ಮಡಿಕೇರಿ ಮಾ.2 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ ಹಾಗೂ ಮೈಸೂರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಮಡಿಕೇರಿ ಬಾಹ್ಯ ಸೇವಾ ಕೇಂದ್ರ, ಇವರ ಸಹಯೋಗದಲ್ಲಿ ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಡಿಯಲ್ಲಿ ಮಾರ್ಚ್, 03 ರಂದು ವಿಶ್ವ ಶ್ರವಣ ದಿನಾಚರಣೆ ನಡೆಯಲಿದೆ. ಮಾರ್ಚ್, 03 ರಂದು ಬೆಳಗ್ಗೆ 9 ಗಂಟೆಗೆ ವಿಶ್ವ ಶ್ರವಣ ದಿನ/ ರಾಷ್ಟ್ರೀಯ ಶ್ರವಣ ಜಾಗೃತಿ ಅಭಿಯಾನದ ಬಗ್ಗೆ ಬೀದಿ ನಾಟಕ, ಬೆಳಗ್ಗೆ 9.30 ಗಂಟೆಗೆ ಜಾಥ, ನಂತರ ಬೆಳಗ್ಗೆ 10.30 ಗಂಟೆಗೆ ಸಭಾ ಕಾರ್ಯಕ್ರಮವು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಭೋದಕ ಆಸ್ಪತ್ರೆಯ ಉಪನ್ಯಾಸ ಕೊಠಡಿಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಮಾ.2 : ವಿರಾಜಪೇಟೆ ವಕೀಲರ ಸಂಘದ ವತಿಯಿಂದ ನ್ಯಾಯಮೂರ್ತಿ ದಿವಂಗತ ಎಂ.ಪಿ.ಚಿಣ್ಣಪ್ಪ ಅವರ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮವು ಮಾ.4 ರಂದು ಸಂಜೆ 6 ಗಂಟೆಗೆ ವಿರಾಜಪೇಟೆ ಚಿಕ್ಕಪೇಟೆಯ ತ್ರಿವೇಣಿ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಸರ್ವೋಚ್ಛ ನಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ನ್ಯಾಯ ವಿತರಣೆಯಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಾವಾದಿಗಳ ಪಾತ್ರ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಲೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯ ಹಾಗೂ ಕೊಡಗು ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ವಿ.ಶ್ರೀಶಾನಂದ, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಂ.ಜಿ.ಶುಕುರೆ ಕಮಲ್, ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ, ಕರ್ನಾಟಕ ಉಚ್ಛ ನ್ಯಾಯಾಲಯದ ಮಹಾ ವಿಲೇಖನಾಧಿಕಾರಿ ಕೆ.ಎಸ್.ಭರತ್ಕುಮಾರ್, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಂ.ಭೃಂಗೇಶ್, ನ್ಯಾಯಮೂರ್ತಿ ದಿವಂಗತ ಎಂ.ಪಿ.ಚಿಣ್ಣಪ್ಪ ಅವರ ಧರ್ಮಪತ್ನಿ ಕಾವೇರಿ ಚಿಣ್ಣಪ್ಪ, ವಕೀಲರಾದ ನಮೃತಾ ಕೋಲಾರ, ಎಂ.ಚಿಂತನ್ ಚಿಣ್ಣಪ್ಪ, ಎಂ.ಧ್ಯಾನ್ ಚಿಣ್ಣಪ್ಪ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ವಿರಾಜಪೇಟೆ ವಕೀಲರ…
