ಲೇಖಕ: admin

ಮಡಿಕೇರಿ ಮಾ.1 : ವಿಧಾನಸಭಾ ಚುನಾವಣೆಯ ಹಿನ್ನೆಲೆ ಕೆಪಿಸಿಸಿ ಘೋಷಿಸಿರುವ ವಿವಿಧ ಭರವಸೆಗಳ “ಕಾಂಗ್ರೆಸ್ ಗ್ಯಾರಂಟಿ ಕಾರ್ಡ್” ನ್ನು ಮನೆ ಮನೆಗೆ ತಲುಪಿಸುವ ಅಭಿಯಾನ ಮಾ.2 ರಿಂದ ಜಿಲ್ಲೆಯಾದ್ಯಂತ ಆರಂಭಗೊಳ್ಳಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣ್‍ದೀಪ್ ಸಿಂಗ್ ಸುರ್ಜೇವಾಲ ಗುರುವಾರ ಮಡಿಕೇರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದರು. ಕಾಂಗ್ರೆಸ್ ನ ಮೊದಲ ಗ್ಯಾರಂಟಿ ಕಾರ್ಡ್ “ಗೃಹಜ್ಯೋತಿ” ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ಪೂರೈಕೆ, 2ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು “ಗೃಹಲಕ್ಷ್ಮಿ” ಯೋಜನೆ ಜಾರಿ ಮತ್ತು 3ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್‍ದಾರರಿಗೆ 10 ಕೆ.ಜಿ.ಅಕ್ಕಿ ಉಚಿತವಾಗಿ ನೀಡುವ ಭರವಸೆಯ ಕಾರ್ಡ್‍ನ್ನು ಮನೆ ಮನೆಗೆ ತಲುಪಿಸಲಾಗುವುದು. ಕೆಪಿಸಿಸಿ…

Read More

ಸುಂಟಿಕೊಪ್ಪ ಮಾ.1 : ಫ್ರೆಂಡ್ಸ್ ಯೂತ್‍ಕ್ಲಬ್ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾ ಪ್ರತಿಭೆಗಳಿಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಉತ್ತಮ ವೇದಿಕೆ ಕಲ್ಪಿಸಿರುವುದು ಶ್ಲಾಘನೀಯ ಎಂದು ಪ್ರಮುಖರಾದ ವಿ.ಪಿ.ಶಶಿಧರ್ ಹೇಳಿದರು. ನಾಕೂರು-ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‍ನ 23ನೇ ವಾರ್ಷಿಕೋತ್ಸವದ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲೆ ಹಾಗೂ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಕೆಲಸ ಆಗುತ್ತಿದ್ದು, ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಇದು ಉತ್ತಮ ವೇದಿಕೆಯಾಗಿದೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಡ್ಯಾನ್ಸ್‍ಮೇಳ ಕಾರ್ಯಕ್ರಮದ ದಾನಿಗಳಾದ ಕಾಫಿ ಬೆಳೆಗಾರರಾದ ಅಡಿಕೇರಿ ಧರ್ಮಪ್ಪ ವಹಿಸಿದ್ದರು. ಸಮಾರಂಭದ ವೇದಿಕೆಯಲ್ಲಿ ಗ್ರಾ.ಪಂ ಅಧ್ಯಕ್ಷ ಮಂದೋಡಿ.ಸಿ.ಜಗನ್ನಾಥ್, ಮಾಜಿ ಅಧ್ಯಕ್ಷ ಬಿ.ಜಿ.ರಮೇಶ್, ಹಾರಂಗಿ ಕಾವೇರಿ ಮೀನುಗಾರರ ಸಂಘ ಅಧ್ಯಕ್ಷ ಮಹಮದ್, ಫ್ರೆಂಡ್ಸ್ ಯೂತ್ ಕ್ಲಬ್ ಅಧ್ಯಕ್ಷ ಅಂಬೆಕಲ್ ಚಂದ್ರಶೇಖರ್, ಗೌರವಧ್ಯಕ್ಷ ಕುಂಞಕೃಷ್ಣ, ಕಾರ್ಯದರ್ಶಿ ಶಂಕರ ನಾರಾಯಣ, ಸದಸ್ಯರುಗಳಾದ ಕಿಟ್ಟಣ್ಣ ರೈ ಮತ್ತಿತರರು ಇದ್ದರು. ಇದೇ ಸಂದರ್ಭ ಗ್ರಾಮೀಣ…

