ಲೇಖಕ: admin

ಮಡಿಕೇರಿ ಫೆ.23 : ಕಾವೇರಿ ಸನ್ನಿಧಿ ಫಾರ್ ಇಂಡಿಯನ್ ಕಲ್ಚರ್ ಅಧೀನದಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕಾವೇರಿ ಕನ್ಯಾ ಗುರುಕುಲಂ ನಲ್ಲಿ 2023ನೇ ಸಾಲಿನ ಪ್ರವೇಶಾತಿ ಪ್ರಾರಂಭವಾಗಿದೆ ಎಂದು ಗುರುಕುಲಂ ನ ಸಂಸ್ಥಾಪಕ ಹಾಗೂ ಕೃಷಿ ವಿಜ್ಞಾನಿ ಡಾ.ಕೆ.ಕೆ.ಸುಬ್ರಮಣಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನದಿ ತಟದ ಸುಂದರ ಪರಿಸರದಲ್ಲಿ ಕಾವೇರಿ ಕನ್ಯಾ ಗುರುಕುಲಂ ಇದ್ದು, ಎಸ್‍ಎಸ್‍ಎಲ್‍ಸಿ ಪಾಸಾದ ಹೆಣ್ಣುಮಕ್ಕಳಿಗೆ ಎರಡು ವರ್ಷದ ಸಂಪೂರ್ಣ ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಕಲೆ ಹಾಗೂ ವಾಣಿಜ್ಯ ವಿಭಾಗಗಳ ಶಿಕ್ಷಣದ ಜೊತೆಗೆ ಕಂಪ್ಯೂಟರ್ ಶಿಕ್ಷಣ, ಇಂಗ್ಲೀಷ್ ಮತ್ತು ಸಂಸ್ಕøತ ಭಾಷೆ, ಮೌಲ್ಯಗಳು ಧ್ಯಾನ, ಪ್ರಾಣಾಯಮ, ಶಾಸ್ತ್ರೀಯ ಸಂಗೀತ, ಭಗವಗ್ದೀತೆ ಹಾಗೂ ಶ್ಲೋಕ ಪಠಣ, ಪ್ರಯೋಗಿಕ ಕೃಷಿ ಗುರುಕುಲ ಪದ್ಧತಿಯಲ್ಲಿ ಲಭ್ಯವಿದೆ ಎಂದರು. ಅಲ್ಲದೆ ಸ್ಥಳೀಯ ಕಾಲೇಜು ಮುಖಾಂತರ ಟ್ಯಾಗಿಂಗ್ ಪದ್ಧತಿಯಡಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದೆಂದರು. ಗುರುಕುಲಕ್ಕೆ ಸೇರಲು ಯಾವುದೇ ಜಾತಿ, ಕುಲ ಹಾಗೂ…

