ಮಡಿಕೇರಿ ಏ.13: ಬಿಜೆಪಿ ಹೈ ಕಮಾಂಡ್ ಮೊದಲ ಪಟ್ಟಿಯಲ್ಲೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಶಾಸಕರನ್ನೇ ಅಧಿಕೃತ ಅಭ್ಯರ್ಥಿಯನ್ನಾಗಿಸಿದ ಹಿನ್ನೆಲೆಯಲ್ಲಿ ಶಾಸಕ ಕೆ.ಜಿ.ಬೋಪಯ್ಯ, ಪಕ್ಷ ಪ್ರಮುಖರು ಹಾಗೂ ಆಪ್ತ ವರ್ಗದವರೊಂದಿಗೆ ತಲಕಾವೇರಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮೊದಲಿಗೆ ಸಂಪ್ರದಾಯದಂತೆ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತು ಶ್ರೀ ಭಗಂಡೇಶ್ವರ ಸನ್ನಿಧಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ನಂತರ ತಲಕಾವೇರಿಗೆ ತೆರಳಿ ಕಾವೇರಿ ಮಾತೆಯ ತೀರ್ಥ ಕುಂಡಿಕೆ ಬಳಿ ವಿಶೇಷ ಪೂಜೆ, ಪ್ರಾರ್ಥನೆ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೋಪಯ್ಯ, ಮೊದಲ ಪಟ್ಟಿಯಲ್ಲಿಯೇ ಕೊಡಗಿನ ಎರಡೂ ಕ್ಷೇತ್ರಗಳಿಗೆ ಹಾಲಿ ಶಾಸಕರನ್ನೇ ವರಿಷ್ಠರು ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ. ಗೆಲ್ಲುವ ವಿಶ್ವಾಸವನ್ನಿಟ್ಟು ಸ್ಪರ್ಧಿಸಲು ಅವಕಾಶ ನೀಡಿದ್ದಾರೆ. ವಿಶ್ವಾಸವನ್ನು ಉಳಿಸಿಕೊಳ್ಳವ ಕಾರ್ಯವನ್ನು ನಾವು ಮಾಡುತ್ತೇವೆ. ತಲಕಾವೇರಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದೇನೆ ಎಂದು ಹೇಳಿದರು. ಇದೀಗ ಮಳೆಯ ಕೊರತೆ ಕಂಡು ಬಂದಿದೆ. ಇದರಿಂದಾಗಿ ರೈತಾಪಿ ವರ್ಗ ಹಾಗೂ ಕೃಷಿಕರು ಕಂಗಾಲಾಗಿದ್ದಾರೆ. ಜನರ ನೆಮ್ಮದಿಯ ಬದುಕು ಮತ್ತು…
ಲೇಖಕ: admin
ಮಡಿಕೇರಿ ಏ.13 : ವಿಧಾನಸಭಾ ಚುನಾವಣಾ ಅಧಿಸೂಚನೆ ಇಂದು ಪ್ರಕಟವಾಗಿದ್ದು, ನಾಮಪತ್ರ ಸಲ್ಲಿಕೆಯ ಆರಂಭಿಕ ದಿನದಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಅಮಿನ್ ಮೊಹಿಸಿನ್ ಅವರು ಮಡಿಕೇರಿ ಕ್ಷೇತ್ರಕ್ಕೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿಗಳಾದ ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಅವರಿಗೆ ಅಮೀನ್ ಮೊಹಿಸಿನ್ ನಾಮಪತ್ರವನ್ನು ಸಲ್ಲಿಸಿದರು. ::: ಮೆರವಣಿಗೆ ::: ನಾಮಪತ್ರ ಸಲ್ಲಿಸುವುದಕ್ಕು ಮೊದಲು ಎಸ್ಡಿಪಿಐ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ನಗರದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ::: ಬ್ಯಾಲೆಟ್ ಹೋರಾಟ ::: ನಾಮಪತ್ರ ಸಲ್ಲಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅಮಿನ್ ಮೊಹಿಸಿನ್, ಕಳೆದ ಒಂದೂವರೆ ದಶಕಗಳಿಂದ ಜನಪರವಾಗಿ ಎಸ್ಡಿಪಿಐ ಸಾಕಷ್ಟು ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಇದೀಗ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷವಾಗಿ ‘ಬ್ಯಾಲೆಟ್ ಹೋರಾಟ’ಕ್ಕೆ ಮುಂದಾಗಿರುವುದಾಗಿ ತಿಳಿಸಿದರು. ಇತರೆ ಯಾವುದೇ ರಾಜಕೀಯ ಪಕ್ಷಗಳ ಲಾಭ, ನಷ್ಟಗಳು ಎಸ್ಡಿಪಿಐ ಪಕ್ಷಕ್ಕೆ ಸಂಬಂಧಪಡುವುದಿಲ್ಲ. ಒಂದು ರಾಷ್ಟ್ರೀಯ ಪಕ್ಷವಾಗಿರುವ ಎಸ್ಡಿಪಿಐ ಮೂಲಕ ಜನಪರ ಕಾಳಜಿಯೊಂದಿಗೆ ಚುನಾವಣಾ ಸ್ಪರ್ಧೆಗೆ…
ಮಡಿಕೇರಿ ಏ.13 : ಚುನಾವಣೆಯನ್ನು ಸಮರ್ಪಕವಾಗಿ ನಿಭಾಯಿಸುವ ಸಲುವಾಗಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ವಯಲ ಅಧ್ಯಕ್ಷರುಗಳಿಗೆ ತರಬೇತಿ ಕಾರ್ಯಾಗಾರ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಪ್ರಚಾರ ಸಮಿತಿ ಸಹಯೋಗದಲ್ಲಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದ ಆರು ಬ್ಲಾಕ್ನ 273 ಮತಗಟ್ಟೆಯ ಪದಾಧಿಕಾರಿಗಳಿಗೆ, ವಯಲ ಅಧ್ಯಕ್ಷರುಗಳಿಗೆ ಕೆಪಿಸಿಸಿಯ ನುರಿತ ತರಬೇತುದಾರರಿಂದ ಕಾರ್ಯಾಗಾರ ನಡೆಯಲಿದೆ ಎಂದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಹಂತದಲ್ಲಿ ಕಾರ್ಯಾಗಾರ ನಡೆಯಲಿದ್ದು, ಏ.15 ರಂದು ಬೆಳಿಗ್ಗೆ 10 ಗಂಟೆಗೆ ಪೊನ್ನಂಪೇಟೆ ಬ್ಲಾಕ್ನ ಗೋಣಿಕೊಪ್ಪ ಪರಿಮಳ ಕಲ್ಯಾಣ ಮಂಟಪ, ಮಧ್ಯಾಹ್ನ 12.30ಕ್ಕೆ ವಿರಾಜಪೇಟೆ ಬ್ಲಾಕ್ನ ಅಭ್ಯರ್ಥಿ ಕಚೇರಿ ಹಾಗೂ 3.30ಕ್ಕೆ ನಾಪೋಕ್ಲು ಬ್ಲಾಕ್ನ ಕಾರುಗುಂದ ವಿಎಸ್ಎಸ್ ಸಭಾಂಗಣದಲ್ಲಿ ಪೊನ್ನಂಪೇಟೆಯಲ್ಲಿ 96 ಮತಗಟ್ಟೆ, ವಿರಾಜಪೇಟೆಯ 94 ಮತಗಟ್ಟೆ, ನಾಪೋಕ್ಲುವಿನ 83 ಮತಗಟ್ಟೆಯ ಪದಾಧಿಕಾರಿಗಳಿಗೆ ಕಾರ್ಯಾಗಾರ ನಡೆಯಲಿದೆ ಎಂದು…
ಮಡಿಕೇರಿ ಏ.13 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯನ್ನು ಘೋಷಣೆ ಮಾಡಲಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣಾಧಿಕಾರಿಗಳ ಕಚೇರಿ ಆವರಣದ ವ್ಯಾಪ್ತಿಯ 100 ಮೀಟರ್ ಪ್ರದೇಶದಲ್ಲಿ ಸಾರ್ವಜನಿಕ ವಾಹನ ನಿಲುಗಡೆ, ಪ್ರವೇಶ ಮತ್ತು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಪಡಿಸಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡಲು ಸಿಆರ್ಪಿಸಿ 1973 ರ ಕಲಂ 144 ರೀತ್ಯಾ ಪ್ರತಿಬಂಧಕಾಜ್ಞೆ ಹೊರಡಿಸಲು ಆರಕ್ಷಕ ವೃತ್ತ ನಿರೀಕ್ಷಕರು, ವಿರಾಜಪೇಟೆ ವೃತ್ತ ಅವರು ಕೋರಿದ್ದು, ಆ ನಿಟ್ಟಿನಲ್ಲಿ ಏಪ್ರಿಲ್ 20 ರವರೆಗೆ ನಾಮಪತ್ರಗಳ ಸ್ವೀಕೃತಿ, ಏಪ್ರಿಲ್, 21 ರಂದು ನಾಮಪತ್ರಗಳ ಪರಿಶೀಲನೆ ಮತ್ತು ಏಪ್ರಿಲ್, 24 ರವರೆಗೆ ನಾಮಪತ್ರಗಳ ವಾಪಾಸ್ಸಾತಿಗೆ ಚುನಾವಣಾ ವೇಳಾಪಟ್ಟಿ ಇದೆ. ಈ ಅವಧಿಯಲ್ಲಿ 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕಚೇರಿಯಾದ ವಿರಾಜಪೇಟೆ ತಾಲ್ಲೂಕು ಕಚೇರಿ ಆವರಣದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಯಾಗುವ ಸಂಭವ ಇರುತ್ತದೆ. ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಅವರ ಬೆಂಬಲಿಗರು ಒಂದೇ ಕಡೆ…
ಮಡಿಕೇರಿ ಏ.13 : ವಿಧಾನಸಭಾ ಚುನಾವಣೆ ಸಂಬಂಧ ಕೊಡಗು ಜಿಲ್ಲೆಗೆ ವೆಚ್ಚ ವೀಕ್ಷಕರಾಗಿ ನೇಮಕವಾಗಿರುವ ಶಲಭ್ ಕಟಿಯಾರ್ (ಐಆರ್ಎಸ್) (ಸಿ ಮತ್ತು ಸಿಇ) ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕಚೇರಿಗೆ ಭೇಟಿ ನೀಡಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರಿಂದ ಹಲವು ಮಾಹಿತಿ ಪಡೆದರು. ವೆಚ್ಚಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ನಗರದ ಜಿಲ್ಲಾಡಳಿತ ಭವನದ ಮೊದಲ ಮಹಡಿಯಲ್ಲಿರುವ ಕಚೇರಿಗೆ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಭೇಟಿ ನೀಡಿ ಮಾಹಿತಿ ನೀಡಬಹುದಾಗಿದೆ. ಅಥವಾ ಸಂಚಾರಿ ದೂರವಾಣಿ ಸಂಖ್ಯೆ 9353190721 ಸಂಪರ್ಕಿಸಬಹದಾಗಿದೆ ಎಂದು ವೆಚ್ಚ ವೀಕ್ಷಕರ ಸಂಪರ್ಕ ಅಧಿಕಾರಿ ಎಚ್.ಸಿ.ಗಿರೀಶ್ ಅವರು ತಿಳಿಸಿದ್ದಾರೆ.
ಮಡಿಕೇರಿ ಏ.13 : ಕಡಗದಾಳು ಗ್ರಾಮದ ಆದಿ ಶ್ರೀ ಪನ್ನಂಗಾಲತಮ್ಮೆ ದೇವಾಲಯದ ವಾರ್ಷಿಕ ಉತ್ಸವವು ಏ.15 ರಿಂದ 17ರ ವರೆಗೆ ನಡೆಯಲಿದೆ. ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಮೂರು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಏ.15 ರಂದು ಬೆಳಿಗ್ಗೆ 7 ಗಂಟೆಗೆ ದೇವರ ಭಂಡಾರ ಏರಿಸುವುದು, ಬೆಳಿಗ್ಗೆ 11 ಗಂಟೆಯಿಂದ ಅಮ್ಮೆ ದೇವರ ಕೊಡೆ, ಚೌವುಂಡಿ, ಅಯ್ಯಪ್ಪ, ಹಾಗೂ ಕುರುಂದ ದೇವರುಗಳ ಉತ್ಸವ ನಡೆಯಲಿದ್ದು, ನಂತರ ಎತ್ತು ಪೋರಾಟ, ಕುರುಂದಕಳಿ, ರಾತ್ರಿ ಚವುಂಡಿ ಬಾರಣಿ ನೆರವೇರಲಿದೆ. ಏ.16 ರಂದು ಬೆಳಿಗ್ಗೆ ದೇವರ ದರ್ಶನ, ಮಧ್ಯಾಹ್ನ ನಂತರ ದೇವಿಯ ಅವಭ್ರತ ಸ್ನಾನ ನೆರವೇರಲಿದ್ದು, ಏ.17 ರಂದು ಬೆಳಿಗ್ಗೆ ದೇವರ ನುಡಿ ಕೇಳುವುದು, ಹರಿಕೆ ಒಪ್ಪಿಸುವುದು, ಭಂಡಾರ ನೋಡುವ ಕಾರ್ಯಕ್ರಮ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯ ಸಮಿತಿ ಕೋರಿದೆ.
