ಮಡಿಕೇರಿ ಮಾ.7 : ಗೋಣಿಕೊಪ್ಪ-ಮೈಸೂರು ಹೆದ್ದಾರಿಯಲ್ಲಿ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಾAಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ಮಾಡಿದ ಪೊಲೀಸರು 400 ಗ್ರಾಂ ಗಾಂಜಾ ಸಹಿತ ಗೋಣಿಕೊಪ್ಪಲು ನಿವಾಸಿ ವಿ.ಎಸ್.ಗುರುದತ್ತ (30) ಎಂಬಾತನನ್ನು ವಶಕ್ಕೆ ಪಡೆದರು. ಡಿವೈಎಸ್ಪಿ ನಿರಂಜನ್ ರಾಜೇ ಅರಸ್, ಸಿಪಿಐ ವಸಂತ್.ಕೆ.ಎಂ, ಪಿಎಸ್ಐ ಸಿದ್ದರಾಜು ಟಿ. ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಇವರ ಕಾರ್ಯಕ್ಷಮತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬoದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಎಸ್ಪಿ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲವೆoದು ಹೇಳಿದ್ದಾರೆ.
ಲೇಖಕ: admin
ವಿರಾಜಪೇಟೆ ಮಾ.7 : ಸಮಾಜ ಚಿಂತಕರು, ದಾಸ ಸಾಹಿತ್ಯದ ಹರಿಕಾರರು, ಸಮಾಜ ಸುಧಾರಕರು ಕಾಲ ಜ್ಞಾನಿಗಳು ಶ್ರೀ ಕೈವಾರ ತಾತಯ್ಯ ಎಂದು ಜಿಲ್ಲಾಧ್ಯಕ್ಷ ಟಿ.ಎಲ್.ಶ್ರೀನಿವಾಸ್ ತಿಳಿಸಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಶ್ರೀ ಕೈವಾರ ತಾತಯ್ಯನವರ 297ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದಿನ ಕಾಲದ ದಾರ್ಶನಿಕ ಮಹಾನಿಯರ ಆದರ್ಶಗಳು ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಿದೆ. ಕೈವಾರ ತಾತಯ್ಯ ನವರು ಬಲಿಜ ಸಮಾಜದಲ್ಲಿ ಜನಿಸಿ ತನ್ನ ದಾಸ ಸಾಹಿತ್ಯದ ಮೂಲಕ ನಾಡಿಗೆ ಚಿರಪರಿಚಿತವಾದ ಮಹಾನ್ ವ್ಯಕ್ತಿಗಳು. 