Read More

ಮಡಿಕೇರಿ ಫೆ.23 : ದಕ್ಷಿಣ ಕೊಡಗು ಭಾಗದಲ್ಲಿ ಹುಲಿ ಉಪಟಳ ಮಿತಿ ಮೀರಿದ್ದು, ಅರಣ್ಯ ಇಲಾಖೆ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲವೆಂದು ಆರೋಪಿಸಿರುವ ಕಿರುಗೂರು ಗ್ರಾ.ಪಂ ಸದಸ್ಯ ಚೆಪ್ಪುಡಿರ ರಾಕೇಶ್ ದೇವಯ್ಯ, ಅನಾಹುತಗಳು ಸಂಭವಿಸಿದರೆ ಅರಣ್ಯ ಅಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಕಿರುಗೂರು ವ್ಯಾಪ್ತಿಯ ತೋಟವೊಂದರಲ್ಲಿ ಹುಲಿ ಕಾಣಿಸಿಕೊಂಡ ಪ್ರದೇಶಕ್ಕೆ ಭೇಟಿ ನೀಡಿದ್ದ ಅವರು ಅರಣ್ಯ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಕಣ್ಣ ಮುಂದೆ ಹುಲಿ ಇದ್ದರೂ ಅರಣ್ಯ ಇಲಾಖೆ ಸೆರೆ ಹಿಡಿಯುವ ತುರ್ತು ಕ್ರಮ ಕೈಗೊಂಡಿಲ್ಲ. ಹಿರಿಯ ಅಧಿಕಾರಿಗಳ ಅನುಮತಿ ಬೇಕು ಎಂದು ಕೈಚೆಲ್ಲಿ ಕುಳಿತ್ತಿದ್ದಾರೆ. ಅನುಮತಿ ದೊರೆಯುವ ವೇಳೆಗೆ ಜೀವಹಾನಿಯಾದರೆ ಯಾರು ಹೊಣೆ ಎಂದು ಪ್ರಶ್ನಿಸಿದರು. ಇತ್ತೀಚೆಗೆ ಪೊನ್ನಂಪೇಟೆ ತಾಲ್ಲೂಕಿನ ಕೆ.ಬಾಡಗ ವ್ಯಾಪ್ತಿಯ ನಾಣಚ್ಚಿ ಗೇಟ್ ಬಳಿ ಹುಲಿಯೊಂದನ್ನು ಸೆರೆ ಹಿಡಿಯಲಾಗಿದೆ. ಸೆರೆಯಾದ ಹುಲಿಯನ್ನು ಕೆ.ಬಾಡಗ ಗ್ರಾಮದ ಚೂರಿಕಾಡು ವ್ಯಾಪ್ತಿಯಲ್ಲಿ ಯುವಕ ಹಾಗೂ ವೃದ್ಧನ ಜೀವವನ್ನು ಬಲಿ ಪಡೆದ ಹುಲಿ ಎಂದು ಪ್ರತಿಬಿಂಬಿಸಲಾಗಿತ್ತು.…

Read More

ಮಡಿಕೇರಿ ಫೆ.23 : ಕಾರ್ನರ್ ಫ್ರೆಂಡ್ಸ್ ವತಿಯಿಂದ 9ನೇ ವರ್ಷದ ಜಿಲ್ಲಾ ಮಟ್ಟದ ಮತ್ತು ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ ಕಡಗದಾಳಿನಲ್ಲಿ ಫೆ.25 ರಂದು ನಡೆಯಲಿದೆ ಎಂದು ಸಂಸ್ಥೆಯ ಸ್ಥಾಪಕ ಎಸ್.ಯು. ಜಲೀಲ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಡಗದಾಳು ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ 2 ಹಂತದ ಪಂದ್ಯಾವಳಿ ನಡೆಯಲಿದ್ದು, ರಾಜ್ಯ ಮಟ್ಟದಲ್ಲಿ ಆಹ್ವಾನಿತ 8 ತಂಡಗಳು ಭಾಗವಹಿಸಲಿವೆ. ಜಿಲ್ಲಾ ಮಟ್ಟದಲ್ಲಿ ನೋಂದಣಿಗೊಂಡ 10 ತಂಡಗಳು ಸೆಣಸಾಡಲಿವೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನವಾಗಿ 15 ಸಾವಿರ ರೂ., ದ್ವಿತೀಯ ಬಹುಮಾನವಾಗಿ 8 ಸಾವಿರ ರೂ., ತೃತೀಯ 5 ಸಾವಿರ ರೂ. ಮತ್ತು ನಾಲ್ಕನೇ ಬಹುಮಾನವಾಗಿ 2,500 ರೂ. ಮತ್ತು ಟ್ರೋಫಿಗಳನ್ನು ನೀಡಲಾಗುತ್ತದೆಂದು ತಿಳಿಸಿದರು. ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನವಾಗಿ 20 ಸಾವಿರ ರೂ., ದ್ವಿತೀಯ ಬಹುಮಾನವಾಗಿ 12 ಸಾವಿರ ರೂ. ಮತ್ತು ಆಕರ್ಷಕ ಟ್ರೋಫಿಗಳನ್ನು…

Read More

ಮಡಿಕೇರಿ ಫೆ.23 : ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಮಾ.1 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೊಡಗು ಶಾಖೆ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ರಾಜ್ಯ ಸರ್ಕಾರದ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವು ಅವರ ನ್ಯಾಯಸಮ್ಮತ ಹಕ್ಕಾಗಿದೆ. ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ನೌಕರರ ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು, ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದರೂ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು. ರಾಜ್ಯದ 2023-24ನೇ ಸಾಲಿನ ಆಯವ್ಯಯದಲ್ಲಿ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ನೌಕರರಲ್ಲಿ ನಿರಾಶೆ ಮೂಡಿಸಿದೆ ಎಂದರು. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ…

