ಮಡಿಕೇರಿ ಮಾ.11 NEWS DESK : ರಾಜಾಸೀಟು ಅಭಿವೃದ್ಧಿ ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜಾಸೀಟು ಬಳಿಯ ಕೂರ್ಗ್ ವಿಲೇಜ್ ನ್ನು ಸದುಪಯೋಗಪಡಿಸಿಕೊಳ್ಳುವ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಟಿಕೆಟ್ ಕೌಂಟರ್ ನಿರ್ಮಾಣ ಹಾಗೂ ಮತ್ತಿತರ ಸೌಲಭ್ಯ ಸಂಬಂಧ ಅಗತ್ಯ ಕ್ರಮವಹಿಸುವಂತೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಮಾಹಿತಿ ಕೇಂದ್ರ, ಪ್ರವಾಸಿ ಮಿತ್ರ, ಆಹಾರ ಕೇಂದ್ರ, ಸಿಸಿಟಿವಿ ಕ್ಯಾಮರಾ ಅಳವಡಿಸುವುದು, ಸೋಲಾರ್ ಲೈಟ್ ಅಳವಡಿಕೆ, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವುದು, ಪುಟಾಣಿ ರೈಲು ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ಮುಂದಾಗಬೇಕು ಎಂದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಾಜಾಸೀಟು ಅಭಿವೃದ್ಧಿ ಸಂಬಂಧ ನಡೆದ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ,…
ಲೇಖಕ: admin
ಮಡಿಕೇರಿ NEWS DESK ಮಾ.11 : ಪ್ರತಿಷ್ಠಿತ ವಿಜಯರತ್ನ ಇಂಟರ್ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನ ಕುಶಾಲಪ್ಪ ಅವರನ್ನು ಬಲ್ಲಮಾವಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಡಿಕೇರಿ ಕುಟುಂಬದಸ್ಥರ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಕೊಡಗಿನಲ್ಲಿ ಅವರು ಮಾಡುತ್ತಿರುವ ಉತ್ತಮ ಸಮಾಜ ಸೇವೆ, ಉದ್ಯಮ ಕ್ಷೇತ್ರದಲ್ಲಿನ ಸಾಧನೆಯನ್ನು ಇದೇ ಸಂದರ್ಭ ಕೊಂಡಾಡಲಾಯಿತು. ವಿಜಯರತ್ನ ಇಂಟರ್ನ್ಯಾಷನಲ್ ಪ್ರಶಸ್ತಿ ದುಬೈನಲ್ಲಿ ಸ್ವೀಕರಿಸಿ ಹಿಂದಿರುಗಿದ ಬೆನ್ನಲ್ಲೇ ಸಂಭ್ರಮದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕುಟುಂಬದ ಹಿರಿಯರಾದ ಎಡಿಕೇರಿ ಸೀತಾರಾಮ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿ ಪ್ರಮುಖರಾದ ಎಡಿಕೇರಿ ದೇವಯ್ಯ, ಎಡಿಕೇರಿ ಉತ್ತಪ್ಪ, ಎಡಿಕೇರಿ ಚಂದ್ರಶೇಖರ ಸೇರಿದಂತೆ ಕುಟುಂಬದ ಎಲ್ಲಾ ಸದಸ್ಯರು, ಗುರು, ಹಿರಿಯರು ಮತ್ತು ಬಂಧುಬಳಗ ಈ ಸಂದರ್ಭ ಉಪಸ್ಥಿತರಿದ್ದರು. ಪ್ರಸನ್ನ ಅವರನ್ನು ಅಭಿನಂದಿಸಿ ಮಾತನಾಡಿ ಅವರ ಸೇವೆ ಮತ್ತು ಸಾಧನೆಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಹಾಗೂ ಮುಂದಿನ ಭವಿಷ್ಯ ಇನ್ನಷ್ಟು ಉಜ್ವಲವಾಗಿರಲಿ ಎಂದು ಹಾರೈಸಿದರು. ಕುಟುಂಬದ ಏಕತೆ, ಸಂಸ್ಕೃತಿ ಮತ್ತು ಸಾಧಕರಿಗೆ ಗೌರವ ಸಲ್ಲಿಸುವ ಸಲುವಾಗಿ ನಡೆದ ಈ ಕಾರ್ಯಕ್ರಮದಲ್ಲಿ 60…
