ಲೇಖಕ: admin

ಮಡಿಕೇರಿ ಮಾ.7 : ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಕುಶಾಲನಗರ ತಾಲೂಕು ಮಹಿಳಾ ಅಧ್ಯಕ್ಷೆಯಾಗಿ ಪದ್ಮ ಮಾಧುಕುಮಾರ್ ಆಯ್ಕೆಯಾಗಿದ್ದಾರೆ. ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರ ಆದೇಶದ ಮೇರೆಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಜವಾಬ್ದಾರಿ ವಹಿಸುವಂತೆ ಕೆ.ಎಂ.ಗಣೇಶ್ ತಿಳಿಸಿದರು.

Read More

ಸುಂಟಿಕೊಪ್ಪ,ಮಾ.7: ಸುಂಟಿಕೊಪ್ಪ ಗ್ರಾ.ಪಂ ನೂತನ ಕಚೇರಿ ಕಟ್ಟಡ ಹಾಗೂ ರಾಜೀವ್ ಗಾಂಧಿ ಸೇವಾ ಕೇಂದ್ರದ ಉದ್ಘಾಟನೆಯು ಮಾ.10 ರಂದು ನೆರವೇರಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪಂಚಾಯಿತಿ ಕಟ್ಟಡ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್, ಕೊಡಗು ಮೈಸೂರು ಕ್ಷೇತ್ರದ ಸಂಸದರಾದ ಪ್ರತಾಪ್‍ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕುಶಾಲಪ್ಪ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್, ಕೊಡಗು ಜಿಲ್ಲಾಧಿಕಾರಿ ಬಿ.ಸಿ.ಸತೀಶ, ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ಸೋಮವಾರಪೇಟೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಬಿ.ವಿ.ಜಯಣ್ಣ, ಸುಂಟಿಕೊಪ್ಪ ಗ್ರಾ.ಪಂ.ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ವಿಶೇಷ ಆಹ್ವಾನಿತರಾದ ಜಿ.ಪಂ.ಮಾಜಿ ಸದಸ್ಯೆ ಕೆ.ಪಿ.ಚಂದ್ರಕಲಾ, ತಾಪಂ. ಮಾಜಿ ಸದಸ್ಯೆ ಓಡಿಯಪ್ಪನ ವಿವiಲಾವತಿ ಆಗಮಿಸಲಿರುವರು, ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷೆ ಶಿವಮ್ಮ ವಹಿಸಲಿರುವರು.

Read More

ಸುಂಟಿಕೊಪ್ಪ,ಮಾ.7: ಹರದೂರು ಗ್ರಾ.ಪಂ ವ್ಯಾಪ್ತಿಯ ಪನ್ಯದ ಉದ್ದಿಬಾಣೆ ಮಠದಲ್ಲಿ ಕೊರಗಜ್ಜ ಗುಡಿಯ ಪ್ರತಿಷ್ಠಾಪನೆಯು ಶ್ರದ್ಧಾಭಕ್ತಿಯಿಂದ ಜರುಗಿತು. ಪ್ರತಿಷ್ಠಾಪನೆಯ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ನೆರವೇರಿತು. ಕೊರಗಜ್ಜ ದೈವ ನರ್ತಕ ನಿಶಾಂತ್ ದೈವದ ಕಲ್ಲಿಗೆ ಕಾರಣಿಕ ಶಕ್ತಿಯನ್ನು ನೀಡುವ ಮೂಲಕ ಪ್ರತಿಷ್ಠಾಪನೆ ಮಾಡಿದರು. ಇದಕ್ಕೂಮೊದಲು ಗುಡಿಯ ಶುದ್ಧ ಪೂಜೆ ನಡೆಯಿತು. ನಂತರ ದೈವಕ್ಕೆ ನಂದಾದೀಪ, ಚಕ್ಕುಲಿ, ವಿಲ್ಯದೆಲೆ ಇರಿಸುವುದರ ಮೂಲಕ ಆರಾಧನೆಗೆ ಅವಕಾಶ ನೀಡಲಾಯಿತು. ಹರೀಶ್ ಪೂಜಾರಿ, ದೇವಪ್ಪ ಪೂಜಾರಿ, ಪ್ರಕಾಶ್ ಆಚಾರಿ, ಗುಡಿಯ ಪ್ರಮುಖರಾದ ಮೋಣಪ್ಪ ಪೂಜಾರಿ, ಜಿನ್ನಪ್ಪ ಪೂಜಾರಿ, ಮಣಿಮುಖೇಶ್, ಶಾಂತಪ್ಪ, ಪದ್ಮನಾಭ, ವೆಂಕಪ್ಪ, ದೇವಕ್ಕಿ, ಬೇಬಿ ಇತರರು ಇದ್ದರು.

