ಲೇಖಕ: admin

ಮಡಿಕೇರಿ ಮಾ.2 : ಮೇಘಾಲಯ ಮತ್ತು ತ್ರಿಪುರ ರಾಜ್ಯದಲ್ಲಿ ಬಿಜೆಪಿ ಹಣ ಹಾಗೂ ತೋಳ್ಬಲದಿಂದ ಗೆಲುವು ಸಾಧಿಸಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಣ, ತೋಳ್ಬಲದಿಂದ ಬಲದಿಂದ ಬಿಜೆಪಿ ಆ ರಾಜ್ಯಗಳಲ್ಲಿ ಗೆಲವು ಸಾಧಿಸಿದೆ. ಆದರೆ ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಇದು ಕಾಂಗ್ರೆಸ್ ಪಾಲಿಗೆ ಆಶಾದಾಯಕವಾಗಿದೆ. ಕರ್ನಾಟಕದಲ್ಲಿ ಸ್ಪಷ್ಟವಾಗಿ ಕಾಂಗ್ರೆಸ್ ಪರ ಅಲೆಯಿದ್ದು, ದೇಶದಲ್ಲಿ ಮೋದಿ ಆಡಳಿತ ಅಂತ್ಯಕ್ಕೆ ಈ ರಾಜ್ಯವೇ ನಾಂದಿ ಹಾಡಲಿದೆ ಎಂದು ಭವಿಷ್ಯ ನುಡಿದರು. ಇನ್ನು 10 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಕಾಂಗ್ರೆಸ್ ಪರ ಮತದಾರರ ಒಲವು ವ್ಯಕ್ತವಾಗಿದ್ದು, ಬಿಜೆಪಿಯ ಲಂಚಾವತಾರದಿAದ ಜನ ಬೇಸತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಅನೇಕ ಸೌಲಭ್ಯಗಳನ್ನು ರೂಪಿಸಿದೆ ಎಂದರು. ಕೊಡಗಿನ ಕಾಫಿ ಬೆಳೆಗಾರರ ಸಮಸ್ಯೆ ಮತ್ತು ವನ್ಯಜೀವಿ…

Read More

ಸೋಮವಾರಪೇಟೆ ಮಾ.2 : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದಲ್ಲಿ ಏಕಕಾಲಕ್ಕೆ ನಡೆದ ಅನ್‌ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪಿ.ಬಿ.ಸಂಜನ ಜಿಲ್ಲಾ ಹಂತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇ ಶಾಲೆಯ ಕೆ.ಸೌಜನ್ಯ ದ್ವಿತೀಯ ಮತ್ತು ಸ್ನೇಹಶ್ರೀ ತೃತೀಯ ಸ್ಥಾನ ಪಡೆದಿದ್ದಾರೆ.

Read More

ಮಡಿಕೇರಿ ಮಾ.2 : ಬೆಂಗಳೂರಿನ ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕೊಡಗಿನ ಕನ್ನಂಡಬಾಣೆಯ ಪಿ.ಎಂ.ಕೌಶಿಕ್ ಎಂಜಿನಿಯರಿಂಗ್ ಬಯೋಟೆಕ್ನಾಲಜಿಯಲ್ಲಿ ಎರಡು ಚಿನ್ನದ ಪದಕ ಪಡೆದಿದ್ದಾರೆ. ಇವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪದವಿ ಪ್ರಮಾಣಪತ್ರ ಮತ್ತು ಚಿನ್ನದ ಪದಕವನ್ನು ಸ್ವೀಕರಿಸಿದರು. ಪಿ.ಎಂ.ಕೌಶಿಕ್ ಕನ್ನಂಡಬಾಣೆಯ ಪಾಂಡೀರ ಮಹೇಶ ಹಾಗೂ ರಾಧ ದಂಪತಿ ಪುತ್ರ.

Read More

ಮಡಿಕೇರಿ ಮಾ.2 : ಕರಿಕೆ ಗ್ರಾ.ಪಂ ವ್ಯಾಪ್ತಿಯ ವಿವಿಧೆಡೆ ಬೀಸಿದ ಭಾರೀ ಗಾಳಿಗೆ ಮರ ಹಾಗೂ ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಘಟನೆ ನಡೆದಿದೆ. ಕಳೆದ ಮೂರು ದಿನಗಳಿಂದ ಭಾರೀ ಗಾಳಿ ಬೀಸುತ್ತಿದ್ದು, ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಗ್ರಾಮೀಣ ಭಾಗದ ಜನರು ಹಾಗೂ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಮರ ಮುರಿದು ವಿದ್ಯುತ್ ಲೈನ್ ಮೇಲೆ ಬಿದಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಇದರಿಂದ ಬಾಳೆಬಳಪು ಕುಂಡತ್ತಿಕಾನ ಕಾಲೋನಿಯ ಏಳು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗಲಿದ್ದು, ಸೆಸ್ಕ್ ಇಲಾಖೆ ಮರಗಳನ್ನು ತೆರವುಗೊಳಿಸಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Read More

