ಲೇಖಕ: admin

ಸೋಮವಾರಪೇಟೆ ಮಾ.6 : ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕೊಡಗಿನ ಮೂವರಿಗೆ ಬನವಾಸಿ ಕನ್ನಡಿಗ 2023 ರಾಜ್ಯ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ನಾಗರಭಾವಿಯಲ್ಲಿರುವ ಜ್ಞಾನಸೌಧ ಸಭಾಂಗಣದಲ್ಲಿ  ನಡೆದ ಬನವಾಸಿ ಕನ್ನಡಿಗ ಕನ್ನಡಮಯ ಟ್ರಸ್ಟಿನ 6ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧಕರಿಗೆ ಮಾಡಿದ ಕೊಡಗಿನ  ಸೋಮವಾರಪೇಟೆಯ ಸಾಮಾಜಿಕ ಕಾರ್ಯಕರ್ತೆ ಎಂ.ಎ.ರುಬೀನಾ, ಮಡಿಕೇರಿಯ ಪವನ್ ಪೆಮ್ಮಯ್ಯ ಮತ್ತು ಕುಶಾಲನಗರದ ಚಂದ್ರು ಗೆ  ಖ್ಯಾತ ಚಲನಚಿತ್ರ ನಿರ್ದೇಶಕ  ಟಿ.ಎಸ್.ನಾಗಾಭರಣ್  ಬನವಾಸಿ ಕನ್ನಡಿಗ 2023 ರಾಜ್ಯ ಪ್ರಶಸ್ತಿಯನ್ನು  ಪ್ರದಾನ ಮಾಡಿದರು. ಈ ಸಂದರ್ಭ   ಚಲನಚಿತ್ರ ನಿರ್ದೇಶಕ ಎಸ್.ಮಹೇಂದರ್, ಬಿಗ್ ಬಾಸ್ ಖ್ಯಾತಿಯ ರೂಪೇಶ್ ರಾಜಣ್ಣ, ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ನ ಅಧ್ಯಕ್ಷರು ಶಿವಕುಮಾರ್ ನಾಗರನವಿಲೆ, ನಮ್ಮ ಕೊಡಗು ತಂಡದ ಅಧ್ಯಕ್ಷರು ನೌಷಾದ್ ಜನ್ನತ್ ಮತ್ತು ಬನವಾಸಿ ಕನ್ನಡಿಗ ಟ್ರಸ್ಟಿನ ಕಿರಣ್ ಮತ್ತು ಕಿರಣ್ ಮಯಿ ಮತ್ತಿತರು ಗಣ್ಯರು ಹಾಜರಿದ್ದರು.

Read More

ಮಡಿಕೇರಿ ಮಾ.6 : ಭ್ರಷ್ಟಾಚಾರ ಮುಕ್ತ ಕರ್ನಾಟಕ ಹೋರಾಟದ ಭಾಗವಾಗಿ ಮಾ.9 ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಕರ್ನಾಟಕ ಬಂದ್ ಗೆ ಕೆಪಿಸಿಸಿ ಕರೆ ನೀಡಿದೆ. ಕೊಡಗಿನಲ್ಲೂ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಲು ಸಾರ್ವಜನಿಕರು ಸಹಕಾರ ನೀಡಬೇಕು ಮತ್ತು ಸ್ವಯಂ ಪ್ರೇರಿತ ಬಂದ್ ಮೂಲಕ ಬೆಂಬಲ ಸೂಚಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಹಾಗೂ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಬಂದ್ ಗೆ ಕರೆ ನೀಡಿದರು. ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸ್ವಯಂ ಪ್ರೇರಿತರಾಗಿ ಬಂದ್ ಮಾಡಲು ಮನವಿ ಮಾಡುತ್ತೇವೆ, ಯಾರ ಮೇಲೂ ಒತ್ತಡ ಹೇರುವುದಿಲ್ಲ. ಪ್ರತಿಭಟನೆ ಅಥವಾ ರಸ್ತೆ ತಡೆ ಮಾಡುವುದಿಲ್ಲ, ರಾಜ್ಯದಲ್ಲಿ ಮಿತಿ ಮೀರಿರುವ ಭ್ರಷ್ಟಾಚಾರದ ವಿರುದ್ಧ ಜನರು ಕೂಡ ಜಾಗೃತರಾಗಿದ್ದು, ಬಂದ್ ಗೆ ಬೆಂಬಲ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚನ್ನಗಿರಿ ಕ್ಷೇತ್ರದ ಬಿಜೆಪಿ…

Read More

ಮಡಿಕೇರಿ ಮಾ.6 :  ಕೊಡಗು ಜಿ.ಪಂ, ವಿರಾಜಪೇಟೆ ತಾ.ಪಂ, ನಿಟ್ಟೂರು ಗ್ರಾ.ಪಂ ಮತ್ತು  ಸಂಜೀವಿನಿ ಒಕ್ಕೂಟದ ವತಿಯಿಂದ ನಿಟ್ಟೂರು ಗ್ರಾ.ಪಂ ವ್ಯಾಪ್ತಿಯ 14 ಸ್ತ್ರೀ ಶಕ್ತಿ ಸಂಘಗಳ ಮತ್ತು ಮಹಿಳಾ ಸ್ವಸಹಾಯ ಸಂಘಗಳ ಮಹಿಳೆಯರು ಮನೆಯಲ್ಲಿ ತಯಾರಿಸಿದ ಉತ್ಪನ್ನಗಳ ಮಾರಾಟ ಮೇಳ ನಡೆಯಿತು. ನಿಟ್ಟೂರು ಗ್ರಾಮದ ಮೇಚಂಡ ಕಿಶು ಮಾಚಯ್ಯ  ಅವರ ಗದ್ದೆಯಲ್ಲಿ  ನಡೆದ ಮೇಳಕ್ಕೆ  ಗ್ರಾ.ಪಂ  ಅಧ್ಯಕ್ಷ  ಕಾಟಿಮಾಡ ಶರೀನ್ ಮುತ್ತಣ್ಣ  ಮೇಳವನ್ನು ಉದ್ಘಾಟಿಸಿದರು.  ನಂತರ ಮಾತನಾಡಿದ ಅವರು, ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡು ದೇಶದ ಆರ್ಥಿಕ ವ್ಯವಸ್ಥೆಗೆ ಶಕ್ತಿ ತಂಬುಲು ಕರೆ ನೀಡಿದರು. ಗ್ರಾ.ಪಂ  ಸದಸ್ಯೆ ಪಡಿಞರಂಡ ಕವಿತಾ ಪ್ರಭು ಕುಮಾರ್ ಮಾತನಾಡಿ,  ವಿವಿಧ ಮಳಿಗೆಗಳನ್ನು ನಮ್ಮ ಗ್ರಾಮದ ಮಹಿಳಾ ಸಂಘಟನೆಯ ಮಹಿಳೆಯರು ಅಚ್ಚುಕಟ್ಟಾಗಿ ಜೋಡಿಸಿ ತಾವು ಕೈ ತೋಟದಲ್ಲಿ ಬೆಳೆದ ತರಕಾರಿ ಮತ್ತು ತಾವೇ ಮನೆಯಲ್ಲಿ ತಯಾರಿಸಿದ ಉತ್ಪನ್ನಗಳ ಮಾರಾಟಕ್ಕೆ ಇಟ್ಟಿರುವುದು ಹೆಮ್ಮೆ  ವಿಚಾರ. ಗ್ರಾಮಸ್ಥರು  ವಿವಿಧ ಉತ್ಪನ್ನಗಳನ್ನು ಖರೀದಿಸುವ ಮೂಲಕ ಮಹಿಳಾ ಸಂಘಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು.…

