ಮಡಿಕೇರಿ ಜ.26 NEWS DESK : ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಿಲಯದ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪಿ.ಆನಂದನ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತದ ಸಂವಿಧಾನವು ಜಾರಿಗೆ ಬಂದು ಭಾರತವು ಗಣರಾಜ್ಯವಾದ ಈ ದಿನವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ದಿನವಾಗಿದೆ ಎಂದರು. ಕಾರ್ಯಕ್ರಮ ನಿರ್ವಾಹಕ ಅಧಿಕಾರಿ ಎಂ.ಶಕುಂತಲಾ ಅವರು ಮಾತನಾಡಿ, ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವಲ್ಲಿ ಶ್ರವ್ಯ ಮಾಧ್ಯಮವಾದ ಆಕಾಶವಾಣಿಯ ಪಾತ್ರ ಪ್ರಮುಖವಾಗಿದೆ ಎಂದರು. ಇಂಜಿನಿಯರಿಂಗ್ ವಿಭಾಗದ ಕೆ.ಎಸ್.ಉದಯಕುಮಾರ್, ಎ.ರೆಂಜಿತ್ ಕುಮಾರ್, ಎ.ಎಸ್.ಸೋಮಶೇಖರ್ ಹಾಗೂ ಸಿಬ್ಬಂದಿಗಳಾದ ಟಿ.ಸಿದ್ದೋಜಿ ರಾವ್,ಪುರುಷೋತ್ತಮ, ಭದ್ರತಾ ಸಿಬ್ಬಂದಿಗಳಾದ ಸುಬ್ರಾಯ ಕಾಸ್ಪಾಡಿ, ಕೇಡನ ವಾಸು ಮತ್ತಿತರ ಸಿಬ್ಬಂದಿಗಳು ಈ ಸಂದರ್ಭ ಹಾಜರಿದ್ದರು.
ಲೇಖಕ: admin
ಮಡಿಕೇರಿ NEWS DESK ಜ.25 : ನಾಪೋಕ್ಲು ಸರಕಾರಿ ಕರ್ನಾಟಕ ಪಬ್ಲಿಕ್ ಶಾಲೆಗೆ ಸೇರಿದ ಜಾಗದಲ್ಲಿ ಶಾದಿ ಮಹಲ್ ನಿರ್ಮಾಣಗೊಳ್ಳುತ್ತಿರುವ ಕುರಿತು ಆರೋಪಗಳು ಕೇಳಿ ಬಂದಿದ್ದು, ಈ ಬಗ್ಗೆ ಶಾಸಕರು ಹಾಗೂ ಅಧಿಕಾರಿಗಳು ಸ್ಪಷ್ಟೀಕರಣ ನೀಡಬೇಕೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈಗಾಗಲೇ ಶಾದಿ ಮಹಲ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಇದು ಶಾಲೆಗೆ ಸೇರಿದ ಜಾಗ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಶಾಲೆಯ ಪ್ರಾಂಶುಪಾಲರು ಕೂಡ ಶಾಸಕರು ಹಾಗೂ ಅಧಿಕಾರಿಗಳ ಗಮನ ಸೆಳೆದು ಮನವರಿಕೆ ಮಾಡಿಕೊಟ್ಟಿದ್ದಾರೆ. ಆದರೆ ಯಾರಿಂದಲೂ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ ಎಂದು ತಿಳಿಸಿದ್ದಾರೆ. ಸರಕಾರಿ ಶಾಲೆಗೆ ಸೇರಿದ ಜಾಗ ಶೈಕ್ಷಣಿಕ ಕಟ್ಟಡಗಳ ನಿರ್ಮಾಣ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗಿರಬೇಕು. ಶಾಲೆಯ ಜಾಗದಲ್ಲಿ ಶಾದಿ ಮಹಲ್ ಸೇರಿದಂತೆ ಬೇರೆ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶವಿರುವುದಿಲ್ಲ. ಆದರೂ ಶಾದಿ ಮಹಲ್ ನಿರ್ಮಾಣಗೊಳ್ಳುತ್ತಿರುವುದು…
