ಲೇಖಕ: admin

ಮಡಿಕೇರಿ ಏ.7 :  ವಿಧಾನ ಸಭಾ ಚುನಾವಣೆಯಲ್ಲಿ ಮಡಿಕೇರಿ ಕ್ಷೇತ್ರದಿಂದ ಸ್ಪರ್ಧಾಕಾಂಕ್ಷಿಯಾಗಿದ್ದ ಹರಪ್ಪಳ್ಳಿ ರವೀಂದ್ರ ಅವರು ಕಾಂಗ್ರೆಸ್ ಟಿಕೆಟ್ ತಪ್ಪಿರುವ ಹಿನ್ನೆಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸರ್ವತೋಮುಖ ಪ್ರಗತಿಯ ಚಿಂತನೆಯಡಿ ಕೊಡಗಿನ ಚಿತ್ರಣವನ್ನೇ ಬದಲಿಸಬೇಕೆನ್ನುವ ಉದ್ದೇಶದಿಂದ ರಾಜಕೀಯ ಅಧಿಕಾರವನ್ನು ಪಡೆಯಲು ಕಾಂಗ್ರೆಸ್ ಪಕ್ಷದಿಂದ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಉದ್ದೇಶಿಸಿದ್ದೆ. ಕೊನೆಯ ಕ್ಷಣಗಳಲ್ಲಿ ಪಕ್ಷದ ಟಿಕೆಟ್ ವಂಚಿತನಾಗಿದ್ದೇನೆ. ಶನಿವಾರ ಶನಿವಾರಸಂತೆಯಲ್ಲಿ ಬೆಂಬಲಿಗರ ಸಭೆ ನಡೆಯಲಿದ್ದು, ಅಲ್ಲಿನ ನಿರ್ಧಾರದಂತೆ ಮುಂದಿನ ಹೆಜ್ಜೆ ಇಡುವುದಾಗಿ ತಿಳಿಸುತ್ತಲೆ, ಪಕ್ಷೇತರರಾಗಿ ಕಣಕ್ಕಿಳಿಯುವ ಸಾಧ್ಯತೆಗಳನ್ನು ತೆರೆದಿಟ್ಟು, ಏ.17 ರಂದು ನಾಮಪತ್ರ ಸಲ್ಲಿಕೆ ಮಾಡಬೇಕೆನ್ನುವ ಉದ್ದೇಶವಿದೆಯೆಂದು ತಿಳಿಸಿದರು. ಕಳೆದ ಎರಡೂವರೆ ದಶಕಗಳಿಂದ ಪ್ರಚಾರದ ಹಂಗಿಲ್ಲದೆ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬರುತ್ತಿದ್ದೇನೆ. ತಾನು ಒಕ್ಕಲಿಗರ ಸಂಘದ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹಂತದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವ ಕುಮಾರ್ ಅವರು, ಮಡಿಕೇರಿ ಕ್ಷೇತ್ರದಿಂದ ಟಿಕೆಟ್ ನೀಡುವ ಭರವಸೆ ನೀಡಿ ತನ್ನನ್ನು ಕಾಂಗ್ರೆಸ್‍ಗೆ ಕರೆ ತಂದರು. ಇದೀಗ…

Read More

ನಾಪೋಕ್ಲು ಏ.7 :   ದುಬೈಯ ಹೈ ಗೇಟ್ ಅಂತಾರಾಷ್ಟ್ರೀಯ ಶಾಲೆಯ ವತಿಯಿಂದ ನೀಡಲ್ಪಡುವ 2023ನೇ ಸಾಲಿನ ಉನ್ನತ ಪ್ರಭಾವಶಾಲಿ ಪ್ರಶಸ್ತಿಯನ್ನು ನಾಪೋಕ್ಲುವಿನ ಚೇರಿಯಪರಂಬು ನಿವಾಸಿ ಆಸಿಫ್ ಹಂಝ ಪಡೆದುಕೊಂಡಿದ್ದಾರೆ. ಆಸಿಫ್ ನಾಪೋಕ್ಲು ಸಮೀಪದ ಚೆರಿಯಪಂಬು ಗ್ರಾಮದ ಹಂಝ ಕತ್ತಣೀರ ಹಾಗೂ ಪರವಂಡ ಫಾತಿಮಾ ದಂಪತಿಯ ಪುತ್ರನಾಗಿದ್ದು, ಇವರು ದುಬೈಯ ಸೌಂದರ್ಯ ವರ್ಧಕದ ಖಾಸಗಿ ಸಂಸ್ಥೆಯಲ್ಲಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವರದಿ :ಝಕರಿಯ ನಾಪೋಕ್ಲು   

Read More

ಮಡಿಕೇರಿ ಏ.7 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 16ನೇ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಏ.21 ಮತ್ತು 22 ರಂದು ನಡೆಯಲಿದೆ. ಕೇರಳದ ಪಯ್ಯನೂರ್ ನ ಶ್ರೀ ಈಶ್ವರಿ ನಂಬೂದರಿ ಅವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಜರುಗಲಿದ್ದು, ಏ.21 ರಂದು ಸಂಜೆ 6 ಗಂಟೆಗೆ ಆಚಾರ್ಯರ ಆಗಮನ, ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಏ.22 ರಂದು ಬೆಳಿಗ್ಗೆ 7 ಗಂಟೆಗೆ ಮಹಾ ಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾ ಪೂಜೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.

Read More

ಮಡಿಕೇರಿ ಏ.7 : ಆಸ್ಟ್ರೇಲಿಯ ನ್ಯೂ ಸೌತ್ ವೇಲ್ಸ್ ರಾಜ್ಯದ ಅಸೆಂಬ್ಲಿ ಚುನಾವಣೆಯಲ್ಲಿ ಕೊಡಗಿನ ಕಲಿಯಂಡ ಚರಿಶ್ಮಾ ಭಾರೀ ಅಂತರದಲ್ಲಿ ಜಯ ಗಳಿಸಿ ಇತಿಹಾಸ ನಿರ್ಮಿಸಿದ್ದಾರೆ. ಚರಿಶ್ಮಾ ಕೊಳಕೇರಿಯ ಕಲಿಯಂಡ ಮಾದಪ್ಪ ಮತ್ತು ಭಾನುಮತಿಯವರ ಪುತ್ರಿ.

Read More

ಸೋಮವಾರಪೇಟೆ ಏ.6 : ಸೋಮವಾರಪೇಟೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಹನುಮ ಜಯಂತಿ ಪ್ರಯುಕ್ತ ಇಲ್ಲಿನ ಶ್ರೀರಾಮ ಮಂದಿರದಲ್ಲಿ ಗದಾಪೂಜಾ ಕಾರ್ಯಕ್ರಮ ಗುರುವಾರ ನಡೆಯಿತು. ಶ್ರೀ ಆಂಜನೇಯನ ಮತ್ತು ಅವನ ಶೌರ್ಯ ಸ್ವರೂಪದ ಆಶೀರ್ವಾದ ಪಡೆಯಲು, ಶ್ರೀ ಹನುಮಂತನ ಚರಣಗಳಲ್ಲಿ ಸಾಮೂಹಿಕವಾಗಿ ಪ್ರಾರ್ಥನೆಯನ್ನು ಮಾಡಿ, ಎಲ್ಲರೂ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಈ ಸಂದರ್ಭ ಹಿಂದೂ ಜನಜಾಗೃತಿ ಸಮಿತಿಯ ಪ್ರಮುಖರಾದ ಡಿ.ಎಂ. ಪ್ರದೀಪ್, ಬಿ.ಇ. ಅರುಣ್‌ಕುಮಾರ್, ಡಿ.ಕೆ. ಸುರೇಶ್, ಕಿಬ್ಬೆಟ್ಟ ಪವಿತ್ರ, ರಂಜಿನಿ, ಬಿ.ಜಿ. ರವಿ, ಪವಿತ್ರ ಲಕ್ಷ್ಮಿ ಕುಮಾರ್ ಸೇರಿದಂತೆ ಹಲವರು iದ್ದರು.

