ಲೇಖಕ: admin

ಮಡಿಕೇರಿ ಜ.6 NEWS DESK : ತಾಲೂಕಿನ ಬೆಟ್ಟಗೇರಿಯಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕೆಆರ್‍ಐಡಿಎಲ್ ಸಂಸ್ಥೆ ಮೂಲಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 40 ಕೋಟಿ ವೆಚ್ಚದಲ್ಲಿ ಒಟ್ಟು 252 ಕಾಮಗಾರಿಗಳನ್ನು ಎ.ಎಸ್.ಪೊನ್ನಣ್ಣ ಅವರು ಜನರ ಕೋರಿಕೆಯ ಮೇರೆಗೆ ಗುರುತಿಸಿ ಅನುದಾನದ ಹಂಚಿಕೆ ಮಾಡಿದ್ದಾರೆ. ಕ್ಷೇತ್ರದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ವ್ಯವಸ್ಥೆ ದೊರಕಬೇಕು ಎಂಬ ಆಶಯದೊಂದಿಗೆ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳನ್ನು ಗುರಿಯಾಗಿಸಿ ಕಾಮಗಾರಿಗೆ ಅನುದಾನ ಒದಗಿಸಲಾಗಿದೆ ಎಂದು ಅವರು ತಿಳಿಸಿದರು. ಸಾರ್ವಜನಿಕರಿಂದ ಮತ್ತಷ್ಟು ಕೋರಿಕೆಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಪ್ರಮುಖರಾದ ಇಸ್ಮಾಯಿಲ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ, ಕೊಡಗನ ತೀರ್ಥ ಪ್ರಸಾದ್, ಹನೀಫ್, ಬೆಟ್ಟಗೇರಿ…

Read More

ಮಡಿಕೇರಿ ಜ.6 NEWS DESK : ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 2026ರ ಜ.5 ರಿಂದ ಜಾರಿಗೆ ಬರುವಂತೆ ಕ.ರಾ.ರ.ಸಾ.ನಿಗಮ ಪುತ್ತೂರು ವಿಭಾಗದ ವತಿಯಿಂದ ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪ, ಸೋಮವಾರಪೇಟೆಯಿಂದ ಬೆಂಗಳೂರು ಹಾಗೂ ಮೈಸೂರಿಗೆ ಕಾರ್ಯಾಚರಿಸುವ ರಾಜಹಂಸ ಹಾಗೂ ನಾನ್ ಎಸಿ ಸ್ಲೀಪರ್ ಮಾದರಿಯ ಸಾರಿಗೆಗಳ ಪ್ರಯಾಣ ದರವನ್ನು ಕಡಿಮೆ ಮಾಡಲಾಗಿದೆ ಎಂದು ಕರಾರಸಾನಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಪಿ.ಶ್ರೀಹರಿಬಾಬು ಅವರು ತಿಳಿಸಿದ್ದಾರೆ. ಕುಶಾಲನಗರ-ಬೆಂಗಳೂರು ನಾನ್ ಎಸಿ ಸ್ಲೀಪರ್ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣದರ ರೂ.780, ಪ್ರಸ್ತುತ ನಿಗದಿಪಡಿಸಿದ ಪ್ರಯಾಣ ದರ ರೂ.700, ರಾಜಹಂಸ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣ ದರ ರೂ.680, ಪ್ರಸ್ತುತ ನಿಗದಿಪಡಿಸಿದ ಪ್ರಯಾಣದರ ರೂ.550, ಕುಶಾಲನಗರ-ಬೆಂಗಳೂರು ರಾಜಹಂಸ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣ ದರ ರೂ.620, ಪ್ರಸ್ತುತ ನಿಗದಿಪಡಿಸಿದ ಪ್ರಯಾಣದರ ರೂ.500, ವಿರಾಜಪೇಟೆ-ಬೆಂಗಳೂರು ರಾಜಹಂಸ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣದರ ರೂ.620, ಪ್ರಸ್ತುತ ನಿಗದಿಪಡಿಸಿದ ಪ್ರಯಾಣದರ ರೂ.550, ಗೋಣಿಕೊಪ್ಪ-ಬೆಂಗಳೂರು ರಾಜಹಂಸ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣದರ…

