ಲೇಖಕ: admin

ಬೇಕಾಗುವ ಪದಾರ್ಥಗಳು :  ಚಿಕನ್ ಕೈಮಾ – 250 ಗ್ರಾಂ,  ಬೆಳ್ಳುಳ್ಳಿ ಪೇಸ್ಟ್ – 1 ಚಮಚ,  ಶುಂಠಿ ಪೇಸ್ಟ್ – 1 ಚಮಚ,  ಕಾಳು ಮೆಣಸಿನ ಪುಡಿ – ಕಾಲು ಚಮಚ, ಅಚ್ಚ ಖಾರದ ಪುಡಿ – ಕಾಲು ಚಮಚ, ಉಪ್ಪು – ಕಾಲು ಚಮಚ, ಗರಂ ಮಸಾಲೆ ಪುಡಿ – ಅರ್ಧ ಚಮಚ, ದನಿಯಾ ಪುಡಿ – 1 ಚಮಚ,  ನಿಂಬೆ ರಸ – ಸ್ವಲ್ಪ, ಕಡಲೆ ಹಿಟ್ಟು – 2 ಚಮಚ, ಮೈದಾ ಹಿಟ್ಟು – 2 ಚಮಚ, ಉಪ್ಪು – ಕಾಲು ಚಮಚ, ಎಣ್ಣೆ – ಕರಿಯಲು ಅಗತ್ಯವಿದ್ದಷ್ಟು ಮಾಡುವ ವಿಧಾನ :  ಮೊದಲಿಗೆ ಒಂದು ಪಾತ್ರೆಯಲ್ಲಿ ಚಿಕನ್ ಅನ್ನು ತೆಗೆದುಕೊಂಡು, ಅದಕ್ಕೆ ಶುಂಠಿ ಹಾಗೂ ಬೆಳ್ಳುಳ್ಳಿ ಪೇಸ್ಟ್ ಹಾಕಿ, ಚೆನ್ನಾಗಿ ಮಿಶ್ರಣ ಮಾಡಿ. ಈಗ ಕಾಳು ಮೆಣಸಿನ ಪುಡಿ, ಅಚ್ಚ ಖಾರದ ಪುಡಿ, ಉಪ್ಪು, ಗರಂ ಮಸಾಲೆ, ದನಿಯಾ ಪುಡಿ, ನಿಂಬೆ ರಸ ಹಾಕಿ…

Read More

ವಿರಾಜಪೇಟೆ ಫೆ.24 : ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆಗಳ ಪುನಶ್ಚೇತನಗೊಳಿಸುವ ಕಾರ್ಯ ಯಶಸ್ವಿಯಾಗಿರುವುದರಿಂದ ರಾಜ್ಯ ಸರಕಾರ ಮೆಚ್ಚುಗೆ ವ್ಯಕ್ತಪಡಿಸಿದ ಹಿನ್ನಲೆ ಜನರಿಗೆ ನೀರಿನ ಸಮಸ್ಯೆಯಾಗದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯು ಹಳೆಯ ಕೆರೆಗಳನ್ನು ಅಭಿವೃದ್ಧಿಗೊಳಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಲೀಲಾವತಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಶಿವಕೇರಿಯಲ್ಲಿರುವ ಅಕ್ಕಚ್ಚಮ್ಮನ ಕೆರೆಯ ಅಭಿವೃದ್ಧಿ ”454 ನೇ ನಮ್ಮೂರ ನಮ್ಮ ಕೆರೆ” ಪುನಶ್ಚೇತನಗೊಳಿಸುವ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಡಾ. ಡಿ.ವಿರೇಂದ್ರ ಹೆಗ್ಗಡೆಯವರು ಈ ಹಿಂದೆ ಕೆರೆ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ್ದರು. ಅಂದಿನಿಂದಲು ರಾಜ್ಯದ ಎಲ್ಲೆಡೆ ಕೆರೆಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಸುಮಾರು 46 ವರ್ಷಗಳಿಂದ 150ಕ್ಕೂ ಹೆಚ್ಚು ಯೋಜನೆಗಳನ್ನು ಪ್ರಾರಂಭಿಸಿ ಭತ್ತ ಬೆಳೆಯುವ ಯಂತ್ರದ ಉಪಕರಣಗಳು, ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ವಿದ್ಯಾರ್ಥಿವೇತನ, ಸರಕಾರಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದಲ್ಲಿ ಸಹಾಯ, ದೇವಸ್ಥಾನ ಜೀರ್ಣೋದ್ದಾರ, ಹಿಂದೂ ರುದ್ರಭೂಮಿ ಅಭಿವೃದ್ಧಿ…