1726 ರಲ್ಲಿ ಜನಿಸಿದ ಕೈವಾರ ತಾತಯ್ಯ ತಮ್ಮ ಬದುಕಿನುದ್ದಕ್ಕೂ ಸಮಾಜ ಮುಖಿಯಾಗಿ ಬಾಳಿದವರು. ಅಂತಹ ಅಪ್ರತಿಮ ಸಾಧಕರ ಜಯಂತಿ ಆಚರಣೆ ಮಾಡುವುದು ನಮ್ಮ ಪುಣ್ಯ. ಇಂದಿನ ಯುವಕರಿಗೆ ಅವರ ಸಾಧನೆಗಳು ಸಾಹಿತ್ಯಗಳು ಅವಿಸ್ಮರಣೀಯ ಎಂದು ತಿಳಿಸಿದರು. ವಿರಾಜಪೇಟೆ ಬಳೆ ವರ್ತಕ ಹಾಗೂ ಕೊಡಗು ಬಲಿಜ ಸಮಾಜ ಉಪಾಧ್ಯಕ್ಷ ಯತಿರಾಜ್ ಹಾಗೂ ಹಂಸವೇಣಿ ತಾತಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಗ್ರೇಡ್ 2 ತಹಶೀಲ್ದಾರ್ ಪ್ರದೀಪ್…
ಸೋಮವಾರಪೇಟೆ ಮಾ.7 : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಗೌಡಳ್ಳಿ ಬಿಜಿಎಸ್ ಪಬ್ಲಿಕ್ ಶಾಲೆಯ ವತಿಯಿಂದ ‘ಮಾತೃತ್ವದಿಂದ ಕ್ರಿಯಾತತ್ವ’ ಹೆಸರಿನಲ್ಲಿ ಮಕ್ಕಳ ತಾಯಂದಿರ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಗಮನ ಸೆಳೆಯಿತು. ಕಳೆದ ನಾಲ್ಕು ದಿನಗಳಿಂದ ಶಾಲಾ ಆವರಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಅಮ್ಮಂದಿರು ತಮ್ಮ ಮಕ್ಕಳ ಎದುರು ನೃತ್ಯ ಮಾಡಿ ರಂಜಿಸಿದರು. ಅನೇಕರು ಸಮೂಹ ನೃತ್ಯ, ಭಾವಗೀತೆ, ಭಕ್ತಿ ಗೀತೆ, ಚಿತ್ರಗೀತೆಗಳನ್ನು ಹಾಡಿ ಸಂಭ್ರಮಿಸಿದರು. ತಮ್ಮ ಮಕ್ಕಳು ಕಲಿಯುವ ಶಾಲೆಯಲ್ಲಿ ಅಮ್ಮಂದಿರು ನೃತ್ಯಗಳನ್ನು ಕಲಿತು ನೃತ್ಯ ಮಾಡಿ ಮಕ್ಕಳನ್ನು ರಂಜಿಸಿರುವುದು ವಿಶೇಷವಾಗಿತ್ತು. ಮಂಗಳವಾರದಂದು ಅಮ್ಮಂದಿರಿಗೆ ಅರಿಶಿನಿ ಕುಂಕುಮ, ಬಾಗಿನ ನೀಡಿ ಗೌರವಿಸಲಾಯಿತು. ಬುಧವಾರ ವಿದ್ಯಾರ್ಥಿಗಳು ಮಹಿಳಾ ಸಿಬ್ಬಂದಿಗಳನ್ನು ಗೌರವಿಸುತ್ತಾರೆ. ಮಹಿಳೆ ಕುಟುಂಬದ ಸಲಹೆಗಾರ್ತಿಯಾಗಿ, ಕುಟುಂಬದ ದಾದಿ, ಮಕ್ಕಳು ಹಾದಿ ತಪ್ಪಿದಾಗ ತಿದ್ದುವ ಗುರು. ಜೀವನದ ಸರ್ವಶ್ರೇಷ್ಟ ಸ್ಥಾನಗಳನ್ನು ಅಲಂಕರಿಸುವ ಮಹಿಳೆ ತನ್ನ ಜೀವನದ ಬಹುಪಾಲು ಸಮಯವನ್ನು ನಾಲ್ಕು ಗೋಡೆಗಳ ಮಧ್ಯದಲ್ಲಿಯೇ ಕಳೆಯುತ್ತಾಳೆ. ಮನಸ್ಸಿನಲ್ಲಿರುವ ತನ್ನ ಆಸೆ ಆಕಾಂಕ್ಷೆಗಳನ್ನು ಬದಿಗೊತ್ತಿ ಮಕ್ಕಳಿಗಾಗಿ ಗಂಡನಿಗಾಗಿ, ಸಮಾಜದ…
