ಲೇಖಕ: admin

ಮಡಿಕೇರಿ ಏ.15 : ಕುದುಕುಳಿ ಕ್ರಿಕೆಟ್ ಸಮಿತಿ ಆಯೋಜಿಸಿದ ಗೌಡ ಕುಟುಂಬಗಳ ನಡುವಿನ ಕುದುಕುಳಿ ಐನ್‍ಮನೆ ಕ್ರಿಕೆಟ್ ಕಪ್‍ನಲ್ಲಿ ಪರ್ಲಕೋಟಿ ತಂಡ ಚಾಂಪಿಯನ್ ಪಟ್ಟ ಮಡುಗೇರಿಸಿಕೊಂಡಿದೆ. ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಪರ್ಲಕೋಟಿ ಮತ್ತು ಹೊಸೊಕ್ಲು ತಂಡಗಳ ನಡುವೆ ಸೆಣೆಸಾಟ ನಡೆಯಿತು. ಪರ್ಲಕೋಟಿ ತಂಡವು ಆರಂಭಿಕ ಉತ್ತಮ ಪ್ರದರ್ಶನ ನೀಡಿತು. 10 ಓವರ್ ನಲ್ಲಿ 104 ರನ್ ಗಳಿಸಿ ಎದುರಾಳಿ ತಂಡಕ್ಕೆ ಸವಾಲು ನೀಡಿತು. ನಂತರ ಬೌಲಿಂಗ್ ಮೂಲಕ ಎದುರಾಳಿ ಹೊಸೊಕ್ಲು ತಂಡವನ್ನು ಕೇವಲ 54 ರನ್‍ಗಳಿಗೆ ಕಟ್ಟಿ ಹಾಕಿತು. ಇದರಿಂದ ಹೊಸೊಕ್ಲು ತಂಡ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಎರಡನೇ ಸೆಮಿಫೈನಲ್‍ನಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ಲಕೋಟಿ ತಂಡ 7 ವಿಕೆಟ್ ನಷ್ಟಕ್ಕೆ 85 ರನ್ ಗಳಿಸಿತು. ಪರ್ಲಕೋಟಿ ಮತ್ತು ಪುದಿನೆರವನ ತಂಡಗಳ ನಡುವಿನ ರೋಚಕ ಪಂದ್ಯದಲ್ಲಿ ಪುದಿನೆರವನ ತಂಡ 84 ರನ್ ಗಳಿಸಿ ಒಂದು ರನ್‍ಗಳ ವಿರೋಚಿತ ಸೋಲನ್ನು ಅನುಭವಿಸಿತು. ಮೂರು ಮತ್ತು…

Read More

ಮಡಿಕೇರಿ ಏ.15 :  ಮಡಿಕೇರಿ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾ ದಳದ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಮುತ್ತಪ್ಪ ಅವರು, ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಯುವ ಮುಖಂಡ ಸಿ.ಎಲ್.ವಿಶ್ವ ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭ ಹಾಜರಿದ್ದರು. ::: ಸೋಮವಾರ ‘ಬಿ’ ಫಾರಂ ::: ನಾಮಪತ್ರ ಸಲ್ಲಿಕೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಾಪಂಡ ಮುತ್ತಪ್ಪ, ತನ್ನನ್ನು ಮಡಿಕೇರಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರಿಗೆ ಕೃತಜ್ಞತೆ ಸಲ್ಲಿಸಿ, ಪಕ್ಷದಿಂದ ‘ಬಿ’ ಫಾರಂ ಇನ್ನಷ್ಟೆ ದೊರಕಬೇಕಿದ್ದು, ಸೋಮವಾರ ಚುನಾವಣಾಧಿಕಾರಿಗಳಿಗೆ ‘ಬಿ’ ಫಾರಂ ಸಲ್ಲಿಸುವುದಾಗಿ ತಿಳಿಸಿದರು. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕ್ಷೇತ್ರದಲ್ಲಿ ಯಾವುದೇ ಪಕ್ಷ ಪ್ರಬಲ ದುರ್ಬಲ ಎಂಬುದಿಲ್ಲ. ಇದೆಲ್ಲ ನಿರ್ಧಾರವಾಗುವುದು ಮತ ಎಣಿಕೆಯ ಸಂದರ್ಭ…