ಕುಶಾಲನಗರ NEWS DESK ಜ.25 : ಹಿಂದೂಗಳು ಒಗ್ಗೂಡಿ ಸಂಘಟಿತರಾಗಿ ಹಿಂದೂ ಸಂಸ್ಕೃತಿ, ಪರಂಪರೆಗಳನ್ನು, ಕೌಟುಂಬಿಕ ಮೌಲ್ಯಗಳನ್ನು ಸಂರಕ್ಷಿಸುವ ಮೂಲಕ ಹಿಂದೂ ಸಮಾಜದ ಬಲವರ್ಧನೆಗೆ ಶ್ರಮಿಸಬೇಕೆಂದು ಹಿಂದೂ ಮುಖಂಡರೂ ಆದ ಪುತ್ತೂರಿನ ಶ್ರೀ ವಿವೇಕಾನಂದ ಕಾಲೇಜು ಅಧ್ಯಕ್ಷ ರವೀಂದ್ರ ಪತ್ತೂರು ಕರೆ ನೀಡಿದ್ದಾರೆ. ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ಭಾನುವಾರ ಕುಶಾಲನಗರದಲ್ಲಿ ಆಯೋಜಿಸಿದ್ದ ಹಿಂದೂ ಸಂಗಮ ಸಭಾ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಯಾವುದೇ ವ್ಯಕ್ತಿಯ, ಧರ್ಮದ, ರಾಜಕೀಯ ಪಕ್ಷದ ವಿರುದ್ಧ ಹಿಂದೂ ಸಂಗಮವಲ್ಲ. ನಮ್ಮ ಹಿಂದೂ ಸಮಾಜದ ಸಂಘಟನೆಗೆ ಗ್ರಾಮಗಳಲ್ಲಿ ಸಮಿತಿ ರಚನೆ ಮಾಡುವ ಮೂಲಕ ಜಾಗೃತಿ ಮೂಡುತ್ತಿರುವುದು ಹೆಮ್ಮೆಯ ಸಂಗತಿ. ಆದರೆ, ಹಿಂದೂಗಳೆಲ್ಲಾ ಒಂದೇ ಎಂಬ ಭಾವನೆಗಳೊಂದಿಗೆ ಜಾತಿ ಪದ್ಧತಿ ನಿರ್ಮೂಲನೆ ಮಾಡಬೇಕು. ಸ್ವದೇಶಿ ವಸ್ತುಗಳಿಗೆ ಆದ್ಯತೆ ಕೊಡಬೇಕು. ಹಿಂದುತ್ವದ ಅರ್ಥ ಮಾಡಿಕೊಂಡವರು ಜಗತ್ತಿನಾದ್ಯಂತ ಬೇರೆ ಬೇರೆ ರಂಗಗಳಲ್ಲಿ ಬೆಳೆಯುತ್ತಿದ್ದಾರೆ. ಕೆಲವರು ವಿನಾಶಕ್ಕೆ ಕೆಲಸ ಸಂಚು ರೂಪಿಸುತ್ತಿದ್ದಾರೆ. ಹಿಂದೂ ಪದ ಕೇಳಿದರೆ ಮೈ ಪರಚಿಕೊಳ್ಳುವ ಕಾಲವೊಂದಿತ್ತು. ಸ್ವಾಮಿ ವಿವೇಕಾನಂದರ ಆದರ್ಶಗಳ ಪಾಲನೆ ಹಿಂದೂಗಳ ಹೆಮ್ಮೆ. ರಾಷ್ಟ್ರೀಯ ಸ್ವಯಂ ಸೇವಾ…
ಮಡಿಕೇರಿ NEWS DESK ಜ.25 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಇಂದು ಗೋಣಿಕೊಪ್ಪಲು-ಪಾಲಿಬೆಟ್ಟ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದರು. ಮಳೆಗಾಲದಲ್ಲಿ ಹದಗೆಟ್ಟಿದ್ದ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಅನುದಾನ ಒದಗಿಸಿದ್ದರು. ನೂತನ ರಸ್ತೆಯ ಗುಣಮಟ್ಟ ಪರಿಶೀಲಿಸಿದ ಶಾಸಕರು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ಕಲ್ಪಿಸಿಕೊಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡೀರ ಅರುಣ್ ಮಾಚಯ್ಯ ಮತ್ತಿತರರು ಹಾಜರಿದ್ದರು.
