ಮಡಿಕೇರಿ ಮಾ.6 : ಮೇಕೇರಿಯ ಸ್ವಾಗತ ಯುವಕ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶ್ರೀ ಗೌರಿಶಂಕರ ದೇವಾಲಯದ ಸಭಾಂಗಣದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿ ಮುಂದಿನ ವರ್ಷಕ್ಕೆ ಕನಿಷ್ಠ 6 ಕಾರ್ಯಕ್ರಮಗಳನ್ನು ಯೋಜನಾಬದ್ಧವಾಗಿ ನಡೆಸಲು ತೀರ್ಮಾನಿಸಿತು. ನೂತನ ಅಧ್ಯಕ್ಷರಾಗಿ ಟಿ.ಎನ್. ಉಮೇಶ್ ,ಉಪಾಧ್ಯಕ್ಷರಾಗಿ ದೀಪಕ್ ಸಿಂಗ್ , ಕಾರ್ಯದರ್ಶಿಯಾಗಿ ಪವನ್ ಕುಮಾರ್ , ಸಹ ಕಾರ್ಯದರ್ಶಿಯಾಗಿ ಕೆ.ಎಸ್.ರಾಜೇಶ್ , ಖಜಾಂಚಿಯಾಗಿ ಭವನ್ ಕುಮಾರ್ , ಸಹ ಖಜಾಂಚಿಯಾಗಿ ಅರ್ಪಿತ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನಿಕಟಪೂರ್ವ ಅಧ್ಯಕ್ಷರಾದ ವಿಜು ಹರೀಶ್ ಹಾಗೂ ನಿಕಟಪೂರ್ವ ಖಜಾಂಚಿ ಬಿ.ಎಸ್.ಅಶೋಕ್ ಸೇರಿದಂತೆ ಹಾಜರಿದ್ದ ಯುವಕ ಸಂಘದ ಸರ್ವ ಸದಸ್ಯರುಗಳು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಅಲ್ಲದೆ ರಕ್ತದಾನ ಶಿಬಿರ ನಡೆಸಲು ಸಹಕರಿಸಿದ ಸರ್ವರ ಕೊಡುಗೆಯನ್ನು ಸಭೆಯಲ್ಲಿ ಸ್ಮರಿಸಲಾಯಿತು.
ಲೇಖಕ: admin
ಮಡಿಕೇರಿ ಮಾ.4 : ಕೊಡಗು ಜಿಲ್ಲೆಯಲ್ಲಿ ಸಾವಿರಾರು ವರ್ಷಗಳಿಂದ ನಮ್ಮ ಹಿರಿಯರು ಭಾಷಾ ಸಾಮರಸ್ಯ ಕಾಪಾಡಿಕೊಂಡು ಬಂದಿದ್ದಾರೆ, ಅದನ್ನು ಉಳಿಸಿಕೊಂಡು ಹೋಗಬೇಕು. ಕನ್ನಡ ಭಾಷೆಯನ್ನು ಪ್ರೀತಿಸಬೇಕು, ಗೌರವಿಸಬೇಕು ಜೊತೆಗೆ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದ್ದಾರೆ. ಗೋಣಿಕೊಪ್ಪದ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ 16 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಡಾ.ಐ.ಮಾ.ಮುತ್ತಣ್ಣ ವೇದಿಕೆಯಲ್ಲಿ ಮಾತನಾಡಿದ ಅವರು ಕೊಡಗಿನ ವಿಶಿಷ್ಟ ಸಂಸ್ಕೃತಿ ಎಲ್ಲೆಡೆ ಪಸರಿಸಲಿ ಎಂದರು. ಕೊಡಗಿನ ಗೌರಮ್ಮ, ಪಂಜೆ ಮಂಗೇಶರಾಯರು ಕನ್ನಡ ಸಾಹಿತ್ಯಕ್ಕೆ ಬಹು ದೊಡ್ಡ ಕೊಡುಗೆ ನೀಡಿದ್ದಾರೆ. ಇಂಥಹ ಹಿರಿಯ ಚೇತನಗಳನ್ನು ನೆನಪಿಸಿಕೊಳ್ಳುವ ಮೂಲಕ ಜಿಲ್ಲೆಯ ಸಾಹಿತ್ಯ ಸಂಸ್ಕೃತಿ ಬೆಳವಣಿಗೆಗೆ ಮುಂದಾಗಬೇಕು ಎಂದರು. ಕನ್ನಡ ಮತ್ತು ಸಂಸ್ಕೃತಿ ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಈಚಿಗೆ ಮುಗಿದ ವಿಧಾನಸಭಾ ಅಧಿವೇಷನದಲ್ಲಿ ಸರ್ಕಾರದ ಸುತ್ತೋಲೆಗಳು ಕನ್ನಡದಲ್ಲೆ ಇರಬೇಕು ಎಂಬ ಮಸೂದೆ ಹೊರಡಿಸಲಾಗಿದೆ. ಆಂಗ್ಲ ಮಾಧ್ಯಮ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಭಾಷೆಯಾಗಿ ಕಲಿಸುವ ಕೆಲಸ ಆಗಬೇಕು ಎಂದು ಹೇಳಿದರು.…
ಮಡಿಕೇರಿ ಮಾ.4 : ಸರ್ವೋಚ್ಛ ನಾಯಾಲಯದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರು ಕುಶಾಲನಗರ ಮತ್ತು ವಿರಾಜಪೇಟೆಯಲ್ಲಿ ನ್ಯಾಯಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಹಾಗೂ ಸೋಮವಾರಪೇಟೆಯಲ್ಲಿ ವಕೀಲರ ಭವನ ನಿರ್ಮಾಣಕ್ಕೆ ಭೂಮಿಪೂಜೆಯನ್ನು ಶನಿವಾರ ನೆರವೇರಿಸಿದರು. ಕುಶಾಲನಗರದಲ್ಲಿ ಮಾತನಾಡಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ಪ್ರತಿಯೊಬ್ಬರಿಗೂ ನ್ಯಾಯ ನಿಲುಕುವಂತಿರಬೇಕು. ಆ ನಿಟ್ಟಿನಲ್ಲಿ ಕುಶಾಲನಗರದ ಮುಖ್ಯ ಕೇಂದ್ರದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಮಾಡುತ್ತಿರುವುದು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು. ಪ್ರಜಾಪ್ರಭುತ್ವದಲ್ಲಿ ನ್ಯಾಯವು ಎಲ್ಲರಿಗೂ ಸಿಗುವಂತಾಗಬೇಕು. ಆ ನಿಟ್ಟಿನಲ್ಲಿ ಉತ್ತಮ ಕಟ್ಟಡ ನಿರ್ಮಾಣವಾಗಲಿ ಎಂದು ಅವರು ಆಶಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರು ಮಾತನಾಡಿ ತಾಲ್ಲೂಕು ಕೇಂದ್ರಗಳಲ್ಲಿ ನ್ಯಾಯಾಲಯ ಕಟ್ಟಡಗಳು ನಿರ್ಮಾಣವಾಗುತ್ತಿರುವುದು ಎಲ್ಲರಿಗೂ ಅನುಕೂಲ ಆಗಲಿದೆ ಎಂದರು. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಎಂ.ಭೃoಗೇಶ್ ಅವರು ಮಾತನಾಡಿ ಸ್ವಂತ ಕಟ್ಟಡ ನಿರ್ಮಾಣ ಆಗುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕುಶಾಲನಗರದ ವಕೀಲರ ಸಂಘದ ಅಧ್ಯಕ್ಷರಾದ…