Read More

ಮಡಿಕೇರಿ ಏ.15 : ಭಾರತೀಯ ಭೂ ಸೇನೆಯಲ್ಲಿ ಕರ್ನಲ್ ಹುದ್ದೆಗೆ ಮಂಡೇಪಂಡ ಸ್ಮಿತಾ ಅಯ್ಯಪ್ಪ (ತಾಮನೆ-ಮೇವಡ) ನೇಮಕಗೊಂಡಿದ್ದು, ಜಿಲ್ಲೆಯ ಮೊದಲ ಮಹಿಳೆ ಕರ್ನಲ್ ಹುದ್ದೆ ತಲುಪಿದ್ದಾರೆ. 2005ರಲ್ಲಿ ಚೆನ್ನೈನಲ್ಲಿ ತರಬೇತಿ ಪಡೆದು ಆರ್ಮಿ ಸರ್ವಿಸಸ್ ಕೋರ್‍ಗೆ ಸೇರ್ಪಡೆಗೊಂಡು ತನ್ನ 18 ವರ್ಷದ ಸೇವೆಯಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ ಸ್ಮಿತಾ ಅವರು ವಿಶ್ವಸಂಸ್ಥೆ ಶಾಂತಿಪಾಲನಾ ಸಂಸ್ಥೆಗೆ ನಿಯುಕ್ತಿಗೊಂಡು ಇಸ್ರೇಲ್ ಮತ್ತು ಸಿರಿಯಾದಲ್ಲಿ ಕರ್ತವ್ಯ ನಿರ್ವಹಿಸಿ ತನ್ನ ಅತ್ಯುತ್ತಮ ನಿರ್ಣಯಗಳಿಗೆ ಅಲ್ಲಿನ ಫೋರ್ಸ್ ಕಮಾಂಡ್‍ನಿಂದ ಕಮಾಂಡೇಶನ್ ಕಾರ್ಡ್ ಪಡೆದಿದ್ದಾರೆ. ಇವರು ನಿವೃತ್ತ ಯೋಧ ಮೇವಡ ಅಪ್ಪಣ್ಣ ರಾಧ ದಂಪತಿ ಪುತ್ರಿಯಾಗಿದ್ದು, ಕರ್ನಲ್ ಮಂಡೇಪಂಡ ಅಯ್ಯಪ್ಪ ಅವರ ಪತ್ನಿಯಾಗಿದ್ದಾರೆ.

Read More

ನಾಪೋಕ್ಲು ಏ.15 : ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಹೆಚ್ಚು ಪ್ರಯತ್ನ ಮಾಡಿದರೆ ಮುಂದಿನ ಗುರಿಯನ್ನು ಮುಟ್ಟಲು ಸಾಧ್ಯ ಎಂದು ನಬಾರ್ಡ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ರಮೇಶ್ ಬಾಬು .ವಿ ಹೇಳಿದರು. ಅಂಕುರ್ ಪಬ್ಲಿಕ್ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಗ್ರಾಜುಯೇಷನ್ ಡೇ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ನಿಗದಿತ ಗುರಿಯನ್ನು ಸಾಧಿಸಲು ಪೋಷಕರ ಮತ್ತು ಶಿಕ್ಷಕರ ಪ್ರೋತ್ಸಾಹ ಬಹಳ ಮುಖ್ಯ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ರಾಜಾ ಚರ್ಮಣ ವಹಿಸಿದ್ದರು. ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ರತ್ನ ಚರ್ಮಣ ಪೋಷಕರನ್ನು ಮತ್ತು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಟ್ರಸ್ಟಿ ಯಾದ ಗಾಯನ್ ಗೌರಮ್ಮ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳು ಪೋಷಕರು ಹಾಜರಿದ್ದರು. ಈ ಸಂದರ್ಭ ಉಪಸ್ಥಿತ ಇದ್ದ ಗಣ್ಯರು ವಿದ್ಯಾರ್ಥಿಗಳಿಗೆ ಅರ್ಹತಾ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿ ಶುಭ ಕೋರಿದರು. ವರದಿ : ದುಗ್ಗಳ ಸದಾನಂದ 