ವಿರಾಜಪೇಟೆ ಮಾ.2 : ವಿದ್ಯಾರ್ಥಿಗಳು ಉದ್ಯೋಗದ ದೃಷ್ಟಿಯಿಂದ ಕೌಶಲ್ಯವನ್ನು ಮೈಗೂಡಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಮಾಳೇಟಿರ ತೃಪ್ತಿ ಬೋಪಣ್ಣ ಅಭಿಪ್ರಾಯಪಟ್ಟರು. ಕಾಲೇಜಿನ ಐಕ್ಯೂಎಸಿ ಘಟಕ, ಉದ್ಯೋಗ ಘಟಕ ಹಾಗೂ ಮಡಿಕೇರಿಯ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಘಟಕದ ಅಂಗಸಂಸ್ಥೆಯಾದ ಅತಿಥಿ ವೃಕ್ಷ ಶಿಕ್ಷದ ಸಹಯೋಗದಲ್ಲಿ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಉದ್ಯೋಗ ಹಾಗೂ ಕೌಶಲ್ಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯುವುದು ಸವಾಲಾಗಿದ್ದು ವಿದ್ಯಾರ್ಥಿಗಳು ಸಕಲ ರೀತಿಯಲ್ಲಿ ಸಜ್ಜಾಗಿರಬೇಕು. ಮಾತ್ರವಲ್ಲದೆ ಕೌಶಲ್ಯವನ್ನು ಹೊಂದಿರಬೇಕೆಂದು ತಿಳಿಸಿದರು. ವೃಕ್ಷ ಶಿಕ್ಷದ ಮುಖ್ಯಸ್ಥರಾದ ಶಾಲಿನಿ ಚಾಲ್ರ್ಸ್ ಮಾತನಾಡಿ, ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆಯಲು ಇರುವ ಕೌಶಲ್ಯಗಳು ಮತ್ತು ವ್ಯಕ್ತಿತ್ವ ವಿಕಸನದ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯರಾಗುವುದು ಹೇಗೆ ಮತ್ತು ಯಾವ ತರಬೇತಿಯನ್ನು ಪಡೆಯಬೇಕು, ಸಂವಹನ ಕೌಶಲ್ಯದ ಬಗ್ಗೆ ಉದಾಹರಣೆ ಸಮೇತ ವಿವರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ಉದ್ಯೋಗ…
ಮಡಿಕೇರಿ ಮಾ.2 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಆದಾಯ ತೆರಿಗೆ, ಜಿ.ಎಸ್.ಟಿ., ಮತ್ತು ಸಹಕಾರ ಸಂಘಗಳ ಚುನಾವಣೆ ಕುರಿತು ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮ ನಡೆಯಿತು. ನಗರದ ಹೊಟೇಲ್ ಮಯೂರ ವ್ಯಾಲಿ ವ್ಯೂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ಸಹಕಾರಿಗಳು ಹಾಗೂ ಪದ್ಮಶ್ರೀ ಪ್ರಶಸ್ತಿ ಭಾಜನರಾದ ರಾಣಿ ಮಾಚಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಹಕಾರ ಕ್ಷೇತ್ರವು ಎಲ್ಲಾ ವರ್ಗದವರನ್ನು ಮುಕ್ತವಾಗಿ ಆಹ್ವಾನಿಸುತ್ತಿದ್ದು, ತಾನು ಸಹ ಕೋಟೆ ಮಹಿಳಾ ಸಹಕಾರ ಸಂಘ, ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಇನ್ನಿತರೆ ಸಹಕಾರ ಸಂಘದಲ್ಲಿ ಅಧ್ಯಕ್ಷೆಯಾಗಿ, ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಆ ಮೂಲಕ ಸಮಾಜ ಸೇವೆಯಲ್ಲಿ ಸಹ ತೊಡಗಿಸಿಕೊಳ್ಳಲು ಸಹಕಾರಿಯಾಯಿತೆಂದು ತಿಳಿಸಿದರು. ತಾನು ಸಲ್ಲಿಸಿದ ಸೇವೆಗಾಗಿ ಭಾರತ ಸರ್ಕಾರವು ‘ಪದ್ಮಶ್ರೀ’ ಪ್ರಶಸ್ತಿಗೆ ಗುರುತಿಸಿರುವುದು ತನಗೆ ಹಾಗೂ ಪರೋಕ್ಷವಾಗಿ ಬೆಂಬಲವಾಗಿ ನಿಂತವರಿಗೂ, ವಿದ್ಯಾರ್ಥಿಗಳಿಗೂ, ಪೋಷಕರಿಗೆ ಎಲ್ಲರಿಗೂ ಸಂದ ಗೌರವವೆಂದು ಹೇಳಿದರು. ಸಣ್ಣ ಜಿಲ್ಲೆಯಾದ…
