ಲೇಖಕ: admin

ಮೈಸೂರು ಮಾ.9 NEWS DESK : ವಿಶ್ವಮಟ್ಟದಲ್ಲಿ ಖ್ಯಾತಿ ತಂದುಕೊಟ್ಟಿರುವ ಮೈಸೂರು ಸಿಲ್ಕ್ಸ್‌ ಪ್ರಿಯರಿಗೆ ಸಂತಸದ ಸುದ್ದಿ. ಟಿ. ನರಸೀಪುರದ ಕೆಎಸ್‌ಐಸಿ ಫಿಲೇಚರ್‌ ಕಾರ್ಖಾನೆ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದ ಸ್ಡೇಡಿಯಂ ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ. ಇದು ನಿಜಕ್ಕೂ ಸಂತಸದ ಸುದ್ದಿ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಸ್ಡೇಡಿಯಂ ನಿರ್ಮಾಣ ಯೋಜನೆಯನ್ನು ಕೈಬಿಡಲಾಗಿದೆ ಎಂದು ಸಚಿವ ಕೆ.ವೆಂಕಟೇಶ್‌ ವಿಧಾನ ಮಂಡಲ ಅಧಿವೇಶನದಲ್ಲಿ ಘೋಷಣೆ ಮಾಡಿರುವ ಕುರಿತು ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ ನೀಡಿದರು. ಸರ್ಕಾರದ ಈ ತೀರ್ಮಾವನ್ನು ಸ್ವಾಗತಿಸುತ್ತೇನೆ. ಇದು ಸಂಘಟಿತ ಹೋರಾಟಕ್ಕೆ ಸಿಕ್ಕಿರುವ ಜಯ. ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ನಾನೂ ಸೇರಿದಂತೆ ನಮ್ಮ ಬಿಜೆಪಿಯ ಹಲವಾರು ನಾಯಕರು ಭಾಗವಹಿಸಿದ್ದರು. ಈಗ ಸರ್ಕಾರ ಯೋಜನೆ ಕೈಬಿಟ್ಟಿರುವುದು ಸ್ವಾಗತಾರ್ಹ ಎಂದರು. ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಅವರೊಂದಿಗೆ ಪಾಲ್ಗೊಂಡು ನೈತಿಕವಾಗಿ ಬೆಂಬಲ ನೀಡಿದ್ದೆ. ನಂತರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ಸ್ಡೇಡಿಯಂ ನಿರ್ಮಾಣ ಯೋಜನೆ ಕೈಬಿಡುವಂತೆ ವೈಯಕ್ತಿಕವಾಗಿ ಮನವಿಯನ್ನೂ…

Read More

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.

Read More

ವಿರಾಜಪೇಟೆ ಮಾ.9 NEWS DESK : ವಿರಾಜಪೇಟೆ ಪುರಸಭೆಯಲ್ಲಿ ಮುಖ್ಯ ರಸ್ತೆಯ ಬದಿಗಳಲ್ಲಿರುವ ಕಟ್ಟಡದ ಮಾಲೀಕರಿಗೆ ಕಾನೂನು ರೀತಿಯ ಪರಿಹಾರಕ್ಕಾಗಿ ಮತ್ತು ಹಲವು ಮಂಡನೆಗಳ ಅಂಗೀಕಾರಕ್ಕೆ ಒತ್ತಾಯಿಸಿ ವಿರಾಜಪೇಟೆ ಪುರಸಭೆ ಕಚೇರಿ ಮುಂದೆ ಮಾ.12 ರಂದು ನಾಗರಿಕ ಸಮಿತಿ ಮತ್ತು ಸಾರ್ವಜನಿಕ ಕಾರ್ಯಕರ್ತರ ಕೂಟದ ಸಂಯುಕ್ತ ಹೋರಾಟ ಸಮಿತಿ ವತಿಯಿಂದ ನಡೆಯುವ ಹೋರಾಟ, ಹಕ್ಕೋತ್ತಾಯಕ್ಕೆ ವಿರಾಜಪೇಟೆಯ ಸಿಪಿಐಎಂ ಪಕ್ಷದ ಘಟಕದಿಂದ ಸಂಪೂರ್ಣವಾಗಿ ಬೆಂಬಲಿಸುವುದಾಗಿ ಮತ್ತು ಹೋರಾಟದಲ್ಲಿ ಭಾಗವಹಿಸುವುದಾಗಿ ಸಿಪಿಐಎಂ ವಿರಾಜಪೇಟೆ ಘಟಕ ಕಾರ್ಯದರ್ಶಿ ಕೆ.ಎಸ್ ರಮೇಶ್ (ಶಾಜಿ)ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ರಮೇಶ್ ಅವರು, ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ನಾಗರಿಕ ಸಮಿತಿ ಮತ್ತು ಇನ್ನಿತರ ಜನಪರ ಕಾಳಜಿ ಉಳ್ಳ ಸಂಘಟನೆಗಳು ನಡೆಸುವ ಹೋರಾಟಕ್ಕೆ ನಮ್ಮ ಸಂಘಟನೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ತಿಳಿಸಿದ್ದಾರೆ.

