ಲೇಖಕ: admin

ನಾಪೋಕ್ಲು ಏ.11 :  ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ಸಂಭವಿಸಿದಂತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರೀಯ ಕೈಗಾರಿಕಾ ಮೀಸಲು ಪಡೆ ಮತ್ತು ಪೊಲೀಸರು ನಾಪೋಕ್ಲುವಿನಲ್ಲಿ ಪಥಸಂಚಲನ ನಡೆಸಿದರು. ನಾಪೋಕ್ಲು ಮಾರುಕಟ್ಟೆ ಬಳಿ ಇರುವ ಪೊಲೀಸ್ ಠಾಣಾ ಮೈದಾನದಿಂದ ಪಟ್ಟಣದ ಮುಖ್ಯಬೀದಿಯ ಮೂಲಕ ಹಳೇ ತಾಲೂಕುವರೆಗು ಕೇಂದ್ರೀಯ ಕೈಗಾರಿಕಾ ಮೀಸಲುಪಡೆ ಮತ್ತು ನಾಪೋಕ್ಲು ಪೊಲೀಸರು ಪಥ ಸಂಚಲನ ನಡೆಸುವ ಮೂಲಕ ಭಯಮುಕ್ತ ಚುನಾವಣೆ ಬಗ್ಗೆ ನಾಗರಿಕರಿಗೆ ಜಾಗೃತಿ ಮೂಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹಾಗೂ ಹೆಚ್ಚುವರಿ ಪೋಲಿಸ್ ಅಧೀಕ್ಷಕರಾದ ಸುಂದರ್ ರಾಜ್ ಅವರ ಮಾರ್ಗದರ್ಶನದಂತೆ ಡಿವೈಎಸ್ಪಿ ಜಗದೀಶ್ ಮುಂದಾಳತ್ವದಲ್ಲಿ ನಡೆದ ಪಥಸಂಚಲನದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಶೇಖರ್, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಮಡಿಕೇರಿ ಮಹಿಳಾ ಠಾಣಾ ಇನ್ಸ್ಪೆಕ್ಟರ್ ಯಶ್ವಂತ್, ಭಾಗಮಂಡಲ ಠಾಣಾಧಿಕಾರಿ ಪ್ರಿಯಾಂಕ ಹಾಗೂ ನಾಪೋಕ್ಲು ಠಾಣಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವರದಿ :ಝಕರಿಯ ನಾಪೋಕ್ಲು 

Read More

ಮಡಿಕೇರಿ,ಏ.11 : ಹಾಕಿ, ಫುಟ್ಬಾಲ್, ಕ್ರಿಕೆಟ್ ಮುಂತಾದ ಗುಂಪು ಕ್ರಿಡೆಯಿಂದ ನಮ್ಮಲ್ಲಿ ಹೊಂದಾಣಿಕೆ, ಒಗ್ಗಟ್ಟು, ತ್ಯಾಗ ಹಾಗೂ ಮತ್ತೋರ್ವರಿಗೆ ಸಹಾಯ ಮಾಡುವ ಮನೋಭಾವ ಮೂಡುತ್ತದೆ ಎಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ಹಾಗೂ ಕ್ರೀಡಾಪಟು ಕಾರೇರ ಕವನ್ ಮಾದಪ್ಪ ಹೇಳಿದರು. ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಸ್ಮರಣಾರ್ಥ  ನಗರದ  ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉಚಿತ ಮಕ್ಕಳ ಬೇಸಿಗೆ ಕ್ರೀಡಾ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮನುಷ್ಯ ಕ್ರೀಡೆ ಅಥವಾ ವ್ಯಾಯಾಮಗಳಲ್ಲಿ ತೊಡಗಿಸಿಕೊಳ್ಳದಿದ್ದರೆ ಜೀವನ ಪರಿಪೂರ್ಣವಾಗುವದಿಲ್ಲ. ಗುಂಪು ಕ್ರೀಡೆಗಳಲ್ಲಿ ಹೊಂದಾಣಿಕೆ, ತ್ಯಾಗ, ಸಹಾಯ ಮಾಡುವ ಮನೋಭಾವ ಮೂಡುತ್ತದೆ. ಸೇನೆಯಲ್ಲಿಯೂ ಇದೇ ರೀತಿಯ ಮನೋಭಾವವಿರುತ್ತದೆ. ಈ ರೀತಿಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವದರಿಂದ ಹೊಸ ಮಾನವರಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಹಿಂದೆ ಯೋಗದ ಮಹತ್ವ ಯಾರಿಗೂ ತಿಳಿದಿರಲಿಲ್ಲ, ಯೋಗ ಹೇಳಿಕೊಡುವವರೂ ಇರಲಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಯೋಗದ ಬಗ್ಗೆ ವಿಶ್ವದೆಲ್ಲೆಡೆ ಪರಿಚಯವಾಗಿದೆ. ಮನುಷ್ಯ ಚಟುವಟಿಕೆಯಿಂದ ಇದ್ದರೆ ಮಾನಸಿಕ ಒತ್ತಡದಿಂದ…

