ಲೇಖಕ: admin

ಮಡಿಕೇರಿ ಡಿ.4 NEWS DESK : ಬ್ರಹ್ಮಗಿರಿ ಸಹೋದಯ ಒಕ್ಕೂಟದ ವತಿಯಿಂದ ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು. ಸೈನಿಕ ಶಾಲೆ ಕೊಡಗು, ಕ್ರೆಸೆಂಟ್ ಶಾಲೆ ಮಡಿಕೇರಿ, ಅಂಕುರ್ ಪಬ್ಲಿಕ್ ಶಾಲೆ ನಾಪೊಕ್ಲು, ಎಸ್‌ಎಮ್‌ಎಸ್ ವಿದ್ಯಾಪೀಠ ಅರಮೇರಿ, ನ್ಯಾಷನಲ್ ಅಕಾಡೆಮಿ ಗೋಣಿಕೊಪ್ಪ, ಸೆಂಟ್ ಆನ್ಸ್ ಕಾನ್ವೆಂಟ್ ಸಿದ್ದಾಪುರ ಮತ್ತು ಕೆವಿಜಿ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆ ಸುಳ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಮುಖ್ಯ ಅತಿಥಿ ಮಡಿಕೇರಿಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಆರ್.ಪಿ. ಭಾಗವಹಿಸಿದ್ದ. ಸ್ಪರ್ಧಾರ್ಥಿಗಳನ್ನು ಅಭಿನಂದಿಸಿದರು. ಗೌರವ ಅತಿಥಿಯಾಗಿ ಆಗಮಿಸಿದ ಪುಷ್ಪ ಸುಬ್ಬಯ್ಯ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ. ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ, ಆದರೆ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಅಡಗಿರುವ ಅನನ್ಯ ಪ್ರತಿಭೆಯನ್ನು ಗುರುತಿಸುವುದು ಅತ್ಯಂತ ಮುಖ್ಯವೆಂದು ಅವರು ತಿಳಿಸಿದರು. ಪ್ರಾಥಮಿಕ ಮಟ್ಟದ ಉತ್ತಮ ಕ್ರೀಡಾಪಟು ಪ್ರಶಸ್ತಿ ಬಾಲಕಿಯರ ವಿಭಾಗದಲ್ಲಿ ದೀಪಿಕಾ ಡಿ.ಡಿ., ಬಾಲಕರ ವಿಭಾಗದಲ್ಲಿ ತಿಮ್ಮಯ್ಯ ಎಂ.ಕೆ., ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಇರ್ಶಾನ್, ಬಾಲಕಿಯರ ವಿಭಾಗದಲ್ಲಿ ಹಿತ ಎನ್.ಬಿ. ಅವರಿಗೆ ಸಂದಿತು. ಆತಿಥೇಯ…

Read More

ಮಡಿಕೇರಿ ಡಿ.4 NEWS DESK : ಶ್ರೀರಂಗಪಟ್ಟಣದಿಂದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿ ವರೆಗೆ ನಾಲ್ಕು ಪಥದ ರಸ್ತೆ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಬಸವನಹಳ್ಳಿಯಿಂದ ಸಂಪಾಜೆವರೆಗೆ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಿನಿಂದಲೇ ಸುಗಮ ಸಾರಿಗೆ ಸಂಚಾರಕ್ಕೆ ಅಗತ್ಯ ಮುನ್ನೆಚ್ಚರ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಅವರ ಸಭಾಂಗಣದಲ್ಲಿ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ’ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುಶಾಲನಗರದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿಯಿಂದ ಸಂಪಾಜೆ ವರೆಗೆ ರಸ್ತೆ ಸುರಕ್ಷತೆ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು. ಉಬ್ಬುಗಳ ನಿರ್ಮಾಣ, ಅಗತ್ಯವಿರುವ ಕಡೆಗಳಲ್ಲಿ ಜೀಬ್ರಾ ಕ್ರಾಸ್ ಬರೆಸುವುದು, ಉಬ್ಬುಗಳ ನಿರ್ಮಾಣ, ಬ್ಲಾಕ್ ಸ್ಪಾಟ್ ಗುರುತಿಸುವುದು, ತಿರುವುಗಳಲ್ಲಿ ಸೂಚನಾ ಫಲಕ ಅಳವಡಿಸುವುದು ಸೇರಿದಂತೆ ಅಗತ್ಯ ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಕುಶಾಲನಗರದಿಂದ ಸಂಪಾಜೆವರೆಗೆ ರಸ್ತೆ…