Read More

ಸಿದ್ದಾಪುರ ಏ.15 :  ಮಾಲ್ದಾರೆ  ಜನಪರ ಕ್ರೀಡಾ ಮತ್ತು ಕಲಾ ಯುವಜನ ಸಂಘದ  ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ದಿನಾಚರಣೆಯನ್ನು  ಸರಳವಾಗಿ ಆಚರಿಸಲಾಯಿತು. ಸಂಘದ ಕಚೇರಿಯಲ್ಲಿ ನಡೆದ  ಕಾರ್ಯಕ್ರಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಾಮಾಜಿಕ ಹೋರಾಟಗಾರ ಪ್ರಭಾಕರ್  ದೀಪ ಬೆಳಗಿ ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಬಾಬಾ ಸಾಹೇಬ್ ಅವರ ಚಿಂತನೆಗಳು, ಬರಹಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು ಹಾಗೂ ಅವರು ಬರೆದಿರುವ ಸಂವಿಧಾನದ ಆಶಯವನ್ನು ತಿಳಿದುಕೊಳ್ಳುವಂತಾಗಬೇಕು. ಭಾರತದ ಸಂವಿಧಾನದ ಮೂಲಕ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಸಂವಿಧಾನ ನೀಡಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ  ಭಾವ ಮಾಲ್ದಾರೆ,  ಉಪಾಧ್ಯಕ್ಷ  ರಾಜ, ಕಾರ್ಯದರ್ಶಿ ಆಂಟೋನಿ, ಪುನೀತ್, ಶಾಫಿಕ್, ಜುನೈದ್,ಸಂತೋಷ್, ಮುಂತಾದವರು ಹಾಜರಿದ್ದರು. 

Read More

ನಾಪೋಕ್ಲು ಏ.15 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿರುವ ಬೇಸಿಗೆ ಶಿಬಿರದ ಪ್ರಯುಕ್ತ ಶಿಬಿರಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ ನಡೆಯಿತು. ಪಟ್ಟಣದ ಮುಖ್ಯ ಬೀದಿಯಲ್ಲಿ ನಡೆದ ಜಾಥದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಶ್ರೀರಾಮ ಟ್ರಸ್ಟ್ ಹಾಗೂ ಅಂಕುರ್ ಪಬ್ಲಿಕ್ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅಂಕುರ್ ಶಾಲೆಯ ಆಕರ್ಷಕ ಬ್ಯಾಂಡ್ ಸೆಟ್ ನೊಂದಿಗೆ ಪಟ್ಟಣದಲ್ಲಿ ಪಥ ಸಂಚಲನ ನಡೆಸಿದರು. ಮತದಾನ ನಮ್ಮ ಹಕ್ಕು, ಮತವನ್ನು ಮಾರಿಕೊಳ್ಳಬೇಡಿ, 18ಕ್ಕಿಂತ ಹೆಚ್ಚಿನ ವಯಸ್ಕರು ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳಿ ಎಂಬ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು. ಮಾನವ ಸರಪಳಿ ರಚಿಸಿ ಜನ ಜಾಗೃತಿ ಮೂಡಿಸಲಾಯಿತು. ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ಶಿವಣ್ಣ, ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉಷಾರಾಣಿ, ಖಜಾಂಚಿ ಗಂಗಮ್ಮ , ಕೆಪಿಎಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಎ.ಹ್ಯಾರಿಸ್, ಸ್ಕೌಟ್ ಮಾಸ್ಟರ್ ಮಹೇಶ್, ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ಶಿಕ್ಷಕಿ ಲೀಲಾವತಿ ಹಾಗೂ ಕರ್ನಾಟಕ…