Read More

ಮಡಿಕೇರಿ ಫೆ.23 :  ಭಾರತ ಸರ್ಕಾರ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ,ಕೊಡಗು(ಮಡಿಕೇರಿ) 2022-23ನೇ ಸಾಲಿನ ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಜಿಲ್ಲೆಯ 5 ತಾಲ್ಲೂಕುಗಳಲ್ಲಿ ತಾಲ್ಲೂಕಿಗೆ ಇಬ್ಬರಂತೆ ಕೆಲಸ ಮಾಡಲು ಕೊಡಗು ಜಿಲ್ಲೆಯಲ್ಲಿ ವಾಸವಾಗಿರುವಂತವರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಗ್ರಾಮೀಣ ಭಾಗದಲ್ಲಿ ಯುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ಯುವಕ/ಯುವತಿ ಸಂಘಗಳನ್ನು ರಚಿಸುವುದು, ಆರೋಗ್ಯ, ಸಾಕ್ಷರತೆ, ನೈರ್ಮಲ್ಯ ಹಾಗೂ ಸಾಮಾಜಿಕ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸುವುದು. ಯುವ ನಾಯಕರಾಗಿ ಹೊರಹೊಮ್ಮಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬಯಸುವ ಯುವ ಜನರಿಗೆ ಉತ್ತಮ ಅವಕಾಶ. • ವಿದ್ಯಾರ್ಹತೆ ಕನಿಷ್ಠ SSLC ಪಾಸಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯವರಿಗೆ ಆದ್ಯತೆಯಿದೆ. • 18 ರಿಂದ 29 ವರ್ಷದ ಒಳಗಿನವರಾಗಿರಬೇಕು (01.04.23ಕ್ಕೆ ಅನ್ವಯವಾಗುವಂತೆ). ಎನ್.ಎಸ್.ಎಸ್./ಎನ್.ಸಿ.ಸಿ ಯಲ್ಲಿ ಅನುಭವವುಳ್ಳ ಅಭ್ಯರ್ಥಿಗಳು ಹಾಗೂ ನೆಹರು ಯುವ ಕೇಂದ್ರದಲ್ಲಿ ನೋಂದಾಯಿತ ಯುವಕ/ಯುವತಿ ಸಂಘಗಳ ಸದಸ್ಯರುಗಳಿಗೆ, ಮೊದ¯ ಆದ್ಯತೆ ನೀಡಲಾಗುವುದು. • ಪ್ರಸಕ್ತ ಸಾಲಿನಲ್ಲಿ ಓದುತ್ತಿರುವ ಕಾಲೇಜು ವಿದ್ಯಾರ್ಥಿಗಳು ಹಾಗೂ…

Read More

ಮಡಿಕೇರಿ ಫೆ.22 : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಂಡಿಸಿರುವ ಬಜೆಟ್ ನಲ್ಲಿ ಕೊಡಗು ಜಿಲ್ಲೆಗೆ ಯಾವುದೇ ಕೊಡುಗೆಯನ್ನು ನೀಡಿಲ್ಲವೆಂದು ಆರೋಪಿಸಿರುವ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಬಜೆಟ್ ಕುರಿತು ಚರ್ಚಿಸಲು ಪಕ್ಷದ ಫೇಸ್ ಬುಕ್ ಪೇಜ್ ನಲ್ಲಿ ಫೆ.26 ರಂದು ಬೆಳಗ್ಗೆ 10 ಗಂಟೆಗೆ ನೇರ ಪ್ರಸಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನೇರಪ್ರಸಾರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಇತ್ತೀಚೆಗೆ ಕೇಂದ್ರ ಸರ್ಕಾರ ಘೋಷಿಸಿರುವ ಬಜೆಟ್ ನಲ್ಲಿ ಕೊಡಗು ಜಿಲ್ಲೆಗೆ ಯಾವುದೇ ರೀತಿಯ ಯೋಜನೆ ಬಂದಿಲ್ಲ. ಕಳೆದ ವರ್ಷದ ಬಜೆಟ್ ನಲ್ಲಿ ಕೊಡ ಕೇಂದ್ರದಿಂದ ಜಿಲ್ಲೆಗೆ ಹಣ ಬಿಡುಗಡೆಯಾಗಿಲ್ಲ. ಇತ್ತೀಚೆಗೆ ಮುಖ್ಯಮಂತ್ರಿಗಳು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ರಸ್ತೆ ಅಭಿವೃದ್ಧಿಗೆಂದು ಕೇವಲ 100 ಕೋಟಿ ರೂ.ಗಳನ್ನು ನೀಡಲಾಗಿದೆ. ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಾಳಜಿ ತೋರಿಲ್ಲ. ಕಳೆದ ವರ್ಷ ಮಂಡಿಸಿದ ಬಜೆಟ್ ನಲ್ಲಿ ಕೊಡಗು ಜಿಲ್ಲೆಗೆ…

