ಲೇಖಕ: admin

ಮಡಿಕೇರಿ ಫೆ.20 :   ಹಾಲುಗುಂದ ಗ್ರಾ.ಪಂ  ಮತ್ತು ಜಿಲ್ಲಾ ಅಕ್ಷರ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಹಾಲುಗುಂದ ಕೊಂಡಂಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ,  ಎಲಿಯಂಗಾಡು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಬೈರಂಬಾಡ ಶಾಲಾ ಮಕ್ಕಳಿಗೆ ಆಯಾ ಶಾಲೆಗಳಲ್ಲಿ ಗಣಿತ ಸ್ಪರ್ಧೆ  ನಡೆಯಿತು. ಗಣಿತ ಸ್ಪರ್ಧೆಯ 4ನೇ ತರಗತಿ ವಿಭಾಗದಲ್ಲಿ ಬೈರಂಬಾಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಂಜು ಪ್ರಥಮ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಎಲಿಯಂಗಾಡು ಸಾರ ದ್ವಿತೀಯ ಹಾಗೂ ಮುಫೀದ ತೃತೀಯ ಸ್ಥಾನವನ್ನು ಪಡೆದಿದ್ದಾರೆ. 5ನೇ ತರಗತಿ ವಿಭಾಗದಲ್ಲಿ ಬೈರಂಬಾಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೋಕ್ಷಿತ್ ಪ್ರಥಮ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಂಗೇರಿಯ ಮೊಹಮ್ಮದ್ ಮಿದಿಲಾಜ್ ದ್ವಿತೀಯ, ಎಲಿಂಗಾಡು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕದೀಜ ಕೆ ಎಂ ತೃತೀಯ ಸ್ಥಾನವನ್ನು ಪಡೆದಿದ್ದಾರೆ. 6ನೇ ತರಗತಿ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಂಗೇರಿಯ  ಎಚ್.ಎಂ.ಶೈಮಾ, ಅದೇ ಶಾಲೆಯ ಫಾತಿಮತ್ ತಶ್ರೀಫ್ ದ್ವಿತೀಯ ಹಾಗೂ ಫಿದಾ…

Read More

ಮಡಿಕೇರಿ ಫೆ.20 : ಎನ್.ಸಿ.ಸಿಯ ಥಲ್ ಸೈನಿಕ್ ಕ್ಯಾಂಪ್‌ನಲ್ಲಿ ಕರ್ನಾಟಕ ಗೋವಾ ಡೈರೆಕ್ಟೋರೇಟ್ ಕಾಂಟಿಜೆಂಟ್ ಅನ್ನು ನವದೆಹಲಿಯಲ್ಲಿ ಪ್ರತಿನಿಧಿಸಿ ರಾಷ್ಟ್ರಮಟ್ಟದ ಕಂಚಿನ ಪದಕ ಪಡೆದು ಅತ್ಯುನ್ನತ ಸಾಧನೆ ಮಾಡಿದ ಸೀನಿಯರ್ ಅಂಡರ್ ಆಫೀಸರ್ ಅಪ್ಪಚ್ಚಂಡ ಪ್ರಜ್ವಲ್ ಅಯ್ಯಪ್ಪಗೆ ಮುಖ್ಯಮಂತ್ರಿಗಳ ಪ್ರಶಂಸನಾಪತ್ರ ಮತ್ತು ಮೆಡಲ್ ಲಭಿಸಿದೆ. ಬೆಂಗಳೂರಿನ ಕ್ರೈಸ್ಟ್ ಜಯಂತಿ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪರವಾಗಿ ಮುಖ್ಯಮಂತ್ರಿ ಕಾರ್ಯಾಲಯದ ಅಧಿಕಾರಿಗಳು ಪ್ರಶಸ್ತಿ ಪತ್ರ ಮತ್ತು ಮೆಡಲ್ ಪ್ರಧಾನ ಮಾಡಿದರು. ಗೋಣಿಕೊಪ್ಪಲು ಕಾವೇರಿ ಕಾಲೇಜು ಅಂತಿಮ ವರ್ಷದ ಪದವಿ ವಿದ್ಯಾರ್ಥಿಯಾಗಿರುವ ಪ್ರಜ್ವಲ್, ಎಂ ಬಾಡಗ ಗ್ರಾಮದ ಅಪ್ಪಚ್ಚಂಡ ಕುಶಾಲಪ್ಪ ಮತ್ತು ಶಶಿ ಕುಶಾಲಪ್ಪ ಅವರ ಪುತ್ರರಾಗಿದ್ದಾರೆ.