Read More

ಮಡಿಕೇರಿ ಮಾ.7 : ಸಮಾಜವನ್ನು ಸದೃಢವಾಗಿ ಕಟ್ಟಿ ಬೆಳೆಸಲು ಸಮುದಾಯ ಬಾಂಧವರ ಒಗ್ಗಟ್ಟು ಅತ್ಯಗತ್ಯವೆಂದು ಕುಶಾಲನಗರದ ಶ್ರೀ ಯೋಗಿ ನಾರೇಯಣ ಬಲಿಜ ಸಂಘದ ಅಧ್ಯಕ್ಷ ಆರ್.ಬಾಬು ಅಭಿಪ್ರಾಯಪಟ್ಟರು. ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಶ್ರೀ ಯೋಗಿ ನಾರೇಯಣ ಬಲಿಜ ಸಂಘದ ಆಶ್ರಯದಲ್ಲಿ ಆಯೋಜಿತ ಶ್ರೀ ಕೈವಾರ ತಾತಯ್ಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕುಶಾಲನಗರ ಹಾಗೂ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಸಮುದಾಯ ಭವನಕ್ಕೆ ನಿವೇಶನ ಒದಗಿಸಲು ಸರಕಾರ ಗಮನಹರಿಸುವಂತೆ ಮನವಿ ಮಾಡಿದರು. ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಮೈಸೂರಿನ ಉಪನ್ಯಾಸಕ ಡಾ.ಕೃಷ್ಣಪ್ಪ ಮಾತನಾಡಿ, ಜನಸಾಮಾನ್ಯರಿಗೆ ಅರಿವಾಗುವಂತಹ ಕೀರ್ತನೆಗಳನ್ನು ರಚಿಸಿದ ತ್ರಿಕಾಲ ಜ್ಞಾನಿ ಕೈವಾರ ತಾತಯ್ಯ ಮಹಾನ್ ದಾರ್ಶನಿಕ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಂಖ್ಯೆಯಲ್ಲಿ ಅಲ್ಪಸಂಖ್ಯಾತರಾಗಿರುವ ಬಣಜಿಗ, ಬಲಿಜ ಸಮುದಾಯಕ್ಕೆ ಸರಕಾರ ಅಗತ್ಯ ಯೋಜನೆಗಳನ್ನು ರೂಪಿಸುವಂತಾಗಬೇಕಿದೆ. ಸರಕಾರದ ಗಮನ ಸೆಳೆಯಲು ಸಮುದಾಯ ಮತ್ತಷ್ಟು ಸಂಘಟಿತರಾಗುವ ಅವಶ್ಯಕತೆಯಿದೆ. ಪ್ರತಿಷ್ಠೆಯ ಕಾರಣದಿಂದ ಸಮುದಾಯದ ಹೋರಾಟಗಳು ಅವನತಿ ಕಾಣುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು. ಸಂಘದ ನಿರ್ದೇಶಕ ಎನ್.ಸ್ವಾಮಿ ಮಾತನಾಡಿ, ಸಮುದಾಯ…

Read More

ಕುಶಾಲನಗರ ಮಾ.7 : ನಗರದ ರಾಜಸ್ಥಾನ ಸಮಾಜ ಮತ್ತು ಸಿರ್ವಿ ಸಮುದಾಯ ಬಾಂಧವರು ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಮಾರುಕಟ್ಟೆ ರಸ್ತೆ ಬಳಿಯಿರುವ ಸಮಾಜದ ಕಟ್ಟಡದಲ್ಲಿ ಹೋಳಿಪೂಜೆ, ವಿವಿಧ ಸಾಂಸ್ಕೃತಿಕ ಚಟುವಟಿಕ, ಸಹಭೋಜನ ನಡೆಯಿತು. ಮಹಿಳೆಯರು, ಮಕ್ಕಳು, ಪುರುಷರಾದಿಯಾಗಿ ಪರಸ್ಪರ ಬಣ್ಣ ಹಚ್ಚಿ ಶುಭಾಶಯ ಕೋರಿ ಸಂಭ್ರಮಿಸಿದರು.