ಜಯನಗರ ಮಾ.7 : ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಜಯನಗರದಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್ ಆಚರಣೆ-2023 ಮತ್ತು 100 ನೇ ಜನೌಷಧಿ ಕೇಂದ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ನಂತರ ಸಂಚಾರಿ ಆರೋಗ್ಯ ಕ್ಲಿನಿಕ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಕೇಂದ್ರ ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ, ಮತ್ತಿತತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಾತೋಡಿ ಜಲಪಾತ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿರುವ ಒಂದು ಜಲಪಾತ. ಇದು ಸಿರ್ಸಿಯಿಂದ 73 ಕಿಲೋಮೀಟರ್ ದೂರದಲ್ಲಿದೆ. ಯಲ್ಲಾಪುರದಿಂದ ಸುಮಾರು 32 ಕಿ.ಮೀ. ದೂರದಲ್ಲಿದೆ. ಈ ಜಲಪಾತವು ದಾಂಡೇಲಿ ರಕ್ಷಿತಾರಣ್ಯದ ವ್ಯಾಪ್ತಿಯಲ್ಲಿ ಬರುವುದಲ್ಲದೆ ದಟ್ಟ ಕಾನನದ ನಡುವೆ ಸೇರಿಕೊಂಡಿದೆ. ಹಲವಾರು ಝರಿಗಳಿಂದ ಸೇರಿದ ನೀರು ಸುಮಾರು 15 ಮೀಟರ್ ಎತ್ತರದಿಂದ ಧುಮುಕುತ್ತದೆ. ನಂತರ ಕೊಡಸಳ್ಳಿ ಜಲಾಶಯದ ಮೂಲಕ ಕಾಳಿ ನದಿಯನ್ನು ಸೇರುತ್ತದೆ. ಯಲ್ಲಾಪುರದಿಂದ ಹುಬ್ಬಳ್ಳಿ-ಅಂಕೋಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಹುಬ್ಬಳ್ಳಿಗೆ ಹೋಗುವ ಮಾರ್ಗದಲ್ಲಿ 5 ಕಿ.ಮೀ. ನಷ್ಟು ಮುಂದೆ ಸಾಗಿ ಎಡಕ್ಕೆ (ಕಲಘಟಗಿ, ಹುಬ್ಬಳ್ಳಿಯಿಂದ ಬರುವವರು ಬಲಕ್ಕೆ ತಿರುಗಬೇಕು) ತಿರುಗಿ 25 ಕಿ.ಮೀ. ಸಾಗಿದರೆ ಸಾತೋಡಿ ಜಲಪಾತದ ಪ್ರದೇಶವು ಕಾಣಸಿಗುತ್ತದೆ. ಅರಣ್ಯ ಇಲಾಖೆಯ ಅನುಮತಿ ಪತ್ರ ಪಡೆದು(ಕೆಲವೊಮ್ಮೆ ಪಡೆಯದೆಯೂ ತೆರಳಬಹುದು) 2 ಕಿ.ಮೀ. ನಷ್ಟು ಕಚ್ಚಾರಸ್ತೆಯಲ್ಲಿ ನಡೆದು ಸಾಗಿದರೆ ಜಲಪಾತದ ಸೌಂದರ್ಯವು ಕಾಣುತ್ತದೆ. ಉತ್ತರ ಕನ್ನಡ ಜಿಲ್ಲೆ, ಜಲಪಾತಗಳಿಗೆ ತವರು ಮನೆ. ಜಲಪಾತಗಳ ಜಿಲ್ಲೆಯೆಂದೇ ಕೆಲವೊಮ್ಮೆ ಕರೆಸಿಕೊಳ್ಳುವ ಈ ಪ್ರದೇಶ, ಮಳೆಗಾಲದ…