Read More

ಮಡಿಕೇರಿ ಮಾ.6 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವದ ಅಂಗವಾಗಿ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಿತಿ, ಸಾಂಸ್ಕೃತಿಕ ಸಮಿತಿ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾ. 8ರಂದು ಕುಶಾಲನಗರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕುಶಾಲನಗರದ ಎ.ಪಿ.ಸಿ.ಎಂ.ಎಸ್ ಸುವರ್ಣ ಮಹೋತ್ಸವ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿಯ ರೂಪಶ್ರೀ ಸತೀಶ ಅವರು ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ‌ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೂಡಿಗೆ ಕ್ರೀಡಾ ಶಾಲೆ ನಿವೃತ್ತ ಮುಖ್ಯೋಪಾಧ್ಯಾಯಿನಿ ಕುಂತಿ ಬೋಪಯ್ಯ, ಸೋಮವಾರಪೇಟೆ ಅಬಕಾರಿ ನಿರೀಕ್ಷಕರಾದ ಚೈತ್ರಾ, ಕುಶಾಲನಗರದ ಪ್ರಿಯಾಂಕ ಗಂಗಾಧರಪ್ಪ, ಕಾರ್ಯಕ್ರಮ ಸಂಚಾಲಕಿ ವನಿತಾ ಚಂದ್ರಮೋಹನ್ ಉಪಸ್ಥಿತರಿರಲಿದ್ದಾರೆ. ಪಾರಂಪರಿಕ ಆರೋಗ್ಯ ರಕ್ಷಣೆ ವಿಷಯದ ಬಗ್ಗೆ ಶಿವಮೊಗ್ಗದ ನಾಟಿ‌ವೈದ್ಯೆ ಸುಮನಾ ಮಳಲಗದ್ದೆ ಉಪನ್ಯಾಸ ನೀಡಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಪತ್ರಕರ್ತರ ಕುಟುಂಬಸ್ತರು, ಭಜನಾ…

Read More

ಮಡಿಕೇರಿ ಮಾ.6 :  ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ  ವತಿಯಿಂದ ಕೌಶಲ್ಯ ಅಭಿವೃದ್ಧಿ ಮತ್ತು ಆದಾಯ ಗಳಿಕೆ ತರಬೇತಿ ಯೋಜನೆಯಡಿ ಚರ್ಮ ಕೈಗಾರಿಕೆಗೆ ಸಂಬಂಧಿಸಿದಂತೆ ಪೊನ್ನಂಪೇಟೆಯ ಶಿವ ಕಾಲೋನಿಯ 30 ಪಲಾನುಭವಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ   ಪ್ರಮಾಣಪತ್ರ, ರೂ.6000 ವಿದ್ಯಾರ್ಥಿವೇತನ ಮತ್ತು ಹೊಲಿಗೆ ಯಂತ್ರವನ್ನು ವಿತರಿಸಿ,  ಶುಭ ಕೋರಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಇಲಾಖಾಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಮಾ.6 :  ನರಿಯಂದಡ ಗ್ರಾ.ಪಂ  ವ್ಯಾಪ್ತಿಯಲ್ಲಿ ರೂ. 1 ಕೋಟಿ ಅನುದಾನದಲ್ಲಿ ನಿರ್ಮಾಣವಾದ ವಿವಿಧ ರಸ್ತೆಗಳನ್ನು  ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ನಂತರ  ಸ್ಥಳೀಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು. 

Read More

ವಿರಾಜಪೇಟೆ ಮಾ.6 : ಮಲೆತಿರಿಕೆ ಬೆಟ್ಟದ ಶ್ರೀ ಮುತ್ತಪ್ಪನ್ ಕಾವ್ ದೇವಾಲಯದ 2ನೇ ವಾರ್ಷಿಕ ತೆರೆ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಮಾ.4 ರಂದು ಆರಂಭವಾದ ತೆರೆ ಮಹೋತ್ಸವದಲ್ಲಿ ಮುಂಜಾನೆ ಗಣಪತಿ ಹೋಮ, ಸಂಜೆ ಶ್ರೀ ಮುತ್ತಪ್ಪನ್ ಮಲೆ ಎರಕ್ಕಂ, ಗುಳಿಗನ್ ವೆಳ್ಳಾಟಂ, ಮುತ್ತಪ್ಪನ್ ದೇವರ ವೆಳ್ಳಾಟಂ ಜರುಗಿತು. ನಂತರ ತೆಲುಗರ ಬೀದಿ ಶ್ರೀ ಅಂಗಾಳ ಪರಮೇಶ್ವರಿ ದೇವಾಲಯದಿಂದ ಮುತ್ತಪ್ಪನ್ ಕಾವ್ ದೇಗುಲದ ವರೆಗೆ ದೀಪಾರಾಧನೆಯ ಮೆರೆವಣಿಗೆ ನೆಡೆಯಿತು. ವಸೂರಿಮಾಲ ದೇವರ ಕೋಲವು ಡೆಂಟಲ್ ಕಾಲೇಜು ಬಳಿಯ ನೀರು ಕೊಲ್ಲಿಯಿಂದ ಹೊರಟು ದೇಗುಲ ಪ್ರವೇಶ ಮಾಡಿತು, ರಾತ್ರಿ ಪೊಟ್ಟನ್ ದೇವರ ಕೂಟ್ ಪಾಟು ಪ್ರಾರಂಭಗೊಂಡು ಅಂತ್ಯ ಕಂಡಿತ್ತು. ರಾತ್ರಿ 11 ವಿಷ್ಣುಮೂರ್ತಿ ದೇವರ ತೋಟ್ಟಂ ಪಾಟು, ಮಧ್ಯರಾತ್ರಿ ಗುಳಿಗನ್ ದೈವದ ತೆರೆ ನಡೆಯಿತು. ಮರುದಿನ ಬೆಳಿಗ್ಗೆ ಪೊಟ್ಟನ್ ದೇವರ ಪ್ರವೇಶ ನಡೆದು ಸಂಜೆ ಅಗ್ನಿಪ್ರವೇಶವಾಯಿತು. ರಾತ್ರಿ ವಸೂರಿಮಾಲ ದೇವರ ತೆರೆ, ವಿಷ್ಣುಮೂರ್ತಿ ದೇವರ ತೆರೆ, ವಸೂರಿಮಾಲ ಕುರುತಿ ಪೂಜೆ, ಪೊಟ್ಟನ್ ದೇವರ ಕುಟ್ಟಿ…

