ಲೇಖಕ: admin

ಸೋಮವಾರಪೇಟೆ ಏ.6 : ಸೋಮವಾರಪೇಟೆ ತಾಲ್ಲೂಕು ಆಡಳಿತದಿಂದ ಡಾ.ಬಾಬು ಜಗಜೀವನ್‍ರಾಂ ಅವರ 116ನೇ ಜನ್ಮದಿನಾಚರಣೆಯನ್ನು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ತಹಶೀಲ್ದಾರ್ ಎಸ್.ಎನ್.ನರಗುಂದ ಅವರು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿ.ಜಯಣ್ಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಪ್ಪ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಏ.6 : ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಡಿಕೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಮಂಥರ್ ಗೌಡ  ಅವರ ಹೆಸರನ್ನು ಕೆಪಿಸಿಸಿ ಘೋಷಿಸಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

Read More

ಮಡಿಕೇರಿ ಏ.6 :  ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾಸಂಸ್ಥೆಯ ವತಿಯಿಂದ ನೂತನ ಕೊಡಗು ವಿಶ್ವವಿದ್ಯಾಲಯದ ಪ್ರಥಮ ಕುಲಪತಿ  ಪ್ರೊ. ಅಶೋಕ ಸಂಗಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ  ಸಾಯಿ ಶಂಕರ ವಿದ್ಯಾ ಸಂಸ್ಥೆಯ ಮುಖ್ಯಸ್ಥ  ಕೋಳೇರ ಝರು ಗಣಪತಿ, ಟ್ರಸ್ಟಿ ಗಾನ ಕಾರ್ಯಪ್ಪ, ಬಿ.ಇಡಿ ಪದವಿ ಕಾಲೇಜಿನ ಪ್ರಾಂಶುಪಾಲ  ಪಿ.ಎ.ನಾರಾಯಣ್, ಪದವಿ ಕಾಲೇಜು ಪ್ರಾಂಶುಪಾಲ ಟಿ.ಸಿ.ಗೀತಾ ನಾಯ್ಡು ಹಾಗೂ ಸಿಬ್ಬಂದಿ ಮಂದಣ್ಣ  ಹಾಜರಿದ್ದರು.

Read More

ಸಿದ್ದಾಪುರ ಏ.6 :  ವಲಯ ಕಾಂಗ್ರೆಸ್ ಸಮಿತಿ ಸಲಹೆಯಂತೆ ನೆಲ್ಯಹುದಿಕೇರಿ ವಲಯ ಕಾಂಗ್ರೆಸ್ ಸಮಿತಿಗೆ ಹೆಚ್ಚುವರಿಯಾಗಿ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಗ್ರಾ.ಪಂ ಸದಸ್ಯ ಈ. ಎಚ್ ಹನೀಫ ಅವರನ್ನ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಸಾಬು ವರ್ಗೀಸ್ ಮುಂದುವರೆಯಲಿದ್ದಾರೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್ ತಿಳಿಸಿದ್ದಾರೆ.