Read More

ಮಡಿಕೇರಿ ಮಾ.9 NEWS DESK : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ, ನೀರು, ಕಾಡು, ಪರಿಸರಗಳನ್ನು ಪೂಜಿಸುವುದು ಮತ್ತು ವೀರ ಪರಂಪರೆ ಇವು ಕೊಡಗಿನ ಸಂಸ್ಕೃತಿ ಎಂದು ಕೊಡಗು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಧೋಶ್ ಪೂವಯ್ಯ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಗೋಣಿಕೊಪ್ಪಲು ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ 2025-26ನೇ ಸಾಲಿನ ದಿ.ಇರುವೈಲು ರಘುರಾಮ ಅಸ್ರಣ್ಣ ಮತ್ತು ಲೀಲಾ ಅಸ್ರಣ್ಣ ಜ್ಞಾಪಕಾರ್ಥ ದತ್ತಿ ಕಾರ್ಯಕ್ರಮದ ಆಶಯದಂತೆ ಕೊಡಗಿನ ಸಾಂಸ್ಕೃತಿಕ ಚಿಂತನೆ ಕುರಿತು ಉಪನ್ಯಾಸ ನುಡಿದರು. ಕೊಡಗಿನ ಬೇರೆ ಬೇರೆ ಜನಾಂಗಗಳು ತಮ್ಮದೇ ಆದ ರೀತಿಯಲ್ಲಿ ಜನಪದ ಹಾಡು ಮತ್ತು ನೃತ್ಯಗಳ ಮೂಲಕ ಕೊಡಗಿನ ಸಂಸ್ಕೃತಿಗೆ ಕೊಡುಗೆ ನೀಡಿದ್ದಾರೆ. ಕೊಡವ ಜನಾಂಗದ ದುಡಿಕೊಟ್ಟ್ ಪಾಟ, ಬಾಳೋಪಾಟ, ಮಂಗಲಪಾಟ, ದೇವಡಪಾಟ, ಬೆಂದುಪಾಟ, ಕೊಡಗಿನ ಜಾನಪದ ನೃತ್ಯಗಳಾದ ಉಮ್ಮತ್ತಾಟ್, ಬೊಳ್ಕಾಟ್, ಕತ್ತಿಯಾಟ್,…

Read More

ಮಡಿಕೇರಿ ಮಾ.9 NEWS DESK : ಪಂಜರಪೇಟೆಯ ಕೊಡವ ಕೇರಿಯ ವತಿಯಿಂದ ಹೆಗ್ಗಳ ಗ್ರಾಮದ ವೃದ್ಧಾಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಅನಾಥಾಶ್ರಮಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಆರೋಗ್ಯ ವಿಚಾರಿಸಲಾಯಿತು. ಸುಮಾರು 42 ವಾಸಿಗಳಿಗೆ ಕೇರಿಯ ವತಿಯಿಂದ ಮೊಟ್ಟೆ, ಪರೋಟ, ಪಪ್ಸ್, ಕಲ್ಲಂಗಡಿ, ಬ್ರಷ್, ಬಟ್ಟೆ, ಸಾಬೂನು, ಪೇಸ್ಟ್, ಟವಲ್, ಬಿಸ್ಕೆಟ್ಸ್, ಸೊಳ್ಳೆ ಬತ್ತಿ, ಜ್ಯೂಸ್  ಸೇರಿದಂತೆ ಅಗತ್ಯ ಸಾಮಾಗ್ರಿಗಳನ್ನು ವಿತರಿಸಲಾಯಿತು. ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದವು. ಕೇರಿಯ ಪರವಾಗಿ ಅಧ್ಯಕ್ಷರಾದ ವಾಂಚೀರ ನಾಣಯ್ಯ, ಸದಸ್ಯರಾದ ಡಿ.ಸಿ.ಧ್ರುವಕುಮಾರ್, ಚರ್ಮನ್, ಸುರೇಶ್, ಪರದಂಡ ವಿಠಲ, ಅಶ್ವಿನಿ, ನವಿತಾ, ಧ್ರುವ, ದೇಶ್ ಹಾಜರಿದ್ದರು.