Read More

ಮಡಿಕೇರಿ ಫೆ.24 : ಕಾನೂನು ಮಾಪನಶಾಸ್ತ್ರ ಇಲಾಖೆ ವತಿಯಿಂದ ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರವು ಫೆಬ್ರವರಿ, 24 ರಿಂದ ಮಾರ್ಚ್, 4 ರವರೆಗೆ ಸಿದ್ದಾಪುರದ ಗುಡ್ ಲಕ್ ಸೂಪರ್ ಮಾರ್ಕೆಟ್ ಬಸ್ ಸ್ಟ್ಯಾಂಡ್ ಹತ್ತಿರ ನಡೆಯಲಿದೆ. ತಮ್ಮಲ್ಲಿ ಉಪಯೋಗಿಸುವ ಅಳತೆ, ತೂಕ ಮತ್ತು ತೂಕದ ಸಾಧನಗಳನ್ನು ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸಿಕೊಳ್ಳುವಂತೆ ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.24 : ಕೊಡಗು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಮಡಿಕೇರಿ ನಗರಸಭೆ, ಕುಶಾಲನಗರ ಹಾಗೂ ವಿರಾಜಪೇಟೆ ಪುರಸಭೆ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯಿತಿಯಲ್ಲಿ ಖಾಲಿ ಇರುವ ಪೌರ ಕಾರ್ಮಿಕರು, ಲೋಡರ್ಸ್ ಹಾಗೂ ಕ್ಲೀನರ್ಸ್ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಲುವಾಗಿ ಈಗಾಗಲೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಹಾಗೂ ಯೋಜನಾ ನಿರ್ದೇಶಕರ ಕಚೇರಿಯ ಸೂಚನಾ ಫಲಕದಲ್ಲಿ ಹಾಗೂ ಕಚೇರಿ ವೆಬ್‍ಸೈಟ್‍ಗಳಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆ ಇದ್ದಲ್ಲಿ ಫೆಬ್ರವರಿ, 22 ರಿಂದ 07 ದಿನದೊಳಗೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯ ಪೌರಾಯುಕ್ತರು/ ಮುಖ್ಯಾಧಿಕಾರಿ ಅಥವಾ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ದಿ ಕೋಶ, ಜಿಲ್ಲಾಧಿಕಾರಿ ಅವರ ಕಚೇರಿಗೆ ದಾಖಲಾತಿಗಳೊಂದಿಗೆ ಸಲ್ಲಿಸಬಹುದು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ ಅವರು ತಿಳಿಸಿದ್ದಾರೆ.

