ಲೇಖಕ: admin

ಮಡಿಕೇರಿ ಡಿ.4 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿರಾಜಪೇಟೆಯ ರಸ್ತೆಗಳನ್ನು ಪರಿಶೀಲಿಸಿದರು. ಪುರಸಭಾ ವ್ಯಾಪ್ತಿಯಲ್ಲಿ ಹಾದು ಹೋಗುವ ರೂ.5.60 ಕೋಟಿಗಳ ಅನುದಾನದಲ್ಲಿ ಅಭಿವೃದ್ಧಿಗೊಳ್ಳುತ್ತಿರುವ, ಲೋಕೋಪಯೋಗಿ ರಸ್ತೆಗಳ ವೀಕ್ಷಣೆಯನ್ನು ಸ್ವತಃ ಕಾಲ್ನಡಿಗೆಯಲ್ಲಿ ಮೂಲಕ ತೆರಳಿ, ಅಧಿಕಾರಿಗಳ ತಂಡದೊಂದಿಗೆ ಚರ್ಚಿಸುತ್ತಾ ಅಗತ್ಯ ಇರುವ ಎಲ್ಲಾ ಕಡೆ ಸ್ವತಃ ಮುತುವರ್ಜಿಯಿಂದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕರು, ಈಗ ಮಳೆ ನಿಂತಿರುವ ಕಾರಣ ತುರ್ತು ಗತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅತಿ ಶೀಘ್ರದಲ್ಲಿ ಈ ಕಾಮಗಾರಿ ಪೂರ್ಣಗೊಂಡು ರಸ್ತೆ ಸಂಚಾರ ನಾಗರಿಕರಿಗೆ ಸುಗಮವಾಗಲಿದೆ ಎಂದು ಹೇಳಿದರು. ಈ ಬಾರಿಯ ತೀವ್ರ ಮಳೆಯಿಂದಾಗಿ ರಸ್ತೆಗಳು ಹಾನಿಯಾಗಿದ್ದು ಸಾರ್ವಜನಿಕರು ಕೆಲಸ ಪೂರ್ಣಗೊಳ್ಳುವ ತನಕ ಸಹಕರಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ನಗರ ಅಧ್ಯಕ್ಷರು ಮಾದಂಡ ತಿಮ್ಮಯ್ಯ, ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಮಾಜಿ ಅಧ್ಯಕ್ಷೆ…

Read More

ಕುಶಾಲನಗರ ಡಿ.4 NEWS DESK : ವಿದ್ಯಾರ್ಥಿಗಳು ಶಿಸ್ತು, ಸಂಯಮ ಹಾಗೂ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅಂಕಣಕಾರ ಡಾ.ಕೆ.ಪಿ.ಪುತ್ತೂರಾಯ ಹೇಳಿದರು.  ಪಟ್ಟಣದ ಬೈಚನಹಳ್ಳಿಯಲ್ಲಿರುವ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿವೇಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ನಿರ್ಣಾಯಕ ಘಟ್ಟವಾಗಿದ್ದು, ನಿರ್ದಿಷ್ಟ ಗುರಿಯೊಂದಿಗೆ ಕಠಿಣ ಪರಿಶ್ರಮದಿಂದ ಅಧ್ಯಯನಶೀಲತೆ ಕೈಗೊಂಡಲ್ಲಿ ಖಂಡಿತ ತಮ್ಮ ಜೀವನದಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದರು ನಿರಂತರ ಅಧ್ಯಯನದ ಮೂಲಕ ವಿದ್ಯಾರ್ಥಿಗಳು ಪುಸ್ತಕ ಜ್ಞಾನ ಬೆಳೆಸಿಕೊಳ್ಳಬೇಕು ಎಂದರು. ಶಿಸ್ತು ಬದ್ದ, ಶೀಲವಂತ ವಿದ್ಯಾರ್ಥಿಗಳೆ ಕಾಲೇಜಿನ ಆಧಾರ ಸ್ತಂಭವಾಗಿದೆ ಎಂದರು. ಸಮಾಜ ಸೇವೆ ಎಂದು ತಿಳಿದು ಶಿಕ್ಷಣ ಸಂಸ್ಥೆ ನಡೆಸಬೇಕು.ಯಾರು ಬೇಕಾದರೂ ವಿದ್ಯಾರ್ಥಿ, ಶಿಕ್ಷಕರು ಆಗಬಹುದು ಆದರೆ.ಎಲ್ಲರೂ ಸಂಸ್ಥಾಪಕರಾಗಲು ಸಾಧ್ಯವಿಲ್ಲ.ಅದಕ್ಕೆ ಯೋಗವು‌ ಬೇಕು, ಯೋಗ್ಯತೆಯು ಬೇಕು ಎಂದರು.ಶಿಕ್ಷಕರೊಂದಿಗೆ ಪೋಷಕರು ಕೈಜೋಡಿಸಿದರೆ ಎಂತಹ ವಿದ್ಯಾರ್ಥಿಯನ್ನು ಸರಿದಾರಿಗೆ ತಂದು ಮಾದರಿ ವಿದ್ಯಾರ್ಥಿಯಾಗಿ ರೂಪಿಸಲು ಸಾಧ್ಯ ಎಂದರು.  ಆಂಗ್ಲ ಪ್ರಾಧ್ಯಾಪಕ ಡಾ.ಎಚ್.ಆರ್.ಪಾಂಡುರಂಗ ಮಾತನಾಡಿ,ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ…

Read More

ಮಡಿಕೇರಿ ಡಿ.4 NEWS DESK : ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲಾ ವತಿಯಿಂದ ಅಂತರ ಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಸೃಷ್ಟಿ ಬಿ.ಎಸ್, ಶ್ರೀವತ್ಸ ಯು. ಎಸ್, ಮೊಹಮ್ಮದ್ ಶಿಫಾನ್ ಕೆ.ಸಿ ಭಾಗವಹಿಸಿ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡು, ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡರು. ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮಾಜಿ ಅಧ್ಯಕ್ಷರಾದ ಮೇಕೇರಿರ ಕೆ. ಕಾರ್ಯಪ್ಪ ಅವರ ಸ್ಮರಣಾರ್ಥಕವಾಗಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀಮನ್ ಸುದೇಶ್ ಬಿ.ಎಸ್ ರವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ವೃಂದ ದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಕಾರ್ಕಳ ಡಿ.4 NEWS DESK : ಕರ್ನಾಟಕದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಭೂಮಿಕೆಯನ್ನು ಶ್ರೀಮಂತಗೊಳಿಸುತ್ತಿರುವ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಮಹೋತ್ಸವ “ಕ್ರಿಯೇಟಿವ್ ಆವಿರ್ಭವ-2025” ಡಿ.4, 5 ಮತ್ತು 6 ರಂದು ವೈಭವದೊಂದಿಗೆ ನಡೆಯಲಿದೆ. ಮೂರು ದಿನಗಳ ಸಂಭ್ರಮವು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಕ್ಯಾಂಪಸ್‍ನಲ್ಲಿ ವಿವಿಧ ಸಾಂಸ್ಕೃತಿಕ, ವಿದ್ಯಾಭ್ಯಾಸಿಕ ಮತ್ತು ಮನರಂಜನಾ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗಲಿದೆ. ಡಿ.4 ರಂದು ಸಂಜೆ 6 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು,  ಸಾಂಸ್ಕೃತಿಕ ಸಂಭ್ರಮದ ಉದ್ಘಾಟನೆ ನಡೆಯಲಿದೆ. ಕರಾವಳಿಯ ಸಾಂಪ್ರದಾಯಿಕ ಕಲಾ ವೈಭವ, ಯಕ್ಷಗಾನ, ನೃತ್ಯ, ನಾಟಕ ಹಾಗೂ ಜಾನಪದ ಕಲಾಪ್ರದರ್ಶನಗಳು ಮುಖ್ಯ ಆಕರ್ಷಣೆಯಾಗಿವೆ. ಡಿ.5 ರಂದು ಮಧ್ಯಾಹ್ನ 2.30 ರಿಂದ ವಿವಿಧ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸಂಜೆ ಹಾಗೂ ವಿಶೇಷ ಅತಿಥಿ ಉಪನ್ಯಾಸಗಳು ನಡೆಯಲಿವೆ. ಡಿ.6 ರಂದು ಬೆಳಗ್ಗೆ 10.30 ಕ್ಕೆ ಸಾಧಕರಿಗೆ ಗೌರವ ಸಮರ್ಪಣೆ, ಸನ್ಮಾನ್ಯ ಅತಿಥಿಗಳಿಂದ ಸಂದೇಶಗಳು…

