ಲೇಖಕ: admin

ಮಡಿಕೇರಿ ಜ.24 NEWS DESK : ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಎನ್‍ಆರ್‍ಎಲ್‍ಎಂ, ಸಂಜೀವಿನಿ ಯೋಜನೆಯಡಿ ಗ್ರಾಮೀಣ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಬಲವರ್ಧನೆಗಾಗಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ಜನವರಿ, 27 ಮತ್ತು 28 ರಂದು ನಗರದ ಗಾಂಧಿ ಮೈದಾನದ ಆವರಣದಲ್ಲಿ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.

Read More

ಸೋಮವಾರಪೇಟೆ ಜ.24 NEWS DESK : ಏಳು ದಶಕಗಳ ನಿರಂತರ ಅಧ್ಯಯನ, ಸಂಶೋಧನೆ ಹಾಗೂ ಬರಹಗಳ ಮೂಲಕ ಕನ್ನಡ ಭಾಷೆಗೆ ಜಾಗತಿಕ ಮನ್ನಣೆ ತಂದು ಕೊಟ್ಟ ವಿಶ್ವ ಕವಿ ಡಾ.ಕುವೆಂಪು ಕನ್ನಡ ಸಾಹಿತ್ಯ ಮರೆಯಲಾರದ ಮಾಣಿಕ್ಯ ಎಂದು ರಾಜ್ಯ ಒಕ್ಕಲಿಗ ಸಮಾಜದ ಕೊಡಗು ಜಿಲ್ಲಾ ನಿರ್ದೇಶಕರೂ ಆದ ಸಮಾಜ ಸೇವಕ ಹರಪಳ್ಳಿ ರವೀಂದ್ರ ಶ್ಲಾಘಿಸಿದರು.  ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ತೋಳೂರು ಶೆಟ್ಟಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಯರ ವಸತಿ ಶಾಲೆಯ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ” ರಾಷ್ಟ್ರಕವಿ ಕುವೆಂಪು – ವಿಚಾರಧಾರೆ ” ಗಳ ಕುರಿತಾದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಕುವೆಂಪು ಅವರು ತಮ್ಮ ಜೀವನದುದ್ದಕ್ಕೂ ಪರಿಸರ, ಪ್ರಾಣಿ – ಪಕ್ಷಿ, ಗಿಡ – ಮರಗಳನ್ನು ಒಡಗೂಡಿದ ಪ್ರಕೃತಿಯನ್ನು ಆರಾಧಿಸಿದರು. ಪರಿಸರ ಪ್ರಕೃತಿ ಸಂರಕ್ಷಣೆಯ ಮಹತ್ವ ಸಾರಿದರು. ಆ ಮೂಲಕ ಗುಡಿ ಗೋಪುರ ಮಸೀದಿ ಮಂದಿರಗಳನ್ನು ಬಿಟ್ಟು ಹೊರ ಬನ್ನಿ ಎಂದು ಸಾರಿದ ಮಹಾಮಹಿಮ ಎಂದರು. ಯಡೂರು…

Read More

ವಿರಾಜಪೇಟೆ ಜ.29 NEWS DESK : ಕುಶಾಲನಗರದ ಸ್ಟಾರ್ಟ್ ಬ್ರೈನ್ ಅಕಾಡೆಮಿ ವತಿಯಿಂದ 4ನೇ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಮಹಮ್ಮದ್ ವೈಜ್ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ. ಮಹಮ್ಮದ್ ವೈಜ್ ಅಮ್ಮತ್ತಿಯ ಗುಡ್ ಶೆಪರ್ಡ್ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಮಹಮ್ಮದ್ ರಪೀಕ್ ಮತ್ತು ಸುಮಯ್ಯ ತಬಸ್ಸುಮ್ ಅವರ ಪುತ್ರ.

Read More

ಮಡಿಕೇರಿ ಜ.24 NEWS DESK : ಕೊಡವರು ಸೇರಿದಂತೆ ಎಲ್ಲರನ್ನೂ ಒಳಗೊಂಡ ಪರಿಪೂರ್ಣ ಗಣರಾಜ್ಯವನ್ನು ನಿರ್ಮಿಸಬೇಕು ಮತ್ತು ಸೂಕ್ಷ್ಮ ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ನಂಬುಗೆಯ ಕೊಡವರ 10 ಕಾನೂನುಬದ್ಧ ಆಕಾಂಕ್ಷೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜ.26 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 77ನೇ ಗಣರಾಜ್ಯೋತ್ಸವದಂದು ಬೆಳಿಗ್ಗೆ 10.30 ರಿಂದ 11.30 ರವರೆಗೆ ಸತ್ಯಾಗ್ರಹ ನಡೆಸಿ ಕೊಡವ ಆತ್ಮಸಾಕ್ಷಿ, ಕೊಡವ ಒಮ್ಮತ ಮತ್ತು ಕೊಡವ ಪ್ರಜ್ಞೆಯ ಅಭಿವ್ಯಕ್ತಿಯನ್ನು ದೃಢೀಕರಿಸುವ ಕುರಿತು ಸಂವಿಧಾನಬದ್ಧವಾದ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಸಂವಿಧಾನದ 5, 6 ಮತ್ತು 8ನೇ ಪರಿಚ್ಛೇದಗಳೊಂದಿಗೆ 244ನೇ ಮತ್ತು 371ನೇ ವಿಧಿಯ ಅಡಿಯಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ರಚಿಸಬೇಕು. ಸ್ವ-ಆಡಳಿತ, ಸ್ವ-ನಿರ್ಣಯ ಹಕ್ಕುಗಳು, ಆದಿಸಮಸಂಜಾತ ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಮಾನ್ಯತೆ ಕಲ್ಪಿಸಬೇಕು.…

Read More

ನಾಪೋಕ್ಲು ಜ.24 NEWS DESK : ಚೆರಿಯ ಪರಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಳ ದಾನಿ ಪಿ.ಪಿ.ಮೋಹಿದಿನ್ ಹಾಜಿ ಅವರಿಗೆ ಪುಷ್ಪ ನಮನದೊಂದಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಶೀದ್ ಅವರು ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿ ಮೋಹಿದೀನ್ ಹಾಜಿ ಅವರ ನಿಸ್ವಾರ್ಥ ಸೇವೆಗೆ ಪ್ರಸಂಸೆ ವ್ಯಕ್ತಪಡಿಸಿದರು. ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು. ಚರಿಯಪರಂಬುವಿನಲ್ಲಿ ಮೋಹಿದಿನ್ ಹಾಜಿ ಅವರು 1975 ರಲ್ಲಿ ಚರಿಯ ಪರಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 25 ಸೆಂಟ್ ಜಾಗವನ್ನು ದಾನವಾಗಿ ನೀಡಿ ವಿದ್ಯಾರ್ಥಿಗಳಿಗೆ ಬಟ್ಟೆ, ಪುಸ್ತಕವನ್ನು ಉದಾರವಾಗಿ ನೀಡಿ ವಿದ್ಯಾರ್ಜನೆಗೆ ಸಹಕರಿಸಿದ್ದರು . ಅವರು ಶನಿವಾರ ನಿಧನರಾಗಿದ್ದು ಅವರ ಆತ್ಮಕ್ಕೆ ಶಾಂತಿಯನ್ನು ಕೋರಿ ಚೆರಿಯ ಪರಂಬು ಸರ್ಕಾರಿ ಶಾಲೆಯಲ್ಲಿ ಶಾಲೆಯ ಆಡಳಿತ ಮಂಡಳಿ, ಅಂಗನವಾಡಿ ಕೇಂದ್ರ ,ಹಳೆಯ ವಿದ್ಯಾರ್ಥಿ ಸಂಘ ಹಾಗೂ ವಿದ್ಯಾರ್ಥಿಗಳು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು. ಈ ಸಂದರ್ಭ ಶಾಲೆಯ…