ಶನಿವಾರಸಂತೆ NEWS DESK ಜ.24 : ಶನಿವಾರಸಂತೆ ಒಕ್ಕಲಿಗರ ಸಂಘದ ನೂತನ ಆಡಳಿತ ಮಂಡಳಿ ರಚನೆಗೊಂಡಿದ್ದು, ಅಧ್ಯಕ್ಷರಾಗಿ ಕೇಶವಮೂರ್ತಿ ಆಯ್ಕೆಯಾಗಿದ್ದಾರೆ. ಗೌರವ ಸಲಹಾ ಅಧ್ಯಕ್ಷರಾಗಿ ಕಳಲೆ ಕೃಷ್ಣೇಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಆರ್.ಹರೀಶ್ ಕುಮಾರ್, ಉಪಾಧ್ಯಕ್ಷರಾಗಿ ಜೆ.ಗಿರೀಶ್, ಶೆಟ್ಟಿಗನಹಳ್ಳಿ ಸಾಗರ್, ಪುಷ್ಪ ಪೊನ್ನಪ್ಪ, ಕಾರ್ಯದರ್ಶಿಯಾಗಿ ಚಂದ್ರಕಾಂತ್, ಖಜಾಂಚಿಯಾಗಿ ಎಸ್.ಡಿ.ಬಸವರಾಜು, ಸಂಘಟನಾ ಕಾರ್ಯದರ್ಶಿಗಳಾಗಿ ತಾಳೂರು ಪುನೀತ್, ಮೂದ್ರೊಳ್ಳಿ ವಿನೋದ್, ಎಂ.ಡಿ.ಯೋಗಾನಂದ, ಚಂದನ್, ಅಜ್ಜಳ್ಳಿ ನವೀನ್, ಗಂಗನಹಳ್ಳಿ ಮಂಜುನಾಥ್ ಹಾಗೂ ಪೂರ್ಣಿಮಾ ಕಿರಣ್ ಆಯ್ಕೆಯಾದರು. ನೂತನ ಆಡಳಿತ ಮಂಡಳಿಯ ಮೊದಲ ಸಭೆ ಯಶಸ್ವಿ ಕಲ್ಯಾಣ ಮಂಟಪದಲ್ಲಿ ಸ್ಥಾಪಕ ಅಧ್ಯಕ್ಷ ತಿಪ್ಪಳ್ಳಿ ಸುಬ್ಬಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸದಸ್ಯತ್ವ ನೋಂದಾವಣಿಗೆ ಸ್ಥಾಪಕಾಧ್ಯಕ್ಷರು ಚಾಲನೆ ನೀಡಿದರು. ನೂತನ ಅಧ್ಯಕ್ಷ ಕೇಶವಮೂರ್ತಿ ಅವರು ಮಾತನಾಡಿ ಸರ್ವರು ನಮ್ಮೊಂದಿಗೆ ಕೈಜೋಡಿಸುವುದರೊಂದಿಗೆ ಸಂಘವನ್ನು ಕಟ್ಟಿ ಬೆಳೆಸಲು ಸಹಕರಿಸಬೇಕೆಂದು ಮನವಿ ಮಾಡಿದರು. ಪೂರ್ಣಿಮಾ ಕಿರಣ್ ಪ್ರಾರ್ಥಿಸಿದರು, ನೂತನ ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್ ಸ್ವಾಗತಿಸಿದರು, ಕಾರ್ಯದರ್ಶಿ ಚಂದ್ರಕಾಂತ್ ವಂದಿಸಿದರು. ಮಾಜಿ ಅಧ್ಯಕ್ಷರಾದ ಜಗನ್ಪಾಲ್ ಹಾಗೂ…
ಮಡಿಕೇರಿ NEWS DESK ಜ.24 : ಅರೆಭಾಷೆ ಗೌಡ ಸಮುದಾಯದ ಕ್ರೀಡಾ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದಲ್ಲಿ ರಾಜ್ಯ ಸರಕಾರ 6 ಏಕರೆ ಜಾಗ ಮಂಜೂರು ಮಾಡಿದೆ ಎಂದು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರಕಾರ ನೀಡಿರುವ 6 ಏಕರೆ ಜಾಗದಲ್ಲಿ ಉದ್ದೇಶಿತ ಕ್ರೀಡಾ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಯೋಜನೆಗಳ ಅನುಷ್ಠಾನಕ್ಕಾಗಿ ಒಕ್ಕೂಟವು ಮಡಿಕೇರಿ ಗೌಡ ಸಮಾಜದೊಂದಿಗೆ ಕೈಜೋಡಿಸಲಿದೆ ಎಂದು ಹೇಳಿದ್ದಾರೆ. ಅರೆಭಾಷೆ ಗೌಡ ಜನಾಂಗದವರ ಶ್ರೇಯೋಭಿವೃದ್ಧಿಗಾಗಿ 8 ಏಕರೆ ಜಾಗ ನೀಡುವುದಾಗಿ ಮುಖ್ಯಮಂತ್ರಿಗಳು ಈ ಹಿಂದೆ ಭರವಸೆ ನೀಡಿದ್ದರು. ಇದೀಗ 6 ಏಕರೆ ಜಾಗಕ್ಕೆ ಮಂಜೂರಾತಿ ದೊರೆತಿದೆ. ಇದಕ್ಕಾಗಿ ಮುತುವರ್ಜಿ ವಹಿಸಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕಂದಾಯ ಸಚಿವರಾದ ಕೃಷ್ಣಭೈರೇಗೌಡ, ವಿಶೇಷ ಕಾಳಜಿಯಿಂದ ಸ್ಪಂದಿಸಿದ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರುಗಳಿಗೆ…
ಹುಬ್ಬಳ್ಳಿ ಜ.24 NEWS DESK : ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರ್ಹ ಫಲಾನುಭವಿಗಳಿಗೆ ವಿತರಿಸಿ, ಶುಭ ಹಾರೈಸಿದರು. ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಸಚಿವರುಗಳಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಸಂತೋಷ್ ಲಾಡ್, ಶಾಸಕರು, ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆದ ಪ್ರಸಾದ್ ಅಬ್ಬಯ್ಯ, ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಸಲೀಂ ಅಹ್ಮದ್ ಸೇರಿದಂತೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಮಡಿಕೇರಿ ಜ.24 NEWS DESK : ಅರೆಭಾಷಿಕ ಗೌಡ ಜನಾಂಗದ ಶ್ರೇಯೋಭಿವೃದ್ಧಿಗಾಗಿ ನಾಲ್ಕು ದಶಕಗಳ ಹಿಂದೆ ನಗರದಲ್ಲಿ ಸ್ಥಾಪಿತವಾದ ‘ಕೊಡಗು ಗೌಡ ಸಮಾಜ’ದ 2026 ರಿಂದ 28ನೇ ಸಾಲಿನವರೆಗಿನ ನೂತನ ಆಡಳಿತ ಮಂಡಳಿ ರಚನೆಯಾಗಿದ್ದು, ಅಧ್ಯಕ್ಷರಾಗಿ ದಂಬೆಕೋಡಿ ಎಸ್.ಆನಂದ ಅವರು ಆಯ್ಕೆಯಾಗಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಗೌಡ ಸಮಾಜದ ನೂತನ ಅಧ್ಯಕ್ಷ ದಂಬೆಕೋಡಿ ಎಸ್.ಆನಂದ ಅವರು ಆಡಳಿತ ಮಂಡಳಿ ರಚನೆಯ ಕುರಿತು ಮಾಹಿತಿ ನೀಡಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಸೂರ್ತಲೆ ಸೋಮಣ್ಣ, ಕಾರ್ಯದರ್ಶಿಯಾಗಿ ಪೂಳಕಂಡ ಎಂ.ಸಂದೀಪ್, ಖಜಾಂಚಿಯಾಗಿ ಕಾಳೇರಮ್ಮನ ನಂದ ಕುಮಾರ್, ನಿರ್ದೇಶಕರುಗಳಾಗಿ ಅಮೆ ಸೀತಾರಾಮ್, ಪೊನ್ನಚನ ಮಧು ಸೂದನ್, ಕೊಲ್ಯದ ಗಿರೀಶ್, ಹುದೇರಿ ರಾಜೇಂದ್ರ, ಪೈಕೆರ ಮನೋಹರ, ಪೇರಿಯನ ಘನಶ್ಯಾಮ್, ತೋಟಂಬೈಲು ಅನಂತ ಕುಮಾರ್, ಮಂದ್ರಿರ ತೇಜಸ್, ಕೊಂಬನ ಪ್ರವೀಣ್, ಚೊಕ್ಕಾಡಿ ಪ್ರೇಮಾ ರಾಘವಯ್ಯ ಹಾಗೂ ಮೂಲೆಮಜಲು ಅಮಿತ ಆಯ್ಕೆಯಾಗಿದ್ದಾರೆ. ಕೊಡಗು ಗೌಡ ಸಮಾಜದ ಹಿಂದಿನ ಅಧ್ಯಕ್ಷ ಪೇರಿಯನ ಜಯಾನಂದ ಅವರು ಹತ್ತು ವರ್ಷಗಳ ಕಾಲ ಅಧ್ಯಕ್ಷರಾಗಿ ಉತ್ತಮ…