ಮಡಿಕೇರಿ NEWS DESK ಮಾ.11 : ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನದ ಉದ್ಘಾಟನಾ ಸಮಾರಂಭ ಮಾ.15 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇರಳ ಗೌಡ ಸಮಾಜದ ಅಧ್ಯಕ್ಷ ಅಯ್ಯಂಡ್ರ ರಾಘವಯ್ಯ ಅವರು ಭಾನುವಾರ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ದಾನಿಗಳು, ಸಮಾಜದ ಬಾಂಧವರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ನೂತನ ಸಮುದಾಯ ಭವನವನ್ನು ಎಲ್ಲಾ ಮೂಲಭೂತ ಸೌಲಭ್ಯಗಳೊಂದಿಗೆ ನಿರ್ಮಿಸಲಾಗಿದೆ. ನೂತನ ಸಮುದಾಯ ಭವನವನ್ನು ಬೆಳಿಗ್ಗೆ 10 ಗಂಟೆಗೆ ವಿಧಾನಸಭೆಯ ಮಾಜಿ ಅಧ್ಯಕ್ಷ ಕೊಂಬಾರನ ಜಿ.ಬೋಪಯ್ಯ ಅವರು ಉದ್ಘಾಟಿಸಲಿದ್ದಾರೆ. ಚೇರಳ ಗೌಡ ಸಮಾಜದ ಅಧ್ಯಕ್ಷ ಅಯ್ಯಂಡ್ರ ಸಿ.ರಾಘವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಜಿ ಸಚಿವ ಮಂಡೇಪoಡ ಪಿ.ಅಪ್ಪಚ್ಚುರಂಜನ್, ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮಂಡೇಪoಡ ಪಿ.ಸುನಿಲ್ ಸುಬ್ರಮಣಿ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕೊಡಗು ಗೌಡ ಸಮಾಜಗಳ…
ಬೆಂಗಳೂರು NEWS DESK ಮಾ.10: ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲು ಹಳಿ ತಡೆಗೋಡೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನ ಪರಿಷತ್ತಿಗಿಂದು ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಸುಜಾ ಕುಶಾಲಪ್ಪ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಫೆ.28ರಂದು ಕಾಡಿನಂಚಿನ ನಿವಾಸಿ 17 ವರ್ಷದ ಬಾಲಕಿ ಆನೆ ದಾಳಿಯಿಂದ ಮೃತಪಟ್ಟಿದ್ದರೆ, ಮಾ.9ರಂದು ಕಾಡಿನೊಳಗೇ ವಾಸಿಸುತ್ತಿದ್ದ 55 ವರ್ಷದ ಬುಡಕಟ್ಟು ಮಹಿಳೆ ಸಾವಿಗೀಡಾಗಿದ್ದಾರೆ ಇದು ಅತ್ಯಂತ ನೋವಿನ ಸಂಗತಿ ಎಂದರು. ಜೀವ ಅತ್ಯಂತ ಅಮೂಲ್ಯವಾದ್ದು, ಇದಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಅರಣ್ಯ ಇಲಾಖೆ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆನೆ ನಿಗ್ರಹ ಕಂದಕ, ಸೌರ ವಿದ್ಯುತ್ ಬೇಲಿ ನಿರ್ವಹಣೆ ಮಾಡಲಾಗುತ್ತಿದೆ. 2 ಆನೆ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಈಗ 2 ಪುಂಡಾನೆಗಳ ಸೆರೆಗೆ ಮುಖ್ಯ ವನ್ಯಜೀವಿ ಪರಿಪಾಲಕರು ಆದೇಶ…
ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಶಾಶ್ವತ ಪರಿಹಾರ ಸೂಚಿಸಬೇಕು. ತಪ್ಪಿದಲ್ಲಿ ಅರಣ್ಯ ಇಲಾಖೆ ವಿರುದ್ಧ ಮಹಿಳಾ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಕೊಡಗು ಜಿಲ್ಲಾ ಮಹಿಳಾ ಬಿಜೆಪಿ ಅಧ್ಯಕ್ಷೆ ಅನಿತಾ ಪೂವಯ್ಯ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ 10 ದಿನಗಳಲ್ಲಿ ಕಾಡಾನೆ ದಾಳಿಗೆ ಎರಡು ಅಮಾಯಕ ಹೆಣ್ಣು ಜೀವಗಳು ಬಲಿಯಾಗಿದ್ದು, ಇದು ಅತ್ಯಂತ ವಿಷಾದಕರ. ಜಿಲ್ಲೆಯಲ್ಲಿ ಮಾನವ ಜೀವಕ್ಕೆ ಬೆಲೆಯೇ ಇಲ್ಲದಾಗಿದೆ, ವನ್ಯಜೀವಿಗಳ ನಿರಂತರ ದಾಳಿ ಆತಂಕ ಸೃಷ್ಟಿಸಿದೆ. ಮಾನವರು ಮಾತ್ರವಲ್ಲದೆ ಜಾನುವಾರುಗಳು ಕೂಡ ಬಲಿಯಾಗುತ್ತಿವೆ, ಬೆಳೆ ನಷ್ಟವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅರಣ್ಯ ಸಚಿವರು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಬೇಕು, ಕೇವಲ ಯೋಜನೆಯನ್ನು ಘೋಷಿಸಿದರೆ ಸಾಲದು. ಇವುಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಮೂಲಕ ವನ್ಯಜೀವಿಗಳ ದಾಳಿಯಿಂದ ಜಿಲ್ಲೆಯ ಜನರನ್ನು ಪಾರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಕಳೆದ ಮೂರು…
ಮಡಿಕೇರಿ NEWS DESK ಮಾ.10 : ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕೊಡವ ಪಾರಂಪರಿಕ ಕೇಂದ್ರ(ಕೊಡವ ಹೆರಿಟೇಜ್ ಸೆಂಟರ್) ಹಾಗೂ ಕರ್ನಾಟಕ ಸುವರ್ಣ ಸಮುಚ್ಚಯ ಭವನ ಕಟ್ಟಡ ಕಾಮಗಾರಿಯನ್ನು ಜಿಲ್ಲಾಧಿಕಾರಿ ಮಂಗಳವಾರ ಪರಿಶೀಲಿಸಿದರು. ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಬಾಕಿ ಇರುವ 1.40 ಕೋಟಿ ರೂ. ಬಿಡುಗಡೆಯಾಗಲಿದ್ದು, ತ್ವರಿತವಾಗಿ ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಗೆ ಸೂಚಿಸಿದರು. ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಬಹಳ ಹಿಂದೆಯೇ ಪೂರ್ಣಗೊಳ್ಳಬೇಕಿತ್ತು, ಆದರೆ ಈಗಲಾದರೂ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಕರ್ನಾಟಕ ಸುವರ್ಣ ಸಮುಚ್ಚಯ ಭವನದಲ್ಲಿ ಕಲಾಮಂದಿರ, ಕಲಾ ಗ್ಯಾಲರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಅರೆಭಾಷೆ ಸಾಹಿತ್ಯ ಅಕಾಡೆಮಿ ಕಚೇರಿಗಳು ಕರ್ನಾಟಕ ಸುವರ್ಣ ಸಮುಚ್ಚಯ ಭವನಕ್ಕೆ ಸ್ಥಳಾಂತರವಾಗಲಿದೆ…
ಮಡಿಕೇರಿ NEWS DESK ಮಾ.10 : ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ವಿರಾಜಪೇಟೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಿ.ಪಿ.ಕವಿತಾ ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭ ಗ್ರಾ.ಪಂ ಯ ನಿಕಟಪೂರ್ವ ಅಧ್ಯಕ್ಷ ಆಪಟ್ಟೀರ ಟಾಟು ಮೊಣ್ಣಪ್ಪ, ಅಭಿವೃದ್ಧಿ ಅಧಿಕಾರಿ ಹೆಚ್.ಟಿ.ಸುಕೇಶ್, ಕಾರ್ಯದರ್ಶಿ ಬಿ.ಬಿ.ಪೆಮ್ಮಯ್ಯ, ಸಿಬ್ಬಂದಿಗಳಾದ ಸಚಿತ್ ಟಿ.ಜಿ, ಬಾನಂಡ ಪದ್ಮಿನಿ ಸುದನ್ ಹಾಗೂ ಎನ್.ಆರ್.ಗುರು ಹಾಜರಿದ್ದರು. ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಪಿ.ಪಿ.ಕವಿತಾ ಅವರು ಮಾಯಮುಡಿ ಗ್ರಾ.ಪಂ ಕುರಿತು ಮಾಹಿತಿ ಪಡೆದರು.
ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಮಾನವನ ನಡುವಿನ ಸಂಘರ್ಷ ಕೈಮೀರಿ ಹೋಗಿದೆ. ಕಳೆದ 10 ದಿನಗಳಲ್ಲಿ ಕಾಡಾನೆ ದಾಳಿಗೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಆದರೆ ಅರಣ್ಯ ಸಚಿವರು ಮಾತ್ರ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿಲ್ಲವೆಂದು ಬಿಜೆಪಿ ವಿರಾಜಪೇಟೆ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರಣ್ಯ ಸಚಿವರಿಗೆ ಅರಣ್ಯ ಖಾತೆಯ ಜವಾಬ್ದಾರಿಯನ್ನು ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ. ಕೊಡಗು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವನ್ಯಜೀವಿಗಳ ದಾಳಿಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಲ್ಲೆಂದರಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ, ಇದೇ ಫೆ.28 ರಂದು ಕಾಡಾನೆ ದಾಳಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸಾವಿಗೀಡಾದ ಘಟನೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಇದೀಗ ಕುಶಾಲನಗರ ತಾಲ್ಲೂಕಿನ ಬಾಳೆಗಂಡಿ ಎಂಬಲ್ಲಿ ಜಲಜಾಕ್ಷಿ ಎಂಬುವವರು ಜೀವ ಕಳೆದುಕೊಂಡಿದ್ದಾರೆ. ಆದರೆ ಅರಣ್ಯ ಸಚಿವರು ಮಾತ್ರ ಈ ಘಟನೆಗಳಿಗೂ ತಮಗೂ…
ಮಡಿಕೇರಿ NEWS DESK ಮಾ.10 : ಕಾಡಾನೆ ದಾಳಿಯಿಂದ ದುರದೃಷ್ಟವಶಾತ್ ಮೃತಪಟ್ಟ ಜಲಜಾಕ್ಷಿ ಅವರ ಬಾಳೆಗುಂಡಿ ಹಾಡಿ ನಿವಾಸಕ್ಕೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಮೃತ ಜಲಜಾಕ್ಷಿ ಅವರ ಕುಟುಂಬದ ಸದಸ್ಯರುಗಳಿಗೆ ಸಾಂತ್ವನ ಹೇಳಿದ ಶಾಸಕರು ಮೊದಲ ಹಂತದ ಪರಿಹಾರ ರೂ.5 ಲಕ್ಷ ರೂಪಾಯಿಗಳ ಚೆಕ್ ನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ನಂತರ ಮಾತನಾಡಿದ ಶಾಸಕರು ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ. ಈ ಹಿನ್ನೆಲೆಯಲ್ಲಿ ದಾಳಿ ಮಾಡಿದ ಕಾಡಾನೆ ಸೆರೆಗೆ ತಕ್ಷಣ ಕಾರ್ಯಪ್ರವೃತ್ತವಾಗುಂತೆ ಅರಣ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಆನೆ- ಮಾನವ ಸಂಘರ್ಷ ತಡೆಗೆ ಶಾಶ್ವತ ಪರಿಹಾರ ಸೂಚಿಸಲು ತಿಳಿಸಲಾಗಿದೆ ಎಂದರು.
ಮಡಿಕೇರಿ NEWS DESK ಮಾ.10 : ಮಡಿಕೇರಿ- ಮುಕ್ಕೋಡ್ಲು- ಹಮ್ಮಿಯಾಲ ನಡುವೆ ಸಂಚರಿಸುತ್ತಿದ್ದ ಬಸ್ ನಿಯಮಿತವಾಗಿ ಬಾರದೆ ಇರುವುದರಿಂದ ಗ್ರಾಮಸ್ಥರು ಸಮಸ್ಯೆ ಎದುರಿಸುತ್ತಿದ್ದರು. ಮಡಿಕೇರಿಯ ಕೆಎಸ್ಆರ್ಟಿಸಿ ಡಿಪೋ ಅಧಿಕಾರಿಗಳಿಗೆ ಅನೇಕ ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು ನೇರವಾಗಿ ಶಾಸಕ ಡಾ.ಮಂತರ್ ಗೌಡ ಅವರಿಗೆ ದೂರು ಸಲ್ಲಿಸಿದರು. ಇದಕ್ಕೆ ತಕ್ಷಣ ಸ್ಪಂದಿಸಿದ ಶಾಸಕರು ಮಡಿಕೇರಿ ಕೆಎಸ್ಆರ್ಟಿಸಿ ಡಿಪೋದಲ್ಲಿ ಹಮ್ಮಿಯಾಲ ಗ್ರಾಮಸ್ಥರ ಸಮ್ಮುಖದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮಡಿಕೇರಿ- ಮುಕ್ಕೋಡ್ಲು- ಹಮ್ಮಿಯಾಲ ಭಾಗದ ಸಾರಿಗೆ ಸಮಸ್ಯೆಯನ್ನು ತಕ್ಷಣ ಬಗೆಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇದೀಗ ಗ್ರಾಮದ ಜನರ ಬೇಡಿಕೆಯಂತೆ ಮಡಿಕೇರಿ – ಮುಕ್ಕೋಡ್ಲು- ಹಮ್ಮಿಯಾಲ ನಡುವಿನ ಬಸ್ ವ್ಯವಸ್ಥೆಯನ್ನು ಕಾರ್ಯರೂಪಕ್ಕೆ ತರಲಾಗಿದೆ.