Read More

ಮಡಿಕೇರಿ ಮಾ.6 : ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪ್ರವರ್ಗ-1 ಕ್ಕೆ ಸೇರಿದ ಅಲೆಮಾರಿ/ ಅರೆಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಲು ಅರ್ಹ ವಸತಿ ರಹಿತ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.15 ಕೊನೆಯ ದಿನವಾಗಿದೆ. ಸಂಬಂಧಿಸಿದ ಅರ್ಜಿಯನ್ನು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿಯಲ್ಲಿ ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಕಚೇರಿ ವೇಳೆಯಲ್ಲಿ ಪಡೆಯಬಹುದು. ವಸತಿ ಸೌಲಭ್ಯದ ಫಲಾಪೇಕ್ಷಿಗಳು ಸರ್ಕಾರದ ಆದೇಶದಂತೆ ಅಲೆಮಾರಿ/ಅರೆಅಲೆಮಾರಿ ಸಮುದಾಯದವರೆಂದು ಗುರುತಿಸಿ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿದಾರರು ಈ ಹಿಂದೆ ಯಾವುದೇ ಯೋಜನೆಗಳಲ್ಲಿ, ವಿವಿಧ ಇಲಾಖೆಗಳು/ ನಿಗಮಗಳಿಂದ ವಸತಿ ಸೌಲಭ್ಯವನ್ನು ಪಡೆದಿರಕೂಡದು. ವಸತಿ ರಹಿತರು ಸ್ವಂತ ನಿವೇಶನ ಹೊಂದಿರಬೇಕು ಹಾಗೂ ನಿವೇಶನವು ಅರ್ಜಿದಾರರಾದ ಮಹಿಳೆ/ ಪುರುಷರ ಹೆಸರಿನಲ್ಲಿ ನೊಂದಣಿಯಾಗಿರಬೇಕು. ಕುಟುಂಬದ ಒಟ್ಟು ವಾರ್ಷಿಕ ವರಮಾನ ರೂ.2 ಲಕ್ಷಗಳ ಮಿತಿಯೊಳಗಿರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಮ್ಯಾನ್ಸ್ ಕಾಂಪೌಂಡ್…