Read More

ಮಡಿಕೇರಿ ಮಾ.1 : ಜಿಲ್ಲೆಯ ಯುವಕ, ಯುವತಿಯರಿಗಾಗಿ ಮಾ.25 ರಂದು “ರಾಷ್ಟ್ರೀಯ ಏಕತೆ ಹಾಗೂ ಒಗ್ಗಟ್ಟು ಎಂಬ ವಿಷಯದಡಿ” ಜಿಲ್ಲಾ ಮಟ್ಟದ “ಜಿಲ್ಲಾ ಯುವ ಉತ್ಸವ” ಎಂಬ ವಿನೂತನ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್, ಭಾರತ ಸರ್ಕಾರ, ನೆಹರು ಯುವ ಕೇಂದ್ರ, ಯುವ ಜನ ವ್ಯವಹಾರ ಕ್ರೀಡಾ ಸಚಿವಾಲಯ, ಮಡಿಕೇರಿ ಕೊಡಗು. ಜಿಲ್ಲಾಡಳಿತ, ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಡಗು, ಜಿಲ್ಲಾ ಯುವ ಒಕ್ಕೂಟ ಕೊಡಗು, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲೆಯ 15 ವರ್ಷದಿಂದ 29 ವರ್ಷ ವಯೋಮಿತಿಯ ಜಿಲ್ಲೆಯ ಯುವಕ, ಯುವತಿಯರಲ್ಲಿರುವ ವಿವಿಧ ಪ್ರತಿಭೆಗಳ ಅನಾವರಣಕ್ಕೆ ಸ್ಪರ್ಧೆ ನಡೆಸಲಾಗುತ್ತಿದ್ದು, ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಬಹುಮಾನ ಹಾಗೂ ಆಕರ್ಷಕ…

Read More

ಮಡಿಕೇರಿ ಮಾ.1 : ಅಡುಗೆ ಅನಿಲದ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುವ ಮೂಲಕ ಸರ್ಕಾರ ಜನಸಾಮಾನ್ಯರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಬೆಳ್ಯಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 14.2 ಕೆ.ಜಿ ಅಡುಗೆ ಅನಿಲದ ಸಿಲಿಂಡರ್ ಬೆಲೆ ಮತ್ತೆ ರೂ.50 ಹೆಚ್ಚಳವಾಗಿದ್ದು, ಒಂದು ಸಿಲಿಂಡರ್ ಗೆ ರೂ.1,103 ನೀಡಬೇಕಾಗಿದೆ. ವಾಣಿಜ್ಯ ಬಳಕೆಯ 19 ಕೆ.ಜಿ ಸಿಲಿಂಡರ್ ಬೆಲೆ ರೂ.350.50 ಪೈಸೆ ಹೆಚ್ಚಳವಾಗಿದ್ದು, ರೂ.2,119.50 ಪೈಸೆ ಪಾವತಿಸಬೇಕಾಗಿದೆ. ಇದು ಅತ್ಯಂತ ದುಬಾರಿಯಾಗಿದ್ದು, ಜನರ ಜೀವನದ ಮೇಲೆ ದೊಡ್ಡ ಪರಿಣಾಮವನ್ನು ಬೀರಲಿದೆ ಎಂದು ಟೀಕಿಸಿದ್ದಾರೆ. ಬಡವರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ದುಡಿದ ಹಣವನ್ನು ಸಿಲಿಂಡರ್ ಗೆ ಮೀಸಲಿಟ್ಟರೆ ಜೀವನ ಸಾಗಿಸುವುದು ಮತ್ತು ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಬೆಲೆಯೂ ಏರಿಕೆಯಾಗಿರುವುದರಿಂದ ಹೊಟೇಲ್ ಗಳಲ್ಲಿ ಊಟ, ಉಪಹಾರದ ದರ ದುಬಾರಿಯಾಗಲಿದೆ. ಇದು…