Read More

ಮಡಿಕೇರಿ ಫೆ.20 :  ಕೊಡಗು ಜಿಲ್ಲೆಯ ಸರ್ವತೋಮುಖ‌ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ ಎಂದು ಮಡಿಕೇರಿ ಕ್ಷೇತ್ರದ ಜೆಡಿಎಸ್ ಸಂಭವನೀಯ ಅಭ್ಯರ್ಥಿ ನಾಪಂಡ ಮುತ್ತಪ್ಪ ಅಭಿಪ್ರಾಯಪಟ್ಟರು. ಚೆಟ್ಟಳ್ಳಿ ಸಮೀಪದ ಕಂಡಕೆಯಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ನಾಪಂಡ ಮುತ್ತಪ್ಪ ಕೊಡಗು ಜಿಲ್ಲೆಯ ಮತದಾರರು ಬದಲಾವಣೆ ಬಯಸಿದ್ದಾರೆ. ಜಾತಿ, ಧರ್ಮಗಳ ನಡುವೆ ಒಡಕು ಮೂಡಿಸುವ ರಾಜಕೀಯದಿಂದ ಜನರು ಬೇಸತ್ತಿದ್ದಾರೆ. ಜಿಲ್ಲೆಯಲ್ಲಿ ಕಳೆದ ಎರಡು ದಶಕಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಸಂಪೂರ್ಣವಾಗಿ ಕೊಡಗು ಜಿಲ್ಲೆಯನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು. ಈ ‌ಬಾರಿ ಮಡಿಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಅಪಾರವಾದ ಬೆಂಬಲ ವ್ಯಕ್ತವಾಗಿದ್ದು,. ಯುವಕರು ಜೆಡಿಎಸ್ ಪಕ್ಷಕ್ಕೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಯಾಗುತ್ತಿದ್ದಾರೆ. ಮಡಿಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದ್ದು,ರಾಜ್ಯದಲ್ಲಿ ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ಸಂದರ್ಭ  ನಾಪಂಡ ಮುತ್ತಪ್ಪ ಅವರನ್ನು ಕಂಡಕರೆ ಗ್ರಾಮದ ಯುವಕರು ಸನ್ಮಾನಿಸಿ ಗೌರವಿಸಿದರು. ನೆಟ್ವರ್ಕ್ ಹಾಗೂ ಮೈದಾನ ಸಮಸ್ಯೆ  :  ಕಂಡಕರೆ ಗ್ರಾಮದಲ್ಲಿ…