Read More

ಪುತ್ತೂರು ಡಿ.4 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಅಖಿಲೇಶ್ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ತಂಡಕ್ಕೆ ಆಯ್ಕೆಗೊಂಡಿದ್ದಾರೆ. ಆಂಧ್ರಪ್ರದೇಶÀ ಕಾಕಿನಾಡದ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಡಿ.10 ರಿಂದ 14ರ ವರೆಗೆ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ಚಾಂಪಿಯನ್‍ಶಿಪ್ 2025-26 ರಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.4 NEWS DESK : ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಬರುವ ರಸ್ತೆಗಳ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈಗಾಗಲೇ ಶಾಸಕರು ಮಳೆ ಕಡಿಮೆಯಾದೊಡನೆ ರಸ್ತೆ ಅಭಿವೃದ್ಧಿ ಕಡೆಗೆ ವಿಶೇಷ ಗಮನಹರಿಸುತ್ತಿದ್ದು, ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಹಾಗೂ ರಸ್ತೆ ನಿರ್ಮಾಣದ ಬಗ್ಗೆ ವಿಶೇಷ ಸಭೆಯನ್ನು ಇಂದು ಕರೆದಿದ್ದರು. ಈ ಸಂದರ್ಭ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಸೀಲ್ದಾರ್ ಪ್ರವೀಣ್, ಪುರಸಭೆ ಮುಖ್ಯ ಅಧಿಕಾರಿ ನಾಚಪ್ಪ, ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮಾಜಿ ಸದಸ್ಯರು ರಾಜೇಶ್ ಪದ್ಮನಾಭ, ಮತೀನ್, ರಾಫಿ, ಪೊಲೀಸ್ ಇಲಾಖೆಯ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಡಿ.4 NEWS DESK : ವಿರಾಜಪೇಟೆ ಬಾರ್ ಅಸೋಸಿಯೇಷನ್ ವತಿಯಿಂದ ವಕೀಲರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪೆರಂಬಾಡಿಯ ಖಾಸಗಿ ರೆಸಾರ್ಟ್‍ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು,  ಸಮಾಜದಲ್ಲಿ ವಕೀಲ ವೃತ್ತಿಯು ಅತ್ಯಂತ ಪವಿತ್ರ ಹಾಗೂ ವಿಶ್ವಾಸನೀಯವಾದುದಾಗಿದೆ. ನಿಮ್ಮಲ್ಲಿಗೆ ಬರುವ ನಿಮ್ಮ ಕಕ್ಷಿದಾರರ ವಿಶ್ವಾಸಕ್ಕೆ ತೆಗೆದುಕೊಂಡು ಅವರಿಗೆ ನ್ಯಾಯ ಕೊಡಿಸಲು ಸಕಲ ಪ್ರಯತ್ನ ಮಾಡುವುದೇ ವಕೀಲರ ಆದ್ಯ ಕರ್ತವ್ಯವಾಗಿದೆ ಎಂದು ಕಿವಿಮಾತು ಹೇಳಿದರು. ಎಲ್ಲಕ್ಕಿಂತ ಮಿಗಿಲಾಗಿ ನಾವೆಲ್ಲರೂ ಸಂವಿಧಾನಕ್ಕೆ ತಲೆಬಾಗಬೇಕು. ಇಂದಿನ ದಿನದಲ್ಲಿ ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿಯುವ ಕೆಲಸ ವಕೀಲರು ಮಾಡಬೇಕಾಗಿದೆ. ದೇಶದ ಭದ್ರತೆ, ದೇಶದ ಏಳಿಗೆ ಹಾಗೂ ದೇಶದ ಜನರ ಬದುಕಿಗೆ ದಾರಿದೀಪ ಆಗುವ ಕೆಲಸ ವಕೀಲರ ಪಾಲಿಗೆ ಲಭಿಸುತ್ತದೆ. ತಮ್ಮ ವೃತ್ತಿಯಲ್ಲಿ ಪ್ರಾಮಾಣಿಕತೆಯನ್ನು ಬೆಳೆಸಿಕೊಂಡು ತಮ್ಮನ್ನು ನಂಬಿದ ಕಕ್ಷಿದಾರರಿಗೆ ನ್ಯಾಯ ಒದಗಿಸಿಕೊಡುವುದೇ ವಕೀಲ ವೃತ್ತಿಯ ಪರಮಧರ್ಮ ಆಗಿರಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ  ನ್ಯಾಯಧಿಶರಾದ ನಟರಾಜ್, ಮಂಜುನಾಥ್, ಪ್ರದೀಪ್ ಪೊತದರ್, ವಿರಾಜಪೇಟೆ ಬಾರ್ ಅಸೋಸಿಯೇಷನ್…

