ಲೇಖಕ: admin

ಮಡಿಕೇರಿ ಮೇ 19 : ವೈದ್ಯರಾದ ಡಾ.ಕೆ.ಬಿ.ಸೂರ್ಯಕುಮಾರ್ ಅವರ ಸಹೋದರಿ, ಕೂರ್ಗ್ ಟ್ರಯಲ್ಸ್ ಮಾಲೀಕರಾದ ವಿನಿತಾ ಕರುಂಬಯ್ಯ ಅವರ ತಾಯಿ, ಕೊಡಗು ವಿದ್ಯಾಲಯದ ಮಾಜಿ ಪ್ರಾಂಶುಪಾಲೆ ಉದಯಕುಮಾರಿ (85) ಅವರು ಇಂದು ಬೆಳಿಗ್ಗೆ ನಿಧನರಾದರು. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಮೈಸೂರಿನಲ್ಲಿ ನಡೆಯಲಿದೆ.

Read More

ಮಡಿಕೇರಿ ಮೇ 19 :  ಜಿಲ್ಲೆಯ ಹಲವೆಡೆಗಳಲ್ಲಿ ಗಾಳಿ ಸಹಿತ  ಧಾರಾಕಾರ ಗಾಳಿ ಮಳೆಯಾಗಿದ್ದು,  ಮೇಕೇರಿ ಗ್ರಾ.ಪಂ ವ್ಯಾಪ್ತಿಯ ಹಲವೆಡೆ ಮನೆಗಳಿಗೆ ಹಾನಿಯಾಗಿದ್ದು, ತೋಟ ಮತ್ತು ರಸ್ತೆಗೆ ಮರದ ಕೊಂಬೆಗಳು ಬಿದ್ದಿವೆ. ಗ್ರಾ.ಪಂ ವ್ಯಾಪ್ತಿಯ ಪುಟ್ಟಂಕಾಡು ವಿನ ಗಣಪತಿ ಎನ್ನುವವರ ಮನೆಯ ಮೇಲೆ ವಿದ್ಯುತ್ ಕಂಬ ಬಿದ್ದಿದ್ದು, ಅದೃಷ್ಟವಶಾತ್ ಮನೆ  ಮಂದಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಗ್ರಾ.ಪಂ ಸದಸ್ಯರಾದ ಹನೀಪ್  ಭೇಟಿ ನೀಡಿ ಪರಿಶೀಲನೆ ನಡೆಸಿ, ವಿದ್ಯುತ್ ಕಂಬ ತೆರವಿಗೆ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ  ಸರ್ಕಾರದಿಂದ  ಆರ್ಥಿಕ ಸಹಾಯ ನೀಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ ಅವರು, ತಕ್ಷಣವೇ ಪಂಚಾಯತಿ ವತಿಯಿಂದ ಟಾರ್ಪಲ್ ವ್ಯವಸ್ಥೆ ಮಾಡಿದರು.  

Read More

ನಾಪೋಕ್ಲು ಮೇ 19 :  ನಾಪೋಕ್ಲು-ಮಡಿಕೇರಿ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ ತೋಟಗಾರಿಕಾ ಇಲಾಖೆಯ ಮುಂಭಾಗದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಸಲು ರಸ್ತೆಯನ್ನು ಹಗೆದುಹಾಕಿ ಸರಿಯಾಗಿ ಮುಚ್ಚದೆ ಇರುವುದರಿಂದ ವಾಹನ ಸವಾರರು ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರುವ ಪರಿಸ್ಥಿತಿ ಎದುರಾಗಿದೆ ಎಂದು ಸಾರ್ವಜನಿಕರು, ವಾಹನ ಸವಾರರು ಆರೋಪಿಸಿದ್ದಾರೆ. ನಾಪೋಕ್ಲು ಗ್ರಾ.ಪಂ  ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಕುಡಿಯುವ ನೀರನ್ನು ಪೂರೈಸುವ ಸಲುವಾಗಿ ಪೈಪ್ ಲೈನ್ ಅಳವಡಿಸಲು ಮುಖ್ಯ ರಸ್ತೆಯನ್ನು ಹಗೆದು ಹಾಕಲಾಗಿತ್ತು. ಆದರೆ ಪೈಪ್ ಲೈನ್ ಅಳವಡಿಸಿದ ಬಳಿಕ ಅಧಿಕಾರಿಗಳು ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲದಂತೆ ಗುಂಡಿಯನ್ನು ಸರಿಯಾದ ರೀತಿಯಲ್ಲಿ ಮುಚ್ಚದೇ ಹೋಗಿದ್ದಾರೆ. ಇದರಿಂದ ಈ ರಸ್ತೆಯಲ್ಲಿ ಸಾಗುವ ದ್ವಿಚಕ್ರ ವಾಹನ ಸವಾರರು ಬಿದ್ದು ಆಸ್ಪತ್ರೆ ಸೇರುವ ಪರಿಸ್ಥಿತಿ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಪ್ರತಿನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು ಸವರಾರು ಗುಂಡಿಯಲ್ಲಿ ಸಿಲುಕಿ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗುವಂತ್ತಾಗಿದೆ. ಈ ರಸ್ತೆಯು ನಾಪೋಕ್ಲು ಮಡಿಕೇರಿ…