Read More

ಸೋಮವಾರಪೇಟೆ ಏ.6 : ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿದ್ಯಾದಾನಕ್ಕಾಗಿ ಇಂತಹ ಶೈಕ್ಷಣಿಕ ಸಂಸ್ಥೆಗಳನ್ನು ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಎಂದು ಬಸವ ಪಟ್ಟಣದ ತೋಟಂದಾರ್ಯ ಸಂಸ್ಥಾನ ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಅಭಿಪ್ರಾಯಿಸಿದರು. ಯಡೂರು ಗ್ರಾಮದ ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ಹಾಗೂ ಕಾಲೇಜು ವತಿಯಿಂದ ನಡೆದ ಸರಸ್ವತಿ ಪೂಜೆ ಹಾಗೂ ಕಾಲೇಜು ಸಂಸ್ಥಾಪಕರಿಗೆ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಶೈಕ್ಷಣಿಕ ಸಂಸ್ಥೆಗಳನ್ನು ಕಟ್ಟಲು ಅನೇಕ ದಾನಿಗಳು ತನು, ಮನ, ಧನವನ್ನು ವಿನಿಯೋಗಿಸಿದ್ದಾರೆ. ಅಂತಹವರನ್ನು ಗೌರವಿಸುವುದು ಶ್ಲಾಘನೀಯ ಎಂದು ಹೇಳಿದರು. ವಿದ್ಯಾರ್ಥಿಗಳು ರಾಷ್ಟ್ರದ ಭವ್ಯ ಪ್ರಜೆಗಳು. ಚುನಾವಣೆ ಘೋಷಣೆಯಾಗಿದೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಯುವಸಮುದಾಯ ಮತದಾನ ಮಾಢಬೇಕು. ಅದರಲ್ಲೂ ಯೋಗ್ಯ ವ್ಯಕ್ತಿಗೆ ಮತದಾನ ಮಾಡಿ ತಮ್ಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜು ಸಂಸ್ಥಾಪಕ ಸಮಿತಿ ಕಾರ್ಯದರ್ಶಿ ಎ.ಪಿ.ಶಂಕರಪ್ಪ ಹಾಗೂ ಶಾರದಮ್ಮ ದಂಪತಿಗಳು, ಸಂಸ್ಥಾಪಕ ಅಧ್ಯಕ್ಷ…

Read More

ಸೋಮವಾರಪೇಟೆ ಏ.6 : ಸೋಮವಾರಪೇಟೆ ತಾಲ್ಲೂಕು ಆಡಳಿತದಿಂದ ಡಾ.ಬಾಬು ಜಗಜೀವನ್‍ರಾಂ ಅವರ 116ನೇ ಜನ್ಮದಿನಾಚರಣೆಯನ್ನು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ತಹಶೀಲ್ದಾರ್ ಎಸ್.ಎನ್.ನರಗುಂದ ಅವರು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿ.ಜಯಣ್ಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಪ್ಪ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಏ.5 : ಕಾಂಗ್ರೆಸ್ ಆಡಳಿತಾವಧಿಯಲ್ಲಿ ಈ ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರಲಾಯಿತು. ಆದರೆ ಇಂದು ಬಿಜೆಪಿ ನೇತೃತ್ವದ ಸರ್ಕಾರ ಇದೆಲ್ಲವನ್ನು ಹಾಳು ಮಾಡುತ್ತಿದೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರು ಆರೋಪಿಸಿದ್ದಾರೆ. ಸಿದ್ದಾಪುರದ ಸ್ವರ್ಣಮಾಲಾ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್‌ನ ‘ಗ್ಯಾರಂಟಿ ಕಾರ್ಡ್’ ವಿಶ್ವಾಸಾರ್ಹವಾಗಿದ್ದು, ಇತರೆ ಪಕ್ಷಗಳ ಗ್ಯಾರಂಟಿಗಳು ನಂಬಿಕೆಗೆ ಅರ್ಹವಾಗಿಲ್ಲ. ಬಿಜೆಪಿ ಸೋಲಿನ ಹತಾಶೆಯಲ್ಲಿದೆ, ಮುಂಬರುವ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ದುಡಿಯುವ ವರ್ಗಗಳ ಕೈಗೆ ಭೂಮಿ ಹಕ್ಕು ನೀಡಿದವರು ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸರು, ರೈತರಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಿದವರು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪನವರೆ ಎಂದು ತಿಳಿಸಿದ ಮಧು ಬಂಗಾರಪ್ಪ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಹಾಯಧನದೊಂದಿಗೆ ಅಡುಗೆ ಸಿಲಿಂಡರ್ ನೀಡಿದರು. ಆದರೆ…

Read More

ಮಡಿಕೇರಿ ಏ.5 : ಆಮ್ ಆದ್ಮಿ ಪಾರ್ಟಿಯ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಎಂದು ಬಿಂಬಿಸಲಾಗಿದ್ದ ಟಿ.ಕೆ.ಸಾಯಿಕುಮಾರ್ ಸೇರಿದಂತೆ ವಿವಿಧ ಪಕ್ಷಗಳ ಕಾರ್ಯಕರ್ತರು ಸಿದ್ದಾಪುರದಲ್ಲಿ ಮಧು ಬಂಗಾರಪ್ಪ ಹಾಗೂ ಎ.ಎಸ್.ಪೊನ್ನಣ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

