ಮಡಿಕೇರಿ ಫೆ.21 : ಕಿಕ್ ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ದೆಹಲಿಯ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಫೆ.13 ರಿಂದ 16 ರವರೆಗೆ ನಡೆದ ರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಕೊಡಗಿನ ಎ.ಆಜ್ಞ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾಳೆ. ಕೂಡುಮಂಗಳೂರಿನ ಅಮಿತ್ ವಿಶ್ವನಾಥ್ ಹಾಗೂ ಎಂ.ವಿ.ದಿವ್ಯಾ ದಂಪತಿಯ ಪುತ್ರಿ ಆಜ್ಞ (7) ಅತ್ತೂರಿನ ಜ್ಞಾನಗಂಗಾ ಶಾಲೆಯ ವಿದ್ಯಾರ್ಥಿನಿ. 2021ರಲ್ಲಿ ನಡೆದ ರಾಜ್ಯ ಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ ಮತ್ತು 2022 ರಲ್ಲಿ ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ನಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಳು. ಈಕೆ ಕೂರ್ಗ್ ಕಾಂಬ್ಯಾಟ್ ಕ್ಲಬ್ನಲ್ಲಿ ತರಬೇತಿ ಪಡೆದಿದ್ದು, 6ನೇ ವಯಸ್ಸಿನಿಂದಲೇ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾಳೆ. ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕವನ್ನು ಗೆಲ್ಲಬೇಕು ಮತ್ತು ಮಿಶ್ರ ಮಾರ್ಷಲ್ ಆಟ್ರ್ಸ್ನಲ್ಲಿ ವಿಶ್ವ ಚಾಂಪಿಯನ್ ಆಗಬೇಕು ರಾಷ್ಟ್ರಕ್ಕೆ ಕೀರ್ತಿ ತರಬೇಕು ಎಂಬ ಕನಸು ಹೊಂದಿದ್ದಾಳೆ. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಭಾಗವಹಿಸಿದ ಕೊಡಗಿನ ಮೊದಲ ಕಿರಿಯ ಬಾಲಕಿ ಎಂಬ…
ಲೇಖಕ: admin
ಮಡಿಕೇರಿ ಫೆ.21 : ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಗು ಗೌಡ ಜನಾಂಗ ಬಾಂಧವರ (ಅರಭಾಷಿಗ) ವಧು-ವರರ ಸಮಾವೇಶ ಮಾ.11 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ತಿಳಿಸಿದ್ದಾರೆ. ಅಂದು ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯ ಕೊಡಗು ಗೌಡ ವಿದ್ಯಾ ಸಂಘದ ಸಭಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತರು ತಮ್ಮ ಭಾವಚಿತ್ರ ಮತ್ತು ಇತರ ಎಲ್ಲಾ ಮಾಹಿತಿಗಳೊಂದಿಗೆ ಖುದ್ದಾಗಿ ಭಾಗವಹಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ಸಂ 9449476171, 9739495381 9449086589 ನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದ್ದಾರೆ.