Read More

ಮಡಿಕೇರಿ ಏ.6 : ಕೊಡಗು ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ ಮೂಡಿದ್ದ ತೀವ್ರ ಕುತೂಹಲಕ್ಕೆ ಕೊನೆಗೂ ಪಕ್ಷದ ವರಿಷ್ಠರು ಅಂತ್ಯ ಹಾಡಿದ್ದಾರೆ. ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಡಾ.ಮಂತರ್ ಗೌಡ ಅವರನ್ನು ಘೋಷಿಸಿದ್ದಾರೆ. ಟಿಕೆಟ್‌ಗಾಗಿ ಮಾಜಿ ಸಚಿವ ಬಿ.ಎ.ಜೀವಿಜಯ, ಕೆಪಿಸಿಸಿ ಪ್ರಮುಖ ಹೆಚ್.ಎಸ್.ಚಂದ್ರಮೌಳಿ ಹಾಗೂ ಹರಪಳ್ಳಿ ರವೀಂದ್ರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಆದರೆ ಪಕ್ಷದ ಆಂತರಿಕ ಸಮೀಕ್ಷೆಯ ಮೂಲಕ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಒಲವು ಡಾ.ಮಂತರ್ ಗೌಡ ಅವರ ಪರ ಇದ್ದ ಕಾರಣ ಇವರ ಹೆಸರನ್ನು ಹೈಕಮಾಂಡ್ ಅಂತಿಮಗೊಳಿಸಿದೆ. ಅಲ್ಲದೆ ಮಂತರ್ ಗೆ ಟಿಕೆಟ್ ನೀಡಿದರೆ ಮಾತ್ರ ಪಕ್ಷದ ಪರ ಕೆಲಸ ಮಾಡುವುದಾಗಿ ಪದಾಧಿಕಾರಿಗಳು ಸಂದೇಶವನ್ನು ರವಾನೆ ಮಾಡಿದ್ದರು ಎಂದು ತಿಳಿದು ಬಂದಿದೆ. ಸ್ಥಳೀಯ ಸಂಸ್ಥೆಗಳಿoದ 2022 ರಲ್ಲಿ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಎಂ.ಪಿ.ಸುಜಾ ಕುಶಾಲಪ್ಪ ವಿರುದ್ಧ ಮಂತರ್ ಗೌಡ ಸ್ಪರ್ಧಿಸಿ 603 ಮತ ಪಡೆದು ಗಮನ ಸೆಳೆದಿದ್ದರು. ಸುಜಾ…

Read More

ಮಡಿಕೇರಿ ಏ.6 : ಕೊಡಗು ಜಿಲ್ಲಾ ಮತದಾರರ ಜಾಗೃತಿ ಸಮಿತಿ ಮತ್ತು ಜಿಲ್ಲಾಡಳಿತವು ಈ ಬಾರಿ ಮತದಾರ ಜಾಗೃತಿ ರಾಯಭಾರಿಗಳನ್ನಾಗಿ ಸಾಮಾನ್ಯರನ್ನೇ ಆಯ್ಕೆ ಮಾಡುವ ಮೂಲಕ ಗಮನ ಸೆಳೆದಿದೆ. ಮೇಕೇರಿ ಗ್ರಾಮದ ಎಸ್.ಕೆ.ಈಶ್ವರಿ, ಏಳನೇ ಹೊಸಕೋಟೆ ಸರ್ಕಾರಿ ಪ್ರೌಢ ಶಾಲೆ ಚಿತ್ರಕಲಾ ಶಿಕ್ಷಕರಾದ ಬಸವರಾಜ ಬಡಿಗೇರ್ ಹಾಗೂ ಚೇರಂಬಾಣೆ ಬಳಿಯ ಐವತ್ತೋಕ್ಲು ಗ್ರಾಮದ ಕೆ.ರವಿ ಮುತ್ತಪ್ಪ ಇವರು ರಾಯಬಾರಿಯಾಗಿ ಆಯ್ಕೆಯಾಗಿದ್ದು, ಇವರನ್ನು ಸ್ವೀಪ್ ಸಮಿತಿ ವತಿಯಿಂದ ಶಾಲೂ, ಫಲ ತಾಂಬೂಲ ನೀಡಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಸ್ವೀಪ್ ಸಮಿತಿಯಿಂದ ಹೊರತಂದಿರುವ ಪೋಸ್ಟರ್‍ಗಳನ್ನು ಬಿಡುಗಡೆ ಮಾಡಲಾಯಿತು. ಮೇಕೇರಿಯ ವಿಶೇಷ ಚೇತನ ಮಹಿಳೆ ಮೇಕೆರಿ ಗ್ರಾಮದ ಈಶ್ವರಿ, ಕುಶಾಲನಗರದ ಶಿಕ್ಷಕ ಬಸವರಾಜ ಬಡಿಗೇರ್, ಗೃಹರಕ್ಷಕ ದಳದ ಸಿಬ್ಬಂದಿ ರವಿಮುತ್ತಪ್ಪ ಅವರನ್ನು ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭೆಯ ಮತದಾರರ ಜಾಗೃತಿ ರಾಯಭಾರಿಗಳನ್ನಾಗಿ ಆಯ್ಕೆ ಮಾಡಲಾಗಿದೆ. ಮೇಕೇರಿ ಗ್ರಾಮದಲ್ಲಿ ನೆಲಸಿರುವ ಎಸ್.ಕೆ.ಈಶ್ವರಿ ಬಾಲ್ಯದಲ್ಲಿಯೇ ವಿಶೇಷಚೇತನರಾಗಿದ್ದು ಛಲಬಿಡದೇ ಹಂತಹಂತವಾಗಿ ಸಾಧನೆಯ ಹಾದಿಯಲ್ಲಿ ಸಾಗಿ 35 ರೀತಿಯ…