ಸುಂಟಿಕೊಪ್ಪ, ಮಾ.5 : ಸುಂಟಿಕೊಪ್ಪ ಜೆಸಿಐ ಸಂಸ್ಥೆಯ (ಜೂನಿಯರ್ ಛೇಂಬರ್ ಆಫ್ ಇಂಟರ್ ನ್ಯಾಷನಲ್ ) 2023 ನೇ ಸಾಲಿನ ಘಟಕದ ಅಧ್ಯಕ್ಷರಾಗಿ ಟಿ.ಜಿ.ಪ್ರೇಮಕುಮಾರ್ ಆಯ್ಕೆಯಾಗಿದ್ದಾರೆ. ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ಅಧ್ಯಕ್ಷ ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಸ್ಥೆಯ ಪದಾಧಿಕಾರಿಗಳ ಸಭೆಯಲ್ಲಿ ಜಿಲ್ಲೆಯಲ್ಲಿ ವಿಜ್ಞಾನ ಮತ್ತು ಪರಿಸರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಟಿ.ಜಿ.ಪ್ರೇಮಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜೆಸಿಐ ಸಂಸ್ಥೆಯ ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ (ಪೊನ್ನಪ್ಪ) ಹಾಗೂ ಖಜಾಂಚಿಯಾಗಿ ನಂದಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಬಿ.ಕೆ. ಸತೀಶ್ ಕುಮಾರ್ ತಿಳಿಸಿದ್ದಾರೆ. ::: ಮಾ.8 ರಂದು ಜೆಸಿಐ ಪದಗ್ರಹಣ ::: ಸುಂಟಿಕೊಪ್ಪ ಜೆಸಿಐ ಸಂಸ್ಥೆಯ 2023 ನೇ ಸಾಲಿನ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮಾ.8 ರಂದು ಸುಂಟಿಕೊಪ್ಪ ಸಂತಮೇರಿ ಶಾಲಾ ಸಭಾಂಗಣದಲ್ಲಿ ಸಂಜೆ 6.00 ಗಂಟೆಗೆ ಜೆಸಿಐ ಸಂಸ್ಥೆಯ ಅಧ್ಯಕ್ಷ ಬಿ.ಕೆ. ಸತೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜೆಸಿಐ ವಲಯ – 14 ರ ವಲಯಾಧ್ಯಕ್ಷೆ ಯಶಸ್ವಿನಿ ಪದಗ್ರಹಣ…
ಮಡಿಕೇರಿ ಮಾ.4 : ಜಾನಪದ ಕಲಾವಿದೆ ಕೊಡಗಿನ ಕುಡಿಯರ ಶಾರದಾ ಅವರಿಗೆ ಜಾನಪದ ಲೋಕದ ಸಂಸ್ಥಾಪಕ ದಿವಂಗತ ಎಚ್. ಎಲ್. ನಾಗೇಗೌಡ ವಾರ್ಷಿಕ ಪ್ರಶಸ್ತಿ ಲಭಿಸಿದೆ. ಬಿಡದಿಯ ರಾಮನಗರದಲ್ಲಿರುವ ಜಾನಪದ ಕಲಾ ಲೋಕದಲ್ಲಿ ಪ್ರತಿ ವರ್ಷ ನಡೆಯಲಿರುವ ಜಾನಪದ ಕಲಾ ಮೇಳದಲ್ಲಿ ಜಾನಪದ ಲೋಕದ ಸಂಸ್ಥಾಪಕ ದಿವಂಗತ ಹೆಚ್. ಎಲ್ ನಾಗೇಗೌಡ ರವರ ನೆನಪಿನಲ್ಲಿ ಪ್ರಶಸ್ತಿ ನೀಡುತ್ತಾ ಬರಲಾಗುತ್ತಿದೆ. ಈ ಬಾರಿ ಕುಡಿಯರ ಶಾರದಾ ಅವರು ಪ್ರಶಸ್ತಿಗೆ ಭಾಜನರಾಗಿದ್ದು, ಕಲಾಮೇಳ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.