Read More

ನಾಪೋಕ್ಲು ಫೆ.20 : ಶಿವರಾತ್ರಿಯ ಪ್ರಯುಕ್ತ ಪೇರೂರು ಗ್ರಾಮದ ಇಗ್ಗುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ ಮತ್ತು ಮಹಾಪೂಜೆ ಜರುಗಿತು. ಮುಂಜಾನೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಧ್ಯಾಹ್ನ ಭಕ್ತರಿಂದ ತುಲಾಭಾರ ಸೇವೆ ನಡೆಯಿತು. ನಂತರ ನೆರದಿದ್ದವರಿಗೆ ಅನ್ನಸಂತರ್ಪಣೆ ಜರುಗಿತು. ಮಧ್ಯಾಹ್ನ ದೇವಾಲಯದ ಆವರಣದಲ್ಲಿ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ಏರ್ಪಡಿಸಲಾಯಿತು. ಬಳಿಕ ಇಗ್ಗುತ್ತಪ್ಪ ದೇವರ ಉತ್ಸವ ಜರುಗಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವರ ನೃತ್ಯಬಲಿ ವೀಕ್ಷಿಸಿದರು. ದೇವಾಲಯದ ಅರ್ಚಕ ಗಿರೀಶ್ ನೇತೃತ್ವದಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಸದಸ್ಯರು, ತಕ್ಕಮುಖ್ಯಸ್ಥರು ಸೇರಿದಂತೆ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಫೆ.20 : ನಗರದ ಹೆಸರಾಂತ ಪ್ರಶಾಂತ್ ಮರದ ಪೀಠೋಪಕರಣ ಮಳಿಗೆ ಅಗ್ನಿಗಾಹುತಿಯಾಗಿದೆ. ಸೋಮವಾರ ನಸುಕಿನ ವೇಳೆ ಈ ಘಟನೆ ನಡೆದಿದ್ದು, ಸತತ 10 ಗಂಟೆಗಳ ನಿರಂತರ ಕಾರ್ಯಾಚರಣೆಯ ನಂತರ ಅಗ್ನಿ ನಿಯಂತ್ರಣಕ್ಕೆ ಬಂದಿದೆ. ಕೈಗಾರಿಕಾ ಬಡಾವಣೆಯಲ್ಲಿರುವ ಪ್ರಶಾಂತ್ ವುಡ್ ಫರ್ನಿಚರ್’ಗೆ ಸೇರಿದ ದಾಸ್ತಾನು ಮಳಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು. ಮರದ ದಾಸ್ತಾನಾದ ಕಾರಣ ಬೆಂಕಿ ಸಂಪೂರ್ಣ ಮಳಿಗೆಯನ್ನು ವ್ಯಾಪಿಸಿತು. ಮಡಿಕೇರಿ, ಕುಶಾಲನಗರ ಮತ್ತು ಗೋಣಿಕೊಪ್ಪದಿಂದ ಆಗಮಿಸಿದ ಒಟ್ಟು ನಾಲ್ಕು ಅಗ್ನಿಶಾಮಕ ವಾಹನಗಳು ನಿರಂತರ ಕಾರ್ಯಾಚರಣೆ ನಡೆಸಿದವು. ಸಿಬ್ಬಂದಿಗಳು ಸತತ ಪರಿಶ್ರಮ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಅಗ್ನಿ ಆಕಸ್ಮಿಕದಿಂದ ಪ್ರಶಾಂತ್ ಫರ್ನಿಚರ್ಸ್ ನ ಮಾಲೀಕ ಪ್ರಶಾಂತ್ ಅವರಿಗೆ ಲಕ್ಷಾಂತರ ರೂ. ನಷ್ಟ ಉಂಟಾಗಿದೆ.

Read More

ನಾಪೋಕ್ಲು ಫೆ.20 : ಮಹಾಶಿವರಾತ್ರಿ ಉತ್ಸವವನ್ನು ನಾಡಿನ ವಿವಿಧ ದೇವಾಲಯಗಳಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಾಪೋಕ್ಲು ಸಮೀಪದ ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯ, ಮಕ್ಕಿ ಶ್ರೀ ಶಾಸ್ತ್ರವು ದೇವಾಲಯ, ಬಿದ್ದಾಟಂಡ ವಾಡೆಯ ಶ್ರೀ ಮಹಾದೇವ ದೇವಾಲಯ, ಕಕ್ಕುಂದ ಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯ, ನೆಲಜಿ ಶ್ರೀ ಭಗವತಿ, ಇಗ್ಗುತ್ತಪ್ಪ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ಉತ್ಸವದ ಅಂಗವಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಪಾಲೂರು ಗ್ರಾಮದ ಮಹಾಲಿಂಗೇಶ್ವರ ದೇವಾಲಯದಲ್ಲಿ ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಸುತ್ತಮುತ್ತಲ ಗ್ರಾಮಗಳ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಏಕ ರುದ್ರಭಿಷೇಕ ಹಾಗೂ ಮಹಾಪೂಜೆ ಜರುಗಿ ತೀರ್ಥ ಪ್ರಸಾದ ವಿತರಣೆಯ ಬಲಿಕ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಜಾಗರಣೆಯ ಅಂಗವಾಗಿ ರಾತ್ರಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ಮಾಜಿ ಮುಜರಾಯಿ ಮಂತ್ರಿ ಕೃಷ್ಣಯ್ಯ ಶೆಟ್ಟಿ ವಿತರಿಸಿದ ಗಂಗಾಜಲವನ್ನು ಭಕ್ತರಿಗೆ ವಿತರಿಸಲಾಯಿತು.…