Read More

ಮಡಿಕೇರಿ ಜ.6 NEWS DESK :  ಪೊನ್ನಂಪೇಟೆ ಹಾಗೂ ಗೋಣಿಕೊಪ್ಪ ಠಾಣೆಗೆ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ  ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಿದರು. ಇದೇ ಸಂದರ್ಭ ಸಿಬ್ಬಂದಿ ವಸತಿ ಗೃಹ ಸಮುಚ್ಚಯಕ್ಕೆ ಭೇಟಿ ನೀಡಿ ಸಿಬ್ಬಂದಿಗಳ ಕುಂದು ಕೊರತೆ, ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

Read More

ಮಡಿಕೇರಿ ಜ.6 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಏ.6 ರಿಂದ ಏ.19 ರವರೆಗೆ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್-3 ಕ್ರಿಕೆಟ್ ಪಂದ್ಯಾವಳಿಯನ್ನು ಗೋಣಿಕೊಪ್ಪದಲ್ಲಿ ಆಯೋಜಿಸಲಾಗಿದೆ ಎಂದು ಫೌಂಡೇಶನ್‍ನ ಅಧ್ಯಕ್ಷ ಪೊರುಕೊಂಡ ಸುನಿಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಣಿಕೊಪ್ಪದ ಕಾವೇರಿ ಕಾಲೇಜು ಮೈದಾನದಲ್ಲಿ 14 ದಿನಗಳ ಕಾಲ ಐಪಿಎಲ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದ್ದು, ಎಲ್ಲಾ ಕೊಡವ ಭಾಷಿಕ ಜನಾಂಗದವರಿಗೆ ಅವಕಾಶ ಕಲ್ಪಿಸಲಾಗಿದೆ. ಕೊಡಗು ಮಾತ್ರವಲ್ಲದೆ ಜಿಲ್ಲೆಯ ಹೊರಗೆ ನೆಲೆಸಿರುವ ಕೊಡವರು ಹಾಗೂ ಕೊಡವ ಭಾಷಿಕರು ಕೂಡ ಪಂದ್ಯಾವಳಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಹೇಳಿದರು. ಸೀಸನ್-3ರ ವಿಜೇತರಿಗೆ ಪ್ರಥಮ ರೂ.2 ಲಕ್ಷ, ದ್ವಿತೀಯ 1 ಲಕ್ಷ ಹಾಗೂ ತೃತೀಯ 50 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ಹಾಗೂ ವೈಯಕ್ತಿಕ ಬಹುಮಾನ ನೀಡಿ ಗೌರವಿಸಲಾಗುವುದು. ಅಲ್ಲದೇ ಪ್ರತಿ ಪಂದ್ಯಾವಳಿಯಲ್ಲಿ ಮ್ಯಾನ್‍ಆಫ್‍ದಿ ಮ್ಯಾಚ್ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ತಿಳಿಸಿದರು. ಕಳೆದ ಬಾರಿ 175 ಆಟಗಾರರು…