Read More

ಮಡಿಕೇರಿ ಮಾ.7 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಮಾರ್ಚ್, 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಒಳಾಂಗಣ ಕ್ರೀಡಾಂಗಣದ ಬ್ಯಾಡ್ಮಿಂಟನ್ ಕೋರ್ಟ್, ಟೇಬಲ್‍ಟೆನ್ನಿಸ್, ಜಿಮ್ ಹಾಗೂ ಈಜುಕೊಳದಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರವೇಶ ನೀಡುವುದರ ಮೂಲಕ ಮಹಿಳಾ ದಿನಾಚರಣೆ ನಡೆಯಲಿದೆ. ಜಿಲ್ಲೆಯ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಮಾ.7 : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್ 3 ಗದ್ದಿಗೆ ಮತ್ತು ಎಫ್2 ಓಂಕಾರೇಶ್ವರ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಮಾ. 9 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಗೌಡ ಸಮಾಜ, ಕನ್ನಂಡಬಾಣೆ, ಓಂಕಾರೇಶ್ವರ ದೇವಸ್ಥಾನ ರಸ್ತೆ, ವೈವಾಸ್, ಗಣಪತಿಬೀದಿ, ಜೂನಿಯರ್ ಕಾಲೇಜು, ಸಂಪಿಗೆಕಟ್ಟೆ, ಅಜಾದ್‍ನಗರ, ಮಾರ್ಕೆಟ್, ಎ.ವಿ.ಶಾಲೆ, ಭಗವತಿನಗರ, ಕಾನ್ವೆಂಟ್ ಜಂಕ್ಷನ್, ಗಾಳಿಬೀಡು, ಕಾಲೂರು, ಹೆಬ್ಬೆಟ್ಟಗೇರಿ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ 33/11 ಕೆವಿ ಮೂರ್ನಾಡು, ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ನಾಪೋಕ್ಲು ಮತ್ತು ಹೊದ್ದೂರು ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಮಾರ್ಚ್, 09 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ನಾಪೋಕ್ಲು, ಹೊದ್ದೂರು, ಕೊಟ್ಟಮುಡಿ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ…

Read More

ಮಡಿಕೇರಿ ಮಾ.7 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಇ-ಶ್ರಮ್ ಯೋಜನೆಯ ಆಟೋ ಪ್ರಚಾರ (ಸಂಚಾರಿ ರಥ) ಕಾರ್ಯಕ್ರಮಕ್ಕೆ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ನಂತರ ಮಾತನಾಡಿ ಎಲ್ಲಾ ಅಸಂಘಟಿತ ಕಾರ್ಮಿಕರು ಇ-ಶ್ರಮ್ ಪೋರ್ಟಲ್‍ನಲ್ಲಿ ನೋಂದಾಯಿಸಿಕೊಂಡು ಸರ್ಕಾರದಿಂದ ದೊರೆಯುವ ಸೌಲಭ್ಯ ಪಡೆದುಕೊಳ್ಳಬೇಕು. ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮುಂದಿನ ದಿನಗಳಲ್ಲಿ ಅಸಂಘಟಿತ ಕಾರ್ಮಿಕರಿಗೆ ಇರುವ ಸೌಲಭ್ಯಗಳ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ, ಕಟ್ಟಡ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೇರೆ ಬೇರೆ ಇಲಾಖೆಯ ಹೊರಗುತ್ತಿಗೆ ಸಿಬ್ಬಂದಿಗಳು, ದಿನಗೂಲಿ ನೌಕರರ ಸಂಘದ ಅಧ್ಯಕ್ಷರಾದ ಜಗದೀಶ ಹಾಗೂ ಕಾರ್ಮಿಕ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.