Read More

ವಿರಾಜಪೇಟೆ ಫೆ.24 : ವಿರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ ಎನ್.ಸಿ.ಸಿ ಘಟಕ, ಇಕೋ ಕ್ಲಬ್ ಹಾಗೂ ಸ್ಕೌಟ್ ಗೈಡ್ಸ್ ಘಟಕಗಳ ಸಹಯೋಗದಲ್ಲಿ ಸೈಕಲ್ ಜಾಥಾ ಹಾಗೂ ಸ್ವಚ್ಛತಾ ಅಭಿಯಾನ ನಡೆಯಿತು. ಜಾಥಾಕ್ಕೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಕರ್ ನಗರದ ಗಡಿಯಾರ ಕಂಬದ ಬಳಿ ಚಾಲನೆ ನೀಡಿದರು. ಸೈಕಲ್ ಜಾಥವು ಹೆಗ್ಗಳ ಗ್ರಾಮದ ಸ್ನೇಹಭವನ ಅನಾಥಾಶ್ರಮದ ತನಕ ನಡೆಯಿತು. ಮಾರ್ಗ ಮದ್ಯೆ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯವನ್ನು ನಡೆಸಿದರು. ಸ್ನೇಹ ಭವನ ಅನಾಥಾಶ್ರಮದಲ್ಲೂ ಸ್ವಚ್ಛತೆಯನ್ನು ನೆರವೇರಿಸಿದರು. ಅಲ್ಲಿಯೇ ಆಹಾರ ತಯಾರಿಸಿ ವೃದ್ಧರಿಗೆ ಬಡಿಸಿದರು. ಮತ್ತು ಮನೋರಂಜನ ಕಾರ್ಯಕ್ರಮ ನೀಡಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ನರ್ಸಿಂಗ್ ಹೋಮ್‍ನ ವೈದ್ಯೆ ಡಾ. ಫಾತಿಮಾ ಕಾರ್ಯಪ್ಪ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಒಟ್ಟು 60 ವಿದ್ಯಾರ್ಥಿಗಳಿದ್ದ ಈ ತಂಡದಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆ, ನೈರ್ಮಲ್ಯ ಹಾಗೂ ಇಂಧನ ಉಳಿತಾಯದ ಪ್ರಾಮುಖ್ಯತೆಯನ್ನು ಅರಿತರು. ಈ ಸಂದರ್ಭ ಎನ್.ಸಿ.ಸಿ ಅಧಿಕಾರಿ ಅಬ್ದುಲ್ ಮುನೀರ್, ಸ್ಕೌಟ್ ಗೈಡ್ ಸಂಚಾಲಕಿ ಸಹನ ಹಾಗೂ…

Read More

ನಾಪೋಕ್ಲು ಫೆ.24 : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಉರೂಸ್ ಇಂದಿನಿಂದ ಒಂದು ವಾರಗಳ ಕಾಲ ನಡೆಯಲಿದ್ದು ಎಮ್ಮೆಮಾಡು ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ವಾಹನ ಮತ್ತು ಜನದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಸಭೆಯನ್ನು ಏರ್ಪಡಿಸಲಾಗಿತ್ತು. ಎಮ್ಮೆಮಾಡು ಜಮಾಯತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿವೈಎಸ್ಪಿ ಜಗದೀಶ್ ,ವೃತ್ತ ನಿರೀಕ್ಷಕ ಶೇಖರ್,ನಾಪೋಕ್ಲು ಠಾಣೆಯ ಪ್ರಭಾರ ಠಾಣಾಧಿಕಾರಿ ಗೋಪಾಲಕೃಷ್ಣ, ಎಮ್ಮೆಮಾಡು ಜಮಾಯತ್ ಅಧ್ಯಕ್ಷ ಅಬೂಬಕರ್ ಸಖಾಫಿ ಸೇರಿದಂತೆ ಹಲವರು ಪಾಲ್ಗೊಂಡಿದ್ದು, ಉರೂಸ್ ಅನ್ನು ಸುವ್ಯವಸಿತವಾಗಿ ನಡೆಸುವ ಬಗ್ಗೆ ಕುಲಂಕುಶವಾಗಿ ಚರ್ಚಿಸಿ ಮಾರ್ಗದರ್ಶನ ನೀಡಲಾಯಿತು. ಈ ಸಂದರ್ಭ ಜಮಾಯತ್ ಕಾರ್ಯದರ್ಶಿ ಪಿ.ಕೆ. ಹ್ಯಾರೀಸ್, ಖಜಾಂಚಿ ಆಲಿಕುಟ್ಟಿ ನೆರೋಟ್, ಬಿ.ಎಂ.ಉಸ್ಮಾನ್ ಹಾಜಿ, ಬಿ.ಎಂ.ಉಮರ್ ಮುಸ್ಲಿಯರ್, ಅಬ್ದುಲ್ ಹಮೀದ್ ನೆರೋಟ್, ಕಾಳೆರ ಖಾದರ್ ಇನ್ನಿತರ ಉಪಸ್ಥಿತರಿದ್ದರು. ವರದಿ —- ದುಗ್ಗಳ ಸದಾನಂದ 