Read More

ಚೆಟ್ಟಳ್ಳಿ ಡಿ.4 NEWS DESK : ಚೆಟ್ಟಳ್ಳಿಯ ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಪುತ್ತರಿ ಧಾರೆ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನಡೆಸಲಾಯಿತು. ಊರಿನ ತಕ್ಕರಾದ ಮುಳ್ಳಂಡ ಕರಣ್ ಕಾವೇರಪ್ಪ ಅವರ ಸಮ್ಮುಖದಲ್ಲಿ ನಾಗ, ಕ್ಷೇತ್ರಪಾಲಕ, ವಿಘ್ನೇಶ್ವರನಿಗೆ ಪೂಜೆ ಸಲ್ಲಿಸಿ ಶ್ರೀ ಭಗವತಿಗೆ ವಿಶೇಷ ಪೂಜೆ ಜರುಗಿತು. ಮಹಾಮಂಗಳಾರತಿಯ ನಂತರ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು.. ಹಿರಿಯರಾದ ನಿವೃತ್ತ ಕ್ಯಾಪ್ಟನ್ ಮುಳ್ಳಂಡ ತಿಮ್ಮಯ್ಯ ಮಾತನಾಡಿ, ಕೊಡಗಿನ ಸಂಪ್ರದಾಯದಂತೆ ಪುತ್ತರಿ ನಮ್ಮೆಯ ಆಚರಣೆಯನ್ನು ಮಾಡುತ್ತಾ ಬರುತ್ತಿದ್ದು, ಈ ವರ್ಷವು ಸಂಪ್ರದಾಯಬದ್ಧವಾಗಿ ನಮ್ಮೆಯನ್ನು ಆಚರಿಸಲಾಗುತ್ತಿದೆ ಎಂದರು.

Read More

ನಾಪೋಕ್ಲು ಡಿ.4 NEWS DESK : ಕೊಡಗಿನಲ್ಲಿ ಸಾಂಪ್ರದಾಯಿಕವಾಗಿ ಆಚರಿಸಲ್ಪಡುವ ಪುತ್ತರಿ (ಹುತ್ತರಿ) ಹಬ್ಬದ ಸಂಭ್ರಮಕ್ಕೆ ನಾಡು ಸಜ್ಜಾಗಿದೆ. ಈ ಬಾರಿ ಡಿ.4 ರಂದು (ಇಂದು ಗುರುವಾರ ) ದಂದು ಹುಣ್ಣಿಮೆಯ ದಿನ ಕೊಡಗಿನ ಹುತ್ತರಿ (ಪುತ್ತರಿ) ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಕೊಡಗಿನಾದ್ಯಂತ ಧಾನ್ಯಲಕ್ಷ್ಮಿಯನ್ನು ಮನೆ ತುಂಬಿಸಿಕೊಳ್ಳುವ ಹಬ್ಬ ಹುತ್ತರಿ ಹಬ್ಬ ಕೊಡಗಿನಲ್ಲಿ ಭತ್ತದ ಬೆಳೆ ತೆನೆಬಿಟ್ಟು ಹೊಂಬಣ್ಣಕ್ಕೆ ತಿರುಗುತ್ತಿದ್ದರೆ ನಡುಕ ಹುಟ್ಟಿಸುವ ಚಳಿಯ ನಡುವೆ ಕೊಡಗಿನ ಹುತ್ತರಿ ಹಬ್ಬದ ಆಚರಣೆ. ಗಡಚಿಕ್ಕುವ ಪಟಾಕಿಗಳ ಸದ್ದು, ಮನೆಯಲ್ಲಿ ವಿಶೇಷ ತಿನಿಸುಗಳು, ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಮನೆ ಮಂದಿಯೆಲ್ಲಾ ಸಂಭ್ರಮದಿಂದ ಪಾಲ್ಗೊಂಡು ಆಚರಿಸುವ ಹುತ್ತರಿ (ಪುತ್ತರಿ) ಹಬ್ಬ ಕೊಡಗಿನ ವಿಶೇಷ. ಕೊಡವ ನುಡಿಯ ಪುತ್ತರಿ(ಪುದಿಯ ಅರಿ) ಅಂದರೆ ಹೊಸ ಅಕ್ಕಿ. ಇದು ಕನ್ನಡದಲ್ಲಿ ಹುತ್ತರಿ ಎಂದಾಗಿದೆ. ವ್ಯವಸಾಯವನ್ನೇ ಮಾಡಿ ಬದುಕುವ ಬಹುತೇಕ ರೈತಾಪಿ ವರ್ಗ ಪೈರುಗಳು ಬೆಳೆದಾಗ ಶಾಸ್ತ್ರೋಕ್ತವಾಗಿ ಕುಯ್ದು ತಂದು ಮನೆಯನ್ನು ತುಂಬಿಸಿಕೊಳ್ಳುವುದೇ ಈ ಹುತ್ತರಿ ಹಬ್ಬದ ವೈಶಿಷ್ಟ್ಯ. ಮೊದಲು…