Read More

ಸಿದ್ದಾಪುರ  ಏ.15 : ವಿವಿಧ ಪಕ್ಷಗಳನ್ನು ತೊರೆದು ಹಲವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ನೆಲ್ಯಹುದಿಕೇರಿ ವಿ ಎಸ್ ಎಸ್ ಎನ್ ಸಭಾಂಗಣದಲ್ಲಿ ನಡೆದ ಪಕ್ಷ ಸೇರ್ಪಡೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಮಂತರ್ ಗೌಡ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾರರು ಬದಲಾವಣೆ ಬಯಸುವುದರೊಂದಿಗೆ ಕಾಂಗ್ರೆಸ್ನತ್ತ ಒಲವು ತೋರುತ್ತಿದ್ದು ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು ಇದೇ ಸಂದರ್ಭ ಕಾಂಗ್ರೆಸ್ ಸೇರ್ಪಡೆಗೊಂಡ ಹಲವರನ್ನ ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ನೆಲ್ಯಹುದಿಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಸಾಬು ವರ್ಗೀಸ್, ಕಾರ್ಯಾಧ್ಯಕ್ಷ ಹನೀಫ, ಗ್ರಾ.ಪಂ ಅಧ್ಯಕ್ಷ ಎ.ಕೆ ಹಕೀಂ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಕೆ. ಎಂ ಬಶೀರ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖರಾದ ಜೋಸೆಫ್ ಶ್ಯಾಮ್ , ಜಿ.ಪಂ ಮಾಜಿ ಸದಸ್ಯೆ ಸುನಿತಾ ಮಂಜುನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿಯಾಬ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Read More

ಸುಂಟಿಕೊಪ್ಪ,ಏ.15 : ಬುದ್ಧ ಪ್ರತಿಷ್ಠಾನ ಜಿಲ್ಲಾ ಶಾಖೆಯ ವತಿಯಿಂದ  ಡಾ.ಬಿ.ಆರ್.ಅಂಬೇಡ್ಕರ್  ಅವರ 132ನೇ ಜನ್ಮ ದಿನವನ್ನು ಆಚರಿಸಲಾಯಿತು. ಸುಂಟಿಕೊಪ್ಪ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು  ಪ್ರಮುಖರಾದ  ಹೆಚ್.ಟಿ.ಕಾವೇರಪ್ಪ ಉದ್ಘಾಟಿಸಿದರು. ಬುದ್ಧ ಪ್ರತಿಷ್ಠಾನ ಜಿಲ್ಲಾ ಅಧ್ಯಕ್ಷ  ಎಚ್.ಪಿ.ಶಿವಕುಮಾರ್  ಅಧ್ಯಕ್ಷತೆಯಲ್ಲಿ ನಡೆದ  ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನೆ ಸಂಚಾಲಕರು ಆದ ವಿಶ್ವ, ಕಾವೇರಪ್ಪ, ಸುರೇಶ್ ಹೆಚ್.ಎಂ. , ಎಸ್.ನಿಶಾಂತ್ , ಉಪಸ್ಥಿತರು ಇದ್ದರು.