Read More

ಮಡಿಕೇರಿ ಮೇ 19 : ಹಾಕಿ ಇಂಡಿಯಾ ವತಿಯಿಂದ ರೂರ್ಕೆಲಾದ ಒಡಿಶಾದಲ್ಲಿ ಮೇ 28ರ ವರೆಗೆ ನಡೆಯಲಿರುವ ಸಬ್‍ಜೂನಿಯರ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿರುವ 13ನೇ ಹಾಕಿ ಕರ್ನಾಟಕ ತಂಡದ ಹಾಕಿ ನಾಯಕನಾಗಿ ಕೊಡಗಿನ ಕೆ.ಡಿ.ಹೃತಿಕ್ ಅಯ್ಯಪ್ಪ ಆಯ್ಕೆಯಾಗಿದ್ದಾರೆ. ತಂಡದ ಬಹುತೇಕ ಆಟಗಾರರು ಕೊಡಗು ಮೂಲದವರಾಗಿದ್ದಾರೆ. ತಂಡವನ್ನು ಕೊಡಗಿವರಾದ ಟಿ.ಬಿ.ಕೃಶಾಂಕ್ ಕಾಳಪ್ಪ, ಕುಶಾಲ್ ನಂಜಪ್ಪ, ಎಂ.ನಿಶಾಂತ್, ಎಸ್.ಎಲ್.ವಚನ್ ಉತ್ತಪ್ಪ, ಬಿ.ಕೆ.ವಿಖ್ಯಾತ್ ಮಂದಣ್ಣ, ಎಂ.ಎಂ.ಅಚ್ಚಯ್ಯ, ಬಿ.ಪಿ.ಸಂಪನ್ ಗಣಪತಿ, ಕೆ.ವಿ.ವಿಶ್ವಜಿತ್, ಜಿ.ಸುಪ್ರಿತ್, ಸಿ.ಆರ್.ವರುಣ್ ಮಾದಪ್ಪ, ಕೆ.ಎಸ್.ಉತ್ತಪ್ಪ, ಎಂ.ಸಿ.ಜಶನ್ ತಿಮ್ಮಯ್ಯ, ವಿ.ವಿ.ಕಾರ್ತಿಕ್ ಕಾರ್ಯಪ್ಪ ಪ್ರತಿನಿಧಿಸಲಿದ್ದಾರೆ.