ಮಡಿಕೇರಿ ಮಾ.4 : ಹುಲಿ ಉಗುರು ಮತ್ತು ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸುವಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳ ಯಶಸ್ವಿಯಾಗಿದೆ. ಪ್ರಕರಣಕ್ಕೆ ಸಂಬoಧಿಸಿದoತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ::: ಹುಲಿ ಉಗುರು ::: ಶ್ರೀಆಂಜನೇಯ ದೇವಸ್ಥಾನದಿಂದ ದೇಚೂರಿಗೆ ತೆರಳುವ ರಸ್ತೆಯಲ್ಲಿ ಪಿ.ಬಿ.ಸೂರ್ಯ ಪ್ರಕಾಶ್ ಎಂಬಾತ ಹುಲಿಯ 4 ಉಗುರುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಮಾಹಿತಿ ಅರಿತ ಮಡಿಕೇರಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಹುಲಿ ಉಗುರು ಸಹಿತ ಆರೋಪಿಯನ್ನು ವಶಕ್ಕೆ ಪಡೆದರು. ::: ನಕ್ಷತ್ರ ಆಮೆ ::: ನಗರದ ಶ್ರೀಓಂಕಾರೇಶ್ವರ ದೇವಾಲಯಕ್ಕೆ ತೆರಳುವ ರಸ್ತೆಯಲ್ಲಿ ಬಿ.ವೇಣು ಎಂಬಾತ ಅಳಿವಿನಂಚಿನಲ್ಲಿರುವ ಒಂದು ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸಿದ್ದಾನೆ ಎನ್ನುವ ಆರೋಪದಡಿ ದಾಳಿ ನಡೆಸಿದ ಮಡಿಕೇರಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿದ್ದಾರೆ. ಒಂದು…
ಮಡಿಕೇರಿ ಮಾ.4 : ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ಮಾ.8 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದೆಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬುಧವಾರ ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೊಡವ ಮಹಿಳೆಯರ ಪರವಾಗಿ ಹಕ್ಕೊತ್ತಾಯಗಳನ್ನು ಮಂಡಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಅತ್ಯಂತ ಸೂಕ್ಷ್ಮ ಕೊಡವ ಬುಡಕಟ್ಟು ಜನಾಂಗದ ಮಹಿಳೆಯರಿಗೆ ಸಂವಿಧಾನದತ್ತವಾದ ಹಕ್ಕುಗಳನ್ನು ನೀಡಬೇಕು. ಸ್ವಾಯತ್ತ ಕೊಡವ ಲ್ಯಾಂಡ್ ಘೋಷಿಸಬೇಕು, ನೆಲ, ಜಲ, ಭಾಷೆ, ಸಂಸ್ಕೃತಿ, ಪರಪಂಪರೆ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯದೊಂದಿಗೆ ಸಾಂವಿಧಾನಿಕ ಭದ್ರತೆಯನ್ನು ಖಾತ್ರಿ ಪಡಿಸಬೇಕು. ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ನೀಡಬೇಕು. ಕೊಡವರ ಜನ್ಮಸಿದ್ಧ ಹಕ್ಕಾಗಿರುವ ಕೋವಿ ಹೊಂದುವ ವಿನಾಯಿತಿಯನ್ನು ಶಾಶ್ವತಗೊಳಿಸಬೇಕು. ಆ ಮೂಲಕ ಆಡಳಿತ ವ್ಯವಸ್ಥೆಗಳು ಕೊಡವ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಬೇಕೆಂದು ಒತ್ತಾಯಿಸುವುದಾಗಿ ನಾಚಪ್ಪ…