Read More

ಸೋಮವಾರಪೇಟೆ ಡಿ.4 NEWS DESK : ಆಲೂರುಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಡಿ.6 ರಂದು ಲಕ್ಷದೀಪೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಮಠಾಧಿಪತಿಗಳಾದ ಶ್ರೀ.ಮಹಾಂತ ಶಿವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಕಾರ್ತಿಕ ಮಾಸದಲ್ಲಿ ಕ್ಷೇತ್ರದ ದೇವರುಗಳಾದ ವೀರಭದ್ರೇಶ್ವರ,ತಪೋವನೇಶ್ವರಿ,ಗುರುಸಿದ್ಧವೀರೇಶ್ವರ ಹಾಗೂ ಜೇನುಕಲ್ಲು ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆಗಳು ನಡೆದಿದ್ದು ಇದೀಗ ಲಕ್ಷದೀಪೋತ್ಸವದ ಅಂಗವಾಗಿ ಪ್ರತಿನಿತ್ಯ ಅರ್ಚನೆ, ಅಭಿಷೇಕಗಳು ನಡೆಯುತ್ತಿವೆ ಎಂದು ತಿಳಿಸಿದ ಅವರು ಡಿ.6 ರ ಶನಿವಾರ ಲಕ್ಷದೀಪೋತ್ಸವದ ಅಂಗವಾಗಿ ವಿಶೇಷ ಪೂಜೆಗಳೊಂದಿಗೆ ರಾತ್ರಿ 8 ಗಂಟೆಗೆ ಸ್ವಾಮಿಯ ಉತ್ಸವ ನಡೆಯಲಿದೆ ಎಂದರು. ಸಂಜೆ 6 ಗಂಟೆಗೆ ಮಠದ ಆವರಣದಲ್ಲಿ ಧಾರ್ಮಿಕ ಸಮಾರಂಭ ನಡೆಯಲಿದೆ, ಕಾರ್ಯಕ್ರಮದಲ್ಲಿ ದೀಪೋತ್ಸವಕ್ಕೆ ಚಾಲನೆ ಹಾಗೂ ಕ್ಷೇತ್ರದ 2026ನೆ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಗುವುದು, ನಾಡಿನ ಹರಗುರು ಚರ್ಮೂರ್ತಿಗಳ ಸಾನಿಧ್ಯದಲ್ಲಿ,ವಿವಿಧ ಜನಪ್ರತಿನಿಧಿಗಳು,ಸಾಧಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಹಾಂತ ಸ್ವಾಮೀಜಿ ಹೇಳಿದ್ದಾರೆ.