ಮಡಿಕೇರಿ ಜ.24 NEWS DESK : ಬೆಂಗಳೂರು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಬೆಳಗಾವಿ ಜಿಲ್ಲಾ ಯುವ ಘಟಕದ ವತಿಯಿಂದ ನೀಡಲಾಗುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿಗೆ ಕೊಡಗಿನ ಬಿ.ಎಲ್.ಯಶಸ್ ರೈ ಆಯ್ಕೆಯಾಗಿದ್ದಾರೆ. ಬಿ.ಎಲ್.ಯಶಸ್ ರೈ 2025ರಲ್ಲಿ ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿಶೇಷ ಯುವ ರಾಯಭಾರಿಯಾಗಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಅಲ್ಲದೆ ಜಿಲ್ಲಾ ಯುವ ಜನೋತ್ಸವದಲ್ಲಿ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ್ದರು. ಇವರು ಮೂರ್ನಾಡು ಕೊಡಂಬೂರುವಿನ ಲವಕುಮಾರ್ ರೈ ಹಾಗೂ ಜಯಂತಿ ರೈ ದಂಪತಿಯ ಪುತ್ರ. ಜ.27 ರಂದು ಬೆಳಗಾವಿ ಜಿಲ್ಲೆ ಮೂಡಲಗಿಯಲ್ಲಿ ನಡೆಯುವ ಯುವಜಾತ್ರೆ ಕಾರ್ಯಕ್ರಮದಲ್ಲಿ ಬಿ.ಎಲ್.ಯಶಸ್ ರೈ ಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ NEWS DESK ಜ.24 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ. ಮೂರು ದಿನಗಳ ಕಾಲ ನಡೆಯುವ ‘ಫಲಪುಷ್ಪ ಪ್ರದರ್ಶನ’ವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ 33 ಅಡಿ ಎತ್ತರದಲ್ಲಿ 18 ಅಡಿ ಉದ್ದ, 23 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾದ ಕೊಡಗಿನ ಪ್ರಸಿದ್ದ ಶ್ರೀ ಭಗಂಡೇಶ್ವರ ದೇವಸ್ಥಾನದ ಕಲಾಕೃತಿ ನೋಡುಗರನ್ನು ಸೆಳೆಯುತ್ತಿವೆ. ಸುಮಾರು 8 ಸಾವಿರ ಕುಂದಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್ಗಳಲ್ಲಿ ಸುಮಾರು 20 ಸಾವಿರ ವಿವಿಧ ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ. ಭಾರತ ಏಕೀಕರಣದ ಸಂಕೇತವಾಗಿ ಕನ್ನಡ…