Read More

ಮಡಿಕೇರಿ ಮಾ.9 NEWS DESK : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೊಡವ ಕೂಟಾಳಿಯಡ ಕೂಟದ ವತಿಯಿಂದ ಸಾಧಕ ಕೊಡವ ಮಹಿಳೆಯರನ್ನು ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಾರಮಾಡ ಮಾಚಮ್ಮ, ಕಾಡ್ಯಮಾಡ ರೀಟಾ ಬೋಪಯ್ಯ,  ಕರೋಟಿರ ಶಶಿ ಸುಬ್ರಮಣಿ, ಮಾಳೇಟಿರ ಸೀತಮ್ಮ ವಿವೇಕ್ ಅವರನ್ನು ಕೂಟದ ಪ್ರಮುಖರು ಹಾಗೂ ಪದಾಧಿಕಾರಿಗಳು ಅವರ ಮನೆಗೆ ತೆರಳಿ ಸನ್ಮಾನಿಸಿ, ಗೌರವಿಸಿರು. ಈ ಸಂದರ್ಭ ಕೂಟದ ಅಧ್ಯಕ್ಷರಾದ ಚೊಟ್ಟಂಡ ಪ್ರಭು ಸೋಮಯ್ಯ, ಕಾರ್ಯದರ್ಶಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಮಾ.9 NEWS DESK : ಸೌರ್ಥನ್ ಆಫ್ ರೋಡ್ ವತಿಯಿಂದ ಮಂಗಳೂರಿನ ಉಪ್ಪಿನಂಗಡಿಯಲ್ಲಿ ನಡೆದ ಆಫ್ ರೋಡ್ ಚಾಲೆಂಜರ್ಸ್  ಸ್ಪರ್ಧೆಯ ಸ್ಟಾಕ್ ಜಿಪ್ಸಿ ಪೆಟ್ರೋಲ್ ಕ್ಲಾಸ್ ವಿಭಾಗದಲ್ಲಿ ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯದ ಹಲವು ಭಾಗಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು. ಇವರು ಮಡಿಕೇರಿಯ ಉದ್ಯಮಿ ರವಿ ಅವರ ಪುತ್ರರು.

Read More

ಸೋಮವಾರಪೇಟೆ ಮಾ.9 NEWS DESK : ರಾಜ್ಯ ಸರ್ಕಾರ ಬಡವರು, ಕೂಲಿ ಕಾರ್ಮಿಕರು ಹಾಗೂ ಗ್ರಾಮೀಣ ಭಾಗದ ಬಡ ರೈತರ ಬಿಪಿಎಲ್ ಪಡಿತರ ಚೀಟಿಗಳನ್ನು ಅವೈಜ್ಞಾನಿಕವಾಗಿ ಎಪಿಲ್ ಕಾರ್ಡ್‍ಗಳನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಸೋಮವಾರಪೇಟೆ ಮಂಡಲ ಯುವ ಮೋರ್ಚಾ ಸೋಮವಾರಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿತು. ಈ ಸಂದರ್ಭ ಮಾತನಾಡಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ, ಕೊಡಗು ಜಿಲ್ಲೆಯಲ್ಲಿ ಸಾವಿರಾರು ಬಿಪಿಎಲ್ ಪಡಿತರ ಕಾರ್ಡ್‍ಗಳು ರದ್ದಾಗಿದ್ದು, ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ 975 ಬಿಪಿಎಲ್ ಕಾರ್ಡ್ ರದ್ದು ಮಾಡಿದ್ದು, ಇದರಲ್ಲಿ ಬಿಪಿಎಲ್ ಕಾರ್ಡ್‍ಗಳನ್ನು ಹೊಂದಲು ಅರ್ಹವಾಗಿರುವ ಎಷ್ಟೋ ಕುಟುಂಬಗಳು ತಮ್ಮ ಪಡಿತರ ಚೀಟಿಯನ್ನು ಕಳೆದುಕೊಂಡು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಹಲವು ಕುಟುಂಬಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಚೌಡ್ಲು ಗ್ರಾ ಪಂ ವ್ಯಾಪ್ತಿಯ ಶನಿವಾರಸಂತೆ, ಕೊಡ್ಲಿಪೇಟೆ, ಶಾಂತಳ್ಳಿ, ಗೌಡಳ್ಳಿ, ಮಾದಾಪುರ, ಟೌನ್ ಪಂಚಾಯಿತಿ ಸೇರಿದಂತೆ ಸೋಮವಾರಪೇಟೆ ತಾಲೂಕಿನ ಸುಮಾರು 975 ಕಾರ್ಡ್ ಗಳನ್ನು ಅನರ್ಹಗೊಳಿಸಲಾಗಿದೆ ಎಂದರು. ಬಿಪಿಎಲ್ ಕಾರ್ಡ್‍ಗಳನ್ನು…

