ಮಡಿಕೇರಿ ಮಾ.2 : ವಿಧಾನಸಭಾ ಚುನಾವಣೆಯ ಹಿನ್ನೆಲೆ ಕೆಪಿಸಿಸಿ ಘೋಷಿಸಿರುವ ವಿವಿಧ ಭರವಸೆಗಳ “ಕಾಂಗ್ರೆಸ್ ಗ್ಯಾರಂಟಿ ಕಾರ್ಡ್” ನ್ನು ಕರ್ನಾಟಕ ರಾಜ್ಯ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೇವಾಲ ಬಿಡುಗಡೆ ಮಾಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಎಐಸಿಸಿ ಕಾರ್ಯದರ್ಶಿ, ಕೊಡಗು ಉಸ್ತುವಾರಿ ಹಾಗೂ ಕೇರಳ ಶಾಸಕ ರೋಜಿ ಜಾನ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮುಖಂಡರಾದ ಬಿ.ಎ ಜೀವಿಜಯ, ಎ.ಎಸ್ ಪೆÇನ್ನಣ್ಣ, ಡಾ.ಮಂಥರ್ ಗೌಡ, ಹರಪಳ್ಳಿ ರವೀಂದ್ರ , ಹೆಚ್.ಎಸ್ ಚಂದ್ರಮೌಳಿ, ವೀಣಾ ಅಚ್ಚಯ್ಯ, ಕೆ.ಪಿ ಚಂದ್ರಕಲಾ, ಟಿ.ಪಿ ರಮೇಶ್ ಮತ್ತಿತರ ಪ್ರಮುಖರು ಹಾಜರಿದ್ದರು. ಕಾಂಗ್ರೆಸ್ ನ ಮೊದಲ ಗ್ಯಾರಂಟಿ ಕಾರ್ಡ್ “ಗೃಹಜ್ಯೋತಿ” ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ಪೂರೈಕೆ, 2ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು “ಗೃಹಲಕ್ಷ್ಮಿ” ಯೋಜನೆ ಜಾರಿ ಮತ್ತು 3ನೇ ಗ್ಯಾರಂಟಿಯಾಗಿ ಅನ್ನಭಾಗ್ಯ…
ಲೇಖಕ: admin
ಮಡಿಕೇರಿ ಮಾ.2 : ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ಕುಶಾಲನಗರದಲ್ಲಿ ಔಷಧೀಯ ಸಸ್ಯಗಳ ಉದ್ಯಾನ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಸಧ್ಯದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಎನ್.ಎಂ.ರವಿ ಕಾಳಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುಶಾಲನಗರದ ಹಾರಂಗಿ ಜಲಾಶಯದ ಬಳಿ ಮತ್ತು ಮಡಿಕೇರಿಯ ಅರಣ್ಯ ಭವನದ ಬಳಿ ಉದ್ಯಾನ ನಿರ್ಮಾಣವಾಗಲಿದೆ ಎಂದರು. ಕೊಡಗಿನಲ್ಲಿರುವ ಅಪರೂಪದ ಔಷಧೀಯ ಸಸ್ಯಗಳು ಮತ್ತು ರಾಜ್ಯದ ವಿವಿಧೆಡೆಗಳಿಂದ ಔಷಧೀಯ ಗುಣವುಳ್ಳ ಸಸ್ಯಗಳನ್ನು ತಂದು ನೆಡಲಾಗುವುದು. ಅಲ್ಲದೆ ಅವುಗಳ ಬಗ್ಗೆ ಮಾಹಿತಿ ನೀಡುವ ಕಾರ್ಯ ಮಂಡಳಿಯಿಂದ ಆಗಲಿದೆ. ಉದ್ದೇಶಿತ ಯೋಜನೆಗೆ ಸಧ್ಯದಲ್ಲಿಯೇ ಭೂಮಿಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು. ಕೊಡಗು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಪ್ರವಾಸಿತಾಣಗಳನ್ನು ವೀಕ್ಷಿಸುವುದರೊಂದಿಗೆ ಔಷಧೀಯ ಸಸ್ಯಗಳ ಉದ್ಯಾನಕ್ಕೂ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಚರಿಸಿ ಅಲ್ಲಿನ ಜೀವ ವೈವಿಧ್ಯದ ಸ್ಥಿತಿಗತಿಗಳ ಬಗ್ಗೆ ಅವಲೋಕನ ಮಾಡಿದ್ದೇನೆ. ಕೊಡಗು ಜಿಲ್ಲೆಯ ಪರಿಸರದಲ್ಲಿ ಹಲವು ಔಷಧೀಯ ಸಸ್ಯಗಳು…