Read More

ಮಡಿಕೇರಿ ಏ.11 : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಏ.14 ರಂದು ಸೌರಮಾನ ಯುಗಾದಿ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಅಂದು ಪೂರ್ವಹ್ನ 10.30 ಗಂಟೆಗೆ ನಡೆಯಲಿರುವ ಸತ್ಯನಾರಾಯಣ ಪೂಜೆಗೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಾಲಯದ ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಸುಂಟಿಕೊಪ್ಪ ಏ.11: ಹಳೆಯ ವಿದ್ಯಾರ್ಥಿಗಳ ಗೆಳೆಯರ ಬಳಗ ಗುಂಡುಗುಟ್ಟಿ ಹಾಗೂ ಪನ್ಯ ಎಫ್.ಸಿ. ವತಿಯಿಂದ ಗುಂಡುಗುಟ್ಟಿ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಪ್ರಥಮ ವರ್ಷದ ವಾಲಿಬಾಲ್ ಪಂದ್ಯಾವಳಿಯಲ್ಲಿ ಮಹೇಶ್ ಪ್ರೆಂಡ್ಸ್ ತಂಡ ಚಾಂಪಿಯನ್‍ಶಿಪ್ ಪಡೆದುಕೊಂಡರೆ, ದ್ವಿತೀಯ ಮಹೇಶ್ ಪ್ರೆಂಡ್ಸ್ ‘ಬಿ’ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಮುಕ್ತ ವಾಲಿಬಾಲ್ ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಒಟ್ಟು 16 ತಂಡಗಳು ಪಾಲ್ಗೊಂಡಿದ್ದವು. ಗುಂಡುಗುಟ್ಟಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಹಳೆಯ ನೆನಪುಗಳನ್ನು ಹಂಚಿಕೊಂಡು ಸ್ನೇಹ, ಪ್ರೀತಿ, ಸೌಹಾರ್ದತೆಗೆ ನಾಂದಿ ಹಾಡಿದರು. ಹಳೆಯ ವಿದ್ಯಾರ್ಥಿ ಗೆಳೆಯ ಬಳಗದ ಅಧ್ಯಕ್ಷ ವಿಶ್ವ, ಉಪಾಧ್ಯಕ್ಷರುಗಳಾದ ಮಂಜು, ಶ್ರೀನಿವಾಸ್, ಲಿಖಿತ್, ಕಾರ್ಯದರ್ಶಿ ಕೇಶವ, ಖಜಾಂಚಿ ತೇಜಸ್, ಸಂಘಟನಾ ಕಾರ್ಯದರ್ಶಿಗಳಾದ ಸುಜಿ, ಪೊನ್ನಪ್ಪ, ರಮೇಶ್, ಗಣೇಶ್ ಪದಾಧಿಕಾರಿಗಳಾದ ಅರುಣ, ಅಣ್ಣಪ್ಪ, ಕಾರ್ತಿಕ್, ಕಿರಣ್‍ಕುಮಾರ್, ಕೊರಗಪ್ಪ (ಅರುಣ), ಗಣೇಶ್, ಪ್ರಜ್ವಲ್, ಪ್ರವೀಣ ಹಾಗೂ ಮತ್ತಿತರರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಸುಂಟಿಕೊಪ್ಪ ಏ.11 : ಕೊಡಗರಹಳ್ಳಿಯಲ್ಲಿ ನೆಲೆಸಿರುವ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವವು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಮುಂಜಾನೆ ಶ್ರೀಗಣ ಹೋಮದೊಂದಿಗೆ ವಾಷೀಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ಶ್ರೀ ಬೈತೂರಪ್ಪ ಪೊವ್ವೆದಿ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಮತ್ತು ರುದ್ರಾಭೀಷೇಕವನ್ನು ದೇವಾಲಯದ ಪ್ರಧಾನ ಆರ್ಚಕ ಭಾನು ಪ್ರಕಾಶ್ ಭಟ್, ರಘುಪತಿ ಭಟ್ ಹಾಗೂ ರಮೇಶ್ ವೈದ್ಯ ಅವರ ತಂಡ ನೆರವೇರಿಸಿದರು. ದೇವತಕ್ಕರಾದ ಜಗ್ಗರಂಡ ಹ್ಯಾರಿ ಕಾರ್ಯಪ್ಪ ಅವರ ಮನೆಯಿಂದ ದೇವರ ಭಂಡಾರವನ್ನು ಅರ್ಚಕ ನರಸಿಂಹ ಭಟ್ ಅವರ ನೇತೃತ್ವದಲ್ಲಿ ಪೂಜೆ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನೇರವೇರಿಸಿ ದುಡಿಕೊಟ್ ಪಾಟ್ ಸಾಂಪ್ರಾದಾಯಿಕ ಕೊಡವ ಒಲಗದೊಂದಿಗೆ ದೇವಾಲಯಕ್ಕೆ ತಂದು ಪೂಜೆ ನೆರವೇರಿಸಲಾಯಿತು. ಮಾಹಾಪೂಜೆಯ ಬಳಿಕ ತೀರ್ಥ ಪ್ರಸಾದ ವಿತರಿಸಲಾಯಿತು. ದೇವಾಲಯದ ವಾರ್ಷಿಕ ಹಬ್ಬದ ಸಂದರ್ಭ ದೇವಾಲಯಕ್ಕೆ ಒಳಪಟ್ಟ ಕುಟುಂಬಗಳು ಸಾಂಪ್ರಾದಾಯಿಕ ವೇಷ ಭೂಷಣದೊಂದಿಗೆ ದೇವಾಲಯದ ಆವರಣದಲ್ಲಿ ಸೇರಿ ಸಾಂಪ್ರಾದಾಯಿಕ ಬೊಳಕಾಟ್ ನೃತ್ಯ ಸೇವೆ ಸಲ್ಲಿಸಿದರು. ವಿಶೇಷವೆಂದರೆ ಹಬ್ಬದ…