Read More

ಮಡಿಕೇರಿ ಜ.24 NEWS DESK : ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ನಡೆಯಲಿರುವ ಫಲಪುಷ್ಪ ಪ್ರದರ್ಶನದ ಸಮಯ‌ ವಾಹನ ಸಂಚಾರ, ವಾಹನ‌ ನಿಲುಗಡೆ ಮತ್ತು ಬಂದೋಬಸ್ತು ವ್ಯವಸ್ಥೆಗಳ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ಪಿ ಬಿಂದುಮಣಿ  ಪರಿಶೀಲಿಸಿದರು.

Read More

ಮಡಿಕೇರಿ ಜ.24 NEWS DESK : ಬೆಂಗಳೂರಿನಲ್ಲಿ‌ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಕೂಟದಲ್ಲಿ‌ 45+ ವಿಭಾಗದ 100 ಮೀ ಮತ್ತು 200 ಮೀ ಓಟದ ಸ್ಪರ್ಧೆಯಲ್ಲಿ ಜಿಲ್ಲಾ ನಿಸ್ತಂತು ಕೇಂದ್ರದ ಎಎಸ್‌ಐ ಜೋಷಿ ಪ್ರಥಮ ಸ್ಥಾನ ಗೆದ್ದುಕೊಂಡಿದ್ದಾರೆ. ಇವರನ್ನು  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ  ಅವರು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಅಭಿನಂದಿಸಿದರು.

Read More

ಮಡಿಕೇರಿ ಜ.24 NEWS DESK : ತುರ್ತು ಸಂದರ್ಭಗಳಲ್ಲಿ ನಾಗರಿಕರ ಕರೆಗಳಿಗೆ ಶೀಘ್ರ ಸ್ಪಂದಿಸಲು ಜಿಲ್ಲೆಯ ವಿವಿಧೆಡೆ 112 ತುರ್ತು ಸ್ಪಂದನೆ ದ್ವಿಚಕ್ರ ವಾಹನಕ್ಕೆ ಚಾಲನೆ ದೊರೆಯಿತು. ಈಗಾಗಲೇ ಕಾರ್ಯಾಚರಿಸುತ್ತಿರುವ 112 ವಾಹನಗಳ ಜೊತೆಗೆ, ನಗರ ಪ್ರದೇಶಗಳಲ್ಲಿ ಇನ್ನೂ ಶೀಘ್ರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಮತ್ತು ಕುಶಾಲನಗರ ಪಟ್ಟಣ ಠಾಣೆಗಳಲ್ಲಿ ದ್ವಿಚಕ್ರ ವಾಹನದ ಮೂಲಕವೂ 112 ತುರ್ತು ಸ್ಪಂದನೆ ಸೇವೆ ಲಭ್ಯವಾಗಲಿದೆ.