Read More

ಮಡಿಕೇರಿ, NEWS DESK ಮಾ.೯ : ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯರೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿಯ ಮೀನುಕೊಲ್ಲಿ ಎಂಬಲ್ಲಿ ನಡೆದಿದೆ. ನಂಜರಾಯಪಟ್ಟಣ ಗ್ರಾ.ಪಂ ಮಾಜಿ ಸದಸ್ಯೆ, ಬಾಳೆಗುಂಡಿ ಹಾಡಿ ನಿವಾಸಿ ಸ್ವಾಮಿ ಎಂಬುವವರ ಪತ್ನಿ ಜಲಜಾಕ್ಷಿ (೫೩) ಮೃತ ದುರ್ದೈವಿ. ಇಂದು ಬೆಳಿಗ್ಗೆ ಹಾಡಿ ಮುಂಭಾಗದಲ್ಲಿ ಆರು ಮಹಿಳೆಯರು ಹೋಗುತ್ತಿದ್ದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಜಲಜಾಕ್ಷಿ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದವರು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಸ್ಥಳಕ್ಕೆ ಎಸಿಎಫ್ ಗೋಪಾಲ್ ಸೇರಿದಂತೆ ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಇದೇ ಸಂದರ್ಭ ಕಾಡಾನೆ ಹಾವಳಿ ತಡೆಗಟ್ಟಬೇಕು, ಸ್ಥಳದಲ್ಲೇ ಪರಿಹಾರ ಘೋಷಿಸಬೇಕು ಎಂದು ಹಾಡಿ ನಿವಾಸಿಗಳು ಒತ್ತಾಯಿಸಿದರು. ಕಾಡಾನೆ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆಯಿಂದ ಈ ಭಾಗದಲ್ಲಿ ಕೈಗೊಂಡಿರುವ ಯೋಜನೆಗಳು ವಿಫಲವಾಗಿವೆ ಎಂದು ನಂಜರಾಯಪಟ್ಟಣ ಗ್ರಾ.ಪಂ ಮಾಜಿ ಅಧ್ಯಕ್ಷ ಸಿ.ಎಲ್.ವಿಶ್ವ ಆರೋಪಿಸಿದರು. ನಂಜರಾಯಪಟ್ಟಣ ಗ್ರಾ.ಪಂ…

Read More

ಮಡಿಕೇರಿ, NEWS DESK ಮಾ.೯ : ಜಿಲ್ಲೆಯ ಮತ್ತಿಗೋಡು ಸಾಕಾನೆ ಶಿಬಿರದ ಆನೆ “ಅಭಿ” (೨೧) ಅನಾರೋಗ್ಯದಿಂದ ಮೃತಪಟ್ಟಿದೆ. ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಬಳಕೆಯಾಗುತ್ತಿದ್ದ “ಅಭಿ” ಕಳೆದ ೬ ತಿಂಗಳಿನಿAದ ಕಾಲು ನೋವಿನಿಂದ ಬಳಲುತ್ತಿದ್ದ. ಸುದೀರ್ಘ ಕಾಲದ ಚಿಕಿತ್ಸೆ ಫಲಿಸದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾನೆ. ಪಶುವೈದ್ಯ ಡಾ.ರಮೇಶ ಮರಣೋತ್ತರ ಪರೀಕ್ಷೆ ನಡೆಸಿದರು. ಡಿಎಫ್ ಓ, ಡಿಸಿಎಫ್ ಹಾಗೂ ಹಿರಿಯ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

Read More