Read More

ಮಡಿಕೇರಿ ಏ.11 : ಸಸ್ಯಗಳ ಲೋಕ, ಪ್ರಾಕೃತಿಕ ಸೌಂದರ್ಯ ಒಳಗೊಂಡಿರುವ ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಯು ಸೇರ್ಪಡೆಯಾಗಿದೆ. ನಗರದ ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಚಾಲನೆ ನೀಡಿದರು. ಸ್ವತಃ ತಾವೇ ಜಿಫ್‍ಲೈನ್‍ನಲ್ಲಿ ಸಾಹಸ ಕ್ರೀಡೆಯಲ್ಲಿ ಪಾಲ್ಗೊಂಡು ಗಮನಸೆಳೆದರು. ಬಳಿಕ ಜಿಫ್‍ಲೈನ್ ಸಾಹಸ ಕ್ರೀಡೆಯ ಅನುಭವ ಹಂಚಿಕೊಂಡ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಒಟ್ಟು 310 ಮೀಟರ್ ಉದ್ದದ ಜಿಫ್‍ಲೈನ್ ಅಳವಡಿಸಲಾಗಿದೆ ಎಂದರು. ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಜೊತೆಗೆ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯಿಂದ ಸುರಕ್ಷತೆ ಸಂಬಂಧ ಪ್ರಮಾಣ ಪತ್ರ ಪಡೆಯಬೇಕು. ಜೊತೆಗೆ ಸಾಹಸ ಅಕಾಡೆಮಿಯ ಅಗತ್ಯ ಮಾರ್ಗದರ್ಶನ ಪಾಲಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್.ನಾಯಕ್ ಅವರು ಜಿಫ್‍ಲೈನ್ ಸಾಹಸ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಒಬ್ಬರಿಗೆ 300 ರೂ. ನಿಗದಿ ಮಾಡಲಾಗಿದೆ ಎಂದರು. ಇಲಾಖಾ ಖಾಸಗಿ ಸಹಭಾಗಿತ್ವದಲ್ಲಿ ಜಿಪ್‍ಲೈನ್ ಸಾಹಸ ಕ್ರೀಡೆ…

Read More

ಮಡಿಕೇರಿ ಏ.11 : ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ ಮಡಿಕೇರಿ ತಾಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ಏಪ್ರಿಲ್, 15 ರಂದು ವಿಶ್ವ ಚಿತ್ರಕಲಾ ದಿನಾಚರಣೆ ಸಂದರ್ಭ ಕೊಡಗು ಮತ್ತು ಮತದಾನ ವಿಷಯದ ಸಂಬಂಧಿತ ಚಿತ್ರಕಲಾ ಸ್ಪರ್ಧೆ ಆಯೋಜಿಸಿದೆ. ನಗರದ ರಾಜಾಸೀಟು ಉದ್ಯಾನವನದಲ್ಲಿ ಏಪ್ರಿಲ್ 15 ರಂದು ಬೆಳಗ್ಗೆ 10 ಗಂಟೆಯಿಂದ ಚಿತ್ರಕಲಾ ಸ್ಪರ್ಧೆಯು 14 ವಷ೯ದೊಳಗಿನ ವಿದ್ಯಾರ್ಥಿಗಳ ವಿಭಾಗ, 14 ರಿಂದ 18 ವಷ೯ದೊಳಗಿನ ವಿದ್ಯಾಥಿ೯ ವಿಭಾಗ ಮತ್ತು 18 ವಷ೯ಕ್ಕೆ ಮೇಲ್ಪಟ್ಟವರ ವಿಭಾಗದಲ್ಲಿ ಆಯೋಜಿಸಲ್ಪಟ್ಟಿದೆ. ವಿಶ್ವ ಚಿತ್ರಕಲಾ ದಿನದ ಪ್ರಯುಕ್ತ ಜಿಲ್ಲೆಯ ಚಿತ್ರ ಕಲಾವಿದರು ಕೂಡ ವೈವಿಧ್ಯಮಯ ಚಿತ್ರಕಲೆ ರಚಿಸಲಿದ್ದಾರೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕ ವಿಭಾಗದಲ್ಲಿ ನಡೆಯುವ ಚಿತ್ರಕಲಾ ಸ್ಪರ್ಧೆಯಲ್ಲಿ ಮತದಾನದ ಮಹತ್ವದ ವಿಷಯದಲ್ಲಿ ಕೊಡಗು ಮತ್ತು ಮತದಾನ ವಿಚಾರದ ಬಗ್ಗೆ ಚಿತ್ರಕಲೆ ರಚಿಸಬಹುದಾಗಿದೆ. ಇದೇ ಸಂದರ್ಭ ‘ನಾನು ಮತದಾನ ಮಾಡುತ್ತೇನೆ’ ಎಂಬ ಬೃಹತ್ ಕ್ಯಾನ್ವಸ್ನ್ನು ರಾಜಾಸೀಟು ಉದ್ಯಾನವನದಲ್ಲಿ ಕೊಡಗಿನ…