Read More

ಮಡಿಕೇರಿ ಏ.6 : ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ವತಿಯಿಂದ ವಾರಾಂತ್ಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಂಬಂಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಎಸ್.ಆಕಾಶ್ ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸ್ವೀಪ್ ಸಮಿತಿ ವತಿಯಿಂದ ಈಗಾಗಲೇ ಜಾಥ, ಫಲಪುಷ್ಪ ಪ್ರದರ್ಶನ ಸಂದರ್ಭದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಚುನಾವಣೆ ಘೋಷಣೆಯಾಗಿ ಮೇ, 10 ರಂದು ಮತದಾನ ನಡೆಯಲಿದ್ದು, ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಮತದಾನ ಹೆಚ್ಚಳಕ್ಕೆ ಯಾವ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಬಹುದು ಎಂಬ ಬಗ್ಗೆ ಸಲಹೆ ನೀಡುವಂತೆ ಕೋರಿದರು. ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶೇ.74 ರಷ್ಟು ಮತದಾನವಾಗಿತ್ತು. ಈ ಬಾರಿ ಶೇ.80 ಕ್ಕಿಂತ ಹೆಚ್ಚು ಮತದಾನ ಆಗಲು ಹೆಚ್ಚಿನ ಅರಿವು ಮೂಡಿಸಬೇಕಿದೆ. ಆ ನಿಟ್ಟಿನಲ್ಲಿ ಮತದಾನದ…

Read More

ಮಡಿಕೇರಿ ಏ.6 : ಜನಾಂಗದ ಮೂಲವನ್ನು ಅರಿತಾಗ ಮಾತ್ರ ನಮ್ಮ ಸಂಸ್ಕೃತಿ, ಭಾಷೆ, ಆಚಾರ, ವಿಚಾರ ಪದ್ದತಿ ಉಳಿಯುತ್ತದೆ ಎಂದು ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಹೇಳಿದರು. ಕೂರ್ಗ್ ಕಾಫಿ ವುಡ್ ಮೂವೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕೊಟ್ಟುಕತ್ತೀರಾ ಪ್ರಕಾಶ್ ಕಾರ್ಯಪ್ಪ ಕಥೆ-ನಿರ್ದೇಶನದ ಕೊಡವ ಚಲನಚಿತ್ರ “ಬೇರ್” (The Root) ಚಿತ್ರದ ಮುಹೂರ್ತ ಮೊಣ್ಣಂಡ ಶೋಭಾ ಸುಬ್ಬಯ್ಯ ಅವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕ್ಲಾಪ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ ಮೊಣ್ಣಂಡ ಶೋಭಾ ಸುಬ್ಬಯ್ಯ, ಕೊಡವರು ತಮ್ಮ ಸಂಸ್ಕೃತಿಯನ್ನು ಯಾವುದಾದರೊಂದು ರೂಪದಲ್ಲಿ ಉಳಿಸಿ ಬೆಳೆಸುವ ಪ್ರಯತ್ನ ಮಾಡಿ ಮತ್ತೊಬ್ಬರಿಗೆ ಪ್ರೇರಣೆ ನೀಡಬೇಕು ಎಂದರು. ಕೊಡವ ಭಾಷೆಯಲ್ಲಿ ಪ್ರಸ್ತುತ ಹಲವು ಸಿನಿಮಾಗಳು ನಿರ್ಮಾಣವಾಗುತ್ತಿದ್ದು, ಕೊಡವ ಭಾಷೆಯ ಚಲನಚಿತ್ರಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಅಲ್ಲದೆ ಕೊಡವ ಸಿನಿಮಾಗಳು ಬಂದ ನಂತರ ಕೊಡವ ಭಾಷೆ ಮಾತನಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಚಿತ್ರದ ಕಥೆ-ನಿರ್ದೇಶಕರಾದ ಕೊಟ್ಟುಕತ್ತೀರಾ ಪ್ರಕಾಶ್ ಕಾರ್ಯಪ್ಪ ಮಾತನಾಡಿ,…