ಕುಶಾಲನಗರ ಮಾ.2 : ಕುಶಾಲನಗರ ತಾಲ್ಲೂಕು ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ  ಮತಗಟ್ಟೆಗಳಲ್ಲಿ  ಎಲೆಕ್ಟ್ರಾನಿಕ್  ಮತ ಯಂತ್ರದಲ್ಲಿ ಮತ ಚಲಾವಣೆಯ  ಬಗ್ಗೆ ಅರಿವು ಕಾರ್ಯಾಗಾರ  ನಡೆಯಿತು. ಕಳೆದ ಚುನಾವಣಾ ಸಂದರ್ಭದಲ್ಲಿ  ಅತಿ ಕಡಿಮೆ ಪ್ರಮಾಣದಲ್ಲಿ  ಮತದಾನವಾದ  ಮತಕಟ್ಟೆಗಳ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.  ಮತಯಂತ್ರಗಳ ಜೋಡಣೆ ಮಾಡುವ ಮೂಲಕ  ಮುಕ್ತ ಮತದಾನ ಮಾಡುವ ಬಗ್ಗೆ ಅಣಕು ಪ್ರದರ್ಶನವನ್ನು  ನಡೆಸಲಾಯಿತು.  ಕಾವೇರಿ ನೀರಾವರಿ ನಿಗಮದ ಪುನರ್ವಸತಿ  ವಿಭಾಗದ ಕಾರ್ಯಪಾಲಕ ಇಂಜಿನಿಯರ್  ಆಗಿರುವ ಮತದಾನ ಕೇಂದ್ರಗಳ  ಸೆಕ್ಟರ್ ಅಧಿಕಾರಿ ಐ. ಕೆ ಪುಟ್ಟಸ್ವಾಮಿ ಅವರ ನೇತೃತ್ವದಲ್ಲಿ ಅಧಿಕಾರಿಗಳು  ಮತಯಂತ್ರವನ್ನು  ಜೋಡಣೆ ಮಾಡಿ  ಮತ ಚಲಾವಣೆ ಬಗ್ಗೆ ಅರಿವು ಮೂಡಿಸಿದರು.   ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ   106, 144 ,145 146,148 149 ಮತ್ತು 150 ಕ್ರಮ ಸಂಖ್ಯೆಗಳ ಮತಕಟ್ಟೆಗಳಲ್ಲಿ ಮತದಾರರಿಗೆ ಅಣಕು ಪ್ರದರ್ಶನ ನಡೆಸಲಾಯಿತು. ಕೂಡಿಗೆ ವಿಭಾಗದ ಸೆಕ್ಟರ್ ಅಧಿಕಾರಿ ಆಗಿರುವ ಹಾರಂಗಿ ಪುನರ್ವಸತಿ ವಿಭಾಗದ  ಕಾರ್ಯಪಾಲಕ ಅಭಿಯಂತರ ಐ. ಕೆ ಪುಟ್ಟಸ್ವಾಮಿ,…

Read More

ಮಡಿಕೇರಿ ಮಾ.2 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯನ್ನಾಗಿ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್ ಅವರನ್ನು ಪಕ್ಷದ ವರಿಷ್ಠರು ಘೋಷಿಸಿದ್ದಾರೆ. ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಜಿಲ್ಲೆಗೆ ಆಗಮಿಸುವ ಸಂದರ್ಭ ಕುಶಾಲನಗರದಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಅಮೀನ್ ಮೊಹಿಸಿನ್ ಅವರನ್ನು ಸಂಭ್ರಮದಿಂದ ಬರಮಾಡಿಕೊಂಡರು. ಪಕ್ಷದ ಪರ ಘೋಷಣೆಗಳನ್ನು ಕೂಗಿದರು. ಮಡಿಕೇರಿ ಕ್ಷೇತ್ರದಲ್ಲಿ ಅಮೀನ್ ಮೊಹಿಸಿನ್  ಸ್ಪರ್ಧೆ ಕುತೂಹಲ ಮೂಡಿಸಿದೆ.