Read More

ನಾಪೋಕ್ಲು ಏ.11 : ಕಕ್ಕುಂದಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆದ ಉತ್ಸವದಲ್ಲಿ ಊರಿನ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಹಾಪೂಜೆ, ಧ್ವಜಾರೋಹಣ, ದೀಪಾರಾಧನೆ, ದೇವರ ಬಲಿಯೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಿತು. ದೇವಾಲಯದಲ್ಲಿ ಬೆಳಿಗ್ಗೆ ದರ್ಶ ಬಲಿ, ಮಹಾಭಿಷೇಕ, ಮತ್ತು ಮಧ್ಯಾಹ್ನ ಮಹಾಪೂಜೆ, ವಿಶೇಷ ಸೇವೆಗಳು ಜರುಗಿದವು. ದೇವರ ನೃತ್ಯಬಲಿ (ಪಟ್ಟಣಿ ) ನಂತರ ಪ್ರಸಾದ ವಿತರಣೆ ನೆರವೇರಿತು. ಸಂಜೆ ಪಟ್ಟಣದಲ್ಲಿ ದೇವರ ಉತ್ಸವ ಮೂರ್ತಿಯನ್ನು ಚೆಂಡೆ, ವಾದ್ಯಗೋಷ್ಠಿಗಳೊಂದಿಗೆ ಪಟ್ಟಣದಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಕಾವೇರಿನದಿಯಲ್ಲಿ ಅವಭೃತಸ್ನಾನದ ಬಳಿಕ ದೇವರ ದರ್ಶನಬಲಿ ಜರುಗಿತು. ನಂತರ ಶುದ್ಧ ನವಕ ಕಲಶ, ಮಹಾಪೂಜೆ, ಮಂತ್ರಾಕ್ಷತೆಯೊಂದಿಗೆ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ದೇವಾಲಯದ ಮುಖ್ಯ ಅರ್ಚಕ ಸುಧೀರ, ರಮೇಶ್ ಶರ್ಮಾ, ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಈ ಸಂದರ್ಭ ಆಡಳಿತ ಮಂಡಳಿ ಅಧ್ಯಕ್ಷ ಟಿ.ಎಸ್.ಮಂಜಯ್ಯ, ಕಾರ್ಯದರ್ಶಿ ಟಿ.ಎ.ಸುಜಿಕುಮಾರ್, ಖಜಾಂಚಿ ಎಂ.ಪಿ.ಗೋಪಾಲ, ಉಪಾಧ್ಯಕ್ಷ ಟಿ.ಆರ್.ಶ್ರೀನಿವಾಸ, ಕಾರ್ಯಾಧ್ಯಕ್ಷ ಟಿ.ಎನ್.ರಮೇಶ್, ಹಿರಿಯರಾದ ಶ್ರೀನಿವಾಸ, ಆನಂದ…