Read More

ಮಡಿಕೇರಿ ಏ.6 :  ನಾಪೋಕ್ಲುವಿನಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ‘ಅಪ್ಪಚೆಟ್ಟೋಳಂಡ ಹಾಕಿ ಉತ್ಸವ’ ಕೊನೆಯ ಘಟ್ಟವನ್ನು ಪ್ರವೇಶಿಸುತ್ತಿದ್ದು, ಪಂದ್ಯಾವಳಿಯ ಸೆಮಿ ಫೈನಲ್ಸ್ ಏ.7 (ಇಂದು) ಮತ್ತು ಅಂತಿಮ ಪಂದ್ಯ ಏ.9 ರಂದು ನಡೆಯಲಿದೆಯೆಂದು ಪಂದ್ಯಾವಳಿ ಆಯೋಜನಾ ಸಮಿತಿಯ ಸಂಚಾಲಕ  ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ತಿಳಿಸಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಇಪ್ಪತ್ತು ದಿನಗಳಿಂದ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ನೋಂದಾಯಿಸಿಕೊಂಡ 336 ತಂಡಗಳ ಪೈಕಿ 329 ತಂಡಗಳು ಪಾಲ್ಗೊಂಡಿದ್ದು, ವಿವಿಧ ಕುಟುಂಬಗಳ 5 ಸಾವಿರ ಆಟಗಾರರು ಪಾಲ್ಗೊಂಡಿದ್ದಾರೆ. ಇಲ್ಲಿಯವರೆಗೆ ಒಟ್ಟು 957 ಗೋಲುಗಳು ವಿವಿಧ ಪಂದ್ಯಗಳಲ್ಲಿ ದಾಖಲಾಗಿದೆ. 49 ಪಂದ್ಯಗಳಲ್ಲಿ ವಿಜೇತ ತಂಡಗಳನ್ನು ಟೈಬ್ರೇಕರ್ ಮೂಲಕ ನಿರ್ಧರಿಸಲಾಗಿದೆ. ಒರಟಾಟಕ್ಕಾಗಿ 67 ಹಸಿರು, 11 ಹಳದಿ ಕಾರ್ಡ್‍ಗಳನ್ನು ತೋರಿಸಲಾಗಿದೆ. ತಾಂತ್ರಿಕ ತಂಡದಲ್ಲಿ 27 ಮಂದಿ ಕಾರ್ಯನಿರ್ವಹಿಸುತ್ತಿರುವುದಾಗಿ ಮಾಹಿತಿಯನ್ನಿತ್ತರು. ಯುವಕರನ್ನು ನಾಚಿಸಿದ ವೃದ್ಧರು- ಪಂದ್ಯಾವಳಿಯಲ್ಲಿ ನಾಪನೆರವಂಡ ಕುಟುಂಬ ತಂಡದಲ್ಲಿ 87ರ ಪ್ರಾಯದ ಪೊನ್ನಪ್ಪ, ಚೀಯಕಪೂವಂಡ ತಂಡದಲ್ಲಿ 84 ರ ಪ್ರಾಯದ ಉತ್ತಪ್ಪ ಅವರು ಪಾಲ್ಗೊಂಡು ಯುವಕರನ್ನು…

Read More