Read More

ಮಡಿಕೇರಿ ಫೆ.23 : ದೇಶಭಕ್ತಿಯ ಸಂದೇಶ ಸಾರುವ ವಾಹನ ಜಾಥಾವನ್ನು ಜಿಲ್ಲಾ ರೋಟರಿ ವತಿಯಿಂದ ಆಯೋಜಿಸಲಾಗಿದ್ದು ಈ ಜಾಥಾವು ಇದೇ ಫೆ.25 ರಂದು ಶನಿವಾರ  ಮಡಿಕೇರಿಗೆ ಆಗಮಿಸಲಿದೆ. ರೋಟರಿ ಜಿಲ್ಲಾ ಸಹಾಯಕ ಗವನ೯ರ್ ರತನ್ ತಮ್ಮಯ್ಯ ಈ ಬಗ್ಗೆ ಮಾಹಿತಿ ನೀಡಿದ್ದು, ಶನಿವಾರ ಮಧ್ಯಾಹ್ನ 1.30 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಮ್ಯೂಸಿಯಂನ ಅಮರ್ ಜವಾನ್ ಸ್ಮಾರಕದಲ್ಲಿ ಆಯೋಜಿತ ಸರಳ ಕಾಯ೯ಕ್ರಮದಲ್ಲಿ ರೋಟರಿ  ವತಿಯಿಂದ ವಿರಾಜಪೇಟೆಯ ನಿವೖತ್ತ ಮೇಜರ್ ಎಸ್.ವೆಂಕಟಗಿರಿ, ಮಡಿಕೇರಿಯ ಗೌಡಂಡ ಮೇಜರ್ ಸುಬೇದಾರ್ ತಿಮ್ಮಯ್ಯ  ಅವರನ್ನು ಈ ಸಂದಭ೯ ಸನ್ಮಾನಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ರೋಟರಿ ಜಿಲ್ಲೆ 3181 ವತಿಯಿಂದ ಮಂಗಳೂರಿನಿಂದ ಪ್ರಾರಂಭವಾಗುವ ವಾಹನ ಜಾಥಾವು ಬಿ.ಸಿ.ರೋಡ್. ಪುತ್ತೂರು, ಸುಳ್ಯ ಮಾಗ೯ವಾಗಿ ಮಡಿಕೇರಿಗೆ ಬಂದು ಹುತಾತ್ಮ ಸೈನಿಕರಿಗೆ ಅಮರ್ ಜವಾನ್ ಸ್ಮಾರಕದಲ್ಲಿ ನಮನ ಸಲ್ಲಿಸಿ ಕುಶಾಲನಗರ ಮೂಲಕ ಮೈಸೂರಿಗೆ ತೆರಳಲಿದೆ. ಜಾಥಾ ಸಂದಭ೯ ರೋಟರಿ ಜಿಲ್ಲೆಯ ನಿಯೋಜಿತ ಗವನ೯ರ್ ವಿಕ್ರಂದತ್ತ, ಪ್ರಮುಖರಾದ ಸತೀಶ್ ಬೊಳಾರ್,   ರೋಟರಿ ದೇಶಭಕ್ತಿ ಸಂದೇಶ…