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಿಕ್ಕಬಿಲಗುಂಜಿ ಕಮಲೇಶ್ವರ ದೇಗುಲದಲ್ಲಿ ಪರಶಿವ ಗಂಗೆಯ ಶಿರದ ಮೇಲೆ ನೆಲೆಸಿದ್ದು ಭಕ್ತರ ಇಷ್ಟಾರ್ಥ ನೆರವೇರಿಸುತ್ತಾ ಕೀರ್ತಿಗಳಿಸಿದ್ದಾನೆ. ಇಲ್ಲಿ ಶಿವನ ಪದತಳದಲ್ಲಿ ಗಂಗೆ ತೀರ್ಥರೂಪದಲ್ಲಿ ನೆಲೆಸಿದ್ದು ಸದಾ ಹರಿಯುತ್ತಿರುತ್ತಾಳೆ. ಕಲಾ ನಿಪುಣತೆ : ಸಂಪೂರ್ಣ ಶಿಲಾಮಯ ದೇಗುಲವಾಗಿರುವ ಈ ದೇವಸ್ಥಾನ ಸುಂದರ ಕಂಬಗಳ ಕೆತ್ತನೆ, ಜಗತಿ, ನವರಂಗ, ಗರ್ಭಗುಡಿ ಹಾಗೂ ನಂದಿಮಂಟಪ ಹೊಂದಿದೆ. ಮೇಲ್ಚಾವಣಿಯ ಮೇಲೆ ಮರ ಉರುಳಿ ಗೋಪುರ ಶಿಥಿಲಗೊಂಡ ಕಾರಣ ಹೊಸದಾಗಿ ಮರ ಮತ್ತು ಹಂಚು ಬಳಸಿ ಮೇಲ್ಚಾವಣಿ ನಿರ್ಮಿಸಲಾಗಿದೆ. ಇದರಿಂದಾಗಿ ಮೇಲ್ನೋಟಕ್ಕೆ ಆಧುನಿಕ ಕಟ್ಟಡದಂತೆ ತೋರುವ ಈ ದೇಗುಲ ಸಮೀಪಿಸಿದಾಗ ಶಿಲಾ ದೇಗುಲದ ವೈಭವ ಕಣ್ಣಿಗೆ ಕಟ್ಟುತ್ತದೆ. ದೇಗುಲದ ಹಿಂಭಾಗದಲ್ಲಿ ಎತ್ತರದ ಶಿಖರ, ಮುಂಭಾಗದಲ್ಲಿ ಪವಿತ್ರ ಪುಷ್ಕರಣಿ ಇದೆ. ಎಲ್ಲೆಡೆ ಒಂದು ಪುಷ್ಕರಣಿ ಇದ್ದರೆ ಇಲ್ಲಿ ಎರಡು ಪುಷ್ಕರಣಿ ಹಾಗೂ ಎರಡು ತೀರ್ಥದ ನೆಲೆಯಿರುವುದು ಇರುವುದು ವಿಶೇಷ. ದೇಗುಲದ ಬಲಭಾಗದಲ್ಲಿ ಚಿಕ್ಕ ಆಲಯವಿದ್ದು ನಕ್ಷತ್ರಾಕಾರದ ಪುಷ್ಕರಣಿ ತೀರ್ಥದಲ್ಲಿ ಉದ್ಭವ ಶಿವಲಿಂಗವಿದೆ. ಈ ಶಿವಲಿಂಗ…
ಭಾರತೀಯ ವೈದ್ಯಕೀಯ ಪದ್ಧತಿಯಲ್ಲಿ ಭೃಂಗರಾಜ ಸಸ್ಯಕ್ಕೆ ಹೆಚ್ಚಿನ ಮಹತ್ವವಿದೆ. ಇದು ಮನೆಯ ಎದುರಿಗೆ ಕಳೆಗಳ ಮದ್ಯದಲ್ಲಿ ಬೆಳೆಯುವಂತ ಸಸ್ಯ. ಇದು 1 ರಿಂದ 2 ಅಡಿ ಎತ್ತರಕ್ಕೆ ಬೆಳೆಯುವಂತ ಸಸ್ಯವಾಗಿದೆ. ಭೃಂಗರಾಜ ಗಿಡವು ನೀರು ಇರುವ ತಂಪು ಪ್ರದೇಶದಲ್ಲಿ ಗದ್ದೆ, ತೋಟ, ನದಿಯ ಪಕ್ಕದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದರ ಕಾಂಡ, ಗಿಡವು ಪೂರ್ತಿ ಬೆಳೆದ ಮೇಲೆ ಕೆಂಪಾಗುತ್ತದೆ. ಹಾಗು ಇದರಲ್ಲಿ ಚಿಕ್ಕ ಚಿಕ್ಕ ಬಿಳಿ ಹೂಗಳು ಬಿಡುತ್ತವೆ. ಇದರ ಬೀಜಗಳು ಕಪ್ಪಾಗಿದ್ದೂ, ಎಲೆಗಳು ನೆಲಬೇವಿನ ಎಲೆಗಳನ್ನು ಹೋಲುತ್ತವೆ. ಭೃಂಗರಾಜವನ್ನು “ಕೇಶರಾಜ’ ಎಂದು ಕರೆಯುತ್ತಾರೆ. ಏಕೆಂದರೆ ಇದು ಕೂದಲಿನ ಅರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪಾತ್ರ ವಹಿಸುತ್ತದೆ. ಈ ಸಸ್ಯವನ್ನು ಹಳ್ಳಿಗಳಲ್ಲಿ ಗರುಗದ ಗಿಡವೆಂದು ಕೂಡ ಕರೆಯುತ್ತಾರೆ. ಭೃಂಗರಾಜ ಗಿಡವನ್ನು ಆಹಾರೌಷಧವಾಗಿಯೂ ಬಳಸುತ್ತಾರೆ. ಇದು ಕಹಿ ರುಚಿಯನ್ನು ಹೊಂದಿರುತ್ತದೆ. ಹಾಗು ಭೃಂಗರಾಜ ಅನೇಕ ಸಮಸ್ಯೆಗಳನ್ನು ನಿವಾರಣೆ ಮಾಡಬಲ್ಲದ್ದಾಗಿದೆ. ಇದರಿಂದ ಎಣ್ಣೆಯನ್ನು ತಯಾರಿಸುತ್ತಾರೆ. ಅದು ಮಾರುಕಟ್ಟೆಗಳಲ್ಲಿ ಲಭ್ಯವಿದೆ. ಭೃಂಗರಾಜ ಎಲೆಗಳನ್ನು ಸೂಪ್ ಮಾಡಿಕೊಂಡು ಆಹಾರೌಷಧವಾಗಿ…
ಮಡಿಕೇರಿ ಮಾ.7 : ಬೈಕ್ ಅಪಘಾತದಲ್ಲಿ ಸೋಮವಾರಪೇಟೆಯ ಬೀಟೆಕಟ್ಟೆ ಗ್ರಾಮದ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಟೋಲ್ ಗೇಟ್ ಬಳಿ ನಡೆದಿದೆ. ಬಜ್ಪೆ ಕೆಂಜಾರು ಶ್ರೀದೇವಿ ಕಾಲೇಜು ವಿದ್ಯಾರ್ಥಿ ಮೂಲತ: ಸೋಮವಾರಪೇಟೆಯ ಬೀಟೆಕಟ್ಟೆ ಗ್ರಾಮದ ನಿವಾಸಿ ಶಶಾಂಕ್ (21) ಮೃತ ದುರ್ದೈವಿ. ಸೋಮವಾರ ರಾತ್ರಿ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಸುರತ್ಕಲ್ ಕಡೆಯಿಂದ ಮುಲ್ಕಿ ಕಡೆ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಹಿoಬದಿ ಸವಾರರಾಗಿದ್ದ ಶಶಾಂಕ್ ಅಪಘಾತದ ಸಂದರ್ಭ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಸ್ನೇಹಿತ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿ ಹಾಗೂ ಸಿಬ್ಬಂದಿ ಭೇಟಿ ನಿಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಸಿಕೊಂಡಿದ್ದಾರೆ.