Read More

ಮಡಿಕೇರಿ ಮಾ.1 : ಬಜೆಟ್ ಸಂದರ್ಭವೇ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸದ ರಾಜ್ಯ ಸರ್ಕಾರ ಚುನಾವಣಾ ಗಿಮಿಕ್ ಗಾಗಿ ಮುಷ್ಕರ ಆರಂಭಿಸಿದ ನಂತರ ಘೋಷಣೆ ಮಾಡಿದೆ ಎಂದು ಜಾತ್ಯತೀತ ಜನತಾದಳದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಪೋಕ್ಲುವಿನ ಎಂ.ಎ.ಮನ್ಸೂರ್ ಆಲಿ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಬಿಜೆಪಿ ಸರ್ಕಾರ ಅತಿ ಬುದ್ದಿವಂತಿಕೆಯನ್ನು ಪ್ರದರ್ಶಿಸಿದ್ದು, ಮಗುವನ್ನು ಚಿವುಟಿದಂತೆ ಮಾಡಿ ತಾನೇ ಸಮಾಧಾನ ಪಡಿಸಿದಂತೆ ನಾಟಕವಾಡಿದೆ. ನೌಕರರು ಶೇ.40 ರಷ್ಟು ವೇತನ ಹೆಚ್ಚಳಕ್ಕಾಗಿ ಬಜೆಟ್ ಗೂ ಮೊದಲೇ ಮನವಿ ಮಾಡಿದ್ದರು. ಆದರೆ ಇದಕ್ಕೆ ಸ್ಪಂದಿಸದ ಸರ್ಕಾರ ಮುಷ್ಕರ ಆರಂಭಗೊಂಡ ನಂತರ ಶೇ.17 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇಚ್ಛಾಶಕ್ತಿಯ ಕೊರತೆಯನ್ನು ಎದುರಿಸುತ್ತಿರುವ ಸರ್ಕಾರ ಈ ವಿಚಾರದಲ್ಲೂ ರಾಜಕೀಯ ಗಿಮಿಕ್ ಮಾಡಲು ಮುಂದಾಗಿರುವುದು ಸ್ಪಷ್ಟವಾಗಿದೆ ಎಂದು ಟೀಕಿಸಿದ್ದಾರೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದ್ದು, ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. ಆದರೆ ಸರ್ಕಾರ…

Read More

ಮಡಿಕೇರಿ ಮಾ.1 : ರಾಜ್ಯ ಸರ್ಕಾರ ಇತ್ತೀಚೆಗೆ ಘೋಷಿಸಿದ ಬಜೆಟ್ ನಲ್ಲಿ ವಿಶೇಷ ಚೇತನರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ವಿಕಲಚೇತನರ ಸಂಘ, ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ನಿರ್ದೇಶಕಿ ಎಂ.ಎನ್.ವೀಣಾ ಬಜೆಟ್ ನಲ್ಲಿ ವಿಶೇಷ ಚೇತನರ ಪರವಾದ ಯಾವುದೇ ನಿಲುವುಗಳನ್ನು ತೆಗೆದುಕೊಂಡಿಲ್ಲ. ನಮ್ಮ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸದಿದ್ದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವುದಿಲ್ಲವೆಂದು ತಿಳಿಸಿದರು. ವಿಶೇಷ ಚೇತನರ ಮಾಸಿಕ ಪೋಷಣಾ ಭತ್ಯೆಯನ್ನು ರೂ.3 ಸಾವಿರಕ್ಕೆ ಹೆಚ್ಚಿಸಬೇಕು, ಗೌರವ ಧನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮೀಣ, ಪಟ್ಟಣ, ತಾಲೂಕು, ಪುರ್ನವಸತಿ ಕಾರ್ಯಕರ್ತರುಗಳನ್ನು ಕ್ರಮವಾಗಿ ಗ್ರಾ.ಪಂ, ನಗರ, ತಾಲೂಕು ವಿಶೇಷ ಚೇತನರ ಅಧಿಕಾರಿಯಾಗಿ ಪರಿವರ್ತಿಸಬೇಕು, ಗೌರವಧನವನ್ನು ಕನಿಷ್ಠ ವೇತನವಾಗಿ ಪರಿವರ್ತಿಸಬೇಕು, ಗ್ರಾ.ಪಂ ಹಾಗೂ ಇತರ ಇಲಾಖೆಗಳಲ್ಲಿ ವಿಶೇಷ ಚೇತನರಿಗೆ ಮೀಸಲಿರುವ 5ರ ನಿಧಿಯನ್ನು ವೈಯಕ್ತಿಕವಾಗಿ ನೀಡುವಂತಾಗಬೇಕು, ಲೈನ್ ಮನೆಯಲ್ಲಿ ವಾಸಿಸುತ್ತಿರುವ ವಿಶೇಷ ಚೇತನರ ಕುಟುಂಬಗಳಿಗೆ ವಿಶೇಷ ಆದ್ಯತೆಯ ಮೇಲೆ ಮನೆ ಒದಗಿಸಬೇಕು,…