Read More

ಮಡಿಕೇರಿ ಡಿ.4 NEWS DESK  : ದಲಿತ ಸಂಘಟನೆಗಳ ಹಲವು ವರ್ಷಗಳ ಬೇಡಿಕೆಯಾದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಮಡಿಕೇರಿ ನಗರದ ಸುದರ್ಶನ ವೃತ್ತದ ಸರಕಾರಿ ಜಾಗದಲ್ಲಿ ಪ್ರತಿಮೆಯನ್ನು ಸ್ಥಾಪಿಸಲು ಡಿ.5 ರಂದು ಭೂಮಿಪೂಜೆ ನಡೆಯಲಿದೆ. ಕೊಡಗಿನಲ್ಲಿ ಪ್ರಪ್ರಥಮ ಬಾರಿಗೆ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಸ್ಥಾಪನೆಯಾಗುತ್ತಿದ್ದು, ನಗರದ ಸುದರ್ಶನ ವೃತ್ತದ ಬಳಿಯ ಸರಕಾರಿ ಜಾಗವನ್ನು ಗುರುತಿಸಲಾಗಿದೆ. ಡಿ.5ರಂದು ಪ್ರತಿಮೆ ಸ್ಥಾಪನೆಗೆ ಭೂಮಿಪೂಜೆ ನಡೆಯಲಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿ.ಜೆ.ಮೋಹನ್ ಮೌರ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡ ಸ್ಮಾರಕದ ಬಳಿಯ ನಗರಸಭೆಯ ಉದ್ಯಾನವನದಲ್ಲಿ ಶುಕ್ರವಾರ ಬೆಳಿಗ್ಗೆ 8.30 ಗಂಟೆಗೆ ಕೊಡಗು ಜಿಲ್ಲಾಡಳಿತ ಮತ್ತು ಮಡಿಕೇರಿ ನಗರಸಭೆಯ ಸಹಯೋಗದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದರು. ಅಂದಾಜು 2 ರಿಂದ 3…

Read More

ಮಡಿಕೇರಿ ಡಿ.4 NEWS DESK : ನಗರದ ಜಯನಗರ ಬಡಾವಣೆಯಲ್ಲಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯನ್ನು ನಗರಸಭಾ ಅಧ್ಯಕ್ಷೆ ಪಿ.ಕಲಾವತಿ ಅವರ ಉಪಸ್ಥಿತಿಯಲ್ಲಿ ಶಾಲಾ ವಿದ್ಯಾರ್ಥಿಗಳು ಉದ್ಘಾಟಿಸಿದರು. ನಂತರ ಮಾತನಾಡಿದ ಅಧ್ಯಕ್ಷರು ಜಯನಗರ ಬಡಾವಣೆಯ ನಿವಾಸಿಗಳ ಹಲವು ವರ್ಷಗಳ ಬೇಡಿಕೆ ಇದೀಗ ಈಡೇರಿದ್ದು, ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದರು. ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ ಮಾತನಾಡಿ 5ಲಕ್ಷ ರೂ.ಗಳಲ್ಲಿ 100 ಮೀಟರ್ ಉದ್ದದ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡಿದೆ. ಈ ರಸ್ತೆಯ ಉಳಿದ ಕಾಮಗಾರಿ ಶೀಘ್ರ ಆರಂಭಗೊಳ್ಳಲಿದೆ. ಮುಂದಿನ ಎರಡು ತಿಂಗಳುಗಳಲ್ಲಿ ನಗರದ ಎಲ್ಲಾ ರಸ್ತೆಗಳ ಅಭಿವೃದ್ಧಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಸ್ಥಳೀಯ ನಿವಾಸಿಗಳು ಮಾತನಾಡಿ ವಾರ್ಡ್‍ನ ನಗರಸಭಾ ಸದಸ್ಯೆ ಉಷಾ ಕಾವೇರಪ್ಪ ಅವರು ನಮ್ಮ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದಾರೆ. ಉಳಿದಿರುವ ಕಾಮಗಾರಿಗಳನ್ನು ಕೂಡ ಪೂರ್ಣಗೊಳಿಸಿಕೊಡಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು. ನಗರಸಭಾ ಸದಸ್ಯರಾದ ಉಷಾ ಕಾವೇರಪ್ಪ ಮಾತನಾಡಿ ವಾರ್ಡ್‍ನಲ್ಲಿ ಮೂಲಭೂತ ಸೌಲಭ್ಯಗಳಿಗೆ…