ನಾಪೋಕ್ಲು ಮಾ.1 : ಪೆರಾಜೆ ಗ್ರಾಮದ ಕುಂಬಳಚೇರಿಯ ಶ್ರೀ ವೈನಾಟ್ ಕುಲವನ್ ದೈವಸ್ಥಾನದ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವವು ಮಾ.3 ರಿಂದ ಮಾ.5ರ ವರೆಗೆ ಜರುಗಲಿದೆ. ಸುಮಾರು 300 ವರ್ಷಗಳ ನಂತರ 50ಲಕ್ಷ ರೂ.ವೆಚ್ಚದಲ್ಲಿ ಅದ್ಧೂರಿ ಮಹೋತ್ಸವ ಜರುಗಲಿದ್ದು, ಈ ದೈವತಾ ಕಾರ್ಯದಲ್ಲಿ 50 ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ವಿವಿಧ ಸಮಿತಿಗಳ ಆಶಯವಾಗಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಪೆರಾಜೆಯ ಶ್ರೀಶಾಸ್ತಾವು ದೇವಸ್ಥಾನದಿಂದ ಮಾ.3ರಂದು ಬೆಳಿಗ್ಗೆ 7.30ಕ್ಕೆ ಹಸಿರು ವಾಣಿ ಮೆರವಣಿಗೆ ಹೊರಡಲಿದೆ. ಬಳಿಕ ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಲಿದೆ. 11 ಗಂಟೆಯಿಂದ ಧಾರ್ಮಿಕ ಸಭೆ ನಡೆಯಲಿದ್ದು, ಸಂಜೆ 5 ಗಂಟೆಯಿಂದ ದೈವಿಕ ಕಾರ್ಯಕ್ರಮ ಆರಂಭಗೊಳ್ಳಲಿದೆ. ದೈವಗಳ ಕೂಡುವಿಕೆ, ಶ್ರೀಪೊಟ್ಟನ್ ದೈವ ಕಾರ್ಯಕ್ರಮ ನಡೆಯಲಿದೆ. ಮಾ.4 ರಂದು ಬೆಳಿಗ್ಗೆ 7 ಗಂಟೆಯಿಂದ ಶ್ರೀ ಕೊರತಿಯಮ್ಮ ದೈವ, 8.30 ರಿಂದ ಚಾಮುಂಡಿ ದೈವ, 9.30 ರಿಂದ ಶ್ರೀ ವಿಷ್ಣುಮೂರ್ತಿ ದೈವ, 12ರಿಂದ ಶ್ರೀ ಗುಳಿಗ ದೈವದ ಕೋಲ, ಮಧ್ಯಾಹ್ನ 3…
ನಾಪೋಕ್ಲು ಮಾ.2 : ಖಾಸಗಿ ಬಸ್ ವೊಂದು ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಾಪೋಕ್ಲು- ಕೊಳಕೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಕ್ಕಬ್ಬೆ ನಿವಾಸಿ ಸರಸ್ವತಿ (65) ಎಂಬುವವರು ಮೃತ ದುರ್ದೈವಿ. ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಇವರನ್ನು ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೊಳಕೇರಿ- ನಾಪೋಕ್ಲು ಮಾರ್ಗವಾಗಿ ಮಡಿಕೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮುಖ್ಯ ರಸ್ತೆಯ ಕೋಟೇರಿ ಎಂಬಲ್ಲಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಗಾಯಗೊಂಡಿದ್ದು, ನಾಪೋಕ್ಲು ಮತ್ತು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭೇಟಿ ನೀಡಿದರು. (ವರದಿ : ದುಗ್ಗಳ ಸದಾನಂದ)
ಮಡಿಕೇರಿ ಮಾ.2 : ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ನಡೆದಿದೆ. ಸಂತು ಸುಬ್ಬಯ್ಯ (39) ಸಾವಿಗೀಡಾದ ವ್ಯಕ್ತಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಳಪ್ಪ ಹಾಗೂ ಸಂಪತ್ ಎಂಬಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಸ್ಥಳಕ್ಕೆ ಶ್ರೀಮಂಗಲ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಮಾ.2 : ಸ್ವಾಥ೯ ಮೀರಿದ ಸೇವಾ ಗುಣಗಳಿಗೆ ರೋಟರಿ ವಿಶ್ವದಲ್ಲಿಯೇ ಮಾದರಿಯಾಗಿದ್ದು, ಹೀಗಾಗಿಯೇ ವಿಶ್ವವ್ಯಾಪಿ 12 ಲಕ್ಷ ಸದಸ್ಯರು ರೋಟರಿ ಸಂಸ್ಥೆಯಲ್ಲಿನ ವಿವಿಧ ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಸಕ್ರಿಯವಾಗಿ ನಿರತರಾಗಿದ್ದಾರೆ ಎಂದು ರೋಟರಿ ಜಿಲ್ಲೆ 3181 ರ ಪಬ್ಲಿಕ್ ಇಮೇಜ್ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಹೇಳಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ರೋಟರಿ ಸಂಸ್ಥೆಯ 118 ನೇ ವಾಷಿ೯ಕೋತ್ಸವ ಸಂದಭ೯ ಮಾತನಾಡಿದ ಅನಿಲ್, 1905 ರ ಫೆಬ್ರವರಿ 23 ರಂದು ಚಿಕಾಗೋದ ಪುಟ್ಟ ಕೋಣೆಯಲ್ಲಿ ಪೌಲ್ ಹಾರಿಸ್ ಮತ್ತು ವಿವಿಧ ವೖತ್ತಿಯಲ್ಲಿನ ಅವರ 4 ಸ್ನೇಹಿತರಿಂದ ಪ್ರಾರಂಭಗೊಂಡ ರೋಟರಿ ಸಂಸ್ಥೆಯು ಇದೀಗ ಜಗತ್ತಿನ ಅತೀ ದೊಡ್ಡ ಸಾಮಾಜಿಕ ಸೇವಾ ಸಂಸ್ಥೆಯಾಗಿ ಬೆಳೆದಿದೆ. ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮುಂತಾದ ಕಾಯ೯ಯೋಜನೆಗಳಲ್ಲಿ ರೋಟರಿ ಕೆಲಸ ಗಮನಾಹ೯ವಾದದ್ದು ಎಂದರು. 225 ದೇಶಗಳ 36 ಸಾವಿರ ರೋಟರಿ ಸಂಸ್ಥೆಗಳಲ್ಲಿ ಪ್ರತೀ ವಾರವೂ ಒಂದಲ್ಲ ಒಂದು ಸಾಮಾಜಿಕ ಸೇವಾ ಕಾಯ೯ಯೋಜನೆ…
ನಾಪೋಕ್ಲು ಮಾ.2 : ಖಾಸಗಿ ಬಸ್ ವೊಂದು ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಾಪೋಕ್ಲು- ಕೊಳಕೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಕ್ಕಬ್ಬೆ ನಿವಾಸಿ ಸರಸ್ವತಿ (65) ಎಂಬುವವರು ಮೃತ ದುರ್ದೈವಿ. ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಇವರನ್ನು ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೊಳಕೇರಿ- ನಾಪೋಕ್ಲು ಮಾರ್ಗವಾಗಿ ಮಡಿಕೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮುಖ್ಯ ರಸ್ತೆಯ ಕೋಟೇರಿ ಎಂಬಲ್ಲಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಗಾಯಗೊಂಡಿದ್ದು, ನಾಪೋಕ್ಲು ಮತ್ತು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭೇಟಿ ನೀಡಿದರು. (ವರದಿ : ದುಗ್ಗಳ ಸದಾನಂದ)
ಮಡಿಕೇರಿ ಮಾ.2 : ಕೃಷಿ ಇಲಾಖೆ ವತಿಯಿಂದ ಸರಕಾರದ ಸಹಾಯಧನದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ 14 ರೈತ ಫಲಾನುಭವಿಗಳಿಗೆ ಪವರ್ ಟಿಲ್ಲರ್ ಮಂಜೂರು ಮಾಡಲಾಗಿದ್ದು, ವಿರಾಜಪೇಟೆ ತಾಲ್ಲೂಕು ಕೃಷಿ ಇಲಾಖೆ ಆವರಣದಲ್ಲಿ ಶಾಸಕ ಕೆ.ಜಿ.ಬೋಪಯ್ಯ ಸಾಂಕೇತಿಕವಾಗಿ 4 ರೈತ ಫಲಾನುಭವಿಗಳಿಗೆ ಪವರ್ ಟಿಲ್ಲರ್ ನ್ನು ವಿತರಿಸಲಾಯಿತು.