Read More

ಮಡಿಕೇರಿ ಜ.6 NEWS DESK : ರಾಜಸ್ಥಾನದ ವಿಶ್ವ ವಿದ್ಯಾಲಯದಲ್ಲಿ ಎಂ.ಎ ಪಬ್ಲಿಕ್ ಪಾಲಿಸಿ ಲಾ ಅಂಡ್ ಗವರ್ನಯನ್ಸ್ (M A Public Policy Law And Governance) ವ್ಯಾಸಂಗ ಮಾಡುತ್ತಿರುವ ಸೋಮವಾರಪೇಟೆಯ ಎಸ್.ಎ.ಇಶಾ ಪ್ರಥಮ ವರ್ಷದ ಸೆಮಿಸ್ಟರ್ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ದ್ವಿತೀಯ ಸ್ಥಾನ ಪಡೆದು ಸಾಧನೆಗೈದಿದ್ದಾಳೆ. ಸೋಮವಾರಪೇಟೆಯ ಲೇಖಕಿ ರುಬೀನಾ ಎಂ.ಎ ಮತ್ತು ಆಸಿಫ್ ದಂಪತಿಗಳ ಪ್ರಥಮ ಪುತ್ರಿಯಾಗಿರುವ ಇಶಾ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸೋಮವಾರಪೇಟೆಯ ಓ ಎಲ್ ವಿ ಕಾನ್ವೆಂಟ್ ಮತ್ತು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ  ಪದವಿಪೂರ್ವ ಶಿಕ್ಷಣ, ಸೋಮವಾರಪೇಟೆ ಸಂತ ಜೋಸೆಫರ ವಿದ್ಯಾಸಂಸ್ಥೆಯಲ್ಲಿ ಪದವಿ ಜೊತೆಗೆ ಬೆಂಗಳೂರಿನ ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಮತ್ತು ಹಜ್ ಭವನದಲ್ಲಿ ಯುಪಿಎಸ್ ಸಿ ಕೋರ್ಸನ್ನು  ಮುಗಿಸಿದ್ದಾಳೆ. ಗೋಣಿಮರೂರು ಸರಕಾರಿ ಪ್ರೌಢ ಶಾಲೆಯಲ್ಲಿ ಹಿಂದಿ ಅತಿಥಿ ಶಿಕ್ಷಕಿಯಾಗಿ ಕೆಲವು ತಿಂಗಳು ಕರ್ತವ್ಯ ನಿರ್ವಹಿಸಿರುತ್ತಾಳೆ.

Read More

ಮಡಿಕೇರಿ ಜ.6 NEWS DESK :  ಕೊಡಗು ಗೌಡ ಯುವ ವೇದಿಕೆ ನೂತನ ಆಡಳಿತ ಮಂಡಳಿಯ ಸದಸ್ಯರು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿಯಾದರು.  ಅಧ್ಯಕ್ಷ ಬಾಲಾಡಿ ಮನೋಜ್ ನೇತೃತ್ವದಲ್ಲಿ ಕುಶಾಲನಗರದ ವಿಶ್ರಾಂತಿ ಗೃಹದಲ್ಲಿ  ಶಾಸಕರನ್ನು ಭೇಟಿಯಾದ ಕೊಡಗು ಗೌಡ ಯುವ ವೇದಿಕೆಯ ಪ್ರಮುಖರು, ಏಪ್ರಿಲ್ ತಿಂಗಳಲ್ಲಿ ನಡೆಯುವ ಒಲಂಪಿಕ್ ಮಾದರಿಯ ಕ್ರೀಡಾಕೂಟದ ಕುರಿತು ಚರ್ಚಿಸಿದರು.  ಈ ಬಾರಿ ಕೊಡಗು ಗೌಡ ಯುವ ವೇದಿಕೆಯ ನೇತೃತ್ವದಲ್ಲಿ ಏ.27 ರಿಂದ ಮೇ 17 ರ ವರೆಗೆ ಗೌಡ ಸಮುದಾಯಗಳ ನಡುವೆ ಕುಟುಂಬವಾರು ಟೆನ್ನಿಸ್ ಬಾಲ್ ಕ್ರಿಕೆಟ್ ಹಾಗೂ ಮೊದಲ ವರ್ಷದ ರಿಂಕ್ ಹಾಕಿ, ಶೂಟಿಂಗ್ ಸಾಂಸ್ಕೃತಿಕ ಕಾರ್ಯಕ್ರಮ ವೈವಿಧ್ಯತೆಯ ಪೈಪೋಟಿ ಮಿಸ್ಟರ್ ಗೌಡ ಮಿಸ್ ಗೌಡತಿ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ಶಾಸಕರು ಸಹಕಾರ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು  ಕ್ರೀಡೆಯ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೂ ಸಹಕಾರ ನೀಡುವಂತೆ ತಿಳಿಸಿದ್ದು, ವೇದಿಕೆಯ ಮನವಿಗೆ ಸೂಕ್ತ…