ಮಡಿಕೇರಿ ಮಾ.2 : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಬಯಲಿಗೆಳೆದು ತನಿಖೆ ನಡೆಸಲಾಗುವುದು ಎಂದು ರಾಷ್ಟ್ರೀಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ. ಮಡಿಕೇರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ “ಕಾಂಗ್ರೆಸ್ ಗ್ಯಾರಂಟಿ ಕಾರ್ಡ್” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಬಿಜೆಪಿ ಸರ್ಕಾರ ಕರ್ನಾಟಕವನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು. ದೇಶವ್ಯಾಪಿ ರಾಜ್ಯ ಬಿಜೆಪಿ ಸರ್ಕಾರ ಶೇ.40 ಕಮಿಷನ್ ಸರ್ಕಾರ ಎನ್ನುವ ಅಪಖ್ಯಾತಿಗೆ ಪಾತ್ರವಾಗಿದೆ. ರಾಜ್ಯ ಗುತ್ತಿಗೆದಾರರ ಸಂಘ ಶೇ.40 ಕಮಿಷನ್ ಕುರಿತು ಖುದ್ದು ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ದೂರಿಕೊಂಡಿದ್ದಾರೆ. ಈ ಆರೋಪ ಕೇಳಿ ಬಂದ ನಂತರ ಎಂಟು ಬಾರಿ ಪ್ರಧಾನಮಂತ್ರಿಗಳು ಕರ್ನಾಟಕಕ್ಕೆ ಬಂದು ಹೋಗಿದ್ದಾರೆ. ಆದರೆ ಎಲ್ಲೂ ಭ್ರಷ್ಟ ಸರ್ಕಾರದ ವಿರುದ್ಧ ಧ್ವನಿ ಎತ್ತಿಲ್ಲ. ರಾಜ್ಯದ ಗುತ್ತಿಗೆದಾರರು ಮಾತ್ರವಲ್ಲದೆ ವಿವಿಧ ಕ್ಷೇತ್ರಗಳ ಪ್ರಮುಖರು ಕೂಡ ಕಮಿಷನ್ ಸರ್ಕಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖುದ್ದು ಮಠಾಧೀಶರುಗಳೇ ನಮ್ಮ…
ಮಡಿಕೇರಿ ಮಾ.2 : ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಶೆಟ್ಟಿಗೇರಿ ಗ್ರಾಮದ ಮಹಿಳೆ ಕಾಣೆಯಾಗಿದ್ದಾರೆ. ಟಿ.ಶೆಟ್ಟಿಗೇರಿ ಗ್ರಾಮದ ಜೇನುಕುರುಬರ ಮಹೇಶ್ ಎಂಬವರ ಪತ್ನಿ ಸೌಮ್ಯ (26) ಎಂಬಾಕೆ ಮಗುವಿನ ಆರೈಕೆಯ ಸಲುವಾಗಿ ತಾಯಿಯ ಮನೆಗೆ ಬಂದಿದ್ದರು. ಫೆ.25 ರಂದು ಮಧ್ಯಾಹ್ನ 2 ಗಂಟೆಗೆ ಅವಧಿಯಲ್ಲಿ ಒಂದು ತಿಂಗಳ ಗಂಡು ಮಗುವನ್ನು ಬಿಟ್ಟು ಮನೆಯಿಂದ ಕಾಣೆಯಾದ್ದಾರೆ. ಇದುವರೆಗೂ ಪತ್ತೆಯಾಗಿಲ್ಲ ಎಂದು ಪತಿ ಮಹೇಶ್ ಅವರು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕನ್ನಡ ಭಾಷೆ ಮಾತನಾಡುವ ಮಹಿಳೆ ಅಂದಾಜು 5.2 ಅಡಿ ಎತ್ತರ ಇದ್ದು, ಬಿಳಿ ಬಣ್ಣ, ಕೋಲು ಮುಖ, ತೆಳ್ಳನೆಯ ಮೈಕಟ್ಟನ್ನು ಹೊಂದಿದ್ದಾರೆ, ಮಹಿಳೆಯನ್ನು ಕಂಡವರು ಶ್ರೀಮಂಗಲ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟಣೆಯಲ್ಲಿ ಕೋರಿದ್ದಾರೆ. ದೂರವಣಿ ಸಂಖ್ಯೆ 08274-246246 ಅಥವಾ 9480804960 ಸಂಪರ್ಕಿಸುವಂತೆ ಕೋರಿದೆ.
ಮಡಿಕೇರಿ ಮಾ.2 : ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಸರ್ವೆ ನಂ.78/5ರಲ್ಲಿ 0.35 ಎಕರೆ (35 ಸೆಂಟ್) ಜಮೀನನ್ನು ನಾಲ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ನಿರ್ಮಾಣದ ಉದ್ದೇಶಕ್ಕಾಗಿ ಮಂಜೂರು ಮಾಡಲಾಗಿದೆ.