Read More

ಮಡಿಕೇರಿ ಫೆ.23 : ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಮೆಜರ್ ಡಾ. ರಾಘವ ಬಿ ಪ್ರಾಂಶುಪಾಲರು (ಇತಿಹಾಸ ವಿಭಾಗ), ಡಾ. ತಿಪ್ಪೇಸ್ವಾಮಿ ಈ ಆರ್ಥಶಾಸ್ತ್ರ ವಿಭಾಗ, ಡಾ. ಗಾಯತ್ರಿದೇವಿ ವಾಣಿಜ್ಯ ಶಾಸ್ತ್ರವಿಭಾಗ, ಡಾ. ನಾಗರಾಜ್ ಕೆ.ಪಿ ಭೌತಶಾಸ್ತ್ರ ವಿಭಾಗ ಮತ್ತು ಡಾ. ಎಂ.ಪಿ ಕೃಷ್ಣ ಪ್ರಾಣಿಶಾಸ್ತ್ರ ವಿಭಾಗ ಇವರುಗಳಿಗೆ ಸರ್ಕಾರದ ಆದೇಶದಂತೆ ಯುಜಿಸಿ ಮಾನದಂಡಗಳ ಪ್ರಕಾರ ತಮ್ಮ ಸೇವಾ ಅವಧಿಯಲ್ಲಿನ ಸಂಶೋಧನೆ, ಪೀರ್ ರಿವ್ಯೂಡ್ ಜರ್ನಲ್ ಹಾಗೂ ಯುಜಿಸಿ ಅನುಮೋದಿತ, ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ನಿಯತಕಾಲಿಕೆಗಳು ಮತ್ತು ಪತಿಕೆಗಳಲ್ಲಿ ಪ್ರಕಟವಾದ ಲೇಖನಗಳನ್ನು ಬರೆದ ಪುಸ್ತಕಗಳನ್ನು ಪರಿಗಣಿಸಿ ಪ್ರಾಧ್ಯಾಪಕರನ್ನಾಗಿ ಆಯ್ಕೆ ಮಾಡಲಾಗಿದೆ. ಆಯ್ಕೆ ಸಮಿತಿಯಲ್ಲಿ ವಿಶ್ವವಿದ್ಯಾನಿಲಯದ ಮಾನ್ಯ ಕುಲಪತಿಗಳು, ಕುಲಸಚಿವರು ಮತ್ತು ವಿಶ್ವವಿದ್ಯಾನಿಲಯ ಮತ್ತು ಅಂತರ್ ವಿಶ್ವವಿದ್ಯಾನಿಲಯದ ವಿಷಯ ಪರಿಣಿತರು, ಸಂದರ್ಶನ ನಡೆಸಿ ಪ್ರಾಧ್ಯಾಪಕ ಹುದ್ದೆಗೆ ಪದೋನ್ನತ್ತಿಯನ್ನು ನೀಡಿರುತ್ತಾರೆ. ಇಲ್ಲಿಯ ತನಕ ವಿಶ್ವವಿದ್ಯಾನಿಲಯಗಳ ಭೋದಕ ವರ್ಗದವರಿಗೆ ಮಾತ್ರ ಪ್ರಾಧ್ಯಾಪಕರ ಹುದ್ದೆಯನ್ನು ನೀಡುವ ಪದ್ಧತಿ ಇದ್ದು, ಇತ್ತೀಚೆಗೆ ಯುಜಿಸಿ…