Read More

ನಾಪೋಕ್ಲು ಫೆ.20 : ಬಿದ್ದಾಟಂಡ ವಾಡೆಯ ಮಹಾದೇವ ದೇವಾಲಯದಲ್ಲಿ ಶಿವರಾತ್ರಿಯ ಅಂಗವಾಗಿ ರುದ್ರಾಭಿಷೇಕ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಿತು. ಅರ್ಚಕ ಕೀರ್ತೀಶ್ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದರು. ರಾತ್ರಿ ಜಾಗರಣೆ ಪ್ರಯುಕ್ತ ರುದ್ರಾಭಿಷೇಕ, ಮಹಾಪೂಜೆ ನೆರವೇರಿತು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಬಿದ್ದಾಟಂಡ ಮುತ್ತಣ್ಣ ಹಾಗೂ ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ  

Read More

ಮಡಿಕೇರಿ ಫೆ.20 :   ಪ್ರಸ್ತುತ ದಿನಗಳಲ್ಲಿ  ಸಮಾಜದಲ್ಲಿ ನಿರ್ಮಾಣವಾಗಿರುವ ಎಲ್ಲಾ ಅಂತರವನ್ನು ಒಂದುಗೂಡಿಸುವ‌ ಅಪಾರ ಶಕ್ತಿ  ಕ್ರೀಡೆಗಿದೆ ಎಂದು ಹೈಕೋರ್ಟ್ ಹಿರಿಯ ವಕೀಲ ಹಾಗೂ ಕೆಪಿಸಿಸಿ ಕಾನೂನು ಘಟಕದ‌ ಅಧ್ಯಕ್ಷ ಎ.ಎಸ್ ಪೊನ್ನಣ್ಣ ಅಭಿಪ್ರಾಯಪಟ್ಟರು. ಅಯ್ಯಂಗೇರಿಯಲ್ಲಿ ಮೂರು ದಿನಗಳ ಕಾಲ ನಡೆಯುವ ಅಯ್ಯಂಗೇರಿ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿಗೆ ಎ.ಎಸ್ ಪೊನ್ನಣ್ಣ ಸಿಕ್ಸರ್ ಬಾರಿಸುವ  ಮೂಲಕ ಚಾಲನೆ ನೀಡಿ ಮಾತನಾಡಿದರು. ಕೊಡಗು ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಹಲವಾರು ಯುವ ಕ್ರೀಡಾಪಟುಗಳು ಇದ್ದಾರೆ. ಗ್ರಾಮ ಮಟ್ಟದಲ್ಲಿ ಸರಿಯಾದ ಕ್ರೀಡಾ ಸೌಕರ್ಯಗಳು ಇಲ್ಲದೆ, ಕ್ರೀಡಾ ಕ್ಷೇತ್ರದಲ್ಲಿ ಮುಂದವರಿಯಲು ಸಾಧ್ಯವಾಗುತ್ತಿಲ್ಲ. ಕೊಡಗು ಜಿಲ್ಲೆ ಕ್ರೀಡೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದೆ. ಆದರೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕ್ರೀಡೆಗೆ ಬೇಕಾದ ಸೌಲಭ್ಯಗಳ ಕೊರತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಎ.ಎಸ್.ಪೊನ್ನಣ್ಣ, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಗದ್ದೆಗಳನ್ನು ಮೈದಾನವನ್ನಾಗಿ ನಿರ್ಮಿಸಿ ಆಟ ಆಡುವ ಪರಿಸ್ಥಿತಿ ಇದೆ ಎಂದು  ಹೇಳಿದರು. ಗ್ರಾಮೀಣ ಭಾಗದಲ್ಲಿ ಆಟ ಆಡಲು ಮೈದಾನ, ಕ್ರೀಡಾ ಸೌಕರ್ಯಗಳು ನೀಡಿದರೆ,…