ಮಡಿಕೇರಿ ಏ.13 : ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಪಿ.ಕೃಷ್ಣಮೂರ್ತಿ ಅವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವನ್ನು ವಿಹೆಚ್ಪಿಯ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ. ಚೆಟ್ಟಳ್ಳಿ ಸಮೀಪ ಅಬ್ಯಾಲ ಎಂಬಲ್ಲಿ ಕೃಷ್ಣಮೂರ್ತಿಯವರು ಕಾರಿನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೆ ಯತ್ನಸಿದ್ದಾರೆ. ಆದರೆ ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೃತ್ತಿಪರ ಅಥವಾ ಸಂಘಟನೆಯ ದ್ವೇಷ ಯಾವುದೇ ಇದ್ದರು ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತೇವೆ. ಗುಂಡು ಹಾರಿಸಿದವರನ್ನು ಶೀಘ್ರ ಬಂಧಿಸಬೇಕು ಮತ್ತು ಕೃಷ್ಣಮೂರ್ತಿ ಅವರಿಗೆ ಪೊಲೀಸರು ಸೂಕ್ತ ಭದ್ರತೆಯನ್ನು ನೀಡಬೇಕು ಎಂದು ವಿಹೆಚ್ಪಿ ಒತ್ತಾಯಿಸಿದೆ. ದುಷ್ಕರ್ಮಿಗಳ ಬಂಧನವಾಗದಿದ್ದಲ್ಲಿ ಜಿಲ್ಲೆಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.
ಮಡಿಕೇರಿ ಏ.13 : ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಪಿ.ಕೃಷ್ಣಮೂರ್ತಿ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವನ್ನು ಮಡಿಕೇರಿ ನಗರ ಬಿಜೆಪಿ ಯುವ ಮೋರ್ಚಾ ತೀವ್ರವಾಗಿ ಖಂಡಿಸಿದೆ. ಗುಂಡು ಹಾರಿಸಿದ ಆರೋಪಿಗಳನ್ನು ಪೊಲೀಸರು ಶೀಘ್ರ ಬಂಧಿಸಬೇಕು ಮತ್ತು ಜಿಲ್ಲೆಯ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಯುವ ಮೋರ್ಚಾದ ನಗರಾಧ್ಯಕ್ಷ ನವೀನ್ ಪೂಜಾರಿ ಒತ್ತಾಯಿಸಿದ್ದಾರೆ.
ವರಂಗ ಕಾರ್ಕಳ ತಾಲೂಕಿನಲ್ಲಿರುವ ಒಂದು ಜೈನ ಯಾತ್ರಾ ಸ್ಥಳ. ಎಲ್ಲಿದೆ ವರಂಗ…? ವರಂಗ ಇರುವುದು ಉಡುಪಿ ಜಿಲ್ಲೆಯ ಹೆಬ್ರಿಯಿಂದ ಕಾರ್ಕಳದ ಕಡೆಗೆ 5 ಕಿ.ಮೀ. ದೂರದಲ್ಲಿ. ಕಾರ್ಕಳದಿಂದ ಸುಮಾರು 25 ಕಿ.ಮೀ., ಉಡುಪಿಯಿಂದ 37 ಕಿ.ಮೀ. ಮಂಗಳೂರಿನಿಂದ 85 ಕಿ.