Read More

ಮಡಿಕೇರಿ ಡಿ.4 NEWS DESK : ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಗಾಂಧಿನಗರದಲ್ಲಿ ನೂತನವಾಗಿ 12 ಲಕ್ಷಗಳಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.  ಸ್ವತಹ ನೂತನ ರಸ್ತೆಯಲ್ಲಿ ಸ್ಕೂಟರ್ ಚಲಾಯಿಸುವ ಮೂಲಕ ಶಾಸಕರು ಸಾರ್ವಜನಿಕರ ಗಮನ ಸೆಳೆದರು. ಉದ್ಘಾಟನೆಯ ಬಳಿಕ ರಸ್ತೆಯ ಗುಣಮಟ್ಟವನ್ನು ಸ್ವತಹ ಪರೀಕ್ಷಿಸಿದ ಶಾಸಕರು, ಸಾರ್ವಜನಿಕರು ಇದಷ್ಟೇಯ ಸದುಪಯೋಗ ಪಡೆದುಕೊಳ್ಳಲಿ ಎಂದು ಹಾರೈಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಕೊಳತಂಡ ಬೋಪಯ್ಯ ,ಕರ್ತಮಾಡ ಪೊನ್ನು, ಮಣಿ ,ಕುತಂಡ ರಂಜನ್ ,ವಾಟೆರೀರ ತಿಲಕ್ ,ಕಲಿಯಂಡ ಗಿರೀಶ್ , ಜೇರಿ ಲೋಬೊ , ಪೊನ್ನಣ್ಣ, ಪುರಾಸಭೆ ಮಾಜಿಸದಸ್ಯರು,ಪಕ್ಷದ ಮುಖಂಡರು ,ಕಾರ್ಯಕರ್ತರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು. ಈ ಹಿಂದೆ ಈ ಭಾಗದ ಜನರ ಮನವಿಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿಗೆ ಮಾನ್ಯ ಶಾಸಕರು ಅನುದಾನವನ್ನು ಒದಗಿಸಿದ್ದರು.

Read More

ಮಡಿಕೇರಿ ಡಿ.4 NEWS DESK :  ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಕರ್ನಾಟಕ ಕಟ್ಟಡ ಇತರೆ ನಿರ್ಮಾಣ ಕಾಮಗಾರಿ ಕಲ್ಯಾಣ ಮಂಡಳಿ ರಾಜ್ಯ ಸರ್ಕಾರ ಹೊರಡಿಸಿರುವ ನೂತನ ಸಂಚಾರಿ ಆರೋಗ್ಯ ಘಟಕವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಪುರಸಭೆ ಮಾಜಿ ಸದಸ್ಯರು ರಾಜೇಶ್ ಪದ್ಮನಾಭ, ರಾಫಿ, ಮತೀನ್ ,ಪಕ್ಷದ ಮುಖಂಡರು ಮಹಾದೇವ, ಸತೀಶ್, ಕುಂಡಚ್ಚಿರ ಮಂಜು ದೇವಯ್ಯ, ಶಬೀರ್, ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಡಿ.4 NEWS DESK : ಕಾರ್ಮಿಕ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ನೋಂದಾಯಿತ ಕಾರ್ಮಿಕರಿಗೆ ನೀಡಲಾಗುವ ಕಟ್ಟಡ ಮತ್ತು ಇತರೆ ಕಾರ್ಮಿಕ ಮಂಡಳಿಯ ನೀಡಲಾಗುವ ಕಿಟ್ ಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅರ್ಹ ಫಲಾನುಭವಿಗಳಿಗೆ ವಿತರಿಸಿದರು. ಇದೇ ಸಂದರ್ಭ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಕರ್ನಾಟಕ ಕಟ್ಟಡ ಇತರೆ ನಿರ್ಮಾಣ ಕಾಮಗಾರ ಕಲ್ಯಾಣ ಮಂಡಳಿ ರಾಜ್ಯ ಸರ್ಕಾರ ಹೊರಡಿಸಿರುವ ನೂತನ ಸಂಚಾರಿ ಆರೋಗ್ಯ ಘಟಕವನ್ನು ಸಹ ಉದ್ಘಾಟನೆ ಮಾಡಿದರು. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಪುರಸಭೆ ಮಾಜಿ ಸದಸ್ಯರು ರಾಜೇಶ್ ಪದ್ಮನಾಭ, ರಾಫಿ, ಮತೀನ್ ,ಪಕ್ಷದ ಮುಖಂಡರು ಮಹಾದೇವ, ಸತೀಶ್, ಕುಂಡಚ್ಚಿರ ಮಂಜು ದೇವಯ್ಯ, ಶಬೀರ್, ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More