Read More

ಮಡಿಕೇರಿ ಜ.24 NEWS DESK : ಅಂತರರಾಷ್ಟ್ರೀಯ ಶೋಲಿಂಗ್ ಕುಂಗ್ಫು ಸಂಸ್ಥೆಯ ವತಿಯಿಂದ ಚೆಟ್ಟಿಮಾನಿಯ ಸಾಂದೀಪನಿ ಶಾಲೆಯಲ್ಲಿ ನಡೆದ ಕರಾಟೆ ಪರೀಕ್ಷೆಯಲ್ಲಿ ಚೆಟ್ಟಿಮಾನಿಯ ಸಾಂದೀಪನಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಳದಿ, ಅರೇಂಜ್ ಹಾಗೂ ಹಸಿರು  ಬೆಲ್ಟ್ ಪಡೆದು ಸಾಧನೆ ಮಾಡಿದ್ದಾರೆ. ಶಾಲೆಯ ಒಟ್ಟು ಮೂವತ್ತು ವಿದ್ಯಾರ್ಥಿಗಳು  ಭಾಗವಹಿಸಿದ್ದು, ಹನ್ನೊಂದು ವಿದ್ಯಾರ್ಥಿಗಳು ಹಳದಿ, ಹತ್ತು ವಿದ್ಯಾರ್ಥಿಗಳು ಅರೇಂಜ್, ಒಂಭತ್ತು ವಿದ್ಯಾರ್ಥಿಗಳು ಹಸಿರು ಬೆಲ್ಟ್ ಗೆದ್ದುಕೊಂಡಿದ್ದಾರೆ. ಪರೀಕ್ಷಾರ್ಥಿಗಳಾಗಿ ಇಂಡಿಯನ್ ಗ್ರ್ಯಾಂಡ್ ಮಾಸ್ಟರ್ ಶಿಫು ಇಂದ್ರಜಿತ್, ಇಂಡಿಯನ್ ತರಬೇತುದಾರರಾದ ದೇವರಾಜ್, ಕೊಡಗು ಜಿಲ್ಲೆಯ ತರಬೇತುದಾರರಾದ ವೇಣು ಗೋಪಾಲ್, ಕರ್ನಾಟಕ ರಾಜ್ಯದ ತರಬೇತುದಾರರಾದ ನಾಟೋಳಂಡ ನಂಜುಂಡ ಪಾಲ್ಗೊಂಡಿದ್ದರು. ಉತ್ತಿರ್ಣರಾದ ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಅಭಿನಂದಿಸಿದರು.

Read More

ಮೈಸೂರು, ಜ.24 NEWS DESK : ಮೈಸೂರು ನಗರಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ. ಉತ್ತರದಾಯಿತ್ವ ಇಲ್ಲದೇ ಅಕ್ರಮಗಳ ಸಂಖ್ಯೆ ಏರಿಕೆಯಾಗಿದೆ. ಇದಕ್ಕೆ ಕಾಂಗ್ರೆಸ್‌ ಸರ್ಕಾರವೇ ಸಂಪೂರ್ಣ ಹೊಣೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆರೋಪಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಯದುವೀರ್‌, ನಗರ ಪಾಲಿಕೆಯಲ್ಲಿ ಸಾರ್ವಜನಿಕ ನಿಧಿಯನ್ನೇ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಮೂವರು ಮಹಿಳಾ ಸಿಬ್ಬಂದಿಯನ್ನು ಅಮಾನತು ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ. ಚುನಾಯಿತ ಕಾರ್ಪೊರೇಟರ್‌ಗಳು ಇಲ್ಲದಿರುವುದು, ಸಮರ್ಥ ಮೇಲ್ವಿಚಾರಣೆ ಮಾಡದಿರುವುದು, ಸುಧಾರಣೆ ಕ್ರಮಗಳನ್ನು ಕೈಗೊಳ್ಳದಿರುವುದು, ಉತ್ತರದಾಯಿತ್ವ ಇರದಿರುವುದು ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದೆ ಎಂದಿದ್ದಾರೆ. ಕಾಂಗ್ರೆಸ್ ರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದೇ ವಿಳಂಬ ಧೋರಣೆ ತೋರುತ್ತಿರುವುದು ಎಲ್ಲದ್ದಕ್ಕೂ ಕಾರಣವಾಗಿದೆ ಎಂದು ಸಂಸದರು ತಿಳಿಸಿದ್ದಾರೆ. ಸ್ಥಳೀಯ ಪ್ರಜಾಪ್ರಭುತ್ವ ಹಾದಿ ತಪ್ಪಿದಾಗ, ಭ್ರಷ್ಟಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಒಟ್ಟಾರೆ ಎಲ್ಲ ಪ್ರಕರಣಗಳಿಗೂ ಕಾಂಗ್ರೆಸ್ ಸರ್ಕಾರವೇ ಸಂಪೂರ್ಣ ಹೊಣೆಯಾಗಿದೆ ಎಂದು ಯದುವೀರ್‌ ಆರೋಪಿಸಿದ್ದಾರೆ. ಗ್ರೇಟರ್‌…

Read More