ಮಡಿಕೇರಿ ಫೆ.21 : ಕೊಡವಾಮೆರ ಕೊಂಡಾಟ ಸಂಘಟನೆ ನಡೆಸುವ ಕೊಡವ ಅಂತರ್ ಕುಟುಂಬಗಳ ನಡುವಿನ ಬಾಳೋಪಾಟ್ ರ ಬಂಬಂಗ ಪೈಪೋಟಿಯ ಎರಡನೇ ವರ್ಷದ ಸ್ಪರ್ಧೆಗೆ ಹೆಸರು ನೋಂದಾಯಿಸಲು ಸಂಘಟನೆಯು ಮನವಿ ಮಾಡಿದೆ. ಈಗಾಗಲೇ ಪ್ರಥಮ ವರ್ಷದ ಸ್ಪರ್ಧೆಯನ್ನು ಯಶಸ್ವಿಯಾಗಿ ನಡೆಸಿ ಎರಡನೆಯ ವರ್ಷದ ಸ್ಪರ್ಧೆಯ ತಯಾರಿಯಲ್ಲಿರುವ ಸಂಘಟನೆಯು, ಆಸಕ್ತ ಕುಟುಂಬಗಳು ಮಾ.10ರ ಒಳಗಾಗಿ ತಮ್ಮ ಕುಟುಂಬದ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ನಂತರ ಏಪ್ರಿಲ್ 20ರ ಒಳಗಾಗಿ 20 ನಿಮಿಷಕ್ಕೆ ಮೀರದಂತೆ ಕಾವೇರಮ್ಮೆಯ ಪಾಟನ್ನು, ಒಂದೇ ಒಕ್ಕದ ನಾಲ್ವರು, ಒಂದೇ ಬಣ್ಣದ ಕುತ್ಯಾಚಾಲೆ ಮತ್ತು ದುಡಿಕೊಟ್ಟಿನೊಂದಿಗೆ ಹಾಡಿ, ವಿಡಿಯೋವನ್ನು ಸಂಚಾಲಕ ಕುಂಞಿರ ಗಿರೀಶ್ ಭೀಮಯ್ಯ -9483534481 ಸಂಖ್ಯೆಗೆ ಕಳುಹಿಸಬೇಕು. ವಿಜೇತ ಕುಟುಂಬಕ್ಕೆ ಪ್ರಥಮ 10,000 ನಗದು ಮತ್ತು ಟ್ರೋಫಿ, ದ್ವಿತೀಯ 8,000 ನಗದು ಮತ್ತು ಟ್ರೋಫಿ, ತೃತೀಯ 6,000 ನಗದು ಮತ್ತು ಟ್ರೋಫಿ ಹಾಗೂ ಇನ್ನಿತರ ವಿಶೇಷ ಬಹುಮಾನಗಳನ್ನು ನೀಡಲಾಗುವುದು. ಪ್ರಥಮ ಬಹುಮಾನವನ್ನು, ಉದ್ಯಮಿ ಸರ್ಕಂಡ ದೊರೆಮಣಿ ಸೋಮಯ್ಯ, ದ್ವಿತೀಯ ಬಹುಮಾನವನ್ನು ಉದ್ಯಮಿ ಮಲ್ಲೇಂಗಡ…
ಮಡಿಕೇರಿ ಫೆ.21 : ಕರವೇ ಫ್ರಾನ್ಸಿಸ್ ಡಿಸೋಜ ಅವರಿಗೆ ಉತ್ತಮ ಸಮಾಜಸೇವೆಗಾಗಿ ಸೇವಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಮಂಜುಶ್ರೀ ಸಾಂಸ್ಕೃತಿಕ ಸೇವಾ ಟ್ರಸ್ಟ್ ನ 3ನೇ ವಾರ್ಷಿಕೋತ್ಸವದ ಅಂಗವಾಗಿ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲೆ, ಸಾಹಿತ್ಯ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಸನ್ಮಾನ ಸ್ವೀಕರಿಸಿ ಮಾತನಾಡಿದ ಫ್ರಾನ್ಸಿಸ್ ಡಿಸೋಜ ಮಂಜು ಸೇವಾ ಟ್ರಸ್ಟ್ ಅಧ್ಯಕ್ಷರಾದ ಮಂಜುಳಾ ಅವರಿಗೆ ಅಭಿನಂದನೆ ಸಲ್ಲಿಸಿದರು.
ಮಡಿಕೇರಿ ಫೆ.21 : ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದು 40 ಮಂದಿ ಗಾಯಗೊಂಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿಯ ಕಾವಾಡಿಯಲ್ಲಿ ನಡೆದಿದೆ. ಹಾಸನ ಡಿಪೋಗೆ ಸೇರಿದ ಬಸ್ ಕೇರಳ ರಾಜ್ಯದ ಎರ್ನಾಕುಲಂ ನಿಂದ ಕೊಡಗಿನ ವಿರಾಜಪೇಟೆ ಮೂಲಕ ಹಾಸನಕ್ಕೆ ತೆರಳುತ್ತಿತ್ತು. ಇಂದು ಮುಂಜಾನೆ 4.30 ಗಂಟೆಯ ಸುಮಾರಿನಲ್ಲಿ ಬಸ್ ಕಂದಕಕ್ಕೆ ಉರುಳಿದೆ. ಚಾಲಕ ಸೇರಿದಂತೆ 40 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ದಟ್ಟ ಮಂಜು ಕವಿದಿದ್ದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ ನ್ನು ಮೇಲೆತ್ತುವ ಕಾರ್ಯಾಚರಣೆ ಆರಂಭಗೊoಡಿದೆ.