Read More

ಮಡಿಕೇರಿ ಮಾ.7 : ‘ರಾಷ್ಟ್ರದ ಮೂಲ ಸಂಸ್ಕೃತಿಯ ಬೇರು, ಭವ್ಯ ಭಾರತದ ತೇರು’ ಎಂಬುದನ್ನು ಯಾರೂ ಸಹ ಮರೆಯಬಾರದು ಎಂದು ಮೂಲ ಸಂಸ್ಕೃತಿ ಮತ್ತು ಕನ್ನಡ ಸಂಸ್ಕೃತಿ ರಾಜ್ಯ ಸಂಚಾಲಕ ಜಗದೀಶ್ ಹಿರೇಮನಿ ಪ್ರತಿಪಾದಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ‘ಮೂಲ ಸಂಸ್ಕೃತಿ -ಕನ್ನಡ ಸಂಸ್ಕೃತಿ ’ ನಶಿಸಿ ಹೋಗುತ್ತಿರುವ ತಳ ಸಮುದಾಯದ ವಿಶಿಷ್ಟ ಕಲೆಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರಸ್ತುತ ಕಾಲದಲ್ಲಿ ಕಲಾ ಸಾಹಿತ್ಯದಲ್ಲಿ ಭಾವನಾತ್ಮಕತೆ ಕಡಿಮೆಯಾಗುತ್ತದೆ. ಇದರಿಂದ ಮೂಲ ಸಂಸ್ಕೃತಿ ಉಳಿಯಲು ಸಾಧ್ಯವೇ ಎಂಬುದನ್ನು ಚಿಂತಿಸಬೇಕಿದೆ. ಆ ನಿಟ್ಟಿನಲ್ಲಿ ವಿವಿಧ ಕಲಾಪ್ರಕಾರಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಮೂಲ ಸಂಸ್ಕೃತಿ -ಕನ್ನಡ ಸಂಸ್ಕೃತಿ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು. ಪ್ರತಿಯೊಬ್ಬರೂ ಒಂದಲ್ಲ ಒಂದು ಜಾನಪದ ಕಲೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸನ್ನು ಹಗುರ ಮಾಡಿಕೊಳ್ಳಬಹುದು. ಇದರಿಂದ ಉತ್ತಮ ಆರೋಗ್ಯ ಪಡೆಯಬಹುದು. ಸದಾ ಧನಾತ್ಮಕವಾಗಿ ಚಿಂತಿಸಬಹುದು ಎಂದು ಜಗದೀಶ್…

Read More

ಸೋಮವಾರಪೇಟೆ ಮಾ.7 :  ಆಕಸ್ಮಿಕವಾಗಿ ಕಾಫಿ ತೋಟಕ್ಕೆ ಬೆಂಕಿ ಬಿದ್ದು  ಫಸಲು ನಾಶವಾಗಿರುವ ಘಟನೆ ಗರ್ವಾಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಡಿ.ಕೆ. ಬೆಳ್ಳಿಯಪ್ಪ ಎಂಬುವವರಿಗೆ ಸೇರಿದ ಕಾಫಿ ತೋಟಕ್ಕೆ ಬೆಂಕಿ ಬಿದ್ದ ಪರಿಣಾಮ 150ಕ್ಕಿಂತ ಹೆಚ್ಚು ಕಾಫಿಗಿಡಗಳು ಹಾಗೂ ಬೆಲೆ ಬಾಳುವ ಮರಗಳು ಬಿಂಕಿಗಾಹುತಿಯಾಗಿವೆ.  ಪಕ್ಕದ ಕಾಫಿ ತೋಟದ ಮಾಲೀಕರು ಖಾಲಿ ಜಾಗಕ್ಕೆ ಹಚ್ಚಿದ ಬೆಂಕಿ ಹರಡಿಕೊಂಡಿದ್ದು,ಲಕ್ಷಂತರ ರೂ. ಮೌಲ್ಯ ಫಸಲು ನಾಶವಾಗಿದೆ. ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಬೆಳ್ಳಿಯಪ್ಪ ಸೋಮವಾರಪೇಟೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿ ದ್ದಾರೆ.

Read More