Read More

ಮಡಿಕೇರಿ ಮೇ 19 : ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ 2023-24 ನೇ ಸಾಲಿನ ಸೀಮಿತ ಅವಧಿಗೆ ಮಡಿಕೇರಿ, ಕೊಡ್ಲಿಪೇಟೆ ಹಾಗೂ ಶಾಂತಳ್ಳಿ ಹೋಬಳಿಗಳಿಗೆ ಸೇರಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಎಂ.ಎಸ್ಸಿ, (ಕೃಷಿ/ ತೋಟಗಾರಿಕೆ/ ಮೀನುಗಾರಿಕೆ/ ಅರಣ್ಯ, ರೇಷ್ಮೆ) ವಿದ್ಯಾರ್ಹತೆ ಹೊಂದಿದ್ದು, ಕನಿಷ್ಠ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಮತ್ತು ಎಂಎಸ್ ಆಫಿಸ್‍ನಲ್ಲಿ ಪರಿಣತಿ ಹೊಂದಿರಬೇಕು. ಗರಿಷ್ಠ 45 ವರ್ಷ, ಗೌರವ ಧನ ರೂ.30,000. ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಬಿ.ಎಸ್ಸಿ/ ಎಂ ಎಸ್ಸಿ (ಕೃಷಿ/ತೋಟಗಾರಿಕೆ/ಮೀನುಗಾರಿಕೆ/ಅರಣ್ಯ ರೇಷ್ಮೆ) ವಿದ್ಯಾರ್ಹತೆ ಹೊಂದಿದ್ದು, 1 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ…

Read More

ಮಡಿಕೇರಿ ಮೇ 19 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ “ನನ್ನ ಜೀವನ ನನ್ನ ಸ್ವಚ್ಛ ನಗರ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಂತೆ ಪಟ್ಟಣದ ವ್ಯಾಪ್ತಿಯ ನಾಗರಿಕರಿಗೆ/ ಸಾರ್ವಜನಿಕರಿಗೆ ತ್ಯಾಜ್ಯ ನಿರ್ವಹಣೆ ಮತ್ತು ಪರಿಸರ ಸಂರಕ್ಷಣೆಗೆ ತೊಡಗಲು ಆರ್‍ಆರ್‍ಆರ್ ಆಂದೋಲನ ಅಂದರೆ ತ್ಯಾಜದ ಪ್ರಮಾಣ ಕಡಿತಗೊಳಿಸುವುದು(ರೆಡ್ಯೂಷ್), ತ್ಯಾಜ್ಯದ ಮರುಬಳಕೆ(ರೆಸ್ಯೂ), ತ್ಯಾಜ್ಯದ ಮರು ಉಪಯೋಗದ(ರೀಸೈಕಲ್) ಬಗ್ಗೆ ಪಟ್ಟಣ ಪಂಚಾಯಿತಿ ವತಿಯಿಂದ ಮೇ, 20 ರಿಂದ ಜೂನ್, 5 ರವರೆಗೆ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ಈಗಾಗಲೇ ಸ್ಥಾಪಿಸಿರುವ ಕೇಂದ್ರಕ್ಕೆ ಮತ್ತು ವಾಹನಕ್ಕೆ ನಾಗರಿಕರು/ಸಾರ್ವಜನಿಕರು ತ್ಯಾಜ್ಯವನ್ನು ನೀಡಿ ಯಶಸ್ವಿಗೊಳಿಸಲು ಸಹಕರಿಬೇಕೆಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಅವರು ತಿಳಿಸಿದ್ದಾರೆ. ಜೇಸಿ. ವೇದಿಕೆ ಮತ್ತು ಆರ್‍ಆರ್‍ಆರ್ ಕೇಂದ್ರ ಆನ್ ವೀಲ್ಸ್ ಕೇಂದ್ರಕ್ಕೆ ಉಪಯೋಗಿಸಿದ ಪ್ಲಾಸ್ಟಿಕ್ ಸಾಮಗ್ರಿಗಳು, ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಮಕ್ಕಳ ಪ್ಲಾಸ್ಟಿಕ್ ಆಟಿಕೆಗಳು, ಬಟ್ಟೆಗಳು, ಹಳೇ ಜೀನ್ಸ್, ಯೂನಿಫಾರಂ, ಸೀರೆಗಳು, ಹಳೇ ಬಟ್ಟೆಗಳು, ಚಪ್ಪಲಿ, ಶೂಗಳು, ನ್ಯೂಸ್ ಪೇಪರ್, ಹಳೇ ಪುಸ್ತಕಗಳು…