Read More

ಮಡಿಕೇರಿ ಮಾ.1 : ಮುಂದಿನ ಅವಧಿಗೂ ಕೇಂದ್ರ ಹಾಗೂ ರಾಜ್ಯ ದಲ್ಲಿ ಡಬ್ಬಲ್ ಇಂಜಿನ್ ಸರ್ಕಾರ ಖಚಿತ ಎಂದು  ಶಾಸಕದ್ವಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಾಸಕ ಎಂ.ಪಿ.ಅಪ್ಪಚ್ಚು ರಂಜನ್  ಅವರ ಮನೆಯಲ್ಲಿ ಸೋಮವಾರಪೇಟೆ ತಾಲ್ಲೂಕು ಬಿಜೆಪಿ ಕಾರ್ಯಕರ್ತರ ಬೃಹತ್ ಸಮ್ಮಿಲನ ಕಾರ್ಯಕ್ರಮದಲ್ಲಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಮೇ ಮೊದಲವಾರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ದಿ ಕಾರ್ಯಕ್ರಮಗಳೇ ಪಕ್ಷಕ್ಕೆ ಶ್ರೀ ರಕ್ಷೆ. ಜನ ಸಾಮಾನ್ಯರ ಶ್ರೇಯೋಭಿವೃದ್ಧಿಗೆ ಸರ್ಕಾರ ಒತ್ತು ನೀಡಿದೆ ಎಂದರು. ಈ ಸಂದರ್ಭ ವಿಧಾನ ಪರಿಷತ್ತು ಸದಸ್ಯ ಸುಜಾಕುಶಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Read More

ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿ ಅಂತ್ಯಗೊಂಡಿದ್ದು,  ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ಆದೇಶ ಹೊರಡಿಸಿದ್ದಾರೆ. ರೇಸ್ ಕೋರ್ಸ್ ಬಳಿಯ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದರು.

Read More

ನಾಪೋಕ್ಲು ಮಾ.1 :  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು, ಸ್ಥಳೀಯ ಸಂಸ್ಥೆ ಸಂಪಾಜೆ  ಸಂಯುಕ್ತಾಶ್ರಯದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ರಕ್ತನಿಧಿ ಕೇಂದ್ರ ಮಡಿಕೇರಿ, ರಾಷ್ಟ್ರೀಯ ಸ್ವಯಂಸೇವಾ ಯೋಜನೆ, ಕೆ.ಪಿ.ಎಸ್ ಪ್ರೌಢಶಾಲೆ ನಾಪೋಕ್ಲು, ಶ್ರೀ ಮಕ್ಕಿ ಶಾಸ್ತಾವು ಸೇವಾ ಕಾರ್ಯಪಡೆ ಬೇತು, ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕ ಸಹಯೋಗದೊಂದಿಗೆ ಮಾ.6ರಂದು ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಗ್ಗೆ 10 ರಿಂದ ಮದ್ಯಾಹ್ನ 1ಗಂಟೆಯವರೆಗೆ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ  ಶಿಬಿರ  ನಡೆಯಲಿದ್ದು, ರಕ್ತದಾನಿಗಳು ಮೊ.8197729150,9900474485  ಸಂಖ್ಯೆಗೆ ಕರೆಮಾಡಿ ಅಥವಾ ವಾಡ್ಸಪ್ ಮೂಲಕ ನೊಂದಣಿ ಮಾಡಿಕೊಳ್ಳಬಹುದು. ವರದಿ :ಝಕರಿಯ ನಾಪೋಕ್ಲು 

Read More

ಮಡಿಕೇರಿ ಮಾ.1 :ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಸಮುದಾಯ ಚಟುವಟಿಕೆಗಳಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಭವನ/ ಡಾ.ಬಾಬು ಜಗಜೀವನ ರಾಂ ಭವನ/ ಮಹರ್ಷಿ ವಾಲ್ಮೀಕಿ ಭವನ ಮತ್ತು ಇತರೇ ಸಮುದಾಯಗಳ ಭವನ ನಿರ್ಮಾಣದ ಉದ್ದೇಶ ಮತ್ತು ಅಗತ್ಯ ಸೌಲಭ್ಯಗಳನ್ನು ಪರಿಗಣಿಸಿ, ವೆಚ್ಚದ ಮೊತ್ತವನ್ನು ಪರಿಷ್ಕರಿಸಿ 2019 ರ ಮಾರ್ಚ್, 25 ರ ಆದೇಶದಲ್ಲಿ ಪರಿಸ್ಕೃತ ಮಾರ್ಗಸೂಚಿ ಹೊರಡಿಸಲಾಗಿದೆ. ಶಾಸಕರಾದ ಕೆ.ಜಿ.ಬೋಪಯ್ಯ ಅವರ ಪ್ರಯತ್ನದಿಂದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೋಬಳಿ ಮಟ್ಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ 75 ಲಕ್ಷ ರೂ.ಅನುದಾನ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Read More