Read More

ಸೋಮವಾರಪೇಟೆ ಮಾ.6 : ಒಕ್ಕಲಿಗರ ಯುವ ವೇದಿಕೆ ಸೋಮವಾರಪೇಟೆs, ಅಮೇಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ, ಕೊಡಗು ಜಿಲ್ಲಾ ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಸಂಯುಕ್ತಶ್ರಯದಲ್ಲಿ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಕ್ಕಲಿಗರ ಕಪ್-2023 ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ 8 ತಂಡಗಳು  ಕ್ವಾಟರ್ ಫೈನಲ್ ಗೆ ತಲುಪಿದೆ. ಬ್ಯಾಂಕ್ ಆಫ್ ಬರೋಡ ತಂಡ ಮುಂಬೈ ಯುವ ಪಲ್ಟನ್ ತಂಡದ ವಿರುದ್ಧ ಸೆಣಸಲಿದೆ. ಕೆ.ಎಸ್.ಪಿ ಮತ್ತು ಕರ್ನಾಟಕ 11, ಸೌತ್‍ಸೆಂಟ್ರಲ್ ರೈಲ್ವೆ ಮತ್ತು ಎರ್ ಇಂಡಿಯಾ, ಹರ್ಯಾಣ ಎನ್‍ಯುಎಸ್‍ಸಿ ಮತ್ತು ತಮಿಳುನಾಡಿನ ದೊರೈಸಿಗಂ ತಂಡಗಳ ನಡುವೆ ಕ್ಯಾಟರ್ ಫೈನಲ್ ನಡೆಯಲಿದೆ. 4ನೇ ವರ್ಷದ ಪಂದ್ಯಾವಳಿ ಸಾವಿರಾರು ಕಬಡ್ಡಿ ಪ್ರೇಮಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ಗ್ರಾಮೀಣ ಭಾಗದಿಂದ ಮಹಿಳೆಯರಾದಿಯಾಗಿ ಸಾವಿರಾರು ಮಂದಿ ಗ್ಯಾಲರಿಯಲ್ಲಿ ಕುಳಿತು ಅಂತಾರಾಷ್ಟ್ರೀಯ ಮಟ್ಟದ ಆಟಗಾರರ ಆಟವನ್ನು ಕಣ್ತುಂಬಿಕೊಂಡರು. ಪ್ರೊ ಕಬಡ್ಡಿಯ ಪ್ರತಿಭಾನ್ವಿತ ಆಟಗಾರರಾದ ಸಿದ್ದಾರ್ಥ್ ದೇಸಾಯಿ, ಪ್ರಶಾಂತ್ ರೈ, ಸುಖೇಶ್ ಹೆಗಡೆ, ಸಚಿನ್ ವಿಠಲ್,…

Read More

ನಾಪೋಕ್ಲು  ಮಾ.6 :  ನಾಪೋಕ್ಲು ಸಮೀಪದ ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಹೊದವಾಡ ಓಯಸಿಸ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಯೋಜಿಸಲಾದ 19ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಗಣ್ಯರು ಚಾಲನೆ ನೀಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ಹಂಸ ಕಳೆದ 19ವರ್ಷದಿಂದ ಮುಸ್ಲಿಂ ಸಮುದಾಯದ ಜನಾಂಗವನ್ನು ಒಗ್ಗೂಡಿಸಲು ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರೋದು ಶ್ಲಾಘನೀಯ ಎಂದರು. ಕ್ರೀಡಾಕೂಟವನ್ನು ಆಯೋಜಿಸುವುದು ಮುಖ್ಯವಲ್ಲ ಆದರೆ ಅದನ್ನು ಕೊನೆಯವರೆಗೆ ಶಿಸ್ತಿನಿಂದ ಮುನ್ನಡೆಸುವುದು ಬಹಳ ಮುಖ್ಯ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರೀಡಾಕೂಟ ಮುನ್ನಡೆಯಲಿ ಎಂದು ಶುಭಹಾರೈಸಿದರು. ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲ  ಶಿವಣ್ಣ ಮಾತನಾಡಿ, ಕ್ರೀಡೆ ಎಂಬುದು ಮನುಷ್ಯ ಜೀವನದ ಒಂದು ಭಾಗ. ಕ್ರೀಡೆಯಿಂದ ಮನುಷ್ಯ ಸದೃಢರಾಗಬಹುದು, ಕ್ರೀಡೆಯಲ್ಲಿ ಯಾವುದೇ ಧರ್ಮವನ್ನು ಕಾಣಲು ಸಾಧ್ಯವಿಲ್ಲ, ಕ್ರೀಡೆಯಲ್ಲಿ ಸೋತಾಗ ಕುಗ್ಗುವ ಮತ್ತು ಗೆದ್ದಾಗ ಹಿಗ್ಗುವ ಮನೋಭಾವನೆಯನ್ನು ಇಟ್ಟುಕೊಳ್ಳದೆ ಸೋಲೇ ಗೆಲುವಿನ ಮೆಟ್ಟಿಲು ಎಂಬ…

Read More