Read More

ಮಡಿಕೇರಿ ಏ.5 : ಮಡಿಕೇರಿ ನಗರಕ್ಕೆ ಕುಡಿಯುವ ನೀರು ಸರಬರಾಜು ಕಳೆದ ಎರಡು ದಿನಗಳಿಂದ ಕಡಿಮೆ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪೌರಾಯುಕ್ತರಾದ ವಿಜಯ್ ಅವರು ಇಂದು ಕೂಟುಹೊಳೆಗೆ ಭೇಟಿ ನೀಡಿ ವೀಕ್ಷಿಸಿದರು. ನಗರಸಭೆಯ ಸಹಾಯಕ ಅಭಿಯಂತರರು ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಭಿಯಂತರರು ಹಾಗೂ ಸೀನಿಯರ್ ವಾಲ್ ಮೆನ್ ಗಳೊಂದಿಗೆ ಕೂಟುಹೊಳೆ ಜಾಕ್ ವೆಲ್ ಗೆ ಹಾಗೂ ಕುಂಡಮೇಸ್ತ್ರಿ ಜಾಕ್ ವೆಲ್ ಗೆ ಪರಿಶೀಲಿಸಲಾಯಿತು. ಪ್ರಸ್ತುತ ಇದುವರೆಗೂ ಮಳೆಯಾಗದ ಕಾರಣ ಕೂಟುಹೊಳೆಯಲ್ಲಿ ಸಂಪೂರ್ಣ ನೀರಿಲ್ಲದೆ ಬತ್ತಿದ್ದು ಇವಾಗ ಕುಂಡಾಮೇಸ್ತ್ರಿಯಿಂದ ಲಿಫ್ಟ್ ಮಾಡಿ ಕೂಟುಹೊಳೆಯಿಂದ ರನ್ ಮಾಡಿ ನಗರಕ್ಕೆ ನೀರನ್ನು ಒದಗಿಸಲಾಗುತ್ತಿದೆ. ಇದೇ ರೀತಿ ಮಳೆ ಆಗದಿದ್ದಲ್ಲಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವ ನೀರನ್ನು ಕೊರತೆ ಉಂಟಾಗುವುದರಿಂದ ಇದನ್ನು ಸರಿದೂಗಿಸುವ ಹಿನ್ನೆಲೆಯಲ್ಲಿ 23 ವಾರ್ಡ್ ಗಳಲ್ಲಿ ದಿನ ಬಿಟ್ಟು ದಿನ ನೀರನ್ನು ನೀಡುವಂತಹ ಸಲಹೆಗಳು ಬಂದಿವೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.

Read More

ನವದೆಹಲಿ ಏ.5 : ಗಣರಾಜ್ಯೋತ್ಸವದ ಹಿನ್ನೆಲೆ ಘೋಷಿಸಲಾದ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಾಧಕರಿಗೆ ಪ್ರದಾನ ಮಾಡಿದರು. ಉಮ್ಮತ್ತಾಟ್ ನೃತ್ಯ ಕಲಾವಿದೆ ಕೊಡಗಿನ ಐಮುಡಿಯಂಡ ರಾಣಿ ಮಾಚಯ್ಯ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು. ಕರ್ನಾಟಕದ ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ, ಸಾಹಿತಿ, ಕನ್ನಡದ ಪ್ರಸಿದ್ಧ ಕಾದಂಬರಿಕಾರ ಎಸ್.ಎಲ್.ಬೈರಪ್ಪ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಿರಿ ಧಾನ್ಯ ಬಳಕೆ ಕುರಿತು ಪ್ರೋತ್ಸಾಹಿಸುತ್ತಿರುವ ವೈದ್ಯ ಡಾ.ಖಾದರ್, ಬೀದರ್ ನ ರಶೀದ್ ಅಹಮ್ಮದ್ ಖಾತ್ರಿ ಸೇರಿದಂತೆ ಕರ್ನಾಟಕದ ಒಟ್ಟು 8 ಮಂದಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.

Read More