Read More

ಮಡಿಕೇರಿ ಡಿ.4 NEWS DESK : ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ ಸಹಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಹಾಡಿರೆ ರಾಗಗಳ ತೂಗಿರೆ ದೀಪಗಳ’ ವಿಶೇಷ ಘಟಕ ಯೋಜನೆಯಡಿ ನಡೆದ  ಹಾಡು, ನೃತ್ಯ ವಿಶೇಷ ಹಾಗೂ ವಿಭಿನ್ನತೆಯೊಂದಿಗೆ ಸಾಂಸ್ಕೃತಿಕ ವೈವಿಧ್ಯತೆಗಳಿಗೆ ಸಾಕ್ಷಿಯಾಯಿತು. ಬೆಂಗಳೂರಿನ ಜೋಗಿಲ ಸಿದ್ದರಾಜು ಮತ್ತು ತಂಡದವರು ಹಾಡಿರೆ ರಾಗಗಳ ತೂಗಿರೆ ದೀಪಗಳ ಹಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗುರುವೆ ನಿನ್ನ ಆಟ ಬಲ್ಲವರ್ಯಾರೂ, ಶಿವನೇ ನಿನ್ನ ಆಟ ಬಲ್ಲವರ್ಯಾರೂ, ಚೆಲ್ಲಿದರೂ ಮಲ್ಲಿಗೆಯ ಬಾನಸು ಏರಿ ಮೇಲೆ, ಮಾದಪ್ಪ ಬರುವಾಗ, ಮಾಳೆಲ್ಲಾ ಗಮ್ಮೆಂದಿತು, ಮತ್ತಿತರ ಜಾನಪದ ಗೀತೆಗಳನ್ನು ಹಾಡುವ ಮೂಲಕ ಕಲಾಪ್ರೇಮಿಗಳನ್ನು  ಕುಣಿಯುವಂತೆ ಮಾಡಿದ್ದು, ವಿಶೇಷವಾಗಿತ್ತು.  ಮೈಸೂರು ಜಿಲ್ಲೆ ಎಚ್‍ಡಿಕೋಟೆ ತಾಲ್ಲೂಕಿನ ದೇವರಾಜು ಮತ್ತು ತಂಡದವರು ಸುಗಮ ಸಂಗೀತ ನುಡಿಸುವ ಮೂಲಕ ಗಮನ ಸೆಳೆದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಮಹೇಶ್ ಕುಮಾರ್ ಮತ್ತು ತಂಡದವರು ರಂಗ ಗೀತೆ ಹಾಡುವ ಮೂಲಕ ಗಮನ ಸೆಳೆದರು. ವಿರಾಜಪೇಟೆ ತಾಲ್ಲೂಕಿನ…

Read More

ಮಡಿಕೇರಿ ಡಿ.4 NEWS DESK : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆಟಿಇಟಿ)ಯನ್ನು ಸರ್ಕಾರದ ನಿರ್ದೇಶನ ಹಾಗೂ ಮಾರ್ಗಸೂಚಿಯಂತೆ ನಿಯಮಾನುಸಾರ ನಡೆಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ಸಿದ್ಧತೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಟಿಇಟಿ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ಗೊಂದಲಗಳಿಗೆ ಅವಕಾಶ ಮಾಡದೆ, ಸುಸೂತ್ರವಾಗಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಇರಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರವಹಿಸಬೇಕು. ಪರೀಕ್ಷಾ ಕೊಠಡಿಯಲ್ಲಿ ಗಾಳಿ, ಬೆಳಕು, ವಿದ್ಯುತ್ ಸಂಪರ್ಕ, ಕುಡಿಯುವ ನೀರು ಮತ್ತಿತರ ಕನಿಷ್ಠ ಸೌಲಭ್ಯ ಇರಬೇಕು ಎಂದು ಸಲಹೆ ನೀಡಿದರು. ಟಿಇಟಿ ಪರೀಕ್ಷೆಗೆ ನಿಯೋಜಿಸಿರುವ ಮೇಲ್ವಿಚಾರಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಎಲ್ಲರೂ ತಮ್ಮ ತಮ್ಮ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಬೇಕು. ಕಳೆದ ಬಾರಿಯಂತೆ ಈ ಬಾರಿಯು ಸಹ ವೆಬ್‍ಕಾಸ್ಟಿಂಗ್ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.…

Read More

ಮಡಿಕೇರಿ ಡಿ.3 NEWS DESK : ವಿಶೇಷಚೇತನರಿಗೆ ಅನುಕಂಪದ ಬದಲು ಅವಕಾಶಗಳನ್ನು ಕಲ್ಪಿಸಿದ್ದಲ್ಲಿ ಇತರರಂತೆ ಜೀವನ ನಡೆಸಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ವಿಶೇಷ ಚೇತನರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂದು ಶಾಸಕರಾದ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಕೊಡಗು ಶಾಖೆ ಮತ್ತು ವಿಶೇಷಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಓಂಕಾರ ಸದನದಲ್ಲಿ ಬುಧವಾರ ‘ಸಾಮಾಜಿಕ ಪ್ರಗತಿ ಸಾಧಿಸಲು ವಿಶೇಷ ಚೇತನರನ್ನು ಒಳಗೊಂಡ ಸಮಾಜ ರೂಪಿಸುವುದು’ ಎಂಬ ಘೋಷವಾಕ್ಯದೊಂದಿಗೆ ನಡೆದ ವಿಶ್ವ ವಿಶೇಷಚೇತನರ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು. ವಿಶೇಷ ಚೇತನರಿಗೂ ಸಹ…

Read More