ಮಡಿಕೇರಿ ಮಾ.2 : ((ಬರಹ : ಬೊಳ್ಳಜಿರ ಬಿ.ಅಯ್ಯಪ್ಪ)) ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಹಾಗೂ ಸಾಮಾಜಿಕ ಕಳಕಳಿಯನ್ನು ಹೊಂದಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ತರಬೇತಿ ಆಯುಕ್ತರಾದ ಹೆಚ್.ಮೈಥಿಲಿ ರಾವ್ ಅವರು ನಿಸ್ವಾರ್ಥ ಸೇವೆಯ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಹಲವು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. 1973 ಜೂನ್ 12 ರಂದು ಜನಿಸಿದ ಹೆಚ್.ಮೈಥಿಲಿ ರಾವ್ ಅವರು ಹರೀಶ್ ರಾವ್.ಎಸ್ ಅವರನ್ನು ವಿವಾಹವಾಗಿದ್ದು, ಇಬ್ಬರು ಪುತ್ರಿಯರಿದ್ದಾರೆ. ಒಬ್ಬರು ಕ್ಯಾಪ್ಟನ್ ಶರಣ್ಯ ರಾವ್ ಹೆಚ್. ಭಾರತೀಯ ಸೇನೆಯಲ್ಲಿದ್ದು, ಮತೋರ್ವರು ಹೆಚ್.ಪಲ್ಲವಿ ರಾವ್ ದುಬೈನ ಜಿ.ಆರ್.ಇ ತಾಜ್ಪಾಮ್ ಜುಮೇರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಹೇಶ್ ಚಂದ್ರ ಕೊಡ್ಕಣಿ ಹಾಗೂ ಮಮತಾ ಎಂ.ಕೊಡ್ಕಣಿ ಅವರ ಪುತ್ರಿ ಹೆಚ್.ಮೈಥಿಲಿ ರಾವ್ ದಾಂಡೇಲಿಯ ಸೇಂಟ್ ಮೈಕಲ್ ಸ್ಕೂಲ್ ನಲ್ಲಿ 1 ಮತ್ತು 2ನೇ ತರಗತಿ, 3ನೇ ತರಗತಿಯಿಂದ 10ನೇ ತರಗತಿಯವರೆಗೆ ದಾಮೋದರ್ ವಿದ್ಯಾಲಯ ಮಾರ್ಗೋವಾ ಗೋವಾದಲ್ಲಿ ಶಿಕ್ಷಣ ಪಡೆದರು. 1991ರಲ್ಲಿ ದಾಂಡೇಲಿ ಬಂಗೂರ್…
ಸೋಮವಾರಪೇಟೆ ಮಾ.1 : ಒಕ್ಕಲಿಗರ ಯುವವೇದಿಕೆ ಸೋಮವಾರಪೇಟೆ, ರಾಜ್ಯ ಮತ್ತು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅವರುಗಳ ಸಂಯುಕ್ತ ಆಶ್ರಯದಲ್ಲಿ 4ನೇ ವರ್ಷದ ‘ಒಕ್ಕಲಿಗರ ಕಪ್’ ಅಂತರ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾವಳಿ ಮಾ.4 ಮತ್ತು 5ರಂದು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಯುವ ವೇದಿಕೆ ಅಧ್ಯಕ್ಷ ಚಕ್ರವರ್ತಿ ಸುರೇಶ್ ಹೇಳಿದರು. ಪಂದ್ಯಾಟದಲ್ಲಿ ರಾಷ್ಟçಮಟ್ಟದ ಪ್ರತಿಷ್ಠಿತ ತಂಡಗಳಾದ ಮಹರಾಷ್ಟ, ರ್ಯಾಣ, ಯುವ ಪಲ್ಟಾನ್ ಪುಣೆ, ಸೌತ್ಸೆಂಟ್ರಲ್ ರೈಲ್ವೆ ಹೈದರಾಬಾದ್, ತಮಿಳುನಾಡು, ಜೆ.ಕೆ.ಅಕಾಡೆಮಿ ಕೇರಳ, ಏರ್ ಇಂಡಿಯಾ, ಬ್ಯಾಂಕ್ ಆಫ್ ಬರೋಡ, ಕರ್ನಾಟಕ ಪೊಲೀಸ್, ಕಸ್ಟಮ್ಸ್ ಮತ್ತು ಜಿಎಸ್ಟಿ ತಂಡ, ಕರ್ನಾಟಕ ತಂಡ, ಚೈನ್ಸ್ ಪ್ರತಿಷ್ಠಿತ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು ಕಬಡ್ಡಿ ಪ್ರೇಮಿಗಳಿಗೆ ರಸದೌತಣ ನೀಡಲಿವೆ ಎಂದು ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಪ್ರೊ ಕಬಡ್ಡಿಯಲ್ಲಿ ಖ್ಯಾತಿ ಗಳಿಸಿರುವ ಆಟಗಾರರಾದ ಸಿದ್ದಾರ್ಥ್ ದೇಸಾಯಿ, ಅಜಯ್ ಠಾಕೂರ್, ಸುಕೇಶ್ಹೆಗಡೆ, ಪ್ರಶಾಂತ್ ರೈ, ಆಕಾಶ್ಶಿಂದೆ, ಪ್ರಪಂಚನ್, ಅಸ್ಲಾಂ…