Read More

ವಿರಾಜಪೇಟೆ ಫೆ.24 : ದಕ್ಷಿಣ ವಲಯದ ಗಾಲ್ಫ್ ಚಾಂಪಿಯನ್‍ಶಿಪ್ ಪಂದ್ಯಾವಳಿಯಲ್ಲಿ ವಿದ್ಯಾರ್ಥಿ ಎಂ.ಟಿ.ಮೊಹಮ್ಮದ್ ಅಯಾನ್ ಸಾಧನೆ ಮಾಡಿದ್ದಾರೆ. ಕೂರ್ಗ್ ಗಾಲ್ಫ್ ಲಿಂಕ್ಸ್ ಬಿಟ್ಟಂಗಾಲ ಹಾಗೂ ಐ.ಜಿ.ಯು, ಎಂ.ಡಿ.ಜಿ.ಸಿ ಫೀಡರ್ ಗಾಲ್ಫ್ ಮಡಿಕೇರಿಯಲ್ಲಿ ನಡೆದ ‘ಡಿ’ ಬಾಲಕರ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಮೊಹಮ್ಮದ್ ಅಯಾನ್ 5ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಶಾಲಾ ಮುಖ್ಯೋಪಾಧ್ಯಾಯಿನಿ ಎಂ.ಬಿ.ಪ್ರಮೀಳಾ, ಸಹ ಮುಖ್ಯ ಶಿಕ್ಷಕಿ ನಿವ್ಯ ಅಭಿನಂದನೆ ಸಲ್ಲಿಸಿದರು.

Read More

ಮಡಿಕೇರಿ ಫೆ.24 :  ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಡಾ.ಕೆ.ಎಂ‌.ಸತೀಶ್ ಕುಮಾರ್  ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಹಾಸನ ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್ ಅವರು ಅಭಿನಂದಿಸಿದರು.

Read More

ಸೋಮವಾರಪೇಟೆ ಫೆ.23 : ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಮಾ.1ರಿಂದ ಕರೆದಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸೋಮವಾರಪೇಟೆ ತಾಲೂಕು ಘಟಕ ಸಂಪೂರ್ಣ ಬೆಂಬಲ ನೀಡಲು ನಿರ್ಣಯ ಕೈಗೊಂಡಿದೆ ಎಂದು ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್ ಹೇಳಿದರು. ರಾಜ್ಯ ಸರಕಾರಿ ನೌಕರರ ವೇತನ ಭತ್ಯೆ ಇದೂವರೆಗೆ ಪರಿಷ್ಕರಣೆ ಆಗಿಲ್ಲ. 6ನೇ ವೇತನ ಆಯೋಗದ ಅವಧಿ 2022ರ ಜುಲೈ 1ಕ್ಕೆ ಮುಗಿದಿದೆ. ಆದರೆ ರಾಜ್ಯದಲ್ಲಿ ಇನ್ನೂ 7ನೇ ವೇತನ ಆಯೋಗ ಜಾರಿ ಆಗಿಲ್ಲ. ಸುಮಾರು 22 ರಾಜ್ಯಗಳಲ್ಲಿ ಕಾಲಕಾಲಕ್ಕೆ ವೇತನ ಪರಿಷ್ಕರಣೆ ಆಗಿದೆ. ರಾಜ್ಯ ಅಭಿವೃದ್ಧಿಯಲ್ಲಿ ದೇಶಕ್ಕೆ 5ನೆ ಸ್ಥಾನದಲ್ಲಿದ್ದರೂ ಸರಕಾರಿ ನೌಕರರ ಹಿತ ಕಾಪಾಡಲು ಮುಂದಾಗಿಲ್ಲ. ಈ ಬಾರಿಯ ಆಯವ್ಯಯದಲ್ಲೂ ವೇತನ ಪರಿಷ್ಕರಣೆಗೆ ಹಣವನ್ನು ಮೀಸಲಿಟ್ಟಿಲ್ಲ. ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಗಣಿಸಿಲ್ಲ. ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲು ಶೇ.40 ಫಿಟ್‌ಮೆಂಟ್ ಸೌಲಭ್ಯವನ್ನು ನೀಡಬೇಕು ಎಂದರು. ನೆರೆಯ ಕೇರಳ ರಾಜ್ಯದಲ್ಲಿ 11ನೇ ವೇತನ…