ಮಡಿಕೇರಿ ಮಾ.2 : ಕಳೆದ ಒಂಭತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ಡೀಸೆಲ್, ಪೆಟ್ರೋಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು 47 ಬಾರಿ ಹೆಚ್ಚಿಸುವ ಮೂಲಕ ದೇಶದ ಜನರಿಗೆ ಅನ್ಯಾಯ ಮಾಡಿದೆ ಎಂದು ಕೆಪಿಸಿಸಿ ವಕ್ತಾರರು ಹಾಗೂ ಜಿಲ್ಲಾ ಉಸ್ತುವಾರಿ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಅಡುಗೆ ಅನಿಲದ ದರವನ್ನು ಏಕಾಏಕಿ ಹೆಚ್ಚಳ ಮಾಡಿರುವ ಕ್ರಮವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಕಚ್ಚಾ ತೈಲದ ದರ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ಗೆ 77 ಡಾಲರ್ ಇದೆ. ಇದರಿಂದ ಅನಿಲ ಉತ್ಪಾದನೆಗೆ ಕೇವಲ 450 ರೂ. ತಗುಲುತ್ತದೆ. ಆದರೆ, ಇಂದು ಪ್ರತಿ ಅಡುಗೆ ಸಿಲಿಂಡರ್ನಿಂದ ಹೆಚ್ಚುವರಿ 750 ರೂ.ಗಳನ್ನು ಮತ್ತು ಕಮರ್ಷಿಯಲ್ ಸಿಲಿಂಡರ್ನಿಂದ 1250 ರೂ. ಲಾಭವನ್ನು ಕೇಂದ್ರ ಪಡೆಯುತ್ತಿದೆ ಎಂದು ಟೀಕಿಸಿದರು. ಉತ್ಪಾದನಾ ವೆಚ್ಚಕ್ಕಿಂತ ಅತೀ ಹೆಚ್ಚಿನ ದರವನ್ನು ಪೆಟ್ರೋಲ್ ಮತ್ತು ಡೀಸೆಲ್ ಗೆ ನಿಗದಿ ಮಾಡುವ ಮೂಲಕ ಕೇಂದ್ರ ಜನ ಸಾಮಾನ್ಯರನ್ನು ಲೂಟಿ…
ಮಡಿಕೇರಿ ಮಾ.2 : ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಮತ್ತು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನೂತನ ತಾಲ್ಲೂಕು ಕೇಂದ್ರ ಕುಶಾಲನಗರದಲ್ಲಿ ಮಾ.4 ರಂದು 12.50 ಕೋಟಿ ರೂ. ವೆಚ್ಚದ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಲಿದೆ ಎಂದು ಕುಶಾಲನಗರ ವಕೀಲರ ಸಂಘದ ಅಧ್ಯಕ್ಷ ಆರ್.ಕೆ.ನಾಗೇಂದ್ರ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ 11.30 ಗಂಟೆಗೆ ಕುಶಾಲನಗರದ ಪ್ರವಾಸಿ ಮಂದಿರದ ಬಳಿಯ 1.27 ಏಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ನ್ಯಾಯಾಲಯ ಕಟ್ಟಡ ಸಂಕೀರ್ಣಕ್ಕೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ. ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ.ವರಾಳೆÉ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. ವಿಶೇಷ ಆಹ್ವಾನಿತರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕೊಡಗಿನ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ವಿ. ಶ್ರೀಶಾನಂದ, ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಜಿ.ಶುಕುರೆ ಕಮಲ್, ಸಿ.ಎಂ. ಪೂಣಚ್ಚ, ರಾಜ್ಯ ಉಚ್ಚ ನ್ಯಾಯಾಲಯದ ಮಹಾ ವಿಲೇಖನಾಧಿಕಾರಿಗಳಾದ ಕೆ.ಎಸ್. ಭರತ್ ಕುಮಾರ್,…
ಮಡಿಕೇರಿ ಮಾ.2 : ಮಡಿಕೇರಿ ತಾಲ್ಲೂಕು ಕರ್ಣಂಗೇರಿ ಗ್ರಾಮದ ಸರ್ವೆ ನಂ.471/1 ರಲ್ಲಿ 0.12 ಎಕರೆ ಮತ್ತು ಸರ್ವೆ ನಂ.471/4 ರಲ್ಲಿ 0.20 ಎಕರೆ ಜಾಗವನ್ನು ಸರ್ವೆಯಿಂದ ಗುರುತಿಸಿದ ನಕಾಶೆಯಂತೆ ಗಾಂಧೀಜಿ ಚಿತಾಭಸ್ಮವನ್ನಿಟ್ಟು ಶಾಶ್ವತವಾದ ಸ್ಮಾರಕ ನಿರ್ಮಿಸಲು ರೂ.50 ಲಕ್ಷ ವನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಮೂಲಕ ಜಿಲ್ಲಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಆದೇಶ ಹೊರಡಿಸಲಾಗಿದೆ. ಶಾಸಕರಾದ ಕೆ.ಜಿ.ಬೋಪಯ್ಯ ಅವರ ಪ್ರಯತ್ನದಿಂದ ರೂ.50 ಲಕ್ಷ ಅನುದಾನ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.