Read More

ಮಡಿಕೇರಿ ಏ.11  : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಎಸ್ಸೋಸಿಯೇಷನ್, ಕೊಡಗು ಜಿಲ್ಲೆ (ನೀಮಾ, ಕೊಡಗು) ವತಿಯಿಂದ ಏ.13 ರಂದು  ಜಿಲ್ಲೆಯಾದ್ಯಂತ 30ಕ್ಕೂ ಹೆಚ್ಚಿನ ಆಯುವೇ೯ದ ವೈದ್ಯರು ತಮ್ಮ ಚಿಕಿತ್ಸಾಲಯಗಳಲ್ಲಿ ನೀಮಾ ದಿನಾಚರಣೆ ಆಯೋಜಿಸಿದ್ದಾರೆ. ಏ.13 ರಂದು  ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಆರೋಗ್ಯ ಚಿಕಿತ್ಸಾ ಕಾಯ೯ಕ್ರಮಗಳು ಆಯೋಜಿತವಾಗಿದೆ. ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಅನೇಕ ಕಾಯ೯ಕ್ರಮಗಳು ಜರುಗಲಿದೆ. ಸೋಮವಾರಪೇಟೆ ತಾಲೂಕಿನ ಆಯುವೇ೯ದ ಚಿಕಿತ್ಸಾಲಯಗಳಲ್ಲಿ ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ, ಮಾಹಿತಿ, ಕುಶಾಲನಗರ ತಾಲೂಕಿನ ಆಯುವೇ೯ದ ಚಿಕಿತ್ಸಾಲಯಗಳಲ್ಲಿ ವಿಶೇಷ ಚೇತನರಿಗೆ ಚಿಕಿತ್ಸೆ, ಮಾಹಿತಿ, ಮಡಿಕೇರಿ ತಾಲೂಕಿನ ಆಯುವೇ೯ದ ಚಿಕಿತ್ಸಾಲಯಗಳಲ್ಲಿ ಮಹಿಳೆಯರಿಗೆ ಚಿಕಿತ್ಸೆ,ಮಾಹಿತಿ, ವಿರಾಜಪೇಟೆ ತಾಲೂಕಿನ ಆಯುವೇ೯ದ ಚಿಕಿತ್ಸಾಲಯಗಳಲ್ಲಿ ಯುವಕ, ಯುವತಿಯರಿಗೆ ಆರೋಗ್ಯ ಸಂರಕ್ಷಣೆಯ ಮಾಹಿತಿ, ಚಿಕಿತ್ಸೆ ಕಾಯ೯ಕ್ರಮಗಳನ್ನು ಅಂದಿನ ದಿನ ಆಯೋಜಿಸಲಾಗಿದೆ. ಅಲ್ಲದೇ ಈಗ ಹಲವರಿಗೆ ಕಾಡುತ್ತಿರುವ ಥೈರಾಯ್ಡ್, ಬೊಜ್ಜುತನ, ಸಕ್ಕರೆ ಕಾಯಿಲೆ, ರಕ್ತದೊತ್ತಡ, ಪಿ.ಸಿ.ಓ.ಡಿ ಸಮಸ್ಯೆಗಳಿಗೆ ಮನೆಯಲ್ಲೇ ಮಾಡಬಹುದಾದ ಯೋಗಾಸನಗಳ ಮಾಹಿತಿಯನ್ನು ಎಲ್ಲರ ಉಪಯೋಗಕ್ಕಾಗಿ…

Read More

ಸೋಮವಾರಪೇಟೆ ಏ.11 :  ಬೆಟ್ಟದಳ್ಳಿ ಯಶೋದೆ ರಂಗಟ್ರಸ್ಟ್ ಹಾಗೂ  ಸಾಂದೀಪನಿ ಪ್ರೌಢಶಾಲೆ  ಸಂಯುಕ್ತಾಶ್ರಯದಲ್ಲಿ ಏ.15ರಿಂದ ಮೇ 3ರ ವರೆಗೆ ಮಕ್ಕಳ ಕಲಾಕಲಿಕೆ ಶಿಬಿರ ನಡೆಯಲಿದೆ ಎಂದು ಶಿಬಿರ ಸಂಚಾಲಕ ನಿಶಾಂತ್ ಮುತ್ತಣ್ಣ ತಿಳಿಸಿದ್ದಾರೆ. ಚೌಡ್ಲು  ಸಾಂದೀಪನಿ ಶಾಲಾ ಆವರಣ ಹಾಗೂ ಗೌಡಳ್ಳಿ ಶ್ರಿ ನವದುರ್ಗಾ ದೇವಾಲಯದ ಆವರಣದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಡ್ರಾಮಾ ಜೂನಿಯರ್ಸ್, ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮಾರ್ಗದರ್ಶಕರಿಂದ  ರಂಗಾಟ, ಅಭಿನಯ, ಚಿತ್ರಕಲೆ, ಕರಕುಶಲತೆ, ಯಕ್ಷಗಾನ, ಮೂಕಾಭಿನಯ, ಜಾನಪದ ಕುಣಿತ ಸೇರಿದಂತೆ ಇನ್ನಿತರ ರಂಗ ತರಬೇತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 8123557304 ಹಾಗೂ 7259479331 ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.   

Read More