Read More

ಸೋಮವಾರಪೇಟೆ ಫೆ.23 : ಯಡೂರು ವೈಸಿಸಿ ಕ್ರಿಕೆಟ್ ಕ್ಲಬ್ ವತಿಯಿಂದ ಬಿಟಿಸಿಜಿ ಸರ್ಕಾರಿ ಪದವಿ ಕಾಲೇಜು ಮೈದಾನದಲ್ಲಿ ನಡೆದ 23ನೇ ವರ್ಷದ ಕ್ರಿಕೆಟ್ ಪಂದ್ಯಾಟದಲ್ಲಿ ಟೀಂ ಎಚ್.ಡಿ.ಕೆ. ತಂಡವು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಫೈನಲ್ ಪಂದ್ಯದಲ್ಲಿ ಟೀಂ ಆರ್.ಆರ್. ತಂಡವನ್ನು ಮಣಿಸಿ, ಪ್ರಶಸ್ತಿ ಮುಡಿಗೇರಿಸಿಕೊಮಡಿತು. ಆರ್.ಆರ್. ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ವಿಜೇತ ತಂಡಗಳಿಗೆ ಪ್ರಥಮ ಬಹುಮಾನವಾಗಿ 22,222ನಗದು ಸೇರಿದಂತೆ ಟ್ರೋಫಿ, ದ್ವಿತೀಯ ಬಹುಮಾನ 11,111 ನಗದು ಸೇರಿದಂತೆ ಟ್ರೋಫಿ ವಿತರಿಸಲಾಯಿತು. ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಶಾಸಕ ಅಪ್ಪಚ್ಚುರಂಜನ್, ಕಾಂಗ್ರೆಸ್ ಮುಖಂಡ ಹರಪಳ್ಳಿ ರವೀಂದ್ರ, ಗ್ರಾ.ಪಂ. ಸದಸ್ಯ ಡಿ.ಎಸ್. ಸುರೇಶ್, ಚೌಡ್ಲು ವಿಎಸ್‌ಎಸ್‌ಎನ್ ನಿರ್ದೇಶಕ ವೈ.ಎಂ. ನಾಗರಾಜು, ಪ್ರಮುಖರಾದ ಸಿ.ಡಿ. ಪ್ರವೀಣ್, ಡಿ.ಜಿ. ಮಹೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ವೈಸಿಸಿ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಸಿ.ಎಂ. ಸುರೇಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜೀ ಸೈನಿಕ ಸಿ.ಎಂ. ಪ್ರದೀಪ್ ಮತ್ತು ಯಡೂರು ಬಿಟಿಸಿಜಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹೆಚ್.ಎನ್. ರಾಜು ಅವರುಗಳನ್ನು ಸನ್ಮಾನಿಸಲಾಯಿತು.

Read More