Read More

ಚೆಟ್ಟಳ್ಳಿ ಫೆ.20 :  ಮಹಾಶಿವರಾತ್ರಿ ಅಂಗವಾಗಿ ಚೆಟ್ಟಳ್ಳಿಯ ಈರಳೆ ವಳಮುಡಿ ಗ್ರಾಮದಲ್ಲಿರುವ ಪಂಚಮುಖಿ ವಾಯುಪುತ್ರ ಮೂರ್ತಿ, ಚೆಟ್ಟಳ್ಳಿ ಸಹಕಾರ ಸಂಘದ ಮುಖ್ಯ ಕಚೇರಿ ಮುಂದಿರುವ ಪಶುಪತಿನಾಥ, ಕಾವೇರಿ ಮಾತೆ, ಶ್ರೀ ಕೃಷ್ಣ, ಗೋಮಾತೆ  ಹಾಗೂ  ಶ್ರೀ ನರೇಂದ್ರ ಮೋದಿ ಸಹಕಾರ ಭವನದಲ್ಲಿರುವ ಶ್ರೀ ವಿನಾಯಕ, ವೀರಾಂಜನೇಯ ಹಾಗೂ ಮಹಾವಿಷ್ಣುವಿನ ಮೂರ್ತಿಗೆ  ವಿಶೇಷ ಪೂಜೆ ಸಲ್ಲಿಸಲಾಯಿತು. ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ  , ಜನಪರಹೋರಾಟ ಸಮಿತಿ, ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಶ್ರೀ ಗೌರಿ ಗಣೆಶೋತ್ಸವ ಸಮಿತಿ  , ಶ್ರೀ ವಿನಾಯಕ ದೇವಾಲಯ ಸಮಿತಿ  ಸಂಯುಕ್ತ ಆಶ್ರಯದಲ್ಲಿ ಮೂರನೇ ವರ್ಷದ ಶಿವರಾತ್ರಿ ಪೂಜಾ ಕಾರ್ಯಕ್ರಮ ಜರುಗಿತು. ಅಲಂಕಾರದೊಂದಿಗೆ ದೀಪಾರಾಧನೆ ಹಾಗೂ ವಿಶೇಷಪೂಜೆ ಸಲ್ಲಿಸಲಾಯಿತು. ನಂತರ   ಮಹಾ ಮಂಗಳಾರತಿ ಪ್ರಸಾದ ವಿತರಣೆ ನೆರವೇರಿತು.  ಚೆಟ್ಟಳ್ಳಿ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪಮಾತನಾಡಿ,  ಶಿವರಾತ್ರಿಯ ಹಿನ್ನೆಲೆ ತಿಳಿಸಿ ಎಲ್ಲರಿಗೂ ಶುಭಕೋರಿದರು. ಸನ್ಮಾನ: ಕಾರ್ಯಕ್ರಮದ ಅಂಗವಾಗಿ ಚೆಟ್ಟಳ್ಳಿ ಸಹಕಾರ ಸಂಘದ…

Read More

ಮಡಿಕೇರಿ ಫೆ.20 : ಕುಶಾಲನಗರ ತಾಲ್ಲೂಕು ಪ್ರಥಮ ‌ಕನ್ನಡ ಸಾಹಿತ್ಯ ಸಮ್ಮೇಳನದ ಖರ್ಚು- ವೆಚ್ಚಗಳ ಲೆಕ್ಕಪತ್ರವನ್ನು  ಸಮ್ಮೇಳನದ ಹಣಕಾಸು ಉಪ ಸಮಿತಿಯ ಅಧ್ಯಕ್ಷ  ವಿ.ಪಿ.ಶಶಿಧರ್ ಮಂಡಿಸಿದರು. ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವಕಾಮತ್, ತಾಲ್ಲೂಕು ಘಟಕದ ಅಧ್ಯಕ್ಷ  ಕೆ.ಎಸ್.ಮೂರ್ತಿ, ವಿವಿಧ ಸಮಿತಿಯ ಪ್ರಮುಖರಾದ ಕೆ.ಪಿ.ಚಂದ್ರಕಲಾ, ಎಂ.ವಿ.ನಾರಾಯಣ, ಎಚ್.ಬಿ.ಲಿಂಗಮೂರ್ತಿ, ವಿ.ಎಸ್.ಆನಂದಕುಮಾರ್, ವಿವಿಧ ಸಮಿತಿಯ ಅಧ್ಯಕ್ಷರು ಹಾಗೂ ಸಂಚಾಲಕರು, ಪದಾಧಿಕಾರಿಗಳು, ಇತರರು ಪಾಲ್ಗೊಂಡಿದ್ದರು.

Read More