ಬೆಂಗಳೂರು : ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲಿ ಪ್ರಸಾದವನ್ನು ಖರೀದಿಸಲು ಅಥವಾ ದೇಣಿಗೆ ನೀಡಲು ಪೇಟಿಎಂ ಯುಪಿಐ ಬಳಸಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಪೇಟಿಎಂ ಸಂಸ್ಥೆಯು ರಾಜಾಜಿ ನಗರದಲ್ಲಿರುವ ಇಸ್ಕಾನ್ ದೇವಸ್ಥಾನದಲ್ಲಿ 28 ಸೌಂಡ್ ಬಾಕ್ಸ್ ಧನಗಳನ್ನು ಅಳವಡಿಸಿದೆ. ಭಕ್ತರಿಗೆ ಅನುಕೂಲವಾಗುವಂತೆ ಪೇಟಿಎಂ ಸಂಸ್ಥೆಯು ಇಸ್ಕಾನ್ನಲ್ಲಿರುವ ಎಲ್ಲಾ ಸ್ಟಾಲ್ಗಳಲ್ಲಿ ಮೊಬೈಲ್ಪಾವತಿಗಳನ್ನು ಸಕ್ರಿಯಗೊಳಿಸಿದೆ. ಪ್ರಸಾದ, ಆಹಾರದಿಂದ ಹಿಡಿದು ಉಡುಗೊರೆ ಅಂಗಡಿಗಳಿಂದ ಧಾರ್ಮಿಕ ವಸ್ತುಗಳವರೆಗೆ. ದೇವಾಲಯದಾದ್ಯಂತ ಇರುವ ದಾನಪತ್ರಗಳು ಪೇಟಿಎಂ ಕ್ಯುಆರ್ ಕೋಡ್ ಅನ್ನು ಸಹ ಹೊಂದಿವೆ. ಪೇಟಿಎಂ ಸೂಪರ್ ಆ್ಯಪ್ ನಲ್ಲಿನ ‘ಭಕ್ತಿ’ ವಿಭಾಗದಿಂದ ಭಾರತದಾದ್ಯಂತ ಜನರು ಇಸ್ಕಾನ್ ದೇವಾಲಯದಲ್ಲಿ ತಮ್ಮಮನೆಯಲ್ಲಿ ಕುಳಿತು ದೇಣಿಗೆ ನೀಡಬಹುದು.
ಮಡಿಕೇರಿ ಮಾ.7 : ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿತಗೊಂಡಿದ್ದ ಹಿಂದೂ ಕ್ರಿಕೆಟ್ ಕಪ್ನಲ್ಲಿ ಮಡಿಕೇರಿಯ ಶಾಂತಿನಿಕೇತನ ಯೂತ್ ಕ್ಲಬ್ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಮ್ಯಾಕ್ಸ್ವೆಲ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಟಾಸ್ ಗೆದ್ದ ಶಾಂತಿನಿಕೇತನ ಫೀಲ್ಡಿಂಗ್ ಆಯ್ದುಕೊಂಡು ಮ್ಯಾಕ್ಸ್ವೆಲ್ಗೆ ಬ್ಯಾಟ್ ಮಾಡುವ ಅವಕಾಶ ಮಾಡಿಕೊಟ್ಟಿತು. ನಿಗದಿತ 5 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 50 ರನ್ ಪೇರಿಸಿ 51 ರನ್ಗಳ ಗುರಿ ಎದುರಾಳಿ ತಂಡ ಮ್ಯಾಕ್ಸ್ವೆಲ್ಗೆ ನೀಡಿತು. ಗುರಿ ಬೆನ್ನತ್ತಿದ ಶಾಂತಿನಿಕೇತನ 4 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 51 ರನ್ ಪೂರೈಸಿ ಗೆಲುವಿನ ನಗೆ ಬೀರಿತು. ಸೆಮಿಫೈನಲ್ನಲ್ಲಿ ಪರಭಾವಗೊಂಡ ಎಂ.ಸಿ.ಸಿ. ಮಕ್ಕಂದೂರು ಹಾಗೂ ಸನ್ನು ಕಾಫಿ ಮೂರನೇ, ನಾಲ್ಕನೇ ಬಹುಮಾನಕ್ಕೆ ಸೆಣಸಾಡಿದವು. ಎಂ.ಸಿ.ಸಿ ನೀಡಿದ 24 ರನ್ಗಳ ಗುರಿಯನ್ನು ಸಾಧಿಸಲು ವಿಫಲವಾದ ಸನ್ನು ಕಾಫಿ ನಾಲ್ಕನೇ ಸ್ಥಾನ ಪಡೆದುಕೊಂಡರೇ, ಎಂಸಿಸಿ 3ನೇ ಸ್ಥಾನ ತನ್ನದಾಗಿಸಿಕೊಂಡಿತು. ವಿಜೇತ ತಂಡಕ್ಕೆ ರೂ.55,555 ರನ್ನರ್ ಅಪ್ ತಂಡಕ್ಕೆ ರೂ.33,333 ತೃತೀಯ ಸ್ಥಾನಕ್ಕೆ ರೂ.11,111…