Read More

ಮಡಿಕೇರಿ ಮಾ.2 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಶ್ರೀ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವು ಮಾರ್ಚ್, 03 ರಂದು ಬೆಳಗ್ಗೆ 11 ಗಂಟೆಗೆ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ, ಸಾಕ್ಷರತೆ, ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ವೆಂಕಟ ನಾಯಕ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಮಾ.2 : ರೆಡ್‍ಕ್ರಾಸ್‍ನ ನೂತನ ಆರೋಗ್ಯ ತಪಾಸಣಾ ಮೊಬೈಲ್ ಘಟಕದ ಪ್ರಯೋಜನವು ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ಜನತೆಗೆ ಹೆಚ್ಚಿನ ರೀತಿಯಲ್ಲಿ ದೊರಕುವಂತಾಗಲಿ ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಅವರು ಸಲಹೆ ನೀಡಿದ್ದಾರೆ. ಭಾರತೀಯ ರೆಡ್‍ಕ್ರಾಸ್‍ನ ಕೊಡಗು ಘಟಕವು 75 ಲಕ್ಷ ರು. ವೆಚ್ಚದಲ್ಲಿ ಆರೋಗ್ಯ ತಪಾಸಣೆ, ಚಿಕಿತ್ಸೆಗೆ ಮೀಸಲಿರಿಸಿದ ಸುಸಜ್ಜಿತ ಮೊಬೈಲ್ ಚಿಕಿತ್ಸಾ ಘಟಕಕ್ಕೆ ನಗರದ ಗಾಂಧಿ ಮಂಟಪದ ಮುಂದೆ ಆಯೋಜಿತ ಸರಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರೆಡ್‍ಕ್ರಾಸ್ ಕೊಡಗು ಜಿಲ್ಲೆಗೆ ನೀಡಿರುವ ಸುಸಜ್ಜಿತ ಆರೋಗ್ಯ ತಪಾಸಣಾ ಮೊಬೈಲ್ ಘಟಕವು ಆರೋಗ್ಯ ಇಲಾಖೆಗೆ ಮಹತ್ವದ ಕೊಡುಗೆಯಾಗಿದ್ದು, ಇದರ ಪ್ರಯೋಜನ ವಿವಿಧ ಇಲಾಖೆಗಳ ಸಹಕಾರದಲ್ಲಿ ಜನತೆಗೆ ದೊರಕುವಂತಾಗಬೇಕು ಎಂದು ಹೇಳಿದರು. ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾಗಿರುವ ರೆಡ್‍ಕ್ರಾಸ್ ಕೊಡಗನ್ನು ಗುರುತಿಸಿ ಮೊಬೈಲ್ ಘಟಕವನ್ನು ನೀಡಿದ್ದು ಪ್ರಶಂಸನೀಯ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಮಾತನಾಡಿ, ವೈದ್ಯಕೀಯ ಕಾಲೇಜಿನ ವೈದ್ಯರ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯು ಔಷಧಿ ಮತ್ತು ತಾಂತ್ರಿಕ…

Read More

ಸುಂಟಿಕೊಪ್ಪ ಮಾ.2: ಗದ್ದೆಹಳ್ಳ ನಾರ್ಗಾಣೆ ಗ್ರಾಮದ ಶ್ರೀದೇವಿ ಬಡಾವಣೆ ನಿವಾಸಿ ಪತ್ರಕರ್ತ ರಾಜು ರೈ ಅವರ ಅತ್ತೆ ಪದ್ಮಾವತಿ ( 85)  ಎಂಬವರು ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಸುಂಟಿಕೊಪ್ಪ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮೃತರು ಇರ್ವರು ಪುತ್ರಿಯರನ್ನು ಆಗಲಿದ್ದಾರೆ.

Read More

ಮಡಿಕೇರಿ ಮಾ.2 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವು ಮಾರ್ಚ್, 03 ರಂದು ಬೆಳಗ್ಗೆ 11 ಗಂಟೆಗೆ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ, ಸಾಕ್ಷರತೆ, ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಕೊಡಗು ಜಿ.ಪಂ. ಮಾಜಿ ಅಧ್ಯಕ್ಷರು ಹಗೂ ಜಿಲ್ಲಾ ಮರಾಠ ಸಮಾಜದ ಅಧ್ಯಕ್ಷರಾದ ಎಸ್.ಎನ್.ರಾಜಾರಾವ್, ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ವೆಂಕಟ ನಾಯಕ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ.

Read More