇಂದ್ರ, ಪ್ರವಾಸೋದ್ಯಮದ ಅಭಿವೃದ್ಧಿ, ಜಿಲ್ಲೆಯ…
ಮಡಿಕೇರಿ ಏ.15 : ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಎ.ಎಸ್ ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ಬಿ ಫಾರ್ಮ್ ಅನ್ನು, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಅಭ್ಯರ್ಥಿಗಳ ಪರವಾಗಿ ಇಂದು ಕೆಪಿಸಿಸಿ ಅಧ್ಯಕ್ಷರ ಬಳಿಯಿಂದ ಪಡೆದುಕೊಂಡರು. ಈ ಸಂದರ್ಭ ಜಿಲ್ಲಾಧ್ಯಕ್ಷ ಹಾಗೂ ಪಕ್ಷದ ಪ್ರಮುಖ ಹರಪಳ್ಳಿ ರವೀಂದ್ರ ರಾಜ್ಯಾಧ್ಯಕ್ಷರೊಂದಿಗೆ ಕೊಡಗು ಜಿಲ್ಲೆ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಬಾನಂಡ ಪ್ರಥ್ಯು ಉಪಸ್ಥಿತರಿದ್ದರು.
ಸೋಮವಾರಪೇಟೆ ಏ.14 : ಬೇಸಿಗೆ ಶಿಬಿರಗಳು ಮಕ್ಕಳ ಮಾನಸಿಕ ಬೆಳವಣಿಗೆಗೆ ಸಹಕಾರಿ ಎಂದು ಡ್ರಾಮಾ ಜ್ಯೂನಿಯರ್ನ ಮಾರ್ಗದರ್ಶಕ ಯೋಗೇಶ್ ಅಭಿಪ್ರಾಯಪಟ್ಟರು. ಬೆಟ್ಟದಳ್ಳಿ ಯಶೋದೆ ರಂಗ ಟ್ರಸ್ಟ್ ಹಾಗೂ ಸಾಂದೀಪನಿ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ , ಸಾಂದೀಪನಿ ಶಾಲೆಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಮಕ್ಕಳ ಕಲಾ ಕಲಿಕೆ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತೆಗೆಯಲು ಇಂತಹ ಶಿಬಿರಗಳು ಸಹಕಾರಿಯಾಗಿದೆ ಎಂದರು. ಶಿಬಿರವನ್ನು ಉದ್ಘಾಟಿಸಿದ ಚೌಡ್ಲು ಗ್ರಾ.ಪಂ ಮಾಜಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಮಾತನಾಡಿ, ವರ್ಷವಿಡೀ ಪಾಠ ಪ್ರವಚಗಳಲ್ಲೆ ತೊಡಗಿರುವ ಮಕ್ಕಳಿಗೆ ಬೇಸಿಗೆ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳ ಮನಸ್ಸು ಹಾಗೂ ದೈಹಿಕವಾಗಿ ಬದಲಾವಣೆ ಸಿಕ್ಕಂತಾಗುತದೆ ಎಂದರು. ಪೋಷಕರು ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಇಂಥ ತರಬೇತಿ ಕೊಡಿಸಿದರೆ ಮುಂದೆ ಸಾಧನೆಗೆ ಸಹಕಾರಿಯಾಗಲಿದೆ ಎಂದರು. ವೇದಿಕೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಎಸ್.ಮಹೇಶ್, ಸಹಕಾರಿ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ್ ,ಶಿಕ್ಷಕಿ ವಸಂತಿ, ಶಿಬಿರದ ಸಂಚಾಲಕ ನಿಶಾಂತ್ ಮುತ್ತಣ್ಣ, ನಿರ್ದೇಶಕ ಗಣೇಶ್…
ಮಡಿಕೇರಿ.ಏ.15 : ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಏ.16 ರಂದು ಮಡಿಕೇರಿ ಪತ್ರಿಕಾಭವನದಲ್ಲಿ ಪತ್ರಕರ್ತರಿಗಾಗಿ ಬೆಳಿಗ್ಗೆ 9 ಗಂಟೆಯಿಂದ ಒಳಾಂಗಣ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಕ್ರೀಡಾಕೂಟದ ಉದ್ಘಾಟನೆಯನ್ನು ಹಿರಿಯ ವಕೀಲ ಡಾ.ಯಾಲದಾಳು ಮನೋಜ್ ಬೋಪಯ್ಯ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ವಹಿಸಲಿದ್ದು, ಅತಿಥಿಯಾಗಿ ಸಂಘದ ಉಪಾಧ್ಯಕ್ಷ ಹಾಗೂ ಕ್ರೀಡಾಕೂಟದ ಸಂಚಾಲಕರಾದ ಜಿ.ವಿ.ರವಿಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಏ.15 : ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಹಂತಹಂತವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನಾಂಗದ ಪ್ರತಿಯೊಬ್ಬರು ಕೂಡಾ ಸಂಘದ ಜತೆಗೆ ಕೈಜೋಡಿಸುವಂತೆ ಸಂಘದ ಜಿಲ್ಲಾಧ್ಯಕ್ಷ ಬಿ.ಡಿ.ಜಗದೀಶ್ ರೈ ಮನವಿ ಮಾಡಿದರು. ನಗರದ ಗಾಂಧಿ ಮೈದಾನ ಬಳಿಯಿರುವ ಖಾಸಗಿ ಕಟ್ಟಡದಲ್ಲಿ ನಡೆದ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮುದಾಯ ಬಾಂಧವರಿಗಾಗಿ ಸಂಘದ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ತುಳು ಭಾಷಿಕರ ಹೊಸ ವರ್ಷವಾದ ಬಿಸು ಹಬ್ಬವನ್ನು ಮುಂದಿನ ವರ್ಷದಿಂದ ಸಂಘದ ನೇತೃತ್ವದಲ್ಲಿ ಸಂಭ್ರಮದಿಂದ ಆಚರಿಸುವ ಉದ್ದೇಶವಿದೆ. ನಮ್ಮ ಸಂಸ್ಕøತಿ, ಸಂಪ್ರದಾಯವನ್ನು ಬಿಂಬಿಸುವ ಆಚರಣೆಯಾಗಿ ಎಲ್ಲರೂ ಸಂಭ್ರಮಿಸುವ ರೀತಿಯ ಕಾರ್ಯಕ್ರಮ ಮಾಡಲಾಗುವುದೆಂದರು. ಜಿಲ್ಲಾ ಬಂಟರ ಸಂಘದ ಜತೆಗೆ ತಾಲೂಕು ಘಟಕ, ನಗರ ಮಹಿಳಾ ಘಟಕ, ಯುವ ಬಂಟ್ಸ್ ಅಸೋಸಿಯೇಷನ್ ಕಾರ್ಯಚಟುವಟಿಕೆಗಳಿಗೆ ಈ ಕಚೇರಿಯನ್ನು ಬಳಸಿಕೊಳ್ಳಬಹುದು. ಸಂಘದ ಕಾರ್ಯಚಟುವಟಿಕೆಗಳು ಜಿಲ್ಲಾ ಬಂಟರ ಭವನದಲ್ಲಿ ಆಗಬೇಕೆಂಬ ಕನಸು ಜನಾಂಗ ಬಾಂಧವರಲ್ಲಿದೆ. ಅದು ಈಡೇರಬೇಕಾದರೆ ಎಲ್ಲರ ಸಹಕಾರ ಅಗತ್ಯ ಎಂದರು. ಕಾರ್ಯದರ್ಶಿ ರವೀಂದ್ರ ವಿ.…
ಮಡಿಕೇರಿ ಏ.15 : ಸಿರಿಗನ್ನಡ ವೇದಿಕೆ ಕೊಡಗು ಹಾಗೂ ಸಿರಿಗನ್ನಡ ವೇದಿಕೆ ಮಹಿಳಾ ಘಟಕದ ಪದಗ್ರಹಣ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆಯಿತು. ಸಿರಿಗನ್ನಡ ವೇದಿಕೆ ಮಡಿಕೇರಿ ತಾಲೂಕು ಅಧ್ಯಕ್ಷೆ, ಸಾಹಿತಿ, ನಿರ್ಮಾಪಕಿ, ನಟಿ ಈರಮಂಡ ಹರಿಣಿ ವಿಜಯ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿರಿಗನ್ನಡ ವೇದಿಕೆಯ ರಾಜ್ಯ ಸಮಿತಿ ಕಾರ್ಯಾಧ್ಯಕ್ಷೆ ಡಾ.ಸೌಗಂಧಿಕಾ ವಿ.ಜೋಯಿಸ್ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಮಾತನಾಡಿದ ಅವರು ಸಂಘಟನೆಗಳಲ್ಲಿ ಹುದ್ದೆ ಮುಖ್ಯವಲ್ಲ, ಸಲ್ಲಿಸುವ ಸೇವೆ ಮುಖ್ಯ. ನಾವು ಮಾಡುವ ಜನಸೇವೆ ಶಾಶ್ವತವಾಗಿರುತ್ತದೆ ಎಂದರು. ಹಿರಿಯ ಕವಿಗಳು, ಸಾಹಿತಿಗಳನ್ನು ನೆನಪಿಸಿಕೊಂಡು ಅವರುಗಳ ಬರಹಗಳನ್ನು ಓದಬೇಕು; ಮೌಲ್ಯಯುತ ಬರಹಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕೆಂದು ಹೇಳಿದರು. ಕಾರ್ಯಕ್ರಮ ಉದ್ಘಾಟನೆ ಮಾಡಿದ ಸುಳ್ಯದ ಕೆವಿಜಿ ವೈದ್ಯಕೀಯ ಕಾಲೇಜು ಪ್ರಾಧ್ಯಾಪಕ ಡಾ.ಮೋಹನ್ ಅಪ್ಪಾಜಿ ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಉತ್ತಮ ಸಾಹಿತಿಗಳಿದ್ದಾರೆ. ಅವರುಗಳ ಮಾರ್ಗದರ್ಶನದೊಂದಿಗೆ ಇನ್ನೂ ಹೆಚ್ಚಿನ ಸಾಹಿತಿಗಳು ಮುಂದೆ ಬರಬೇಕು. ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.…