Read More

ಮಡಿಕೇರಿ ಮೇ 19 : ಪ್ರಸಕ್ತ(2023-24) ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಟಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ, 25 ಕೊನೆಯ ದಿನವಾಗಿದೆ. 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಯಲ್ಲಿ 6 ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವುದು. ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ ಪಟ್ಟಿಯನ್ನು ಸಲ್ಲಿಸುವುದು. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ.2 ಲಕ್ಷ ಒಳಗೆ ಇರಬೇಕು. (ಈ ಬಗ್ಗೆ ತಹಶೀಲ್ದಾರರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು). ಅರ್ಜಿಯನ್ನು ಪಡೆಯಲು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ-9480843037, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-9480843155,…

Read More

ನಾಪೋಕ್ಲು ಮೇ 18 : ಇಂಡಿಯಾದ ವತಿಯಿಂದ ಒರಿಸ್ಸಾದ ರೋರ್ಕೆಲಾ ಕ್ರೀಡಾಂಗಣದಲ್ಲಿ ಮೇ.18ರಿಂದ 28ರವರೆಗೆ ನಡೆಯಲಿರುವ 13ನೇ ರಾಷ್ಟ್ರೀಯ ಸಜ್ಜೂನಿಯರ್ ಹಾಕಿ ಪಂದ್ಯಾವಳಿಯಲ್ಲಿ  ಭಾಗವಹಿಸಲಿರುವ ಕರ್ನಾಟಕ  ತಂಡಕ್ಕೆ ನಾಪೋಕ್ಲುವಿನ ಬೊಪ್ಪಂಡ ವಿಕ್ಯಾತ್ ಮಂದಣ್ಣ ಆಯ್ಕೆಯಾಗಿದ್ದಾರೆ.  ಪೊನ್ನಮ್ಪೇಟೆ ಕ್ರೀಡಾಶಾಲೆಯ ವಿದ್ಯಾರ್ಥಿಯಾಗಿರುವ ವಿಕ್ಯಾತ ಮಂದಣ್ಣ ನಾಪೋಕ್ಲುವಿನ ಬೊಪ್ಪಂಡ ಕವನ್ ಕಾಳಪ್ಪ ಹಾಗೂ ಸೌಮ್ಯ ದಂಪತಿಗಳ ಪುತ್ರನಾಗಿದ್ದಾನೆ. (ವರದಿ : ಝಕರಿಯ, ನಾಪೋಕ್ಲು)

Read More

ಮಡಿಕೇರಿ ಮೇ 18 :   ಮೂರು ದಿನಗಳ ಹಿಂದೆ  ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡು ಮೈಸೂರು ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡಿಯುತ್ತಿದ್ದ ಪಾಲಿಬೇಟ್ಟದ ಕಾರ್ಮಿಕ ಬಾಬಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಷಯ ತಿಳಿದ  ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಮೃತ  ಸಂಬಂಧಿಕರಿಗೆ ದೂರವಾಣಿ ಕರೆ ಮೂಲಕ ಸಾಂತ್ವನ ಹೇಳಿ ಸ್ಥಳದಲ್ಲಿದ್ದ ಅರಣ್ಯ ಅಧಿಕಾರಿಗಳಿಗೆ ತಕ್ಷಣ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.  ಶಾಸಕ ಪೊನ್ನಣ್ಣ ಅವರ ನಿರ್ದೇಶನದಂತೆ  ಕಾಂಗ್ರೆಸ್ ರಾಜ್ಯ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಮೈಸೂರು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ಮೃತ ಅಂತಿಮ ದರ್ಶನ ಪಡೆದರು. ನಂತರ ಸುದ್ದಿಗಾರೊಂದಿಗೆ ಮಾತನಾಡಿ ಶಾಸಕರ ನಿರ್ದೇಶನದಂತೆ  ಆಸ್ಪತ್ರೆಗೆ ಭೇಟಿ ನೀಡಿದ್ದು ಕುಟುಂಬಕ್ಕೆ ಧೈರ್ಯ ಹೇಳಿ ಸರ್ಕಾರದಿಂದ ಸಿಗುವ ಪರಿಹಾರವನ್ನು ತಕ್ಷಣ ನೀಡಲು ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಶಾಸಕರು  ಚರ್ಚಿಸಲಾಗಿದ್ದು ಪರಿಹಾರದ ಮೊತ್ತವನ್ನ  ಕುಟುಂಬಕ್ಕೆ ನೀಡುವಂತೆ ಸೂಚಿಸಿದ್ದಾರೆ ಎಂದು ಹೇಳಿದ ಅವರು ಜಿಲ್ಲೆಯಲ್ಲಿ  ವನ್ಯಜೀವಿ-ಮಾನವ ಸಂಘರ್ಷವನ್ನು ಶಾಶ್ವತವಾಗಿ ತಡೆಯುವ ನಿಟ್ಟಿನಲ್ಲಿ ಶೀಘ್ರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ  ಶಾಸಕರು ಸಭೆ…