ಮೀ. ದೂರ. ಸಮಯವಿದ್ದರೆ, ಕೆರೆಯ ಪಕ್ಕವೇ ಇರುವ ಬೇಡ ರಾಜನ ಅರಮನೆಯ ಕುರುಹುಗಳಿರುವ ಬೆಟ್ಟವನ್ನು ಹತ್ತಿಳಿಯಬಹುದು. ವರಂಗ ಕೆರೆ ಬಸದಿ : ಒಂದು ಕಡೆ ಎತ್ತರಕ್ಕೆ ಉದ್ದಾನುದ್ದ ಹರಡಿ ನಿಂತ ಪಶ್ಚಿಮ ಘಟ್ಟದ ಪಸಿರುಡೆಯ ಸೊಬಗು. ಮತ್ತೊಂದು ಕಡೆಯಲ್ಲಿ ಹಚ್ಚ ಹಸಿರಿನ ಗದ್ದೆ, ತೋಟದ ಬೆಡಗು. ನಡುವೆ ವಿಶಾಲ ಕೆರೆಯ ಮಧ್ಯೆ ಫಳಫಳಿಸುವ ಪದ್ಮಾವತಿ ದೇವಿಯ ಬಸದಿ. ನೀರಿನಲ್ಲಿ ಅಲ್ಲಾಡುವ ಮಂದಿರದ ಚಿತ್ರಕ್ಕೆ ಕಮಲದ ಹೂವುಗಳ ಸಿಂಗಾರದೈಸಿರಿ. ಇಂತಹುದೊಂದು ಅಪರೂಪದ, ಇಡೀ ದಕ್ಷಿಣ ಭಾರತದಲ್ಲಿ ಮತ್ತೆಲ್ಲೂ ಸಿಗದಂಥ ಸೌಂದರ್ಯ ಮತ್ತು ದೈವಿಕ ಶಕ್ತಿಯ ಪರಮ ಕ್ಷೇತ್ರವನ್ನು ನೋಡಬೇಕಾದರೆ ನೀವು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ವರಂಗ ಎಂಬ ಪುಟ್ಟ ಹಳ್ಳಿಗೆ ಬರಬೇಕು.…
ಮಡಿಕೇರಿ ಏ.13 : ಮಡಿಕೇರಿಯ ಬ್ರೈನೋಬ್ರೈನ್ ಅಬಾಕಸ್ ವಿದ್ಯಾರ್ಥಿಗಳಿಗೆ ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಪದವಿ ಪ್ರದಾನ ಮಾಡಲಾಯಿತು. ರಾಜ್ಯ ಬ್ರೈನೋಬ್ರೈನ್ ಸಂಸ್ಥೆಯ ಸ್ಥಳೀಯ ವ್ಯವಸ್ಥಾಪಕ ನಿರ್ದೇಶಕ ನೀಲ್ ಕಮಲ್ ಸ್ವರ್ಣಾಕರ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದರು. ಮಡಿಕೇರಿ ಕೇಂದ್ರದಲ್ಲಿ ಪದವಿ ಪ್ರದಾನ ಸ್ವೀಕರಿಸಿದ ವಿದ್ಯಾರ್ಥಿಗಳ ಸಂಖ್ಯೆ ವಿಶ್ವದ ಇತರೆ ಬ್ರೈನೋಬ್ರೈನ್ ಕೇಂದ್ರಗಳಲ್ಲೇ ಅತ್ಯಧಿಕ ಮತ್ತು ಎಲ್ಲಾ ಕೇಂದ್ರಗಳಿಗೂ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ಮುಖ್ಯಸ್ಥೆ ಹಾಗೂ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರನ್ನು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೊಷಕರು ಮಾತನಾಡಿ, ಸ್ಮರಣಾ ಶಕ್ತಿ, ಕಲ್ಪನಾ ಶಕ್ತಿ, ಆತ್ಮ ವಿಶ್ವಾಸ, ಚುರುಕುತನ, ಬಹುಕಾರ್ಯ ಕೌಶಲ್ಯ, ಛಾಯಾಗ್ರಹಣದ ಬಗ್ಗೆ ಆಸಕ್ತಿ, ಹೆಚ್ಚಾಗಿ ಮಕ್ಕಳ ಕನಸಿಗೆ ರೆಕ್ಕೆ ಸಿಕ್ಕಂತಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ::: ಪದವಿ ಪ್ರದಾನ ಸ್ವೀಕರಿಸಿದ ವಿದ್ಯಾರ್ಥಿಗಳು ::: ಹೆಚ್.ಎಸ್.ಆರ್ಯ, ಎಂ.ಎಸ್.ನಿತೀಶ್, ಎಂ.ಜಿ.ಧನ್ವಿತ್, ಹೆಚ್.ಎಲ್.ಆದರ್ಶ್, ಕೆ.ಮಾನ್ವಿಕ್ ಮೌರ್ಯ, ಬಿ.ಆರ್.ಗನ್ಯಶ್ರೀ, ಆನ್ಶಿಯಾ ಡಿ ಕ್ರೂಜ್, ಎನ್.ಕೆ.ಪುನೀತ್, ಹೆಚ್.ಎಲ್.ಅಶ್ರಿತ್, ಎಂ.ಎನ್.ನೀಲ್,…