Read More

ಮೈಸೂರು ಜ.6 NEWS DESK : ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ವತಿಯಿಂದ ಭಾರತದಲ್ಲೇ ಪ್ರಥಮವಾಗಿ ನಿರ್ಮಿಸಲಾಗಿರುವ ರಾಜೀವ್ ಗಾಂಧಿ ಡ್ರಾಗನ್ ಪಾಂಡ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿ, ಶುಭ ಹಾರೈಸಿದರು. ಸಚಿವರಾದ ಹೆಚ್.ಸಿ.ಮಹದೇವಪ್ಪ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ಸೇರಿ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಜ.6 NEWS DESK  : ಸಮರ್ಥ ಕನ್ನಡಿಗರು ಸಂಸ್ಥೆಯ ವತಿಯಿಂದ ಫೆ.1 ರಂದು ಮಡಿಕೇರಿಯ ಲಯನ್ಸ್ ಹಾಲ್ ನಲ್ಲಿ ಮೂರರಿಂದ ಹನ್ನೆರಡು (3- 12) ವರ್ಷದವರೆಗಿನ ಮಕ್ಕಳಿಗೆ ಕಥೆ ಹೇಳುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧಿಗಳು ಸ್ವಚ್ಛ ಕನ್ನಡ ಭಾಷೆಯಲ್ಲಿಯೇ ಕಥೆ ಹೇಳಬೇಕು, ಮೂರು ನಿಮಿಷ ಕಾಲಾವಕಾಶ ನೀಡಲಾಗುವುದು, ಕಥೆಯ ಕೊನೆಗೆ ಕಥೆಯ ನೀತಿಯನ್ನು ಹೇಳಬೇಕು, ವಯಸ್ಸಿನ ದೃಢೀಕರಣಕ್ಕಾಗಿ ಆಧಾರ್ ಕಾರ್ಡ್ ತರಬೇಕು,  ಮೂರರಿಂದ ಏಳು ವರ್ಷ( 3 – 7 ) ಮತ್ತು ಏಳರಿಂದ ಹನ್ನೆರಡು ವರ್ಷ ( 7 – 12 ) ಎಂದು ಸ್ಪರ್ಧೆಯನ್ನು ಎರಡು ವಿಭಾಗಗಳಲ್ಲಿ ನಡೆಸಲಾಗುವುದು. ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳ ಜೊತೆಗೆ ಭಾಗವಹಿಸುವ ಎಲ್ಲ ಮಕ್ಕಳಿಗೂ ಪ್ರಶಂಸನಾ ಪತ್ರವನ್ನು ನೀಡಲಾಗುವುದು ಎಂದು ಆಯೋಜರು ತಿಳಿಸಿದ್ದಾರೆ. ಭಾಗವಹಿಸುವ ಮಕ್ಕಳು ಆ ದಿನ ಬೆಳಗ್ಗೆ 9.30ಕ್ಕೆ ಹಾಜರಿರಬೇಕು. ಸ್ಪರ್ಧೆಗೆ ಹೆಸರು ನೋಂದಾಯಿಸಲು ಜ.22 ಕೊನೆ ದಿನ.  ನೋಂದಣಿಗಾಗಿ  8762574584 – ಸೌಮ್ಯ ಸಂತೋಷ್, …

Read More

ಮಡಿಕೇರಿ NEWS DESK ಜ.6 : ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ನ ಕೋಶಾಧಿಕಾರಿ ಪಿ.ಮನೋಹರ್(64) ಅವರು ಇಂದು ಬೆಳಗ್ಗೆ ಪೊನ್ನಂಪೇಟೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವರ್ತಕರಾಗಿರುವ ಪಿ.ಮನೋಹರ್ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸುನಿಲ್ ಮಾದಪ್ಪ, ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ನೆಲ್ಲಿತ್ತಾಯ ಮತ್ತಿತರ ಪ್ರಮುಖರು ಮನೋಹರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Read More

ಮಡಿಕೇರಿ ಜ.6 NEWS DESK : ಕೊಡಗು ಜಿಲ್ಲಾ ವಿದ್ಯಾ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮ ಜ.11 ರಂದು ಮಡಿಕೇರಿ ಗೌಡ ಸಮಾಜದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಆಹ್ವಾನಿಸಲಾಯಿತು. ಶಾಸಕರ  ಗೃಹದ ಕಚೇರಿಯಲ್ಲಿ ಸಂಘದ ಅಧ್ಯಕ್ಷರಾದ ಹೆಚ್.ಎಸ್ ಚೇತನ್ ಹಾಗೂ ನಿರ್ದೇಶಕರು ಸನ್ಮಾನಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

Read More