ಮಡಿಕೇರಿ ಫೆ.21 : ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಮುಖ್ಯಸ್ಥರಾಗಿದ್ದ ಕೊಡಗಿನವರಾದ ಡಾ.ತಂಬಂಡ ವಿಜಯ್ ಪೂಣಚ್ಚ ಅವರು ಇದೀಗ ವಿಶ್ವವಿದ್ಯಾನಿಲದ ಹಂಗಾಮಿ ಉಪಕುಲಪತಿಗಳಾಗಿ ಆಯ್ಕೆಗೊಂಡಿದ್ದಾರೆ. ಈ ಬಗ್ಗೆ ಕುಲಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆದೇಶದನ್ವಯ ವಿಶ್ವವಿದ್ಯಾನಿಲಯಗಳ ಸರಕಾರದ ಅಧೀನ ಕಾರ್ಯದರ್ಶಿ ಎನ್.ಶಿವಕುಮಾರ್ ಪ್ರಕರಣೆ ಹೊರಡಿಸಿದ್ದಾರೆ.
ವಿರಾಜಪೇಟೆ ಫೆ.21 : ಸರ್ಕಾರ ಕೊಡಗು ಜಿಲ್ಲೆಯ ಶ್ರೇಯೋಭಿವೃದ್ಧಿಗೆ ಹತ್ತು ಹಲವು ಕಾರ್ಯಕ್ರಮಗಳಿಗೆ ಅನುದಾನ ನೀಡುತ್ತಿದೆ. ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತರುವಂತಾಗಬೇಕು. ಕೋವಿಡ್ ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಇದೀಗ ಚೇತರಿಸಿಕೊಳ್ಳುತ್ತಿದೆ. ಪ್ರಮುಖ ಆರ್ಥಿಕ ವಹಿವಾಟುಗಳು ನಡೆಯುತ್ತಿದ್ದು ದೇಶ, ರಾಜ್ಯ ಮುಂಚೂಣಿಯತ್ತ ಸಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅಭಿಪ್ರಾಯಪಟ್ಟರು. ವಿಶೇಷ ಅನುದಾನದ ರೂ. 1 ಕೋಟಿ ಪ್ಯಾಕೇಜ್ನಡಿಯಲ್ಲಿ ವಿರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾ.ಪಂ ವ್ಯಾಪ್ತಿಯ ಕಾವಾಡಿಯಲ್ಲಿನ ಕುಟ್ಟಂಡ ಐನ್ ಮನೆ(ಬಲ್ತೇರಿ) ಗೆ ತೆರಳುವ ರಸ್ತೆಗೆ 23 ಲಕ್ಷ ವೆಚ್ಚದ ನೂತನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೆಲವೆ ದಿನಗಳಲ್ಲಿ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುವುದು. ರಸ್ತೆ ಕಾಮಗಾರಿಗಳು ನಡೆಯುವ ಸಂದರ್ಭ ಸ್ಥಳಿಯರು ಸಹಕಾರ ನೀಡಬೇಕು, ಪ್ರತಿಯೊಬ್ಬರಿಗು ಬದುಕಲು ಮನೆ ಅವಶ್ಯವಿದೆ, ಹಾಗೆ ವಿದ್ಯುತ್, ಕುಡಿಯುವ ನೀರು ಮೂಲಭೂತ ಸೌಲಭ್ಯಗಳನ್ನು ಸರಕಾರದಿಂದ ಒದಗಿಸಿ ಕೊಡುವುದಾಗಿ ತಿಳಿಸಿದರಲ್ಲದೆ 75 ವರ್ಷದಲ್ಲಿ 60 ವರ್ಷ ಕಾಂಗ್ರೇಸ್…