Read More

ಸುಂಟಿಕೊಪ್ಪ,ಏ.15 : ಸುಂಟಿಕೊಪ್ಪ ಸಿ.ಎಸ್.ಐ. ವತಿಯಿಂದ ನೂತನ ದೇವಾಲಯ ಕಟ್ಟಡದ ಪ್ರತಿಷ್ಠಾಪನೆ ಹಾಗೂ ದೃಢೀಕರಣ ಸಂಸ್ಕಾರವು ವಿಶೇಷ ಪ್ರಾರ್ಥನೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ನೂತನವಾಗಿ ಸಿ.ಎಸ್.ಐ. ಸಭೆಯ ವತಿಯಿಂದ ಇಮ್ಯಾನೂವೆಲ್ ನೂತನ ದೇವಾಲಯದ ಲೋಕಾರ್ಪಣೆ ವಿಧಿ ವಿಧಾನಗಳ ಸಂದರ್ಭ ದೇವರ ವಾಕ್ಯದ ಸಂದೇಶವನ್ನು ಸಿ.ಐ.ಎಸ್., ಕೆ.ಎಸ್.ಡಿ. ಬಿಷೋಪ್ ರೈಟ್, ರೆವೆ, ಹೇಮಚಂದ್ರಕುಮಾರ್ ವಲಯದ ವಿವಿಧ ಭಾಗಗಳಿಂದ ಸಭಾಪಾಲಕರುಗಳು ಆರ್ಶಿವಚನ ನೀಡಿದರು. ಕಾರ್ಯಕ್ರಮದಲ್ಲಿ ಸಿಎಸ್‍ಐ ಸಭೆಯ ಪದಾಧಿಕಾರಿಗಳು, ಮಂಗಳೂರು, ಉಡುಪಿ, ಕೊಡಗು, ಹಾಸನ, ಮೈಸೂರು, ಚಾಮರಾಜನಗರ ವಲಯದ ಅಧ್ಯಕ್ಷರುಗಳು, ಸಭೆಯಲ್ಲಿ ಸೇವೆ ಸಲ್ಲಿಸಿದ್ದ ಸಭಾಪಾಲಕರು ಹಾಗೂ ಸಭಾಪಾಲಕ ರೆವ.ಅಮೃತರಾಜ್, ಸಭಾಸೇವಕರ ಸಂಧ್ಯಾ ಸುಪ್ರೀತಾ ಪಾಲ್ಗೊಂಡಿದ್ದರು.

Read More

ಮಡಿಕೇರಿ ಏ.15 : ದೂರದರ್ಶನ ಚಂದನ ವಾಹಿನಿಯ ಸೋದರ ಸಿರಿ ಕಾರ್ಯಕ್ರಮದಲ್ಲಿ ಇಂದು ಮಧ್ಯಾಹ್ನ 2-30 ಗಂಟೆಗೆ  ಕೊಡವ ಕವಿಗೋಷ್ಠಿ ಹಾಗೂ ಕೊಡವ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಬೆಂಗಳೂರು ದೂರದರ್ಶನ ಚಂದನ ವಾಹಿನಿಯ ಪ್ರಕಟಣೆ ತಿಳಿಸಿದೆ. ಮಧ್ಯಾಹ್ನ 2-30ಕ್ಕೆ ಪ್ರಸಾರವಾಗಲಿರುವ “ಸೋದರ ಸಿರಿ” ಕೊಡವ ಕಾರ್ಯಕ್ರಮದಲ್ಲಿ ಮುಲ್ಲೇಂಗಡ ಮಧೋಶ್ ಪೂವಯ್ಯ, ಡಾ. ಮುಲ್ಲೇಂಗಡ ರೇವತಿ ಪೂವಯ್ಯ, ಚಮ್ಮಟೀರ ಪ್ರವೀಣ್ ಉತ್ತಪ್ಪ, ತಂಬಾಂಡ ಡ್ಯಾನಿ ನಾಣಯ್ಯ ಹಾಗೂ ಬೊಟ್ಟಂಗಡ ಸುಮನ್ ಸೀತಮ್ಮ ಕವಿಗಳಾಗಿ ಕವನ ವಾಚನ ಮಾಡಲಿದ್ದಾರೆ ಹಾಗೂ ಮೊಣ್ಣಂಡ ಶೋಭ ಸುಬ್ಬಯ್ಯ ಮತ್ತು ತಂಡದವರಿಂದ ಕೊಡವ ಗೀತ ಗಾಯನ ಕಾರ್ಯಕ್ರಮ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Read More