ಗೋಣಿಕೊಪ್ಪಲು ಮಾ.4 : ‘ಕನ್ನಡ’ದ ಅರಿವನ್ನು ಹೊಂದದೆ ಈ ನಾಡಿನಲ್ಲಿ ಬದುಕಲು ಸಾಧ್ಯವಿಲ್ಲವೆಂಬ ವಾತಾವರಣವನ್ನು ನಾವು ಸೃಷ್ಟಿಸಿಕೊಳ್ಳಲು ಸಮರ್ಥರಾಗುವುದು ಅತ್ಯವಶ್ಯ, ಇವೆಲ್ಲವೂ ನಮ್ಮಿಂದಲೆ ಆರಂಭವಾಗಬೇಕೆಂಬ ಆಶಯವನ್ನು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಡಾ. ತೀತಿರ ರೇಖಾ ವಸಂತ್ ವ್ಯಕ್ತಪಡಿಸಿದರು. ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ ಡಾ. ಐ.ಮಾ.ಮುತ್ತಣ್ಣನವರ ಭವ್ಯ ವೇದಿಕೆಯಲ್ಲಿ ಆಯೋಜಿತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೊರಗಿನ ಜನ ಕೊಡಗಿನಲ್ಲಿ ಬಂದಿರುವುದು ಕೊಡಗಿನವರು ಹೊರಭಾಗಗಳಲ್ಲಿ ಇರಬೇಕಾಗುವ ಜಾಗತಿಕ ಅನಿವಾರ್ಯತೆಗಳನ್ನು ನಾವು ತಪ್ಪಿಸಲಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಹೊರ ಊರಲ್ಲಿರುವವರು ಮಾತೃ ಸಂಸ್ಕೃತಿ ಯನ್ನು ಮರೆಯದಿರಬೇಕು. ಹೊರಗಿಂದ ಬಂದವರು ನಿಂತನೆಲದ, ಭಾಷೆ, ಸಂಸ್ಕೃತಿಯನ್ನು ಪ್ರೀತಿಸಬೇಕು, ಗೌರವಿಸಬೇಕೆಂದು ಅಭಿಪ್ರಾಯಿಸಿದರು. ಇತರ ಭಾಷೆಗಳ ಉತ್ತ ಮಿಕೆಯನ್ನು ನಮ್ಮದಾಗಿಸಿಕೊಳ್ಳೋಣ-ನೆರೆಯವರ ತೋಟದ ಮಲ್ಲಿಗೆಯೂ ಕೂಡ ಪರಿಮಳವನ್ನೇ ಸೂಸುತ್ತದೆ ಎಂಬ ಭಾವದೊಂದಿಗೆ ಎಲ್ಲ ಭಾಷೆಗಳಲ್ಲೂ, ಸಾಹಿತ್ಯದಲ್ಲೂ ಇರುವ ಸೊಗಸನ್ನು, ಉತ್ತಮಿಕೆಯನ್ನು, ನಮ್ಮದಾಗಿಸಿಕೊಳ್ಳುವ ವಿಶಾಲ ಮನಸ್ಸು ನಮ್ಮೆಲ್ಲರದಾಗಬೇಕು. ನಮ್ಮ ಮಕ್ಕಳದ್ದಾಗಬೇಕು. ಈ ಎಲ್ಲಾ…
ಸೋಮವಾರಪೇಟೆ ಮಾ.4 : ಒಕ್ಕಲಿಗರ ಯುವವೇದಿಕೆ, ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿರುವ 4ನೇ ವರ್ಷದ ಒಕ್ಕಲಿಗರ ಕಪ್ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾವಳಿಗೆ ಎಸ್.ಜಿ.ಮೇದಪ್ಪ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಜನರ ಅಚ್ಚುಮೆಚ್ಚಿನ ಕ್ರೀಡೆ ಕಬಡ್ಡಿ. ಇಂತಹ ಪಂದ್ಯ್ಯಾವಳಿ ನಡೆಸುವುದರಿಂದ ಕ್ರೀಡಾಭಿಮಾನಿಗಳಿಗೆ ರಸದೌತಣ ನೀಡುತ್ತದೆ. ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಗ್ರಾಮೀಣ ಕ್ರೀಡಾಕೂಟಕ್ಕೆ ಸರ್ಕಾರ ರೂ. 5 ಲಕ್ಷದ ಆರ್ಥಿಕ ನೆರವು ನೀಡಲು ಮುಂದೆ ಬಂದಿದೆ. ಮುಂದಿನ ಸಾಲಿನಲ್ಲಿ ಪಂದ್ಯಾವಳಿ ನಡೆಸಿದಲ್ಲಿ ಶೇ. 50ರಷ್ಟು ಖರ್ಚನ್ನು ಕ್ರೀಡಾ ಇಲಾಖೆ ಭರಿಸಲು ಮುಂದಾಗಿದೆ ಎಂದು ಹೇಳಿದರು. ಯುವ ವೇದಿಕೆ ಅಧ್ಯಕ್ಷ ಕೆ.ಬಿ. ಸುರೇಶ್, ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ಪ.ಪಂ ಅಧ್ಯಕ್ಷ ಪಿ.ಕೆ.ಚಂದ್ರು, ಪ್ರಮುಖರಾದ ಪಿ.ಕೆ.ರವಿ, ಬಿ.ಜೆ.ದೀಪಕ್, ಗಿರೀಶ್ ಮಲ್ಲಪ್ಪ, ಕೆ.ಎಂ.ಲೋಕೇಶ್, ಮಂಜೂರು ತಮ್ಮಣ್ಣಿ, ಜಿಲ್ಲಾ ಅಮೆಚೂರ್ ಅಸೋಸಿಯೇಷನ್ ಅಧ್ಯಕ್ಷ ಉತ್ತಪ್ಪ, ರಾಜ್ಯ ಕಬಡ್ಡಿ ತೀರ್ಪುಗಾರರ…
ಸೋಮವಾರಪೇಟೆ ಮಾ.4 : ಅಕ್ರಮ ಬಾಂಗ್ಲಾ ವಲಸಿಗ ಕಾರ್ಮಿಕರ ಕ್ರಿಮಿನಲ್ ಚಟುವಟಿಕೆಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಕೊಡಗು ಸುರಕ್ಷಾ ಸಮಿತಿ ವತಿಯಿಂದ ಸೋಮವಾರಪೇಟೆ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಮಿತಿಯ ಪ್ರಮುಖರು ಹಾಗೂ ಕಾರ್ಯಕರ್ತರು ತಹಶೀಲ್ದಾರ್ ನರಗುಂದ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಕೊಡಗು ಜಿಲ್ಲೆಯ ಕಾಫಿ ತೋಟ ಮತ್ತು ಇತರ ಕಾರ್ಮಿಕ ವಲಯಗಳಲ್ಲಿ ಅಕ್ರಮ ಬಾಂಗ್ಲಾ ಮೂಲದವರು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಬಹುತೇಕರು ನಕಲಿ ದಾಖಲೆ ಸೃಷ್ಠಿಸಿಕೊಂಡು ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುತ್ತಾರೆ ಎಂದು ಆರೋಪಿಸಿದರು. ಜಿಲ್ಲೆಯ ವಿವಿಧೆಡೆಗಳಲ್ಲಿ ಬಾಂಗ್ಲ ವಲಸಿಗರಿಂದ ನಿರಂತರವಾಗಿ ಕ್ರಿಮಿನಲ್ ಪ್ರಕರಣಗಳು ನಡೆಯುತ್ತಿದ್ದು, ಇದು ಮುಂದುವರಿದರೆ ಸಮಸ್ಯೆಯಾಗಲಿದೆ. ಆದ್ದರಿಂದ ತಕ್ಷಣವೇ ಪೊಲೀಸ್ ಇಲಾಖೆ, ಕಾರ್ಮಿಕರ ದಾಖಲಾತಿಗಳನ್ನು ಪರಿಶೀಲಿಸಬೇಕೆಂದು ಆಗ್ರಹಿಸಿದರು. ಸುರಕ್ಷಾ ಸಮಿತಿಯ ಪ್ರಮುಖರಾದ ಸುಭಾಷ್ ತಿಮ್ಮಯ್ಯ, ಉಮೇಶ್, ಭೋಜೇಗೌಡ, ಮಹೇಶ್ ತಿಮ್ಮಯ್ಯ ಮತ್ತಿತರರು ಇದ್ದರು.