Read More

ಕೊಡ್ಲಿಪೇಟೆ ಮೇ 18 : ನೀರಗುಂದ ಗ್ರಾಮದೇವತೆ ಶ್ರೀ ಕನ್ನಂಬಾಡಿ ಅಮ್ಮನವರ ದೇವಸ್ಥಾನದಲ್ಲಿ 21ರ ಬಾನುವಾರ ಪುಣ್ಯಾಹ, ಪಂಚಗವ್ಯ, ಗಣಪತಿ ಪೂಜೆ, ಮಹಾಸಂಕಲ್ಪ, ಕಂಕಣಧಾರಣ, ಆದಿತ್ಯಾದಿ ನವಗ್ರಹ ಸಹಿತ ಪರಿವಾರ ದೇವತೆಗಳ ಕಳಸ ಸ್ಥಾಪನೆ, ನಂತರ ದೇವರ ವಿಗ್ರಹಕ್ಕೆ ಜಲಾಧಿವಾಸ, ಕ್ಷೀರಾಧಿವಾಸ, ನೇತ್ರಬಿಂಬ ಶುದ್ದಿ, ಜೀವಕಳೆ, ತೈಲವಾಸ, ಪುಪ್ಪವಾಸ ಸುವರ್ಣವಾಸ, ಧಾನ್ಯಾಧಿವಾಸ ಮಾಡಿ ವಾಸ್ತು ರಾಠೋಡ್ ಹೋಮ, ತತ್ವ ಹೋಮಗಳಿಂದ ಪೂರ್ಣಾಹುತಿ, ವಾಸ್ತುಬಲಿ ನಂತರ ಮಹಾಮಂಗಳಾರತಿ ಇರುತ್ತದೆ.  22ರ ಸೋಮವಾರ ಬೆಳಿಗ್ಗೆ 6.00 ಗಂಟೆಯಿಂದ ರುದ್ರಾಭಿಷೇಕ, ಪ್ರಾಣ ಪ್ರತಿಷ್ಠಾಪನೆ, ನೇತ್ರ ಮಿಲನ, ಅಲಂಕಾರ, ನಂತರ ಗಣಪತಿಹೋಮ, ನವಗ್ರಹ ಹೋಮ, ಪ್ರಧಾನ ದುರ್ಗಾ ಹೋಮ, ಪೂರ್ಣಾಹುತಿ, ತದನಂತರ ಬಲಿಪ್ರಧಾನ ಹಾಗೂ ಮಹಾಮಂಗಳಾರತಿ ಇರುತ್ತದೆ. ಅಂದು ರಾತ್ರಿ 10-00 ಗಂಟೆಗೆ ಹೇಮಾವತಿ ನದಿಗೆ ತೆರಳಿ ನೂತನ ವಿಗ್ರಹ ಪೂಜೆ ಮಾಡಿ ಕಳಸದೊಂದಿಗೆ ದೇವಾಲಯ ತಲುಪುವುದು ಮುಂಜಾನೆ 5 ಗಂಟೆಗೆ ಕೆಂಡೋತ್ಸವ ಇರುತ್ತದೆ. ಈ ಎಲ್ಲಾ ಪೂಜಾ ಕೈಕರ್ಯಗಳನ್ನು ಶ್ರೀ ಶ್ರೀ ಸದಾಶಿವಸ್ವಾಮಿಗಳು, ಶ್ರೀ ಕ್ಷೇತ್ರ…

Read More