ಮಡಿಕೇರಿ ಫೆ.20 : ಸಾರಿಗೆ ಇಲಾಖೆಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಸಲ್ಲಿಕೆಯಾಗುವ ಎಲ್ಲಾ ಅರ್ಜಿಗಳು ಗಣಕೀಕೃತ ವ್ಯವಸ್ಥೆಯಡಿ ನಿರ್ವಹಣೆ ಮಾಡಲು ಎನ್ಐಸಿ ಯವರ ಸಹಯೋಗದೊಂದಿಗೆ ಪರಿವಾಹನ್ ವೆಬ್ಸೈಟ್ ಸೃಜಿಸಲಾಗಿದೆ. ಈ ವೆಬ್ಸೈಟ್ ಉಪಯೋಗಿಸಿಕೊಂಡು ಸಾರ್ವಜನಿಕರು ಕಚೇರಿಗೆ ಭೇಟಿ ನೀಡದೇ ಅರ್ಜಿ ಸಲ್ಲಿಸಿ, ಶುಲ್ಕ ಹಾಗೂ ತೆರಿಗೆ ಪಾವತಿಸಲು ಅವಕಾಶ ಮಾಡಿಕೊಡಲಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಹೆಚ್ಚಾಗಿ ಪಡೆಯಬೇಕೆಂದು ತಿಳಿಯಪಡಿಸಿದೆ. ಶುಲ್ಕ ಪಾವತಿಯ ನಂತರ ಪರಿವಾಹನ್ ವೆಬ್ಸೈಟ್ (Parivahan Website) ನಲ್ಲಿ ಅರ್ಜಿ ಸಲ್ಲಿಸಿ ಸ್ಪೀಡ್ ಪೋಸ್ಟ್ ಮುಖಾಂತರ ದಾಖಲೆಗಳೊಂದಿಗೆ RTO ಕಚೇರಿಗೆ ಕಳುಹಿಸಿಕೊಡಲು ತಿಳಿಯಪಡಿಸಿದೆ. ಸಿದ್ದ ದಾಖಲೆಗಳನ್ನು ಸ್ಪೀಡ್ ಪೋಸ್ಟ್ ಮುಖಾಂತರವೇ ಮಾಲೀಕರ ಮನೆಯ ವಿಳಾಸಕ್ಕೆ ಕಳುಹಿಸಿಕೊಡಲಾಗುವುದು. ವಾಹನ್ ಮತ್ತು ಸಾರಥಿ ಅಡಿಯಲ್ಲಿ ಪ್ರತಿಯೊಂದು ವ್ಯವಹಾರವನ್ನು ಪಾರದರ್ಶಕ ಮಾಡಲಾಗಿದ್ದು, ಕಚೇರಿಯಲ್ಲಿ ಪ್ರತಿ ಹಂತದಲ್ಲಿ ಪ್ರತಿ ಅರ್ಜಿಗೆ ಸಂಬಂಧಿಸಿದಂತೆ ವ್ಯವಹರಿಸುವ ಕಾರ್ಯಗಳು ಅರ್ಜಿದಾರರಿಗೆ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಸಂದೇಶ ರವಾನೆಯಾಗುತ್ತಿರುತ್ತದೆ. ಸಾರಿಗೇತರ ಹೊಸ ನೋಂದಣಿ ವಾಹನಗಳಿಗೆ ಸಂಬಂಧಿಸಿದಂತೆ ಶೇ.100 ರಷ್ಟು…
ಮಡಿಕೇರಿ ಫೆ.20 : ತಮ್ಮ ಮಾತೃ ಭಾಷೆಯನ್ನು ಮರೆತರೆ ಅದು ತಮ್ಮ ತಾಯಿಯನ್ನೇ ಮರೆತಂತೆ ಎಂದು ಕೊಡಗಿನ ಖ್ಯಾತ ಲೇಖಕಿ ಹಾಗೂ ಕಾವೇರಿ ಕಾಲೇಜಿನ ಉಪನ್ಯಾಸಕಿ ಡಾ. ರೇವತಿ ಪೂವಯ್ಯ ಅಭಿಪ್ರಾಯಪಟ್ಟರು. ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ತಮಿಳು ಯುವ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ, ಸಮುದಾಯ ಬಾಂಧವರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗು ಸಾಂಸ್ಕೃತಿಕ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಬಹು ಸಂಸ್ಕೃತಿಯ ಈ ನಾಡಿನಲ್ಲಿ ಆಯಾ ಸಂಸ್ಕೃತಿ ಉಳಿಯಲು ಮಾತೃಭಾಷೆಯೇ ಮೂಲ. ಮಾತೃಭಾಷೆ ಹೃದಯದ ಭಾಷೆ, ಮಾತೆ ಹಾಲೂಡುತ್ತಾ ಮಾತನಾಡಿದ ಭಾಷೆ, ಹುಟ್ಟಿದ ತಕ್ಷಣ ಕಿವಿಯ ಮೇಲೆ ಬಿದ್ದ ಭಾಷೆ, ಹೀಗಾಗಿ ಅದರೊಂದಿಗಿನ ಬಂಧ ತಾಯಿಯಷ್ಟೇ ಆಪ್ತ. ‘ಭಾವಕ್ಕೆ ಭಾಷೆಯ ಬಂಧನವಿಲ್ಲ ಆದರೆ ಭಾವನೆಗಳು ಸಮರ್ಥವಾಗಿ ವ್ಯಕ್ತವಾಗುವುದು ಮಾತ್ರಭಾಷೆಯಲ್ಲೇ. ನಾವು ಬೆಳೆದಂತೆ ಹಲವು ಭಾಷೆಗಳನ್ನು ಕರಗತಗೊಳಿಸಿ ಕೊಳ್ಳುತ್ತೇವೆ. ವ್ಯವಹಾರಕ್ಕಾಗಿ ಯಾವದೋ ಭಾಷೆ ಬಳಸುತ್ತೇವೆ. ಆದರೆ ಮಾತೃಭಾಷೆ ಎಂಬುದು ನಮ್ಮ ಆಂತರ್ಯದ ಭಾಷೆ. ಹೀಗಾಗಿ ಅದರ ಮೇಲೆ…
ಕುಶಾಲನಗರ ಫೆ.20 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕದಿಂದ ಸಮುದಾಯ ಬಾಂಧವರಿಗಾಗಿ ಕ್ರೀಡಾ ಮಹೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಶಿವಪ್ಪ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.26 ರಂದು ಕುಶಾಲನಗರದ ಸರಕಾರಿ ಪ.ಪೂ.ಕಾಲೇಜು ಮೈದಾನದಲ್ಲಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ವಿವಿಧ ಮಾದರಿಯ ಕ್ರೀಡೆಗಳು ನಡೆಯಲಿದ್ದ ಪ್ರಮುಖವಾಗಿ ಕ್ರಿಕೆಟ್ ಮತ್ತು ಷಟಲ್ ಕಾಕ್ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಹಾಗೂ ಕುಶಾಲನಗರ ಡಿವೈಎಸ್ಪಿ ಗಂಗಾಧರಪ್ಪ ಅವರು ಕ್ರೀಡಾಜ್ಯೋತಿ ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೋಕ್ಷಿಕ್ ರಾಜ್ ನೇತೃತ್ವದಲ್ಲಿ ಕ್ರೀಡಾಕೂಟ ನಡೆಯಲಿದೆ. ಸಮುದಾಯದ ಪುರುಷ ಮತ್ತು ಮಹಿಳೆಯರಿಗೆ ವೈಯಕ್ತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಮಾರ್ಚ್ 3 ರಂದು ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜ ಬಾಂಧವರು…