Read More

ಮಡಿಕೇರಿ ಫೆ.23 : ಕೊಡವ ಕುಟುಂಬಗಳ ನಡುವೆ ಮಾ.17 ರಿಂದ ಏ.10 ರವರೆಗೆ 23 ದಿನಗಳ ಕಾಲ ನಾಪೋಕ್ಲುವಿನಲ್ಲಿ ನಡೆಯುವ ಅಪ್ಪಚೆಟ್ಟೋಳಂಡ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಕ್ರೀಡೆ, ಯುವ ವ್ಯವಹಾರಗಳು ಮತ್ತು ಮಾಹಿತಿ, ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಭರವಸೆ ನೀಡಿದ್ದಾರೆ. ಒಲಂಪಿಯನ್ ಡಾ.ಎ.ಬಿ.ಸುಬ್ಬಯ್ಯ ಅವರ ನೇತೃತ್ವದಲ್ಲಿ ಅಪ್ಪಚೆಟ್ಟೋಳಂಡ ಹಾಕಿ ಉತ್ಸವದ ಪ್ರಮುಖರು ಸಚಿವರನ್ನು ಭೇಟಿಯಾಗಿ ಕರಪತ್ರವನ್ನು ನೀಡಿ ಉತ್ಸವಕ್ಕೆ ಆಗಮಿಸುವಂತೆ ಮನವಿ ಮಾಡಿದರು. ಕೊಡವ ಕುಟುಂಬಗಳ ನಡುವೆ ನಡೆಯುತ್ತಿರುವ ಹಾಕಿ ಉತ್ಸವ ವಿಶ್ವ ದಾಖಲೆ ಗಳಿಸಿರುವ ಬಗ್ಗೆ ವಿವರಿಸಿದರು. ಕೊಡವ ಹಾಕಿ ಹಬ್ಬದ ವಿಶೇಷತೆಯನ್ನು ಪ್ರಧಾನಮಂತ್ರಿಗಳಿಗೆ ತಿಳಿಸುವುದಾಗಿ ಸಚಿವರು ಭರವಸೆ ನೀಡಿದರು. ಅಪ್ಪಚೆಟ್ಟೋಳಂಡ ಹಾಕಿ ಉತ್ಸವ ಮಾ.17 ರಿಂದ ಆರಂಭಗೊಳ್ಳಲಿದ್ದು, ಪ್ರತಿದಿನ ಮೂರು ಮೈದಾನಗಳಲ್ಲಿ 24 ಪಂದ್ಯಗಳು ನಡೆಯಲಿವೆ. 2018 ರಲ್ಲಿ 334 ತಂಡಗಳು ಪಾಲ್ಗೊಂಡಿದ್ದು, ಈ ಬಾರಿ 350 ತಂಡಗಳು ಸೆಣಸಾಡುವ ನಿರೀಕ್ಷೆ ಇದೆ ಎಂದು ಅಪ್ಪಚೆಟ್ಟೋಳಂಡ ಹಾಕಿ ಸಮಿತಿ…

Read More

ಮಡಿಕೇರಿ ಫೆ.23 : ಚೆಟ್ಟಳ್ಳಿ ಸಮೀಪದ ಪೊನ್ನತ್ಮೊಟ್ಟೆಯ ಕೂರ್ಗ್ ಹಂಟರ್ಸ್ ಯುವಕರ ಸಂಘದ ವತಿಯಿಂದ 2ನೇ ವರ್ಷದ ರಾಜ್ಯ ಮಟ್ಟದ ಹೊನಲು ಬೆಳಕಿನ ಕಾಲ್ಚೆಂಡು ಪಂದ್ಯಾವಳಿ ಮಾ.3 ರಿಂದ 5 ವರೆಗೆ ಪೊನ್ನತ್ಮೊಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಕೂರ್ಗ್ ಹಂಟರ್ಸ್ ಯುವಕ ಸಂಘದ ಕಾರ್ಯದರ್ಶಿ ಉನೈಸ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಫೆಬ್ರವರಿ 27 ತಂಡಗಳ ನೋಂದಣಿಗೆ ಕೊನೆಯ ದಿನವಾಗಿದೆ. ಮೊದಲು ನೋಂದಾಯಿತ 50 ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ರೂ.1500  ಮುಂಗಡ ಹಣ ಪಾವತಿಸಿ ನೋಂದಣಿ ಮಾಡಿಕೊಂಡ ತಂಡಗಳನ್ನು ಮಾತ್ರ ಟೈಸ್ ಪ್ರಕಿಯೆಯಲ್ಲಿ ಪರಿಗಣಿಸುವುದು. ಪ್ರಥಮ ಬಹುಮಾನ ರೂ.50 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ರೂ.30 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ಅಲ್ಲದೇ, ವೈಯಕ್ತಿಕ ಬಹುಮಾನಗಳನ್ನು ನೀಡಲಾಗುತ್ತಿದೆ. ಮೈದಾನ ಪ್ರವೇಶ ಶುಲ್ಕ ರೂ.3000 ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸುವಂತೆ…

Read More